Tag: Maintenance

  • ಜೀವನಾಂಶ ಕೇಳಿದ್ದಕ್ಕೆ ಅಕ್ರಮ ಸಂಬಂಧಕ್ಕೆ ಅಡ್ಡಿ – ಪತ್ನಿಯನ್ನೆ ಬರ್ಬರವಾಗಿ ಕೊಂದ ಪತಿ

    ಜೀವನಾಂಶ ಕೇಳಿದ್ದಕ್ಕೆ ಅಕ್ರಮ ಸಂಬಂಧಕ್ಕೆ ಅಡ್ಡಿ – ಪತ್ನಿಯನ್ನೆ ಬರ್ಬರವಾಗಿ ಕೊಂದ ಪತಿ

    ಹಾಸನ: ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ಪಟ್ಟಣದ ಪಂಪ್‍ಹೌಸ್ ರಸ್ತೆಯಲ್ಲಿ ಬುಧವಾರ ಸಂಜೆ ನಡೆದಿದೆ.

    ಅಶ್ವಿನಿ(36) ಕೊಲೆಯಾದ ಮಹಿಳೆಯಾಗಿದ್ದು, ಕೊಲೆ ಮಾಡಿದ ನಂತರ ಪತಿ ಜಗದೀಶ್ ಪರಾರಿಯಾಗಿದ್ದಾನೆ. ಶಾಲೆಯಿಂದ ಬಂದ ಮಕ್ಕಳು ಮನೆ ಬಾಗಿಲು ತೆರೆದು ಒಳಹೋದಾಗ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಅಕ್ಕಪಕ್ಕದವರಿಗೆ ತಿಳಿಸಿದ್ದಾರೆ.

    ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: 16 ಗೇಟ್‍ಗಳನ್ನು ರಿಪ್ಲೇಸ್ ಮಾಡಲಾಗಿದ್ದು, ಇವತ್ತಿಗೂ 61 ಗೇಟ್ ಬದಲಿಸಬೇಕಾಗಿದೆ: ಸಿಎಂ 

    ಏನಿದು ಘಟನೆ?
    ಅಶ್ವಿನಿ ಹಾಗೂ ಜಗದೀಶ್ 17 ವರ್ಷದ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಮಗುವಿತ್ತು. ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ಜಗದೀಶ್ ಅದನ್ನು ಬಿಟ್ಟು ಮೆಡಿಕಲ್ ಶಾಫ್ ಇಟ್ಟುಕೊಂಡಿದ್ದ. ಲಾಸ್ ಆದ ಕಾರಣ ಅಂಗಡಿ ಕ್ಲೋಸ್ ಮಾಡಿದ್ದ.

    ಹಣಕಾಸು ವಿಚಾರಕ್ಕೆ ಆಗಾಗ್ಗೆ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಜಗದೀಶ್ ಒಮ್ಮೆ ಅಶ್ವಿನಿಗೆ ಹಲ್ಲೆ ಮಾಡಿದ್ದ ಪರಿಣಾಮ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಇದಾದ ನಂತರ ಬೇರೊಬ್ಬ ಮಹಿಳೆಯೊಂದಿಗೆ ಜಗದೀಶ್ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಇದನ್ನು ಅಶ್ವಿನಿ ವಿರೋಧಿಸಿದ್ದಕ್ಕೆ ಹಲವು ಬಾರಿ ಹಲ್ಲೆ ನಡೆಸಿದ್ದ. ಇದರಿಂದ ಬೇಸತ್ತ ಅಶ್ವಿನಿ ಜೀವನಾಂಶ ಕೋರಿ ಕೋರ್ಟ್ ಮೆಟ್ಟಿಲೇರಿದ್ದಳು.

    ನಾಲ್ಕು ತಿಂಗಳ ಹಿಂದಷ್ಟೇ ಗಂಡನನ್ನು ಬಿಟ್ಟು ಮಗಳೊಂದಿಗೆ ಪ್ರತ್ಯೇಕವಾಗಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಶ್ವಿನಿ ಮೆಡ್‍ಪ್ಲಸ್‍ಗೆ ಕೆಲಸಕ್ಕೆ ಹೋಗುತ್ತಿದ್ದಳು. ಜೀವನಾಂಶ ನೀಡಬೇಕು ಎನ್ನುವ ಕಾರಣಕ್ಕೆ ಮಗನನ್ನು ಕರೆದುಕೊಂಡು ಬಂದ ಜಗದೀಶ್, ಅಶ್ವಿನಿ ಹಾಗೂ ಮಕ್ಕಳ ಜೊತೆಯಲ್ಲಿ ವಾಸವಿದ್ದ.

