Tag: Male Mahadeshwara

  • ನಟ ಶಿವರಾಜ್‌ಕುಮಾರ್‌ಗೆ ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ – ಮಲೆ ಮಹದೇಶ್ವರ ಮೊರೆಹೋದ ಫ್ಯಾನ್ಸ್

    ನಟ ಶಿವರಾಜ್‌ಕುಮಾರ್‌ಗೆ ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ – ಮಲೆ ಮಹದೇಶ್ವರ ಮೊರೆಹೋದ ಫ್ಯಾನ್ಸ್

    ಚಾಮರಾಜನಗರ: ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ (Shiva Rajkumar) ಅವರಿಗೆ ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದು, ಯಶಸ್ವಿಯಾಗಿ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಮಲೆ ಮಹದೇಶ್ವರನ (Male Mahadeshwara Temple) ಮೊರೆ ಹೋಗಿದ್ದಾರೆ.

    ಮೈಸೂರಿನ ಕೆ.ಜಿ.ಕೊಪ್ಪಲಿನ ಶಿವು ಹಾಗೂ ಸ್ನೇಹಿತರು ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಟ ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವ ಕೆ.ಜಿ.ಕೊಪ್ಪಲಿನ ಶಿವು, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವ ಅಷ್ಟೋತರ ಬಿಲ್ವಾರ್ಚನೆ ಪೂಜೆ ಮಾಡಿಸಿದ್ದಾರೆ. ಇವರಿಗೆ ಸ್ನೇಹಿತರಾದ ದರ್ಶನ್, ಅಭಿರಾಜ್, ಮನೋಹರ್, ಟಿ ನಾರಾಯಣ್ ಶಿವಮಲ್ಲು ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಭಗವಂತ ನನ್ನಷ್ಟೂ ಆಯಸ್ಸನ್ನ ಶಿವಣ್ಣನಿಗೇ ಕೊಡಲಿ: ಧ್ರುವ ಸರ್ಜಾ

    ಇದಲ್ಲದೆ, ದೇವಸ್ಥಾನದ ಸುತ್ತಲೂ ಮೂರು ಬಾರಿ ಉರುಳು ಸೇವೆ ಮಾಡಿ ಕೇಶ ಮುಂಡನೆ ಮಾಡಿಸುವ ಮೂಲಕ ವಿಶೇಷವಾಗಿ ಹರಕೆ ಸಲ್ಲಿಸಿದ್ದಾರೆ. ‘ಭೈರತಿ ರಣಗಲ್’ ಚಿತ್ರ ಬಿಡುಗಡೆಯಾದ ಸಂದರ್ಭದಲ್ಲಿ ಶಿವರಾಜ್ ಕುಮಾರ್ ಅವರು ಮೈಸೂರಿಗೆ ಆಗಮಿಸಿದ್ದರು. ಈ ವೇಳೆ ಭರ್ಜರಿ ಸ್ವಾಗತ ಕೋರಿ ಚಿತ್ರ ಶತದಿನೋತ್ಸವ ಪೂರೈಸಲೆಂದು ಶುಭ ಕೋರಿದ್ದರು.

    ಶಿವರಾಜ್‌ಕುಮಾರ್‌ ಅವರು ಶಸ್ತ್ರಚಿಕಿತ್ಸೆಗೆ ಅಮೆರಿಕಗೆ ತೆರಳುತ್ತಿದ್ದಾಗಲು ಶಿವು ತಂಡ ಏರ್ಪೋರ್ಟ್‌ಗೆ ಭೇಟಿ ನೀಡಿ ಬೀಳ್ಕೊಡುಗೆ ಮಾಡಿ ವಾಪಸ್ ತೆರಳಿದ್ದರು. ಇದನ್ನೂ ಓದಿ: ಚಿಕಿತ್ಸೆಗಾಗಿ ಅಮೆರಿಕಗೆ ತೆರಳುವ ಮುನ್ನ ಶಿವಣ್ಣ ಭಾವುಕ

  • ಫ್ರೀ ಬಸ್ ಟಿಕೆಟ್ ಎಫೆಕ್ಟ್; ಚಾಮರಾಜನಗರದಲ್ಲಿ ಬಸ್ ಡೋರ್ ಮುರಿದ ಮಹಿಳೆಯರು!

    ಫ್ರೀ ಬಸ್ ಟಿಕೆಟ್ ಎಫೆಕ್ಟ್; ಚಾಮರಾಜನಗರದಲ್ಲಿ ಬಸ್ ಡೋರ್ ಮುರಿದ ಮಹಿಳೆಯರು!

    ಚಾಮರಾಜನಗರ: ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಯಾಗಿದೆ. ಇದೀಗ ಚಾಮರಾಜನಗರದಲ್ಲಿ (Chamarajanagar) ರಶ್ ಆಗಿ ಪ್ರಯಾಣಿಕರು ಬಸ್ಸಿನ ಬಾಗಿಲನ್ನೇ ಮುರಿದು ಹಾಕಿದ ಘಟನೆ ನಡೆದಿದೆ.

