Tag: Malayalam Cinema

  • ವೃಷಭ ಟೀಸರ್ ಔಟ್; ರಾಜನಾದ ನಟ ಮೋಹನ್ ಲಾಲ್

    ವೃಷಭ ಟೀಸರ್ ಔಟ್; ರಾಜನಾದ ನಟ ಮೋಹನ್ ಲಾಲ್

    ಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ (Mohanlal) ನಟನೆಯ ಬಹು ನಿರೀಕ್ಷಿತ `ವೃಷಭ’ ಸಿನಿಮಾದ (Vrushabha Movie) ಟೀಸರ್ ರಿಲೀಸ್ ಆಗಿದೆ. 1 ನಿಮಿಷ 43 ಸೆಕೆಂಡ್ ಇರುವ ಟೀಸರ್ ಪ್ರಾಮಿಸಿಂಗ್ ಆಗಿದೆ. ಮೋಹನ್ ಲಾಲ್ ರಾಜನ ಲುಕ್‌ನಲ್ಲಿ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ.

    ಆಂಥೋನಿ ಸ್ಯಾಮ್ಸನ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಸ್ಯಾಮ್ ಸಿಎಸ್ ಸಂಗೀತವು ಈ ಟೀಸರ್‌ನ ಹೈಲೆಟ್ಸ್ ಆಗಿವೆ. ನಂದ ಕಿಶೋರ್ ಕಥೆ ಬರೆದು `ವೃಷಭ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ಕನ್ನಡ ಕಲಾವಿದರೂ ಮಿಂಚಿದ್ದು, ನಿರ್ದೇಶಕ ಇಂದ್ರಜಿತ್ ಲಂಕೇಶ್ ಪುತ್ರ ಸರ್ಮಜಿತ್, ಸಿನಿಮಾದಲ್ಲಿ ಮೋಹನ್ ಲಾಲ್ ಮಗನಾಗಿ ಅಭಿನಯಿಸಿದ್ದಾರೆ. ನಟಿ ರಾಗಿಣಿ ದ್ವಿವೇದಿ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

    ನಿರ್ಮಾಪಕಿ ಏಕ್ತಾ ಆರ್ ಕಪೂರ್ ಮಾತನಾಡಿ, ವೃಷಭ ಅದ್ಭುತವಾದ ಪ್ರಾಜೆಕ್ಟ್. ಇದು ಕೇವಲ ಸಿನಿಮಾವಲ್ಲ. ಸಂಬಂಧ, ಸೇಡು ಮತ್ತು ಪುನರ್ಜನ್ಮದ ಮಹಾಕಾವ್ಯವಾಗಿದೆ. ಈ ಸಿನಿಮೀಯ ಅನುಭವವನ್ನು ಪ್ರಸ್ತುತಪಡಿಸಲು ಅದ್ಭುತ ಪ್ರತಿಭೆಗಳೊಂದಿಗೆ ಸಹಕರಿಸಲು ನಾವು ರೋಮಾಂಚನಗೊಂಡಿದ್ದೇವೆ ಎಂದು ಹೇಳಿದರು.

    ನಿರ್ದೇಶಕ ನಂದ ಕಿಶೋರ್ ಮಾತನಾಡಿ, ವೃಷಭವು ಕೇವಲ ಸಿನಿಮಾವಲ್ಲ, ಅದೊಂದು ಎಮೋಶನ್. ಲೆಜೆಂಡ್ ಎನಿಸಿಕೊಂಡಿರುವ ಮೋಹನ್ ಲಾಲ್ ಅವರೊಂದಿಗೆ ಕೆಲಸ ಮಾಡಿರುವುದು ಖುಷಿ ಇದೆ. ಮಗನ ಪಾತ್ರದಲ್ಲಿ ಸಮರ್ಜಿತ್ ಲಂಕೇಶ್ ನಟಿಸಿದ್ದಾರೆ. ಅದ್ಭುತ ಸಾಮರ್ಥ್ಯ ಹೊಂದಿರುವ ಯುವ ಪ್ರತಿಭೆ. ವೃಷಭವು ತಂದೆ ಮತ್ತು ಮಗನ ಬಾಂಧವ್ಯದ ಕಥೆಯಾಗಿದೆ. ಪ್ರೇಕ್ಷಕರು ಇದನ್ನು ಬೆಳ್ಳಿಪರದೆಯ ಮೇಲೆ ಯಾವ ರೀತಿ ತೆಗೆದುಕೊಳ್ಳುತ್ತಾರೆ ಎಂಬುದನ್ನು ನಾನು ನೋಡಲು ಕಾತುರನಾಗಿದ್ದೇನೆ ಎಂದರು.

    ಕನೆಕ್ಟ್ ಮೀಡಿಯಾ ಮತ್ತು ಬಾಲಾಜಿ ಟೆಲಿಫಿಲ್ಮ್ಸ್, ಅಭಿಷೇಕ್ ಎಸ್ ವ್ಯಾಸ್ ಸ್ಟುಡಿಯೋಸ್ ಜೊತೆಗೂಡಿ ಪ್ರಸ್ತುತಪಡಿಸುತ್ತಿರುವ `ವೃಷಭ’ ಚಿತ್ರವನ್ನು ಶೋಭಾ ಕಪೂರ್, ಏಕ್ತಾ ಕಪೂರ್, ಸಿ.ಕೆ.ಪದ್ಮ ಕುಮಾರ್, ವರುಣ್ ಮಾಥುರ್, ಸೌರಭ್ ಮಿಶ್ರಾ, ಅಭಿಷೇಕ್ ಎಸ್ ವ್ಯಾಸ್, ಪ್ರವೀರ್ ಸಿಂಗ್, ವಿಶಾಲ್ ಗುರ್ನಾನಿ ಮತ್ತು ಜೂಹಿ ಪರೇಖ್ ಮೆಹ್ತಾ ನಿರ್ಮಿಸಿದ್ದಾರೆ.