    ಬುಧವಾರ ಬೆಳಗ್ಗೆ ಮಕ್ಕಳನ್ನು ಶಾಲೆಗೆ ಕಳುಹಿಸಿ, ನಂತರ ಪತ್ನಿಯನ್ನು ಕೆಲಸಕ್ಕೆ ಬಿಟ್ಟು ಬಂದಿದ್ದ. ಮಧ್ಯಾಹ್ನ ಊಟಕ್ಕೆಂದು ಪತ್ನಿಯನ್ನು ಬೈಕ್‍ನಲ್ಲಿ ಮನೆಗೆ ಕರೆದುಕೊಂಡು ಬಂದು ಚಾಕುವಿನಿಂದ ಇರಿದು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾನೆ. ಮಕ್ಕಳು ಶಾಲೆಯಿಂದ ಬಂದು ಮನೆ ಬಾಗಿಲು ತೆರೆದು ನೋಡಿದಾಗ ಅವರ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಗಾಬರಿಯಾಗಿದ್ದಾರೆ. ನಂತರ ಅಕ್ಕಪಕ್ಕದವರಿಗೆ ತಿಳಿಸಿದ್ದಾರೆ. ಇದನ್ನೂ ಓದಿ:  Sena Vs Sena: ಉದ್ಧವ್ ಶಿಬಿರಕ್ಕೆ ತಕ್ಷಣದ ಪರಿಹಾರವಿಲ್ಲ, ಆಗಸ್ಟ್ 1 ರಂದು ಮುಂದಿನ ವಿಚಾರಣೆ: ಕೋರ್ಟ್

    ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಶ್ವಿನಿ ಪೋಷಕರು ಬರುವಿಕೆಗಾಗಿ ಕಾಯುತ್ತಿದ್ದಾರೆ. ಇತ್ತ ತಾಯಿಯನ್ನು ಕಳೆದುಕೊಂಡ ಮಕ್ಕಳು ಅನಾಥವಾಗಿದ್ದು, ಪುಟ್ಟ ತಮ್ಮನನ್ನು ಅಕ್ಕ ಸಂತೈಸುತ್ತಿದ್ದು ಕರುಳು ಹಿಂಡುವಂತಿತ್ತು.

    Live Tv
    [brid partner=56869869 player=32851 video=960834 autoplay=true]

  • ವಿಚ್ಛೇದಿತ ಮುಸ್ಲಿಂ ಮಹಿಳೆ ಮರುವಿವಾಹ ಆಗದಿದ್ದಲ್ಲಿ ಜೀವನಾಂಶ ಪಡೆಯಲು ಅರ್ಹಳು: ಕೋರ್ಟ್‌

    ವಿಚ್ಛೇದಿತ ಮುಸ್ಲಿಂ ಮಹಿಳೆ ಮರುವಿವಾಹ ಆಗದಿದ್ದಲ್ಲಿ ಜೀವನಾಂಶ ಪಡೆಯಲು ಅರ್ಹಳು: ಕೋರ್ಟ್‌

    ಲಕ್ನೋ: ವಿಚ್ಛೇದಿತ ಮುಸ್ಲಿಂ ಮಹಿಳೆ ಮರುವಿವಾಹ ಆಗದೇ ಇದ್ದಲ್ಲಿ, ಪತಿಯಿಂದ ಜೀವನಾಂಶ ಪಡೆಯಲು ಅರ್ಹಳು ಎಂದು ಅಲಹಾಬಾದ್‌ ಹೈಕೋರ್ಟ್‌ ಹೇಳಿದೆ.

