Tag: Mamatha banarjee

  • ಟ್ವಿಟ್ಟರ್ ಖಾತೆಯಲ್ಲಿ ರಾಜ್ಯಪಾಲರನ್ನು ಬ್ಲಾಕ್ ಮಾಡಿದ ಮಮತಾ ಬ್ಯಾನರ್ಜಿ

    ಟ್ವಿಟ್ಟರ್ ಖಾತೆಯಲ್ಲಿ ರಾಜ್ಯಪಾಲರನ್ನು ಬ್ಲಾಕ್ ಮಾಡಿದ ಮಮತಾ ಬ್ಯಾನರ್ಜಿ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಟ್ವಿಟರ್‌ನಿಂದ ರಾಜ್ಯಪಾಲ ಜಗದೀಪ್ ಧನಕರ್‌ನನ್ನು ಬ್ಲಾಕ್ ಮಾಡಿರುವುದಾಗಿ ತಿಳಿಸಿದ್ದಾರೆ.

    ಮೈಕ್ರೋಬ್ಲಾಗಿಂಗ್ ಪ್ಲಾಟ್‍ಫಾರ್ಮ್‍ನಿಂದ ಜಗದೀಪ್ ಧನಕರ್ ಅವರು ಸರ್ಕಾರದ ವಿರುದ್ಧ ಹಲವಾರು ಪೋಸ್ಟ್‌ಗಳನ್ನು ಹಾಕುತ್ತಿದ್ದರು. ಆ ಪೋಸ್ಟ್‌ಗಳು ನನಗೆ ಕಿರಿಕಿರಿ ಎನಿಸುತ್ತಿದ್ದವು. ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಹಲವಾರು ಸಂದರ್ಭಗಳಲ್ಲಿ ರಾಜ್ಯಪಾಲರು ಬೆದರಿಕೆಗಳನ್ನೂ ಹಾಕಿದ್ದಾರೆ. ಹೀಗಾಗಿ ನನ್ನ ಟ್ವಿಟ್ಟರ್ ಖಾತೆಯಿಂದ ಅವರನ್ನು ಬ್ಲಾಕ್ ಮಾಡಿದ್ದೇನೆ ಎಂದು ಬ್ಯಾನರ್ಜಿ ಹೇಳಿದ್ದಾರೆ. ಇದನ್ನೂ ಓದಿ: ಆರ್ಥಿಕ ಲಾಭಕ್ಕಾಗಿ ಮದ್ಯ ಮಾರಾಟಕ್ಕೆ ಆದ್ಯತೆ ನೀಡುತ್ತಿರುವುದು ದುರದೃಷ್ಟಕರ: ಅಣ್ಣಾ ಹಜಾರೆ

    ಗವರ್ನರ್ ಜಗದೀಪ್ ಧನಕರ್ ಅವರನ್ನು ಟ್ವಿಟರ್‌ನಿಂದ ಬ್ಲಾಕ್‌ ಮಾಡಲು ನಾನು ಒತ್ತಾಯಿಸಿದ್ದೇನೆ. ಅವರು ಪ್ರತಿದಿನ ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಟ್ವೀಟ್ ಮಾಡುತ್ತಿದ್ದರು. ನಾವು ಅವರ ಬಂಧಿತ ಕಾರ್ಮಿಕರು ಎಂದು ಬೆದರಿಕೆ ಹಾಕುತ್ತಿದ್ದರು ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದನ್ನೂ ಓದಿ: Economic Survey 2022: ಹೊಸ ಹಣಕಾಸು ವರ್ಷಕ್ಕೆ ಶೇ.8-8.5 ಬೆಳವಣಿಗೆ ನಿರೀಕ್ಷೆ

    ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಧನಕರ್ ಅವರನ್ನು ಪದಚ್ಯುತಿಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಲವು ಬಾರಿ ಪತ್ರ ಬರೆದಿದ್ದೇನೆ. ಆದರೂ ಇದುವರೆಗೆ ಪ್ರಧಾನಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

  • ದೀದಿಯನ್ನು ಸದ್ದಾಂ ಹುಸೇನ್‍ಗೆ ಹೋಲಿಸಿದ ವಿವೇಕ್ ಓಬೇರಾಯ್!

    ದೀದಿಯನ್ನು ಸದ್ದಾಂ ಹುಸೇನ್‍ಗೆ ಹೋಲಿಸಿದ ವಿವೇಕ್ ಓಬೇರಾಯ್!

    ನವದೆಹಲಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಇರಾಕಿ ಸರ್ವಾಧಿಕಾರಿ ಸದ್ದಾಂ ಹುಸೇನ್ ರೀತಿ ವರ್ತಿಸುತ್ತಿದ್ದಾರೆ ಎಂದು ಬಾಲಿವುಡ್ ನಟ ವಿವೇಕ್ ಓಬೇರಾಯ್ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ.

    ದೀದಿ ಕೈಯಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಅವರು ಸರ್ವಾಧಿಕಾರಿ ರೀತಿ ವರ್ತಿಸುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಅವರನ್ನು ವಿವೇಕ್ ಸದ್ದಾಂ ಹುಸೇನ್ ಅವರಿಗೆ ಹೋಲಿಕೆ ಮಾಡಿದ್ದಾರೆ. ಈ ಹಿಂದೆ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಅವರು ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ವಿವೇಕ್ ಪ್ರತಿಕ್ರಿಯಿಸಿ ಒಬ್ಬ ಹಿರಿಯ ನಟ ಹಾಗೂ ರಾಜಕಾರಣಿಯಾಗಿ ಈ ರೀತಿ ಹೇಳಿಕೆಗಳನ್ನು ನೀಡಿವುದು ಶೋಭೆಯಲ್ಲ. ಇದು ತಪ್ಪು ಎಂದು ಕಿಡಿಕಾರಿದ್ದರು. ಇದಾದ ಬಳಿಕ ಈಗ ದೀದಿಗೆ ಸಖತ್ ಟಾಂಗ್ ಕೊಟ್ಟು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:ಸ್ವತಂತ್ರ ಭಾರತದ ಮೊದಲ ಉಗ್ರ `ಹಿಂದೂ’: ಕಮಲ್ ಹಾಸನ್

    ಟ್ವೀಟ್‍ನಲ್ಲಿ ಏನಿದೆ?
    ಗೌರವಾನುತ ಮಹಿಳೆ ದೀದಿ ಅವರು ಸದ್ದಾಂ ಹುಸೇನ್ ರೀತಿ ಏಕೆ ವರ್ತಿಸುತ್ತಿದ್ದಾರೆ ಎಂದು ತಿಳಿಯುತ್ತಿಲ್ಲ. ವಿಪರ್ಯಾಸವೆಂದರೆ ಸರ್ವಾಧಿಕಾರಿ ರೀತಿ ಆಡುತ್ತಿರುವ ದೀದಿಯಿಂದಲೇ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಮೊದಲು ಪ್ರಿಯಾಂಕಾ ಶರ್ಮಾ ಈಗ ತಜೀಂದ್ರಬಗ್ಗಾ. ಇಲ್ಲಿ ದೀದಿಗಿರಿ ನಡೆಯಲ್ಲ ಎಂದು ಬರೆದು ಬಂಗಾಳವನ್ನು ರಕ್ಷಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಿ, ಫ್ರೀ ತಜೀಂದ್ರಬಗ್ಗಾ ಎಂದು ಹ್ಯಾಷ್‍ಟ್ಯಾಗ್ ಹಾಕಿ ಟ್ವೀಟ್ ಮಾಡಿದ್ದಾರೆ.

    ಮಂಗಳವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರೋಡ್ ಶೋ ನಡೆಸುತ್ತಿದ್ದ ಸಂದರ್ಭದಲ್ಲಿ ಕೋಲ್ಕತ್ತಾದಲ್ಲಿ ಭಾರೀ ಹಿಂಸಾಚಾರ ನಡೆದಿತ್ತು. ರ‍್ಯಾಲಿಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಟ್ವೀಟ್ ಮಾಡಿ ಈ ಬಗ್ಗೆ ಬಿಜೆಪಿಯ ಐಟಿ ಸೆಲ್ಸ್ ಮುಖ್ಯಸ್ಥ ಅಮಿತ್ ಮಾಳ್ವಿಯಾ ಹಲವಾರು ಬಿಜೆಪಿ ನಾಯಕರನ್ನು ಬಂಧಿಸಿರುವುದನ್ನು ದೃಢಪಡಿಸಿದ್ದು, ಈ ವಿಚಾರ ರಾಜಕೀಯವಾಗಿ ಪ್ರೇರೆಪಿಸಲ್ಪಟ್ಟಿದೆ ಮತ್ತು ಕಾನೂನು ಬಾಹಿರವೆಂದು ಆರೋಪಿಸಿದ್ದಾರೆ.