    ಮಲಯಾಳಂ ಮತ್ತು ತೆಲುಗಿನಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾದ ಈ ಚಿತ್ರ ಹಿಂದಿ ಮತ್ತು ಕನ್ನಡದಲ್ಲಿಯೂ ಬಿಡುಗಡೆಯಾಗಲಿದೆ. ಈ ಚಿತ್ರವು ದೀಪಾವಳಿಯಂದು ವಿಶ್ವದಾದ್ಯಂತ ತೆರೆ ಕಾಣಲಿದೆ.

  • ಅನಾರೋಗ್ಯದಿಂದ ಚೇತರಿಸಿಕೊಂಡ ಮಮ್ಮುಟ್ಟಿ; ಚೇತರಿಕೆ ಬೆನ್ನಲ್ಲೇ ಗುಡ್‌ನ್ಯೂಸ್

    ಅನಾರೋಗ್ಯದಿಂದ ಚೇತರಿಸಿಕೊಂಡ ಮಮ್ಮುಟ್ಟಿ; ಚೇತರಿಕೆ ಬೆನ್ನಲ್ಲೇ ಗುಡ್‌ನ್ಯೂಸ್

    ಲಯಾಳಂ ಮೆಗಾಸ್ಟಾರ್ ಮಮ್ಮುಟ್ಟಿ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿಯೇ ಅವರು ಸಾರ್ವಜನಿಕ ವಲಯದಲ್ಲಿ ಕಳೆದ ಏಳೆಂಟು ತಿಂಗಳುಗಳಿಂದ ಕಾಣಿಸಿಕೊಂಡಿರಲಿಲ್ಲ. 72 ವರ್ಷದ ಮೆಗಾಸ್ಟಾರ್ ಮಮ್ಮುಟ್ಟಿ ಈಗಲೂ ಅಪಾರ ಅಭಿಮಾನಿಗಳನ್ನ ಹೊಂದಿರುವ ಬಹುಬೇಡಿಕೆಯ ನಟ. ಏಕಾಏಕಿ ಅನಾರೋಗ್ಯಕ್ಕೆ ತುತ್ತಾದ ನಟನ ಅಭಿಮಾನಿಗಳು ಕಂಗಾಲಾಗಿದ್ದರು. ಇದೀಗ ಮಮ್ಮುಟ್ಟಿ ಗುಣಮುಖರಾಗಿದ್ದು, ಶೀಘ್ರ ಬಣ್ಣದ ಲೋಕಕ್ಕೆ ಮರಳುವ ಸುದ್ದಿ ಬಂದಿದೆ.

    ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಮ್ಮುಟ್ಟಿ ಇದೀಗ ಕೊನೆಯ ಹಂತದ ಚಿಕಿತ್ಸಾ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ, ಇದೀಗ ಅವರು ತನ್ನೂರು, ತನ್ನ ಜನರ ಜೊತೆ ಬೆರೆಯಲು ವಾಪಸ್ಸಾಗಲಿದ್ದಾರಂತೆ. ಈ ಬಗ್ಗೆ ಮಮ್ಮುಟ್ಟಿ ಸಹೋದರ ಇಬ್ರಾಹಿಂ ಕುಟ್ಟಿ ಫೇಸ್‌ಬುಕ್‌ನಲ್ಲಿ ಭಾವನಾತ್ಮಕ ಪೋಸ್ಟ್ವೊಂದನ್ನ ಹಾಕಿದ್ದಾರೆ. ಈ ಪೋಸ್ಟ್ನಲ್ಲಿ ಅವರು `ನನ್ನ ಸಹೋದರ ಮಮ್ಮುಟ್ಟಿ ಬಹುನಿರೀಕ್ಷಿತ ಪುನರಾಗಮನಕ್ಕಾಗಿ ಕಾತುರದಿಂದ ಕಾದಿದ್ದಾರೆ’ ಎಂದು ಸಂದೇಶ ಕೊಟ್ಟಿದ್ದಾರೆ. ಕಪ್ಪು ಮೋಡಗಳು ಹಾಗೂ ಪ್ರಕ್ಷುಬ್ಧ ಸಮುದ್ರವನ್ನ ದಾಟಿದ ಬಳಿಕ ಒಬ್ಬರು ಆನಂದಿಸುವ ನೆಮ್ಮದಿ ಭಾವನೆಯನ್ನು ನಾನು ಈಗ ಆನಂದಿಸುತ್ತಿದ್ದೇನೆ. ಆ್ಯಂಕ್ಸೈಟಿ, ಆತಂಕ ಕಡಿಮೆಯಾಗಿದೆ. ಇದೀಗ ಪುನರಾಗಮನದ ಸಮಯ ಎಂದಿದ್ದಾರೆ. ಅಪರಿಚಿತರು, ಹಿತೈಷಿಗಳು ನನ್ನ ಸಹೋದರನ ಆರೋಗ್ಯದ ಕುರಿತು ವಿಚಾರಿಸುತ್ತಿದ್ರಿ ಎಂದು ಮಮ್ಮುಟ್ಟಿ ಸಹೋದರ ಸಂದೇಶ ಕೊಡುವ ಮೂಲಕ ಮಮ್ಮುಟ್ಟಿ ಅನಾರೋಗ್ಯ ಪರೀಕ್ಷೆ ಮುಗಿದಿದೆ ಅನ್ನೋದನ್ನ ಬಹಿರಂಗಪಡಿಸಿದ್ದಾರೆ.