    ವಿಚ್ಛೇದಿತ ಮುಸ್ಲಿಂ ಮಹಿಳೆಯು ‘ಇದ್ದತ್’ (40 ದಿನ) ಅವಧಿ ಮುಗಿದ ನಂತರ ಜೀವನಾಂಶ ಕೋರಿ ಅರ್ಜಿ ಸಲ್ಲಿಸುವುದಾದರೆ, ಆಕೆ ಮರುಮದುವೆಯಾಗದೇ ಇರುವವರೆಗೆ ಕ್ರಿಮಿನಲ್ ಪ್ರೊಸಿಜರ್ ಕೋಡ್ ಅಡಿಯಲ್ಲಿ ತನ್ನ ಪತಿಯಿಂದ ಜೀವನಾಂಶವನ್ನು ಪಡೆಯಲು ಅರ್ಹಳಾಗಿದ್ದಾಳೆ ಎಂದು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ತಿಳಿಸಿದೆ. ಇದನ್ನೂ ಓದಿ: ಪೋಷಕರು ಆಯ್ಕೆ ಮಾಡಿದ ಹುಡ್ಗ ಇಷ್ಟವಿಲ್ಲವೆಂದು ಸರ್ಪ್ರೈಸ್‌ ನೆಪದಲ್ಲಿ ಕತ್ತು ಕೊಯ್ದಳು

    ಇಸ್ಲಾಮಿಕ್ ಕಾನೂನಿನಲ್ಲಿ, ವಿಚ್ಛೇದಿತ ಮಹಿಳೆಯು ಮರುಮದುವೆಯಾಗಲು ಸುಮಾರು ಮೂರು ತಿಂಗಳ ಕಾಲ ‘ಇದ್ದತ್’ ಅವಧಿಯಲ್ಲಿ ಕಾಯಬೇಕಾಗುತ್ತದೆ.

    ಸಿಆರ್‌ಪಿಸಿಯ ಸೆಕ್ಷನ್ 125 ರ ನಿಬಂಧನೆಯು ಪ್ರಯೋಜನಕಾರಿ ಶಾಸನವಾಗಿದೆ. ವಿಚ್ಛೇದಿತ ಮುಸ್ಲಿಂ ಮಹಿಳೆಯರಿಗೂ ಅದರ ಪ್ರಯೋಜನ ತಲುಪಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಲವ್ ಜಿಹಾದ್ ಆರೋಪ – ಮಧ್ಯಪ್ರವೇಶ ಮಾಡಲು ನಿರಾಕರಿಸಿದ ಹೈಕೋರ್ಟ್

    ಮುಸ್ಲಿಂ ಮಹಿಳೆಯೊಬ್ಬರು ಸಲ್ಲಿಸಿದ್ದ ಪರಿಷ್ಕರಣೆ ಅರ್ಜಿಯನ್ನು ಪುರಸ್ಕರಿಸಿ ನ್ಯಾಯಮೂರ್ತಿ ಕೆ.ಎಸ್.ಪವಾರ್ ಅವರಿದ್ದ ಪೀಠ ಈ ಆದೇಶ ನೀಡಿದೆ.

    ವಿಚಾರಣಾ ನ್ಯಾಯಾಲಯದ ಮುಂದೆ ಜೀವನಾಂಶಕ್ಕಾಗಿ ಅರ್ಜಿ ಸಲ್ಲಿಸಿದ ದಿನಾಂಕದಿಂದ ಮುಸ್ಲಿಂ ಮಹಿಳೆಗೆ ಜೀವನಾಂಶ ಮೊತ್ತ ಪಾವತಿಯಾಗಬೇಕು ಎಂದು ಪೀಠವು ನಿರ್ದೇಶಿಸಿದೆ.

    ಮುಸ್ಲಿಂ ಮಹಿಳೆಯೊಬ್ಬರು ತನಗೆ ಮತ್ತು ತನ್ನ ಇಬ್ಬರು ಅಪ್ರಾಪ್ತ ಮಕ್ಕಳಿಗೆ ಜೀವನಾಂಶ ಕೋರಿ ವಿಚಾರಣಾ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣಾ ನ್ಯಾಯಾಲಯವು ಜನವರಿ 23, 2007 ರಂದು, ಆದೇಶ ನೀಡಿದ ದಿನಾಂಕದಿಂದ ಅವರಿಗೆ ಜೀವನಾಂಶ ನೀಡುವಂತೆ ಸೂಚಿಸಿತ್ತು. ನಂತರ ಆಕೆಯ ಪತಿಯು ವಿಚಾರಣಾ ನ್ಯಾಯಾಲಯ ತೀರ್ಪು ಪ್ರಶ್ನಿಸಿ ಪ್ರತಾಪಗಢದ ಅಡಿಷನಲ್‌ ಸೆಷನ್‌ ಜಡ್ಜ್‌ಗೆ ಮನವಿ ಸಲ್ಲಿಸಿದರು. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಮೋದಿ, ಅಮಿತ್ ಶಾರನ್ನು ನಿಂದಿಸಿದ್ದ ವ್ಯಕ್ತಿ ಬಂಧನ

