Tag: Malashri

  • ಅಮ್ಮನ ಜೊತೆ ಪೆದ್ದಮ್ಮನ ಆಶೀರ್ವಾದ ಪಡೆದ ನಟಿ ಆರಾಧನಾ

    ಅಮ್ಮನ ಜೊತೆ ಪೆದ್ದಮ್ಮನ ಆಶೀರ್ವಾದ ಪಡೆದ ನಟಿ ಆರಾಧನಾ

    ಕನಸಿನ ರಾಣಿ ಮಾಲಾಶ್ರೀ (Malashri) ಮಗಳ ಜೊತೆ ಪೆದ್ದಮ್ಮನ ದರ್ಶನ ಮಾಡಿದ್ದಾರೆ. ಹೈದ್ರಾಬಾದ್‍ನ ಜುಬಲಿ ಹಿಲ್ಸ್‍ನಲ್ಲಿರುವ ಪೆದ್ದಮ್ಮ ದೇವಸ್ಥಾನ ಅಲ್ಲಿನ ಸುಪ್ರಸಿದ್ಧ ದೇವಸ್ಥಾನದಲ್ಲೊಂದು. ಕರ್ನಾಟಕದಲ್ಲಿ ಮೆಜೆಸ್ಟಿಕ್‍ನಲ್ಲಿರುವ ಅಣ್ಣಮ್ಮ ದೇವಿಯ ಮೇಲಿನ ನಂಬಿಕೆಯಂತೆ ಹೈದ್ರಾಬಾದ್‍ನಲ್ಲಿ ಪೆದ್ದಮ್ಮ ದೇವಿಯ ಮೇಲೆ ಭಕ್ತರ ಅಪಾರ ನಂಬಿಕೆ ಇದೆ. ಹೀಗಾಗಿ ಗೌರಿ ಹಬ್ಬದ ದಿನ ಅಲ್ಲಿನ ಪೆದ್ದಮ್ಮನ ದರ್ಶನ ಮಾಡಿದ್ದಾರೆ ಮಾಲಾಶ್ರೀ ಹಾಗೂ ಪುತ್ರಿ ಆರಾಧನಾ (Aradhana Ram).

    ಬಾಲಯ್ಯರ 50ನೇ ವರ್ಷದ ಸಿನಿಮಾ ಜರ್ನಿ ವಿಶೇಷವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮಕ್ಕೆ ಮಾಲಾಶ್ರೀ ಮಗಳ ಸಮೇತ ಅತಿಥಿಯಾಗಿ ತೆರಳಿದ್ದರು. ಹಲವು ದಿನ ಅಲ್ಲೇ ಉಳಿದಿದ್ದಾರೆ. ಅಷ್ಟಕ್ಕೂ ಆಂಧ್ರನಾಡು ಮಾಲಾಶ್ರೀಯ ತವರುಮನೆ ಕೂಡ. ಹೀಗಾಗಿ ಆಂಧ್ರಕ್ಕೆ ತೆರಳಿದ್ದ ಮಾಲಾಶ್ರೀ ಅಲ್ಲಿನ ಸಹೋದ್ಯೋಗಿ ಆಪ್ತರನ್ನೆಲ್ಲಾ ಭೇಟಿಯಾಗಿದ್ದಾರೆ. ಈ ವೇಳೆ ಅಲ್ಲಿಯೇ ಇರುವ ಪೆದ್ದಮ್ಮ ದೇವಸ್ಥಾನಕ್ಕೂ ಭೇಟಿ ನೀಡಿದ್ದಾರೆ. ಇದನ್ನೂ ಓದಿ: `ಡಿ’ಗ್ಯಾಂಗ್ ವಿರುದ್ಧ ಪ್ರಮುಖ ಸಾಕ್ಷ್ಯವಾದ ಮಣ್ಣು – ದೇಶದಲ್ಲೇ ಮೊದಲ ಪ್ರಕರಣ!

    `ಕಾಟೇರ’ ಚಿತ್ರದ ಮೂಲಕ ಮಾಲಾಶ್ರೀ ಮಗಳು ಆರಾಧನಾ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದರು. ಬಳಿಕ ಆರಾಧನಾ ಒಳ್ಳೆಯ ಅವಕಾಶಕ್ಕಾಗಿ ಕಾದಿದ್ದಾರೆ. ಈ ನಡುವೆ ಟಾಲಿವುಡ್‍ನಿಂದಲೂ ಆರಾಧನಾಗೆ ಸಿನಿಮಾ ಆಫರ್ ಬರ್ತಿರೋ ಸುದ್ದಿಯಿತ್ತು. ಬಹುಶಃ ಹೈದ್ರಾಬಾದ್‍ಗೆ ತೆರಳಿರುವ ಮಾಲಾಶ್ರೀ ಮಗಳ ಸಿನಿಮಾ ಕರಿಯರ್ ವಿಚಾರವಾಗಿಯೂ ಚರ್ಚಿಸಿರುವ ಸಾಧ್ಯತೆ ಇದೆ. ಹಲವು ಸ್ಕ್ರಿಪ್ಟ್‍ಗಳನ್ನ ಕೇಳಿರುವ ಸುದ್ದಿಯೂ ಬಂದಿದೆ. ಶ್ರೀಘ್ರದಲ್ಲೇ ಆರಾಧನಾ ಟಾಲಿವುಡ್‍ಗೆ ಎಂಟ್ರಿ ಕೊಟ್ರೂ ಆಶ್ಚರ್ಯವೇನಿಲ್ಲ. ಇದನ್ನೂ ಓದಿ: ‘ಹನುಮಾನ್’ ನಿರ್ದೇಶಕನ ಹೊಸ ಸಿನಿಮಾ: ಚಿತ್ರರಂಗಕ್ಕೆ ಬಾಲಯ್ಯ ಪುತ್ರನ ಗ್ರ್ಯಾಂಡ್ ಎಂಟ್ರಿ