    ಸೋಮವಾರ ಅಮವಾಸ್ಯೆ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಮಲೆ ಮಹದೇಶ್ವರ (Male Mahadeshwara) ಬೆಟ್ಟದ ದರ್ಶನಕ್ಕೆ ಹೊರಟಿದ್ದರು. ಈ ವೇಳೆ ಬಂದ ಬಸ್ ಏರಲು ನೂಕು ನುಗ್ಗಲು ಉಂಟಾಗಿದೆ. ಅಲ್ಲದೇ ಪ್ರಯಾಣಿಕರು ಬಸ್ ಏರುವಾಗ ಡೋರ್ ಮುರಿದು ಹೋಗಿದೆ. ಇದರಿಂದಾಗಿ ಕಂಡಕ್ಟರ್ ಪರದಾಡಿದ್ದಾರೆ. ಅದರಲ್ಲೂ ವಾರದ ಹಿಂದಷ್ಟೆ ಸಾರಿಗೆ ನಿಗಮ ಬಾಗಿಲು ಹಾಕದೇ ಬಸ್ ಓಡಿಸದಂತೆ ಆದೇಶ ನಿಡಿತ್ತು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಅಕ್ಷರ ಸಂತ ಹರೇಕಳ ಹಾಜಬ್ಬ ಮನವಿ

    ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯ ಪರಿಣಾಮ ಯಾತ್ರಾ ಸ್ಥಳಗಳಿಗೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ಅದೇ ರೀತಿ ಮಲೆ ಮಹದೇಶ್ವರ ದರ್ಶನಕ್ಕೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಇದರಿಂದಾಗಿ ಕೆಎಸ್‍ಆರ್‌ಟಿಸಿ (KSRTC) ಬಸ್‍ಗಳು ತುಂಬಿ ತುಳುಕುತ್ತಿವೆ. ಕೊಳ್ಳೇಗಾಲದ (Kollegala) ಬಸ್ ನಿಲ್ದಾಣದಲ್ಲಿ ಮಹದೇಶ್ವರ ಬೆಟ್ಟಕ್ಕೆ ಹೋಗುವ ಬಸ್ ಹತ್ತಲು ಪ್ರಯಾಣಿಕರು ಪರದಾಡುವಂತಾಗಿದೆ.

    ಬೆಳಗ್ಗೆಯಿಂದ ಕಾದರೂ ಕೆಲವರಿಗೆ ರಷ್‍ನಿಂದ ಬಸ್ ಹತ್ತಲು ಆಗಿರಲಿಲ್ಲ. ನಿಲ್ದಾಣದಲ್ಲೇ ಕಾದು ನಿಲ್ಲುವಂತಾಗಿದೆ ಎಂದು ಕೆಲವರು ಗೋಳಾಡಿದ್ದಾರೆ. ಬಸ್‍ಗಳಲ್ಲಿ ಮಹಿಳೆಯರೇ ತುಂಬಿಕೊಳ್ಳುತ್ತಿದ್ದಾರೆ. ನಾವು ಹೇಗೆ ಹೋಗೋದು ಎಂದು ಪುರುಷರು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: 15 ದಿನಗಳ ಹಿಂದಷ್ಟೇ ಡಿವೋರ್ಸ್- ಪತ್ನಿಯನ್ನು ಕೊಲ್ಲಲು ಪಿಸ್ತೂಲ್ ಖರೀದಿಸಿ ಅರೆಸ್ಟ್ ಆದ!

  • ಸಂಭ್ರಮದಿಂದ ನಡೆದ ಮಲೆ ಮಹದೇಶ್ವರ ದೀಪಾವಳಿ ರಥೋತ್ಸವ

    ಸಂಭ್ರಮದಿಂದ ನಡೆದ ಮಲೆ ಮಹದೇಶ್ವರ ದೀಪಾವಳಿ ರಥೋತ್ಸವ

    ಚಾಮರಾಜನಗರ: ಎಲ್ಲಿ ನೋಡಿದರಲ್ಲಿ ಜನಸಾಗರ, ಉಘೇ, ಉಘೇ ಮಾದಪ್ಪ ಎನ್ನುವ ಜಯಕಾರ, ಕುಣಿದು ಕುಪ್ಪಳಿಸಿ ಭಕ್ತಿಯ ಪರಾಕಾಷ್ಟೆ ಮೆರೆದ ಮಹಿಳೆಯರು, ಈ ಎಲ್ಲ ಸಂಭ್ರಮ ಮಲೆ ಮಹದೇಶ್ವರನ (Male Mahadeshwara) ದೀಪಾವಳಿ (Deepavali) ರಥೋತ್ಸವದಲ್ಲಿ ಕಂಡುಬಂದಿದೆ.

    Mahadeshwara Hills

    ಚಾಮರಾಜನಗರ (Chamarajanagara) ಜಿಲ್ಲೆಯಲ್ಲಿರುವ ಮಲೆ ಮಹದೇಶ್ವರ ಬೆಟ್ಟ (Mahadeshwara Hill) ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ. ಬೆಟ್ಟದಲ್ಲಿ ನೆಲಸಿರುವ ಮಲೆಮಾದಪ್ಪ ಲಕ್ಷಾಂತರ ಭಕ್ತರ ಆರಾಧ್ಯ ದೈವ. ಈ ಬೆಟ್ಟದಲ್ಲಿ ವರ್ಷಕ್ಕೆ ಒಂದಲ್ಲ, ಎರಡಲ್ಲ, ಮೂರು ಬಾರಿ ಅಂದರೆ ಶಿವರಾತ್ರಿ, ಯುಗಾದಿ ಹಾಗೂ ದೀಪಾವಳಿಯಂದು ರಥೋತ್ಸವ ನಡೆಯುತ್ತದೆ. ಇದೇ ರೀತಿ ಈ ಬಾರಿಯು ಬೆಟ್ಟದಲ್ಲಿಂದು ಮಾದಪ್ಪನ ದೀಪಾವಳಿ ರಥೋತ್ಸವ ಲಕ್ಷಾಂತರ ಭಕ್ತರ ಜಯಘೋಷಗಳ ನಡುವೆ ಸಂಭ್ರಮ ಸಡಗರಗಳೊಂದಿಗೆ ನಡೆಯಿತು.  ಇದನ್ನೂ ಓದಿ: ಗ್ರಾಮದ ಯುವಕನೊಂದಿಗೆ ಪ್ರೀತಿ – ಮಗಳನ್ನೇ ಕೊಚ್ಚಿ ಕೊಂದ ತಂದೆ

