Tag: Malavalli

  • ಮಂಡ್ಯದ ಅಭಿವೃದ್ಧಿಗೆ 1,970 ಕೋಟಿ ರೂ. ಐತಿಹಾಸಿಕ ಅನುದಾನ: ಡಿಕೆಶಿ

    ಮಂಡ್ಯದ ಅಭಿವೃದ್ಧಿಗೆ 1,970 ಕೋಟಿ ರೂ. ಐತಿಹಾಸಿಕ ಅನುದಾನ: ಡಿಕೆಶಿ

    – ಪ್ರವಾಸೋದ್ಯಮ ನೀತಿಯಿಂದ 1.50 ಲಕ್ಷ ಉದ್ಯೋಗ ಸೃಷ್ಟಿ

    ಮಂಡ್ಯ: ಜಿಲ್ಲೆಗೆ ನೀರಾವರಿ ಇಲಾಖೆಯಿಂದ 1,970 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕದ (Karnataka) ಇತಿಹಾಸದಲ್ಲಿಯೇ ಮಂಡ್ಯ (Mandya) ಜಿಲ್ಲೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಿದ ಉದಾಹರಣೆಯೇ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಹೇಳಿದರು.

    ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ (Malavalli) ಭಾನುವಾರ (ಸೆ.14) ನಡೆದ ಗಗನಚುಕ್ಕಿ ಜಲಪಾತೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಅನುದಾನದ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಸುಳ್ಳು ಹೇಳಿದ್ದರೇ ವಿರೋಧ ಪಕ್ಷದವರು ಚರ್ಚೆ ಮಾಡಬಹುದು. ಜಿಲ್ಲೆಯ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಮಂಡ್ಯ ಜಿಲ್ಲೆಯ ರೈತರ ಬದುಕಿನ ಉನ್ನತಿ ಸೇರಿದಂತೆ ಎಲ್ಲರ ಸರ್ವತೋಮುಖ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಸಿದ್ದರಾಮಯ್ಯ ಅವರ ಸರ್ಕಾರ ಪಣತೊಟ್ಟಿದೆ ಎಂದು ತಿಳಿಸಿದರು. ಇದನ್ನೂ ಓದಿ: ಎರಡು ದಿನಗಳ ವರ್ಣರಂಜಿತ ಗಗನಚುಕ್ಕಿ ಜಲಪಾತೋತ್ಸವಕ್ಕೆ ತೆರೆ

    ಮಳವಳ್ಳಿಯ ಜನಪ್ರಿಯ ಶಾಸಕರಾದ ನರೇಂದ್ರ ಸ್ವಾಮಿ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ 300 ಕೋಟಿ ರೂ. ಅನುದಾನ ತಂದಿದ್ದಾರೆ. ಮಂಡ್ಯದ ಜನತೆಯ ಸೇವೆಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ನಾವು ನಿಮ್ಮ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ. ಅಧಿಕಾರಿಗಳು ಸಹ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಕೆಲವೊಬ್ಬರು ಜಿಲ್ಲೆಯಲ್ಲಿ ಶಾಂತಿಭಂಗ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದರು.

    ನಗುವು ಸಹಜದ ಧರ್ಮ, ನಗಿಸುವುದು ಪರಧರ್ಮ, ನಗುವ ಕೇಳುತ ನಗುವುದತಿಶಯದ ಧರ್ಮ, ನಗುವ ನಗಿಸುವ ನಗಿಸಿ ನಗುತ ಬಾಳುವ ವರವಮಿಗೆ ನೀನು ಬೇಡಿಕೊಳ್ಳೋ ಮಂಕುತಿಮ್ಮ ಎಂದು ಡಿವಿಜಿ ಹೇಳಿದ್ದಾರೆ. ಏನೇ ಬಂದರೂ ಎಲ್ಲರೂ ನಗುತಾ ಒಟ್ಟಾಗಿ ಬಾಳಬೇಕು ಎಂದು ಕರೆ ನೀಡಿದರು.

    ಪ್ರವಾಸೋದ್ಯಮ ನೀತಿಯಿಂದ 1.5 ಲಕ್ಷ ಉದ್ಯೋಗ ಸೃಷ್ಟಿ ಗುರಿ:
    ನಮ್ಮ ಕರ್ನಾಟಕ ಸಾಹಿತ್ಯ, ಸಂಗೀತ, ಚಿತ್ರಕಲೆ, ಶಿಲ್ಪಕಲೆ, ಧಾರ್ಮಿಕ, ಶೈಕ್ಷಣಿಕ ಹೀಗೆ ಅನೇಕ ರಂಗಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ರಾಜ್ಯ ಪ್ರವಾಸೋದ್ಯಮ ನೀತಿಯನ್ನು ರೂಪಿಸಿ ನಾವು ಇತರರಿಗೆ ಮಾದರಿಯಾಗಿದ್ದೇವೆ. ಇದರಿಂದ 1.5 ಲಕ್ಷ ಉದ್ಯೋಗ ಸೃಷ್ಟಿಗೆ ನಾವು ಮುಂದಡಿಯಿಟ್ಟಿದ್ದೇವೆ. ಈ ಭಾಗದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಪಟ್ಟ ಸಚಿವರು, ಜನಪ್ರತಿನಿಧಿಗಳ ಜೊತೆ ಚರ್ಚೆ ನಡೆಸುತ್ತೇವೆ. ಪ್ರವಾಸೋದ್ಯಮದಿಂದ ಯುವಕರ ಬದುಕಿನಲ್ಲಿ ಬದಲಾವಣೆಯಾಗಲಿದೆ. ಉದ್ಯೋಗ ಸೃಷ್ಟಿಯಾಗಲಿದೆ. ಕಬಿನಿ ಭಾಗದಲ್ಲಿನ ಪ್ರಾಕೃತಿಕ ಸಂಪತ್ತು ದೇಶದಲ್ಲಿಯೇ ಅಪರೂಪ. ಕರ್ನಾಟಕ ಜಲಪಾತಗಳ ತವರೂರು. ನಮ್ಮ ರಾಜ್ಯದಲ್ಲಿ ಸುಮಾರು 544ಕ್ಕೂ ಹೆಚ್ಚು ಜಲಪಾತಗಳಿವೆ ಎಂದರು. ಇದನ್ನೂ ಓದಿ: ಮೇಕೆದಾಟು ಯೋಜನೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

