Tag: Male Mahadeshwara Swamy Temple

  • 99 ದಿನಗಳಲ್ಲಿ ಮುಡಿ ಕೂದಲಿನಿಂದ ಮಲೆ ಮಾದಪ್ಪನಿಗೆ ಬಂದ ಅದಾಯ 1.49 ಕೋಟಿ ರೂ.

    99 ದಿನಗಳಲ್ಲಿ ಮುಡಿ ಕೂದಲಿನಿಂದ ಮಲೆ ಮಾದಪ್ಪನಿಗೆ ಬಂದ ಅದಾಯ 1.49 ಕೋಟಿ ರೂ.

    ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಕೂದಲಿನ ಬಿಡ್ ನಡೆದಿದ್ದು, ಪ್ರತಿ ಕೆ.ಜಿ.ಗೆ 15,535 ರೂ. ನಂತೆ 4,595 ಕೆ.ಜಿ. ತುಂಡು ಕೂದಲು, 951 ಕೆ.ಜಿ. ಉದ್ದದ ಕೂದಲು ಮಾರಾಟವಾಗಿದ್ದು, ಇದರಿಂದ ಬರೋಬ್ಬರಿ 1,49,40,391 ರೂ. ಆದಾಯ ಬಂದಿದೆ.

    ನಾಡಿನ ಪ್ರಮುಖ ದೇಗುಲಗಳಲ್ಲಿ ಒಂದಾದ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಹರಕೆ ಕೂದಲಿನ ಬಿಡ್ ನಡೆದಿದ್ದು, ಪ್ರತಿ ಕೆಜಿಗೆ 15,535 ರೂ. ನಂತೆ 4,595 ಕೆಜಿ ತುಂಡು ಕೂದಲು, 951 ಕೆ.ಜಿ. ಉದ್ದ ಕೂದಲು ಮಾರಾಟವಾಗಿದ್ದು, ಬರೋಬ್ಬರಿ 1,49,40,391 ರೂ. ಆದಾಯ ಬಂದಿದೆ. ಹುಂಡಿಯಲ್ಲಿ ಸಂಗ್ರಹವಾಗುತ್ತಿದ್ದ ಹಣದಿಂದ ಗಮನ ಸೆಳೆಯುತ್ತಿದ್ದ ಮಲೆ ಮಾದಪ್ಪ ಈಗ ಮತ್ತಷ್ಟು ಶ್ರೀಮಂತನಾಗಿದ್ದು, ಹರಕೆ ಕೂದಲಿನ ಹರಾಜಿನಿಂದ ಬರೋಬ್ಬರಿ 1.49 ಕೋಟಿ ರೂ. ಸಂಗ್ರಹವಾಗಿದೆ. ಇದನ್ನೂ ಓದಿ: ನಿನ್ನ ವಾಹನದಿಂದ ಬೆಳೆ ಉಳಿಸು- ಗಣಪತಿಗೆ ಜೀವಂತ ಇಲಿ ನೀಡಿ ಬೇಡಿಕೊಂಡ ರೈತ

    ಈ ಕುರಿತು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಮಾಹಿತಿ ನೀಡಿ, ಕಳೆದ ವರ್ಷಕ್ಕಿಂತ ಈ ವರ್ಷ ಪ್ರತಿ ಕೆ.ಜಿ.ಗೆ 8,135 ರೂ. ಹೆಚ್ಚಿನ ಲಾಭ ಬಂದಿದ್ದು, ಒಟ್ಟು ಹಣ 1.49 ಕೋಟಿ ರೂ. ಸಂಗ್ರಹವಾಗಿರುವುದು ಸಾರ್ವಕಾಲಿಕ ದಾಖಲೆಯಾಗಿದೆ. ಈ ಮುಡಿ ಕೂದಲು 99 ದಿನಗಳಲ್ಲಿ ಸಂಗ್ರಹವಾಗಿತ್ತು ಎಂದು ತಿಳಿಸಿದ್ದಾರೆ.

