Tag: Mamata Banerjee

  • ಧರ್ಮದ ಹೆಸರಿನಲ್ಲಿ ಅನ್ಯಾಯದ ವರ್ತನೆಯಲ್ಲಿ ತೊಡಗಬೇಡಿ: ಪ್ರತಿಭಟನಾಕಾರರಿಗೆ ಮಮತಾ ಬ್ಯಾನರ್ಜಿ ಮನವಿ

    ಧರ್ಮದ ಹೆಸರಿನಲ್ಲಿ ಅನ್ಯಾಯದ ವರ್ತನೆಯಲ್ಲಿ ತೊಡಗಬೇಡಿ: ಪ್ರತಿಭಟನಾಕಾರರಿಗೆ ಮಮತಾ ಬ್ಯಾನರ್ಜಿ ಮನವಿ

    – ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ.ಬಂಗಾಳದಲ್ಲಿ ಪ್ರತಿಭಟನೆ, ಹಿಂಸಾಚಾರ

    ಕೋಲ್ಕತ್ತಾ: ತಮ್ಮ ಸರ್ಕಾರವು ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು (Waqf Act) ರಾಜ್ಯದಲ್ಲಿ ಜಾರಿಗೆ ತರಲು ಬಿಡುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಹೇಳಿದ್ದಾರೆ. ಧರ್ಮದ ಹೆಸರಿನಲ್ಲಿ ಯಾವುದೇ ಅನ್ಯಾಯದ ವರ್ತನೆಯಲ್ಲಿ ತೊಡಗಬೇಡಿ ಎಂದು ಅವರು ಸಮುದಾಯಗಳಿಗೆ ಮನವಿ ಮಾಡಿದ್ದಾರೆ.

    ವಕ್ಫ್ ಕಾಯ್ದೆ ವಿರುದ್ಧ ಮುರ್ಷಿದಾಬಾದ್ ಮತ್ತು ಇತರ ಜಿಲ್ಲೆಗಳಲ್ಲಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರದ ಬಳಿಕ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಎಲ್ಲಾ ಧರ್ಮದ ಜನರಿಗೆ ನನ್ನ ಪ್ರಾಮಾಣಿಕ ಮನವಿ. ದಯವಿಟ್ಟು ಶಾಂತವಾಗಿರಿ, ಸಂಯಮದಿಂದಿರಿ. ಧರ್ಮದ ಹೆಸರಿನಲ್ಲಿ ಯಾವುದೇ ಅನ್ಯಾಯದ ನಡವಳಿಕೆಯಲ್ಲಿ ತೊಡಗಬೇಡಿ. ಪ್ರತಿಯೊಬ್ಬ ಮಾನವ ಜೀವವೂ ಅಮೂಲ್ಯ. ರಾಜಕೀಯಕ್ಕಾಗಿ ಗಲಭೆಗಳನ್ನು ಪ್ರಚೋದಿಸಬೇಡಿ. ಗಲಭೆಗಳನ್ನು ಪ್ರಚೋದಿಸುವವರು ಸಮಾಜಕ್ಕೆ ಹಾನಿ ಮಾಡುತ್ತಿದ್ದಾರೆ ಎಂದು ಅವರು X ಪೋಸ್ಟ್‌ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಪಶ್ಚಿಮ ಬಂಗಾಳ| ಹಿಂಸಾಚಾರಕ್ಕೆ ತಿರುಗಿದ ವಕ್ಫ್‌ ಪ್ರತಿಭಟನೆ – ವಾಹನಗಳಿಗೆ ಬೆಂಕಿ, ರೈಲುಗಳ ಮೇಲೆ ಕಲ್ಲು

    ಅನೇಕರು ವಿರೋಧಿಸುವ ಕಾನೂನನ್ನು ನಾವು ಜಾರಿ ಮಾಡಿಲ್ಲ ಎನ್ನುವುದು ನೆನಪಿಡಬೇಕು. ಕಾನೂನನ್ನು ಕೇಂದ್ರ ಸರ್ಕಾರ ಮಾಡಿದೆ. ಆದ್ದರಿಂದ ನೀವು ಬಯಸುವ ಉತ್ತರವನ್ನು ಕೇಂದ್ರ ಸರ್ಕಾರದಿಂದ ಪಡೆಯಬೇಕು. ಈ ವಿಷಯದ ಬಗ್ಗೆ ನಾವು ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ನಾವು ಈ ಕಾನೂನನ್ನು ಬೆಂಬಲಿಸುವುದಿಲ್ಲ. ಈ ಕಾನೂನನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ತರಲಾಗುವುದಿಲ್ಲ. ಹೀಗಾಗಿ, ಗಲಭೆ ಯಾವುದಕ್ಕಾಗಿ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.

    ಕೆಲವು ರಾಜಕೀಯ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಧರ್ಮವನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ಜನರು ನನ್ನ ಮನವೊಲಿಕೆಗೆ ಮಣಿಯಬಾರದು ಎಂದು ಒತ್ತಾಯಿಸುತ್ತಿದ್ದಾರೆ. ಗಲಭೆಯನ್ನು ಪ್ರಚೋದಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಮಮತಾ ಎಚ್ಚರಿಸಿದರು. ಇದನ್ನೂ ಓದಿ: Mumbai Attack| ರಾಣಾ ವಿರುದ್ಧ ಸಾಕ್ಷಿ ನುಡಿಯಲಿದ್ದಾರೆ ನಿಗೂಢ ವ್ಯಕ್ತಿಗಳು!

    ವಕ್ಫ್ ತಿದ್ದುಪಡಿ ಕಾನೂನಿನ ವಿರುದ್ಧ ಮಾಲ್ಡಾ, ಮುರ್ಷಿದಾಬಾದ್, ದಕ್ಷಿಣ 24 ಪರಗಣಗಳು ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ಹಿಂಸಾಚಾರ ಭುಗಿಲೆದ್ದು, ಪೊಲೀಸ್ ವ್ಯಾನ್‌ಗಳು ಸೇರಿದಂತೆ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು, ರಸ್ತೆಗಳನ್ನು ನಿರ್ಬಂಧಿಸಲಾಯಿತು. ಘಟನೆಯಲ್ಲಿ ಕನಿಷ್ಠ 10 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ವಾಹನ ಮತ್ತು ರೈಲು ಸಂಚಾರಕ್ಕೆ ಅಡ್ಡಿಯಾಗಿದೆ.