    ಪತಿ ಹಾಗೂ ಪತ್ನಿ ಇಬ್ಬರೂ ಮುಸ್ಲಿಂ ಸಮುದಾಯದವರಾಗಿರುವುದರಿಂದ ಪ್ರಕರಣವು 1986ರ ಮುಸ್ಲಿಂ ಮಹಿಳೆ ರಕ್ಷಣೆ ಕಾಯ್ದೆಯಡಿ ಬರುತ್ತದೆ. ಹೀಗಾಗಿ ಸಿಆರ್‌ಪಿಸಿ ಸೆಕ್ಷನ್‌ 125ರಡಿ ಆಕೆ ಜೀವನಾಂಶ ಪಡೆಯಲು ಅರ್ಹರಲ್ಲ ಎಂದು ವಿಚಾರಣಾ ನ್ಯಾಯಾಲಯದ ಆದೇಶವನ್ನು ಅಡಿಷನಲ್‌ ಸೆಷನ್‌ ಜಡ್ಜ್‌ ರದ್ದುಗೊಳಿಸಿದರು. ಈ ಆದೇಶವನ್ನು ಪ್ರಶ್ನಿಸಿ ಮಹಿಳೆ ಹೈಕೋರ್ಟ್‌ ಮೊರೆ ಹೋಗಿದ್ದರು. ಈ ವೇಳೆ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿಯಿತು. ಸುಪ್ರೀಂ ಕೋರ್ಟ್‌ ತೀರ್ಪನ್ನು ಉಲ್ಲೇಖಿಸಿ ಮುಸ್ಲಿಂ ಮಹಿಳೆ ಜೀವನಾಂಶ ಪಡೆಯಲು ಅರ್ಹಳು ಎಂದು ತಿಳಿಸಿತು.

  • ಒಮ್ಮೆ ನಡೆಸುವ ವ್ಯಭಿಚಾರಕ್ಕಾಗಿ ಮಹಿಳೆಯನ್ನು ಜೀವನಾಂಶದಿಂದ ಹೊರಗಿಡುವಂತಿಲ್ಲ: ಹೈಕೋರ್ಟ್

    ಒಮ್ಮೆ ನಡೆಸುವ ವ್ಯಭಿಚಾರಕ್ಕಾಗಿ ಮಹಿಳೆಯನ್ನು ಜೀವನಾಂಶದಿಂದ ಹೊರಗಿಡುವಂತಿಲ್ಲ: ಹೈಕೋರ್ಟ್

    ನವದೆಹಲಿ: ಯಾವಾಗಲಾದರೂ ಒಮ್ಮೆ ಪ್ರತ್ಯೇಕವಾಗಿ ನಡೆಸುವ ವ್ಯಭಿಚಾರವು, ವ್ಯಭಿಚಾರದ ಜೀವನವೆಂದು (ಲಿವಿಂಗ್ ಇನ್ ಅಡಲ್ಟ್ರಿ) ಪರಿಗಣನೆಯಾಗುವುದಿಲ್ಲ. ಹಾಗಾಗಿ, ವಿಚ್ಛೇದನದ ಬಳಿಕವೂ ಮಹಿಳೆಯನ್ನು ಜೀವನಾಂಶದಿಂದ ದೂರವಿಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