  • ಮಲೆ ಮಾದಪ್ಪನ ಹೊರತುಪಡಿಸಿ ಉಳಿದ ದೇವಸ್ಥಾನದ ಬಾಗಿಲು ಬಂದ್

    ಮಲೆ ಮಾದಪ್ಪನ ಹೊರತುಪಡಿಸಿ ಉಳಿದ ದೇವಸ್ಥಾನದ ಬಾಗಿಲು ಬಂದ್

    ಚಾಮರಾಜನಗರ: ಗ್ರಹಣದ ಹಿನ್ನೆಲೆ ಬೆಳಗ್ಗೆ 8ರಿಂದ 11:30ರವರೆಗೆ ಜಿಲ್ಲೆಯ ವಿವಿಧ ದೇವಸ್ಥಾನಗಳ ಬಾಗಿಲು ಮುಚ್ಚಲಾಗಿತ್ತು. ಆದರೆ ಕೇತುಗ್ರಸ್ಥ ಸೂರ್ಯ ಗ್ರಹಣವಿದ್ದರೂ ಸಹ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಎಂದಿನಂತೆ ಭಕ್ತರು ಮಾದಪ್ಪನ ದರ್ಶನ ಪಡೆದರು.

    ಬೆಳಗ್ಗೆ 8 ಗಂಟೆಗೂ ಮೊದಲೇ ಸ್ವಾಮಿಗೆ ವಿಶೇಷ ಪೂಜೆ ನಡೆಯಿತು. ದಾಸೋಹ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಇರಲಿಲ್ಲ. ಸಂಜೆ 4ರಿಂದ 7ರವರೆಗೆ ದೇಗುಲದಲ್ಲಿ ವಿಶೇಷ ಪೂಜೆ ಜರುಗುವುದರಿಂದ ಪ್ರಮುಖ ದ್ವಾರಗಳನ್ನು ಮುಚ್ಚಲಾಗಿತ್ತು. ಬಳಿಕ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು.

    ಯಳಂದೂರು ತಾಲೂಕಿನ ಬಿಳಿಗಿರಿ ರಂಗನಾಥಶಸ್ವಾಮಿ ದೇಗುಲವನ್ನು ಬೆಳಗ್ಗೆ 5.30ರಿಂದ 1 ಗಂಟೆಯವರೆಗೆ ಮುಚ್ಚಲಾಗಿತ್ತು. ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ಶ್ರಿರಂಗನಾಥಸ್ವಾಮಿ ಮತ್ತು ಸಮೂಹ ದೇವಾಲಯ ಪ್ರಸನ್ನ ಮೀನಾಕ್ಷಿ, ಸೋಮೇಶ್ವರ ಮತ್ತು ಆದಿಶಕ್ತಿ ಮಾರಮ್ಮನ ದೇವಾಲಯಗಳಲ್ಲಿ ಸೂರ್ಯಗ್ರಹಣ ಇರುವುದರಿಂದ ಇಂದು ಬೆಳಗ್ಗೆ 7 ರಿಂದ ಮಧ್ಯಾಹ್ನ 12.30ವರೆಗೆ ದೇವರ ದರ್ಶನಕ್ಕೆ ಅವಕಾಶವಿರಲಿಲ್ಲ.

    ಇತ್ತ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ, ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನವನ್ನು ಸೂರ್ಯಗ್ರಹಣ ಪೂರೈಸಿದ ನಂತರ ತೆರೆಯಲಾಯಿತು. ಗ್ರಹಣ ಕಾಲ ಕಳೆದ ನಂತರ ಬಾಗಿಲು ತೆರೆದ ದೇವಸ್ಥಾನಗಳಲ್ಲಿ ವಿಶೇಷ ಹೋಮ-ಹವನಗಳನ್ನು ನೆರವೇರಿಸಲಾಯಿತು.