Tag: mallikarjuna kharge

  • ಅಧಿಕಾರ ಚುಕ್ಕಾಣಿಗೂ ಮುನ್ನ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ಖರ್ಗೆ

    ಅಧಿಕಾರ ಚುಕ್ಕಾಣಿಗೂ ಮುನ್ನ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ಖರ್ಗೆ

    ನವದೆಹಲಿ: ಕಾಂಗ್ರೆಸ್ (Congress) ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಮುನ್ನ ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಇಂದು ರಾಜ್‍ಘಾಟ್‍ನಲ್ಲಿ (Rajghat) ಮಹಾತ್ಮ ಗಾಂಧಿ (Mahatma Gandhi) ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

    ನವದೆಹಲಿಯಲ್ಲಿ (New Delhi) ಇಂದು ನಡೆಯುವ ಸಮಾರಂಭದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು, 24 ವರ್ಷಗಳಲ್ಲೇ ಮೊದಲ ಬಾರಿಗೆ ಗಾಂಧಿಯೇತರ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಮಾಣಪತ್ರ ವಿತರಿಸಲಿದ್ದಾರೆ. ಅಲ್ಲದೇ ಈ ಕಾರ್ಯಕ್ರಮದಲ್ಲಿ ಭಾರತ್ ಜೋಡೋ (Bharat Jodo Yatra) ಪಾದಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿ ಅವರು ಕೂಡ ಪಾಲ್ಗೊಳ್ಳಲಿದ್ದಾರೆ.

    ಎಐಸಿಸಿ ಅಧ್ಯಕೀಯ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 415 ಮತಗಳನ್ನು ಅಮಾನ್ಯಗೊಳಿಸಲಾಗಿತ್ತು. ಈ ಪೈಕಿ 7,897 ಮತಗಳನ್ನು ಪಡೆದ ಮಲ್ಲಿಕಾರ್ಜುನ ಖರ್ಗೆ ಜಯಭೇರಿ ಭಾರಿಸಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ಶಶಿ ತರೂರ್ 1,072 ಮತಗಳನ್ನು ಪಡೆದು ಸೋಲನ್ನು ಅನುಭವಿಸಿದರು.

    ಗಾಂದಿ ಕುಟುಂಬಕ್ಕೆ ಆಪ್ತರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು, ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಕೇಂದ್ರ ಕ್ಯಾಬಿನೆಟ್ ಸಚಿವ- ಕಾರ್ಮಿಕ ಮತ್ತು ಉದ್ಯೋಗ, ರೈಲ್ವೆ ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರಗಳಲ್ಲಿ ವಿವಿಧ ಖಾತೆಗಳನ್ನು ಹೊಂದಿದ್ದಲ್ಲದೇ ಮತ್ತು ಕರ್ನಾಟಕ ಕಾಂಗ್ರೆಸ್‍ನ ಅಧ್ಯಕ್ಷರೂ ಮತ್ತು ರಾಜ್ಯ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದಾರೆ. ಇಷ್ಟಾದರೂ ಮನೋಧರ್ಮ ಮತ್ತು ಸ್ವಭಾವದಿಂದ ಸಮಚಿತ್ತರಾಗಿರುವ ಖರ್ಗೆ ಅವರು, ಯಾವುದೇ ರಾಜಕೀಯ ವಿವಾದಕ್ಕೀಡಾಗಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಗಾಂಧಿ ಪರಿವಾರ ಪವರ್ ಸೆಂಟರ್ ಅಲ್ಲ, ಅಧ್ಯಕ್ಷನಾದ ಬಳಿಕವೂ ಸಲಹೆ ಪಡೆಯುತ್ತೇನೆ: ಖರ್ಗೆ

    ಗಾಂಧಿ ಪರಿವಾರ ಪವರ್ ಸೆಂಟರ್ ಅಲ್ಲ, ಅಧ್ಯಕ್ಷನಾದ ಬಳಿಕವೂ ಸಲಹೆ ಪಡೆಯುತ್ತೇನೆ: ಖರ್ಗೆ

    ನವದೆಹಲಿ : ಎಐಸಿಸಿ ಅಧ್ಯಕ್ಷರಾದ (AICC President) ಬಳಿಕವೂ ಸೋನಿಯಾಗಾಂಧಿ (Sonia Gandhi), ರಾಹುಲ್ ಗಾಂಧಿ (Rahul Gandhi) ಮಾರ್ಗದರ್ಶನ ಸಲಹೆ ಪಡೆದುಕೊಂಡು ಪಕ್ಷವನ್ನು ಸಂಘಟನೆ ಮಾಡುತ್ತೇನೆ. ಇದರಲ್ಲಿ ನಾಚಿಕೆಪಡುವ ವಿಷಯ ಏನಿದೆ ಎಂದು ಎಐಸಿಸಿ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಪ್ರಶ್ನಿಸಿದ್ದಾರೆ.

    ನವದೆಹಲಿಯಲ್ಲಿ (New Delhi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಂಧಿ ಪರಿವಾರ ಕಾಂಗ್ರೆಸ್ (Congress) ಪಕ್ಷವನ್ನು ಕಟ್ಟಲು ಸಾಕಷ್ಟು ತ್ಯಾಗ ಮಾಡಿದೆ, ಬಲಿದಾನ ಕೊಟ್ಟಿದೆ. ಸೋನಿಯಾಗಾಂಧಿ, ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ಮಾರ್ಗದರ್ಶನ ಪಡೆಯುವುದರಲ್ಲಿ ತಪ್ಪೇನಿದೆ. ಅವರಿಂದ ಮಾರ್ಗದರ್ಶನ ಪಡೆದ ತಕ್ಷಣ ಕಾಂಗ್ರೆಸ್‍ನಲ್ಲಿ ಎರಡು ಪವರ್ ಸೆಂಟರ್ ಕೂಡಾ ಸೃಷ್ಟಿಯಾಗಲ್ಲ, ಅಧ್ಯಕ್ಷನ ಕರ್ತವ್ಯವನ್ನು ನಾನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಸಂಬಂಧಿಕರ ಮನೆಗೆ ಬಂದಿದ್ದವ ಮಟನ್‍ಶಾಪ್‍ನಲ್ಲಿ ಅನುಮಾನಾಸ್ಪದವಾಗಿ ಸಾವು

    ಚುನಾವಣೆ ಸ್ಪರ್ಧೆ ಬಗ್ಗೆ ಮಾತನಾಡಿದ ಅವರು, ನಾನಾಗಿಯೇ  ಅಪೇಕ್ಷೆ ಪಟ್ಟು ನಿಂತಿರುವ ಚುನಾವಣೆಯಲ್ಲ, ನಮ್ಮ ಎಲ್ಲ ನಾಯಕರು ಒತ್ತಾಯ ಮಾಡಿದ ಮೇಲೆ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಈಗಾಗಲೇ ಹತ್ತು ರಾಜ್ಯಗಳಲ್ಲಿ ಪ್ರವಾಸ ಮಾಡಿದ್ದೇನೆ. ಇನ್ನು ಒಂದಿಷ್ಟು ರಾಜ್ಯಗಳು ಬಾಕಿ ಇದೆ. ಸಂಪ್ರದಾಯದಂತೆ ರಾಜ್ಯಗಳಿಗೆ ಭೇಟಿ ಮಾಡಿ ಮತ ಕೇಳುತ್ತಿದ್ದೇನೆ. ನಮ್ಮ ರಾಜ್ಯದ ಹಲವು ನಾಯಕರಿಗೂ ಫೋನ್‍ನಲ್ಲಿ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಬಿಜೆಪಿ ಕಾರ್ಪೊರೇಟರ್ ಪತಿ ಮೇಲೆ ಪೌರಕಾರ್ಮಿಕರಿಂದ ಹಲ್ಲೆ

