Tag: Malegaon blast Case

  • ಅನೇಕ ಕೇಸ್‌ಗಳಲ್ಲಿ ಸಾಕ್ಷಿಯಿದ್ದರೂ ತದ್ವಿರುದ್ಧವಾಗಿ ತೀರ್ಪು ಬಂದಿವೆ – ಪ್ರಿಯಾಂಕ್ ಖರ್ಗೆ

    ಅನೇಕ ಕೇಸ್‌ಗಳಲ್ಲಿ ಸಾಕ್ಷಿಯಿದ್ದರೂ ತದ್ವಿರುದ್ಧವಾಗಿ ತೀರ್ಪು ಬಂದಿವೆ – ಪ್ರಿಯಾಂಕ್ ಖರ್ಗೆ

    ಬೆಂಗಳೂರು: ಅನೇಕ ಕೇಸ್‌ಗಳಲ್ಲಿ ಸಾಕ್ಷಿಗಳಿದ್ದರೂ ಕೂಡ ತದ್ವಿರುದ್ಧವಾಗಿ ತೀರ್ಪು ಬಂದಿರುವ ಉದಾಹರಣೆಗಳು ಇವೆ. ಮಾಲೆಗಾಂವ್ ಕೇಸ್‌ನಲ್ಲೂ (Malegaon Case) ಹೀಗೆ ಆಗಿದೆ ಎಂದು ಎನ್‌ಐಎ ಕೋರ್ಟ್ ತೀರ್ಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.ಇದನ್ನೂ ಓದಿ: ಸಚಿವ ರಾಜಣ್ಣ ಹನಿಟ್ರ‍್ಯಾಪ್ ಕೇಸ್ ಬಗ್ಗೆ ನನಗೇನು ಗೊತ್ತಿಲ್ಲ: ಡಿಕೆ ಶಿವಕುಮಾರ್

    ಮಾಲೆಗಾಂವ್ ಕೇಸ್‌ನಲ್ಲಿ ಆರೋಪಿಗಳ ಖುಲಾಸೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆದೇಶದ ಬಗ್ಗೆ ನಾನು ಸಂಪೂರ್ಣವಾಗಿ ನೋಡಿಲ್ಲ. ಆದರೆ ಇತ್ತೀಚೆಗೆ ಯಾವ ರೀತಿಯ ತೀರ್ಪುಗಳು ಬರುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಸಾಕ್ಷಿಗಳಿದ್ದರೂ ಕೂಡಾ ತದ್ವಿರುದ್ಧವಾಗಿ ತೀರ್ಪು ಬರುತ್ತಿವೆ. ಈ ರೀತಿ ತೀರ್ಪು ಬಂದಿರೋದು ಇದೇ ಮೊದಲಲ್ಲ. ವಿಶೇಷವಾಗಿ ಇಂತಹ ಕೇಸ್‌ಗಳಲ್ಲಿ ವಿರುದ್ಧವಾದ ತೀರ್ಪು ಬರುತ್ತಿವೆ ಎಂದು ವಾಗ್ದಾಳಿ ನಡೆಸಿದರು.

    2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿ 7 ಆರೋಪಿಗಳಿಗೂ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ತನಿಖೆಯೇ ಸರಿಯಾಗಿ ನಡೆದಿಲ್ಲ ಎಂದು ಎನ್‌ಐಎ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ 7 ಜನ ಆರೋಪಿಗಳ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ.ಇದನ್ನೂ ಓದಿ: ಮಾಲೆಗಾಂವ್ ಸ್ಫೋಟ ಕೇಸ್‌ನಿಂದ ನನ್ನ ಜೀವನವೇ ಹಾಳಾಯ್ತು: ಪ್ರಜ್ಞಾ ಠಾಕೂರ್

