Tag: Malnad

  • ಮಲೆನಾಡು – ಪ್ರಕೃತಿಯ ಆರಾಧನೆಯ ಭಾಗವಾಗಿ ನಾಗರ ಪಂಚಮಿ

    ಮಲೆನಾಡು – ಪ್ರಕೃತಿಯ ಆರಾಧನೆಯ ಭಾಗವಾಗಿ ನಾಗರ ಪಂಚಮಿ

    ಳೆ ಬಂದು ನಾಗರ ಕಲ್ಲು ತೊಳೆದು ಆಯ್ತು ಇನ್ನೂ ಪೂಜೆ ಆಗಿಲ್ಲ! ಹೀಗೆ ಹಣ್ಣು ಕಾಯಿ ತಯಾರಿ ಮಾಡ್ಕೊಳ್ತ ಹಿರಿಕರು ನಾಗರ ಪಂಚಮಿಯಂದು (Nagara Panchami) ಸಾಮಾನ್ಯವಾಗಿ ಹೇಳುವ ಮಾತಿದು.

    ಹೀಗೆ ಮಲೆನಾಡಿನಲ್ಲಿ (Malnad) ನಾಗರ ಪಂಚಮಿಯ ದಿನ ಮಳೆ ಬಂದೇ ಬರುತ್ತೆ. ಮಳೆ ನಾಗರಕಲ್ಲನ್ನು ತೊಳೆದ ಬಳಿಕ ಪೂಜೆ ನಡೆಸಲಾಗುತ್ತದೆ. ಈ ನಂಬಿಕೆ ನಮ್ಮ ಜನರ ಮತ್ತು ಪ್ರಕೃತಿಯ ನಡುವಿನ ಆಳವಾದ ಸಂಬಂಧ ಯಾವ ಮಟ್ಟದ್ದು ಎಂಬುದಕ್ಕೆ ಸಾಕ್ಷಿ ಕೂಡ ಹೌದು. ಊರ ಹೊರಗಿನ ಕಾಡಿನ ಭಾಗದಲ್ಲಿರುವ ನಾಗರ ಕಟ್ಟೆಗೆ ಅಥವಾ ಅರಳಿ ಮರದ ಕೆಳಗಿನ ನಾಗರ ಮೂರ್ತಿಗೆ ಪೂಜೆ ಮಾಡಲಾಗುತ್ತದೆ. ಈ ಹಬ್ಬ ಪ್ರಕೃತಿಯ ಆರಾಧನೆ ಒಂದು ಭಾಗವಾಗಿ ಮಲೆನಾಡಲ್ಲಿ ಕಂಡು ಬರುತ್ತದೆ.

    ಹಾಗೆ ನಾಗನಿಗೆ ಮಲೆನಾಡಿನ ಭಾಗದಲ್ಲಿ ಗುಡಿಗಳು ಕಡಿಮೆ. ಹಾಗೆ ನೆಲದ ಮೇಲೋ, ಅಥವ ಕಟ್ಟೆಯ ಮೇಲೆ ನಾಗರ ಕಲ್ಲುಗಳಿರುತ್ತವೆ. ಶತಶತಮಾನದ ನಾಗರ ಕಲ್ಲುಗಳು ಮಲೆನಾಡಿನ ಮೂಲೆ ಮೂಲೆಯಲ್ಲೂ ಕಾಣ ಸಿಗುತ್ತವೆ. ಅವು ಎಷ್ಟರ ಮಟ್ಟಿಗೆ ಹಳೆಯದ್ದು ಎಂದರೆ ಸವೆದು ಪೆನ್ಸಿಲ್‍ನ ಗೆರೆಯಂತೆ ಕಾಣುವ ಕಲ್ಲುಗಳು ಇವೆ! ಅವುಗಳನ್ನು ಯಾವುದೇ ರೀತಿಯ ಪುನರ್‍ನಿರ್ಮಾಣ ಮಾಡಲಾಗುವುದಿಲ್ಲ. ಅವು ಇದ್ದಂತೆಯೇ ಪೂಜೆಗಳು ನಡೆಯುತ್ತವೆ. ನಾಗರ ಪಂಚಮಿ ಬಳಿಕ ದೀಪಾವಳಿಗೆ ಇದೇ ನಾಗರ ಕ್ಲಲುಗಳಿಗೆ ಪೂಜೆ ನಡೆಯುತ್ತದೆ. ಬಳಿಕ ಒಂದು ವರ್ಷದ ವರೆಗೂ ಯಾವ ಪೂಜೆಗಳನ್ನು ಇವುಗಳಿಗೆ ಮಾಡಲಾಗುವುದಿಲ್ಲ. ಮತ್ತೆ ನಾಗರ ಪಂಚಮಿಗೆ ಅವುಗಳಿಗೆ ಪೂಜೆ ಮತ್ತು ನೈವೇದ್ಯ!