    ಉಘೇ, ಉಘೇ, ಮಾದಪ್ಪ ಎನ್ನುತ್ತಾ, ಅಸಂಖ್ಯಾತ ಮಂದಿ ಭಕ್ತರು ಮಾದಪ್ಪನ ತೇರು ಎಳೆದು ತಮ್ಮ ಭಕ್ತಿ ಸಮರ್ಪಿಸಿದರು. ಮಹಿಳೆಯರಂತು ಕುಣಿದು ಕುಪ್ಪಳಿಸಿ ಭಕ್ತಿಯ ಪರಾಕಾಷ್ಠೆ ಮೆರೆದರು. ಹುಲಿವಾಹನ, ಬಸವವಾಹನ, ರುದ್ರಾಕ್ಷಿ ಮಂಟಪಗಳು ಮಾದಪ್ಪನ ರಥದೊಂದಿಗೆ ಸಾಗಿ ರಥೋತ್ಸವಕ್ಕೆ ಮೆರಗು ತಂದವು. ಮಾದಪ್ಪನ ಭಕ್ತರು ಉರುಳುಸೇವೆ, ಪಂಜಿನಸೇವೆ, ಮುಡಿಸೇವೆ ಮೂಲಕ ಹರಕೆ ತೀರಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

    ರಾಜ್ಯದ ಮೂಲೆ, ಮೂಲೆಗಳಿಂದ ಭಕ್ತ ಸಾಗರ ಹರಿದುಬಂದಿತ್ತು. ಕಳೆದ ಮೂರು ದಿನಗಳಿಂದ ಸಾಗರೋಪಾದಿಯಲ್ಲಿ ಹರಿದು ಬಂದ ಭಕ್ತರಿಗೆ ವಿಶೇಷ ಅನ್ನದಾಸೋಹ ಮಾಡಲಾಗಿತ್ತು. ಮೂರು ದಿನಗಳಿಂದ ಮೂರು ಲಕ್ಷಕ್ಕೂ ಅಧಿಕ ಲಾಡು ಪ್ರಸಾದ ಮಾರಾಟವಾಗಿದೆ. ಇದನ್ನೂ ಓದಿ: ಬಂಡೆಮಠ ಸ್ವಾಮೀಜಿ ಆತ್ಮಹತ್ಯೆಗೆ ಟ್ವಿಸ್ಟ್- ಮಹಿಳೆಯ ಜೊತೆಗಿನ ವೀಡಿಯೋ ಕಾಲ್ ವೈರಲ್

    ಮಾದಪ್ಪನ ಸನ್ನಿದಿಯಲ್ಲಿ ದೀಪಾವಳಿಯ ಮೊದಲನೇ ದಿನ ಎಣ್ಣೆಮಜ್ಜನ ಸೇವೆ ನಡೆದರೆ, ಎರಡನೇ ದಿನ ಹಾಲರುವ ಉತ್ಸವ ನಡೆದಿತ್ತು. ಮೂರನೇ ದಿನವಾದ ಇಂದು ರಥೋತ್ಸವ ನಡೆಯುವುದರೊಂದಿಗೆ ಮೂರು ದಿನಗಳ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ತೆರೆಬಿದ್ದಿತು.

    Live Tv
    [brid partner=56869869 player=32851 video=960834 autoplay=true]

  • ಮಲೆ ಮಾದಪ್ಪನ ಸನ್ನಿಧಿಯಲ್ಲಿ ಪೂಜೆ ಸಲ್ಲಿಸ್ತಿದ್ದ ಅರ್ಚಕ ಸಾವು

    ಮಲೆ ಮಾದಪ್ಪನ ಸನ್ನಿಧಿಯಲ್ಲಿ ಪೂಜೆ ಸಲ್ಲಿಸ್ತಿದ್ದ ಅರ್ಚಕ ಸಾವು

    ಚಾಮರಾಜನಗರ: ಮಾದಪ್ಪ ಸನ್ನಿಧಿಯಲ್ಲಿ ಪೂಜೆ ಸಲ್ಲಿಸುತ್ತಿದ್ದಾಗ ಅರ್ಚಕರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.

    ನಾಗಣ್ಣ (40) ಮೃತಪಟ್ಟ ಅರ್ಚಕ. ದೊಡ್ಡಾಣೆ ಗ್ರಾಮದ ನಿವಾಸಿಯಾದ ನಾಗಣ್ಣ, ಮಾರ್ಟಳ್ಳಿಯ ಕಡಬೂರಿನಲ್ಲಿ ವಾಸಿಸುತ್ತಿದ್ದರು. ಉಪ ಅರ್ಚಕರಾದ ನಾಗಣ್ಣ ಅವರಿಗೆ ಈ ತಿಂಗಳು ಮಲೆ ಮಹದೇಶ್ವರ ದೇಗುಲದಲ್ಲಿ ಪೂಜೆ ಮಾಡುವ ಅವಕಾಶ ಸಿಕ್ಕಿತ್ತು. ಇವರು ಎಂದಿನಂತೆ ಇಂದು ಬೆಳಗ್ಗೆಯೂ ಮಾದಪ್ಪನಿಗೆ ಪೂಜೆ ಸಲ್ಲಿಸುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಇದನ್ನೂ ಓದಿ: ಬಾನಂಗಳದಲ್ಲಿ ಹಾರಿದ ಹರ್ಷನ ಭಾವಚಿತ್ರವಿರುವ ಗಾಳಿಪಟ- ಭಾವುಕರಾದ ಹರ್ಷನ ತಾಯಿ