    ಮಲಯಾಳಂ ಸೂಪರ್ ಸ್ಟಾರ್ ಪುನರಾಗಮನದ ಸಂದೇಶ ಬರುತ್ತಿದ್ದಂತೆ ಅವರ ಆಪ್ತಮಿತ್ರ ಮೋಹನ್‌ಲಾಲ್ ಫೋಟೋವೊಂದನ್ನ ಶೇರ್ ಮಾಡಿ ಸ್ವಾಗತ ಕೋರಿದ್ದಾರೆ. ಮಮ್ಮುಟ್ಟಿಗೆ ಮುತ್ತಿಡುವ ಚಿತ್ರದಲ್ಲಿನ ಭಾವನೆ ಎಲ್ಲವನ್ನೂ ಹೇಳುತ್ತಿದೆ. ಅನೇಕ ನಟ-ನಟಿಯರು ಮಮ್ಮುಟ್ಟಿಗೆ ವೆಲ್‌ಕಮ್ ಬ್ಯಾಕ್ ಎಂದು ಶುಭ ಕೋರಿದ್ದಾರೆ. ಇದೀಗ ಸಪ್ಟೆಂಬರ್ ತಿಂಗಳಲ್ಲೇ ಮಮ್ಮುಟ್ಟಿ ನಟನೆಗೆ ಮರಳುವ ಸಾಧ್ಯತೆ ಕೇಳಿಬರುತ್ತಿದ್ದು ಮಹೇಶ್ ನಾರಾಯಣನ್ ನಿರ್ದೇಶನದಲ್ಲಿ ಚಿತ್ರ ಈಗಾಗ್ಲೇ ಘೋಷಣೆಯಾಗಿತ್ತು. ಇದೇ ಚಿತ್ರಕ್ಕಾಗಿ ಮತ್ತೆ ಬಣ್ಣ ಹಚ್ಚಲಿದ್ದಾರೆ ಎನ್ನುವ ಸುದ್ದಿ ಬಂದಿದೆ. ಒಟ್ಟಿನಲ್ಲಿ ಮಲಯಾಳಂ ಮೆಗಾಸ್ಟಾರ್ ವಾಪಸ್ಸಾಗ್ತಿರೋ ಸುದ್ದಿ ಮಲಯಾಳಂ ಇಂಡಸ್ಟ್ರಿಯಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದೆ.

  • ಮಲಯಾಳಂ ಚಿತ್ರರಂಗ ನನ್ನ ವೃತ್ತಿಜೀವನವನ್ನೇ ಬದಲಿಸಿದೆ: ಕಮಲ್ ಹಾಸನ್

    ಮಲಯಾಳಂ ಚಿತ್ರರಂಗ ನನ್ನ ವೃತ್ತಿಜೀವನವನ್ನೇ ಬದಲಿಸಿದೆ: ಕಮಲ್ ಹಾಸನ್

    ಲಯಾಳಂ ಚಿತ್ರರಂಗದಿಂದ ನಾನು ಬಹಳಷ್ಟು ಕಲಿತಿದ್ದೇನೆ ಎಂದು ಬಹುಭಾಷಾ ನಟ ಕಮಲ್ ಹಾಸನ್ (Kamal Haasan) ಹೇಳಿಕೊಂಡಿದ್ದಾರೆ.

    ಮಾಧ್ಯಮವೊಂದರ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ. ಈ ವೇಳೆ, ತಮ್ಮ ಸಿನಿಮಾದಲ್ಲಿನ ಆರಂಭಿಕ ದಿನಗಳು, ಕಲಿಯುವ ನಿರಂತರ ಬಯಕೆ ಮತ್ತು ಮಲಯಾಳಂ ಸಿನಿಮಾಗಳಿಂದ (Malayalam Cinema) ಕಲಿತ ಪ್ರಮುಖ ಪಾಠಗಳ ಬಗ್ಗೆ ವಿವರಿಸಿದ್ದಾರೆ.

    ಸೃಜನಾತ್ಮಕವಾದ ಹೊಸ ಮಾರ್ಗಗಳನ್ನು ಹುಡುಕುತ್ತಿದ್ದ ಸಮಯದಲ್ಲಿ ನಾನು ಮಲಯಾಳಂ ಚಿತ್ರಗಳತ್ತ ಮುಖ ಮಾಡಿದೆ. ಈ ನಿರ್ಧಾರ ಚಲನಚಿತ್ರ ನಿರ್ಮಾಣ ಮತ್ತು ನಟನೆಯ ಬಗ್ಗೆ ಇದ್ದ ದೃಷ್ಟಿಕೋನವನ್ನು ಸಂಪೂರ್ಣವಾಗಿ ಬದಲಾಯಿಸಿತು. ಈ ಹಂತವನ್ನು ನಾನು ವೃತ್ತಿಜೀವನದಲ್ಲಿ ನಿರ್ಣಾಯಕ ತರಬೇತಿ ಅವಧಿ ಎಂದು ಪರಿಗಣಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