    ಆದಿನದ ವಿಶೇಷವಾಗಿ ಪೂಜೆಗೆ ಹೂವು, ಹಣ್ಣು, ಹಾಲು ಹಾಗೂ ನೈವೇದ್ಯಕ್ಕೆ ರವೆ ಉಂಡೆ ಇಡಲಾಗುತ್ತದೆ. ಕೇದಿಗೆ ಹೂವು ವಿಶೇಷವಾಗಿ ಪೂಜೆಗೆ ಬಳಕೆ ಆಗುತ್ತದೆ. ಇನ್ನೂ ಹುತ್ತದ ಆರಾಧನೆ ಎಲ್ಲೂ ಕಂಡು ಬರುವುದಿಲ್ಲ. ಆ ದಿನ ರಾತ್ರಿ ಕೈಗೆ ಮದರಂಗಿ ಹಚ್ಚುವಂಥಹ ಪದ್ಧತಿ ಇದೆ. ಈ ಬಗ್ಗೆ ಒಂದು ಮಾತಿದೆ, ಹಾವಿನ ಹಬ್ಬದಲ್ಲಿ ಹಚ್ಚಿದ ಮದರಂಗಿ ಗೋವಿನ ಹಬ್ಬದ ತನಕ ಇರಬೇಕು ಎನ್ನಲಾಗುತ್ತದೆ. ಗೋವಿನ ಹಬ್ಬ ಎಂದರೆ ದೀಪಾವಳಿ, ಮಲೆನಾಡಲ್ಲಿ ದೀಪಾವಳಿಯ ದಿನ ಗೋವಿನ ಪೂಜೆ ಮಾಡಲಾಗುತ್ತದೆ.

    ನಾಗ ದೇವರನ್ನು ವಿಶೇಷವಾಗಿ ಮಕ್ಕಳಿಲ್ಲದವರು ಪ್ರಾರ್ಥಿಸಿದರೆ ಸಂತಾನ ಭಾಗ್ಯ ಸಿಗಲಿದೆ ಎಂಬ ನಂಬಿಕೆ ಜನರಲ್ಲಿದೆ. ಮನೆಯ ಒಳಗಡೆ ನಾಗನನ್ನು ಪ್ರಾರ್ಥಿಸಲಾಗುತ್ತದೆ. ಆದರೆ ವಿಶೇಷವಾಗಿ ಮನೆಯ ಒಳಭಾಗದಲ್ಲಿ ನಾಗನನ್ನು ಪೂಜಿಸುವ ಪದ್ಧತಿ ಇಲ್ಲ.

  • ಪ್ರಕೃತಿಯ ಆರಾಧನೆಯ ಭಾಗವಾಗಿ ಮಲೆನಾಡ ನಾಗರ ಪಂಚಮಿ

    ಪ್ರಕೃತಿಯ ಆರಾಧನೆಯ ಭಾಗವಾಗಿ ಮಲೆನಾಡ ನಾಗರ ಪಂಚಮಿ

    ಳೆ ಬಂದು ನಾಗರ ಕಲ್ಲು ತೊಳೆದು ಆಯ್ತು ಇನ್ನೂ ಪೂಜೆ ಆಗಿಲ್ಲ! ಹೀಗೆ ಹಣ್ಣು ಕಾಯಿ ತಯಾರಿ ಮಾಡ್ಕೊಳ್ತ ಹಿರಿಕರು ನಾಗರ ಪಂಚಮಿಯಂದು (Nagara Panchami) ಸಾಮಾನ್ಯವಾಗಿ ಹೇಳುವ ಮಾತಿದು.

    ಹೀಗೆ ಮಲೆನಾಡಿನಲ್ಲಿ (Malnad) ನಾಗರ ಪಂಚಮಿಯ ದಿನ ಮಳೆ ಬಂದೇ ಬರುತ್ತೆ. ಮಳೆ ನಾಗರಕಲ್ಲನ್ನು ತೊಳೆದ ಬಳಿಕ ಪೂಜೆ ನಡೆಸಲಾಗುತ್ತದೆ. ಈ ನಂಬಿಕೆ ನಮ್ಮ ಜನರ ಮತ್ತು ಪ್ರಕೃತಿಯ ನಡುವಿನ ಆಳವಾದ ಸಂಬಂಧ ಯಾವ ಮಟ್ಟದ್ದು ಎಂಬುದಕ್ಕೆ ಸಾಕ್ಷಿ ಕೂಡ ಹೌದು. ಊರ ಹೊರಗಿನ ಕಾಡಿನ ಭಾಗದಲ್ಲಿರುವ ನಾಗರ ಕಟ್ಟೆಗೆ ಅಥವಾ ಅರಳಿ ಮರದ ಕೆಳಗಿನ ನಾಗರ ಮೂರ್ತಿಗೆ ಪೂಜೆ ಮಾಡಲಾಗುತ್ತದೆ. ಈ ಹಬ್ಬ ಪ್ರಕೃತಿಯ ಆರಾಧನೆ ಒಂದು ಭಾಗವಾಗಿ ಮಲೆನಾಡಲ್ಲಿ ಕಂಡು ಬರುತ್ತದೆ. ಇದನ್ನೂ ಓದಿ: ಹಿಂದೂಗಳಿಗೆ ಮುನ್ನುಡಿ ಹಬ್ಬ ನಾಗರ ಪಂಚಮಿ – ಪುರಾಣ, ಇತಿಹಾಸದಲ್ಲಿ ಸರ್ಪದ ಬಗ್ಗೆ ಇರುವ ಉಲ್ಲೇಖಗಳೇನು?