    ಈ ಹಿನ್ನೆಲೆಯಲ್ಲಿ ಸ್ಥಳೀಯರು ಹೆಚ್ಚಿನ ಚಿಕಿತ್ಸೆಗಾಗಿ ಹನೂರಿಗೆ ಕೊಡೊಯ್ದಿದ್ದಾರೆ. ಆದರೆ ಅಲ್ಲಿನ ವೈದ್ಯರು ನಾಗಣ್ಣ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಇದನ್ನೂ ಓದಿ: ನೂಪುರ್ ಶರ್ಮಾಗೆ ಬೆಂಬಲ ಸೂಚಿಸಿದ ಯುವಕನಿಗೆ ಚಾಕು ಇರಿತ

    Live Tv
    [brid partner=56869869 player=32851 video=960834 autoplay=true]

  • ಮತ್ತೆ ಕೋಟ್ಯಧೀಶನಾದ ಮಲೆ ಮಹದೇಶ್ವರ – ಹುಂಡಿಯಲ್ಲಿ 2.27 ಕೋಟಿ ರೂ. ಸಂಗ್ರಹ

    ಮತ್ತೆ ಕೋಟ್ಯಧೀಶನಾದ ಮಲೆ ಮಹದೇಶ್ವರ – ಹುಂಡಿಯಲ್ಲಿ 2.27 ಕೋಟಿ ರೂ. ಸಂಗ್ರಹ

    ಚಾಮರಾಜನಗರ: ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ದೇವಾಲಯಕ್ಕೆ ಕೋಟಿ ಕೋಟಿ ಹಣ ಹರಿದು ಬಂದಿದ್ದು, ಬರೋಬ್ಬರಿ 2.27 ಕೋಟಿ ರೂ. ಸಂಗ್ರಹವಾಗಿದೆ.

    ದೇವಸ್ಥಾನದ ಹುಂಡಿ ಎಣಿಕೆ ಕಾರ್ಯವು ಬುಧವಾರ ಬೆಳಗ್ಗೆಯಿಂದ ರಾತ್ರಿವರೆಗೂ ನಡೆದಿದ್ದು, ಈ ತಿಂಗಳಿನಲ್ಲಿ ಬರೋಬ್ಬರಿ 2,27,66,834 ರೂ. ನಗದು ಜೊತೆಗೆ 59 ಗ್ರಾಂ ಚಿನ್ನ, 3.8 ಕೆಜಿ ಬೆಳ್ಳಿಯನ್ನು ಭಕ್ತರು ಮಾದಪ್ಪನಿಗೆ ಕಾಣಿಕೆ ರೂಪದಲ್ಲಿ ಅರ್ಪಿಸಿದ್ದಾರೆ. ಅಷ್ಟಾಗಿ ಯಾವುದೇ ಸೇವೆ ಮತ್ತು ರಥೋತ್ಸವ ಜರುಗದೇ ಇದ್ದರೂ ಭಕ್ತರು ಕಾಣಿಕೆ ರೂಪದಲ್ಲಿ ಹಣದ ಹೊಳೆಯನ್ನೇ ಹರಿಸುವ ಮೂಲಕ ಮತ್ತೆ ಮಾದಪ್ಪನನ್ನು ಕೋಟ್ಯಧೀಶನನ್ನಾಗಿಸಿದ್ದಾರೆ. ಇದನ್ನೂ ಓದಿ: ಕೊರೊನಾ ಕಾಲದಲ್ಲೂ ಮಾದಪ್ಪನ ಹುಂಡಿಯಲ್ಲಿ 2.62 ಕೋಟಿ ಸಂಗ್ರಹ

    ಈ ಮುನ್ನ ಅಕ್ಟೋಬರ್‌ನಲ್ಲಿ ಕೊರೊನಾ ಇದ್ದರೂ ಸಹ 2.62 ಕೋಟಿ ರೂಪಾಯಿ ಸಂಗ್ರಹವಾಗಿತ್ತು. ಈ ವೇಳೆ 170 ಗ್ರಾಂ ಚಿನ್ನ, 3.7 ಕೆಜಿ ಬೆಳ್ಳಿ ಸೇರಿದಂತೆ ಒಟ್ಟು 2,62,76,718 ರೂ. ಗಳಿಕೆಯಾಗಿತ್ತು. ಇದನ್ನೂ ಓದಿ: ರಾಜ್ಯದ 58 ಪುರಸಭೆ, 57 ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಇಂದು

  • ಜೂಜಾಡುತ್ತಿದ್ದ ಎಎಸ್‌ಐ, ಕಾನ್‌ಸ್ಟೇಬಲ್, ತಹಸೀಲ್ದಾರ್ ಚಾಲಕ ಸೇರಿದಂತೆ 20 ಮಂದಿ ಅರೆಸ್ಟ್

    ಜೂಜಾಡುತ್ತಿದ್ದ ಎಎಸ್‌ಐ, ಕಾನ್‌ಸ್ಟೇಬಲ್, ತಹಸೀಲ್ದಾರ್ ಚಾಲಕ ಸೇರಿದಂತೆ 20 ಮಂದಿ ಅರೆಸ್ಟ್

    ಚಾಮರಾಜನಗರ: ಅಕ್ರಮ ಜೂಜಾಟದಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿ, ಕ್ಲಬ್ ನಡೆಸುತ್ತಿದ್ದ ತಹಸೀಲ್ದಾರ್ ಚಾಲಕ ಸೇರಿದಂತೆ 20 ಮಂದಿಯನ್ನು ಬಂಧಿಸಿರುವ ಘಟನೆ ನಗರಸ ಕರಿನಂಜನಪುರ ಬಳಿ ನಡೆದಿದೆ.