    ಕಾವೇರಿ ಆರತಿ ಮೂಲಕ ತಾಯಿಗೆ ನಮನ ಸಲ್ಲಿಸಲು ಹೊರಟಿದ್ದೆವು. ಕೋರ್ಟ್ ನಿರ್ಬಂಧ ಹಾಗೂ ರೈತ ಸಂಘದವರ ಅಡಚಣೆಯಿಂದ ನಿಧಾನವಾಗುತ್ತಿದೆ. ಪ್ರಾರ್ಥನೆ ಸಲ್ಲಿಸಲು, ಆರತಿ ಮಾಡಲು ಯಾರೂ ಸಹ ನಿರ್ಬಂಧ ಮಾಡಲು ಸಾಧ್ಯವಿಲ್ಲ. ಇನ್ನೂ ಹೆಚ್ಚುವರಿ ಕಾವೇರಿ ನೀರಿನ ಸಂಗ್ರಹಕ್ಕಾಗಿ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ನಾನು ಹೋರಾಟ ಪ್ರಾರಂಭ ಮಾಡಿದೆ. ನಮ್ಮ ನೀರು ನಮ್ಮ ಹಕ್ಕು ಎಂದು ಮೇಕೆದಾಟಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಲಾಯಿತು. ಪ್ರಕೃತಿಯನ್ನು ಪೂಜಿಸುವುದು ನಮ್ಮ ಸಂಸ್ಕೃತಿ. ಜೂನ್ ತಿಂಗಳಿನಲ್ಲಿಯೇ ಕನ್ನಂಬಾಡಿ ಅಣೆಕಟ್ಟು ತುಂಬಿ ಇತಿಹಾಸ ನಿರ್ಮಾಣವಾಗಿದೆ. ಈ ವರ್ಷ 125 ಟಿಎಂಸಿ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ತೀರ್ಪಿನ ಪ್ರಕಾರ 177 ಟಿಎಂಸಿ ನೀರು ಹರಿಸಬೇಕಿತ್ತು ಎಂದು ತಿಳಿಸಿದರು.

    ಕಾವೇರಿ ತಾಯಿ ನಮಗೆ ಬದುಕು, ಅನ್ನ, ಜನ್ಮ ನೀಡಿದ್ದಾಳೆ. ಈಕೆ ಪುಣ್ಯದಾತೆ. ಕೊಡಗಿನಲ್ಲಿ ಜನಿಸಿ ಅರಬ್ಬಿ ಸಮುದ್ರ ಸೇರುವ ತನಕ ಲಕ್ಷಾಂತರ ಜನರಿಗೆ ಜೀವನ ನೀಡಿದ್ದಾಳೆ. ಕಾವೇರಿ ಹರಿಯುವ ಭೂಮಿ ಪವಿತ್ರ ಭೂಮಿ. ಕುಡಿಯುವ ನೀರಿಗೆ, ಕೈಗಾರಿಕೆಗೆ, ವಿದ್ಯುತ್ ಉತ್ಪಾದನೆಗೆ, ಪ್ರಮುಖವಾಗಿ ಕೃಷಿಗೆ, ಮೀನುಗಾರಿಕೆಗೆ ಹೀಗೆ ಪ್ರತಿ ಹಂತದಲ್ಲಿಯೂ ತಾಯಿ ಜೊತೆಯಾಗಿ ನಿಂತಿದ್ದಾಳೆ ಎಂದರು.

    ಗಗನಚುಕ್ಕಿ ಜಲಪಾತವಿರುವ ಜಾಗ ಐತಿಹಾಸಿಕ ಸ್ಥಳ. ಏಷ್ಯಾದಲ್ಲಿಯೇ ಮೊಟ್ಟಮೊದಲ ಜಲವಿದ್ಯುತ್ ಉತ್ಪಾದನೆ ಮಾಡಿದ ಸ್ಥಳವಿದು. ಶಾಲಾ ದಿನಗಳಲ್ಲಿ ಇಲ್ಲಿಗೆ ಪ್ರವಾಸಕ್ಕೆ ಬಂದಿದ್ದೆ. ಆನಂತರ ವಿದ್ಯುತ್ ಸಚಿವನಾಗಿದ್ದಾಗ ಭೇಟಿ ನೀಡಿದ್ದೆ. ಇದೀಗ ಮತ್ತೊಮ್ಮೆ ನೋಡುವ ಸೌಭಾಗ್ಯ ದೊರೆತಿದೆ. ಕೆಜಿಎಫ್‌ಗೆ ವಿದ್ಯುತ್ ನೀಡುವ ಉದ್ದೇಶದಿಂದ 1904ರಲ್ಲಿ ಇಲ್ಲಿಂದ ವಿದ್ಯುತ್ ಉತ್ಪಾದನೆ ಮಾಡಿ ನೀಡಲಾಯಿತು. ಇಲ್ಲಿಂದ ವಿದ್ಯುತ್ ನೀಡದೇ ಇದ್ದಿದ್ದರೆ ಅಭಿವೃದ್ಧಿಯೇ ಇಲ್ಲದಂತಾಗುತ್ತಿತ್ತು. ಇದರಿಂದ ನಮ್ಮೆಲ್ಲರ ಬದುಕಿಗೆ ಬೆಳಕು ಬಂದಿದೆ ಎಂದು ಹೇಳಿದರು.

    ಪ್ರವಾಸೋದ್ಯಮದಿಂದ ಸಾಕಷ್ಟು ಅಭಿವೃದ್ಧಿ ಸಾಧ್ಯ. ಕಳೆದ ವರ್ಷ ಸುಮಾರು 10 ಲಕ್ಷ ಜನರು ದಸರಾ ವೀಕ್ಷಣೆ ಮಾಡಿದರು. ಶಕ್ತಿ ಯೋಜನೆಯ ಪರಿಣಾಮ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ದಸರಾದಲ್ಲಿ ಭಾಗವಹಿಸಿದರು. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರ ಬದುಕಿನಲ್ಲಿ ಬೆಳಕು ಬಂದಿದೆ. ಈ ಹಸ್ತ ರೈತರ, ಬಡವರ, ಕೂಲಿಕಾರ್ಮಿಕರ, ಮಹಿಳೆಯರ ಬದುಕನ್ನು ಭದ್ರ ಮಾಡಿದೆ ಎಂದರು. ಇದನ್ನೂ ಓದಿ: ಕುರುಬ ಸಮುದಾಯವನ್ನ STಗೆ ಸೇರಿಸುವ ಪ್ರಕ್ರಿಯೆ ಇನ್ನಷ್ಟು ತೀವ್ರ – ನಾಳೆ ಮಹತ್ವದ ಸಭೆ

  • ಎರಡು ದಿನಗಳ ವರ್ಣರಂಜಿತ ಗಗನಚುಕ್ಕಿ ಜಲಪಾತೋತ್ಸವಕ್ಕೆ ತೆರೆ

    ಎರಡು ದಿನಗಳ ವರ್ಣರಂಜಿತ ಗಗನಚುಕ್ಕಿ ಜಲಪಾತೋತ್ಸವಕ್ಕೆ ತೆರೆ

    ಮಂಡ್ಯ: ಮಂಡ್ಯದ (Mandya) ಮಳವಳ್ಳಿ (Malavalli) ತಾಲೂಕಿನ ಗಗನಚುಕ್ಕಿ ಜಲಪಾತೋತ್ಸವ (Gaganachukki Jalapathotsava) ವೈಭವೋಪೇವಾಗಿ ನಡೆಯಿತು. ಒಂದೆಡೆ ಜಗಮಗಿಸೋ ಲೈಟಿಂಗ್‌ನಲ್ಲಿ ಧುಮ್ಮಿಕ್ಕುತ್ತಿದ್ದ ಕಾವೇರಿ ಮಾತೆ ಕಂಗೊಳಿಸುತ್ತಿದ್ರೆ, ಮತ್ತೊಂದೆಡೆ ಗಾಯಕರ ಗಾನಸುಧೆ ಹಾಗೂ ನಟಿಯರ ನೃತ್ಯಕ್ಕೆ ಜನರು ಹುಚ್ಚೆದ್ದು ಕುಣಿದರು.