    ಕಮಲ್ ಹಾಸನ್ ಅವರ ಮಣಿರತ್ನಂ ನಿರ್ದೇಶನದ ಮತ್ತು ಎ.ಆರ್. ರೆಹಮಾನ್ ಸಂಗೀತ ಸಂಯೋಜನೆಯ ಬಹುಭಾಷಾ ಚಿತ್ರ ‘ಥಗ್ ಲೈಫ್’, ಜೂ. 5 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಸಿಲಂಬರಸನ್ (ಸಿಂಬು), ತ್ರಿಶಾ, ಅಶೋಕ್ ಸೆಲ್ವನ್ ಮತ್ತು ಅಭಿರಾಮಿ ಕೂಡ ನಟಿಸಿದ್ದು, ಅಭಿಮಾನಿಗಳಲ್ಲಿ ಹೆಚ್ಚಿನ ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

    ಈ ಚಿತ್ರದ ಕತೆ, ಚಿತ್ರಕತೆಯನ್ನು ಮಣಿರತ್ನಂ ಮತ್ತು ಕಮಲ್ ಹಾಸನ್ ಬರೆದಿದ್ದು, ಮಣಿರತ್ನಂ ನಿರ್ದೇಶನದಲ್ಲಿ ರವಿ ಆರ್ ಚಂದ್ರನ್ ಅವರ ಛಾಯಾಗ್ರಹಣ, ಅನ್ವರಿವ್ ಅವರ ಸಾಹಸ ನಿರ್ದೇಶನವಿದೆ. ಅಂದಹಾಗೆ ಥಗ್ ಲೈಫ್ ಸಿನಿಮಾ ತಮಿಳು, ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ.

    ಚಿತ್ರದ ಪ್ರಚಾರ ಕಾರ್ಯಗಳು ಪ್ರಸ್ತುತ ಭರದಿಂದ ಸಾಗುತ್ತಿದೆ. ಇದರ ನಡುವೆ ಅವರು ಸಂದರ್ಶನದಲ್ಲಿ ಮಲಯಾಳಂ ಚಿತ್ರಗಳ ಬಗ್ಗೆ ಮಾತಾಡಿದ್ದು, ಅಲ್ಲಿಂದ ಕಲಿತ ವಿಚಾರಗಳ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

  • ಲೈಂಗಿಕ ದೌರ್ಜನ್ಯ ಆರೋಪ – ಕೇರಳ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ನಿರ್ದೇಶಕ ರಂಜಿತ್ ರಾಜೀನಾಮೆ

    ಲೈಂಗಿಕ ದೌರ್ಜನ್ಯ ಆರೋಪ – ಕೇರಳ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ನಿರ್ದೇಶಕ ರಂಜಿತ್ ರಾಜೀನಾಮೆ

    – ಕಲಾವಿದರ ಸಂಘದ ಕಾರ್ಯದರ್ಶಿ ಸ್ಥಾನಕ್ಕೆ ನಟ ಸಿದ್ಧಿಕಿ ರಾಜೀನಾಮೆ

    ತಿರುವನಂತಪುರಂ: ಮಲಯಾಳಂ ಚಲನಚಿತ್ರ (Malayalam cinema) ನಿರ್ದೇಶಕ ರಂಜಿತ್ (Director Ranjith) ಕೇರಳ ಚಲನಚಿತ್ರ ಅಕಾಡೆಮಿ ಅಧ್ಯಕ್ಷ್ಯ ಸ್ಥಾನಕ್ಕೆ ಹಾಗೂ ನಟ ಸಿದ್ಧಿಕಿ (Actor Siddique) ಮಲಯಾಳಂ ಸಿನಿಮಾ ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನ್ಯಾ.ಹೇಮಾ ಸಮಿತಿ ವರದಿ ನಂತರ ಈ ಬೆಳವಣಿಗೆಯಾಗಿದೆ.

    ರಂಜಿತ್ ಅವರು ಅಸಭ್ಯ ವರ್ತನೆ ತೋರಿದ್ದಾಗಿ ಕಳೆದ ವರ್ಷ ಬಂಗಾಳಿ ನಟಿಯೊಬ್ಬರು ಆರೋಪಿಸಿದ್ದರು. ರಂಜಿತ್ ಅವರಿಗೆ ರಾಜೀನಾಮೆ ನೀಡುವಂತೆ ಒತ್ತಡ ಹೇರಲಾಗಿತ್ತು. ಇನ್ನೂ ಸಿದ್ಧಿಕಿ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ನಟಿಯೊಬ್ಬರು ಶನಿವಾರ ಆರೋಪಿಸಿದ್ದರು ಎಂದು ವರದಿಯಾಗಿದೆ.

    ರಂಜಿತ್ ಅವರು ಸುದ್ದಿವಾಹಿನಿಯೊಂದಕ್ಕೆ ಆಡಿಯೋ ತುಣುಕನ್ನು ಕಳುಹಿಸುವ ಮೂಲಕ ತಮ್ಮ ರಾಜೀನಾಮೆ ನಿರ್ಧಾರ ಘೋಷಿಸಿದ್ದಾರೆ. ಆಡಿಯೋದಲ್ಲಿ, ಅಕಾಡೆಮಿಯ ಅಧ್ಯಕ್ಷ ಸ್ಥಾನ ವಹಿಸಿಕೊಂಡಾಗಿನಿಂದ ಒಂದು ವರ್ಗದ ಜನ ನನ್ನನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಆರೋಪಗಳೆಲ್ಲವೂ ಸುಳ್ಳು ಎಂದು ಸಮಾಜದ ಎದುರು ಸಾಬೀತು ಮಾಡಬೇಕಿದೆ ಎಂದು ಅವರು ಆಡಿಯೊದಲ್ಲಿ ಹೇಳಿದ್ದಾರೆ.