    ಹಾಗೆ ನಾಗನಿಗೆ ಮಲೆನಾಡಿನ ಭಾಗದಲ್ಲಿ ಗುಡಿಗಳು ಕಡಿಮೆ. ಹಾಗೆ ನೆಲದ ಮೇಲೋ, ಅಥವ ಕಟ್ಟೆಯ ಮೇಲೆ ನಾಗರ ಕಲ್ಲುಗಳಿರುತ್ತವೆ. ಶತಶತಮಾನದ ನಾಗರ ಕಲ್ಲುಗಳು ಮಲೆನಾಡಿನ ಮೂಲೆ ಮೂಲೆಯಲ್ಲೂ ಕಾಣ ಸಿಗುತ್ತವೆ. ಅವು ಎಷ್ಟರ ಮಟ್ಟಿಗೆ ಹಳೆಯದ್ದು ಎಂದರೆ ಸವೆದು ಪೆನ್ಸಿಲ್‍ನ ಗೆರೆಯಂತೆ ಕಾಣುವ ಕಲ್ಲುಗಳು ಇವೆ! ಅವುಗಳನ್ನು ಯಾವುದೇ ರೀತಿಯ ಪುನರ್‍ನಿರ್ಮಾಣ ಮಾಡಲಾಗುವುದಿಲ್ಲ. ಅವು ಇದ್ದಂತೆಯೇ ಪೂಜೆಗಳು ನಡೆಯುತ್ತವೆ. ನಾಗರ ಪಂಚಮಿ ಬಳಿಕ ದೀಪಾವಳಿಗೆ ಇದೇ ನಾಗರ ಕ್ಲಲುಗಳಿಗೆ ಪೂಜೆ ನಡೆಯುತ್ತದೆ. ಬಳಿಕ ಒಂದು ವರ್ಷದ ವರೆಗೂ ಯಾವ ಪೂಜೆಗಳನ್ನು ಇವುಗಳಿಗೆ ಮಾಡಲಾಗುವುದಿಲ್ಲ. ಮತ್ತೆ ನಾಗರ ಪಂಚಮಿಗೆ ಅವುಗಳಿಗೆ ಪೂಜೆ ಮತ್ತು ನೈವೇದ್ಯ!

    ಆದಿನದ ವಿಶೇಷವಾಗಿ ಪೂಜೆಗೆ ಹೂವು, ಹಣ್ಣು, ಹಾಲು ಹಾಗೂ ನೈವೇದ್ಯಕ್ಕೆ ರವೆ ಉಂಡೆ ಇಡಲಾಗುತ್ತದೆ. ಕೇದಿಗೆ ಹೂವು ವಿಶೇಷವಾಗಿ ಪೂಜೆಗೆ ಬಳಕೆ ಆಗುತ್ತದೆ. ಇನ್ನೂ ಹುತ್ತದ ಆರಾಧನೆ ಎಲ್ಲೂ ಕಂಡು ಬರುವುದಿಲ್ಲ. ಆ ದಿನ ರಾತ್ರಿ ಕೈಗೆ ಮದರಂಗಿ ಹಚ್ಚುವಂಥಹ ಪದ್ಧತಿ ಇದೆ. ಈ ಬಗ್ಗೆ ಒಂದು ಮಾತಿದೆ, ಹಾವಿನ ಹಬ್ಬದಲ್ಲಿ ಹಚ್ಚಿದ ಮದರಂಗಿ ಗೋವಿನ ಹಬ್ಬದ ತನಕ ಇರಬೇಕು ಎನ್ನಲಾಗುತ್ತದೆ. ಗೋವಿನ ಹಬ್ಬ ಎಂದರೆ ದೀಪಾವಳಿ, ಮಲೆನಾಡಲ್ಲಿ ದೀಪಾವಳಿಯ ದಿನ ಗೋವಿನ ಪೂಜೆ ಮಾಡಲಾಗುತ್ತದೆ.

    ನಾಗ ದೇವರನ್ನು ವಿಶೇಷವಾಗಿ ಮಕ್ಕಳಿಲ್ಲದವರು ಪ್ರಾರ್ಥಿಸಿದರೆ ಸಂತಾನ ಭಾಗ್ಯ ಸಿಗಲಿದೆ ಎಂಬ ನಂಬಿಕೆ ಜನರಲ್ಲಿದೆ. ಮನೆಯ ಒಳಗಡೆ ನಾಗನನ್ನು ಪ್ರಾರ್ಥಿಸಲಾಗುತ್ತದೆ. ಆದರೆ ವಿಶೇಷವಾಗಿ ಮನೆಯ ಒಳಭಾಗದಲ್ಲಿ ನಾಗನನ್ನು ಪೂಜಿಸುವ ಪದ್ಧತಿ ಇಲ್ಲ. ಇದನ್ನೂ ಓದಿ: ‘ನಾಗರಪಂಚಮಿ’ ವಿಶೇಷತೆ ಏನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಫಿ ಕೊಯ್ಯಲು ಕಾರ್ಮಿಕರಿಲ್ಲ – ಆತಂಕದಲ್ಲಿ ಬೆಳೆಗಾರರು

    ಕಾಫಿ ಕೊಯ್ಯಲು ಕಾರ್ಮಿಕರಿಲ್ಲ – ಆತಂಕದಲ್ಲಿ ಬೆಳೆಗಾರರು

    ಚಿಕ್ಕಮಗಳೂರು : ಕಾಫಿ ಬೆಳೆಯನ್ನು ಹೇರಳವಾಗಿ ಬೆಳೆಯಲಾಗುವ ಮಲೆನಾಡು ಭಾಗಗಳಲ್ಲಿ ಕಾಫಿ ಕೊಯ್ಯಲು ಕಾರ್ಮಿಕರಿಲ್ಲದೇ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ. ಈ ವರ್ಷ ಕಾಫಿ ಚೆನ್ನಾಗಿ ಫಸಲು ನೀಡಿದ್ದರೂ ಕೊಯ್ಯಲು ಕಾರ್ಮಿಕರಿಲ್ಲದೇ ಗಿಡದಲ್ಲೇ ಕೊಳೆತು ಹೋಗುತ್ತಿರುವ ಕಾರಣ ಬೆಳೆಗಾರರು ಕಂಗಾಲಾಗಿದ್ದಾರೆ.