    ಮೀಸಲು ಪಡೆಯ ಎಎಸ್‌ಐ ಪ್ರದೀಪ್, ಹೆಡ್ ಕಾನ್‌ಸ್ಟೇಬಲ್ ಮರಿಸ್ವಾಮಿ, ಚಾಮರಾಜನಗರ ತಹಸೀಲ್ದಾರ್ ಚಾಲಕ ಕಮಲೇಶ್ ಸೇರಿದಂತೆ 20 ಮಂದಿಯನ್ನು ಜಿಲ್ಲಾ ಪೊಲೀಸ್ ವಿಶೇಷ ತಂಡ ಬಂಧಿಸಿ, 29 ಸಾವಿರ ರೂ.ವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    MONEY

    7 ಮಂದಿ ಭಕ್ತರ ಬಂಧನ: ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಜೂಜಾಡುತ್ತಿದ್ದ 7 ಮಂದಿ ಭಕ್ತರನ್ನು ಮಲೆಮಹದೇಶ್ವರ ಬೆಟ್ಟ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮೈಸೂರು ಜಿಲ್ಲೆಯ ತಲಕಾಡು ಗ್ರಾಮದ ಶಿವಾನಂದಸ್ವಾಮಿ, ನಾಗೇಂದ್ರ ಕುಮಾರ್, ವಿಜಯ್, ಮಹದೇವಪ್ಪ, ಬಸವರಾಜು ಕೃಷ್ಣ, ಸಂತೋಷ್ ಕುಮಾರ್ ಬಂಧಿತ ಆರೋಪಿಗಳು. ಇದನ್ನೂ ಓದಿ: ಪೊಲೀಸರು ಲಂಚ ಪಡೆದರೆ ಕೆಲ್ಸ ಆಗುತ್ತೆ, ಬೇರೆಯವರು ಹಣ ಪಡೆದ್ರೂ ಏನೂ ಮಾಡಲ್ಲ: ಪೊಲೀಸ್

    POLICE JEEP

    ಮಲೆ ಮಹದೇಶ್ವರ ಬೆಟ್ಟದ ಸಾಲೂರು ಸ್ಮಾರಕ ಭವನದ ಹಿಂಭಾಗ ಅಕ್ರಮವಾಗಿ ಜೂಜಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಲೆಮಹದೇಶ್ವರ ಬೆಟ್ಟದಲ್ಲಿ ಪೊಲೀಸರು ದಾಳಿ ನಡೆಸಿ ಜೂಜಾಡುತ್ತಿದ್ದ 7 ಜನರನ್ನು ಬಂಧಿಸಿ ಪಣಕ್ಕಿಟ್ಟಿದ್ದ 26,750 ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಮೇಘನಾ ಮನೆಯಲ್ಲಿ ಕ್ರಿಸ್‍ಮಸ್‍ಗೆ ಭರ್ಜರಿ ತಯಾರಿ – ಕಲರ್ ಫುಲ್ ಲೈಟಿಂಗ್ಸ್ ನೋಡಿ ರಾಯನ್ ಖುಷ್

  • ಮಾದಪ್ಪನಿಗೆ ಬೆಳ್ಳಿ ಕಣ್ಣು ಕಾಣಿಕೆ ಕೊಟ್ಟ ಮಾಜಿ ಸಿಎಂ ಎಸ್‍ಎಂಕೆ

    ಮಾದಪ್ಪನಿಗೆ ಬೆಳ್ಳಿ ಕಣ್ಣು ಕಾಣಿಕೆ ಕೊಟ್ಟ ಮಾಜಿ ಸಿಎಂ ಎಸ್‍ಎಂಕೆ

    ಚಾಮರಾಜನಗರ: ಭಕ್ತಾಧಿಯೊಬ್ಬರ ಮೂಲಕ ಶುಕ್ರವಾರ ಬೆಳಗ್ಗೆ ಮಾಜಿ ಸಿ.ಎಂ. ಎ¸.ಎಂ. ಕೃಷ್ಣ ಕಳುಹಿಸಿದ್ದ ಕಾಣಿಕೆಯನ್ನು ಸ್ವೀಕರಿಸಿದ ಮಲೆಮಹದೇಶ್ವರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರ ಇಂದು ಅದನ್ನು ದೇವರಿಗೆ ಧರಿಸಿದ್ದಾರೆ.

    ನಾಡಿನ ಪ್ರಮುಖ ದೇವಾಲಯವಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರನಿಗೆ ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಎಸ್.ಎಂ.ಕೃಷ್ಣ 1,110 ಗ್ರಾಂ ತೂಕದ ಬೆಳ್ಳಿ ಕಣ್ಣುಗಳನ್ನು ಕಾಣಿಕೆಯಾಗಿ ಕೊಟ್ಟಿದ್ದಾರೆ.

