ಕೋಲ್ಕತ್ತಾ: ಪಶ್ಚಿಮ ಬಂಗಾಳ (West Bengal) ಸಿಎಂ ಮಮತಾ ಬ್ಯಾನರ್ಜಿಯವರು (Mamata Banerjee) ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟೀಂ ಇಂಡಿಯಾದ ಪ್ರ್ಯಾಕ್ಟೀಸ್ ಜೆರ್ಸಿಯಲ್ಲಿ ಇರುವ ಕೇಸರಿ ಬಣ್ಣವನ್ನು ಕಟುವಾಗಿ ವಿರೋಧಿಸಿದ್ದಾರೆ.
ಪೊಸ್ತಾ ಬಝಾರ್ನಲ್ಲಿ ಜಗಧಾತ್ರಿ ಪೂಜಾದ ಉದ್ಘಾಟನೆ ವೇಳೆ ಮಾತನಾಡಿದ ಅವರು, ಟೀಂ ಇಂಡಿಯಾದ (Team India Jersy) ಅಭ್ಯಾಸ ಜೆರ್ಸಿಗಳಲ್ಲಿ ಕೇಸರಿ ಬಣ್ಣ ಅಲ್ಲದೇ ಮೆಟ್ರೋ ಸ್ಟೇಷನ್ಗಳ ಗೋಡೆಗಳಿಗೂ ಕೇಸರಿ ಬಣ್ಣವನ್ನು ಬಳಿಯಲಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರವು ಹಲವು ಸಂಸ್ಥೆಗಳನ್ನು ಕೇಸರೀಕರಣಗೊಳಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ಈ ಹಿಂದೆ ಅವರು ನೀಲಿ ಬಣ್ಣದ ಜೆರ್ಸಿ ಧರಿಸುತ್ತಿದ್ದರು. ಆದರೆ ಇದೀಗ ಬಿಜೆಪಿಯವರು (BJP) ಇಡೀ ದೇಶಕ್ಕೆ ಕೇಸರಿ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಭಾರತೀಯ ಆಟಗಾರರ ಮೇಲೆ ನಮಗೆ ಹೆಮ್ಮೆ, ಅಭಿಮಾನ ಹೊಂದಿದ್ದೇವೆ. ವಿಶ್ವಕಪ್ ನಲ್ಲಿ ಗೆಲ್ಲುತ್ತಾರೆಂದು ನಂಬುತ್ತೇನೆ. ಆದರೆ ನಮ್ಮ ಆಟಗಾರರು ಈಗ ಕೇಸರಿ ಬಣ್ಣದ ಜೆರ್ಸಿ ಹಾಕಿ ಆಡಬೇಕಿದೆ. ಇತ್ತ ಮೆಟ್ರೋ ಸ್ಟೇಷನ್ಗಳಿಗೂ ಕೇಸರಿ ಬಳಿಯಲಾಗಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಬ್ಯಾನರ್ಜಿ ಅಸಮಾಧಾನ ಹೊರಹಾಕಿದ್ದಾರೆ.
ಕೊಲ್ಕತ್ತಾ: ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ಬೀರ್ಭುಮ್ ಗ್ರಾಮದಲ್ಲಿ ನಡೆದ ಹಿಂಸಾಚಾರವು ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ರಾಜ್ಯಪಾಲರೂ ಸೇರಿದಂತೆ ಪ್ರತಿಪಕ್ಷದ ನಾಯಕರು ಘಟನೆಯನ್ನೇ ಪ್ರಮುಖವಾಗಿಟ್ಟುಕೊಂಡು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಮತಾ ಬ್ಯಾನರ್ಜಿ ಅವರನ್ನು ಒತ್ತಾಯಿಸುತ್ತಿದ್ದಾರೆ.