    ಶನಿವಾರ ಬೆಳಿಗ್ಗೆಯಿಂದಲೇ ಮುರ್ಷಿದಾಬಾದ್‌ನ ಜಂಗಿಪುರ ಮತ್ತು ಸುಟಿ ಪ್ರದೇಶಗಳಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಘಟನಾ ಸ್ಥಳದಿಂದ ಬಂದ ದೃಶ್ಯಗಳಲ್ಲಿ ಹಲವಾರು ವಾಹನಗಳು ಸುಟ್ಟು ಹಾನಿಗೊಳಗಾಗಿರುವುದು ಕಂಡುಬಂದಿದೆ. ಪೊಲೀಸರ ಪ್ರಕಾರ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ 110 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಬಂಧಿಸಲಾಗಿದೆ. ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದಿದ್ದ ಮಾಲ್ಡಾ, ಮುರ್ಷಿದಾಬಾದ್, ದಕ್ಷಿಣ 24 ಪರಗಣ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿಲ್ಲ. ಇದನ್ನೂ ಓದಿ: ಶಿರೋಮಣಿ ಅಕಾಲಿ ದಳ ಅಧ್ಯಕ್ಷರಾಗಿ ಸುಖಬೀರ್ ಸಿಂಗ್ ಬಾದಲ್ ಮರು ಆಯ್ಕೆ

  • ಪ.ಬಂಗಾಳದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ಮಾಡಲ್ಲ – ಮಮತಾ ಬ್ಯಾನರ್ಜಿ ಭರವಸೆ

    ಪ.ಬಂಗಾಳದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ಮಾಡಲ್ಲ – ಮಮತಾ ಬ್ಯಾನರ್ಜಿ ಭರವಸೆ

    ಕೋಲ್ಕತ್ತಾ: ವಕ್ಫ್ ತಿದ್ದುಪಡಿ ಕಾಯ್ದೆಯನ್ನು (Waqf) ಪಶ್ಚಿಮ ಬಂಗಾಳದಲ್ಲಿ ಜಾರಿಗೆ ತರಲಾಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ರಾಜ್ಯದ ಅಲ್ಪಸಂಖ್ಯಾತ ಸಮುದಾಯಕ್ಕೆ ಭರವಸೆ ನೀಡಿದ್ದಾರೆ.ಇದನ್ನೂ ಓದಿ: ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ – ಯತ್ನಾಳ್ ವಿರುದ್ಧ ಎಫ್‍ಐಆರ್

    ಕೋಲ್ಕತ್ತಾದಲ್ಲಿ (Kolkatta) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿವಾದಾತ್ಮಕ ಕಾನೂನಿನ ಜಾರಿಗೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿದರು. ವಕ್ಫ್ ಆಸ್ತಿ ಸಮಸ್ಯೆಯಿಂದ ನಿಮಗೆ ನೋವಾಗಿದೆ ಎಂದು ನನಗೆ ಅರ್ಥವಾಗಿದೆ. ನನ್ನ ಮೇಲೆ ದಯವಿಟ್ಟು ನಂಬಿಕೆ ಇಡಿ, ಬಂಗಾಳದಲ್ಲಿ ಒಡೆದು ಆಳುವಂತದ್ದು ಏನೂ ಸಂಭವಿಸುವುದಿಲ್ಲ. ದೀದಿ ಇಲ್ಲಿದ್ದಾರೆ, ದೀದಿ ನಿಮ್ಮನ್ನು ಮತ್ತು ನಿಮ್ಮ ಆಸ್ತಿಯನ್ನು ರಕ್ಷಿಸುತ್ತಾರೆ ಎಂದು ಹೇಳುವ ಮೂಲಕ ಅಲ್ಪಸಂಖ್ಯಾತ ಸಮುದಾಯದ ಹಕ್ಕುಗಳನ್ನು ಕಾಪಾಡುವ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.

    ರಾಜಕೀಯ ಪ್ರಚೋದನೆಗಳಿಗೆ ಬಲಿಯಾಗದಂತೆ ಸಮುದಾಯಕ್ಕೆ ಎಚ್ಚರಿಕೆ ನೀಡಿದರು. ಸಹಬಾಳ್ವೆಯ ಮಹತ್ವವನ್ನು ಒತ್ತಿ ಹೇಳಿದ ಅವರು, ಬದುಕಿ ಮತ್ತು ಬದುಕಲು ಬಿಡಿ. ನಾವು ಒಗ್ಗಟ್ಟಿನಿಂದ ಇರಬೇಕು. ಬಂಗಾಳದಲ್ಲಿ ವಿಭಜಕ ರಾಜಕೀಯ ಬೇರೂರಲು ಬಿಡಬಾರದು. ಬಾಂಗ್ಲಾದೇಶದ (Bangladesh) ಪರಿಸ್ಥಿತಿ ಉಲ್ಲೇಖಿಸಿ, ವಕ್ಫ್ ಮಸೂದೆ ಅಂಗೀಕಾರಕ್ಕೆ ಈ ಸಮಯವು ಸೂಕ್ತವಲ್ಲ. ನಾವು ಈಗ ಈ ಮಸೂದೆಯನ್ನು ಅಂಗೀಕರಿಸಬಾರದಿತ್ತು ಎಂದು ಕೆಲವು ಪ್ರದೇಶಗಳಲ್ಲಿ ಇದು ಉಂಟುಮಾಡಿರುವ ಅಶಾಂತಿಯ ಬಗ್ಗೆ ಗಮನ ಸೆಳೆದರು.ಇದನ್ನೂ ಓದಿ: ಇವಿಎಂ ದುರ್ಬಳಕೆ, ಮಹಾರಾಷ್ಟ್ರ ಚುನಾವಣೆಯಲ್ಲಿ ಮೋಸ – ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ

  • ಮಮತಾ ಬ್ಯಾನರ್ಜಿಯ ಟಿಎಂಸಿಯಲ್ಲಿ ನಾಯಕರ ತಿಕ್ಕಾಟ – ಟಿಎಂಸಿ ವಾಟ್ಸಪ್ ಚಾಟ್ ಬಹಿರಂಗಪಡಿಸಿದ ಬಿಜೆಪಿಯ ಅಮಿತ್ ಮಾಳವೀಯ

    ಮಮತಾ ಬ್ಯಾನರ್ಜಿಯ ಟಿಎಂಸಿಯಲ್ಲಿ ನಾಯಕರ ತಿಕ್ಕಾಟ – ಟಿಎಂಸಿ ವಾಟ್ಸಪ್ ಚಾಟ್ ಬಹಿರಂಗಪಡಿಸಿದ ಬಿಜೆಪಿಯ ಅಮಿತ್ ಮಾಳವೀಯ

    ಕೋಲ್ಕತ್ತಾ: ಸಿಎಂ ಮಮತಾ ಬ್ಯಾನರ್ಜಿಯ (Mamata Banergee) ಟಿಎಂಸಿಯಲ್ಲಿ ನಾಯಕರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ನಾಯಕರ ಮಾತಿನ ಚಕಮಕಿಯ ವಾಟ್ಸಪ್‌ ಚಾಟ್‌ನ್ನು ಬಿಜೆಪಿಯ ಅಮಿತ್‌ ಮಾಳವೀಯ ಬಹಿರಂಗಪಡಿಸಿದ್ದಾರೆ.