    ನಂತರ ಪ್ರತಿಸ್ಪರ್ಧಿ ಶಶಿ ತರೂರ್ (Shashi Tharoor) ಬಗ್ಗೆ ಮಾತನಾಡಿದ ಅವರು, ನಾನು ಯಾವ ನಾಯಕರಿಗೂ ನನ್ನ ಬಳಿ ಬನ್ನಿ ಎಂದು ಕರೆದಿಲ್ಲ. ಅವರಾಗಿಯೇ ಬಂದು ಬೆಂಬಲ ನೀಡುತ್ತಿದ್ದಾರೆ. ಅವರು ನಾನು ಅಂತಾರೆ, ನಾನು ನಾವು ಎನ್ನುತ್ತೇನೆ. ನಾವು ಎಂದರೇ ಮಾತ್ರ ಪಕ್ಷಕ್ಕೆ ಒಳ್ಳೆಯದು, ನನ್ನೊಬ್ಬನ ಕೈಯಿಂದ ಎಲ್ಲವೂ ಸಾಧ್ಯವಿಲ್ಲ, ಇದು ವೈಯಕ್ತಿಕ ಹೋರಾಟ ಅಲ್ಲ, ಈ ಹೋರಾಟಕ್ಕೆ ಜಿ23 ನಾಯಕರು ಬೆಂಬಲ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 2005ರಲ್ಲೇ ನಾನು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷನಾಗಬೇಕೆಂದು ಸೋನಿಯಾ ಬಯಸಿದ್ದರು: ಮಲ್ಲಿಕಾರ್ಜುನ ಖರ್ಗೆ

    2005ರಲ್ಲೇ ನಾನು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷನಾಗಬೇಕೆಂದು ಸೋನಿಯಾ ಬಯಸಿದ್ದರು: ಮಲ್ಲಿಕಾರ್ಜುನ ಖರ್ಗೆ

    ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು 2005ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥರಾಗುವಂತೆ ನನ್ನನ್ನು ಕೇಳಿದ್ದರು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge)  ಹೇಳಿದ್ದಾರೆ.

    ಈಶಾನ್ಯ ಭಾಗದ ಕಾಂಗ್ರೆಸ್ (Congress) ಸದಸ್ಯರನ್ನುದ್ದೇಶಿಸಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2005ರಲ್ಲಿ ಸೋನಿಯಾ ಗಾಂಧಿಯವರು ತಮ್ಮನ್ನು ಸಭೆಗೆ ಕರೆದು, ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸುವಂತೆ ಕೇಳಿಕೊಂಡಿದ್ದರು. ಅಲ್ಲದೇ ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥರಾಗಲು ಅವರು ನನ್ನ ಹೆಸರನ್ನು ಮೂರು ಬಾರಿ ಸೂಚಿಸಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 2ನೇ ದಿನವೂ ಒತ್ತುವರಿ ತೆರವು- ಕೆಆರ್‌ಪುರ, ಮಹದೇವಪುರದಲ್ಲಿ ಆಪರೇಷನ್

    ಪ್ರಸ್ತುತ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಇರುವ ಬೆನ್ನೆಲೆ ತಮ್ಮ ರಾಜಕೀಯ ಪಯಣದ ಬಗ್ಗೆ ಖರ್ಗೆ ಈ ರೀತಿಯೆಲ್ಲಾ ಮಾತನಾಡುತ್ತಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದೆ. ಇದನ್ನೂ ಓದಿ: ಕಾಶಿ ಮಾದರಿಯಲ್ಲೇ ಉಜ್ಜೈನಿ ಮಹಾಕಾಲೇಶ್ವರ ಅಭಿವೃದ್ಧಿ- ಜ್ಯೋತಿರ್ಲಿಂಗಕ್ಕೆ ಮೋದಿ ಪೂಜೆ

    Live Tv
    [brid partner=56869869 player=32851 video=960834 autoplay=true]

  • ಕಚ್ಚಾಟ ಬಿಡಿ, ಎಲೆಕ್ಷನ್ ಗೆಲ್ಲಿಸಿ – ಮುಂದಿನ ಸಿಎಂ ಚರ್ಚೆಗೆ ಬ್ರೇಕ್ ಹಾಕಿದ ರಾಗಾ

    ಕಚ್ಚಾಟ ಬಿಡಿ, ಎಲೆಕ್ಷನ್ ಗೆಲ್ಲಿಸಿ – ಮುಂದಿನ ಸಿಎಂ ಚರ್ಚೆಗೆ ಬ್ರೇಕ್ ಹಾಕಿದ ರಾಗಾ

    ಬೆಂಗಳೂರು: ರಾಜ್ಯ ಕಾಂಗ್ರೆಸ್ (Congress) ಒಳಗೆ ನಡೆಯುತ್ತಿರೋ ಮುಂದಿನ ಸಿಎಂ ಚರ್ಚೆಗೆ ರಾಹುಲ್ ಗಾಂಧಿ (Rahul Gandhi) ತೆರೆ ಎಳೆದಿದ್ದಾರೆ. ಚುನಾವಣೆ ಗೆದ್ದ ಬಳಿಕವೇ ಮುಂದಿನ ಸಿಎಂ (Chief Minister) ಆಯ್ಕೆ ಬಗ್ಗೆ ನಿರ್ಧಾರ ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ. ಅಷ್ಟೇ ಅಲ್ಲ, ಸಂಘರ್ಷ ಬದಿಗಿಟ್ಟು ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಎಂದು ರಾಜ್ಯನಾಯಕರಿಗೆ ರಾಹುಲ್ ಗಾಂಧಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