    ಸಿದ್ದಿಕಿ ಅವರ ರಾಜೀನಾಮೆ ಪತ್ರವನ್ನು ಎಎಂಎಂಎ ಅಧ್ಯಕ್ಷ ಮತ್ತು ನಟ ಮೋಹನ್‍ಲಾಲ್ ಅವರಿಗೆ ಕಳುಹಿಸಿದ್ದಾರೆ. ಸಿದ್ದಿಕಿಯವರ ನಿರ್ಧಾರವನ್ನು ಸಂಘದ ಹಲವು ಸದಸ್ಯರು ಸ್ವಾಗತಿಸಿದ್ದಾರೆ.

  • ದಿ ಕೇರಳ ಸ್ಟೋರಿ ಸಿನಿಮಾ ಶುರು: ಸ್ಫೂರ್ತಿಯಂತೆ ದಿ ಕಾಶ್ಮೀರ್ ಫೈಲ್ಸ್

    ದಿ ಕೇರಳ ಸ್ಟೋರಿ ಸಿನಿಮಾ ಶುರು: ಸ್ಫೂರ್ತಿಯಂತೆ ದಿ ಕಾಶ್ಮೀರ್ ಫೈಲ್ಸ್

    ಬಾಲಿವುಡ್ ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಹವಾ ಎಬ್ಬಿಸಿದ್ದೇ ತಡ ಹಲವು ಫೈಲ್ಸ್ ಗಳು ಅಲ್ಲಲ್ಲಿ ಓಪನ್ ಆಗುತ್ತಿವೆ. ನಾನಾ ರೀತಿಯ ಫೈಲ್ಸ್ ಗಳು ಇನ್ನೂ ಸಿನಿಮಾವಾಗಿ ಬರಲಿ ಎಂಬ ಹಲವರ ಬೇಡಿಕೆಯ ಬೆನ್ನೆಲ್ಲೆ ಕೇರಳದಲ್ಲೊಂದು ಸಿನಿಮಾ ಶುರುವಾಗುತ್ತಿದೆ. ಅದಕ್ಕೆ ‘ದಿ ಕೇರಳ ಸ್ಟೋರಿ’ ಎಂದು ಹೆಸರಿಟ್ಟಿದ್ದಾರೆ ನಿರ್ದೇಶಕ ಸುದಿಪ್ತೋ ಸೇನ್.

    ನಿರ್ದೇಶಕರು ಕೇವಲ ಘೋಷಣೆ ಮಾಡಿಲ್ಲ, ಟೀಸರ್ ಕೂಡ ರಿಲೀಸ್ ಮಾಡಿದ್ದಾರೆ. ಆ ಟೀಸರ್ ನಲ್ಲಿ ಭಯಾನಕ ಸತ್ಯವೊಂದನ್ನು ಹೊರಗೆಡವಿದ್ದಾರೆ. ಅದಕ್ಕೆ ಸಾಕ್ಷಿ ಎನ್ನುವಂತೆ ಕೇರಳದ ಮಾಜಿ ಸಿಎಂ ಅಚ್ಯುತಾನಂದ್ ಅವರ ವಿಡಿಯೋ ತುಣಕಕ್ಕೂ ಟೀಸರ್ ನಲ್ಲಿ ಸೇರಿಸಿದ್ದಾರೆ. ಹೀಗಾಗಿ ದಿ ಕೇರಳ  ಸ್ಟೋರಿ ಟೀಸರ್ ನಿಂದಲೇ ಕೇರಳದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿದೆ. ಇದನ್ನೂ ಓದಿ : ಕಾಲೇಜು ದಿನಗಳಲ್ಲಿ ಅಮೀರ್‌ ಮೇಲೆ ಕ್ರಷ್‌ ಆಗಿತ್ತು.. ಲವ್‌ ಲೆಟರ್‌ ಕೂಡ ಬರೆದಿದ್ದೆ: ಬಾಲಿವುಡ್‌ ನಟಿ

    ಈ ಸಿನಿಮಾದಲ್ಲಿ ಕೇರಳದಲ್ಲಿ ನಡೆದಿದೆ ಎನ್ನಲಾದ ಮಾನವ ಕಳ್ಳಸಾಗಣೆಯ ಕುರಿತಾದ ಸ್ಟೋರಿಯನ್ನು ಹೇಳಲು ಹೊರಟಿದ್ದಾರಂತೆ ನಿರ್ದೇಶಕ ಸೇನ್. ದಶಕವೊಂದರ ಕಾಲದಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ಮಾನವ ಕಳ್ಳಸಾಗಣೆ ಕುರಿತಾದ ಸಂಶೋಧನೆ ಇದರಲ್ಲಿ ಇದೆಯಂತೆ. ಇದನ್ನೂ ಓದಿ: ಮಾಧುರಿ ದೀಕ್ಷಿತ್ ಇರೋದು ಮನೇಲಿ ಅಲ್ಲ, ಅರಮನೆಯಲ್ಲಿ: ಹೊಸ ಮನೆಗೆ ದೇವದಾಸ್ ಬೆಡಗಿ