  • ಮಾಲೆಗಾಂವ್ ಸ್ಫೋಟ ಕೇಸ್‌ನಿಂದ ನನ್ನ ಜೀವನವೇ ಹಾಳಾಯ್ತು: ಪ್ರಜ್ಞಾ ಠಾಕೂರ್

    ಮಾಲೆಗಾಂವ್ ಸ್ಫೋಟ ಕೇಸ್‌ನಿಂದ ನನ್ನ ಜೀವನವೇ ಹಾಳಾಯ್ತು: ಪ್ರಜ್ಞಾ ಠಾಕೂರ್

    ಮುಂಬೈ: ಮಾಲೆಗಾಂವ್ ಸ್ಫೋಟ ಪ್ರಕರಣ (Malegaon Blast Case) ನನ್ನ ಜೀವನವನ್ನೇ ಹಾಳು ಮಾಡಿದೆ ಎಂದು ಬಿಜೆಪಿಯ (BJP) ಮಾಜಿ ಸಂಸದೆ ಪ್ರಜ್ಞಾ ಠಾಕೂರ್ (Pragya Thakur) ಹೇಳಿದ್ದಾರೆ. ಎನ್‌ಐಎ ವಿಶೇಷ ನ್ಯಾಯಾಲಯ ಆರೋಪಗಳಿಂದ ಖುಲಾಸೆಗೊಳಿಸಿದ ಬಳಿಕ ಅವರು ಪ್ರತಿಕ್ರಿಯೆ ನೀಡಿದರು.

    ತೀರ್ಪು ಪ್ರಕಟವಾದಾಗ ಅವರು ನ್ಯಾಯಾಲಯದಲ್ಲಿದ್ದರು. ಈ ವೇಳೆ, ನ್ಯಾಯಾಲಯವನ್ನು ಉದ್ದೇಶಿಸಿ, ಈ ಹಿಂದೆ ತನಿಖೆಗಾಗಿ ನನ್ನನ್ನು ಕರೆಸಿ, ಬಂಧಿಸಿ, ಚಿತ್ರಹಿಂಸೆ ನೀಡಲಾಯಿತು. ಇದರಿಂದ ನನ್ನ ಇಡೀ ಜೀವನವೇ ಹಾಳಾಯ್ತು. ನಾನು ಸಾಧ್ವಿ ಜೀವನವನ್ನು ನಡೆಸುತ್ತಿದ್ದೆ. ಆದರೆ ನನ್ನನ್ನು ಆರೋಪಿಯನ್ನಾಗಿ ಮಾಡಲಾಯಿತು. ಪಿತೂರಿಯಿಂದ ಕೇಸರಿಯನ್ನೂ ದೂಷಿಸಿದರು. ಇಂದು ಕೇಸರಿ, ಹಿಂದುತ್ವ ಗೆದ್ದಿದೆ. ತಪ್ಪಿತಸ್ಥರನ್ನು ದೇವರು ಶಿಕ್ಷಿಸುತ್ತಾನೆ. ನಾನು ಸನ್ಯಾಸಿಯಾಗಿರುವುದರಿಂದ ನಾನು ಜೀವಂತವಾಗಿದ್ದೇನೆ ಎಂದರು. ಇದನ್ನೂ ಓದಿ: Malegaon Blast Case | ಪ್ರಜ್ಞಾ ಠಾಕೂರ್ ಸೇರಿ 7 ಆರೋಪಿಗಳು ಖುಲಾಸೆ

    ಈ ಹಿಂದೆ ಪ್ರಕರಣದಲ್ಲಿ ನನ್ನನ್ನು ಬಂಧಿಸಿ ಚಿತ್ರಹಿಂಸೆ ನೀಡಲಾಗಿದೆ ಎಂದು ಅವರು ಆರೋಪಿಸಿದ್ದರು. ಈ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು 2014 ರಲ್ಲಿ ತನಿಖೆಗೆ ಆದೇಶಿಸಿತ್ತು. ಆದರೆ ಅವರ ಆರೋಪಗಳನ್ನು ಸಾಭೀತುಪಡಿಸಲು ಯಾವುದೇ ಪುರಾವೆಗಳು ಸಿಕ್ಕಿರಲಿಲ್ಲ.