    ಭಕ್ತಾಧಿಯೊಬ್ಬರ ಮೂಲಕ ಶುಕ್ರವಾರ ಬೆಳಗ್ಗೆ ಎಸ್.ಎಂ.ಕೆ ಕಳುಹಿಸಿದ್ದ ಕಾಣಿಕೆಯನ್ನು ಸ್ವೀಕರಿಸಿ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಇಂದು ಅದನ್ನು ದೇವರಿಗೆ ಧರಿಸಿದ್ದಾರೆ. ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವಸ್ವಾಮಿ ಸದಾಶಿವನಗರದಲ್ಲಿನ ಕೃಷ್ಣ ಅವರ ಮನೆಗೆ ಭೇಟಿ ಮಾಡಿ ಅಭಿನಂದನಾ ಪತ್ರ ಹಾಗೂ ದೇವರ ಪ್ರಸಾದ ನೀಡಿದ್ದಾರೆ.

    ಮಲೆ ಮಹದೇಶ್ವರ ಎಸ್.ಎಂ.ಕೃಷ್ಣ ಅವರ ಮನೆ ದೇವರಾಗಿದ್ದು, ಸಿದ್ಧಾರ್ಥ ನಿಧನದ ಬಳಿಕ ಕ್ಷೇತ್ರಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದರು. ಈಗ ಮೊಮ್ಮಗನ ಮದುವೆ ಬಳಿಕ ದೇವರಿಗೆ ಕಾಣಿಕೆ ನೀಡಿ, ಶೀಘ್ರದಲ್ಲೇ ಕ್ಷೇತ್ರಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.

  • ಮಾದಪ್ಪನ ಭಕ್ತರ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಪ್ರವೇಶ ಶುಲ್ಕದ ಹೊರೆ

    ಮಾದಪ್ಪನ ಭಕ್ತರ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಪ್ರವೇಶ ಶುಲ್ಕದ ಹೊರೆ

    ಚಾಮರಾಜನಗರ: ಪ್ರಸಿದ್ದ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಕೆಎಸ್‌ಆರ್‌ಟಿಸಿ ಬಸ್‍ಗಳಿಗೂ ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ. ಆದರೆ ಕೆಎಸ್‌ಆರ್‌ಟಿಸಿ ಈ ಪ್ರವೇಶ ಶುಲ್ಕದ ಹೊರೆಯನ್ನು ಪ್ರಯಾಣಿಕರ ಮೇಲೆ ಹೊರಿಸಿದೆ.

    ಈ ಹಿಂದೆ ಕೆಎಸ್‌ಆರ್‌ಟಿಸಿ ಬಸ್‍ಗಳಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಯಾವುದೇ ರೀತಿಯ ಪ್ರವೇಶ ಶುಲ್ಕ ಇರಲಿಲ್ಲ. ಆದರೆ, ಎಲ್ಲಾ ರೀತಿಯ ಸೇವಾದರಗಳನ್ನು ಹೆಚ್ಚಳ ಮಾಡಿದ್ದ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಕೆಎಸ್‌ಆರ್‌ಟಿಸಿ ಬಸ್‍ಗಳಿಗೆ ಮೊದಲ ಬಾರಿಗೆ ಪ್ರವೇಶ ಶುಲ್ಕ ನಿಗದಿಪಡಿಸಿತ್ತು. ಕೊಳ್ಳೇಗಾಲ ಗೇಟ್ ಹಾಗೂ ಪಾಲಾರ್ ಗೇಟ್‍ಗಳ ಮೂಲಕ ಮಹದೇಶ್ವರ ಬೆಟ್ಟಕ್ಕೆ ಬರುವ ಬಸ್‍ಗಳ ಪ್ರತಿ ಟ್ರಿಪ್‍ಗೂ 50 ರೂ.ಗಳಂತೆ ಪ್ರವೇಶ ದರ ನಿಗದಿಪಡಿಸಲಾಗಿದೆ.

    ನಿಗಮಕ್ಕೆ ಆರ್ಥಿಕ ನಷ್ಟದಲ್ಲಿರುವ ಕಾರಣ ಈ ಹೊರೆಯನ್ನು ಸರಿದೂಗಿಸುವ ಸಲುವಾಗಿ ಪ್ರವೇಶ ಶುಲ್ಕವನ್ನು ಪ್ರಯಾಣಿಕರಿಂದಲೇ ವಸೂಲಿ ಮಾಡಲು ಸಾರಿಗೆ ನಿಗಮ ಸುತ್ತೋಲೆ ಹೊರಡಿಸಿದೆ.

    ಪ್ರತಿ ಪ್ರಯಾಣಿಕರಿಂದ ತಲಾ ಒಂದು ರೂಪಾಯಿಯಂತೆ ಹೆಚ್ಚುವರಿ ದರ ವಸೂಲಿ ಮಾಡುವಂತೆ ಸೂಚಿಸಲಾಗಿದೆ. ಹಾಗಾಗಿ ಪ್ರವೇಶ ಶುಲ್ಕದ ಹೊರೆಯು ಭಕ್ತರ ಮೇಲೆ ಬಿದ್ದಂತಾಗಿದೆ.