    ಪ್ರತಿ ವರ್ಷ ಈ ವೇಳೆಗೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಶೇ.50-60 ರಷ್ಟು ಕಾಫಿ ಹಣ್ಣನ್ನ ಕೊಯ್ಯಲಾಗುತ್ತದೆ. ಆದರೆ ಈ ಬಾರಿ ಕೇವಲ ಶೇ.20-30 ರಷ್ಟು ಕಾಫಿಯನ್ನು ಕೊಯ್ಯಲಾಗಿದೆ. ಪ್ರತಿ ವರ್ಷ ಹೊರ ಜಿಲ್ಲೆ, ಹೊರರಾಜ್ಯಗಳಿಂದ ಸಾವಿರಾರು ಕಾರ್ಮಿಕರು ಕಾಫಿ ಕೊಯ್ಯುವ ವೇಳೆ ಕೆಲಸಕ್ಕೆ ಬರುತ್ತಿದ್ದರು. ಆದರೆ ಈ ವರ್ಷ ಕೊರೊನಾದ ಮೂರನೇ ಅಲೆಯಿಂದ ಪ್ರವಾಸಿಗರು ಬರಲು ಸಾಧ್ಯವಾಗಿಲ್ಲ. ಇದರಿಂದ ಕಾಫಿ ಕೊಯ್ಯಲು ಕಾರ್ಮಿಕರ ಕೊರತೆ ಉಂಟಾಗಿದೆ. ಇದನ್ನೂ ಓದಿ: ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ

    ಕಳೆದ ಮೂರು ವರ್ಷಗಳಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿದ ಭಾರೀ ಮಳೆಯಿಂದ ಬಹುತೇಕ ಕಾಫಿ ಬೆಳೆ ಮಣ್ಣು ಪಾಲಾಗಿತ್ತು. 2021ರಲ್ಲೂ ವರ್ಷವಿಡೀ ಮಳೆ ಸುರಿದಿದ್ದರಿಂದ ಬಹುತೇಕ ಕಾಫಿ ನಷ್ಟವಾಗಿತ್ತು. ಆದರೆ ಈ ವರ್ಷ ಮಳೆಗಾಳಿಯಿಂದ ಅಳಿದುಳಿದ ಕಾಫಿಯನ್ನು ಕೊಯ್ಯುವುದಕ್ಕೆ ಜನ ಸಿಗದೆ ಬೆಳೆಗಾರರು ಆಂತಕಕ್ಕೀಡಾಗಿದ್ದಾರೆ.

    ಮಲೆನಾಡಿನ ತೋಟಗಳಲ್ಲಿ ಕಾಫಿ ಚೆನ್ನಾಗಿ ಫಸಲು ನೀಡಿದೆ. ಜಿಲ್ಲೆಯಲ್ಲಿ ಸರಿಸುಮಾರು ಒಂದು ಲಕ್ಷ ಹೆಕ್ಟೆರ್ ಜಾಗದಲ್ಲಿ ಅರೇಬಿಕಾ ಹಾಗೂ ರೋಬೋಸ್ಟಾ ಕಾಫಿಯನ್ನು ಬೆಳೆಯಲಾಗಿದೆ. ಆದರೆ ಕಾಫಿ ಕೊಯ್ಲಿಗೆ ಕಾರ್ಮಿಕರೇ ಇಲ್ಲದಂತಾಗಿದೆ. ಹತ್ತಾರು ಎಕರೆ ಕಾಫಿ ತೋಟಗಳಲ್ಲಿ ಕೇವಲ ನಾಲ್ಕೈದು ಕಾರ್ಮಿಕರಷ್ಟೇ ಕೆಲಸ ಮಾಡುವಂತಾಗಿದೆ. ಕೆಲವೆಡೆ ಮನೆಯವರೇ ಕೊಯ್ಯುವಂತಹಾ ಸ್ಥಿತಿಯೂ ನಿರ್ಮಾಣವಾಗಿದೆ. ಇದನ್ನೂ ಓದಿ: ಡಿಕೆಶಿ Vs ಸಿದ್ದು ಬಣಗಳ ಕಿತ್ತಾಟ: ಲಾಭ ಪಡೆಯಲು ಮುಂದಾದ ಹಿರಿಯ ನಾಯಕರು