    ಟಿಎಂಸಿ ಸಂಸದರಾದ ಕಲ್ಯಾಣ್ ಬ್ಯಾನರ್ಜಿ, ಕೀರ್ತಿ ಆಜಾದ್ ನಡುವಿನ ಮೆಸೇಜ್ ವೈರಲ್ ಆಗಿದೆ. ಮಹುವಾ ಮೊಯಿತ್ರಾ ಉಲ್ಲೇಖಿಸಿ ಕಲ್ಯಾಣ್‌ ಬ್ಯಾನರ್ಜಿ ಮೆಸೇಜ್ ಮಾಡಿದ್ದಾರೆ. ಇಬ್ಬರು ನಾಯಕರ ಕದನದಲ್ಲಿ ಮಮತಾ ಬ್ಯಾನರ್ಜಿ ಮಧ್ಯಪ್ರವೇಶ ಮಾಡಿದ್ದಾರೆ. ಮಾಧ್ಯಮಗಳಿಗೆ ಸಂದರ್ಶನ ನೀಡದಂತೆ ಸೂಚನೆ ನೀಡಿದ್ದಾರೆ. ಆದರೆ, ಟಿಎಂಸಿ ನಾಯಕರ ನಡುವಿನ ತಿಕ್ಕಾಟವನ್ನು ಹಿರಿಯ ಸಂಸದ ಸೌಗತಾ ರಾಯ್ ಖಚಿತಪಡಿಸಿದ್ದಾರೆ.

    ನಾನು ಕಳೆದ 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಈ ಮಹಿಳಾ ಸಂಸದೆ ಚುನಾವಣಾ ಆಯೋಗದ ಕಚೇರಿಯ ಹೊರಗೆ ಭದ್ರತಾ ಸಿಬ್ಬಂದಿಯನ್ನು ಸಂಪರ್ಕಿಸಿ ನನ್ನನ್ನು ಬಂಧಿಸುವಂತೆ ಕೇಳುತ್ತಿದ್ದರು. ನನ್ನನ್ನು ಜೈಲಿಗೆ ಕಳುಹಿಸಲು ಅವರು ಯಾರು? ಅವರು ನನ್ನ ಮೇಲೆ ನಿಂದನೆ ಮಾಡಿದ್ದಾರೆ. ಸಂಸತ್ತಿನಲ್ಲಿ ಹೋರಾಡುವುದು ನಾನೇ. ನಾನು ನಿರ್ದಿಷ್ಟ ಕೈಗಾರಿಕಾ ಸಂಸ್ಥೆಯ ಬಗ್ಗೆ ಮಾತ್ರ ಗೀಳು ಹೊಂದಿರುವ ವ್ಯಕ್ತಿಯಲ್ಲ ಎಂದು ಕಲ್ಯಾಣ್‌ ಬ್ಯಾನರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.

    ಮಹಿಳಾ ಸಂಸದೆ ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುತ್ತಾರೆ ಎಂದ ಮಾತ್ರಕ್ಕೆ ಅವರು ಯಾರನ್ನಾದರೂ ಅವಮಾನಿಸಬಹುದು ಎಂದರ್ಥವಲ್ಲ ಎಂದು ಬ್ಯಾನರ್ಜಿ ಅಸಮಾಧಾನ ಹೊರಹಾಕಿದ್ದಾರೆ.

  • 25 ಸಾವಿರ ಶಿಕ್ಷಕರ ವಜಾ – ಜಡ್ಜ್‌ಗಳ ಮನೆಯಲ್ಲಿ ಹಣ ಪತ್ತೆಯಾದ್ರೆ ವರ್ಗಾವಣೆ, ಶಿಕ್ಷಕರ ವಜಾ ಯಾಕೆ? – ಮಮತಾ ಬ್ಯಾನರ್ಜಿ ಪ್ರಶ್ನೆ

    25 ಸಾವಿರ ಶಿಕ್ಷಕರ ವಜಾ – ಜಡ್ಜ್‌ಗಳ ಮನೆಯಲ್ಲಿ ಹಣ ಪತ್ತೆಯಾದ್ರೆ ವರ್ಗಾವಣೆ, ಶಿಕ್ಷಕರ ವಜಾ ಯಾಕೆ? – ಮಮತಾ ಬ್ಯಾನರ್ಜಿ ಪ್ರಶ್ನೆ

    ಕೋಲ್ಕತ್ತಾ: ಶಿಕ್ಷಕರ (Teachers) ಅಕ್ರಮ ನೇಮಕಾತಿ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ. ಈ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಪ್ರತಿಕ್ರಿಯಿಸಿದ್ದು, ಸುಪ್ರೀಂ ಕೋರ್ಟ್ (Supreme Court) ತೀರ್ಪನ್ನು ವೈಯಕ್ತಿಕವಾಗಿ ಸ್ವೀಕರಿಸುವುದಿಲ್ಲ ಎಂದಿದ್ದಾರೆ.

    ಸುಪ್ರೀಂ ಕೋರ್ಟ್‌ ತೀರ್ಪನ್ನು ಸರ್ಕಾರ ಜಾರಿಗೆ ತಂದು ಆಯ್ಕೆ ಪ್ರಕ್ರಿಯೆಯನ್ನು ಪುನರಾವರ್ತಿಸುತ್ತದೆ. ವಿರೋಧ ಪಕ್ಷ ಬಿಜೆಪಿ ಮತ್ತು ಸಿಪಿಎಂ ಬಂಗಾಳದ ಶಿಕ್ಷಣ ವ್ಯವಸ್ಥೆ ಕುಸಿಯಬೇಕೆಂದು ಬಯಸುತ್ತವೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 25 ಸಾವಿರ ಶಿಕ್ಷಕರನ್ನು ವಜಾಗೊಳಿಸಿದ ಸುಪ್ರೀಂ – ದೀದಿ ಸರ್ಕಾರಕ್ಕೆ ಮುಖಭಂಗ

    ನಾನು ಈ ದೇಶದ ನಾಗರಿಕಳಾಗಿ ನನಗೆ ಎಲ್ಲಾ ಹಕ್ಕಿದೆ. ನಾನು ಮಾನವೀಯ ದೃಷ್ಟಿಕೋನದಿಂದ ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದೇನೆ. ನ್ಯಾಯಮೂರ್ತಿಗಳ ಮೇಲೆ ಅಪಾರ ಗೌರವವಿದೆ. ಆದರೆ, ನಾನು ಈ ತೀರ್ಪನ್ನು ಒಪ್ಪುತ್ತಿಲ್ಲ ಎಂದು ಹೇಳಲು ಬಯಸುತ್ತೇನೆ. ಅನಗತ್ಯ ತಪ್ಪು ಮಾಹಿತಿ ನೀಡಬೇಡಿ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಈ ತೀರ್ಪು ಕೇವಲ ಅಭ್ಯರ್ಥಿಗಳು ಮಾತ್ರ ಅಲ್ಲ, ಅವರ ಕುಟುಂಬದ ಮೇಲೂ ಪರಿಣಾಮ ಬೀರಿದೆ. ಇನ್ನೂ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದ್ದನ್ನು ಉಲ್ಲೇಖಿಸಿ, ನ್ಯಾಯಾಧೀಶರ ಮನೆಯಲ್ಲಿ ಹಣ ಪತ್ತೆಯಾದರೆ ಅವರನ್ನು ವರ್ಗಾಯಿಸಲಾಗುತ್ತದೆ. ಹಾಗಾದರೆ ಈ ಶಿಕ್ಷಕರನ್ನು ಏಕೆ ವರ್ಗಾಯಿಸಲಾಗಿಲ್ಲ? ಈ ಆದೇಶವನ್ನು ನೀಡಿದ ಮೊದಲ ನ್ಯಾಯಾಧೀಶರು ಈಗ ಬಿಜೆಪಿ ಸಂಸದರಾಗಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದ ಅಡಿಯಲ್ಲಿ 25,000 ಕ್ಕೂ ಹೆಚ್ಚು ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿಯನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು (ಏ.3) ಎತ್ತಿಹಿಡಿದಿದೆ. ಸಂಪೂರ್ಣ ಆಯ್ಕೆ ಪ್ರಕ್ರಿಯೆಯು ವಂಚನೆಯಿಂದ ಕೂಡಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪಿನ ವೇಳೆ ಕಳವಳ ವ್ಯಕ್ತಪಡಿಸಿದೆ.

    ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿ.ವಿ. ಸಂಜಯ್ ಕುಮಾರ್ ಅವರ ಪೀಠವು ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಕಾರಣವಿಲ್ಲ. ನ್ಯಾಯಯುತ ವಿಧಾನಗಳ ಮೂಲಕ ನೇಮಕಗೊಂಡವರು ಸಹ ಕಳಂಕಿತ ಅಭ್ಯರ್ಥಿಗಳಂತೆ ತೊಂದರೆ ಅನುಭವಿಸಿದ್ದಾರೆ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: West Bengal: 2016ರ ನೇಮಕಾತಿ ರದ್ದುಗೊಳಿಸಲು ಕೋಲ್ಕತ್ತಾ ಹೈಕೋರ್ಟ್‌ ಆದೇಶ

  • ಮಹಾ ಕುಂಭವು ‘ಮೃತ್ಯು ಕುಂಭ’ವಾಗಿ ಬದಲಾಗಿದೆ: ಯೋಗಿ ಸರ್ಕಾರದ ವಿರುದ್ಧ ಮಮತಾ ಬ್ಯಾನರ್ಜಿ ಟೀಕೆ

    ಮಹಾ ಕುಂಭವು ‘ಮೃತ್ಯು ಕುಂಭ’ವಾಗಿ ಬದಲಾಗಿದೆ: ಯೋಗಿ ಸರ್ಕಾರದ ವಿರುದ್ಧ ಮಮತಾ ಬ್ಯಾನರ್ಜಿ ಟೀಕೆ

    ಕೋಲ್ಕತ್ತಾ: ಮಹಾ ಕುಂಭವು ಮೃತ್ಯು ಕುಂಭವಾಗಿ ಮಾರ್ಪಟ್ಟಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಯೋಗಿ ಆದಿತ್ಯನಾಥ್‌ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

    ಮಂಗಳವಾರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಮಾತನಾಡಿದ ಬ್ಯಾನರ್ಜಿ, ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೇಂದ್ರ ಸರ್ಕಾರ ಮತ್ತು ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ದುರುಪಯೋಗದ ಆರೋಪಗಳನ್ನು ಹೊರಿಸಿದ್ದಾರೆ.

    ನಾನು ಮಹಾ ಕುಂಭಮೇಳವನ್ನು ಗೌರವಿಸುತ್ತೇನೆ. ಪವಿತ್ರ ಗಂಗಾ ಮಾತೆಯನ್ನು ಗೌರವಿಸುತ್ತೇನೆ. ಆದರೆ, ಸರಿಯಾದ ನಿರ್ವಹಣೆ ಇಲ್ಲ. ಶ್ರೀಮಂತರು, ವಿಐಪಿಗಳಿಗೆ 1 ಲಕ್ಷಕ್ಕೂ ಹೆಚ್ಚಿನ ಬೆಲೆಯಲ್ಲಿ ಶಿಬಿರಗಳನ್ನು [ಟೆಂಟ್‌ಗಳನ್ನು] ಪಡೆಯಲು ವ್ಯವಸ್ಥೆಗಳು ಲಭ್ಯವಿದೆ. ಬಡವರಿಗೆ ಕುಂಭಮೇಳದಲ್ಲಿ ಯಾವುದೇ ವ್ಯವಸ್ಥೆಗಳಿಲ್ಲ. ಹೆಚ್ಚು ಜನರು ಸೇರುವ ಕಡೆ ಕಾಲ್ತುಳಿತ ಸಾಮಾನ್ಯ. ಆದರೆ, ವ್ಯವಸ್ಥೆಗಳನ್ನು ಮಾಡುವುದು ಮುಖ್ಯ ಎಂದು ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಬಾಂಗ್ಲಾದೇಶದ ಮೂಲಭೂತವಾದಿಗಳೊಂದಿಗೆ ಸಂಪರ್ಕ ಹೊಂದಿದ್ದೇವೆ ಎಂಬ ಆರೋಪಗಳನ್ನು ಬಿಜೆಪಿ ಸಾಬೀತುಪಡಿಸಲಿ. ಒಂದು ವೇಳೆ ಸಾಬೀತುಪಡಿಸಿದರೆ, ನಾನು ರಾಜೀನಾಮೆ ನೀಡುತ್ತೇನೆ ಎಂದು ಬ್ಯಾನರ್ಜಿ ಸವಾಲು ಹಾಕಿದ್ದಾರೆ.

  • ದಿಲ್ಲಿ ಗೆದ್ದಾಯ್ತು.. 2026ಕ್ಕೆ ಬಂಗಾಳ ಟಾರ್ಗೆಟ್‌: ಮಮತಾ ಬ್ಯಾನರ್ಜಿಗೆ ಬಿಜೆಪಿ ಎಚ್ಚರಿಕೆ

    ದಿಲ್ಲಿ ಗೆದ್ದಾಯ್ತು.. 2026ಕ್ಕೆ ಬಂಗಾಳ ಟಾರ್ಗೆಟ್‌: ಮಮತಾ ಬ್ಯಾನರ್ಜಿಗೆ ಬಿಜೆಪಿ ಎಚ್ಚರಿಕೆ

    ಕೋಲ್ಕತ್ತಾ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅದ್ಭುತ ಗೆಲುವಿನಿಂದ ಉತ್ತೇಜಿತರಾಗಿರುವ ಸುವೇಂದು ಅಧಿಕಾರಿ, ಪಶ್ಚಿಮ ಬಂಗಾಳ ಸಿಎಂಗೆ ಎಚ್ಚರಿಕೆ ಸಂದೇಶವೊಂದನ್ನು ರವಾನಿಸಿದ್ದಾರೆ. ‘ಎಚ್ಚರಿಕೆಯಿಂದ ಇರಿ.. ಮುಂದಿನ ಟಾರ್ಗೆಟ್‌ ನೀವೇ’ ಎಂದು ತಿಳಿಸಿದ್ದಾರೆ.