ಈ ನಡುವೆ ಬೀರ್ಭುಮ್ ಗ್ರಾಮಕ್ಕೆ ಭೇಟಿ ನೀಡಿರುವ ಮಮತಾ ಬ್ಯಾನರ್ಜಿ ಅವರು ಹಿಂಸಾಚಾರ ನಡೆದ ಸ್ಥಳವನ್ನು ಪರಿಶೀಲಿಸಿ ಕಟ್ಟಿನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಘಟನೆಯಲ್ಲಿ ಹಾನಿಗೊಳಗಾದ ಮನೆಗಳ ದುರಸ್ತಿಗೆ 2 ಲಕ್ಷ ರೂ. ಹಾಗೂ ಸಂತ್ರಸ್ತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಉದ್ಯೋಗಾವಕಾಶ ನೀಡುವ ಭರವಸೆಯನ್ನು ನೀಡಿದ್ದಾರೆ. ಸ್ಥಳದಲ್ಲಿ 10 ಕುಟುಂಬಗಳಿಗೆ ತಲಾ 1 ಲಕ್ಷ ರೂ. ಚೆಕ್ ವಿತರಣೆ ಮಾಡಿದಾರೆ. ಅಲ್ಲದೆ ಬೆಂಕಿ ಅನಾಹುತದಿಂದ ಗಾಯಗೊಂಡವರ ಚಿಕಿತ್ಸೆಗೆ 50 ಸಾವಿರ ರೂ., ತೀವ್ರ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸ್ಥಳೀಯರು ನೀಡಿದ ದೂರಿನ ಮೇರೆಗೆ ರಾಮ್ಪುರಹತ್ ಬ್ಲಾಕ್-1 ಅಧ್ಯಕ್ಷ ಅನಾರುಲ್ ಶೇಖ್ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶ ನೀಡಿದ್ದಾರೆ. ಘಟನೆಯ ಬಗ್ಗೆ ಬಿಜೆಪಿ ಮುಖಂಡರು ಆರೋಪಿಸುತ್ತಿರುವುದು ಇಲ್ಲಿನ ರಾಜಕೀಯ ಹಿನ್ನಡೆ. ಹಿಂಸಾಚಾರ ಹಾಗೂ ಕಾನೂನು ಬಾಹೀರತೆಗೆ ಅವಕಾಶ ನೀಡಿದಂತಾಗುತ್ತಿದೆ. ಈ ಘಟನೆಯ ಹಿಂದೆ ದೊಡ್ಡ ಶಕ್ತಿಯಿದೆ ಎಂಬುದು ಇದರಿಂದ ಗೋಚರವಾಗುತ್ತದೆ ಎಂದು ಶಂಕಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್, ಎಲ್ಪಿಜಿ ಆಯ್ತು ಈಗ ಸಿಎನ್ಜಿ, ಪಿಎನ್ಜಿ ದರದಲ್ಲೂ ಏರಿಕೆ
ಇದೇ ವೇಳೆ ಮಮತಾ ಬ್ಯಾನರ್ಜಿ ಅವರನ್ನು ಸುತ್ತುವರಿದಿದ್ದ ಗ್ರಾಮಸ್ಥರು, ನಮ್ಮ ದೂರುಗಳಿಗೆ ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಘಟನೆಯ ಕುರಿತು ಮಾಹಿತಿ ನೀಡಿರುವ ಪೊಲೀಸರು, ಮಂಗಳವಾರ ಹಿಂಸಾಚಾರ ಘಟನೆ ನಡೆದಿದ್ದು, ಒಂದು ದಿನದ ನಂತರ ಸುಟ್ಟ ಮೃತದೇಹಗಳನ್ನು ಹೊರತೆಗೆಯಲಾಯಿತು. ಘಟನೆಯ ನಂತರ ಅನೇಕರು ಹಿಂಸಾಚಾರಕ್ಕೆ ಹೆದರಿ ಗ್ರಾಮ ತೊರೆದಿದ್ದಾರೆ. ಈ ಪ್ರಕರಣದಲ್ಲಿ ಟಿಎಂಸಿ ಮುಖಂಡನ ಹತ್ಯೆ ಹಾಗೂ ಗ್ರಾಮಸ್ಥರ ಹತ್ಯೆಗೆ ಸಂಬಂಧಿಸಿದಂತೆ ಎರಡು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಈಗಾಗಲೇ ಸುಮಾರು 20 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಆರೋಪಿಗಳನ್ನು ನ್ಯಾಯಾಂಗಕ್ಕೆ ತರಲು ರಾಜ್ಯಕ್ಕೆ ಯಾವುದೇ ರೀತಿಯಲ್ಲಿ ಸಹಾಯ ಮಾಡಲು ನಮ್ಮ ಸರ್ಕಾರ ಸಿದ್ಧವಿದೆ. ಇಂತಹ ಘೋರ ಅಪರಾಧ ಎಸಗಿದವರಿಗೆ ರಾಜ್ಯ ಸರ್ಕಾರ ಕಠಿಣ ಶಿಕ್ಷೆ ವಿಧಿಸಲಿದೆ ಎಂದು ನಾನುಭಾವಿಸುತ್ತೇನೆ. ಇಂತಹ ಅಪರಾಧ, ಅಪರಾಧಿಗಳನ್ನು ಎಂದಿಗೂ ಕ್ಷಮಿಸಬೇಡಿ ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ಇದು ಬಿಜೆಪಿ ನಮ್ಮ ಸರ್ಕಾರದ ಮಾನಹಾನಿಗಾಗಿ ಮಾಡಿರುವ ಪಿತೂರಿ. ಬಿರ್ಭೂಮ್ ಘಟನೆಗೆ ಕಾರಣರಾದ ಎಲ್ಲರ ವಿರುದ್ಧ ಅವರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ವಿಸ್ತಾರವಾದ, ಪ್ರತ್ಯೇಕವಾದ ನಿಲ್ಲುವವರೆಗೂ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ: ಮುತಾಲಿಕ್
ಏನಿದು ಪ್ರಕರಣ?
ಇಲ್ಲಿನ ಬಗುಟಿ ಗ್ರಾಮ ಪಂಚಾಯ್ತಿ ಮುಖಂಡ ಭಾದು ಶೇಖ್ ಅವರ ಮೇಲೆ ಸೋಮವಾರ ರಾತ್ರಿ ದಾಳಿ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ-60ರ ಅಂಗಡಿಯೊಂದರಲ್ಲಿ ಇರುವಾಗ ಶೇಖ್ ಅವರ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪೊಂದು 10 ರಿಂದ 12 ಮನೆಗೆ ಬೆಂಕಿ ಹಚ್ಚಿದ್ದರು.
ಇದರಿಂದಾಗಿ 8 ಮಂದಿ ಸಜೀವ ದಹನವಾಗಿದ್ದರು. ಇದರಲ್ಲಿ ಇಬ್ಬರು ಮಕ್ಕಳೂ ಸಹ ಇದ್ದರು ಎಂಬುದಾಗಿ ಬೀರ್ಭುಮ್ ಎಸ್ಪಿ ನಾಗೇಂದ್ರ ತ್ರಿಪಾಟಿ ಮಾಹಿತಿ ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತವಾಗಿಯೇ ವಿಚಾರಣೆ ನಡೆಸಲು ಮುಂದಾಗಿತ್ತು. ಈ ನಡುವೆ ಜಿಲ್ಲೆಯ ಕೆಲ ಕುಟುಂಬಗಳು ಹಿಂಸಾಚಾರಕ್ಕೆ ಬೆಚ್ಚಿಬಿದ್ದಿದ್ದು, ತಮ್ಮ ಮನೆಗಳನ್ನು ತೊರೆದು ಹೋಗಿದ್ದಾರೆ. ಇದನ್ನೂ ಓದಿ: ಜಗನ್ ಸಹೋದರಿ ಭಾಷಣದ ವೇಳೆ ಜೇನು ದಾಳಿ – ಟವೆಲ್ ಬೀಸಿದ ಕಾರ್ಯಕರ್ತರು
ಢಾಕಾ: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ಅವರು ಮಾವಿನ ಹಣ್ಣು ಕಳುಹಿಸಿದ್ದಾರೆ.