    ಸೆಪ್ಟೆಂಬರ್ 29, 2008 ರಂದು ನಡೆದ ಮಾಲೆಗಾಂವ್ ಸ್ಫೋಟ ಬೈಕ್‌ನಲ್ಲಿ ಅಳವಡಿಸಲಾದ ಸ್ಫೋಟಕಗಳಿಂದ ಸಂಭವಿಸಿದೆ ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು. ಮುಂಬೈ ಭಯೋತ್ಪಾದನಾ ನಿಗ್ರಹ ದಳದ ತನಿಖೆಯ ಸಮಯದಲ್ಲಿ ಬೈಕ್‌ನ ಬಿಡಿ ಭಾಗಗಳನ್ನು ವಿಧಿವಿಜ್ಞಾನ ಪರೀಕ್ಷೆಗಳಿಗೆ ಕಳುಹಿಸಿ, ಎಂಜಿನ್ ಸಂಖ್ಯೆಯನ್ನು ಪುನಃಸ್ಥಾಪಿಸಿದ್ದವು. ಬೈಕ್ ಠಾಕೂರ್ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಅವರನ್ನು ಅ.23, 2008 ರಂದು ಬಂಧಿಸಲಾಗಿತ್ತು.‌ ಇದೀಗ ಪ್ರಜ್ಞಾ ಠಾಕೂರ್ ಸೇರಿದಂತೆ 7 ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಇದನ್ನೂ ಓದಿ: ಭಯೋತ್ಪಾದಕರನ್ನು ಬೆಳೆಸಿದ ಕಾಂಗ್ರೆಸ್, ಹಿಂದೂ ನಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದೆ: ಯೋಗಿ

  • Malegaon Blast Case | ಪ್ರಜ್ಞಾ ಠಾಕೂರ್ ಸೇರಿ 7 ಆರೋಪಿಗಳು ಖುಲಾಸೆ

    Malegaon Blast Case | ಪ್ರಜ್ಞಾ ಠಾಕೂರ್ ಸೇರಿ 7 ಆರೋಪಿಗಳು ಖುಲಾಸೆ

    ಮುಂಬೈ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ (Malegaon Blast Case) ಬಿಜೆಪಿಯ (BJP) ಮಾಜಿ ಸಂಸದೆ ಪ್ರಜ್ಞಾ ಠಾಕೂರ್ (Pragya Singh Thakur) ಸೇರಿ ಎಲ್ಲಾ 7 ಆರೋಪಿಗಳಿಗೂ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದ ತನಿಖೆಯೇ ಸರಿಯಾಗಿ ನಡೆದಿಲ್ಲ ಎಂದು ಎನ್‍ಐಎ ವಿಶೇಷ ಕೋರ್ಟ್ (NIA Court) ತೀರ್ಪು ಪ್ರಕಟಿಸಿದ್ದು, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ.

    ಏಪ್ರಿಲ್ 19ರಂದು ಪ್ರಕರಣದ ವಿಚಾರಣೆ ಮುಗಿಸಿದ್ದ ಕೋರ್ಟ್, ಮೇ 8ರಂದು ಕೋರ್ಟ್‌ನಲ್ಲಿ ಹಾಜರಿರುವಂತೆ ಆರೋಪಿಗಳಿಗೆ ಸೂಚಿಸಿತ್ತು. ನ್ಯಾಯಾಧೀಶರಾದ ಎ.ಕೆ.ಲಾಹೋಟಿ ಅವರು, ತೀರ್ಪು ಪ್ರಕಟಿಸಲು ಹೆಚ್ಚಿನ ಸಮಯ ಬೇಕು. ಜುಲೈ 31ರಂದು ಎಲ್ಲಾ ಆರೋಪಿಗಳು ಹಾಜರಿರಬೇಕು’ ಎಂದು ಆರೋಪಿಗಳಿಗೆ ತಿಳಿಸಿದ್ದರು. ಇದನ್ನೂ ಓದಿ: ಸಾಧ್ವಿ ಪ್ರಜ್ಞಾ ಸಿಂಗ್ ಪ್ರಚಾರಕ್ಕೆ ನಿರ್ಬಂಧ ಹೇರಿದ ಚುನಾವಣೆ ಆಯೋಗ

    ಏನಿದು ಪ್ರಕರಣ?
    2008ರ ಸೆ.29ರಂದು ರಂಜಾನ್ ಮಾಸದಲ್ಲಿ ನವರಾತ್ರಿ ಆಚರಣೆಗೆ ಮುಂಚಿನ ದಿನ ಬಾಂಬ್ ಸ್ಫೋಟ ನಡೆದಿತ್ತು.‌ ಈ ಸ್ಫೋಟದಲ್ಲಿ 6 ಜನರು ಮೃತಪಟ್ಟು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