    ಬಿಜೆಪಿಯ ಗೆಲುವು ಖಚಿತವಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಧಿಕಾರಿ, ‘ದೆಹಲಿ ಕಿ ಜೀತ್ ಹಮಾರಿ ಹೈ… 2026 ಮೇ ಬೆಂಗಾಲ್ ಕಿ ಬಾರಿ’ (ನಾವು ದೆಹಲಿಯನ್ನು ಗೆದ್ದಿದ್ದೇವೆ.. 2026 ಕ್ಕೆ ಬಂಗಾಳದ ಸರದಿ) ಎಂದು ಬ್ಯಾನರ್ಜಿಗೆ ಎಚ್ಚರಿಕೆ ನೀಡಿದ್ದಾರೆ.

    ಬಂಗಾಳದ ಮತ್ತೊಬ್ಬ ಹಿರಿಯ ಬಿಜೆಪಿ ನಾಯಕ ಸುಕಾಂತ ಮಜುಂದಾರ್ ಕೂಡ ಇದೇ ರೀತಿಯ ಎಚ್ಚರಿಕೆಯನ್ನು ನೀಡುತ್ತಾ, ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಂಗಾಳದ ಜನರು ಕೂಡ ಬಿಜೆಪಿಗೆ ಮತ ಹಾಕುತ್ತಾರೆ’ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಗೆಲುವಿಗಾಗಿ ಇಬ್ಬರೂ ದೆಹಲಿಯ ಬಂಗಾಳಿ ಸಮುದಾಯಕ್ಕೆ ಧನ್ಯವಾದ ತಿಳಿಸಿದ್ದಾರೆ.

    ದೆಹಲಿಯ 70 ವಿಧಾನಸಭಾ ಸ್ಥಾನಗಳಲ್ಲಿ 48 ಕ್ಷೇತ್ರಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಎಎಪಿ 22 ಸ್ಥಾನಗಳಿಗೆ ತೃಪ್ತಿ ಪಟ್ಟಿದೆ. ಕಾಂಗ್ರೆಸ್‌ ಸೊನ್ನೆ ಸುತ್ತಿದೆ.

    ಬಿಜೆಪಿ 2020 ರ ಚುನಾವಣೆಯಲ್ಲಿ 8 ಮತ್ತು 2015 ರಲ್ಲಿ ಮೂರು ಸ್ಥಾನಗಳನ್ನು ಗೆದ್ದಿತ್ತು. ಎಎಪಿಯಲ್ಲಿ ಕೇಜ್ರಿವಾಲ್‌, ಸಿಸೋಡಿಯಾ ಸೇರಿದಂತೆ ಅನೇಕ ಘಟಾನುಘಟಿ ನಾಯಕರೇ ಚುನಾವಣೆಯಲ್ಲಿ ಸೋತು ಮುಖಭಂಗ ಅನುಭವಿಸಿದ್ದಾರೆ.

  • ಬಾಂಗ್ಲಾ ಭಯೋತ್ಪಾದಕರು ಒಳನುಸುಳಲು BSF ಸಹಕಾರ: ದೀದಿ ಆರೋಪ

    ಬಾಂಗ್ಲಾ ಭಯೋತ್ಪಾದಕರು ಒಳನುಸುಳಲು BSF ಸಹಕಾರ: ದೀದಿ ಆರೋಪ

    – ಪ.ಬಂಗಾಳ ಅಸ್ಥಿರಗೊಳಿಸಲು ಕೇಂದ್ರದಿಂದ ತಂತ್ರ

    ಕೊಲ್ಕತ್ತಾ: ಪಶ್ಚಿಮ ಬಂಗಾಳ (West Bengal) ರಾಜ್ಯವನ್ನು ಅಸ್ಥಿರಗೊಳಿಸಲು ಕೇಂದ್ರ ಭದ್ರತಾ ಪಡೆಗಳು (BSF) ಬಾಂಗ್ಲಾದೇಶದ (Bangladesh) ಭಯೋತ್ಪಾದಕರನ್ನು ಒಳ ನುಸುಳಲು ಅವಕಾಶ ಮಾಡಿಕೊಡುತ್ತಿವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಗಂಭೀರ ಆರೋಪ ಮಾಡಿದ್ದಾರೆ. ಬಾಂಗ್ಲಾದೇಶದ ಒಳನುಸುಳುವಿಕೆಯಿಂದ ಪಶ್ಚಿಮ ಬಂಗಾಳದಲ್ಲಿ ಶಾಂತಿ ಹಾಳಾಗುತ್ತಿದೆ ಎನ್ನುವ ಅಮಿತ್ ಶಾ ಹೇಳಿಕೆಗೆ ಈ ಮೂಲಕ ತಿರುಗೇಟು ನೀಡಿದ್ದಾರೆ.

    ಆಡಳಿತಾತ್ಮಕ ಸಭೆಯಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶ ಭಯೋತ್ಪಾದಕರನ್ನು ಪಶ್ಚಿಮ ಬಂಗಾಳದೊಳಗೆ ನುಸುಳಲು ಅವಕಾಶ ನೀಡುವುದು ಕೇಂದ್ರ ಸರ್ಕಾರದ ಯೋಚಿತ ಪ್ರಯತ್ನವಾಗಿದೆ. ಇದರ ಭಾಗವಾಗಿ ಬಾಂಗ್ಲಾದೇಶದ ಗಡಿಯನ್ನು ಕಾಪಾಡುವ ಬಿಎಸ್‌ಎಫ್ ಬಂಗಾಳದೊಳಗೆ ಭಯೋತ್ಪಾದಕರು ನುಸುಳಲು ಅವಕಾಶ ನೀಡುತ್ತಿದೆ ಮತ್ತು ಮಹಿಳೆಯರನ್ನು ಹಿಂಸಿಸುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿರುವ ಎಲ್ಲಾ ಡಿಸಿಪಿಗಳಿಗೆ ಮೊಬೈಲ್‌ ಗಿಫ್ಟ್‌

    ಬಿಎಸ್‌ಎಫ್ ವಿವಿಧ ಪ್ರದೇಶಗಳಿಂದ ಬಂಗಾಳಕ್ಕೆ ಭಯೋತ್ಪಾದಕರು ನುಸುಳಲು ಅವಕಾಶ ನೀಡುತ್ತಿದೆ ಮತ್ತು ಮಹಿಳೆಯರಿಗೆ ಚಿತ್ರಹಿಂಸೆ ನೀಡುತ್ತಿದೆ. ಟಿಎಂಸಿ ಗಡಿಯನ್ನು ಕಾಪಾಡುತ್ತಿಲ್ಲ, ಗಡಿ ನಮ್ಮ ಕೈಯಲ್ಲಿಲ್ಲ, ಆದ್ದರಿಂದ ಯಾರಾದರೂ ಟಿಎಂಸಿ ಒಳನುಸುಳುವಿಕೆಗೆ ಅನುಮತಿ ನೀಡಿದೆ ಎಂದು ಆರೋಪಿಸಿದರೆ, ಅದು ಬಿಎಸ್‌ಎಫ್‌ನದು ಎಂದು ನಾನು ಎತ್ತಿ ತೋರಿಸುತ್ತೇನೆ, ಅದು ನನ್ನ ಜವಾಬ್ದಾರಿ ಎಂದು ಕಿಡಿಕಾರಿದರು. ಇದನ್ನೂ ಓದಿ: ʼಇಂಡಿಯಾʼಗೆ ಬನ್ನಿ, ಬಾಗಿಲು ಸದಾ ತೆರೆದಿದೆ: ನಿತೀಶ್‌ಗೆ ಲಾಲೂ ಆಫರ್‌

