Tag: Majestic

  • Bengaluru | ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ ಪ್ರಯಾಣಿಕ

    Bengaluru | ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ ಪ್ರಯಾಣಿಕ

    ಬೆಂಗಳೂರು: ಪ್ರಯಾಣಿಕನೊಬ್ಬ ಮೆಟ್ರೋ ಹಳಿಗೆ (Metro Track) ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಾಡಪ್ರಭು ಕೆಂಪೇಗೌಡ (Nadaprabhu Kempegowda Metro Station, Majestic) ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

    ಮಾದಾವರ ಟು ಸಿಲ್ಕ್ ಇನ್ಸ್ಟಿಟ್ಯೂಟ್ ಮಾರ್ಗದ ಗ್ರೀನ್ ಲೇನ್‌ನಲ್ಲಿ ಘಟನೆ ನಡೆದಿದ್ದು, ಮೆಜೆಸ್ಟಿಕ್ 3ನೇ ಪ್ಲಾಟ್ ಫಾರ್ಮ್‌ನಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಮೆಟ್ರೋ ಸ್ಥಗಿತದಿಂದ ಗ್ರೀನ್ ಲೈನ್‌ನಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದೆ. ಇದನ್ನೂ ಓದಿ: ಬೆಂಗಳೂರು | ಮೊದಲ ದಿನವೇ ಜಾತಿಗಣತಿ ಸಮೀಕ್ಷೆಗೆ ವಿಘ್ನ – ಗೊಂದಲ ನಿವಾರಣೆಗೆ ಗಣತಿದಾರರಿಂದ ಪ್ರತಿಭಟನೆ

    ಪ್ಲಾಟ್ ಫಾರ್ಮ್‌ನಲ್ಲಿ ನಿಂತಿದ್ದ ಪ್ರಯಾಣಿಕ ರೈಲು ಬರುತ್ತಿದ್ದಂತೆ ಹಳಿಗೆ ಹಾರಿದ್ದಾನೆ. ಸದ್ಯ ಮೆಟ್ರೋ ರೈಲಿನಡಿ ಪ್ರಯಾಣಿಕ ಸಿಲುಕಿಕೊಂಡಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹೀಗಾಗಿ ಹಸಿರು ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಸಮೀಕ್ಷೆಯಲ್ಲಿ ಭಾಗವಹಿಸಿ: ಡಿಕೆಶಿ ಮನವಿ

    ಆತ್ಮಹತ್ಯೆಗೆ ಯತ್ನಿಸಿದ ಪ್ರಯಾಣಿಕನ ರಕ್ಷಣೆಗೆ ಮುಂದಾಗಿರುವ ಅಧಿಕಾರಿಗಳು ಶೀಘ್ರದಲ್ಲೇ ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ: ‘ಕಾಂತಾರ’ಗೆ ಟಿಕೆಟ್‌ ಸಿಗದ ಕಾರ್ಯಕರ್ತರಿಗೆ ಸೋಮವಾರ ವ್ಯವಸ್ಥೆ ಮಾಡುತ್ತೇನೆ: ಪ್ರತಾಪ್‌ ಸಿಂಹ

  • ಟೀ ಚೆನ್ನಾಗಿಲ್ಲ ಎಂದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಫ್ಲಾಸ್ಕ್‌ನಿಂದ ಹಲ್ಲೆ

    ಟೀ ಚೆನ್ನಾಗಿಲ್ಲ ಎಂದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಫ್ಲಾಸ್ಕ್‌ನಿಂದ ಹಲ್ಲೆ

    ಬೆಂಗಳೂರು: ಟೀ (Tea) ಚೆನ್ನಾಗಿಲ್ಲ ಎಂದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಟೀ ಶಾಪ್ ಸಿಬ್ಬಂದಿ ಹಲ್ಲೆ ಮಾಡಿದ ಘಟನೆ ಮೆಜೆಸ್ಟಿಕ್ (Majestic) ಬಸ್ ನಿಲ್ದಾಣದಲ್ಲಿ ನಡೆದಿದೆ.

    46ನೇ ಚಾಲಕ ಮೂಗಪ್ಪ ಅವರ ಮೇಲೆ ಟೀ ಸ್ಟಾಲ್ ಸಿಬ್ಬಂದಿ ಗುರುರಾಜ್ ಫ್ಲಾಸ್ಕ್‌ನಿಂದ ಹೊಡೆದು ಹಲ್ಲೆ ಮಾಡಿದ್ದಾನೆ. ಚಾಲಕ ಟೀ ಚೆನ್ನಾಗಿಲ್ಲ ಎಂದಿದ್ದಕ್ಕೆ ರೊಚ್ಚಿಗೆದ್ದ ಗುರುರಾಜ್ ರಕ್ತ ಬರುವಂತೆ ಫ್ಲಾಸ್ಕ್‌ನಿಂದ ತಲೆಗೆ ಹೊಡೆದಿದ್ದಾನೆ. ಇದನ್ನೂ ಓದಿ: ಆರೋಪಿ ನಟ ದರ್ಶನ್‌ ಮನೆಯಲ್ಲಿ 3 ಲಕ್ಷ ನಗದು ಕಳ್ಳತನ

    ಹಲ್ಲೆಗೊಳಗಾದ ಚಾಲಕ ಉಪ್ಪಾರಪೇಟೆ ಪೊಲೀಸ್ (Upparpet Police) ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಹಲ್ಲೆ ಮಾಡಿದ ಗುರುರಾಜ್‌ನನ್ನು ಬಂಧಿಸಿ, ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

  • ಬೆಂಗಳೂರು | ವೈಟ್ ಟಾಪಿಂಗ್ ಕಾಮಗಾರಿ – 23 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಾಜ್‌ಕುಮಾರ್ ರಸ್ತೆ ಬಂದ್

    ಬೆಂಗಳೂರು | ವೈಟ್ ಟಾಪಿಂಗ್ ಕಾಮಗಾರಿ – 23 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಾಜ್‌ಕುಮಾರ್ ರಸ್ತೆ ಬಂದ್

    – ಮುಂದಿನ ಮೂರು ತಿಂಗಳು ಟ್ರಾಫಿಕ್ ಕಿರಿಕಿರಿ ತಪ್ಪಿದ್ದಲ್ಲ!