    ಕೇರಳವನ್ನು ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಲು ಮುಸ್ಲಿಂ ಸಂಘಟನೆಯೊಂದರು ಸಂಚು ರೂಪಿಸಿದ್ದ ಮತ್ತು ನಿಷೇಧಿತ ಸಂಘಟನೆ ಎನ್.ಡಿ.ಎಫ್ ಸಹ ಇಂಥದ್ದೇ ಆಲೋಚನೆ ಹೊಂದಿತ್ತು. ಇವರ ಗುರಿಯು ಕೇರಳವನ್ನು ಮುಸ್ಲಿಂ ರಾಷ್ಟ್ರವನ್ನಾಗಿ ಮಾಡುವುದೇ ಆಗಿತ್ತು ಎಂದು ಕೇರಳ ಮಾಜಿ ಸಿಎಂ ಅಚ್ಯುತಾನಂದ್ ಹೇಳಿದ್ದರು ಎನ್ನಲಾದ ವಿಡಿಯೋವನ್ನು ಟೀಸರ್ ನಲ್ಲಿ ಹಾಕಿದ್ದಾರೆ. ಈಗ ಅದು ವೈರಲ್ ಕೂಡ ಆಗಿದೆ. ಇದನ್ನೂ ಓದಿ : ಈ ವಾರ ಕರ್ನಾಟಕದಲ್ಲೇ 250ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ‘ಆರ್.ಆರ್.ಆರ್’: ಪುನೀತ್ ‘ಜೇಮ್ಸ್’ ಏನಾಗತ್ತೆ?

    ಕಳೆದ ಹತ್ತು ವರ್ಷಗಳಲ್ಲಿ ಕೇರಳದಿಂದ 32 ಸಾವಿರಕ್ಕೂ ಹೆಚ್ಚು ಯುವತಿಯರನ್ನು ಯುದ್ಧ ಪೀಡಿತ ದೇಶಗಳಿಗೆ ರವಾನಿಸಲಾಗಿದೆ ಎನ್ನುವ ಮಾಹಿತಿಯನ್ನೂ ಆ ಟೀಸರ್ ಬಿಟ್ಟುಕೊಡುತ್ತದೆ. ಈ ಹುಡುಗಿಯರ ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದೆ ಎಂದಿದ್ದಾರೆ ನಿರ್ದೇಶಕರು. ಆ ಯುವತಿಯರ ಬದುಕಿನ ಬಗ್ಗೆ ಈಗಾಗಲೇ ಸಂಶೋಧನೆ ಮಾಡಿರುವ ನಿರ್ದೇಶಕರು ಈ ಸತ್ಯ ಘಟನೆಯನ್ನು ಯಥಾವತ್ತಾಗಿ ತರಲು ನಿರ್ದೇಶಕರು ನಿರ್ಧರಿಸಿದ್ದಾರಂತೆ.

  • ಮಲಯಾಳಂ ಸ್ಟಾರ್ ನಟ ದುಲ್ಕರ್ ಗೆ ನಿಷೇಧದ ಬೆದರಿಕೆ

    ಮಲಯಾಳಂ ಸ್ಟಾರ್ ನಟ ದುಲ್ಕರ್ ಗೆ ನಿಷೇಧದ ಬೆದರಿಕೆ

    ಲಯಾಳಂ ಸೂಪರ್ ಸ್ಟಾರ್ ದುಲ್ಕರ್ ಸಲ್ಮಾನ್ ಚಿತ್ರಕ್ಕೆ ನಿಷೇಧದ ಆತಂಕ ಎದುರಾಗಿದೆ. ಅವರ ಅತೀ ನಿರೀಕ್ಷಿತ ಸಿನಿಮಾ ‘ಸೆಲ್ಯೂಟ್’ ಇನ್ನಷ್ಟೇ ರಿಲೀಸ್ ಆಗಬೇಕಿದೆ. ಈ ಸಿನಿಮಾವನ್ನು ಥಿಯೇಟರ್ ಗೆ ತರದೇ, ನೇರವಾಗಿ ಓಟಿಟಿಯಲ್ಲಿ ಬಿಡುಗಡೆ ಮಾಡಿದರೆ, ಮುಂದಿನ ಅವರ ಎಲ್ಲಾ ಚಿತ್ರಗಳನ್ನು ಥಿಯೇಟರ್ ಬಾರದಂತೆ ನಿಷೇಧ ಹೇರುವುದಾಗಿ ಫಿಲ್ಮ್ ಎಕ್ಸಿಬಿಟರ್ಸ್ ಯುನೈಟೆಡ್ ಆರ್ಗನೈಸೇಶನ್ ಆಫ್ ಕೇರಳ ಹೇಳಿದೆ.