ಸೋಮವಾರ 2,600 ಕೆ.ಜಿ ಹರಿಬಾಂಗ ತಳಿಯ ಮಾವಿನ ಹಣ್ಣುಗಳನ್ನು ಬಾಂಗ್ಲಾ ಪ್ರಧಾನಿ ಕಳುಹಿಸಿಕೊಟ್ಟಿದ್ದಾರೆ. 260 ಪೆಟ್ಟಿಗೆ ಯನು ಹೊತ್ತ ಟ್ರಕ್ ಭಾನುವಾರ ಮಧ್ಯಾಹ್ನದ ಬಳಿಕ ಗಡಿ ದಾಟಿದೆ.
Bangladesh PM Sheikh Hasina has sent 2,600 kgs of mangoes as presents to her Indian counterpart Narendra Modi & West Bengal CM Mamata Banerjee: Bangladesh media
ಬಾಂಗ್ಲಾದೇಶದ ರಂಗ್ ಪುರ ಜಿಲ್ಲೆಯಲ್ಲಿ ವಿಶೇಷವಾಗಿ ಬೆಳೆದ ಈ ಮಾವಿನ ಹಣ್ಣುಗಳನ್ನು ಬೆನಾಪೋಲ್ ಚೆಕ್ ಪಾಯಿಂಟ್ ಮೂಲಕ ಕಳುಹಿಸಲಾಗಿದೆ. ಉಭಯ ದೇಶಗಳ ನಡುವಿನ ಬಾಂಧವ್ಯದ ಸಂಕೇತವಾಗಿ ಈ ಮಾವಿನ ಹಣ್ಣುಗಳನ್ನು ಕಳುಹಿಸಲಾಗಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಹರಿಬಾಂಗ ಮಾವಿನಹಣ್ಣು ದುಂಡಾಗಿದೆ. ಹೆಚ್ಚು ತಿರುಳಿರುವ, ನಾರಿನಂಶವಿಲ್ಲದ ಮತ್ತು ಸಾಮಾನ್ಯವಾಗಿ 200 ರಿಂದ 400 ಗ್ರಾಂ ತೂಕವಿರುತ್ತದೆ. ಈ ಹಿಂದೆ ಭಾರತಕ್ಕೆ ಪಾಕ್ ಮಾಜಿ ಪ್ರಧಾನಿಗಳಾದ ಜಿಯಾ ಉಲ್ ಹಕ್ ಹಾಗೂ ಪರ್ವೇಜ್ ಮುಷರಫ್ ಸಹ ಮಾವಿನ ಹಣ್ಣುಗಳನ್ನು ಕಳುಹಿಸಿಕೊಟ್ಟಿದ್ದರು. ಇದನ್ನೂ ಓದಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ
– ರಾಜ್ಯಪಾಲರಿಗೆ ಕರೆ ಮಾಡಿ ಮಮತಾ ಆಕ್ರೋಶ
– ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ
ಕೋಲ್ಕತ್ತಾ: ಪಂಚ ರಾಜ್ಯಗಳ ಪೈಕಿ ಇಂದು ಪಶ್ಚಿಮ ಬಂಗಾಳದ 30 ಮತ್ತು ಅಸ್ಸಾಂನ 39 ಕ್ಷೇತ್ರಗಳಿಗೆ 2ನೇ ಹಂತದ ಮತದಾನ ನಡೆಯಿತು. ಬಂಗಾಳದಲ್ಲಿ ಶೇ.80ರಷ್ಟು ಮತದಾನ ಆಗಿದೆ. ಅಸ್ಸಾಂನಲ್ಲಿ ಶೇ.73ರಷ್ಟು ಮತದಾನವಾಗಿದೆ.