    ಬೆಂಗಳೂರು: ಮೆಜೆಸ್ಟಿಕ್‌ನಿಂದ (Majestic) ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೆಎಸ್ಆರ್‌ಟಿಸಿ, ಬಿಎಂಟಿಸಿ, ಖಾಸಗಿ ಬಸ್‌ಗಳು ತೆರಳಬೇಕು ಅಂದರೆ ರಾಜ್‌ಕುಮಾರ್ ರಸ್ತೆ (Dr Rajkumar Road) ಮುಖಾಂತರ ಹೋಗಬೇಕು. ಈ ರಸ್ತೆಯಿಂದ ತುಮಕೂರು ರಸ್ತೆಗೆ ಕನೆಕ್ಟ್ ಆಗಿ ತೆರಳಬಹುದಿತ್ತು‌. ಆದರೆ ರಾಜ್‌ಕುಮಾರ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ (Whitetopping) ನಡೆಯುತ್ತಿದೆ. ಇದರಿಂದ ಸಂಚಾರ ನಿರ್ಬಂಧ ಮಾಡಲಾಗಿದೆ.

    ಮೆಜೆಸ್ಟಿಕ್‌ನಿಂದ ಲೂಲುಮಾಲ್ ಜಂಕ್ಷನ್ ಮಾರ್ಗವಾಗಿ ನವರಂಗ್ ಸಿಗ್ನಲ್‌ಗೆ ಬರಲು ದ್ವಿಚಕ್ರ ವಾಹನ, ಕಾರುಗಳ ಸಂಚಾರಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಬಸ್‌ಗಳು ಲೂಲುಮಾಲ್ ಜಂಕ್ಷನ್ ಬಳಿ ಇರುವ ಅಂಡರ್‌‌ ಪಾಸ್ ಮುಖಾಂತರ ಬಾಷಂ ಸರ್ಕಲ್‌ಗೆ ತೆರಳಿ ವೆಸ್ಟಾಫ್ ಕಾರ್ಡ್ ರೋಡ್ ಮೂಲಕ ತುಮಕೂರು ರಸ್ತೆಗೆ ತೆರಳುಬಹುದು. ವಾಹನ ಸವಾರರಿಗೆ ಬದಲಿ ಮಾರ್ಗ ತಿಳಿಯದೇ ಲೂಲು ಜಂಕ್ಷನ್ ಬಳಿ ಸಂಚಾರ ದಟ್ಟಣೆ ಸೃಷ್ಟಿಯಾಗುತ್ತಿದೆ. ಇದರಿಂದಾಗಿ ಟ್ರಾಫಿಕ್ ಪೊಲೀಸರು ವಾಹಗಳನ್ನು ಖುದ್ದು ಸ್ಥಳದಲ್ಲಿ ನಿಂತು ಮಾರ್ಗ ಬದಲಾವಣೆ ಮಾಡುತ್ತಿದ್ದಾರೆ. ಮೆಜೆಸ್ಟಿಕ್‌ನಿಂದ ತುಮಕೂರು ಕಡೆಗೆ ಮತ್ತು ರಾಜಾಜಿನಗರದ ಕಡೆಗೆ ಬರುವ ವಾಹನಗಳಿಗೆ ಟ್ರಾಫಿಕ್ ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ. ಇದನ್ನೂ ಓದಿ: ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್

    ಮೆಜೆಸ್ಟಿಕ್‌ – ತುಮಕೂರು: ಖಾಸಗಿ ವಾಹನಗಳು, ಬಸ್‌ಗಳು ನೇರವಾಗಿ ಲೂಲುಮಾಲ್ ಬಳಿಯ ರಾಜಾಜಿನಗರ ಪ್ರವೇಶದ ಅಂಡರ್ ಪಾಸ್ ಮೂಲಕ ಭಾಷಂ ಸರ್ಕಲ್, ದೋಬಿಘಾಟ್ ವಾರಿಯರ್ ಬೇಕರಿ ಎಡ ತಿರುವು ಪಡೆದು ವೆಸ್ಟಾಫ್ ಕಾರ್ಡ್ ರಸ್ತೆ ಜೆಎಸ್‌ಎಸ್ ಜಂಕ್ಷನ್ ಕಡೆಗೆ ಸಾಗಿ ತುಮಕೂರು ರಸ್ತೆಗೆ ತೆರಳಬಹುದು

    ಮೆಜೆಸ್ಟಿಕ್ – ರಾಜಾಜಿನಗರ: ಮೆಜೆಸ್ಟಿಕ್‌ನಿಂದ ಬರುವ ದ್ವಿಚಕ್ರ ವಾಹನ, ಕಾರುಗಳು ನವರಂಗ್ ಸಿಗ್ನಲ್ ಬಳಿ ಎಡತಿರುವು ಪಡೆದು 19ನೇ ಮುಖ್ಯ ರಸ್ತೆ , ಮೋದಿ ಸೇತುವೆ ಬಲ ತಿರುವು ಪಡೆದು ಸಾಗಬಹುದು.

    ರಾಜ್ ಕುಮಾರ್ ರಸ್ತೆಯಲ್ಲಿ ಸಂಚಾರ ಬಂದ್‌ನಿಂದ ದೊಡ್ಡ ಪ್ರಮಾಣದ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನ ಸವಾರರು, ಪ್ರಯಾಣಿಕರು ಟ್ರಾಫಿಕ್ ಜಾಮ್‌ನಿಂದ ಹೈರಾಣಾಗಿ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇದನ್ನೂ ಓದಿ: ಕಾಗದ ಉತ್ಪನ್ನಗಳ GST ದರ ಗೊಂದಲ – ವಿದ್ಯಾರ್ಥಿಗಳ ನೋಟ್‌ಬುಕ್ ಬೆಲೆ ಏರಿಕೆ ಆತಂಕ!

  • ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ – ನಮ್ಮ ಮೆಟ್ರೋಗೆ ಜನವೋ ಜನ

    ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ – ನಮ್ಮ ಮೆಟ್ರೋಗೆ ಜನವೋ ಜನ

    ಬೆಂಗಳೂರು: ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರ ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಎಫೆಕ್ಟ್‌ನಿಂದಾಗಿ ನಮ್ಮ ಮೆಟ್ರೋ (Namma Metro) ನಿಲ್ದಾಣಗಳಲ್ಲಿ ಪ್ರಯಾಣಿಕರು ಸಾಲುಗಟ್ಟಿ ನಿಂತಿದ್ದಾರೆ.

    ಬಸ್ ಸರಿಯಾಗಿ ಸಿಗದೆ ಪರದಾಡುತ್ತಿರುವ ಜನರು ಮೆಟ್ರೋದ ಮೊರೆ ಹೋಗಿದ್ದಾರೆ. ಇದೀಗ ಮೆಟ್ರೋ ನಿಲ್ದಾಣಗಳಲ್ಲಿ ಎಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಓಡಾಡ್ತಿದ್ದಾರೆ. ದಿನನಿತ್ಯಕ್ಕಿಂತ ಮೆಟ್ರೋ ಪ್ರಯಾಣಿಕರು ಹೆಚ್ಚಾಗಿರುವುದರಿಂದ ತೊಂದರೆಯಾಗದಂತೆ ಮೆಟ್ರೋ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಸರ್ಕಾರಿ ಬಸ್‌ಗಳಿಲ್ಲದೇ ಪ್ರಯಾಣಿಕರ ಪರದಾಟ – ನಿಮ್ಮ ಜಿಲ್ಲೆಯ ಪರಿಸ್ಥಿತಿ ಹೇಗಿದೆ?

    ಮೆಟ್ರೋ ನಿಲ್ದಾಣದ ಹೊರಗಿನಿಂದಲೂ ಪ್ರಯಾಣಿಕರು ಕ್ಯೂ ನಿಂತಿದ್ದಾರೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಮುಂಭಾಗದಲ್ಲಿ ಕ್ಯೂ ಗಟ್ಟಲೆ ಪ್ರಯಾಣಿಕರು ಜಮಾಯಿಸಿದ್ದರಿಂದ ಮೆಟ್ರೋ ನಿಲ್ದಾಣದ ಬಳಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಸಿಡಿದ ಸಾರಿಗೆ ನೌಕರರು – ಇಂದಿನಿಂದ ಬಸ್‌ ಬಂದ್‌

    ಬಸ್‌ಗಳ ಸಂಚಾರ ಕಡಿಮೆ ಆಗಿದ್ದರಿಂದ ಹಲವರು ಸ್ವಂತ ವಾಹನಗಳಲ್ಲೇ ಸಂಚಾರ ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಸಾರಿಗೆ ನೌಕರರು ಸಿಡಿದಿದ್ದರಿಂದ ಸಾರ್ವಜನಿಕರ ಬಸ್ ಸಂಚಾರವಿಲ್ಲದೇ ಪರದಾಡುವಂತಾಗಿದೆ.

  • ಹೈಟೆಕ್ ಆಗಲಿದೆ ಮೆಜೆಸ್ಟಿಕ್ ಬಸ್ ನಿಲ್ದಾಣ – 40 ಎಕರೆ ಜಾಗದಲ್ಲಿ ಬಹುಮಾದರಿ ಟ್ರಾನ್ಸ್‌ಪೋರ್ಟ್‌ ಹಬ್!

    ಹೈಟೆಕ್ ಆಗಲಿದೆ ಮೆಜೆಸ್ಟಿಕ್ ಬಸ್ ನಿಲ್ದಾಣ – 40 ಎಕರೆ ಜಾಗದಲ್ಲಿ ಬಹುಮಾದರಿ ಟ್ರಾನ್ಸ್‌ಪೋರ್ಟ್‌ ಹಬ್!

    ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು (Majestic Bus Stand) ಹೈಟೆಕ್ ಮಾಡಲು ಸರ್ಕಾರ ಹೊರಟಿದ್ದು, ಮುಂದೆ ಮೆಜೆಸ್ಟಿಕ್ ಬಸ್ ಸ್ಟಾಪ್ ಇಂಟರ್‌ಮಾಡೆಲ್ ಟ್ರಾನ್ಸ್‌ಪೋರ್ಟ್‌ ಹಬ್ ಆಗಲಿದೆ.

    ಬೆಂಗಳೂರಿನ (Bengaluru) ಹೃದಯ ಭಾಗದಲ್ಲಿರುವ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಲಕ್ಷಾಂತರ ಜನ ಬರ್ತಾರೆ, ಹೋಗ್ತಾರೆ. ಸುಮಾರು ಮೂವತ್ತು ವರ್ಷಗಳ ಇತಿಹಾಸವಿರುವ ಈ ಬಸ್ ನಿಲ್ದಾಣವನ್ನು ನವೀಕರಣ ಮಾಡಲು ಸರ್ಕಾರ ಮುಂದಾಗಿದೆ. ಇದನ್ನೂ ಓದಿ: ತುಮಕೂರು | ಹೋಟೆಲ್‌ನಲ್ಲಿ ದಾವಣಗೆರೆ ಪಿಎಸ್‍ಐ ನೇಣಿಗೆ ಶರಣು

    ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ, ಮೆಜೆಸ್ಟಿಕ್ ಬಸ್ ನಿಲ್ದಾಣದ ಜಾಗವನ್ನು ‘ಪ್ರಾಜೆಕ್ಟ್ ಮೆಜೆಸ್ಟಿಕ್’ ಯೋಜನೆಯ ಅಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಪುನರ್ ಅಭಿವೃದ್ಧಿಪಡಿಸಿ, ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್ ನಿರ್ಮಿಸುತ್ತೇವೆ ಎಂದು ಘೋಷಿಸಿದ್ದರು. ಈ ಹಿನ್ನೆಲೆ ಸಾರಿಗೆ ಇಲಾಖೆ ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಇಂಟರ್‌ಮಾಡಲ್ ಟ್ರಾನ್ಸ್‌ಪೋರ್ಟ್‌ ಹಬ್ ಆಗಿ ಪರಿವರ್ತನೆ ಮಾಡಲು ಸಜ್ಜಾಗುತ್ತಿದೆ. ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಹಮ್ಮಿಕೊಳ್ಳಲು ಪ್ಲಾನ್ ಮಾಡಿದೆ. ಈ ಪ್ರಾಜೆಕ್ಟ್ ಬಗ್ಗೆ ತಂತ್ರಜ್ಞ ಸಲಹೆಗಾರರನ್ನು ನೇಮಿಸಲು ಕೆಎಸ್‌ಆರ್‌ಟಿಸಿ ಟೆಂಡರ್ ಕರೆದಿದೆ.

    ಈ ಯೋಜನೆಯ ಉದ್ದೇಶವೆಂದರೆ, ನಗರ ಮತ್ತು ಅಂತರನಗರ ಸಾರಿಗೆ, ಮೆಟ್ರೋ ಮತ್ತು ರೈಲ್ವೆ ಸೇವೆಗಳ ನಡುವೆ ಉತ್ತಮ ಸಂಪರ್ಕ ಕಲ್ಪಿಸಿ ಪ್ರಯಾಣಿಕರಿಗೆ ಸುಗಮ ಸಂಚಾರ ಅನುಭವ ಒದಗಿಸುವುದು. ಸುಮಾರು 40 ಎಕರೆ ಭೂಭಾಗದಲ್ಲಿ ಈ ಹಬ್ ನಿರ್ಮಾಣವಾಗಲಿದೆ. ಇದು ಈಗಿರುವ ಕೆಎಸ್‌ಆರ್‌ಟಿಸಿ ಟರ್ಮಿನಲ್‌ಗಳು 1, 2, 3 ಅನ್ನು ಒಳಗೊಂಡಿರುತ್ತದೆ. ಶಾಪಿಂಗ್ ಕಾಂಪ್ಲೆಕ್ಸ್, ಆಹಾರ ಮಳಿಗೆಗಳು, ಕಚೇರಿ ಪ್ರದೇಶಗಳು ಸೇರಿ ವಾಣಿಜ್ಯ ವ್ಯವಸ್ಥೆಗೂ ಅವಕಾಶವಿರುತ್ತದೆ. ಈಗ ಕೆಎಸ್‌ಆರ್‌ಟಿಸಿ ಟೆಂಡರ್‌ನಲ್ಲಿ ಆಯ್ಕೆಯಾದ ಸಲಹೆಗಾರರು ಸ್ಥಳ ಪರಿಶೀಲನೆ, ಸಂಚಾರದ ಚಟುವಟಿಕೆ ವಿಶ್ಲೇಷಣೆ, ಮಾರುಕಟ್ಟೆ ಅಗತ್ಯತೆಯ ಮುನ್ಸೂಚನೆ, ಪರಿಸರ ಹಾಗೂ ಸಾಮಾಜಿಕ ಪರಿಣಾಮಗಳ ಅಧ್ಯಯನದೊಂದಿಗೆ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಬೇಕು. ಇದನ್ನೂ ಓದಿ: ಗ್ಯಾರಂಟಿ ಬೇಡ ಅಂತ ಹೇಳಿ, ಅದೇ ದುಡ್ಡಲ್ಲಿ ರಸ್ತೆ ಮಾಡಿಸ್ತೀವಿ: ರಾಯರೆಡ್ಡಿ

    ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ದೇವರಾಜ್ ಅರಸ್ ಹಾಗೂ ಗುಂಡೂರಾವ್ ನೇತೃತ್ವದಲ್ಲಿ ಈ ಬಸ್ ನಿಲ್ದಾಣವಾಗಿದ್ದು, 2016 ರಲ್ಲಿಯೇ ನವೀಕರಣಕ್ಕೆ ಪ್ಲಾನ್ ಮಾಡಲಾಗಿತ್ತು. ಇದೀಗ ನವೀಕರಣವಾಗ್ತಿದೆ. ಸದ್ಯ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿಯಿಂದ ಪ್ರತಿದಿನ ಅಂದಾಜು ಹತ್ತು ಸಾವಿರ ಬಸ್‌ಗಳು ಸಂಚರಿಸುತ್ತಿದ್ದು, ಜಾಗದ ಕೊರತೆ ಇದೆ ಎಂದು ತಿಳಿಸಿದ್ದಾರೆ.

  • ಪ್ರಾಜೆಕ್ಟ್‌ ಮೆಜೆಸ್ಟಿಕ್‌ – ಹೈಟೆಕ್‌ ಆಗಲಿದೆ ಬಸ್‌ ನಿಲ್ದಾಣ

    ಪ್ರಾಜೆಕ್ಟ್‌ ಮೆಜೆಸ್ಟಿಕ್‌ – ಹೈಟೆಕ್‌ ಆಗಲಿದೆ ಬಸ್‌ ನಿಲ್ದಾಣ

    ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣವನ್ನು (Majestic Bus Stand) ಹೈಟೆಕ್‌ ಮಾಡಲು ಸರ್ಕಾರ ಮುಂದಾಗಿದೆ.