    ಈ ಹಿಂದೆ ‘ಸೆಲ್ಯೂಟ್’ ಚಿತ್ರವನ್ನು ಚಿತ್ರಮಂದಿರಗಳಲ್ಲೇ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಒಪ್ಪಂದ ಮಾಡಿಕೊಂಡಿತ್ತು. ಆದರೆ, ಇದೀಗ ನೇರವಾಗಿಯೇ ಓಟಿಟಿಯಲ್ಲಿ ಬಿಡುಗಡೆ ಮಾಡುವುದಾಗಿ ಒಪ್ಪಂದದಿಂದ ಹಿಂದೆ ಸರಿದಿದೆ. ಹೀಗಾಗಿ ಕೇರಳ ಚಿತ್ರ ಪ್ರದರ್ಶಕರ ಒಕ್ಕೂಟ ಚಿತ್ರತಂಡದ ವಿರುದ್ಧ ಗರಂ ಆಗಿದೆ. ಇದನ್ನೂ ಓದಿ : ಕೋವಿಡ್ ನಂತರ ನಿದ್ರಾ ಸಮಸ್ಯೆಯಿಂದ ಬಳಲುತ್ತಿದ್ದಾರಂತೆ ಖ್ಯಾತ ನಟಿ ಶ್ರುತಿ ಹಾಸನ್

    “ಸೆಲ್ಯೂಟ್ ಸಿನಿಮಾ ನಮ್ಮ ಜತೆಗಿನ ಒಪ್ಪಂದಂತೆಯೇ ಥಿಯೇಟರ್ ಗಳಲ್ಲಿ ಬಿಡುಗಡೆ ಮಾಡಬೇಕು. ದುಲ್ಕರ್ ಸಲ್ಮಾನ್ ಮತ್ತು ನಿರ್ಮಾಣ ಸಂಸ್ಥೆಯು ನಿಯಮ ಪಾಲಿಸದೇ ಇದ್ದರೆ, ದೊಡ್ಡ ಪರಿಣಾಮವನ್ನೇ ಎದುರಿಸಬೇಕಾಗುತ್ತದೆ” ಎಂದು ನೇರವಾಗಿಯೇ ನಿಷೇಧದ ಮಾತು ಹೇಳಿದೆ ಫಿಲ್ಮ್ ಎಕ್ಸಿಬಿಟರ್ಸ್ ಯುನೈಟೆಡ್ ಆರ್ಗನೈಸೇಶನ್ ಆಫ್ ಕೇರಳ. ಇದನ್ನೂ ಓದಿ : ಪುನೀತ್ ಅಭಿಮಾನಿಗಳಿಗೆ ಭಾರೀ ನಿರಾಸೆ : ಮೆರವಣಿಗೆ ಇಲ್ಲ, ಹೆಲಿಕಾಪ್ಟರ್ ಗೆ ಅನುಮತಿ ಕೊಟ್ಟಿಲ್ಲ

    ಮಾಧ್ಯಮಗಳೊಂದಿಗೆ ಮಾತನಾಡಿರುವ ಒಕ್ಕೂಟದ ಪ್ರತಿನಿಧಿ ಕೆ.ವಿಜಯ ಕುಮಾರ್, “ಥಿಯೇಟರ್ ನಲ್ಲಿ ರಿಲೀಸ್ ಮಾಡುವುದಾಗಿ ಅವರೇ ಸಹಿ ಮಾಡಿಕೊಟ್ಟ ಒಪ್ಪಂದದ ಪತ್ರವಿದೆ. ಈಗ ಅದಕ್ಕೆ ಅವರು ಗೌರವ ಕೊಡುತ್ತಿಲ್ಲ. ಹೀಗಾಗಿ ನಾವು ಅನಿವಾರ್ಯವಾಗಿ ನಿಷೇಧದ ಮಾರ್ಗವನ್ನೇ ಹಿಡಿಯಬೇಕಾಗಿದೆ’ ಎಂದಿದ್ದಾರೆ. ಇದನ್ನೂ ಓದಿ : ಅಂದು ಸುದೀಪ್ ಪುಸ್ತಕ ಬಿಡುಗಡೆ ಮಾಡಿದ್ದ ಪುನೀತ್, ಇಂದು ಪುನೀತ್ ಪುಸ್ತಕ ಬಿಡುಗಡೆ ಮಾಡಿದ ಸುದೀಪ್

    ಈ ಕುರಿತು ಚಿತ್ರತಂಡವು ಕೂಡ ಪ್ರತಿಕ್ರಿಯಿಸಿದ್ದು, ‘ಅದ್ಧೂರಿಯಾಗಿ ಮೂಡಿ ಬಂದಿರುವ ಭಾರೀ ಬಜೆಟ್ ಸಿನಿಮಾವಿದು. ಕೋವಿಡ್ ಕಾರಣದಿಂದಾಗಿ ಅಂದುಕೊಂಡ ದಿನಾಂಕಗಳಂದು ಬಿಡುಗಡೆ ಮಾಡಲಿಲ್ಲ. ಇಂದಿಗೂ ಪರಿಸ್ಥಿತಿ ಚೆನ್ನಾಗಿಲ್ಲ. ಓಟಿಟಿಯಲ್ಲಿ ಬಿಡುಗಡೆ ಮಾಡುವುದು ಅನಿವಾರ್ಯವಾಗಿದೆ” ಎಂದಿದೆ. ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಮಾದರಿಯ ಸಿನಿಮಾ ಇದಾಗಿದ್ದು, ರೋಶನ್ ಆಂಡ್ರ್ಯೂಸ್ ನಿರ್ದೇಶನದಲ್ಲಿ ಚಿತ್ರ ಮೂಡಿ ಬಂದಿದೆ. ಸಿನಿಮಾ ಎಲ್ಲಿ ಬಿಡುಗಡೆ ಆಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