    ತುರುವೇಕೆರೆ ತಾಲ್ಲೂಕಿನ ಅರಕರೆಪಾಳ್ಯದಲ್ಲಿ ಮಾಧ್ಯಮದವರೊಂದಿಗೆ ನಡೆದ ಸಂವಾದದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ಅವರು, ಸಿದ್ದರಾಮಯ್ಯ (Siddaramaiah), ಡಿಕೆಶಿ (DK Shivakumar), ಜಿ.ಪರಮೇಶ್ವರ್ ಸಮ್ಮುಖದಲ್ಲೇ ರಾಹುಲ್ ಗಾಂಧಿ ಖಡಕ್ ಸಂದೇಶ ರವಾನಿಸಿದ್ದಾರೆ. ಮುಂದಿನ ಸಿಎಂ ಜಟಾಪಟಿಗೆ ರಾಹುಲ್ ತೆರೆ ಎಳೆಯುವ ಕಸರತ್ತು ನಡೆಸಿದ್ದಾರೆ. ಮುಂದಿನ ಸಿಎಂ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಈಗ ನಡೀತಿರೋ ಮುಂದಿನ ಸಿಎಂ ವಿಚಾರ ಪಕ್ಷದ ವ್ಯವಸ್ಥೆಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಮುಂದಿನ ಚುನಾವಣೆಯಲ್ಲಿ (Election) ಕಾಂಗ್ರೆಸ್ ಪಕ್ಷ ಗೆಲ್ಲಲಿದ್ದು, ಗೆದ್ದ ಬಳಿಕವೇ ಮುಂದಿನ ಸಿಎಂ ಯಾರು ಅಂತ ನಿರ್ಧಾರವಾಗಲಿದೆ ಎಂದಿದ್ದಾರೆ. ಗೆದ್ದ ಬಳಿಕ ಮುಂದಿನ ಸಿಎಂ ಆಯ್ಕೆ ಬಗ್ಗೆ ಪಕ್ಷದ ಪದ್ಧತಿಯಂತೆ ಚರ್ಚಿಸಿ ನಿರ್ಧರಿಸಲಾಗುವುದು ಅಂತ ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ.

    ಅಷ್ಟೇ ಅಲ್ಲ ಪಕ್ಷದಲ್ಲಿ ನಡೆಯುತ್ತಿರುವ ನಾನಾ ನೀನಾ ಸಂಘರ್ಷಕ್ಕೂ ತೆರೆ ಎಳೆಯಲು ರಾಹುಲ್ ಗಾಂಧಿ ಮುಂದಾಗಿದ್ದಾರೆ. ಸಂಘರ್ಷ ಮರೆತು ಎಲ್ಲರೂ ಒಟ್ಟಾಗಿ ಕೆಲಸ ಮಾಡಿ. ಒಗ್ಗಟ್ಟು ಕಾಯ್ದುಕೊಂಡು, ಭಿನ್ನಾಭಿಪ್ರಾಯ ಮರೆತು ಎಲ್ಲರೂ ಚುನಾವಣೆಗೆ ಕೆಲಸ ಮಾಡಲೇಬೇಕಾಗುತ್ತದೆ ಎಂದು ರಾಹುಲ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇದನ್ನೂ ಓದಿ: ಟಿಪ್ಪು ಹೆಸರೇ ಗೊಂದಲದಲ್ಲಿದೆ, ಹಾಗಾಗಿ ಟ್ರೈನ್‌ನ ಹೆಸರು ಬದಲಿಸಿದ್ದೇವೆ: ನಳೀನ್ ಕುಮಾರ್ ಕಟೀಲ್

    ಇನ್ನು ಯಾರೇ ಎಐಸಿಸಿ ಅಧ್ಯಕ್ಷರಾದರೂ ಗಾಂಧಿ ಕುಟುಂಬದಲ್ಲಿ ರಿಮೋಟ್ ಕಂಟ್ರೋಲ್ ಇರುತ್ತೆ ಎಂಬ ಆರೋಪವನ್ನು ತಳ್ಳಿಹಾಕಿದ ರಾಹುಲ್, ಎಐಸಿಸಿ ಚುನಾವಣೆ ಬಗ್ಗೆ ನಾನು ಯಾವುದೇ ಹೇಳಿಕೆ ಕೊಡಲ್ಲ. ನಾಮಪತ್ರ ಸಲ್ಲಿಸಿರುವ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಯವರು  ಮತ್ತು ಶಶಿ ತರೂರ್ ಅವರು ಇಬ್ಬರಿಗೂ ಪಕ್ಷದಲ್ಲಿ ಉನ್ನತ ಹುದ್ದೆಗಳಿವೆ, ಗೌರವ ಇದೆ. ಇವರಿಬ್ಬರಲ್ಲಿ ಯಾರೇ ಗೆದ್ದರೂ ಅವರು ನಮ್ಮ ರಿಮೋಟ್ ಕಂಟ್ರೋಲ್ ಆಗಿರ್ತಾರೆ ಅಂತ ನನಗೆ ಅನಿಸಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

    ಮ್ಯಾಜಿಕ್ ನಂಬರ್ ಬರದಿದ್ರೆ ಜೆಡಿಎಸ್ (JDS) ಜತೆ ಮೈತ್ರಿನಾ ಎಂದು ಕೇಳಿದ ಪ್ರಶ್ನೆಗೆ, ಇದರ ಬಗ್ಗೆ ಸಿದ್ದರಾಮಯ್ಯ, ಡಿಕೆಶಿಯೇ ಉತ್ತರ ಕೊಡ್ತಾರೆ. ಚುನಾವಣೆಯಲ್ಲಿ ನಾವೇ ಗೆಲ್ತೇವೆ ಅಂತ ಜಾರಿಕೊಂಡ್ರು. ಕೈ ನಾಯಕರು ಬೇಲ್ ಮೇಲಿದ್ದಾರೆ ಎಂಬ ಬಿಜೆಪಿ (BJP) ಆರೋಪಕ್ಕೆ, ವಿರೋಧ ಪಕ್ಷಗಳ ಮೇಲೆ ದಾಳಿ ಮಾಡಲು ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ತಿದೆ. ಇದರಿಂದಲೇ ಸರ್ಕಾರಗಳನ್ನು ಬೀಳಿಸುವ ರಾಜಕಾರಣ ಮಾಡ್ತಿದೆ. ಇದೇ ಎಲ್ಲ ಸಮಸ್ಯೆಗಳಿಗೂ ಕಾರಣ ಅಂತ ತಿರುಗೇಟು ನೀಡಿದರು. ಇದನ್ನೂ ಓದಿ: `ಕೆಲವೇ ಕ್ಷಣಗಳಲ್ಲಿ ವಿಧಾನಸೌಧ ಬ್ಲಾಸ್ಟ್’ – ಬೆದರಿಕೆ ಕರೆ ಮಾಡಿದ್ದ ಟೆಕ್ಕಿ ಅರೆಸ್ಟ್

    ಭಾರತ್ ಜೋಡೋ ಯಾತ್ರೆ ಇಂದು ತುಮಕೂರು ಪ್ರವೇಶಿಸಿದ್ದು, 7ನೇ ದಿನ ಮುಗಿಸಿದೆ. ರಾಹುಲ್ ಗೆ ಪರಮೇಶ್ವರ್, ಕೆ.ಎನ್ ರಾಜಣ್ಣ ಸೇರಿ ಹಲವು ತುಮಕೂರು ಕೈ ನಾಯಕರು ಸಾಥ್ ಕೊಟ್ಟಿದ್ರು. ಮಧ್ಯಾಹ್ನದ ಹೊತ್ತಿಗೆ ಡಿಕೆಶಿ ಬಂದು ಸೇರಿಕೊಂಡರು. ತುರುವೇಕೆರೆಯಲ್ಲಿ ಪಾದಯಾತ್ರೆಗೆ ಭಾರೀ ಜನಸ್ತೋಮ ಜಮಾಯಿಸಿತ್ತು. ಒಟ್ಟಿನಲ್ಲಿ ರಾಹುಲ್ ಗಾಂಧಿ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆಯನ್ನಷ್ಟೇ ನಡೆಸ್ತಿಲ್ಲ. ಯಾತ್ರೆಯ ಜತೆಗೆ ರಾಜ್ಯ ಕಾಂಗ್ರೆಸ್ ನಾಯಕರನ್ನು ಜೋಡಿಸುವ ಕೆಲಸವನ್ನು ಸಹ ಮಾಡ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ರೇಸ್‌ನಿಂದ ಗೆಹ್ಲೋಟ್ ಹೊರಕ್ಕೆ?

    ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ರೇಸ್‌ನಿಂದ ಗೆಹ್ಲೋಟ್ ಹೊರಕ್ಕೆ?

    ಜೈಪುರ: ತೀವ್ರ ರಾಜಕೀಯ ಬಿಕ್ಕಟ್ಟು (Rajasthan Political Crisis) ಹಾಗೂ ಕಾಂಗ್ರೆಸ್‌ನ (Congress) ಆಂತರಿಕ ಕಲಹಗಳ ಕಾರಣದಿಂದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ರಾಷ್ಟ್ರೀಯ ಕಾಂಗ್ರೆಸ್ (AICC) ಅಧ್ಯಕ್ಷೀಯ ಚುನಾವಣೆ (Election) ರೇಸ್‌ನಿಂದ ಹೊರಗುಳಿಯಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಪ್ರಸ್ತುತ ಅಶೋಕ್ ಗೆಹ್ಲೋಟ್ ಅವರು ಹಿಂದೆ ಸರಿಯುತ್ತಿದ್ದಂತೆ ಉನ್ನತ ನಾಯಕತ್ವಕ್ಕಾಗಿ ಪಕ್ಷದ ಹಿರಿಯ ನಾಯಕರಾದ ಕೆ.ಸಿ ವೇಣುಗೋಪಾಲ್ (KC Venugopal), ದಿಗ್ವಿಜಯ ಸಿಂಗ್ ಹಾಗೂ ಮಲ್ಲಿಕಾರ್ಜುನ ಖರ್ಗೆ ರೇಸ್‌ನಲ್ಲಿದ್ದು, ಸೆಪ್ಟೆಂಬರ್ 30 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂಬುದಾಗಿ ಹೆಸರು ಹೇಳಲಿಚ್ಚಿಸದ ಕಾಂಗ್ರೆಸ್ ಮುಖಂಡರು (Congress Leader) ತಿಳಿಸಿದ್ದಾರೆ. ಇದನ್ನೂ ಓದಿ: 10 YouTube ಚಾನೆಲ್‌ನ ವೀಡಿಯೋಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ

    ಸದ್ಯ ರಾಜಸ್ಥಾನದಲ್ಲಿ ಉಂಟಾದ ಬಿಕ್ಕಟ್ಟಿನಿಂದ ರಾಹುಲ್ ಗಾಂಧಿ (Rahul Gandhi) ಅಸಮಾಧಾನಗೊಂಡಿದ್ದು, ಅಶೋಕ್ ಗೆಹ್ಲೋಟ್ ಸಹ ಇದಕ್ಕೆ ಕ್ಷಮೆಯಾಚಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    ನಿನ್ನೆ ರಾತ್ರಿಯಿಂದ ಶುರುವಾದ ಹೈಡ್ರಾಮಾ ಈವರೆಗೂ ನಿಂತಿಲ್ಲ. ಅಶೋಕ್ ಗೆಹ್ಲೋಟ್‌ರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿ.. ಅವರ ಸ್ಥಾನದಲ್ಲಿ ಸಚಿನ್ ಪೈಲಟ್ (SachinPilot) ತರಲು ಪ್ಲಾನ್ ಮಾಡಿದ್ದ ಹೈಕಮಾಂಡ್, ನಿನ್ನೆ ರಾತ್ರಿ ಸಿಎಲ್‌ಪಿ ಸಭೆ ಕರೆದಿತ್ತು. ಆದ್ರೆ, ಪೈಲಟ್ ಸಿಎಂ ಆಗಬಾರದು ಎಂದು ಪಟ್ಟು ಹಿಡಿದಿರುವ ಅಶೋಕ್ ಗೆಹ್ಲೋಟ್, ತಮ್ಮ ಬೆಂಬಲಿಗರನ್ನು ಮುಂದೆ ಬಿಟ್ಟು ಹೈಕಮಾಂಡ್‌ಗೆ ಸೆಡ್ಡು ಹೊಡೆದ್ರು. ಗೆಹ್ಲೋಟ್ ಬೆಂಬಲಿಸಿ 92 ಶಾಸಕರು ರಾಜೀನಾಮೆಗೆ ರೆಡಿ ಆಗಿದ್ದರು. ಇದನ್ನೂ ಓದಿ: ಮಗು ಏಕೆ ಕಪ್ಪಾಗಿದೆ ಎಂದು ಪತ್ನಿಯನ್ನೇ ಕೊಂದ ಪತಿ- ಎರಡೂವರೆ ವರ್ಷದ ಮಗುವಿನಿಂದ ಬಯಲಾಯ್ತು ರಹಸ್ಯ

    ಸಚಿನ್ ಪೈಲಟ್ ಸಿಎಂ ಆದ್ರೆ ಪಕ್ಷಕ್ಕೆ ಪಂಜಾಬ್ ಸ್ಥಿತಿ ಬರುತ್ತೆ ಎಂದು ನೇರ ಎಚ್ಚರಿಕೆ ಕೊಟ್ರು. ಕಾಂಗ್ರೆಸ್ ವೀಕ್ಷಕರಾದ ಮಲ್ಲಿಕಾರ್ಜುನ ಖರ್ಗೆ, ಅಜಯ್ ಮಕೇನ್ ಮಾಡಿದ ಪ್ರಯತ್ನಗಳೆಲ್ಲ ವ್ಯರ್ಥ ಆಗಿವೆ. ಶಾಸಕರನ್ನು ಪ್ರತ್ಯೇಕವಾಗಿ ಕರೆದು ಮಾತನಾಡಿಸೋ ಪ್ರಯತ್ನವೂ ಫೇಲ್ ಆಗಿದೆ. ಸದ್ಯ ಅಶೋಕ್ ಗೆಹ್ಲೋಟ್ ಅವರು ಎಐಸಿಸಿ ಅಧ್ಯಕ್ಷೀಯ ಚುನಾವಣೆ ರೇಸ್‌ನಿಂದ ಹಿಂದೆ ಸರಿದರೆ ರಾಜಾಸ್ಥಾನ ಮುಖ್ಯಮಂತ್ರಿಯಾಗಿಯೇ ಮುಂದುವರಿಯಲಿದ್ದಾರೆ. ಆದರೆ ಚುನಾವಣೆಯಿಂದ ಹಿಂದೆ ಸರಿಯುವ ಬಗ್ಗೆ ಯಾವುದೇ ಅಧಿಕೃತ ಗೇಳಿಕೆಗಳು ಕೇಳಿಬಂದಿಲ್ಲ.