ಇಂದು ನಡೆದ ಚುನಾವಣೆಯಲ್ಲಿ ಸಿಎಂ ಮಮತಾ ಸ್ಪರ್ಧೆ ಮಾಡಿರುವ ನಂದಿಗ್ರಾಮವೂ ಇದೆ. ಇವತ್ತು ಇಡೀ ದಿನ ಮಮತಾ ನಂದಿಗ್ರಾಮದಲ್ಲಿಯೇ ಬೀಡುಬಿಟ್ಟಿದ್ರು. ಮತಗಟ್ಟೆಯೊಂದಕ್ಕೆ ಭೇಟಿ ನೀಡಿದ ಮಮತಾ, ಅಲ್ಲಿಂದಲೇ ರಾಜ್ಯಪಾಲರಿಗೆ ಫೋನ್ ಮಾಡಿ, ಸಿಆರ್ಪಿಎಫ್ ಜವಾನರು ಜನರಿಗೆ ಮತ ಹಾಕಲು ಬಿಡ್ತಿಲ್ಲ ಎಂದು ದೂರು ನೀಡಿದ್ರು. ಯುಪಿ, ಬಿಹಾರದಿಂದ ಬಂದವರು ಮತಗಟ್ಟೆ ಬಳಿ ಭಾರೀ ಹಂಗಾಮಾ ಮಾಡ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ರು.
ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ನಂದಿಗ್ರಾಮದಲ್ಲಿ ತಮ್ಮ ಹಕ್ಕು ಚಲಾಯಿಸಿದ್ರು. ಮಮತಾ ಸೋಲೋದು ಖಚಿತ ಅಂದ್ರು. ಇಂದು ಬೆಳಗ್ಗೆ ನಂದಿಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದು, ಈ ವಿಚಾರದಲ್ಲಿ ಪರಸ್ಪರ ಕೆಸರೆರಚಾಟ ನಡೀತು.
ಅತ್ತ ಅಸ್ಸಾಂನ ಕೊಕ್ರಜಾರ್ನಲ್ಲಿ ಭರ್ಜರಿ ರ್ಯಾಲಿ ನಡೆಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ರು. ಅಸ್ಸಾಂನಲ್ಲಿ ಫುಟ್ಬಾಲ್ ಅತ್ಯಂತ ಜನಪ್ರಿಯ ಕ್ರೀಡೆ. ಫುಟ್ಬಾಲ್ ಭಾಷೆಯಲ್ಲೇ ಹೇಳುವುದಾದರೆ ಅಸ್ಸಾಂ ಜನತೆ ಕಾಂಗ್ರೆಸ್ಸಿಗೆ ರೆಡ್ ಕಾರ್ಡ್ ತೋರಿಸಿದ್ದಾರೆ ಅಂತ ಕುಟುಕಿದ್ರು. ಕೊಕ್ರಜಾರ್ನಲ್ಲಿ ನಡೆದ ಭೀಕರ ಹಿಂಸಾಚಾರಕ್ಕೆ ಕಾರಣವಾದ ಪಕ್ಷದೊಂದಿಗೆ ಕಾಂಗ್ರೆಸ್ ಚುನಾವಣಾ ಮೈತ್ರಿ ಮಾಡಿಕೊಂಡಿದೆ. ಇದು ಅಧಿಕಾರಕ್ಕೆ ಹಪಾಹಪಿಸುತ್ತಿರುವ ಕಾಂಗ್ರೆಸ್ಸಿನ ಕುತಂತ್ರ ರಾಜಕಾರಣವನ್ನು ಬಿಂಬಿಸುತ್ತೆ ಎಂದು ವಾಗ್ದಾಳಿ ನಡೆಸಿದ್ರು.
ಸಿಎಂ ಪಳನಿಸ್ವಾಮಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಡಿಎಂಕೆ ಮುಖಂಡ ಎ ರಾಜಾಗೆ 48 ಗಂಟೆ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿರ್ಬಂಧ ಹೇರಿದೆ. ಆದರೆ ಮಹಿಳೆಯರ ಘನತೆ ಕುಂದಿಸುವ ಹೇಳಿಕೆ ನೀಡಿಲ್ಲ ಎ.ರಾಜಾ ಸ್ಪಷ್ಟಪಡಿಸಿದ್ದಾರೆ.