    ಈ ಪ್ರಕರಣವನ್ನು ಮುಂಬೈ ಭಯೋತ್ಪಾದಕ ನಿಗ್ರಹ ಪಡೆ ಪ್ರಾಥಮಿಕ ತನಿಖೆ ನಡೆಸಿತ್ತು. ನಂತರ ತನಿಖೆಯ ಹೊಣೆಯನ್ನು ಎನ್‌ಐಎ ವಹಿಸಿಕೊಂಡಿತ್ತು. ಬಿಜೆಪಿ ಮಾಜಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್, ಮಾಜಿ ಸೇನಾಧಿಕಾರಿ ಪ್ರಸಾದ್ ಪುರೋಹಿತ್ (ನಿವೃತ್ತ), ಮೇಜರ್ ರಮೇಶ್ ಉಪಾಧ್ಯಾಯ (ನಿವೃತ್ತ) ಸೇರಿದಂತೆ ಏಳು ಮಂದಿ ಆರೋಪಿಗಳ ಮೇಲೆ ಐಪಿಸಿ, ಯುಎಪಿಎ ಅನ್ವಯ ಆರೋಪ ಹೊರಿಸಲಾಗಿತ್ತು. ಇದನ್ನೂ ಓದಿ: ಹಿಂದೂ ಎಂದಿಗೂ ಭಯೋತ್ಪಾದಕನಾಗಲು ಸಾಧ್ಯವಿಲ್ಲ: ಅಮಿತ್ ಶಾ

  • ಪ್ರಗ್ಯಾ ಸಿಂಗ್ ಠಾಕೂರ್ ಅರ್ಜಿ ತಿರಸ್ಕರಿಸಿದ ಎನ್‍ಐಎ ನ್ಯಾಯಾಲಯ

    ಪ್ರಗ್ಯಾ ಸಿಂಗ್ ಠಾಕೂರ್ ಅರ್ಜಿ ತಿರಸ್ಕರಿಸಿದ ಎನ್‍ಐಎ ನ್ಯಾಯಾಲಯ

    ಮುಂಬೈ: ಬಿಜೆಪಿ ಸಂಸದೆ ಹಾಗೂ ಮಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಸಲ್ಲಿಸಿದ್ದ ಅರ್ಜಿಯನ್ನು ಎನ್‍ಐಎ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಸ್ಫೋಟದ ಕುರಿತು ವಿಚಾರಣೆ ಸಮಯದಲ್ಲಿ ಪ್ರತಿಬಾರಿಯೂ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ಎನ್‍ಐಎ ವಿಶೇಷ ನ್ಯಾಯಾಲಯ ತಿಸ್ಕರಿಸಿದೆ.

    ಪ್ರಗ್ಯಾ ಸಿಂಗ್ ಠಾಕೂರ್ ಹಾಗೂ ಇತರ ಆರೋಪಿಗಳು ವಾರಕ್ಕೊಂದು ಬಾರಿ ಹಾಜರಿರುವಂತೆ ನ್ಯಾಯಾಲಯ ನಿರ್ದೇಶಿಸಿತ್ತು. ಆದ್ರೆ ಗುರುವಾರ ಮಾತ್ರ ಪ್ರಜ್ಞಾ ಸಿಂಗ್ ಹಾಜರಿಗೆ ನ್ಯಾಯಾಲಯ ವಿನಾಯ್ತಿಯನ್ನು ನೀಡಿತ್ತು.

    ಅನಾರೋಗ್ಯ, ಭೋಪಾಲ್‍ನಿಂದ ಮುಂಬೈಗೆ ಪ್ರಯಾಣ ಮತ್ತು ಸಂಸದೆಯ ಭದ್ರತೆ ದೃಷ್ಟಯಿಂದ ವಿಚಾರಣೆಗೆ ಪ್ರತಿ ಬಾರಿ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಪ್ರಗ್ಯಾ ಅವರು ಅರ್ಜಿ ಸಲ್ಲಿಸಿದ್ದರು. ಸಂಸತ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆ ಅಧಿವೇಶನಕ್ಕೆ ಹಾಜರಾಗದಿದ್ದರೆ ವಿಪ್ ಜಾರಿಗೊಳಿಸಲಾಗುತ್ತದೆ. ಹೀಗಾಗಿ ಪ್ರತಿ ಬಾರಿ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಇದೇ ವೇಳೆ ಪ್ರಜ್ಯಾ ಸಿಂಗ್ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