    ಎರಡು ದಿನಗಳ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಜನರು ವಿದ್ಯುತ್ ಬೆಳಕಿನಲ್ಲಿ ಕಂಗೊಳಿಸುತ್ತಿದ್ದ ಕಾವೇರಿ ಮಾತೆಯನ್ನ ಕಣ್ತುಂಬಿಕೊಂಡರು. ಇನ್ನು 300 ಅಡಿ ಎತ್ತರದಿಂದ ಧುಮ್ಮುಕ್ಕುವ ಗಗನಚುಕ್ಕಿ ಜಲಪಾತಕ್ಕೆ ವಿವಿಧ ಬಗೆಯ ದೀಪಾಲಂಕಾರಗಳಿಂದ ಶೃಂಗಾರಿಸಲಾಗಿತ್ತು. ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದ್ದ ಕಾವೇರಿ, ಬಣ್ಣಬಣ್ಣದ ಲೈಟಿಂಗ್ಸ್‌ನಿಂದಾಗಿ ಮತ್ತಷ್ಟು ವರ್ಣರಂಜಿತವಾಗಿತ್ತು. ಈ ದೃಶ್ಯ ಕಂಡು ಪ್ರವಾಸಿಗರು ಫಿದಾ ಆದರು. ಇದನ್ನೂ ಓದಿ: ಬೆಳ್ತಂಗಡಿ ಎಸ್‌ಐಟಿ ಕಚೇರಿಯಲ್ಲಿ ಮೊಹಾಂತಿ ಪ್ರಗತಿ ಪರಿಶೀಲನೆ ಸಭೆ – ತನಿಖೆಯ ವೇಗ ಹೆಚ್ಚಿಸುವಂತೆ ಸೂಚನೆ

    ಮತ್ತೊಂದೆಡೆ ಜಲಪಾತೋತ್ಸವದ ಎರಡನೇ ದಿನವೂ ವೇದಿಕೆ ಕಾರ್ಯಕ್ರಮದಲ್ಲಿ ನಡೆದ ಸಂಗೀತ ರಸಸಂಜೆ ಪ್ರೇಕ್ಷಕರನ್ನ ಹುಚ್ಚೆದ್ದು ಕುಣಿಸಿತು. ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಗಾನಸುಧೆಗೆ ಜನರು ಶಿಳ್ಳೆ, ಚಪ್ಪಾಳೆಯೊಂದಿಗೆ ಹುಚ್ಚೆದ್ದು ಕುಣಿದರೆ, ನಟಿಯರಾದ ಹರ್ಷಿಕಾ ಪೂಣಚ್ಚ, ಭಾವನ ರಾವ್ ನೃತ್ಯನೋಡಿ ಫುಲ್ ಖುಷಿಪಟ್ಟರು. ಇದಕ್ಕೂ ಮೊದಲು ಗಂಗಾವತಿ ಪ್ರಾಣೇಶ್ ಕಾಮಿಡಿ ಜನರನ್ನ ಮತ್ತಷ್ಟು ರಂಜಿಸಿತು. ಇದನ್ನೂ ಓದಿ: ಅಪ್ಪ-ಅಮ್ಮನ ಜಗಳಕ್ಕೆ ಮಕ್ಕಳು ಬಲಿ; ತಂದೆ ನೇಣಿಗೆ ಶರಣು, ಪ್ರಾಣಪಾಯದಿಂದ ತಾಯಿ ಪಾರು

    ಇನ್ನು ಸಮಾರೋಪ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದರು. ಅಲ್ಲದೇ ಸಚಿವ ಚಲುವರಾಯಸ್ವಾಮಿ, ಶಾಸಕರಾದ ನರೇಂದ್ರಸ್ವಾಮಿ, ಗಣಿಗ ರವಿಕುಮಾರ್, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಲಿಗೌಡ, ಕೆ.ಶಿವಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾವೇರಿ ಆರತಿ ಮಾಡಲು ನಿರ್ಧಾರ ಮಾಡಿದ್ದೇವೆ. ಆದರೆ ಕೆಲವರು ಕೋರ್ಟ್ಗೆ ಹೋಗಿರುವುದರಿಂದ ತಡವಾಗಿದೆ. ಪ್ರಾರ್ಥನೆ, ಪೂಜೆ ಮಾಡಲು ಯಾರು ನಿರ್ಬಂಧ ಮಾಡಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: India vs Pakistan: ಟಾಸ್‌ ಬಳಿಕ ಪಾಕ್‌ ನಾಯಕನಿಗೆ ಹ್ಯಾಂಡ್‌ಶೇಕ್‌ ಮಾಡದ ಸೂರ್ಯಕುಮಾರ್‌ ಯಾದವ್‌

    ಒಟ್ಟಿನಲ್ಲಿ ಎರಡು ದಿನಗಳಲ್ಲಿ ಅದ್ಧೂರಿಯಾಗಿ ನಡೆದ ಜಲಪಾತೋತ್ಸವಕ್ಕೆ ವರ್ಣರಂಜಿತ ತೆರೆಬಿತ್ತು. ಸಾಗರೋಪಾದಿಯಲ್ಲಿ ಬಂದಿದ್ದ ಜನರು ಫುಲ್ ಎಂಜಾಯ್ ಮಾಡಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂದ್ರೆ ಮನೆಗೆ ನುಗ್ಗಿ ಹೊಡಿತೀವಿ: ಪ್ರಮೋದ್ ಮುತಾಲಿಕ್

  • ಮಂಡ್ಯ | ಅಪ್ರಾಪ್ತೆ ಪ್ರೀತಿಸಿದ್ದ ಯುವಕ ಅನುಮಾನಸ್ಪದ ಸಾವು

    ಮಂಡ್ಯ | ಅಪ್ರಾಪ್ತೆ ಪ್ರೀತಿಸಿದ್ದ ಯುವಕ ಅನುಮಾನಸ್ಪದ ಸಾವು

    ಮಂಡ್ಯ: ಆತನಿಗೆ 21 ವರ್ಷ ವಯಸ್ಸು, ಆಕೆ ಇನ್ನು ಅಪ್ರಾಪ್ತೆ. ಇಬ್ಬರ ಪ್ರೀತಿಗೆ ಹುಡುಗಿ ಮನೆಯವರ ವಿರೋಧವಿತ್ತು. ಆಕೆಗೆ 18 ವರ್ಷ ತುಂಬಿದ ಬಳಿಕ ಮದುವೆಯಾಗಲು (Marriage) ಕಾಯುತ್ತಿದ್ದ ಯುವಕ ಈಗ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಆತನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕುಟುಂಬಸ್ಥರು, ಅಪ್ರಾಪ್ತೆ ಮನೆಯವರ ವಿರುದ್ಧ ದೂರು ದಾಖಲಿಸಿದ್ದಾರೆ.