    ತಮ್ಮ ಬಜೆಟ್‌ ಭಾಷಣದಲ್ಲಿ ಬೆಂಗಳೂರಿನ (Bengaluru) ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ಜಾಗವನ್ನು ʼಪ್ರಾಜೆಕ್ಟ್‌ ಮೆಜೆಸ್ಟಿಕ್‌ʼ ಯೋಜನೆಯ ಅಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಪುನರ್‌ ಅಭಿವೃದ್ಧಿಪಡಿಸಿ, ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್‌ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Karnataka Budget 2025 LIVE: ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್‌ಗೆ 200 ರೂ. ನಿಗದಿ

    ಈ ಯೋಜನೆಗೆ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಆದರೆ ಅನುದಾನದ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ.

     

  • ಮೆಜೆಸ್ಟಿಕ್ ಮುಖ್ಯರಸ್ತೆಗೆ ವೈಟ್ ಟಾಪಿಂಗ್ ಭಾಗ್ಯ – ಮುಂದಿನ ತಿಂಗಳಿಂದ ಟ್ರಾಫಿಕ್ ಜಾಮ್ ಸಾಧ್ಯತೆ

    ಮೆಜೆಸ್ಟಿಕ್ ಮುಖ್ಯರಸ್ತೆಗೆ ವೈಟ್ ಟಾಪಿಂಗ್ ಭಾಗ್ಯ – ಮುಂದಿನ ತಿಂಗಳಿಂದ ಟ್ರಾಫಿಕ್ ಜಾಮ್ ಸಾಧ್ಯತೆ

    ಬೆಂಗಳೂರು: ಸಿಲಿಕಾನ್ ಸಿಟಿಯ (Silicon City) ಹೃದಯ ಭಾಗದಲ್ಲಿರುವ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ (BMTC Bus Stand) ಮುಖ್ಯರಸ್ತೆಗೆ ವೈಟ್ ಟಾಪಿಂಗ್ (White Topping) ಭಾಗ್ಯ ಒದಗಿ ಬಂದಿದೆ.

    ಇತ್ತೀಚಿಗೆ ಬೆಂಗಳೂರಿನಲ್ಲಿ ಗುಂಡಿಗಳ ಸಮಸ್ಯೆ ಕೇಳಿ ಬರುತ್ತಿರುವುದು ಸಾಮಾನ್ಯವಾಗಿದೆ. ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ ಮುಖ್ಯರಸ್ತೆ ಗುಂಡಿಮಯ ಆಗಿದೆ. ಇದರಿಂದ ಜನರಿಗೆ ಓಡಾಡಲು ಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ. ಬೃಹತ್ ಗಾತ್ರದ ಗುಂಡಿಗಳಿಂದ ವಾಹನಗಳು ಓಡಾಡುವುದಕ್ಕೆ ಆಗುತ್ತಿಲ್ಲ. ಹೀಗಾಗಿ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಲು ವೈಟ್ ಟಾಪಿಂಗ್ ಕಾಮಗಾರಿ ಮಾಡಲು ಬಿಬಿಎಂಪಿ (BBMP) ಪ್ಲ್ಯಾನ್ ಮಾಡಿದೆ.ಇದನ್ನೂ ಓದಿ: ಜಾತಿ ವ್ಯವಸ್ಥೆ ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಾ ಇದ್ದಾರೆ: ಪೇಜಾವರ ಶ್ರೀ

    ಸದ್ಯ ವೈಟ್ ಟಾಪಿಂಗ್ ಮಾಡಲು ಸಿದ್ಧವಾಗಿದ್ದು, ವೈಟ್ ಟಾಪಿಂಗ್ ಕಾಮಗಾರಿ ಮುಂದಿನ ತಿಂಗಳ ಮೊದಲ ವಾರದಲ್ಲಿ ಆರಂಭ ಆಗಲಿದೆ. ರಸ್ತೆಯ ಒಂದು ಭಾಗವನ್ನು ಬಂದ್ ಮಾಡಿ ಕಾಮಗಾರಿ ಆರಂಭ ಮಾಡಲಿದ್ದು, ಮತ್ತೊಂದು ಭಾಗದಲ್ಲಿ ರಸ್ತೆ ಸಂಚಾರ ಇರಲಿದೆ. ವೈಟ್ ಟ್ಯಾಪಿಂಗ್ ಕೆಲಸದಿಂದ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆಯಿದೆ.

    ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಓಡಾಟಕ್ಕೆ ಸಮಸ್ಯೆ ಆಗಲಿದೆ. ರೈಲ್ವೆ ಸ್ಟೇಷನ್, ಆನಂದ್ ರಾವ್ ಸರ್ಕಲ್, ಚಿಕ್ಕಪೇಟೆ, ಉಪ್ಪಾರಪೇಟೆ ಸೇರಿದಂತೆ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗಲಿದೆ. ಕಾಮಗಾರಿ ಆರಂಭವಾದ ನಾಲ್ಕು ತಿಂಗಳುಗಳ ಕಾಲ ಈ ಸಮಸ್ಯೆ ಇರಲಿದೆ.

    ಮೆಜೆಸ್ಟಿಕ್‌ನಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಮಾಡುವುದು ಒಳ್ಳೆಯ ವಿಚಾರವಾದರೆ ಕಾಮಗಾರಿ ಆರಂಭ ಮಾಡಿ ಬೇಗ ಕೆಲಸ ಮುಗಿಸುತ್ತಾರಾ ಎನ್ನುವುದೇ ಸದ್ಯದ ಕುತೂಹಲ.ಇದನ್ನೂ ಓದಿ: ರಾಜ್ಯದ ಹವಾಮಾನ ವರದಿ: 28-10-2024

  • 3 ದಿನ ದಸರಾ ರಜೆ ಹಿನ್ನೆಲೆ ಮೆಜೆಸ್ಟಿಕ್‌ನಿಂದ 2000ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ

    3 ದಿನ ದಸರಾ ರಜೆ ಹಿನ್ನೆಲೆ ಮೆಜೆಸ್ಟಿಕ್‌ನಿಂದ 2000ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ

    -ಬೆಂಗಳೂರಿನಿಂದ ಮೈಸೂರಿಗೆ ಪ್ರತ್ಯೇಕವಾಗಿ 660 ವಿಶೇಷ ಬಸ್‌ಗಳು

    ಬೆಂಗಳೂರು: ಮೂರು ದಿನಗಳ ಕಾಲ ದಸರಾ (Dasara) ರಜೆ ಹಿನ್ನೆಲೆ ಮೆಜೆಸ್ಟಿಕ್‌ನಿಂದ (Majestic) 2000ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ (KSRTC) ಬಸ್ಸುಗಳು ಕಾರ್ಯನಿರ್ವಹಿಸಲಿವೆ.