    ಬಂಡಾಯ ಶಾಸಕರ ಬೇಡಿಕೆ ಏನು?
    ಅಶೋಕ್ ಗೆಹ್ಲೋಟ್ ರಾಜೀನಾಮೆ ನೀಡಬಾರದು. ಏಕವ್ಯಕ್ತಿ ಏಕ ಹುದ್ದೆ ಎನ್ನುವುದಾದ್ರೆ ಈ 92 ಶಾಸಕರಲ್ಲಿ ಹಿರಿಯರನ್ನು ಅರ್ಹರನ್ನು ಸಿಎಂ ಮಾಡಬೇಕು. ಒಂದು ವೇಳೆ ಸಚಿನ್ ಪೈಲಟ್‌ಗೆ ಸಿಎಂ ಸ್ಥಾನ ನೀಡಿದ್ದಲ್ಲಿ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಶಾಸಕರು ಬೇಡಿಕೆ ಇಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಿಂದೂ ಅಸ್ತಿತ್ವಕ್ಕಾಗಿ ಶಸ್ತ್ರಾಸ್ತ್ರ ಹಿಡಿಯುವಂತಾಗಿದೆ: ಯತಿ ನರಸಿಂಹಾನಂದ ವಿರುದ್ಧ ಖರ್ಗೆ ಕಿಡಿ

    ಹಿಂದೂ ಅಸ್ತಿತ್ವಕ್ಕಾಗಿ ಶಸ್ತ್ರಾಸ್ತ್ರ ಹಿಡಿಯುವಂತಾಗಿದೆ: ಯತಿ ನರಸಿಂಹಾನಂದ ವಿರುದ್ಧ ಖರ್ಗೆ ಕಿಡಿ

    ನವದೆಹಲಿ: ದೇಶದಲ್ಲಿ ಅಲ್ಪ ಸಂಖ್ಯಾತರ ವಿರುದ್ಧ ದ್ವೇಷ ಭಾಷಣಗಳ ನಿದರ್ಶನಗಳನ್ನು ಕಾಂಗ್ರೆಸ್ ರಾಜ್ಯಸಭೆಯಲ್ಲಿ ಎತ್ತಿ ಹಿಡಿದಿದ್ದು, ಧಾರ್ಮಿಕ ಮುಖಂಡ ಯತಿ ನರಸಿಂಹಾನಂದ ಅವರ ಪ್ರಚೋದಿತ ಭಾಷಣವನ್ನು ಖಂಡಿಸಿದೆ.

    ಉಪರಾಷ್ಟçಪತಿ ಎಂ.ವೆಂಕಯ್ಯನಾಯ್ಡು ಅವರು ನಿಯಮ -267ರ ಅಡಿಯಲ್ಲಿ ಸಮಸ್ಯೆಯನ್ನು ಪ್ರಸ್ತಾಪಿಸಲು ಅವಕಾಶ ನೀಡಲಿಲ್ಲವಾದರೂ, ನಿರ್ದಿಷ್ಟ ಅಲ್ಪಸಂಖ್ಯಾತ ಸಮುದಾಯದ ಹತ್ಯೆಗೆ ಕರೆಗೆ ಸಂಬಂಧಿಸಿದ ಉಲ್ಲೇಖಗಳನ್ನು ದಾಖಲೆಗಳಿಂದ ತೆಗೆದುಹಾಕುವಂತೆ ಸೂಚಿಸಿದ್ದರು. ಇದನ್ನೂ ಓದಿ: ಮುಸ್ಲಿಮನೊಬ್ಬ ಪ್ರಧಾನಿಯಾದರೆ ಶೇ.50ರಷ್ಟು ಹಿಂದೂಗಳು ಮತಾಂತರಗೊಳ್ಳುತ್ತಾರೆ: ಯತಿ ನರಸಿಂಹಾನಂದ್

    yathi

    ಈ ಸಂಬಂಧ ರಾಜ್ಯಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಯತಿ ನರಸಿಂಹಾನಂದ ಅವರು ಹರಿದ್ವಾರದಿಂದ ದೆಹಲಿಯವರೆಗೂ ಪ್ರಚೋದನಕಾರಿ ಭಾಷಣಗಳನ್ನು ಮಾಡುತ್ತಿದ್ದಾರೆ. ಯಾವುದೇ ಸಮುದಾಯ, ಅಲ್ಪಸಂಖ್ಯಾತ ಅಥವಾ ಬಹುಸಂಖ್ಯಾತರ ವಿರುದ್ಧ ಯಾರೂ ದ್ವೇಷಪೂರಿತ ಭಾಷಣಗಳನ್ನು ಮಾಡಬಾರದು. ಆದರೆ ಅರ್ಚಕರ ಮಾತಿನಿಂದ ಭಾನುವಾರ ಮತ್ತೊಂದು ಗದ್ದಲ ಉಂಟಾಗಿದೆ. ಹಿಂದೂಗಳು ತಮ್ಮ ಅಸ್ತಿತ್ವಕ್ಕಾಗಿ ಶಸ್ತ್ರಾಸ್ತ್ರ ಹಿಡಿಯುವಂತೆ ಪ್ರೇರೇಪಿಸಿದೆ ಎಂಬುದನ್ನು ನಿದರ್ಶನಗಳೊಂದಿಗೆ ಉಲ್ಲೇಖಿಸಿದರು. ಇದನ್ನೂ ಓದಿ:  ಮೈಕ್ ತೆಗೆಸದಿದ್ದರೆ, ನಾವೂ ಬೆಳಗ್ಗೆ 5ಕ್ಕೆ ಮಂದಿರಗಳಲ್ಲಿ ಈಶ್ವರನ ಭಜನೆ, ಓಂಕಾರ ಹಾಕಿಸುತ್ತೇವೆ: ಮುತಾಲಿಕ್

    ಯಾರೂ ಯಾವುದೇ ಒಂದು ಸಮುದಾಯದ ವಿರುದ್ಧ ಮಾತನಾಡುವಂತಿಲ್ಲ, ಹಾಗಾಗಿ ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

  • ನಿತಿನ್ ಗಡ್ಕರಿಯನ್ನು ಹಾಡಿ ಹೊಗಳಿದ ಮಲ್ಲಿಕಾರ್ಜುನ ಖರ್ಗೆ

    ನಿತಿನ್ ಗಡ್ಕರಿಯನ್ನು ಹಾಡಿ ಹೊಗಳಿದ ಮಲ್ಲಿಕಾರ್ಜುನ ಖರ್ಗೆ

    ಧಾರವಾಡ: ನಾನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಹಳಷ್ಟು ಸಂತೋಷವಾಗಿ ಬಂದಿದ್ದೇನೆ. ಅವರಿಂದ ನಾನು ಯಾವುದೇ ರಾಜಕೀಯವಾಗಿ ಲಾಭವನ್ನು ನಿರೀಕ್ಷೆ ಮಾಡುತ್ತಿಲ್ಲ. ನಿತಿನ್ ಗಡ್ಕರಿ ಅಭಿವೃದ್ಧಿ ಪರ ಇರುವ ವ್ಯಕ್ತಿ ಎಂದು ಅವರನ್ನು ರಾಜ್ಯ ಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಡಿ ಹೊಗಳಿದ್ದಾರೆ.