    ಮೀನು ಹಿಡಿಯಲು ಕೆರೆಗೆ ಬಳಿ ತೆರಳಿದ್ದ ಯುವಕ ಅನುಮಾನದಸ್ಪದವಾಗಿ ಸಾವನ್ನಪ್ಪಿದ್ದಾನೆ. ಮಂಡ್ಯ (Mandya) ಜಿಲ್ಲೆ ಮಳವಳ್ಳಿ ತಾಲೂಕಿನ ರಾಮಂದೂರು ಕೆರೆ ಬಳಿ ಈ ಘಟನೆ ನಡೆದಿದೆ. ರಾಮನಾಥ ಮೋಳೆ ಗ್ರಾಮದ 21 ವರ್ಷದ ಮಂಜುನಾಥ್ ಸಾವಿಗೀಡಾದ್ದಾನೆ. ಆರಂಭದಲ್ಲಿ ಹಳ್ಳಕ್ಕೆ ಬಿದ್ದಿದ್ದ ಆಟೋ, ರಕ್ತದ ಮಡುವಿನಲ್ಲಿ ಸಿಕ್ಕ ಮಂಜುನಾಥ್ ಮೃತದೇಹ ಕಂಡು ಅಪಘಾತ ಎಂದು ಭಾವಿಸಲಾಗಿತ್ತು. ಆದರೆ ತಲೆಯ ಭಾಗಕ್ಕೆ ಕಲ್ಲಿನಿಂದ ಹೊಡೆದಿರುವ ಗುರುತುಗಳು ಆತನ ಸಾವಿನ ಬಗ್ಗೆ ಅನುಮಾನ ಹುಟ್ಟುಹಾಕಿದೆ. ಮಗ ಅಪಘಾತದಲ್ಲಿ ಸತ್ತಿಲ್ಲ, ಕೊಲೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

    ಅಂದಹಾಗೇ ಮೃತ ಮಂಜುನಾಥ್ ತಂದೆ ಶಿವಸ್ವಾಮಿ ಜೊತೆ ಕೆರೆಗಳಲ್ಲಿ ಮೀನು ಹಿಡಿಯುವ ಕೆಲಸ ಮಾಡ್ತಿದ್ದ, ದೂರದ ಸಂಬಂಧಿ ಮಳವಳ್ಳಿ ತಾಲೂಕಿನ ಗ್ರಾಮವೊಂದರ ಅಪ್ರಾಪ್ತೆಯನ್ನ ಪ್ರೀತಿಸುತ್ತಿದ್ದನಂತೆ. ಕಳೆದ 6 ತಿಂಗಳ ಹಿಂದೆ ಹೆಣ್ಣು ಕೇಳಲು ಹೋದಾಗ ಯುವತಿಯ ಮನೆಯವರು ನಿರಾಕರಿಸಿದ್ದಾರೆ. ಈ ವೇಳೆ ಪೋಷಕರನ್ನ ಬಿಟ್ಟು ಬಂದ ಅಪ್ರಾಪ್ತೆಯನ್ನ ಮಂಜು ತನ್ನ ಅಜ್ಜಿ ಮನೆಯಲ್ಲಿರಿಸಿದ್ದನಂತೆ. ಆಕೆಗೆ 18 ವರ್ಷ ತುಂಬಲು ಇನ್ನು 2 ತಿಂಗಳು ಬಾಕಿ ಇತ್ತು. 18 ವರ್ಷ ತುಂಬಿದ ಬಳಿಕ ಮದುವೆ ಆಗಲು ನಿರ್ಧರಿಸಲಾಗಿತ್ತಂತೆ. ಆದರೆ ಅಪ್ರಾಪ್ತೆಯ ಅಣ್ಣನಿಗೆ ಇದು ಇಷ್ಟವಿರಲಿಲ್ಲ. ಹಿಂದೊಮ್ಮೆ ಮಂಜುಗೆ ಬೆದರಿಕೆ ಕೂಡ ಹಾಕಿದ್ದ ಎನ್ನಲಾಗಿದೆ. ಹಾಗಾಗಿ ಅಪ್ರಾಪ್ತೆ ಅಣ್ಣನ ಮೇಲೆ ಮೃತ ಮಂಜುನಾಥ್ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಒಟ್ಟಾರೆ ಮಗನ ಸಾವಿನ ಬಗ್ಗೆ ಕುಟುಂಬಸ್ಥರಿಗೆ ಅನುಮಾನ ಹುಟ್ಟಿಕೊಂಡಿದೆ. ಕೊಲೆಯೋ, ಅಪಘಾತವೂ? ಪೊಲೀಸರ ತನಿಖೆಯಲ್ಲಷ್ಟೇ ಬಯಲಾಗಬೇಕು.

  • ಮಂಡ್ಯದ ದೇವಸ್ಥಾನದಲ್ಲಿ ಕಳ್ಳತನ – ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಎಸ್ಕೇಪ್

    ಮಂಡ್ಯದ ದೇವಸ್ಥಾನದಲ್ಲಿ ಕಳ್ಳತನ – ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಎಸ್ಕೇಪ್

    ಮಂಡ್ಯ: ದೇವಸ್ಥಾನವೊಂದರಲ್ಲಿ ಕಳ್ಳತನ ಮಾಡಿ, ಬಳಿಕ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಪರಾರಿಯಾಗಿರುವ ವಿಲಕ್ಷಣ ಘಟನೆ ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ (Malavalli) ತಾಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.ಇದನ್ನೂ ಓದಿ: ಫೈನಾನ್ಸ್ ಸಿಬ್ಬಂದಿ ಕಿರುಕುಳ – ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

    ಬುಧವಾರ ರಾತ್ರಿ ದುಷ್ಕರ್ಮಿಗಳು ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿದ್ದಾರೆ. ಈ ವೇಳೆ ಮಂಗಳಾರತಿ ತಟ್ಟೆಯಲ್ಲಿದ್ದ ಚಿಲ್ಲರೆ ಕಾಸನ್ನು ಕಳ್ಳತನ ಮಾಡಿದ್ದಾರೆ. ಬಳಿಕ ದೇವಸ್ಥಾನದ ಗೋಡೆಯ ಮೇಲೆ 786 ಸಂಖ್ಯೆ ಹಾಗೂ ಅನ್ಯಧರ್ಮದ ಚಿಹ್ನೆಯಾದ ನಕ್ಷತ್ರ ಹಾಗೂ ಅರ್ಧ ಚಂದ್ರವನ್ನು ಬಿಡಿಸಿದ್ದಾರೆ. ಇದಕ್ಕೂ ಮುನ್ನ ಅದೇ ಗ್ರಾಮದ ದಂಡಿಮಾರಮ್ಮ ದೇವಸ್ಥಾನಕ್ಕೂ ಕೂಡ ನುಗ್ಗಿದ್ದರು. ಆದರೆ ಅಲ್ಲಿ ಈ ರೀತಿಯ ಯಾವುದೇ ಘಟನೆ ನಡೆದಿಲ್ಲ ಎಂದು ತಿಳಿದು ಬಂದಿದೆ.