    ವಿಚ್ಛೇದನದ ಬಳಿಕ ಸಿಆರ್‌ಪಿಸಿ (ಕ್ರಿಮಿನಲ್‌ ಪ್ರೊಸಿಜರ್‌ ಕೋಡ್‌) ಸೆಕ್ಷನ್ 125ರ ಅಡಿ ಪತ್ನಿಗೆ ಜೀವನಾಂಶ ನೀಡುವಂತೆ ಆದೇಶಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಬದಿಗೆ ಸರಿಸುವಂತೆ ಕೋರಿ ಪತಿಯೊಬ್ಬ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಚಂದ್ರ ಧಾರಿ ಸಿಂಗ್ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿದೆ. ಇದನ್ನೂ ಓದಿ: ಸಲಿಂಗಿಗಳ ಮದುವೆ ಮಾನ್ಯತೆ ಮನವಿ ತಿರಸ್ಕರಿಸಿದ ಹೈಕೋರ್ಟ್

    COURT (2)

    ನಿರಂತರವಾಗಿ ನಡೆಸುವ ವ್ಯಭಿಚಾರ ಅಥವಾ ವ್ಯಭಿಚಾರಕ್ಕಾಗಿಯೇ ಒಟ್ಟಾಗಿ ಇರುವುದಕ್ಕೆ ಕಠಿಣ ಸಿಆರ್‌ಪಿಸಿ ಸೆಕ್ಷನ್ 125 (4) ಅನ್ವಯಿಸುತ್ತದೆ ಎಂದು ದೇಶದ ಹಲವು ಹೈಕೋರ್ಟ್ಗಳು ಹೇಳಿವೆ ಎಂದು ನ್ಯಾಯಾಲಯ ಹೇಳಿದೆ.

    ವ್ಯಭಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ಹೈಕೋರ್ಟ್ಗಳು ತೀರ್ಪನ್ನು ನೀಡಿದ್ದು, ಪತ್ನಿಗೆ ಜೀವನಾಂಶ ನೀಡುವುದಕ್ಕೆ ಸಂಬಂಧಿಸಿದ ವಿಚಾರವನ್ನು ಪರಿಹರಿಸಿವೆ. ಸಿಆರ್‌ಪಿಸಿ ಸೆಕ್ಷನ್ 125(4) ಅನ್ನು ಅನ್ವಯಿಸಲು ಪತಿಯು ಪತ್ನಿ ಪೂರ್ಣ ವ್ಯಭಿಚಾರದಲ್ಲಿ ಭಾಗಿಯಾಗಿದ್ದಾಳೆ ಎಂಬುದನ್ನು ಪತಿಯೂ ಸಾಕ್ಷಿಯಿಂದ ಸಾಬೀತುಪಡಿಸಬೇಕು. ಹೀಗಾಗಿ, ಯಾವಾಗಲಾದರೊಮ್ಮೆ ಏಕಾಂತದಲ್ಲಿ ನಡೆಸಿದ ವ್ಯಭಿಚಾರವು, ವ್ಯಭಿಚಾರದ ಬದುಕು ಆಗುವುದಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇದನ್ನೂ ಓದಿ: ವೇಶ್ಯಾವಾಟಿಕೆ ಅಡ್ಡೆ ಮೇಲಿನ ದಾಳಿಯಲ್ಲಿ ಸಿಕ್ಕಿಬೀಳುವ ಗ್ರಾಹಕರನ್ನು ಬಂಧಿಸುವಂತಿಲ್ಲ: ಹೈಕೋರ್ಟ್‌

    COURT (1)

    ಸಿಆರ್‌ಪಿಸಿ ಸೆಕ್ಷನ್ 125 ಪತ್ನಿ, ಮಕ್ಕಳು ಮತ್ತು ಪೋಷಕರಿಗೆ ಜೀವನಾಂಶ ಪಡೆಯಲು ಅವಕಾಶ ಮಾಡಿಕೊಡುತ್ತದೆ. ಅದಾಗ್ಯೂ, ಪತ್ನಿಯು ಲಿವಿಂಗ್ ಇನ್ ವ್ಯಭಿಚಾರದಲ್ಲಿದ್ದರೆ, ಪ್ರತ್ಯೇಕವಾಗಿದ್ದರೆ ಅಥವಾ ಸಕಾರಣವಿಲ್ಲದೇ ತನ್ನ ಪತಿಯ ಜೊತೆ ನೆಲೆಸಲು ಪತ್ನಿ ನಿರಾಕರಿಸಿದರೆ ಆಗ ಆಕೆಯು ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಾಗಿರುವುದಿಲ್ಲ ಎಂದು ಪ್ರಕಟಿಸಿದೆ. ಇದನ್ನೂ ಓದಿ: ಪಾಕ್‌ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು

    ಅರ್ಜಿದಾರರ ಪರ ವಕೀಲರಾದ ಅಣ್ಣು ನರುಲಾ, ವಿಶಾಲ್ ಸಿಂಗ್, ರವಿಕುಮಾರ್ ಮತ್ತು ಶಿವ ಚೌಹಾಣ್ ವಾದ ಮಂಡಿಸಿದರೆ, ಪ್ರತಿವಾದಿ ಪರ ವಕೀಲ ಎಂ ಶಮಿಖ್ ವಾದ ಮಂಡಿಸಿದ್ದರು.

  • ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಪ್ಲೈ ಓವರ್ ಮೇಲೆ ಬೃಹತ್ ವಾಹನ ಸಂಚಾರಕ್ಕೆ ನಿಷೇಧ

    ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಪ್ಲೈ ಓವರ್ ಮೇಲೆ ಬೃಹತ್ ವಾಹನ ಸಂಚಾರಕ್ಕೆ ನಿಷೇಧ

    ಬೆಂಗಳೂರು: ನಗರದ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಪ್ಲೈ ಓವರ್ ಮೇಲೆ ಬಸ್ ಮತ್ತು ಬೃಹತ್ ವಾಹನಗಳ ಸಂಚಾರವನ್ನು ಸೋಮವಾರ ಸಂಜೆ 6 ಗಂಟೆಯಿಂದ ನಿಷೇಧಿಸಲಾಗಿದೆ.

    ಎಲೆಕ್ಟ್ರಾನಿಕ್ಸ್ ಸಿಟಿಯಿಂದ ಸಿಲ್ಕ್ ಬೋರ್ಡ್ ಗೆ ಸಂಪರ್ಕ ಕಲ್ಪಿಸುವ ಮೇಲ್ಸತುವೆ ಇದಾಗಿದ್ದು, ಈ ಸೇತುವೆ ನಿರ್ಮಾಣವಾಗಿ 8 ವರ್ಷಗಳಾಗಿದೆ. ಆದ್ದರಿಂದ ನಿರ್ವಹಣೆಗಾಗಿ ಬೃಹತ್ ವಾಹನಗಳಿಗೆ ತಡೆ ಏರಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮದಂತೆ ನಿರ್ವಹಣೆ ನಡೆಯಲಿದೆ.

    ಸೇತುವೆ ನಿರ್ವಹಣೆಗಾಗಿ ಬೃಹತ್ ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶ ನೀಡಿಲ್ಲ. ಲಘು ವಾಹನಗಳಾದ ಕಾರು ಮತ್ತು ದ್ವಿಚಕ್ರ ವಾಹನಗಳು ಸಂಚಾರ ಎಂದಿನಂತೆ ನಡೆಯಲಿದೆ. ಈ ಕುರಿತು ಬಿಇಟಿಎಲ್ ಪ್ರಕಟಣೆ ನೀಡಿದ್ದು, ಪ್ಲೈ ಓವರ್ ಮೇಲೆ ಯಾವುದೇ ಅಪಾಯವಿಲ್ಲ, ಕೇವಲ ನಿರ್ವಹಣೆಗಾಗಿಯೇ ಬೃಹತ್ ವಾಹನಗಳಿಗೆ ಪ್ರವೇಶ ನೀಡಿಲ್ಲವೆಂದು ತಿಳಿಸಿದೆ.

    ಮೇಲ್ಸತುವೆ ಮೇಲಿನ ರಸ್ತೆ ಮತ್ತು ಜಾಯಿಂಟ್ ಗಳ ನಿರ್ವಹಣೆ ಹಾಗೂ ಪಾಥ್ ಹೋಲ್ಸ್ ನಿರ್ವಹಣೆಯ ನಡೆಯಲಿದೆಯೆಂದು ಪ್ರಕಟಣೆಯಲ್ಲಿ ಬಿಇಟಿಎಲ್ ನ ಅಧಿಕಾರಿಗಳು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com