    2021ರಲ್ಲೂ ಮಳೆ-ಗಾಳಿಗೆ ಉದುರಿ ಗಿಡಕ್ಕೆ ಗೊಬ್ಬರವಾದ ಕಾಫಿಯೇ ಹೆಚ್ಚು. ಆದರೆ ಇದೀಗ ಕಾರ್ಮಿಕರ ಕೊರತೆಯಿಂದ ಉಳಿಸಿಕೊಂಡಿದ್ದ ಬೆಳೆಯನ್ನೂ ಕೊಯ್ಲು ಮಾಡಲಾಗದಂತಹಾ ಪರಿಸ್ಥಿತಿ ಎದುರಾಗಿದೆ. ಕೆಲ ಸಣ್ಣ ಹಾಗೂ ಮಧ್ಯಮ ವರ್ಗದ ಬೆಳೆಗಾರರು ನಮ್ಮ ತೋಟಕ್ಕೆ ನೀವು ಬನ್ನಿ ನಿಮ್ಮ ತೋಟಕ್ಕೆ ನಾವು ಬರ್ತೀವಿ ಎಂದು ಒಬ್ಬರ ತೋಟದಲ್ಲೊಬ್ಬರು ಕಾಫಿಯನ್ನು ಕೊಯ್ಯುವಂತಾಗಿದೆ.

    2021ರಲ್ಲಿ ವರ್ಷವಿಡೀ ಮಳೆಯಾಗಿದ್ದರಿಂದ ನವೆಂಬರ್‌ನಲ್ಲಿ ಕಾಫಿ ಫಸಲು ಬಂದಿದೆ. ಈ ವೇಳೆಗೆ ಶೇ.80 ರಷ್ಟು ಕೊಯ್ಲು ಆಗಬೇಕಿತ್ತು. ಕಾಫಿಯನ್ನು ಸೂಕ್ತ ಸಮಯದಲ್ಲಿ ಕೊಯ್ಯದಿರುವುದರಿಂದ ಮತ್ತೆ ಉದುರುವುದಕ್ಕೆ ಪ್ರಾರಂಭವಾಗಿದೆ. ಇನ್ನೊಂದೆಡೆ ಕಾರ್ಮಿಕರ ಕೊರತೆಯಿಂದ ಇರುವ ಬೆಳೆಯನ್ನೂ ಕೊಯ್ಲು ಮಾಡದ ಸಂಕಷ್ಟ ಬೆಳೆಗಾರರದ್ದಾಗಿದೆ. ಇದನ್ನೂ ಓದಿ: ಪೊಲೀಸ್ ಠಾಣೆಯಿಂದಲೇ ಜೀಪ್ ಕದ್ದ ಕಳ್ಳ

    ಮಾರುಕಟ್ಟೆಯಲ್ಲಿ ಕಾಫಿಗೆ ಉತ್ತಮ ಬೆಲೆ ಇದೆ. ಆದರೆ ಬೆಳೆ ಇಲ್ಲ. ಇದ್ದರೂ ಸಮರ್ಪಕವಾಗಿ ಕೊಯ್ಯಲು ಸಾಧ್ಯವಾಗುತ್ತಿಲ್ಲ. ಇರುವ ಫಸಲು ಕೊಯ್ಯಲು ಆಗದಿರುವುದು ಬೆಳೆಗಾರರಿಗೆ ಬಿಸಿತುಪ್ಪವಾಗಿದೆ. ಈ ಮಧ್ಯೆ ಆಗಾಗ ಒಂದಷ್ಟು ಮಳೆ ಬಂದು ಹೋಗುತ್ತಿರುವುದು ಕೂಡ ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ.

  • ಕನಸಿನ ಮನೆಗಳನ್ನು ಬಿಟ್ಟು ಗ್ರಾಮಗಳನ್ನೇ ತೊರೆದ ಗ್ರಾಮಸ್ಥರು

    ಕನಸಿನ ಮನೆಗಳನ್ನು ಬಿಟ್ಟು ಗ್ರಾಮಗಳನ್ನೇ ತೊರೆದ ಗ್ರಾಮಸ್ಥರು

    ಮಡಿಕೇರಿ: ಜೀವ ಉಳಿಸಿಕೊಳ್ಳಲು ಕನಸಿನ ಮನೆಗಳನ್ನು ತೊರೆದು ಜನರು ಗ್ರಾಮಗಳನ್ನು ಖಾಲಿ ಮಾಡುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹದ ಪರಿಣಾಮ ಮಾದಪುರ ಸಮೀಪದ ಗ್ರಾಮಗಳಲ್ಲಿ ಜನರೇ ಇಲ್ಲದೇ ಖಾಲಿಯಾಗುತ್ತಿವೆ.