    ಸ್ಥಳೀಯರೊಬ್ಬರು ದೇವಸ್ಥಾನದ ಕಡೆ ಹೋದಾಗ ದುಷ್ಕರ್ಮಿಗಳು ಪರಾರಿಯಾಗಿರುವುದು ಕಾಣಿಸಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಕಂದಕಕ್ಕೆ ಬಿದ್ದ ಸಿಆರ್‌ಪಿಎಫ್ ವಾಹನ – ಮೂವರು ಹುತಾತ್ಮ, 16 ಮಂದಿಗೆ ಗಾಯ

  • ಬಿಸಿನೀರು ಕುಡಿಯುವಾಗಲೇ ಹೃದಯಾಘಾತ – ಕುಸಿದು ಬಿದ್ದು ವ್ಯಕ್ತಿ ಸಾವು

    ಬಿಸಿನೀರು ಕುಡಿಯುವಾಗಲೇ ಹೃದಯಾಘಾತ – ಕುಸಿದು ಬಿದ್ದು ವ್ಯಕ್ತಿ ಸಾವು

    ಮಂಡ್ಯ: ಎದೆಉರಿ ಎಂದು ಬಿಸಿನೀರು ಕುಡಿಯುವ ವೇಳೆ ವ್ಯಕ್ತಿಯೋರ್ವ ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ (Malavalli) ತಾಲೂಕಿನ ಅಟ್ಟುವನಹಳ್ಳಿ ಗ್ರಾಮದಲ್ಲಿ ಜರುಗಿದೆ.

    ಅಟ್ಟುವನಹಳ್ಳಿ ಗ್ರಾಮದ ಪುಟ್ಟಸ್ವಾಮಿ (55) ಮೃತ ವ್ಯಕ್ತಿ. ಇಂದು ಬೆಳಗ್ಗೆ ಪುಟ್ಟಸ್ವಾಮಿ ಜಮೀನಿಗೆ ತೆರಳಿ ಮೇಕೆಗಳಿಗೆ ಮೇವು ತಂದಿದ್ದಾರೆ. ಬಳಿಕ ಎದೆ ಉರಿಯುತ್ತಿದೆ ಎಂದು ಬಿಸಿನೀರು ಕೇಳಿದ್ದಾರೆ. ಇದನ್ನೂ ಓದಿ: ಚಾಣಕ್ಯ ವಿವಿಗೆ ಹಂಚಿಕೆಯಾಗಿದ್ದ ಭೂಮಿಗೆ ಲ್ಯಾಂಡ್ ಆಡಿಟ್ – ಜಮೀನು ವಾಪಸ್ ಪಡೆಯುತ್ತಾ ಸರ್ಕಾರ?

    ಬಳಿಕ ಪುಟ್ಟಸ್ವಾಮಿ ಬಿಸಿನೀರು ಕುಡಿಯುವ ವೇಳೆ ಎದೆ ಹಿಡಿದುಕೊಂಡು ಕುಸಿದು ಬಿದ್ದಿದ್ದಾರೆ. ನಂತರ ಮನೆಯವರು ಪುಟ್ಟಸ್ವಾಮಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಇದನ್ನೂ ಓದಿ: ಹೆಣ್ಣುಮಕ್ಕಳನ್ನ ಅವಹೇಳನ ಮಾಡೋದೇ ಬಿಜೆಪಿ ಸಂಸ್ಕೃತಿ: ಹರಿಪ್ರಸಾದ್ ಕಿಡಿ

  • `ಬಂಗಾರಿ’ಗೌಡಗೆ ED ಶಾಕ್: ಭದ್ರತೆಗೆ ಸಿಆರ್‌ಪಿಎಫ್ ಯೋಧರನ್ನ ಕರೆತಂದು ಇಡೀ ಮನೆ ತಲಾಶ್

    `ಬಂಗಾರಿ’ಗೌಡಗೆ ED ಶಾಕ್: ಭದ್ರತೆಗೆ ಸಿಆರ್‌ಪಿಎಫ್ ಯೋಧರನ್ನ ಕರೆತಂದು ಇಡೀ ಮನೆ ತಲಾಶ್

    ಮಂಡ್ಯ: ಚಿನ್ನ ಸೇರಿದಂತೆ ಹಲವು ವಂಚನೆ ಪ್ರಕರಣಗಳನ್ನು ಎದುರಿಸುತ್ತಿರುವ ಐಶ್ವರ್ಯ ಗೌಡಗೆ (Aishwarya Gowda) ಇದೀಗ ಇಡಿ ಶಾಕ್ (ED Raid) ನೀಡಿದೆ. ಮಂಡ್ಯದ (Mandya) ನಿವಾಸಕ್ಕೆ ಬೆಳ್ಳಂಬೆಳಗ್ಗೆ ಎಂಟ್ರಿಕೊಟ್ಟ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿ, ಹಲವು ಮಹತ್ವದ ದಾಖಲೆ ವಸಪಡಿಸಿಕೊಂಡಿದ್ದಾರೆ.

    ಐಶ್ವರ್ಯಗೌಡ ಹೆಸರು ಕೆಲದಿನಗಳಿಂದ ರಾಜ್ಯದ್ಯಂತ ಬಾರಿ ಸದ್ದು ಮಾಡುತ್ತಿದೆ. ಚಿನ್ನ ವಂಚನೆ ಪ್ರಕರಣದಿಂದ ಹೊರ ಬಂದ ಈ ಹೆಸರು ರಾಜಕಾರಣಿಗಳು ಹಾಗೂ ಸಿನಿಮಾ ನಟರ ಬುಡವನ್ನ ಅಲ್ಲಾಡಿಸಿತ್ತು. ಅದಾದ ಬಳಿಕ ಈಕೆಯ ವಿರುದ್ಧ ಹಲವು ವಂಚನೆ ಪ್ರಕರಣಗಳು ದಾಖಲಾಗಿದ್ದವು. ಇದೇ ವಿಚಾರ ಇಟ್ಟುಕೊಂಡು ಇದೀಗ ಇಡಿ ಕೂಡ ಈಕೆಯ ಬೆನ್ನು ಬಿದ್ದಿದೆ.ಇದನ್ನೂ ಓದಿ: Pahalgam Attack | ಕೇಂದ್ರ ಯಾವ್ದೇ ಕ್ರಮ ತೆಗೆದುಕೊಂಡ್ರೂ‌ ಪೂರ್ಣ ಬೆಂಬಲ ಇದೆ: ರಾಹುಲ್‌ ಗಾಂಧಿ

    ಇಂದು ಬೆಳ್ಳಂಬೆಳಗ್ಗೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲಿನಲ್ಲಿರುವ ಐಶ್ವರ್ಯಗೌಡ ನಿವಾಸಕ್ಕೆ ಐವರು ಇಡಿ ಅಧಿಕಾರಿಗಳ ತಂಡ ಎರಡು ಕಾರಿನಲ್ಲಿ ಬಂದು ದಾಳಿ ನಡೆಸಿದೆ. ಭದ್ರತೆಗೆ ಸಿಆರ್‌ಪಿಎಫ್ ಯೋಧರನ್ನ ಕರೆತಂದು ಇಡೀ ಮನೆ ತಲಾಶ್ ಮಾಡಿದ್ದಾರೆ.