    ನ್ಯಾಯಾಧೀಶರಾದ ವಿನೋದ್ ಪಡಾಲ್ಕರ್ ಪಕ್ಷದ ನಿಯಮ ಪಾಲಿಸುವುದು ಹಾಗೂ ಸಂಸತ್‍ಗೆ ಹಾಜರಾಗುವುದು ಅಗತ್ಯ. ಆದರೆ ಈ ಕುರಿತು ಯಾವುದೇ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ ಎಂದು ಹೇಳಿದರು. ಪ್ರಗ್ಯಾ ಸಿಂಗ್ ಠಾಕೂರ್ ಅವರು ಕಳೆದ ಬಾರಿ ನ್ಯಾಯಾಲಯಕ್ಕೆ ಹಾಜರಾದಾಗ ಯಾವುದೇ ಸ್ಫೋಟದ ಬಗ್ಗೆ ನನಗೆ ತಿಳಿದಿಲ್ಲ ಎಂದು ತಿಳಿಸಿದ್ದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಹೇಮಂತ್ ಕರ್ಕರೆ ಸಾವಿನ ಬಗ್ಗೆ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆ ವೈಯಕ್ತಿಕ: ಬಿಜೆಪಿ

    ಹೇಮಂತ್ ಕರ್ಕರೆ ಸಾವಿನ ಬಗ್ಗೆ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆ ವೈಯಕ್ತಿಕ: ಬಿಜೆಪಿ

    – ದೈಹಿಕ, ಮಾನಸಿಕ ಹಿಂಸೆಗೆ ಹೇಳಿಕೆ ಕಾರಣವಾಗಿರಬಹುದು

    ನವದೆಹಲಿ: ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಹೇಮಂತ್ ಕರ್ಕರೆಯವರ ಸಾವಿನ ಕುರಿತಾಗಿ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಅವರ ಹೇಳಿಕೆ ವೈಯಕ್ತಿಕವಾಗಿದೆ ಎಂದು ಬಿಜೆಪಿ ಸ್ಪಷ್ಟನೆ ನೀಡಿದೆ.

    ಸಾಧ್ವಿ ಪ್ರಜ್ಞಾಸಿಂಗ್ ಅವರು ಜೈಲಿನಲ್ಲಿ ಅನುಭವಿಸಿದ ಮಾನಸಿಕ ಹಾಗೂ ದೈಹಿಕ ಹಿಂಸೆಗೆ ಈ ಹೇಳಿಕೆ ಕಾರಣವಾಗಿರಬಹುದು ಎಂದು ಬಿಜೆಪಿ ಅಭಿಪ್ರಾಯ ವ್ಯಕ್ತಪಡಿಸಿದೆ.

    ಸಾಧ್ವಿ ಪ್ರಜ್ಞಾಸಿಂಗ್ ಇತ್ತೀಚೆಗೆ ಬಿಜೆಪಿ ಸೇರಿದ್ದು, ಅವರಿಗೆ ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಹೇಮಂತ್ ಕರ್ಕರೆ ಸಾವಿನ ಕುರಿತು ಸಾಧ್ವಿ ಪ್ರಜ್ಞಾಸಿಂಗ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ವಿಪಕ್ಷ ನಾಯಕರು ಅಸಮಾಧಾನ ಹೊರಹಾಕಿದರು. ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದರು. ಇದರಿಂದಾಗಿ ಬಿಜೆಪಿಯು, ಈ ಹೇಳಿಕೆ ಅವರ ವೈಯಕ್ತಿಕ ವಿಚಾರವಾಗಿ ಎಂದು ಪ್ರತಿಕ್ರಿಯೆ ನೀಡಿದೆ.