  • ದೌರ್ಜನ್ಯ ಖಂಡಿಸಿ, ಭಾವನಾ ಮೆನನ್ ಬೆಂಬಲಕ್ಕೆ ನಿಂತ ತಮಿಳು ನಟ ಸೂರ್ಯ

    ದೌರ್ಜನ್ಯ ಖಂಡಿಸಿ, ಭಾವನಾ ಮೆನನ್ ಬೆಂಬಲಕ್ಕೆ ನಿಂತ ತಮಿಳು ನಟ ಸೂರ್ಯ

    ನ್ನಡದಲ್ಲೂ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ, ಮಲಯಾಳಿ ನಟಿ ಭಾವನಾ ಮೆನನ್ ಮೇಲಿನ ದೌರ್ಜನ್ಯ ಖಂಡಿಸಿರುವ ಸಾಲಿನಲ್ಲಿ ನಟ ಸೂರ್ಯ ಇದೀಗ ಸೇರ್ಪಡೆಗೊಂಡಿದ್ದಾರೆ. ತಮ್ಮ ಹೊಸ ಸಿನಿಮಾ ‘ಎತುರ್ಕುಂ ತೂನಿಂದವನ್’ ಸಿನಿಮಾದ ಪ್ರಚಾರಕ್ಕಾಗಿ ಕೊಚ್ಚಿಗೆ ತೆರಳಿದ್ದ ಸೂರ್ಯ, ಕೇರಳದಲ್ಲಿ ನಡೆದ ನಟಿ ಮೇಲಿನ ಹಲ್ಲೆ ಮತ್ತು ದೌರ್ಜನ್ಯವನ್ನು ಯಾವ ನಾಗರೀಕ ಸಮಾಜ ಒಪ್ಪಿಕೊಳ್ಳುವುದಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು. ಆ ನಟಿಯೊಂದಿಗೆ ನಾವೆಲ್ಲರೂ ಇದ್ದೇವೆ. ಅವರು ಧೈರ್ಯದಿಂದ ಜೀವನ ನಡೆಸಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ : ರಕ್ಷಿತ್ ಶೆಟ್ಟಿ ‘777 ಚಾರ್ಲಿ’ ಸಿನಿಮಾ ಏನಾಯ್ತು? ಗುಡ್ ನ್ಯೂಸ್ ಕೊಡುತ್ತಂತೆ ಚಿತ್ರತಂಡ

    ನಟಿ ಭಾವನಾ ಮೇಲೆ 2017ರಲ್ಲಿ ಕೇರಳದಲ್ಲಿ ಹಲ್ಲೆ ನಡೆಯಿತು. ಪ್ರಭಾವಿ ನಟರೊಬ್ಬರು ಇದರ ಹಿಂದೆ ಇದ್ದಾರೆ ಎಂದು ಸ್ಟಾರ್ ನಟ ದಿಲೀಪ್ ಮೇಲೆ  ಆರೋಪ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲೀಪ್ ಅವರ ಬಂಧನ ಕೂಡ ಆಗಿತ್ತು. ಈಗವರು ಜಾಮೀನನ ಮೇಲೆ ಆಚೆ ಬಂದಿದ್ದಾರೆ. ಈ ಪ್ರಕರಣ ಮತ್ತೆ ಇದೀಗ ಮುನ್ನೆಲೆಗೆ ಬಂದಿದೆ. ಇದನ್ನೂ ಓದಿ : ಜೊತೆ ಜೊತೆಯಲಿ ಅನಿರುದ್ಧಅವರ ಮೊದಲ ಪತ್ನಿ ನಟಿ ಸೋನು ಗೌಡ

    ಇತ್ತೀಚೆಗಷ್ಟೇ ತಮ್ಮ ಮೇಲೆ ಆದ ದೌರ್ಜನ್ಯದ ಕುರಿತು ಬಹಿರಂಗವಾಗಿ ಭಾವನಾ ಮಾತನಾಡಿದ್ದರು. ಅದೊಂದು ನಕರದ ಸನ್ನಿವೇಶವೆಂದು ಹೇಳಿಕೊಂಡಿದ್ದರು. ಅಂತಹ ಘಟನೆ ನನ್ನ ಜೀವನದಲ್ಲಿ ನಡೆಯಿತಲ್ಲ ಎಂದು ಮಾನಸಿಕವಾಗಿ ಕುಸಿದು ಹೋಗಿದ್ದೆ ಎಂದೂ ಅವರು ನೋವನ್ನು ಹಂಚಿಕೊಂಡಿದ್ದರು. ಇದನ್ನೂ ಓದಿ : ದೂರದರ್ಶನದಲ್ಲಿ ಸಿಗ್ತಾರೆ ದಿಯಾ ಹೀರೋ

    ಈ ಎಲ್ಲವನ್ನೂ ಮರೆತು ಮತ್ತೆ ಸಹಜ ಜೀವನಕ್ಕೆ ಬರಲು ಹಲವು ವರ್ಷಗಳಿಂದ ಪ್ರಯತ್ನ ಪಡುತ್ತಿದ್ದ ಭಾವನಾ ಇತ್ತೀಚೆಗಷ್ಟೇ ಬಿಡುಗಡೆಯಾದ ಭಜರಂಗಿ 2 ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದರು. ಆ ಸಿನಿಮಾದಲ್ಲಿಯ ಪಾತ್ರವನ್ನು ಪ್ರೇಕ್ಷಕರು ಮೆಚ್ಚಿಕೊಂಡರು. ಇದೀಗ ಮತ್ತೆ ನಟನೆಯಲ್ಲಿ ಭಾವನಾ ಸಕ್ರೀಯರಾಗಿದ್ದಾರೆ.