    ಚಿನ್ನ ವಂಚನೆ, ಮನಿ ಡಬ್ಲಿಂಗ್, ಸೈಟ್ ವಂಚನೆ ಸೇರಿ ಐಶ್ವರ್ಯಗೌಡ ಮೇಲೆ ಹಲವು ಆರೋಪಗಳಿವೆ. ಈ ಎಲ್ಲಾ ಪ್ರಕರಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆಯಾಗಿರುವುದು ಕಂಡು ಬಂದಿರುವ ಕಾರಣ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದಷ್ಟೇ ಅಲ್ಲದೆ ಈಕೆಗೆ ಹಲವು ರಾಜಕಾರಣಿ ಹಾಗೂ ಸಿನಿಮಾ ನಟರ ಸಂಪರ್ಕ ಇದೆ ಎನ್ನುವ ಆರೋಪ ಇರುವ ಕಾರಣ, ಐಶ್ವರ್ಯ ಗೌಡಳ ವ್ಯವಹಾರದ ಇಂಚಿಂಚು ಮಾಹಿತಿಯನ್ನು ಇಡಿ ಅಧಿಕಾರಿಗಳು ಕಲೆಯಾಕಿದ್ದು, ದಾಳಿ ವೇಳೆ ಹಲವು ಮಹತ್ವದ ದಾಖಲೆಗಳನ್ನ ವಶಪಡಿಸಿಕೊಂಡಿದ್ದಾರೆ.

    ಸದ್ಯ ಇಡಿ ಅಧಿಕಾರಿಗಳು ದಾಳಿ ನಡೆಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದು, ಮುಂದೆ ಯಾವ ಹಂತಕ್ಕೆ ತೆಗೆದುಕೊಂಡು ಹೋಗುತ್ತಾರೆ ಎಂದು ಕಾದುನೋಡಬೇಕಿದೆ.ಇದನ್ನೂ ಓದಿ: ಭಾರತ-ಪಾಕ್‌ ನಡುವೆ ಉದ್ವಿಗ್ನತೆ – ʻಆಕ್ರಮಣ್‌ʼ ಹೆಸರಲ್ಲಿ ಭಾರತ ಸಮರಾಭ್ಯಾಸ

  • ಮಳವಳ್ಳಿ ಕಲುಷಿತ ಆಹಾರ ಸೇವನೆ ಕೇಸ್‌ – ಮತ್ತೋರ್ವ ವಿದ್ಯಾರ್ಥಿ ಮೃತ, ಸಾವಿನ ಸಂಖ್ಯೆ 2ಕ್ಕೆ ಏರಿಕೆ

    ಮಳವಳ್ಳಿ ಕಲುಷಿತ ಆಹಾರ ಸೇವನೆ ಕೇಸ್‌ – ಮತ್ತೋರ್ವ ವಿದ್ಯಾರ್ಥಿ ಮೃತ, ಸಾವಿನ ಸಂಖ್ಯೆ 2ಕ್ಕೆ ಏರಿಕೆ

    ಮಂಡ್ಯ/ ಮೈಸೂರು: ಕಲುಷಿತ ಆಹಾರ (Food Poison) ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಮತ್ತೊಬ್ಬ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಮೈಸೂರಿನ (Mysuru) ಖಾಸಗಿ ಆಸ್ಪತ್ರೆಯಲ್ಲಿ ಮಧ್ಯರಾತ್ರಿ ಮೃತಪಟ್ಟಿದ್ದಾನೆ.

    ನಮೀಬ್ ಮಾಂತೆ ಮೃತ ವಿದ್ಯಾರ್ಥಿ. ಈ ಮೂಲಕ ಮೃತ ವಿದ್ಯಾರ್ಥಿಗಳ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಉಳಿದ 46 ಮಂದಿಯ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿದೆ.

    ಮಳವಳ್ಳಿ (Malavalli) ತಾಲ್ಲೂಕಿನ ಟಿ.ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಯ ಮಕ್ಕಳ ಪೈಕಿ 6ನೇ ತರಗತಿ ವಿದ್ಯಾರ್ಥಿ, ಮೇಘಾಲಯದ ಕಿರ್ಶನ್‌ ಲ್ಯಾಂಗ್‌ (13) ಭಾನುವಾರ ಮೃತಪಟ್ಟಿದ್ದ.

    ಈ ಪ್ರಕರಣದ ಭೇದಿಸಲು ಮಳವಳ್ಳಿ ಡಿವೈಎಸ್ಪಿ ವಿ.ಕೃಷ್ಣಪ್ಪ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಆಕಸ್ಮಿಕವಾಗಿ ಆಹಾರ ಪದಾರ್ಥಗಳಿಂದ ಫುಡ್ ಪಾಯಿಸನ್ ಆಗಿದ್ಯಾ? ಅಥವಾ ಉದ್ದೇಶ ಪೂರ್ವಕವಾಗಿ ಯಾರೋ ಊಟವನ್ನು ಕಲುಷಿತ ಮಾಡಿದ್ದಾರಾ ಎಂಬುದರ ಬಗ್ಗೆ ಖುದ್ದು ಮಂಡ್ಯ ಎಸ್ಪಿ ಮಾರ್ಗದರ್ಶನದಲ್ಲಿ ತನಿಖೆ ನಡೆಯಲಿದೆ. ಇದನ್ನೂ ಓದಿ: ಮಳವಳ್ಳಿ ವಸತಿ ಶಾಲೆಯ ದುರ್ಘಟನೆ – ಅಧಿಕಾರಿಗಳಿಂದ ಮಾಹಿತಿ ಪಡೆದ ಹೆಚ್‌ಡಿಕೆ; ಮೃತ ವಿದ್ಯಾರ್ಥಿಗೆ ಸಂತಾಪ

     

    ಏನಿದು ಪ್ರಕರಣ?
    ಶುಕ್ರವಾರ (ಮಾ.14) ಮಳವಳ್ಳಿ ಪಟ್ಟಣದ ಮದನ್ ಲಾಲ್ ಕಲ್ಯಾಣ ಮಂಟಪದಲ್ಲಿ ಪುಷ್ಪೇಂದ್ರ ಕುಮಾರ್ ಹೋಳಿ ಹಬ್ಬ ಆಚರಣೆ ಮಾಡಿದ್ದರು. ಈ ಹೋಳಿ ಹಬ್ಬಕ್ಕೆ ಸಿದ್ದರಾಜು ಎಂಬವರ ಹೋಟೆಲ್‌ನಲ್ಲಿ ಪಲಾವ್ ಮಾಡಿಸಲಾಗಿತ್ತು. ಉಳಿಕೆಯಾದ ಪಲಾವ್‌ ಅನ್ನು ಕಾಗೇಪುರದ ಗೋಕುಲ ವಿದ್ಯಾ ಸಂಸ್ಥೆಗೆ ಕಳುಹಿಸಲಾಗಿತ್ತು.