    ಅ.11 ರಂದು ಆಯುಧ ಪೂಜೆ, ಅ.12 ರಂದು ವಿಜಯದಶಮಿ ಹಾಗೂ ಎರಡನೇ ಶನಿವಾರ, ಅ.13 ರಂದು ಭಾನುವಾರ. ಹೀಗಾಗಿ ಮೂರು ದಿನಗಳ ಕಾಲ ರಜೆಯಿರುವ ಹಿನ್ನೆಲೆ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಜನಜಂಗುಳಿಯಿಂದ ಕೂಡಿದೆ.ಇದನ್ನೂ ಓದಿ: ಧಾರವಾಡ| 24 ಗಂಟೆಯಾದ್ರೂ ಬೈಪಾಸ್ ರಸ್ತೆಯಲ್ಲಿ ಕಡಿಮೆಯಾಗದ ನೀರಿನ ಹರಿವು- ಪ್ರಯಾಣಿಕರ ಪರದಾಟ

    ಮೂರು ದಿನಗಳ ಕಾಲ ರಜೆಯಿರುವ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ವತಿಯಿಂದ 2000ಕ್ಕೂ ಹೆಚ್ಚು ಬಸ್‌ಗಳು ಕಾರ್ಯನಿರ್ವಹಿಸಲಿದ್ದು, ಅ.9 ರಿಂದ 12ರವರಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಹಾಗೂ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅ.13 ಹಾಗೂ 14 ರಂದು ಬಸ್‌ಗಳು ಕಾರ್ಯನಿರ್ವಹಿಸಲಿವೆ.

    ಮೈಸೂರು ದಸರಾ ಜಂಬೂಸವಾರಿ ಹಿನ್ನೆಲೆ ಬೆಂಗಳೂರಿನಿಂದ ಮೈಸೂರಿಗೆ ಪ್ರತ್ಯೇಕವಾಗಿ 660 ದಸರಾ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್ ಕಾರ್ಯಾನಿರ್ವಹಿಸಲಿವೆ.ಇದನ್ನೂ ಓದಿ: ದಲಿತ ನಾಯಕನನ್ನ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಮಾಡಲಿ- ಕಾಂಗ್ರೆಸ್‌ಗೆ ಜೆಡಿಎಸ್ ಸವಾಲ್

     

  • ಮೆಜೆಸ್ಟಿಕ್ ರೈಲು ನಿಲ್ದಾಣಕ್ಕಿಂದು ಹುಟ್ಟುಹಬ್ಬದ ಸಂಭ್ರಮ – ಬೆಂಗ್ಳೂರಿಗೆ ಮೊದಲ ರೈಲು ಯಾವಾಗ ಬಂತು ಗೊತ್ತಾ?

    ಮೆಜೆಸ್ಟಿಕ್ ರೈಲು ನಿಲ್ದಾಣಕ್ಕಿಂದು ಹುಟ್ಟುಹಬ್ಬದ ಸಂಭ್ರಮ – ಬೆಂಗ್ಳೂರಿಗೆ ಮೊದಲ ರೈಲು ಯಾವಾಗ ಬಂತು ಗೊತ್ತಾ?

    ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲು ನಿಲ್ದಾಣಕ್ಕೆ (KSR Bengaluru City Junction) ಇಂದಿಗೆ 153 ವರ್ಷಗಳ ಇತಿಹಾಸ. ರೈಲ್ವೆ ವಿಭಾಗದ ಅಧಿಕಾರಿಗಳು ಹಾಗೂ ನಿವೃತ್ತ ರೈಲ್ವೆ ಅಧಿಕಾರಿಗಳು ಕೇಕ್ ಕಟ್ ಮಾಡಿ, ಸಂಭ್ರಮಾಚರಣೆ ನಡೆಸಿದರು. ಬೆಂಗಳೂರಿನಲ್ಲಿ (Bengaluru) ರೈಲ್ವೆ ವೈಭವದ 153 ವರ್ಷಗಳ ಇತಿಹಾಸವನ್ನ ಸಾರ್ವಜನಿಕರಿಗೆ ತಿಳಿಸಲು ನೈರುತ್ಯ ರೈಲ್ವೆಯಿಂದ, ರೈಲು ನಿಲ್ದಾಣ ಮಹೋತ್ಸವ ಆಚರಿಸಲಾಯಿತು.

    KSR ರೈಲ್ವೆ ನಿಲ್ದಾಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಬೆಂಗಳೂರು ವಿಭಾಗದ ರೈಲ್ವೆ ಅಧಿಕಾರಿಗಳು ಭಾಗಿಯಾಗಿದ್ರು. ಹಲವು ವರ್ಷಗಳಿಂದ KSR ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸಿ, ನಿವೃತ್ತಿ ಹೊಂದಿದ ನೌಕರರು ಕೂಡ ತಮ್ಮ ಅಭಿಪ್ರಾಯಗಳನ್ನ ಹಂಚಿಕೊಂಡರು. ಇದನ್ನೂ ಓದಿ: 600 ಕೋಟಿ ರೂ. ಭ್ರಷ್ಟಾಚಾರ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