    ಐಪಿಎಸ್ ಅಧಿಕಾರಿಗಳ ಸಂಘ ಕೂಡ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆಯನ್ನು ಖಂಡಿಸಿದೆ. ಅಶೋಕ್ ಚಕ್ರ ಪುರಸ್ಕೃತ ಹೇಮಂತ್ ಕರ್ಕರೆ ಅವರು ಉಗ್ರರೊಂದಿಗೆ ಹೋರಾಡಿ ಹುತಾತ್ಮರಾಗಿದ್ದಾರೆ. ಅವರ ಬಲಿದಾನವನ್ನು ಅವಮಾನಿಸಿದ ಅಭ್ಯರ್ಥಿಯ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

    ಸಾಧ್ವಿ ಪ್ರಜ್ಞಾಸಿಂಗ್ ಹೇಳಿದ್ದೇನು?:
    ಭೋಪಾಲ್‍ನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಾಧ್ವಿ ಪ್ರಜ್ಞಾಸಿಂಗ್ ಅವರು, 26/11 ಮುಂಬೈ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಹೇಮಂತ್ ಕರ್ಕರೆ ಸಾವನ್ನಪಿದ್ದು ನನ್ನ ಶಾಪದಿಂದಲೇ. ನೀನು ಸರ್ವನಾಶ ಆಗುತ್ತೀಯಾ ಎಂದು ಕರ್ಕರೆ ಅವರಿಗೆ ಶಾಪ ಹಾಕಿದ್ದೆ. ಆ ಶಾಪ ಅವರಿಗೆ ತಟ್ಟಿತು ಎಂದು ಹೇಳಿದ್ದರು.

    ಹೇಮಂತ್ ಕರ್ಕರೆ ಅವರು ಪದೇ ಪದೇ ನನ್ನನ್ನು ವಿಚಾರಣೆಗೆ ಒಳಪಡಿಸಿ, ಕಿರುಕುಳ ನೀಡುತ್ತಿದ್ದರು. ನಿರಪರಾಧಿಯಾಗಿದ್ದರಿಂದ ಅವರ ಪ್ರಶ್ನೆಗೆ ನನ್ನ ಬಳಿ ಉತ್ತರವೇ ಇರಲಿಲ್ಲ. ಹೀಗಾಗಿ ನಾನು ಅವರಿಗೆ ಶಪಿಸಿದ್ದೆ. ನನ್ನನ್ನು ಬಂಧಿಸಿದ 45 ದಿನಗಳ ನಂತರ ಕರ್ಕರೆ ಉಗ್ರರಿಂದ ಪ್ರಾಣ ಬಿಟ್ಟರು ಎಂದು ತಿಳಿಸಿದ್ದರು.

    ಇದಕ್ಕೂ ಮುನ್ನ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಅವರು ಮಾಲೇಗಾಂವ್ ಸ್ಫೋಟ ಪ್ರಕರಣ ನೆನೆದು ಕಣ್ಣೀರಿಟ್ಟಿದ್ದರು. ಮಾಲೇಗಾಂವ್ ಪ್ರಕರಣದಲ್ಲಿ ಮುಸ್ಲಿಮರನ್ನು ಹತ್ಯೆ ಮಾಡುವುದಕ್ಕಾಗಿಯೇ ಸ್ಫೋಟ ನಡೆಸಿದೆ ಅಂತ ತಪ್ಪೊಪ್ಪಿಕೊಳ್ಳಬೇಕು ಎಂದು ಜೈಲು ಅಧಿಕಾರಿಗಳು ಒತ್ತಾಯಿಸಿ ಕಿರುಕುಳ ನೀಡಿದ್ದರು. ವಿಚಾರಣೆ ಸಂಬಂಧ ಅಕ್ರಮವಾಗಿ ಬಂಧಿಸಿದ ಪೊಲೀಸರು, ನನಗೆ ಮುಳ್ಳಿನ ಬೆಲ್ಟ್‍ನಿಂದ ಹೊಡೆದರು. ಅಸಭ್ಯ ಭಾಷೆಯಲ್ಲಿ ಬೈದರು. ಅಷ್ಟೇ ಅಲ್ಲದೆ ಬಟ್ಟೆ ಕಳಚಿ ನಗ್ನಗೊಳಿಸುತ್ತೇವೆ ಎಂದು ಬೆದರಿಕೆ ಹಾಕಿದ್ದರು ಎಂದು ದೂರಿದ್ದರು.