    ಮಾದಪುರ ಸಮೀಪದ ಹೆಮ್ಮಿಯಾಲ, ಹಟ್ಟಿಹೊಳೆ, ಮುಕ್ಕೋಡ್ಲು ಗ್ರಾಮಗಳಲ್ಲಿ ಜನರೇ ಇಲ್ಲ. ಗ್ರಾಮದ ಎಲ್ಲ ಮನೆಗಳಿಗೆ ಬೀಗ ಹಾಕಲಾಗಿದೆ. ಮೂರು ಗ್ರಾಮಗಳಲ್ಲಿ ಮನೆಗಳು ಬಹುತೇಕ ಕುಸಿತವಾಗಿದ್ದು, ಕೆಲಕಡೆ ನೀರು ಸಹ ನುಗ್ಗಿದೆ. ಅಬ್ಬರಿಸಿ ಬೊಬ್ಬಿರಿದು ರೌದ್ರ ನರ್ತನ ತೋರಿದ್ದ ಹಟ್ಟಿಹೊಳೆ ಈಗ ಸ್ವಲ್ಪ ಶಾಂತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    ಹಟ್ಟಿಹೊಳೆಯಬ ರೌದ್ರ ನರ್ತನದಿಂದಾಗಿ ಮುಕ್ಕೋಡ್ಲು ಗ್ರಾಮದ ಜನರು ಅಪಾಯಕ್ಕೆ ಸಿಲುಕಿದ್ದರು. ಸದ್ಯ ಹಟ್ಟಿಹೊಳೆ ಆರ್ಭಟ ತಗ್ಗಿದ್ದು, ಮುಕ್ಕೋಡ್ಲು ರಸ್ತೆಯಿಂದ ನೀರು ಬಿಟ್ಟಿದೆ. ರಸ್ತೆಯನ್ನ ತಕ್ಕಮಟ್ಟಿಗೆ ದುರಸ್ತಿ ಮಾಡುವ ಕಾರ್ಯಕೂಡ ನಡೆಯುತ್ತಿದೆ. ಮಳೆಯ ಅವಾಂತರಕ್ಕೆ ಮಡಿಕೇರಿಯ ಮಕಂದೂರಿನಲ್ಲಿ ಇಡೀ ಗುಡ್ಡವೇ ಕುಸಿದುಬಿದ್ದಿದ್ದು ಸುಮಾರು 40ಕ್ಕೂ ಹೆಚ್ಚು ಮನೆಗಳು ನೆಲಸಮವಾಗಿವೆ. ಸರ್ಕಾರ ನಮ್ಮೆಲ್ಲಾ ಮನೆಗಳನ್ನು ನಿರ್ಮಾಣ ಮಾಡಿಕೊಡಲಿ ಅಂತ ಅಲ್ಲಿಯ ಸ್ಥಳಿಯರು ಮನವಿ ಮಾಡಿಕೊಳ್ಳುತ್ತಿದ್ದಾರೆ.

    https://youtu.be/cOn-LBN3Qr4

     

  • ಕೊಡಗಿನ ಜಲಪ್ರಳಯಕ್ಕೆ 9 ಮಂದಿ ಸಾವು – 845ಕ್ಕೂ ಹೆಚ್ಚು ಮನೆಗಳು ನೀರುಪಾಲು

    ಕೊಡಗಿನ ಜಲಪ್ರಳಯಕ್ಕೆ 9 ಮಂದಿ ಸಾವು – 845ಕ್ಕೂ ಹೆಚ್ಚು ಮನೆಗಳು ನೀರುಪಾಲು

    ಕೊಡಗು: ಮಹಾಮಳೆಗೆ ಮಂಜಿನ ನಗರಿ ಜನ ಅಕ್ಷರಶಃ ತತ್ತರಿಸಿದ್ದಾರೆ. ಮರಣ ಮಳೆಗೆ ಈವರೆಗೆ 9 ಮಂದಿ ಸಾವನ್ನಪ್ಪಿದ್ದು, ಹಲವರು ಕಣ್ಮರೆಯಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ. ಹಲವೆಡೆ ಗ್ರಾಮಕ್ಕೆ ಗ್ರಾಮವೇ ಕಣ್ಮರೆಯಾಗಿದೆ. ಮುಕ್ಕೊಡ್ಲುವಿನ 70ಕ್ಕೂ ಜನರು ತಮ್ಮ ಜೀವ ರಕ್ಷಣೆಗಾಗಿ ಬೆಟ್ಟ ಹತ್ತಿ ಕೂತಿದ್ದಾರೆ. ಹಲವೆಡೆ ಜನ ಬೆಟ್ಟ ಹತ್ತುತ್ತಿದ್ದು, ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಲಾಗುತ್ತಿದೆ. ಮುಕ್ಕೋಡ್ಲುವಿನಲ್ಲಿ 200ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಒಂದು ಕಡೆ ಮತ್ತೆ ಮಳೆ ಆರ್ಭಟ, ಇನ್ನೊಂದು ಕಡೆ ಗುಡ್ಡ ಕುಸಿತ ಭೀತಿಯಿಂದ ಜೀವವನ್ನು ಕೈಯಲ್ಲಿ ಹಿಡಿದು ಕುಳಿತಿದ್ದಾರೆ.

    ರಕ್ಕಸ ಮಳೆ ಕೊಡವರ ನಾಡನ್ನು ಇಂಚಿಂಚಾಗಿ ನುಂಗುತ್ತಿದೆ. ನೋಡನೋಡುತ್ತಿದ್ದಂತೆ ಗುಡ್ಡಗಳು ಕುಸಿಯುತ್ತಿದೆ. ಬೆಟ್ಟದಿಂದ ಕುಸಿದ ಮಣ್ಣು ನದಿಯಂತೆ ಹರಿಯುತ್ತಿದೆ. ಗುಡ್ಡದೊಂದಿಗೆ ರಸ್ತೆಗಳು ಸಹ ಧರಾಶಾಹಿಯಾಗಿದೆ. ಮಹಾಮಳೆಗೆ ಹಟ್ಟಿಹೊಳೆ ಎಂಬ ಊರು ರಾತ್ರೋರಾತ್ರಿ ನಾಪತ್ತೆಯಾಗಿದೆ. ಹಕ್ಕಿ ಹೊಳೆ ಗ್ರಾಮ ಜಲಾವೃತಗೊಂಡಿದ್ದು, ಜನರೆಲ್ಲಾ ಊರು ಬಿಟ್ಟಿದ್ದಾರೆ. ಇತ್ತ 900ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಬರೋಬ್ಬರಿ 123 ಕಿಲೋಮೀಟರ್ ರಸ್ತೆಗಳೇ ನಾಪತ್ತೆಯಾಗಿದೆ. ಇತ್ತ ಬರೋಬ್ಬರಿ 58 ಸೇತುವೆಗಳು ನಾಶಗೊಂಡಿವೆ ಎಂಬ ಅಂಕಿ ಅಂಶಗಳು ಲಭ್ಯವಾಗಿದೆ.