    ಬೆಂಗಳೂರಿಗೆ ಆಗಸ್ಟ್ 1, 1864 ರಲ್ಲಿ ಬಂದ ಮೊದಲ ರೈಲಿನಿಂದ ಹಿಡಿದು, ನಗರದಿಂದ ಯಾವೆಲ್ಲ ಪ್ರದೇಶಗಳಿಗೆ ರೈಲು ಮಾರ್ಗ ವಿಸ್ತರಿಸಿತು, ನಗರದ ಪ್ರಗತಿಗೆ ರೈಲು ಸೇವೆ ಹೇಗೆ ಸಹಾಯವಾಯ್ತು ಹಾಗೂ ಹಂತ ಹಂತವಾಗಿ  ಬೆಳವಣಿಗೆಯ ಮೈಲಿಗಲ್ಲಿನ ಬಗ್ಗೆ ಸಾರ್ವಜನಿಕರಿಗೆ ತಿಳಿಸಲಾಯಿತು. ಇದನ್ನೂ ಓದಿ: ಶಾಸಕಾಂಗ ಸಭೆಗೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ- ಸಭೆ ಬಹಿಷ್ಕರಿಸಿದ ಇಬ್ಬರು ಶಾಸಕರು

    ಬೆಂಗಳೂರಿಗೆ ಮೊದಲ ರೈಲು ಯಾವಾಗ ಬಂತು? – ಇದರ ಇತಿಹಾಸ ಹೇಗಿದೆ ಗೊತ್ತಾ?

    • ಬೆಂಗಳೂರಿಗೆ ಮೊದಲ ರೈಲುಬಂಡಿ ಪ್ರವೇಶಿಸಿ  153 ವರ್ಷಗಳು ಕಳೆದಿದೆ.
    • ಆಗಸ್ಟ್ 1 , 1864 ರಂದು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದಿಂದ ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಜೋಲಾರ್ಪೆಟ್ಟೈ ಗೆ ಮೊದಲ ಉಗಿ ಇಂಜಿನ್ ಗೆ ಚಾಲನೆ
    • ಮದ್ರಾಸ್ ರೈಲ್ವೆ ಕಂಪನಿಯು ನಗರದ ಮೊದಲ ರೈಲು, ಬೆಂಗಳೂರು ಮೇಲ್ ಗೆ ಚಾಲನೆ
    • 1882 ರಲ್ಲಿ ಬೆಂಗಳೂರು ಸಿಟಿ ನಿಲ್ದಾಣಕ್ಕೆ ಮಾರ್ಗ ವಿಸ್ತರಣೆ. ಅಲ್ಲಿಂದ ಗುಂತಕಲ್, ಮೈಸೂರು, ತುಮಕೂರು ಕಡೆಗೆ ಮಾರ್ಗ ಆರಂಭ
    • ಜೂನ್ 14, 1959ರಲ್ಲಿ ಭಾರತದ ರಾಷ್ಟ್ರಪತಿ ಡಾ.ರಾಜೇಂದ್ರ ಪ್ರಸಾದ್ ಬೆಂಗಳೂರಿಗೆ ಭೇಟಿ. ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಅವರನ್ನ ಬರಮಾಡಿಕೊಳ್ಳಲಾಯ್ತು
    • ಜೂನ್ 8, 1976 ರಲ್ಲಿ ಡಬಲ್ ಡೆಕ್ಕರ್ ರೈಲು ಕೋಚ್‌ನ ಪ್ರಾಯೋಗಿಕ ಚಾಲನೆಯನ್ನ ಪ್ರಾರಂಭಿಸಲಾಯ್ತು. ಮದ್ರಾಸ್- ಬೆಂಗಳೂರು ಬೃಂದಾವನ ಎಕ್ಸ್ ಪ್ರೆಸ್ ನಲ್ಲಿ ಕೋಚ್ ಗಳನ್ನ ಪರಿಚಯಿಸಲಾಗಿದೆ.
    • ದಕ್ಷಿಣ ರೈಲ್ವೆಯು 14-04-1951 ರಂದು ಮದ್ರಾಸ್ ಮತ್ತು ದಕ್ಷಿಣ ಮಹತ್ತರ ರೈಲ್ವೆ, ದಕ್ಷಿಣ ಭಾರತೀಯ ರೈಲ್ವೆ ಮತ್ತು ಮೈಸೂರು ರಾಜ್ಯ ರೈಲ್ವೆಯನ್ನ ವಿಲೀನಗೊಳಿಸುವ ಮೂಲಕ ಅಸ್ತಿತ್ವಕ್ಕೆ ಬಂದಿತು
    • ಸಮಗ್ರ ದಕ್ಷಿಣ ರೈಲ್ವೆಯಲ್ಲಿ, ಮೈಸೂರು ವಿಭಾಗವು 31-10-1956 ರಂದು ಅಸ್ತಿತ್ವಕ್ಕೆ ಬಂತು
    • ಮದ್ರಾಸ್ ವಿಭಾಗವು 31-08-1956 ರಂದು ಅಸ್ತಿತ್ವಕ್ಕೆ ಬಂದಿತು.
    • 1981ರಲ್ಲಿ ಮೈಸೂರು ವಿಭಾಗವನ್ನ ಎರಡು ವಿಭಾಗಗಳಾಗಿ ವಿಭಜಿಸಲಾಯ್ತು. ಮೈಸೂರು ವಿಭಾಗ ಮತ್ತು ಬೆಂಗಳೂರು ವಿಭಾಗ
    • 27-7-1981 ರಂದು ಬೆಂಗಳೂರು ವಿಭಾಗ ಸ್ಥಾಪನೆ.
    • ಬೆಂಗಳೂರು ವಿಭಾಗವನ್ನ ನೈರುತ್ಯ ರೈಲ್ವೆಯೊಂದಿಗೆ, ಹುಬ್ಬಳ್ಳಿಯಲ್ಲಿ ಅದರ ಪ್ರಧಾನ ಕಚೇರಿಯೊಂದಿಗೆ ಏಪ್ರಿಲ್ 1, 2003ರಲ್ಲಿ ವಿಲಿನಗೊಳಿಸಲಾಯ್ತು.
    • ಬೆಂಗಳೂರು ವಿಭಾಗ ಸದ್ಯ 3 ರಾಜ್ಯಗಳ, 14 ಜಿಲ್ಲೆಗಳನ್ನ ಒಳಗೊಂಡೊಂಡಿದೆ
    • ಸದ್ಯ KSR ರೈಲ್ವೆ ನಿಲ್ದಾಣ ಡಿಜಿಟಲೈಜೆಷನ್ ಆಗಿದ್ದು, ವೇಟಿಂಗ್ ಹಾಲ್, ಫ್ಲಾಟ್ ಫಾರಂ, ಡಿಸ್ಲೈ, ರೈಲು ಲೊಕೇಷನ್ ಆ್ಯಪ್ ಗಳು, ಟಿಕೆಟ್ ಕಾಯ್ದಿರಿಸುವಿಕೆ ಹಾಗೂ ರೈಲು ನಿಲ್ದಾಣದ ಸುತ್ತಮುತ್ತಲು ಸ್ವಚ್ಛತೆ ಹಾಗೂ ನಿಲ್ದಾಣದ ಆವರಣದಲ್ಲಿ ಉಚಿತ ವೈಫೈ ವ್ಯವಸ್ಥೆಯೊಂದಿಗೆ ಸಾವಿರಾರು ಪ್ರಯಾಣಿಕರ ಮೆಚ್ಚುಗೆಗೆ ಕಾರಣವಾಗಿದೆ.