    ಈ ವಸತಿ ಶಿಕ್ಷಣ ಸಂಸ್ಥೆಯಾದ ಅಲ್ಲಿ ಮೇಘಾಲಯ ಹಾಗೂ ನೇಪಾಳ ಮೂಲದ ಮಕ್ಕಳು ಕಲಿಯುತ್ತಿದ್ದಾರೆ. ಊಟ ಸೇವಿಸಿದ್ದ ಮಕ್ಕಳು ಶನಿವಾರ ಬೆಳಿಗ್ಗೆ ಅಸ್ವಸ್ಥಗೊಂಡಿದ್ದರು. ಅವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಭಾನುವಾರ ಬೆಳಿಗ್ಗೆ ಮಕ್ಕಳಲ್ಲಿ ತೀವ್ರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಮಂಡ್ಯದ ಮಿಮ್ಸ್ ಮತ್ತು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಹೋಳಿ ಕಾರ್ಯಕ್ರಮದಲ್ಲಿ ಭಾಗಿಯಾದ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಈ ಪ್ರಕರಣ ಸಂಬಂಧ ಹೋಳಿ ಆಯೋಜಕ ಪುಷ್ಪೇಂದ್ರ, ಹೋಟೆಲ್ ಮಾಲೀಕ ಸಿದ್ದರಾಜು, ಕಲ್ಯಾಣ ಮಂಟಪ ಸಿಬ್ಬಂದಿ ಕೃಷ್ಣ, ಗೋಕುಲ ವಿದ್ಯಾ ಸಂಸ್ಥೆ ಮುಖ್ಯಸ್ಥ ಲಂಕೇಶ್, ಕಾರ್ಯದರ್ಶಿ ಜಗದೀಶ್, ಕೆಲಸಗಾರ ಅಭಿಷೇಕ್ ಮೇಲೆ ಬಿಇಓ ಉಮಾ ನೀಡಿದ ಮೇರೆಗೆ ಎಫ್‌ಐಆರ್ ದಾಖಲಾಗಿದೆ.

     

  • ಮಳವಳ್ಳಿ ಫುಡ್ ಪಾಯಿಸನ್ ಕೇಸ್ – ಆರು ಮಂದಿ ಮೇಲೆ ಎಫ್‌ಐಆರ್

    ಮಳವಳ್ಳಿ ಫುಡ್ ಪಾಯಿಸನ್ ಕೇಸ್ – ಆರು ಮಂದಿ ಮೇಲೆ ಎಫ್‌ಐಆರ್

    ಮಂಡ್ಯ: ಜಿಲ್ಲೆಯ ಮಳವಳ್ಳಿ (Malavalli) ಖಾಸಗಿ ಶಾಲೆಯಲ್ಲಿ ಫುಡ್ ಪಾಯಿಸನ್ (Food Poison) ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಳಿ ಹಬ್ಬದ ಆಯೋಜಕರು, ಆಹಾರ ತಯಾರಕರು ಹಾಗೂ ಶಾಲೆಯ ಮುಖ್ಯಸ್ಥರು ಸೇರಿದಂತೆ 6 ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ.

    ಶುಕ್ರವಾರ ಮಳವಳ್ಳಿ ಪಟ್ಟಣ ಮದನ್ ಲಾಲ್ ಕಲ್ಯಾಣ ಮಂಟಪದಲ್ಲಿ ಪುಷ್ಪೇಂದ್ರ ಕುಮಾರ್ ಹೋಳಿ ಹಬ್ಬ ಆಚರಣೆ ಮಾಡಿದ್ದು, ಈ ಹೋಳಿ ಹಬ್ಬಕ್ಕೆ ಸಿದ್ದರಾಜು ಎಂಬವರ ಹೋಟೆಲ್‌ನಲ್ಲಿ ವೆಜಿಟೇಬಲ್ ಪಲಾವ್ ಮಾಡಿಸಲಾಗಿತ್ತು. ಇನ್ನೂ ಕಾಗೇಪುರದ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಉಳಿಕೆ ವೆಜಿಟೇಬಲ್ ಪಲಾವ್‌ನ್ನು ನೀಡಲಾಗಿತ್ತು. ಇದನ್ನೂ ಓದಿ: ಕನ್ನಡ ಸಂಘಟನೆಗಳ ಪ್ರತಿಭಟನೆ ಬೆನ್ನಲ್ಲೇ ನೋಟಿಫಿಕೇಶನ್‌ನಲ್ಲಿ ಅಕ್ಷರದೋಷ ಸರಿಪಡಿಸ್ತೇವೆ ಎಂದ BMRCL

    ಈ ವೆಜಿಟೇಬಲ್ ಪಲಾವ್ ತಿಂದ 29 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಇನ್ನೂ ಹೋಳಿಯಲ್ಲಿ ಭಾಗಿಯಾದ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಇದನ್ನೂ ಓದಿ: ರಾಜ್ಯಸಭೆಯಲ್ಲಿ ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಈರಣ್ಣ ಕಡಾಡಿ

    ಈ ಪ್ರಕರಣ ಸಂಬಂಧ ಹೋಳಿ ಆಯೋಜಕ ಪುಷ್ಪೇಂದ್ರ, ಹೋಟೆಲ್ ಮಾಲೀಕ ಸಿದ್ದರಾಜು, ಕಲ್ಯಾಣ ಮಂಟಪ ಸಿಬ್ಬಂದಿ ಕೃಷ್ಣ, ಗೋಕುಲ ವಿದ್ಯಾ ಸಂಸ್ಥೆ ಮುಖ್ಯಸ್ಥ ಲಂಕೇಶ್, ಕಾರ್ಯದರ್ಶಿ ಜಗದೀಶ್, ಕೆಲಸಗಾರ ಅಭಿಷೇಕ್ ಮೇಲೆ ಬಿಇಓ ಉಮಾ ನೀಡಿದ ಮೇರೆಗೆ ಎಫ್‌ಐಆರ್ ಹಾಕಲಾಗಿದೆ. ಇದನ್ನೂ ಓದಿ: ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್‌ ದಾಖಲು

  • ಮಂಡ್ಯ | ವಿದ್ಯುತ್ ಪ್ರವಹಿಸಿ ಚೆಸ್ಕಾಂ ಸಿಬ್ಬಂದಿ ಸಾವು – ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

    ಮಂಡ್ಯ | ವಿದ್ಯುತ್ ಪ್ರವಹಿಸಿ ಚೆಸ್ಕಾಂ ಸಿಬ್ಬಂದಿ ಸಾವು – ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

    ಮಂಡ್ಯ: ವಿದ್ಯುತ್ ಲೈನ್ ಸರಿ ಪಡಿಸುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ ತಾಲೂಕಿನ ರೊಟ್ಟಿಕಟ್ಟೆ ಗ್ರಾಮದಲ್ಲಿ ನಡೆದಿದೆ.