    ಬಿಎಸ್‌ಎಫ್ ಒಳನುಸುಳುವಿಕೆಗೆ ಅವಕಾಶ ನೀಡುವ ಸ್ಥಳಗಳನ್ನು ತನಿಖೆ ಮಾಡಲು ಮತ್ತು ಗುರುತಿಸಲು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಸೂಚನೆ ನೀಡುತ್ತೇನೆ. ಪೊಲೀಸರ ಬಳಿ ಎಲ್ಲಾ ಮಾಹಿತಿ ಇದೆ. ಕೇಂದ್ರದ ಬಳಿಯೂ ಇದೆ. ರಾಜೀವ್ ಕುಮಾರ್ (ಡಿಜಿಪಿ) ಮತ್ತು ಸ್ಥಳೀಯ ಮೂಲಗಳಿಂದ ನನಗೆ ಈ ಮಾಹಿತಿ ಬಂದಿದೆ. ಈ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದರು. ಇದನ್ನೂ ಓದಿ: ಮಗುವಿಗೆ ಸೌತೆಕಾಯಿ ತಿನ್ನಿಸಬೇಡ ಅಂದಿದ್ದಕ್ಕೆ ತಂಗಿಯನ್ನೇ ಕೊಂದ ಅಣ್ಣ!

    ಬಂಗಾಳ ಮತ್ತು ನೆರೆಯ ಬಾಂಗ್ಲಾದೇಶದ ನಡುವೆ ಯಾವುದೇ ದ್ವೇಷವಿಲ್ಲ. ನಾವು ಶಾಂತಿ ಬಯಸುತ್ತೇವೆ. ಆದರೆ ಗೂಂಡಾಗಳನ್ನು ಇಲ್ಲಿ ಅನುಮತಿಸಲಾಗುತ್ತಿದೆ. ಅವರು ಅಪರಾಧಗಳನ್ನು ಮಾಡುತ್ತಾರೆ. ಬಳಿಕ ಗಡಿಗೆ ಹಿಂತಿರುಗುತ್ತಾರೆ. ಬಿಎಸ್‌ಎಫ್ ಇದನ್ನು ಸಕ್ರಿಯಗೊಳಿಸುತ್ತಿದೆ. ಇದರಲ್ಲಿ ಕೇಂದ್ರದ ಪಾತ್ರವಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಕೇಸ್ ರಾಜಕೀಯಗೊಳಿಸಲಾಗುತ್ತಿದೆ: ಮದ್ರಾಸ್ ಹೈಕೋರ್ಟ್

    ಬ್ಯಾನರ್ಜಿ ಹೇಳಿಕೆಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಬಾಂಗ್ಲಾದೇಶದ ಒಳನುಸುಳುವಿಕೆಗೆ ಬಂಗಾಳ ನರ್ಸರಿಯಾಗಿದೆ ಎಂದು ಹೇಳಿದರು. ಅಪರಾಧ ಚಟುವಟಿಕೆಯಲ್ಲಿ ಯಾರು ಸಿಕ್ಕಿಬೀಳುತ್ತಾರೋ ಅವರು ಬಾಂಗ್ಲಾದೇಶೀಯರು ಮತ್ತು ಅವರ ಹೆಚ್ಚಿನ ವಿಳಾಸಗಳು ಬಂಗಾಳದವು. ಮಮತಾ ದೀದಿ ಮತದ ದುರಾಸೆಯಿಂದ ಇದೆಲ್ಲವನ್ನೂ ಮಾಡುತ್ತಿದ್ದಾರೆ ಮತ್ತು ಬಂಗಾಳವನ್ನು ಬಾಂಗ್ಲಾದೇಶಿ ಮುಸ್ಲಿಮರು ಮತ್ತು ರೋಹಿಂಗ್ಯಾಗಳ ಹೆಬ್ಬಾಗಿಲು ಮಾಡುತ್ತಿದ್ದಾರೆ. ಈ ನಡುವೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿದೆ ಮತ್ತು ಇಡೀ ಜಗತ್ತು ಇದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ವಕ್ಫ್ ಕಾನೂನು ರದ್ದಾಗೋವರೆಗೂ ಹೋರಾಟ: ಯತ್ನಾಳ್

  • ಕೋಲ್ಕತ್ತಾ ರೇಪ್ & ಮರ್ಡರ್ ಕೇಸ್ | ಘಟನಾ ಸ್ಥಳದಲ್ಲಿ ಪ್ರತಿರೋಧದ ಪುರಾವೆ ಇಲ್ಲ – ಸಿಬಿಐಗೆ CFSL ವರದಿ ಸಲ್ಲಿಕೆ

    ಕೋಲ್ಕತ್ತಾ ರೇಪ್ & ಮರ್ಡರ್ ಕೇಸ್ | ಘಟನಾ ಸ್ಥಳದಲ್ಲಿ ಪ್ರತಿರೋಧದ ಪುರಾವೆ ಇಲ್ಲ – ಸಿಬಿಐಗೆ CFSL ವರದಿ ಸಲ್ಲಿಕೆ

    ಕೋಲ್ಕತ್ತಾ: ಇಲ್ಲಿನ ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಧಿವಿಜ್ಞಾನ ಪ್ರಯೋಗಾಲಯವು (CFSL) ಕೇಂದ್ರೀಯ ತನಿಖಾ ದಳಕ್ಕೆ (CBI) ವರದಿ ಅಂಶಗಳು ಬಹಿರಂಗಗೊಂಡಿದೆ. ಆದ್ರೆ ವರದಿಯ ಅಂಶಗಳು ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ.

    ಟ್ರೈನಿ ವೈದ್ಯೆ ಮೃತದೇಹ ಪತ್ತೆಯಾದ ಸೆಮಿನಾರ್‌ ಹಾಲ್‌ನಲ್ಲಿ ಘರ್ಷಣೆ ಪ್ರತಿರೋಧ ನಡೆದಿರುವ ಬಗ್ಗೆ ಸ್ಪಷ್ಟ ಚಿತ್ರಣಗಳಿಲ್ಲ ಎಂದು ತನ್ನ ವರದಿಯಲ್ಲಿ ಸಿಎಫ್‌ಎಸ್‌ಎಲ್‌ನಲ್ಲಿ ಉಲ್ಲೇಖಿಸಿರಿವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: Kolkata Horror | ಕ್ರಿಮಿನಲ್‌ ಮನಸ್ಥಿತಿ ಬರೋದು ಏಕೆ? ಮನೋವಿಜ್ಞಾನಿಗಳು ಏನ್‌ ಹೇಳ್ತಾರೆ?