  • ಬಸ್ ನಿಲ್ಲಿಸದೇ ಮಹಿಳೆ ಜೊತೆ ಅನುಚಿತ ವರ್ತನೆ – ನಿರ್ವಾಹಕನ ಮೇಲೆ ಸಂಬಂಧಿಕರಿಂದ ಹಲ್ಲೆ

    ಬಸ್ ನಿಲ್ಲಿಸದೇ ಮಹಿಳೆ ಜೊತೆ ಅನುಚಿತ ವರ್ತನೆ – ನಿರ್ವಾಹಕನ ಮೇಲೆ ಸಂಬಂಧಿಕರಿಂದ ಹಲ್ಲೆ

    ಚಿತ್ರದುರ್ಗ: ಸಾರಿಗೆ ಬಸ್ (KSRTC) ನಿರ್ವಾಹಕನೊಬ್ಬ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಸಿದ್ದಕ್ಕೆ ಆಕೆಯ ಸಂಬಂಧಿಕರು ಹಲ್ಲೆ ನಡೆಸಿದ ಘಟನೆ ಗುರುವಾರ ಚಳ್ಳಕೆರೆ (Challakere) ಬಸ್ ನಿಲ್ದಾಣದ ಬಳಿ ನಡೆದಿದೆ.

    ಹಲ್ಲೆಗೊಳಗಾದ ನಿರ್ವಾಹಕನನ್ನು ಚಂದ್ರೇಗೌಡ ಎಂದು ಗುರುತಿಸಲಾಗಿದೆ. ಬೆಂಗಳೂರಿಗೆ (Bengaluru) ತೆರಳುತ್ತಿದ್ದ ಬಸ್‍ನಲ್ಲಿ ಮಹಿಳೆ ಬುಧವಾರ ಚಳ್ಳಕೆರೆಯಿಂದ ದಾಬಸ್ ಪೇಟೆಗೆ ಪ್ರಯಾಣಿಸುತ್ತಿದ್ದಳು. ದಾಬಸ್ ಪೇಟೆಯಲ್ಲಿ ಬಸ್ ನಿಲ್ಲಿಸುವಂತೆ ಮಹಿಳೆ ಹೇಳಿದ್ದಳು. ಆದರೆ ಅಲ್ಲಿ ಬಸ್ ನಿಲ್ಲಿಸದೇ ನಿರ್ವಾಹಕ ನಿಯಮದಂತೆ ಮೆಜಸ್ಟಿಕ್‍ನಲ್ಲಿ (Majestic) ಬಸ್ ನಿಲ್ಲಿಸಿದ್ದಾನೆ. ಇದರಿಂದ ಸಿಟ್ಟಾದ ಮಹಿಳೆ ನಿರ್ವಾಹಕನೊಂದಿಗೆ ಗಲಾಟೆ ಮಾಡಿದ್ದಾಳೆ. ಅಲ್ಲದೇ ಕುಟುಂಬಸ್ಥರ ಬಳಿ ನಿರ್ವಾಹಕ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿದ್ದಾಳೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಪ್ರಧಾನಿ ಮೋದಿ ಕೊಲ್ಲುತ್ತೇನೆ ಎಂದು ಕರೆ ಮಾಡಿದ್ದ ವ್ಯಕ್ತಿ ಬಂಧನ

    ಈ ಘಟನೆಯಿಂದಾಗಿ ಆಕ್ರೋಶಗೊಂಡಿದ್ದ ಮಹಿಳೆ ಚಳ್ಳಕೆರೆ ಬಸ್ ನಿಲ್ದಾಣದ ಬಳಿ ಆ ಬಸ್ ಬರುವವರೆಗೆ ಸಂಬಂಧಿಗಳೊಂದಿಗೆ ಕಾದು ಕುಳಿತು ಹಲ್ಲೆ ನಡೆಸಿದ್ದಾಳೆ. ಹಲ್ಲೆಗೊಳಗಾದ ಬಸ್ ನಿರ್ವಾಹಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಸಾರಿಗೆ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಇದನ್ನೂ ಓದಿ: ವಾಷಿಂಗ್ಟನ್‌ನಲ್ಲಿ ಅದ್ಧೂರಿ ಸ್ವಾಗತ – ಮೋದಿಗಾಗಿ ಖಾದ್ಯ ತಯಾರಿಸಿದ್ದಾರೆ ಜಿಲ್ ಬೈಡೆನ್