    3,800 ಲೈಟ್ ಕಂಬಗಳು ಹಾಳಾಗಿದ್ದು, 278 ಸರ್ಕಾರಿ ಕಟ್ಟಡಗಳು ಕುಸಿದುಬಿದ್ದಿವೆ. 3601 ಜನರ ರಕ್ಷಣೆ ಮಾಡಲಾಗಿದ್ದು, ಕೊಡಗಿನ 36 ಕ್ಯಾಂಪ್‍ಗಳಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ 9 ರಕ್ಷಣಾ ಕೇಂದ್ರದಲ್ಲಿ ಒಟ್ಟು 802 ಮಂದಿ ಆಶ್ರಯ ಪಡೆದಿರುವ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.

    ಮಡಿಕೇರಿ ಸೇರಿ 10ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳಲ್ಲಿ ಜನ ಆಶ್ರಯ ಪಡೆದಿದ್ದಾರೆ. ಮನೆಯನ್ನು ಕಳೆದುಕೊಂಡವರು ಕಣ್ಣೀರಿಡುತ್ತಾ ಕಾಲಕಳೆಯುತ್ತಿದ್ದಾರೆ. ಒಂದು ಮನೆ ಕೊಡಿ ಎಂದು ನಿರಾಶ್ರಿತರು ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಕೊಡಗಿನಿಂದ ಸಕಲೇಶಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಬಿರುಕು ಬಿಟ್ಟು ಕಂದಕ ಸೃಷ್ಟಿಯಾಗಿದೆ. ಪರಿಣಾಮ ಈ ಮಾರ್ಗದ ಸಂಚಾರ ಸಂಪರ್ಕ ಕಡಿತಗೊಂಡಿದ್ದು, ರಕ್ಷಣಾ ಕಾರ್ಯ ವಿಳಂಬವಾಗುತ್ತಿದೆ ಎಂದು ತಿಳಿದು ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಕೋಟೆ ನಾಡಿನ ಜೋಗಿಮಟ್ಟಿ ನಿಸರ್ಗಧಾಮ!

    ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಕೋಟೆ ನಾಡಿನ ಜೋಗಿಮಟ್ಟಿ ನಿಸರ್ಗಧಾಮ!

    ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಅಂದಾಕ್ಷಣ ಕೋಟೆ ಕೊತ್ತಲುಗಳು ಮಾತ್ರ ನಾವು ಕಾಣುತ್ತೇವೆ. ಆದರೆ ಮಲೆನಾಡನಲ್ಲಿರುವಂತೆ ಇರುವ ನಿಸರ್ಗಧಾಮವೊಂದು ಕೋಟೆನಾಡಲ್ಲಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರೋ ತುಂತುರು ಮಳೆಯಿಂದಾಗಿ ಜೋಗಿಮಟ್ಟಿ ನಿಸರ್ಗಧಾಮ ಹಸಿರು ಸೀರೆ ಹೊದ್ದ ನಾರಿಯಂತೆ ಕಂಗೊಳಿಸುತ್ತಾ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.

    ಐತಿಹಾಸಿಕ ಹಿನ್ನಲೆಯ ಪ್ರವಾಸಿ ತಾಣವೆನಿಸಿರೋ ಕೋಟೆನಾಡು ಚಿತ್ರದುರ್ಗ ಕೇವಲ ಬಂಡೆಗಳಿಂದ ಕೂಡಿರೋ ಬಯಲುಸೀಮೆಯೆಂದು ಭಾವಸಿದ್ದಾರೆ. ಆದರೆ ಚಿತ್ರದುರ್ಗ ನಗರದಿಂದ ಕೇವಲ 10 ಕಿ.ಮೀಟರ್ ದೂರದಲ್ಲಿರುವ ಜೋಗಿಮಟ್ಟಿ ಗಿರಿಧಾಮ ಅವರ ಭಾವನೆಯನ್ನ ಅಲ್ಲೆಗೆಳೆಯುವಂತಿದೆ. ಸುಮಾರು 10 ಸಾವಿರ ಹೆಕ್ಟೇರ್ ಪ್ರದೇಶದಷ್ಟು ವಿಶಾಲವಾಗಿರುವ ಈ ಕಾಯ್ದಿಟ್ಟ ಅರಣ್ಯ ಪ್ರದೇಶ ಏಷ್ಯಾದಲ್ಲೇ ಅತಿ ಹೆಚ್ಚು ಗಾಳಿ ಬೀಸುವ ಪ್ರದೇಶಗಳ ಪೈಕಿ ಒಂದಾಗಿದೆ.