    ಸಿಬಿಐಗೆ ಸಲ್ಲಿಸಿದ ವರದಿಯಲ್ಲಿ ಸಾಕ್ಷ್ಯಗಳಿಲ್ಲದಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೌದು. ದೆಹಲಿಯ ಸಿಎಫ್‌ಎಸ್‌ಎಲ್‌ನ ತಜ್ಞರು ಕಳೆದ ಆಗಸ್ಟ್‌ 14ರಂದು ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅಪರಾಧ ನಡೆದ ಸ್ಥಳದಲ್ಲಿ ಪರಿಶೀಲಿಸಿದ್ದರು. ಈ ವೇಳೆ ಅತ್ಯಾಚಾರಿ ಎದುರು ಸಂತ್ರಸ್ತೆ ತೋರಿಸಿದ ಸಂಭಾವ್ಯ ಹೋರಾಟ ಅಥವಾ ಅವರ ನಡುವಿನ ಪ್ರತಿರೋಧದ ಸಾಕ್ಷ್ಯವು ಸ್ಥಳದಲ್ಲಿ ಕಾಣೆಯಾಗಿದೆ. ಕೆಲವು ಪ್ರಮುಖ ಸಾಕ್ಷ್ಯಗಳು ಸ್ಥಳದಲ್ಲಿ ಕಂಡುಬಂದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದೆ ಎಂದು ಸಿಬಿಐ ಮೂಲಗಳು ಕೋರ್ಟ್‌ಗೆ ತಿಳಿಸಿವೆ.

    ಕಳೆದ ಆಗಸ್ಟ್‌ನಲ್ಲಿ ಪ್ರಕರಣ ನಡೆದ ಬಳಿಕ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯ ಪ್ರಗತಿ ವರದಿಯನ್ನ ಸಲ್ಲಿಸಲು ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ಗಡುವು ನೀಡಿತ್ತು. ಮತ್ತೆ ಗಡುವು ನೀಡಿದ್ದ ಅವಧಿಯನ್ನು ವಿಸ್ತರಣೆ ಮಾಡಿತ್ತು. ಇದನ್ನೂ ಓದಿ: ಕ್ರಿಸ್‌ಮಸ್‌ ಸಂಭ್ರಮ – ನೀವೂ ವಿಶ್‌ ಮಾಡ್ಬೇಕಾ? ವಾಟ್ಸಪ್‌ ಸ್ಟೇಟಸ್‌ಗೆ ಇಲ್ಲಿದೆ ಸಿಂಪಲ್‌ ಟಿಪ್ಸ್‌

    ಮೊದಲು ತನಿಖೆ ನಡೆಸಿದ್ದ ಕೋಲ್ಕತ್ತಾ ಪೊಲೀಸರು, ಆಗಸ್ಟ್ 9 ರಂದು ಸಂತ್ರಸ್ತೆಯ ದೇಹವನ್ನು ಗುರುತಿಸಿದ ಸೆಮಿನಾರ್ ಹಾಲ್‌ನಿಂದ 40 ವಸ್ತುಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿತ್ತು. ನಂತರ ಪ್ರಕರಣವನ್ನ ಸಿಬಿಐ ತನಿಖೆಗೆ ವರ್ಗಾಯಿಸಲಾಗಿತ್ತು. ಅದಾದ ಬಳಿಕ ವಶಕ್ಕೆ ಪಡೆದಿದ್ದ ವಸ್ತುಗಳನ್ನು ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು.

    ಇದಕ್ಕೂ ಮೊದಲು ಆಗಸ್ಟ್ 14 ರಂದು, CFSL ತಜ್ಞರ ತಂಡವು ಅಪರಾಧ ನಡೆದ ಸೆಮಿನಾರ್ ಹಾಲ್ ಅನ್ನು ಭೌತಿಕವಾಗಿ ಪರೀಕ್ಷಿಸಿತ್ತು. ಆಗ ವಶಪಡಿಸಿಕೊಂಡ ವಸ್ತುಗಳ ವಿಧಿವಿಜ್ಞಾನ ವರದಿಗಳ ಆಧಾರದ ಮೇಲೆ ಸಿಬಿಐಗೆ ವರದಿ ಸಲ್ಲಿಸಿತು. ಇದನ್ನೂ ಓದಿ: 4 ಮಕ್ಕಳೊಂದಿಗೆ ಪಾಕ್‌ನಿಂದ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಸೀಮಾ ಗರ್ಭಿಣಿ

  • ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಕಾಮುಕನನ್ನು ಮರಕ್ಕೆ ಕಟ್ಟಿ ಬಡಿದು ಕೊಂದ ಗ್ರಾಮಸ್ಥರು

    ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಕಾಮುಕನನ್ನು ಮರಕ್ಕೆ ಕಟ್ಟಿ ಬಡಿದು ಕೊಂದ ಗ್ರಾಮಸ್ಥರು

    ಕೋಲ್ಕತ್ತಾ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ವ್ಯಕ್ತಿಯನ್ನು ಗ್ರಾಮಸ್ಥರು ಮರಕ್ಕೆ ಕಟ್ಟಿ ಥಳಿಸಿ ಹತ್ಯೆಗೈದ ಘಟನೆ ಪಶ್ಚಿಮ ಬಂಗಾಳದ (West Bengal) ಫಲಕಟಾ ಗ್ರಾಮದಲ್ಲಿ ನಡೆದಿದೆ.

    ಮೋನಾ ರಾಯ್ (40) ಎಂಬಾತನನ್ನು ಗ್ರಾಮಸ್ಥರು ಮರಕ್ಕೆ ಕಟ್ಟಿ ಥಳಿಸಿದ್ದಾರೆ. ಪೊಲೀಸರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತ ಮೃತಪಟ್ಟಿದ್ದಾನೆ.

    6 ವರ್ಷದ ಅಪ್ರಾಪ್ತೆ ಕಾಣೆಯಾದ ಬಗ್ಗೆ ಆಕೆಯ ಪೋಷಕರು ಸಮೀಪದ ಪೊಲೀಸ್‌ (Police) ಠಾಣೆಗೆ ದೂರು ನೀಡಿದ್ದರು. ಪೊಲೀಸರ ಹುಡುಕಾಟದ ವೇಳೆ ಆಕೆಯ ಬಟ್ಟೆ ಪತ್ತೆಯಾಗಿತ್ತು. ಬಳಿಕ ಬಾಲಕಿಯ ಶವ ಕೊಳ ಒಂದರಲ್ಲಿ ಪತ್ತೆಯಾಗಿತ್ತು. ಬಳಿಕ ಆಕೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು.