    ಹೊಸ ರಸ್ತೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿತಿನ್ ಗಡ್ಕರಿ ಕರ್ನಾಟಕದಿಂದ ಯಾವುದೇ ಮನವಿಯನ್ನು ನೀಡಿದರು ಶೀಘ್ರವಾಗಿ ಜಾರಿ ಮಾಡತ್ತಾರೆ. ಅವರ ಕಾರ್ಯ ವೈಖರಿ ಮೆಚ್ಚಿ ಅಭಿನಂದನೆ ಸಲ್ಲಿಸಲು ಬಂದಿದ್ದೇನೆ. ಅವರು ಯಾವಾಗಲೂ ಅಭಿವೃದ್ಧಿ ಬಗ್ಗೆ ಮಾತನಾಡುತ್ತಾರೆ. ಆದರೆ ಬೇರೆಯವರು ಬರೀ ರಾಜಕೀಯ ಮಾಡುತ್ತಾರೆ ಎಂದರು. ಇದನ್ನೂ ಓದಿ: ಅಮೆರಿಕ ಮಾದರಿ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ: ನಿತಿನ್ ಗಡ್ಕರಿ ಭರವಸೆ

    ಅನೇಕ ಮಂತ್ರಿಗಳು ಅವರ ಕ್ಷೇತ್ರಕ್ಕೆ ತೆರಳಿದರು ಗೌರವ ಸೀಗುತ್ತಿಲ್ಲ. ಗಡ್ಕರಿ ಅವರು ಬಹಳಷ್ಟು ಯೋಜನೆ ಹಾಕಿಕೊಂಡು ಕೆಲಸ ಮಾಡುತ್ತಿದ್ದರು ಆದರೆ ಇತ್ತಿಚೆಗೆ ಅವರ ಯೋಜನೆಯಲ್ಲಿ ಯಾಕೋ ತಡವಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ವಿದ್ಯುತ್ ಪೂರೈಕೆ ಉಚಿತವಲ್ಲ, ಬಿಲ್ ಪಾವತಿಸದಿದ್ದರೆ ಕರೆಂಟ್ ಕಟ್ : ನಿತಿನ್ ರಾವತ್

    ನಿತಿನ್ ಗಡ್ಕರಿ ಅವರಿಗೆ ಹಣ ಎಲ್ಲಿಂದ ಬರುತ್ತೆ ಹೇಗೆ ಬರುತ್ತೆ ಅದನ್ನು ಹೇಗೆ ಉಪಯೋಗ ಮಾಡಬೇಕು ಅಂತ ಬಹಳಷ್ಟು ಚೆನ್ನಾಗಿ ಗೊತ್ತು. ಅವರಿಗೆ ನಾನು ದೆಹಲಿಯಲ್ಲಿದ್ದಾಗ ಕೆಲವು ಪ್ರಸ್ತಾವನೆಗಳನ್ನಿಟ್ಟಿದೆ. ಅವರು ನಮ್ಮ ಪಕ್ಷ ಕಚೇರಿಗೆ ಬಂದು ನನ್ನ ಪತ್ರಗಳು ತೆಗೆದುಕೊಂಡು ಹೋಗಿ ಎಲ್ಲಾ ಬೇಡಿಕೆಗೆ ಸ್ಪಂದನೆ ಮಾಡಿದರು. ಇದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಅರ್ಪಿಸುವ ನಿಟ್ಟಿನಲ್ಲಿ ಇಲ್ಲಿಗೆ ಬಂದಿದ್ದೇನೆ ಎಂದರು.

  • 40 ಅಲ್ಲ, 4 ಜನ ಶಾಸಕರನ್ನ ಕಾಂಗ್ರೆಸ್ ಸೆಳೆಯಲಿ ನೋಡೋಣ, ಸಾಯೋ ಪಾರ್ಟಿಗೆ ಯಾರು ಹೋಗ್ತಾರೆ?:ಈಶ್ವರಪ್ಪ

    40 ಅಲ್ಲ, 4 ಜನ ಶಾಸಕರನ್ನ ಕಾಂಗ್ರೆಸ್ ಸೆಳೆಯಲಿ ನೋಡೋಣ, ಸಾಯೋ ಪಾರ್ಟಿಗೆ ಯಾರು ಹೋಗ್ತಾರೆ?:ಈಶ್ವರಪ್ಪ

    ಕಲಬುರಗಿ: ಬಿಜೆಪಿ ಎಂಎಲ್‍ಎಗಳು ಸಿಂಹ ಇದ್ದ ಹಾಗೇ, ನಮ್ಮ ಶಾಸಕರು ಮಾರಾಟದ ವಸ್ತುಗಳಲ್ಲ. ಬಿಜೆಪಿಯ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಮಾತೇ ಇಲ್ಲ. 40 ಅಲ್ಲ, 4 ಜನ ಶಾಸಕರನ್ನು ಕಾಂಗ್ರೆಸ್ ಪಕ್ಷ ಸೆಳೆಯಲಿ ನೋಡೋಣ. ಸಾಯುವ ಪಕ್ಷಕ್ಕೆ ಯಾರಾದರೂ ಹೋಗ್ತಾರಾ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

    ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಜಾಬ್‍ನಲ್ಲಿ ಕಾಂಗ್ರೆಸ್ ಪಕ್ಷ ಒಡೆದು ಹೋದರೆ, ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಪೀಸ್, ಪೀಸ್ ಆಗುತ್ತದೆ. ಕಾಂಗ್ರೆಸ್ ಪಕ್ಷ ಮೊದಲು ತನ್ನ ಅಸ್ತಿತ್ವ ಉಳಿಸಿಕೊಳ್ಳುವ ಕೆಲಸ ಮಾಡಲಿ. ಕಾಂಗ್ರೆಸ್ ಈ ಹಿಂದೆ ಮಾಡಿದ ಕೆಲಸಗಳ ಬಗ್ಗೆ ಪಟ್ಟಿ ಕೊಡಲಿ, ನಂತರ ನಾವು ಕೊಡುತ್ತೇವೆ. ಅನೇಕ ರಾಷ್ಟ್ರಗಳ ಮುಸ್ಲಿಂರು ಬಿಜೆಪಿ ಪಕ್ಷಕ್ಕೆ ಬೆಂಬಲ ಘೋಷಿಸಿದ್ದಾರೆ. ಜೆಡಿಎಸ್ ಪಕ್ಷ ಮುಸ್ಲಿಂರನ್ನು ಚುನಾವಣೆಗೆ ನಿಲ್ಲಿಸಿದರೆ ಕಾಂಗ್ರೆಸ್‍ಗೆ ಭಯವಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ವೀಡಿಯೋ- ಕೈ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು

    ಈಶ್ವರಪ್ಪ ತಂಟೆಗೆ ನಾನು ಹೋಗುವುದಿಲ್ಲ ಎನ್ನುವ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಏನು ಮಾತನಾಡುತ್ತೇನೆ ಅಂತ ಅವರಿಗೆ ಗೊತ್ತಿದೆ. ಅದಕ್ಕಾಗಿ ಅವರು ನನ್ನ ತಂಟೆಗೆ ಬರಲ್ಲ. ಇನ್ನಾದರೂ ಏಕ ವಚನದಲ್ಲಿ ಮಾತನಾಡುವುದನ್ನು ನಿಲ್ಲಿಸಲಿ. ಡಿ.ಕೆ.ಶಿವಕುಮಾರ್ ಅವರನ್ನು ಯಾವ ಹುಚ್ಚ ಆಸ್ಪತ್ರೆಗೆ ಸೇರಿಸಬೇಕು. ನಲವತ್ತು ಜನ ಶಾಸಕರು ಬಿಜೆಪಿಯಿಂದ ಕಾಂಗ್ರೆಸ್ ಗೆ ಬರುತ್ತಾರೆ ಅಂತ ಹೇಳುತ್ತಾರೆ. ನಾಲ್ಕು ಜನ ಶಾಸಕರು ಕೂಡಾ ಹೋಗುವುದಿಲ್ಲ. ಸಾಯುವ ಪಾರ್ಟಿಗೆ ಯಾರು ಹೋಗುತ್ತಾರೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊಲೆ ಪ್ರಕರಣ ದಾಖಲು

    ಬಹುತೇಕ ಕಡೆ ಕಾಂಗ್ರೆಸ್ ಅಭ್ಯರ್ಥಿಗಳು ಡಿಪಾಜಿಟ್ ಕಳೆದುಕೊಳ್ಳುತ್ತಾರೆ. ಚುನಾವಣೆ ಬಂದರೆ ಕಾಂಗ್ರೆಸ್‍ನವರು ನಡುಗಿ ಹೋಗುತ್ತಾರೆ. ಬೇರೆ ಮನೆಯವರನ್ನು ಹುಡುಕಿಕೊಂಡು ಬಂದು ಟಿಕೆಟ್ ನೀಡುತ್ತಾರೆ. ಕಾಂಗ್ರೆಸ್ ನಲ್ಲಿ ಕಾರ್ಯಕರ್ತರೇ ಇಲ್ವಾ? ಎರಡು ಉಪ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಿಮ್ಮ ಧೈರ್ಯಕ್ಕೆ ಅವರು ಹೆದರುತ್ತಾರೆ – ಪ್ರಿಯಾಂಕಾಗೆ ಧೈರ್ಯ ತುಂಬಿದ ಸಹೋದರ ರಾಹುಲ್

    ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ತುಂಬಾ ಗೌರವ ಇದೆ. ಖರ್ಗೆ ಅವರು  ಸುಮ್ಮನೆ ಏನೂ ಮಾತಾನಾಡುವುದಿಲ್ಲ. ಆದರೆ ವಿಶ್ವವೇ ಮೆಚ್ಚಿದ ನಾಯಕ ಮೋದಿ ಬಗ್ಗೆ ಚಿಲ್ಲರೆ ವ್ಯಕ್ತಿ ಅಂತಾ ಮಾತಾಡಿದ್ದಾರೆ.ವಿಶ್ವನಾಯಕನ ಬಗ್ಗೆ ಚಿಲ್ಲರೆ ಎಂದರೆ ವಿಶ್ವದ ಜನ ಏನಂತಾರೆ? ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಖಾಯಂ ಭದ್ರತಾ ಸದಸ್ಯತ್ವ ಸಿಕ್ಕಿದೆ. ಕೇಂದ್ರ ಸಂಪುಟದಲ್ಲಿ 27 ಜನ ದಲಿತರಿಗೆ ಸಚಿವ ಸ್ಥಾನ ಮೋದಿ ನೀಡಿದ್ದಾರೆ. ಈ ಹಿಂದಿನ ಪ್ರಧಾನಿಗಳು ವಿದೇಶಕ್ಕೆ ಹೋದಾಗ ಸಾಲ ಕೇಳಲು ಭಾರತ ಪ್ರಧಾನಿ ಬಂದಿದ್ದಾರೆ ಅಂತಿದ್ದರು. ಪ್ರಧಾನಿ ಮೋದಿ ಚಿಲ್ಲರೆ ಮನುಷ್ಯ ಅಲ್ಲ, ಮೋದಿ ಚಿನ್ನದ ಗಟ್ಟಿ. ರಾಜ್ಯದಲ್ಲಿ 27 ಸಂಸದರನ್ನು ಆಯ್ಕೆ ಮಾಡಿದ ಜನರು ಚಿಲ್ಲರೆನಾ? ಎಂದು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಹರಿಹಾಯಿದ್ದಾರೆ.

  • ನನಗೆ 70 ವರ್ಷ ತುಂಬಿದೆ, ನನ್ನ ಬದಲಿಗೆ ಯುವಕರಿಗೆ ಲಸಿಕೆ ನೀಡಿ: ಖರ್ಗೆ

    ನನಗೆ 70 ವರ್ಷ ತುಂಬಿದೆ, ನನ್ನ ಬದಲಿಗೆ ಯುವಕರಿಗೆ ಲಸಿಕೆ ನೀಡಿ: ಖರ್ಗೆ

    ನವದೆಹಲಿ: ನನಗೆ 70 ವರ್ಷ ತುಂಬಿದೆ. ನನ್ನ ಬದಲಿಗೆ ಬಾಳಿಬದುಕುವ ಯುವಕರಿಗೆ ಲಸಿಕೆ ಕೊಡಿ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

    ಇಂದು ದೇಶಾದ್ಯಂತ ಹಿರಿಯ ನಾಗರಿಕರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಈ ಕುರಿತಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಖರ್ಗೆ, ನನಗೆ ಈಗಾಗಲೇ 70 ವರ್ಷ ಮೀರಿದೆ. ಅಬ್ಬಾಬ್ಬಾ ಎಂದರೆ ನಾನು ಇನೊಂದು 5-10 ವರ್ಷ ಬದುಕಿರಬಹುದು. ಹಾಗಾಗಿ ನನ್ನ ಬದಲಿಗೆ ಹೆಚ್ಚಿನ ಆಯುಷ್ಯವನ್ನು ಹೊಂದಿರುವ ಯುವಕರಿಗೆ ಲಸಿಕೆ ನೀಡಿ ಎಂದು ಪ್ರತಿಕ್ರಿಯಿಸಿದ್ದಾರೆ.