    ರೊಟ್ಟಿಕಟ್ಟೆ ಗ್ರಾಮದ ಮಳವಳ್ಳಿ-ಕೊಳ್ಳೆಗಾಲ ರಾಷ್ಟ್ರೀಯ ಹೆದ್ದಾರಿ ಬಳಿ ಘಟನೆ ನಡೆದಿದೆ. ಮಹಮ್ಮದ್ ಅರ್ಷದ್ ಅಲಿ(28) ಮೃತ ಲೈನ್‌ಮ್ಯಾನ್. ಇದನ್ನೂ ಓದಿ: ಜನಪರವಾದ ಅತ್ಯುತ್ತಮ ದಾಖಲೆಯ ಬಜೆಟ್ – ಕೆ.ಹೆಚ್ ಮುನಿಯಪ್ಪ

    ಅರ್ಷದ್ ಅಲಿ ವಿದ್ಯುತ್ ಕಂಬಕ್ಕೆ ಹತ್ತಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದಿದ್ದು, ಪರಿಣಾಮ ವಿದ್ಯುತ್ ಕಂಬದ ಮೇಲೆ ಪ್ರಾಣ ಬಿಟ್ಟಿದ್ದಾರೆ. 11ಕೆವಿ ಲೈನ್‌ನಲ್ಲಿ ಓವರ್ ಲೋಡ್‌ನಿಂದ ಪದೇ ಪದೇ ವಿದ್ಯುತ್ ಕಡಿತವಾಗುತ್ತಿತ್ತು. ಅಧಿಕಾರಿಗಳ ಸೂಚನೆಯಂತೆ ಮೂವರು ಲೈನ್‌ಮ್ಯಾನ್‌ಗಳು ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಅಮ್ಮ ನನ್ನ ಯಾಕೆ ಬಿಟ್ಟು ಹೋದೆ: ಅಗಲಿದ ತಾಯಿಯ ಬಗ್ಗೆ ಶುಭಾ ಪೂಂಜಾ ಪೋಸ್ಟ್

    ಹೀಗಾಗಿ ಅರ್ಷದ್ ಅಲಿ, ಸುರೇಶ್, ಜಗದೀಶ್ ಫ್ಯೂಸ್ ತೆಗೆದು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿದ ಪರಿಣಾಮ ವಿದ್ಯುತ್ ಕಂಬದಲ್ಲಿದ್ದ ಅರ್ಷದ್ ಅಲಿ ಶಾಕ್ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಕೆಲಸ ಮುಗಿಸಿ ಮಾಹಿತಿ ನೀಡುವ ಮೊದಲೇ ವಿದ್ಯುತ್ ಪ್ರವಹಿಸಿದ್ದು, ಕೆಇಬಿ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: 11 ತಿಂಗಳು 200 ರೂ., 1 ತಿಂಗಳು 300 ರೂ. ಕಡಿತ – ಏನಿದು ಉದ್ಯೋಗಿಗಳ ವೃತ್ತಿ ತೆರಿಗೆ ಲೆಕ್ಕಾಚಾರ?

    ಬೆಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • 20 ಸಾವಿರಕ್ಕೆ ಮಾರಾಟ ಮತ್ತೆ 50 ಸಾವಿರಕ್ಕೆ ಖರೀದಿ – ಈಗ 1.48 ಲಕ್ಷಕ್ಕೆ 8 ತಿಂಗಳ ಟಗರು ಸೇಲ್‌!

    20 ಸಾವಿರಕ್ಕೆ ಮಾರಾಟ ಮತ್ತೆ 50 ಸಾವಿರಕ್ಕೆ ಖರೀದಿ – ಈಗ 1.48 ಲಕ್ಷಕ್ಕೆ 8 ತಿಂಗಳ ಟಗರು ಸೇಲ್‌!

    ಮಂಡ್ಯ: ಕೇವಲ 8 ತಿಂಗಳ ಬಂಡೂರು ತಳಿಯ ಟಗರು (Bandur Breed Ram) ಬರೋಬ್ಬರಿ 1.48 ಲಕ್ಷ ರೂ.ಗೆ ಮಾರಾಟವಾಗುವ ಮೂಲಕ ದಾಖಲೆಯ ಜೊತೆಗೆ ರೈತರಲ್ಲಿ (Farmers) ಅಚ್ಚರಿಯನ್ನು ಮೂಡಿಸಿದೆ.

    ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ (Malavalli) ತಾಲೂಕಿನ ಕಿರುಗಾವಲು ಗ್ರಾಮದ ಉಲ್ಲಾಸ್‌ಗೌಡ ಎಂಬುವವರಿಗೆ ಸೇರಿದ ಬಂಡೂರು ತಳಿ ಟಗರು ಇದೀಗ ದಾಖಲೆ‌ ಮೊತ್ತಕ್ಕೆ ಮಾರಾಟವಾಗಿದೆ. 8 ತಿಂಗಳ‌ ಹಿಂದೆ ಉಲ್ಲಾಸ್ ಮನೆಯಲ್ಲಿಯೇ ಈ ಬಂಡೂರು ಟಗರು ಜನಸಿತ್ತು. ಬಳಿಕ ಕೆಲ ದಿನದಲ್ಲೇ ಟಿ.ನರಸೀಪುರದ ಮೂಲದವರಿಗೆ 20 ಸಾವಿರ ರೂ.ಗೆ ಟಗರನ್ನು ಮಾರಾಟ ಮಾಡಲಾಗಿತ್ತು.

    ಮಾರಾಟ ಮಾಡಿದ ಬಳಿಕ ಮತ್ತೆ ಆ ಟಗರನ್ನು50 ಸಾವಿರ ರೂ.ಗೆ ಉಲ್ಲಾಸ್ ಹಾಗೂ ಅವರ ತಂದೆ ಮನೋಹರ್ ಖರೀದಿ ಮಾಡಿದ್ದರು. ಇದೀಗ ಶಿವಮೊಗ್ಗ ಮೂಲದ ಉದ್ಯಮಿ ಜವಾದ್‌ಗೆ ಅದೇ ಬಂಡೂರು ಟಗರನ್ನು ಮಾರಾಟ ಮಾಡಲಾಗಿದೆ. 8 ತಿಂಗಳ ಬಂಡೂರು ಟಗರನ್ನು ಬರೋಬ್ಬರಿ 1.48 ಲಕ್ಷ ರೂ.ಗೆ ಖರೀದಿ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರು: ವಿಧವೆ ಮದುವೆಯಾಗಿದ್ದ ಪೊಲೀಸಪ್ಪನ ವಿರುದ್ಧವೇ ವರದಕ್ಷಿಣೆ ಕಿರುಕುಳ ಕೇಸ್

     
    ಮಾರಾಟವಾದ ಈ ಬಂಡೂರು ಟಗರಿಗೆ ವಿಶೇಷ ಪೂಜೆ ಸಲ್ಲಿಸಿ ಹಸ್ತಾಂತರ ಮಾಡಲಾಯಿತು. ಇದೇ ವೇಳೆ ಉಲ್ಲಾಸ್ ತಂದೆ ಮನೋಹರ್‌ಗೆ ಸನ್ಮಾನ ಮಾಡಿ, 1.48 ಲಕ್ಷ ರೂ. ಹಣ ನೀಡಿ ಜವಾದ್ ಟಗರನ್ನು ಕೊಂಡೊಯ್ದುದಿದ್ದಾರೆ. ಮಾಂಸದ ದೃಷ್ಟಿಕ್ಕಿಂತ ಹೆಚ್ಚಾಗಿ ಬಂಡೂರು ತಳಿ ಅಭಿವೃದ್ದಿಗಾಗಿ ಈ ಟಗರು ದಾಖಲೆ ಬೆಲೆಗೆ ಖರೀದಿ‌ ಮಾಡಲಾಗಿದೆ.