    ಈ ಬಗ್ಗೆ ಪ್ರತಿಕ್ರಿಯಿಸಿರು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ (Suvendu Adhikari), ಸಂತ್ರಸ್ತೆಯ ಪೋಷಕರನ್ನು ಭೇಟಿ ಮಾಡಿದ್ದೇನೆ. ಅಲ್ಲದೇ ಮರಣೋತ್ತರ ಪರೀಕ್ಷೆಯ ಬಗ್ಗೆ ಕೆಲವು ಅನುಮಾನಗಳಿವೆ. ನ್ಯಾಯಾಲಯದಲ್ಲಿ ಸಂತ್ರಸ್ತೆಯ ಕುಟುಂಬಕ್ಕೆ ಅದು ತೊಡಕಾಗಬಹುದು. ಅವರ ಕಾನೂನು ಸಹಾಯಕ್ಕೆ ನಾವು ಇರಲಿದ್ದೇವೆ ಎಂದು ತಿಳಿಸಿದ್ದಾರೆ.

    ಟ್ಯೂಷನ್‌ಗೆ ಹೋಗುತ್ತಿದ್ದ ಯುವತಿಯನ್ನು ಅಪಹರಿಸಿ ಅತ್ಯಾಚಾರ
    ಕೋಲ್ಕತ್ತಾದ ಪಕ್ಕದಲ್ಲಿರುವ ಗೈಘಾಟದಲ್ಲಿ ಶುಕ್ರವಾರ ಸಂಜೆ ಟ್ಯೂಷನ್‌ಗೆ ಹೋಗುತ್ತಿದ್ದ ಯುವತಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಘಟನೆ ಬಳಿಕ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ. ಶಂಕಿತ ವ್ಯಕ್ತಿ ಸ್ಥಳೀಯ ತೃಣಮೂಲ ನಾಯಕನ ಸೋದರಳಿಯ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಆರೋಪಿ ಒಂದು ವರ್ಷದಿಂದ ಆಕೆಗೆ ಕಿರುಕುಳ ನೀಡುತ್ತಿದ್ದ ಎಂದು ಆಕೆಯ ಪೋಷಕರು ಹೇಳಿಕೊಂಡಿದ್ದಾರೆ. ಯುವತಿಯ ಪೋಷಕರು ನೀಡಿದ ದೂರಿನ ಅನ್ವಯ ಆತನನ್ನು ಬಂಧಿಸಲಾಗಿದೆ.

    ಈ ಹಿಂದೆ ಗ್ರಾಮದಲ್ಲಿ ವಿಷಯ ಪ್ರಸ್ತಾಪಿಸಿದಾಗ ಆತ ತನ್ನ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿದ್ದ. ಆದರೆ ಅದನ್ನು ಲೆಕ್ಕಿಸದೆ ಈಗ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಆಕೆ ಮನೆಯಲ್ಲಿ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

  • ರವೀಂದ್ರ ಸಂಗೀತದ ಬದಲಿಗೆ ಬಂಗಾಳದಲ್ಲಿ ಬಾಂಬ್ ಸದ್ದು ಕೇಳುತ್ತಿದೆ: ದೀದಿ ವಿರುದ್ಧ ಅಮಿತ್ ಶಾ ಕಿಡಿ

    ರವೀಂದ್ರ ಸಂಗೀತದ ಬದಲಿಗೆ ಬಂಗಾಳದಲ್ಲಿ ಬಾಂಬ್ ಸದ್ದು ಕೇಳುತ್ತಿದೆ: ದೀದಿ ವಿರುದ್ಧ ಅಮಿತ್ ಶಾ ಕಿಡಿ

    – ಒಳನುಸುಳುವಿಕೆ ತಡೆಯಿಂದ ಮಾತ್ರ ಬಂಗಾಳದಲ್ಲಿ ಶಾಂತಿ ನೆಲೆಸಲು ಸಾಧ್ಯ

    ಕೋಲ್ಕತ್ತಾ: ರವೀಂದ್ರ ಸಂಗೀತ ಕೇಳುವ ಬದಲಿಗೆ ಬಂಗಾಳದಲ್ಲಿಂದು (West Bengal) ಬಾಂಬ್‌ಗಳ ಸದ್ದು ಕೇಳುತ್ತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಕಿಡಿಕಾರಿದ್ದಾರೆ.

    ಪಶ್ಚಿಮ ಬಂಗಾಳದ ಗಡಿಯಲ್ಲಿ ನಿರ್ಮಿಸಿರುವ ಪ್ರಯಾಣಿಕರ ನೂತನ ಟರ್ಮಿನಲ್ ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಸ್ಥಾನ ಗೆದ್ದ ಬಳಿಕ ಮಮತಾ ದೀದಿ ಸಂತೋಷ ಪಡುತ್ತಿದ್ದರು. ಆದರೆ ನಾವು ಎರಡು ಸ್ಥಾನ ಪಡೆದಿದ್ದರೂ 370ನೇ ವಿಧಿಯನ್ನು ತೆಗೆದುಹಾಕುವ ಗುರಿ ಹೊಂದಿದ್ದೆವು ಎಂಬುದನ್ನು ಮರೆಯಬೇಡಿ. 2026ರಲ್ಲಿ ಬಂಗಾಳದಲ್ಲಿ ಬಿಜೆಪಿ (BJP) ಮೂರನೇ ಎರಡರಷ್ಟು ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ತಾಕತ್ತಿದ್ರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಿ – ಬೈರತಿ ಸುರೇಶ್‌ಗೆ ಶೋಭಾ ಕರಂದ್ಲಾಜೆ ಸವಾಲ್

    ಅಕ್ರಮ ವಲಸೆ ಮಿತಿ ಮೀರಿದೆ:
    ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲಸಲು ಗಡಿಗಳಲ್ಲಿ ಒಳನುಸುಳುವಿಕೆ ಮೇಲೆ ನಿಯಂತ್ರಣ ಸಾಧಿಸುವುದು ಅತ್ಯಗತ್ಯವಾಗಿದೆ. 2026ರಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಕ್ರಮ ವಲಸೆಯನ್ನು ತಡೆಯಲಾಗುವುದು. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ದೇಶದಲ್ಲಿ ಶಾಂತಿ ನೆಲೆಸಲು ಭೂಬಂದರುಗಳು ಪ್ರಮುಖ ಪಾತ್ರವಹಿಸುತ್ತದೆ. ಬಾಂಗ್ಲಾದೇಶ ಮತ್ತು ಭಾರತದ ಸಂಬಂಧ ಉತ್ತಮವಾಗಿರಲು ಗಡಿಗಳಲ್ಲಿ ನುಸುಳುವಿಕೆಯ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆಂದು ಊರಿಗೆ ತೆರಳುವಾಗ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ – 10 ಮಂದಿಗೆ ಗಾಯ

    ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆದ ಅತ್ಯಾಚಾರ ಪ್ರಕರಣದ ಕುರಿತು ಮಾತನಾಡಿ, ಸಂದೇಶ್‌ಖಲಿ ಮತ್ತು ಆರ್‌ಜಿ.ಕರ್ ಅತ್ಯಾಚಾರ ಪ್ರಕರಣಗಳನ್ನು ನೋಡಿದ ಮೇಲೆ ಬಂಗಾಳದಲ್ಲಿ ನಮ್ಮ ತಾಯಂದಿರು ಮತ್ತು ಸಹೋದರಿಯರು ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಶ್ರೀ ಶ್ರೀ ರವಿಶಂಕರ್ ಗುರೂಜಿಗೆ ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