  • ಕೊರಗಜ್ಜನ ಆದಿ ಸ್ಥಳಕ್ಕೆ ಮಾಲಾಶ್ರೀ ಭೇಟಿ

    ಕೊರಗಜ್ಜನ ಆದಿ ಸ್ಥಳಕ್ಕೆ ಮಾಲಾಶ್ರೀ ಭೇಟಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಯಸ್ಸಾದ ಅಂಬಿ ಬಗ್ಗೆ ಮಾಲಾಶ್ರೀ ಹೇಳಿದ್ದೇನು?

    ವಯಸ್ಸಾದ ಅಂಬಿ ಬಗ್ಗೆ ಮಾಲಾಶ್ರೀ ಹೇಳಿದ್ದೇನು?

    ರೆಬೆಲ್ ಸ್ಟಾರ್ ಅಂಬರೀಶ್ 14 ವರ್ಷಗಳ ನಂತರ ನಾಯಕ ನಟನಾಗಿ ಅಭಿನಯಿಸುತ್ತಿರುವ ಚಿತ್ರ ಅಂಬಿ ನಿಂಗೆ ವಯಸ್ಸಾಯ್ತೋ. ಅಂಬರೀಶ್ ಅವರ ವಯಸ್ಸಿಗೆ, ಮಾಗಿದ ಅಭಿನಯಕ್ಕೆ ಪಕ್ಕಾ ಹೇಳಿ ಮಾಡಿಸಿದಂಥಾ ಕಥೆಯಿರೋ ಚಿತ್ರವಿದು. ಇದೀಗ ಈ ಚಿತ್ರದ ಹಾಡುಗಳು ಎಲ್ಲೆಡೆ ಮೆಚ್ಚುಗೆ ಗಳಿಸಿಕೊಂಡಿವೆ. ಚಿತ್ರರಂಗದ ತಾರೆಯರೂ ಕೂಡಾ ಈ ಹಾಡುಗಳನ್ನು ಕೇಳಿ ತಲೆದೂಗಿದ್ದಾರೆ.

    ನಟಿ ಮಾಲಾಶ್ರೀಯವರಂತೂ ಈ ಚಿತ್ರದ ಹಾಡುಗಳನ್ನು ಅಪಾರವಾಗಿ ಮೆಚ್ಚಿಕೊಂಡಿದ್ದಾರೆ. ಹಾಡುಗಳನ್ನು ಕೇಳಿದ ನಂತರ ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ನಾನು ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರದ ಹಾಡುಗಳನ್ನು ಕೇಳಿದೆ. ಅಂಬರೀಶ್ ಅವರ ನಟನೆಯ ಬಗೆಗಂತೂ ಮಾತನಾಡಲು ಪದಗಳಿಲ್ಲ. ದೊಡ್ಡ ಯಶಸ್ಸು ಈ ಚಿತ್ರಕ್ಕೆ ಸಿಗಲಿ’ ಅಂತ ಮಾಲಾಶ್ರೀಯವರು ಹಾರೈಸಿದ್ದಾರೆ.

    ಈ ಚಿತ್ರದ ಹಾಡುಗಳು ಈ ಪಾಟಿ ಮೆಚ್ಚುಗೆ ಗಳಿಸಿಕೊಳ್ಳಲು ಕಾರಣ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಸೃಷ್ಟಿಸಿರುವ ಮಾಂತ್ರಿಕ ಟ್ಯೂನುಗಳು. ಅರ್ಜುನ್ ಆರಂಭದಿಂದಲೂ ಈ ಚಿತ್ರದ ಬಗ್ಗೆ ವಿಶೇಷವಾದ ಆಸಕ್ತಿಯಿಂದಲೇ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರಂತೆ. ಯಾವ ಹೋಲಿಕೆಗೂ ಸಿಗದ ಭಿನ್ನವಾದ ಹಾಡುಗಳನ್ನು ಸೃಷ್ಟಿಸಬೇಕೆಂಬ ಹಂಬಲದಿಂದಲೇ ಎಲ್ಲ ಹಾಡುಗಳನ್ನೂ ರೂಪಿಸಿದ್ದಾರೆ. ಈ ಬಗ್ಗೆ ನಿರ್ದೇಶಕ ಗುರುದತ್ ಗಾಣಿಗ, ಅಂಬಿ ಮತ್ತು ಕಿಚ್ಚ ಸುದೀಪ್ ಕೂಡಾ ಸಂತಸಗೊಂಡಿದ್ದಾರೆ.