  • ಲಾಡು ದರ ಬಳಿಕ ಮಲೆ ಮಹದೇಶ್ವರ ಸೇವಾ ಶುಲ್ಕಗಳೂ ಹೆಚ್ಚಳ

    ಲಾಡು ದರ ಬಳಿಕ ಮಲೆ ಮಹದೇಶ್ವರ ಸೇವಾ ಶುಲ್ಕಗಳೂ ಹೆಚ್ಚಳ

    ಚಾಮರಾಜನಗರ: ಕೆಲದಿನಗಳ ಹಿಂದಷ್ಟೇ ಲಾಡು ಪ್ರಸಾದದ ದರ ಏರಿಕೆ ಮಾಡಿದ್ದ ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಇದೀಗ ಕೊರೊನಾ ಸಂಕಷ್ಟದಲ್ಲಿ ಮಹದೇಶ್ವರನ ವಿವಿಧ ಸೇವಾ ಶುಲ್ಕಗಳನ್ನು ಹೆಚ್ಚಳ ಮಾಡುವ ಮೂಲಕ ದರ ಏರಿಕೆಯ ಬರೆ ಎಳೆದಿದೆ.

    ಜನರು ಆರ್ಥಿಕ ಸಂಕಷ್ಟದಲ್ಲಿರುವಾಗ ಹೀಗೆ ದರ ಏರಿಕೆ ಮಾಡಿರುವ ಬಗ್ಗೆ ಭಕ್ತ ಸಮೂಹದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಇತಿಹಾಸ ಪ್ರಸಿದ್ಧ ಮಲೈಮಹದೇಶ್ವರ ಬೆಟ್ಟದಲ್ಲಿ ಸದ್ದಿಲ್ಲದೆ ವಿವಿಧ ರೀತಿಯ ಸೇವಾ ಶುಲ್ಕಗಳನ್ನು ಏರಿಕೆ ಮಾಡಲಾಗಿದೆ. ಎಲ್ಲ ರೀತಿಯ ಸೇವೆಗಳ ದರವನ್ನು ಶೇ.30 ರಿಂದ 35 ರಷ್ಟು ಏರಿಕೆ ಮಾಡುವ ಮೂಲಕ ಮಹದೇಶ್ವರ ಬೆಟ್ಟ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಶಾಕ್ ನೀಡಿದೆ.

    ಪ್ರಸ್ತುತ 2,501 ರೂಪಾಯಿ ಇದ್ದ ಚಿನ್ನದ ತೇರಿನ ಸೇವಾ ದರವನ್ನು 3,001 ರೂ.ಗೆ ಏರಿಕೆ ಮಾಡಲಾಗಿದೆ. ಮಹಾ ರುದ್ರಾಭಿಷೇಕ, ಹುಲಿವಾಹನ, ಬಸವ ವಾಹನ, ರುದ್ರಾಕ್ಷಿ ಮಂಟಪಗಳ ಉತ್ಸವಗಳ ಸೇವಾ ದರವನ್ನು ಹೆಚ್ಚಿಸಲಾಗಿದೆ. ಮಹದೇಶ್ವರ ಬೆಟ್ಟಕ್ಕೆ ವಾಹನಗಳ ಪ್ರವೇಶ ಶುಲ್ಕವನ್ನು ಸಹ ಹೆಚ್ಚಳ ಮಾಡಲಾಗಿದೆ. 100 ರೂಪಾಯಿ ಇದ್ದ ಮಿಶ್ರ ಪ್ರಸಾದದ ದರವನ್ನು 125 ರೂಪಾಯಿಗೆ ಏರಿಕೆ ಮಾಡಲಾಗಿದೆ.

    ಕಳೆದ ಐದು ವರ್ಷಗಳಿಂದ ಯಾವುದೇ ಶುಲ್ಕ ಹೆಚ್ಚಳ ಮಾಡಿರಲಿಲ್ಲ. ಇತ್ತೀಚೆಗೆ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವುದರಿಂದ ಸೇವೆಗಳ ದರ ಏರಿಕೆ ಮಾಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ತಿಳಿಸಿದ್ದಾರೆ.

    ನಿರ್ವಹಣಾ ವೆಚ್ಚದ ಹೆಸರಿನಲ್ಲಿ ವಿವಿಧ ಸೇವಾ ಶುಲ್ಕಗಳನ್ನು ಏರಿಕೆ ಮಾಡಿರುವುದು ಭಕ್ತರಲ್ಲಿ ಅಸಮಧಾನ ಮೂಡಿಸಿದೆ. ಕೊರೊನಾ ಪರಿಣಾಮ ಜನರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ ಇಂತಹ ಸಂದರ್ಭದಲ್ಲಿ ವಿವಿಧ ಸೇವೆಗಳ ದರ ಏರಿಕೆ ಮಾಡಿರುವುದಕ್ಕೆ ಭಕ್ತ ಸಮೂಹ ಭಾರೀ ವಿರೋಧ ವ್ಯಕ್ತಪಡಿಸಿದೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಮಹದೇಶ್ವರನ ಸನ್ನಿಧಿಗೆ ಕೋಟ್ಯಂತರ ರೂಪಾಯಿ ಕಾಣಿಕೆ ಹರಿದುಬರುತ್ತಿದೆ. ಆದರೂ ಪ್ರಾಧಿಕಾರ ಸೇವೆಗಳ ದರ ಏರಿಕೆಯ ಬರೆ ಎಳೆದಿದೆ.