    ನನ್ನನ್ನು 13 ದಿನಗಳ ಕಾಲ ಅಕ್ರಮವಾಗಿ ಬಂಧಿಸಿ ಇಡಲಾಗಿತ್ತು. ಬಂಧಿಸಿದ ಮೊದಲ ದಿನವೇ ನನ್ನ ಮೇಲೆ ಹಲ್ಲೆ ಮಾಡಲು ಆರಂಭಿಸಿದರು. ಬಳಿಕ ಹಗಲು ರಾತ್ರಿ ಎನ್ನದೇ ನನ್ನನ್ನು ಹೊಡೆಯುತ್ತಿದ್ದರು. ನನ್ನ ಕೈಯಲ್ಲಿ ರಕ್ತ ಬಂದರೂ ಎಂದು ಅವರು ಹೊಡೆಯುವುದನ್ನು ನಿಲ್ಲಿಸಿದರು. ಬಳಿಕ ಬಿಸಿ ನೀರು ತಂದು ಅದರಲ್ಲಿ ಉಪ್ಪು ಬೆರೆಸಿ ಕೈಗಳನ್ನು ಇರಿಸಿದರು. ಸ್ವಲ್ಪ ಗುಣಮುಖವಾಗುತ್ತಿದ್ದಂತೆ ಮತ್ತೆ ಹೊಡೆಯಲು ಆರಂಭಿಸಿದರು ಎಂದು ಜೈಲಿನಲ್ಲಿ ಕೊಟ್ಟ ಶಿಕ್ಷೆಯನ್ನು ನೆನೆದ್ದರು.

    ಏನಿದು ಪ್ರಕರಣ?:
    ಮಹಾರಾಷ್ಟ್ರದ ಮಾಲೇಗಾಂವ್‍ನಲ್ಲಿ 2008ರ ಸೆಪ್ಟೆಂಬರ್ ನಲ್ಲಿ ಸ್ಫೋಟ ನಡೆದಿತ್ತು. ಈ ವೇಳೆ 7 ಜನರು ಮೃತಪಟ್ಟಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಸಂಬಂಧ ಉಗ್ರ ನಿಗ್ರಹ ದಳವು ಕಣ್ಣೀರಿಟ್ಟ ಸಾಧ್ವಿ ಪ್ರಜ್ಞಾಸಿಂಗ್ ಅವರನ್ನು ಬಂಧಿಸಿತ್ತು. ಈ ಪ್ರಕರಣದ ಕುರಿತು 2011ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು ತನಿಖೆ ಆರಂಭಿಸಿತ್ತು. ಪ್ರಜ್ಞಾ ವಿರುದ್ಧ ಯಾವುದೇ ಸಾಕ್ಷಿಗಳು ಇಲ್ಲದೇ ಇರುವುದರಿಂದ ಅವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಕ್ಲೀನ್ ಚಿಟ್ ನೀಡಿತ್ತು.

  • ಮಾಲೇಗಾಂವ್ ಪ್ರಕರಣ: ಜೈಲಿನಲ್ಲಿ ಕೊಟ್ಟ ಕಿರುಕುಳ ಬಿಚ್ಚಿಟ್ಟು ಕಣ್ಣೀರಿಟ್ಟ ಸಾಧ್ವಿ ಪ್ರಜ್ಞಾಸಿಂಗ್

    ಮಾಲೇಗಾಂವ್ ಪ್ರಕರಣ: ಜೈಲಿನಲ್ಲಿ ಕೊಟ್ಟ ಕಿರುಕುಳ ಬಿಚ್ಚಿಟ್ಟು ಕಣ್ಣೀರಿಟ್ಟ ಸಾಧ್ವಿ ಪ್ರಜ್ಞಾಸಿಂಗ್

    ಭೋಪಾಲ್: ಮಧ್ಯ ಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಅವರು ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿಯಾಗಿದ್ದಾರೆ. ಹಿಂದೂ ಭಯೋತ್ಪಾದಕರಿಗೆ ಟಿಕೆಟ್ ನೀಡಿದ್ದು ಸರಿಯಲ್ಲ ಎಂದು ವಿಪಕ್ಷಗಳು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದವು. ಈ ಬೆನ್ನಲ್ಲೆ ಸಾಧ್ವಿ ಪ್ರಜ್ಞಾಸಿಂಗ್ ಅವರು ಮಾಲೇಗಾಂವ್ ಸ್ಫೋಟ ಪ್ರಕರಣ ನೆನೆದು ಕಣ್ಣೀರಿಟ್ಟಿದ್ದಾರೆ.