    ಇಂಥ ಅಪರೂಪದ ಗಿರಿಧಾಮ ಮಳೆಗಾಲ ಹಾಗೂ ಚಳಿಗಾಲದಲ್ಲಂತೂ ಮಂಜಿನ ಮಡಿಕೇರಿ, ಸೊಬಗಿನ ಮಲೆನಾಡನ್ನೇ ನಾಚಿಸುವಂತೆ ರೂಪುಗೊಳ್ಳುತ್ತದೆ. ಕಳೆದ ಒಂದು ವಾರದಿಂದ ಜಿನುಗುತ್ತಿರುವ ಮಳೆಯಿಂದಾಗಿ ಜೋಗಿಮಟ್ಟಿ ಮತ್ತಷ್ಟು ಹಚ್ಚಹಸಿರಾಗಿ ಕಂಗೊಳಿಸುತ್ತಿದೆ. ಮೋಡದ ಅಲೆಗಳು ಜೋಗಿಮಟ್ಟಿಯ ಗಿರಿಧಾಮಗಳಿಗೆ ಮುತ್ತಿಟ್ಟು ನಲಿಯುತ್ತಿವೆ. ಜೋಗಿಮಟ್ಟಿ ಮೇಲ್ಭಾಗದಲ್ಲಿರುವ ವೀವ್ ಪಾಯಿಂಟ್ ಹಾಗೂ ಅತಿಥಿಗೃಹದ ಬಳಿಯ ಪ್ರಕೃತಿಕ ಸೊಬಗಂತೂ ಮೈಮರೆಸುತ್ತದೆ. ಹೀಗಾಗಿ ಕಳೆದ ವಾರದಿಂದ ಜೋಗಿಮಟ್ಟಿಗೆ ತೆರಳಿ ಸೌಂದರ್ಯದ ಸವಿ ಸವಿಯುವವರ ಸಂಖ್ಯೆ ಹೆಚ್ಚಾಗಿದೆ. ಜೋಗಿಮಟ್ಟಿಯ ನಿಸರ್ಗದಲ್ಲಿ ಪರಿಸರ ಪ್ರಿಯರು ಸೆಲ್ಫಿ ತೆಗೆದುಕೊಳ್ಳುವುದು, ಗ್ರೂಪ್ ಪೋಟೋ ಕ್ಲಿಕ್ಕಿಸಿಕೊಳ್ಳುವ ದೃಶ್ಯಗಳು ಸಾಮಾನ್ಯವಾಗಿದೆ.

    ಇನ್ನು ಕೊರೆಯುವ ಚಳಿ, ಬಿರುಗಾಳಿ ಮತ್ತು ಕೈಗೆ ಸಿಗುವ ಮೋಡಗಳ ನಡುವೆ ತೇಲುವ ಜನ ಸಖತ್ ಏಂಜಾಯ್ ಮಾಡುತ್ತಿದ್ದಾರೆ. ಕೆಲವರು ಕೇಕೆ ಹಾಕಿ ಖುಷಿಪಡುತ್ತಾರೆ, ಹಾಡು ಗುನುಗುತ್ತ ಹೆಜ್ಜೆ ಹಾಕುತ್ತಾರೆ. ಕೋಟೆನಾಡಿನ ಪಾಲಿಗಂತೂ ಈ ನಿಸರ್ಗದ ಮಡಿಲು ಧರೆಯ ಮೇಲಿನ ಸ್ವರ್ಗವೇ ಆಗಿದೆ ಎಂದು ನಿಸರ್ಗ ಪ್ರಿಯರು ಕರೆಯುತ್ತಾರೆ.

    ಜೋಗಿಮಟ್ಟಿ ಕಾಯ್ದಿಟ್ಟ ಅರಣ್ಯ ಪ್ರದೇಶ ಇತ್ತೀಚೆಗೆ ವನ್ಯಜೀವಗಳ ಧಾಮವಾಗಿಯೂ ಘೋಷಿಸಲ್ಪಟ್ಟಿದೆ. ಇಲ್ಲಿ ಕರಡಿ, ಜಿಂಕೆ, ಚಿರತೆಯಂಥ ಪ್ರಾಣಿಗಳಿವೆ. ನವಿಲು ಮತ್ತಿತರೆ ಪಕ್ಷಿಗಳಂತೂ ಲೆಕ್ಕವಿಲ್ಲದಷ್ಟಿವೆ. ನಿತ್ಯ ನೂರಾರು ಜನ ಈ ನಿಸರ್ಗ ಸೌಂದರ್ಯ ಸವಿಯಲು ಜೋಗಿಮಟ್ಟಿಗೆ ಭೇಟಿ ನೀಡುತ್ತಾರೆ. ಆದ್ದರಿಂದ ಅರಣ್ಯ ಇಲಾಖೆ ಈ ಜೋಗಿಮಟ್ಟಿಗೆ ಇನ್ನಷ್ಟು ಮೂಲ ಸೌಕರ್ಯಗಳನ್ನು ಕಲ್ಪಿಸಿ ಅರಣ್ಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕು ಎಂದು ಭೇಟಿ ನೀಡುವ ಪ್ರವಾಸಿಗರು ಮನವಿ ಮಾಡಿಕೊಂಡಿದ್ದಾರೆ.