  • ಮಹಾಲಯ ಅಮವಾಸ್ಯೆಗೆ ಭಕ್ತರಿಗಿಲ್ಲ ಮಾದಪ್ಪನ ದರ್ಶನ- 3 ದಿನ ಪ್ರವೇಶ ನಿರ್ಬಂಧ

    ಮಹಾಲಯ ಅಮವಾಸ್ಯೆಗೆ ಭಕ್ತರಿಗಿಲ್ಲ ಮಾದಪ್ಪನ ದರ್ಶನ- 3 ದಿನ ಪ್ರವೇಶ ನಿರ್ಬಂಧ

    ಚಾಮರಾಜನಗರ: ಅಮವಾಸ್ಯೆ, ಹುಣ್ಣಿಮೆಗಳಂದು ಬಹುತೇಕ ದೇವಸ್ಥಾನಗಳಲ್ಲಿ ಜನದಟ್ಟಣೆ ಉಂಟಾಗುವುದು ಸಾಮಾನ್ಯ. ಅದೇ ರೀತಿ ಮಲೆ ಮಹದೇಶ್ವರ ಬಟ್ಟಕ್ಕೂ ಸಹ ಭಕ್ತ ಸಮೂಹವೇ ಹರಿದು ಬರುತ್ತದೆ. ಇದೀಗ ಮಹಾಲಯ ಅಮವಾಸ್ಯೆ ಹತ್ತಿರವಾಗುತ್ತಿದ್ದು, ಹೆಚ್ಚು ಭಕ್ತರು ಮಹದೇಶ್ವರ ದೇವಸ್ಥಾನಕ್ಕೆ ಆಗಮಿಸುತ್ತಾರೆ. ಹೀಗಾಗಿ ಮೂರು ದಿನಗಳ ಕಾಲ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

    ಈ ಕುರಿತು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಮಹಾಲಯ ಅಮವಾಸ್ಯೆ ಹಿನ್ನೆಲೆ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಒಂದೇ ಸ್ಥಳದಲ್ಲಿ ಹೆಚ್ಚು ಜನ ಸೇರುವುದರಿಂದ ಸಮಾಜಿಕ ಅಂತರ ಸೇರಿ ಕೊರೊನಾ ನಿಯಮ ಪಾಲನೆ ಕಷ್ಟ. ಹೀಗಾಗಿ ಸೆಪ್ಟೆಂಬರ್ 16, 17 ಮತ್ತು 18 ರಂದು ಮೂರು ದಿನಗಳ ಕಾಲ ಮಾದಪ್ಪನ ಬೆಟ್ಟಕ್ಕೆ ಸಾರ್ವಜನಿಕರು ಹಾಗೂ ಭಕ್ತಾಧಿಗಳ ಪ್ರವೇಶವನ್ನ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

    ಮಹಾಲಯ ಅಮವಾಸ್ಯೆಯಂದು ಮಾದಪ್ಪನ ಸನ್ನಧಿಯಲ್ಲಿ ಎಣ್ಣೆ ಮಜ್ಜನ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಸೇರಿದಂತೆ ವಿಶೇಷ ಪೂಜೆ ನಡೆಯುತ್ತಿತ್ತು. ಅಮವಾಸ್ಯೆ ದಿನ ಭಕ್ತರು ಕುಟುಂಬ ಸಮೇತರಾಗಿ ಬೆಟ್ಟಕ್ಕೆ ಬಂದು ಮೂರು ದಿನಗಳ ಕಾಲ ಬೆಟ್ಟದಲ್ಲಿ ವಾಸ್ತವ್ಯ ಹೂಡಿ ಹುಲಿವಾಹನ, ಚಿನ್ನದ ತೇರು ಮತ್ತು ಪರ ಹಾಗೂ ಅನ್ನಸಂತರ್ಪಣೆ ಮಾಡಿ ಹೋಗುತ್ತಿದ್ದರು.

    ಕೊರೊನಾದಿಂದಾಗಿ ಕಳೆದ ಮಾರ್ಚ್ ನಿಂದ ಇಲ್ಲಿಯವರೆಗೂ ವಿಶೇಷ ದಿನಗಳಲ್ಲಿ ಅಂದರೆ ಹುಣ್ಣಿಮೆ ಮತ್ತು ಅಮವಾಸ್ಯೆಗಳಂದು ಭಕ್ತರಿಗೆ ಮಾದಪ್ಪನ ಬೆಟ್ಟಕ್ಕೆ ಪ್ರವೇಶ ನಿರ್ಭಂದಿಸುತ್ತಿರುವುದರಿಂದ ಸಾರ್ವಜನಿಕರು ಮತ್ತು ಭಕ್ತರಿಗೆ ನಿರಾಸೆಯಾಗುತ್ತಿದೆ. ಬೆಟ್ಟದಲ್ಲಿ ಇದೇ ದಿನಗಳನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದ ವ್ಯಾಪಾರಸ್ಥರಿಗೂ ಸಂಕಷ್ಟ ಎದುರಾಗಿದೆ.

    ಕೊರೊನಾ ಕಾರಣದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಸತತ 5 ತಿಂಗಳುಗಳ ಕಾಲ ಭಕ್ತರಿಗೆ ನಿಷೇಧ ಹೇರಲಾಗಿತ್ತು. ಜೂನ್ 8ರಂದು ಸಾಕಷ್ಟು ಮುಂಜಾಗೃತ ಕ್ರಮಗಳನ್ನ ತೆಗೆದುಕೊಂಡು ತಿರುಪತಿ ಮಾದರಿಯಲ್ಲಿ ಭಕ್ತರಿಗೆ ಮಾದಪ್ಪನ ದರ್ಶನ ಮಾಡುವ ವ್ಯವಸ್ಥೆಯನ್ನು ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರ ಮಾಡಿತ್ತು.