    ಮಾಲೇಗಾಂವ್ ಪ್ರಕರಣದಲ್ಲಿ ಮುಸ್ಲಿಮರನ್ನು ಹತ್ಯೆ ಮಾಡುವುದಕ್ಕಾಗಿಯೇ ಸ್ಫೋಟ ನಡೆಸಿದೆ ಅಂತ ತಪ್ಪೊಪ್ಪಿಕೊಳ್ಳಬೇಕು ಎಂದು ಜೈಲು ಅಧಿಕಾರಿಗಳು ಒತ್ತಾಯಿಸಿ ಕಿರುಕುಳ ನೀಡಿದ್ದರು. ವಿಚಾರಣೆ ಸಂಬಂಧ ಅಕ್ರಮವಾಗಿ ಬಂಧಿಸಿದ ಪೊಲೀಸರು, ನನಗೆ ಮುಳ್ಳಿನ ಬೆಲ್ಟ್‍ನಿಂದ ಹೊಡೆದರು. ಅಸಭ್ಯ ಭಾಷೆಯಲ್ಲಿ ಬೈದರು. ಅಷ್ಟೇ ಅಲ್ಲದೆ ಬಟ್ಟೆ ಕಳಚಿ ನಗ್ನಗೊಳಿಸುತ್ತೇವೆ ಎಂದು ಬೆದರಿಕೆ ಹಾಕಿದ್ದರು ಎಂದು ಸಾಧ್ವಿ ಪ್ರಜ್ಞಾಸಿಂಗ್ ದೂರಿದರು.

    ನನ್ನನ್ನು 13 ದಿನಗಳ ಕಾಲ ಅಕ್ರಮವಾಗಿ ಬಂಧಿಸಿ ಇಡಲಾಗಿತ್ತು. ಬಂಧಿಸಿದ ಮೊದಲ ದಿನವೇ ನನ್ನ ಮೇಲೆ ಹಲ್ಲೆ ಮಾಡಲು ಆರಂಭಿಸಿದರು. ಬಳಿಕ ಹಗಲು ರಾತ್ರಿ ಎನ್ನದೇ ನನ್ನನ್ನು ಹೊಡೆಯುತ್ತಿದ್ದರು. ನನ್ನ ಕೈಯಲ್ಲಿ ರಕ್ತ ಬಂದರೂ ಎಂದು ಅವರು ಹೊಡೆಯುವುದನ್ನು ನಿಲ್ಲಿಸಿದರು. ಬಳಿಕ ಬಿಸಿ ನೀರು ತಂದು ಅದರಲ್ಲಿ ಉಪ್ಪು ಬೆರೆಸಿ ಕೈಗಳನ್ನು ಇರಿಸಿದರು. ಸ್ವಲ್ಪ ಗುಣಮುಖವಾಗುತ್ತಿದ್ದಂತೆ ಮತ್ತೆ ಹೊಡೆಯಲು ಆರಂಭಿಸಿದರು ಎಂದು ಜೈಲಿನಲ್ಲಿ ಕೊಟ್ಟ ಶಿಕ್ಷೆಯನ್ನು ನೆನೆದರು.

    ಏನಿದು ಪ್ರಕರಣ?:
    ಮಹಾರಾಷ್ಟ್ರದ ಮಾಲೇಗಾಂವ್‍ನಲ್ಲಿ 20008ರ ಸೆಪ್ಟೆಂಬರ್ ನಲ್ಲಿ ಸ್ಫೋಟ ನಡೆದಿತ್ತು. ಈ ವೇಳೆ 7 ಜನರು ಮೃತಪಟ್ಟಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಸಂಬಂಧ ಉಗ್ರ ನಿಗ್ರಹ ದಳವು ಕಣ್ಣೀರಿಟ್ಟ ಸಾಧ್ವಿ ಪ್ರಜ್ಞಾಸಿಂಗ್ ಅವರನ್ನು ಬಂಧಿಸಿತ್ತು. ಈ ಪ್ರಕರಣದ ಕುರಿತು 2011ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು ತನಿಖೆ ಆರಂಭಿಸಿತ್ತು. ಪ್ರಜ್ಞಾ ವಿರುದ್ಧ ಯಾವುದೇ ಸಾಕ್ಷಿಗಳು ಇಲ್ಲದೇ ಇರುವುದರಿಂದ ಅವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಕ್ಲೀನ್ ಚಿಟ್ ನೀಡಿತ್ತು.