    ಭಾರತ್ ಬಯೋಟೆಕ್ ಅಭಿವೃದ್ಧಿ ಪಡಿಸಿರುವ ಲಸಿಕೆಯನ್ನು ಬೆಳಗ್ಗೆಯಿಂದ ದೇಶಾದ್ಯಂತ ಹಿರಿಯ ನಾಗರಿಕರಿಗೆ ನೀಡಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಬಿಹಾರದ ಸಿಎಂ ನಿತೀಶ್ ಕುಮಾರ್, ಒಡಿಶಾ ಮುಖ್ಯಮಂತ್ರಿ ನವೀನ್ ಪಾಟ್ನಾಯಕ್ ಸೇರಿದಂತೆ ಹಲವಾರು ಗಣ್ಯಾತಿಗಣ್ಯರು ಆಸ್ಪತ್ರೆಗಳಿಗೆ ಭೇಟಿ ನೀಡಿ ಲಸಿಕೆ ಹಾಕಿಸಿಕೊಂಡಿದ್ದಾರೆ.

  • ಖರ್ಗೆಗೆ ಸಿಎಂ ಸ್ಥಾನ ತಪ್ಪಿಸಿದ್ದು ನಾನಲ್ಲ, ದೇವೇಗೌಡರಿಗೆ ಗೊತ್ತಿದ್ರೆ ಹೆಸರು ಹೇಳಲಿ- ಸಿದ್ದು ಸವಾಲು

    ಖರ್ಗೆಗೆ ಸಿಎಂ ಸ್ಥಾನ ತಪ್ಪಿಸಿದ್ದು ನಾನಲ್ಲ, ದೇವೇಗೌಡರಿಗೆ ಗೊತ್ತಿದ್ರೆ ಹೆಸರು ಹೇಳಲಿ- ಸಿದ್ದು ಸವಾಲು

    – ದೇವೇಗೌಡರು ಪಾಪ ಎಂದ ಸಿದ್ದರಾಮಯ್ಯ

    ಮೈಸೂರು: ಸಿಎಂ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಹೆಸರು ತಿರಸ್ಕರಿಸಿದ್ದು ನಾನಂತೂ ಅಲ್ಲ. ಯಾರು ಅವರ ಹೆಸರು ತಿರಸ್ಕಾರ ಮಾಡಿದರು ಎಂದು ಮಾಜಿ ಪ್ರಧಾನಿ ದೇವೇಗೌಡರೇ ಹೇಳಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

    ಖರ್ಗೆ ಸಿಎಂ ಆಗುವ ಅವಕಾಶ ಇತ್ತು ಎಂಬ ದೇವೇಗೌಡರ ಹೇಳಿಕೆ ಪ್ರತಿಕ್ರಿಸಿದ ಸಿದ್ದರಾಮಯ್ಯ, ನಾನಂತು ಖರ್ಗೆ ಹೆಸರು ತಿರಸ್ಕಾರ ಮಾಡಿಲ್ಲ. ಯಾರು ಮಾಡಿದರು ಎಂದು ನನಗೆ ಗೊತ್ತಿಲ್ಲ. ದೇವೇಗೌಡರಿಗೆ ಗೊತ್ತಿದ್ದರೆ ಹೆಸರು ಹೇಳಲಿ ಎಂದು ಸವಾಲು ಎಸೆದರು.

    ಸಿದ್ದರಾಮಯ್ಯ ಪಕ್ಷ ಕಟ್ಟಿಲ್ಲ ಎಂಬ ದೇವೇಗೌಡರ ಹೇಳಿಕೆ ಕುರಿತು ಮಾತನಾಡಿ, ದೇವೇಗೌಡರು ಪಾಪ, ಅವರ ಬಗ್ಗೆ ನಾನು ಪ್ರತಿಕ್ರಿಯೆ ನೀಡಬಾರದು ಅಂದುಕೊಂಡಿದ್ದೇನೆ. 1999ರಲ್ಲಿ ಜೆಡಿಎಸ್ ಅಧ್ಯಕ್ಷರಾಗಿದ್ದು ಯಾರು? 6 ವರ್ಷಗಳ ಕಾಲ ಜೆಡಿಎಸ್ ಅಧ್ಯಕ್ಷನಾಗಿದ್ದು ನಾನು. ಹಾಗಾದರೆ ನಾನು ಅಧ್ಯಕ್ಷನಾಗಿದ್ದು ವ್ಯರ್ಥನಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

    ಕುರುಬರನ್ನು ಎಸ್‍ಟಿ ಮೀಸಲಾತಿ ಪಟ್ಟಿಗೆ ಸೇರಿಸಬೇಕೆಂದು ಡಿಸೆಂಬರ್ 29ಕ್ಕೆ ಮೈಸೂರಿನಲ್ಲಿ ನಡೆಯುತ್ತಿರುವ ಹೋರಾಟ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೋರಾಟದ ಅಗತ್ಯವೇ ಇಲ್ಲ. ಇದು ಕುರುಬರನ್ನು ಇಬ್ಭಾಗ ಮಾಡುವ ಹುನ್ನಾರ. ನಾನು ಸಿಎಂ ಆಗಿದ್ದಾಗಲೇ ಕುಲಶಾಸ್ತ್ರ ಅಧ್ಯಯನಕ್ಕೆ ಶಿಫಾರಸು ಮಾಡಿದ್ದೆ. ಈಶ್ವರಪ್ಪ, ವಿಶ್ವನಾಥ್ ಇಬ್ಬರೂ ಬಿಜೆಪಿ ಸರ್ಕಾರದಲ್ಲಿದ್ದಾರೆ. ಎರಡೂ ಕಡೆ ಅವರದ್ದೇ ಸರ್ಕಾರ ಇದೆ. ಅವರು ಕುಲಶಾಸ್ತ್ರ ಅಧ್ಯಯನ ವರದಿ ಪಡೆದು ಕೇಂದ್ರಕ್ಕೆ ಶಿಫಾರಸು ಮಾಡಿಸಲಿ. ಇದು ಕುರುಬರನ್ನ ಇಬ್ಭಾಗ ಮಾಡುವ ಆರ್‍ಎಸ್‍ಎಸ್ ಹುನ್ನಾರವಾಗಿದೆ. ಇದಕ್ಕೆ ಹೋರಾಟದ ಅಗತ್ಯ ಇಲ್ಲ. ಯಾರ ವಿರುದ್ಧ ಹೋರಾಟ ಮಾಡುತ್ತಾರೆ? ಅವರದ್ದೇ ಸರ್ಕಾರದ ವಿರುದ್ಧ ಹೋರಾಟ ಯಾಕೆ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

    ಗ್ರಾ.ಪಂ ಚುನಾವಣೆ ಹಿನ್ನೆಲೆ ವರುಣಾ ಹೋಬಳಿಯ ಅವರ ಸ್ವಗ್ರಾಮ ಸಿದ್ದರಾಮನಹುಂಡಿಗೆ ಆಗಮಿಸಿ ಸಿದ್ದರಾಮಯ್ಯ ಮತಚಲಾಯಿಸಿದರು. ಮಾಸ್ಕ್ ಧರಿಸಿ ಸಿದ್ದರಾಮನಹುಂಡಿ ಸರ್ಕಾರಿ ಶಾಲೆ ಮತಗಟ್ಟೆ ಸಂಖ್ಯೆ 138ರಲ್ಲಿ ಮತ ಚಲಾವಣೆ ಮಾಡಿದರು.