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ವಾಕ್ಸಮರ ತೀವ್ರಗೊಂಡಿದೆ. ಇದೀಗ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದಾರೆ.
ಪುರುಲಿಯಾದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ದಿಲೀಪ್, ಮಮತಾ ಬ್ಯಾನರ್ಜಿ ಅವರು ತಮ್ಮ ಕಾಲು ತೋರಿಸಬೇಕೆಂದರೆ ಅವರು ಬರ್ಮುಡಾ ಧರಿಸಬೇಕು ಎಂದು ವ್ಯಂಗ್ಯವಾಡಿದ್ದಾರೆ.
ಮಮತಾ ಅವರ ಒಂದು ಕಾಲಿಗೆ ಗಾಯವಾಗಿದ್ದು, ಬ್ಯಾಂಡೇಜ್ ಹಾಕಲಾಗಿತ್ತು. ಆದರೆ ಇದೀಗ ಅದನ್ನು ತೆಗೆಯಲಾಗಿದೆ. ಆದರೂ ಅವರು ಅದನ್ನು ತಮ್ಮ ಸೀರೆಯಿಂದ ಮುಚ್ಚಿಕೊಂಡಿರುತ್ತಾರೆ. ಇನ್ನೊಂದು ಕಾಲು ಕಾಣಿಸುತ್ತದೆ. ಈ ರೀತಿ ಸೀರೆ ಧರಿಸುವವರನ್ನು ನಾನು ಎಲ್ಲೂ ನೋಡಿಲ್ಲ ಎಂದು ಹೇಳಿದ್ದಾರೆ.
ದಿಲೀಪ್ ಅವರ ಈ ಹೇಳಿಕೆಗೆ ಟಿಎಂಸಿ ಮಹಿಳಾ ನಾಯಕಿಯರು ಕಿಡಿಕಾರಿದ್ದಾರೆ. ಅಲ್ಲದೆ ವಕ್ತಾರೆ ಮಹುಮಾ ಮೋಯಿತ್ರಾ ಈ ಬಗ್ಗೆ ಟ್ವೀಟ್ ಮಾಡಿ, ಬಿಜೆಪಿ ಅಧ್ಯಕ್ಷರು ಸಾರ್ವಜನಿಕ ಸಭೆಯಲ್ಲಿ ಮಾತನಾಡುವಾಗ ಮಮತಾ ಅವರು ಸೀರೆ ಬದಲು ಬರ್ಮುಡಾ ಧರಿಸುವಂತೆ ಹೇಳುತ್ತಾರೆ. ಒಬ್ಬ ಮಹಿಳೆ ಬಗ್ಗೆ ಅಪಮಾನವಾಗುವಂತಹ ಹೇಳಿಕೆ ನೀಡುವ ಮೂಲಕ ವಿಕೃತ ಕೋತಿಗಳು ಪಶ್ಚಿಮ ಬಂಗಾಳವನ್ನು ಗೆಲ್ಲುವ ಕನಸು ಕಾಣುತ್ತಿವೆ ಎಂದು ಜರಿದಿದ್ದಾರೆ.
ಇತ್ತೀಚೆಗೆ ನಂದಿಗ್ರಾಮ ಚುನಾವಣಾ ಪ್ರಚಾರದ ವೇಲೆ ಮಮತಾ ಅವರ ಕಾಲಿಗೆ ಗಾಯಗಳಾಗಿತ್ತು. ಹೀಗಾಗಿ ಅವರ ಎಡಗಾಲಿಗೆ ವೈದ್ಯರು ಬ್ಯಾಂಡೇಜ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ದೀದಿ ವೀಲ್ ಚೇರ್ ನಲ್ಲಿಯೇ ಕುಳೀತುಕೊಂಡು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿದ್ದರು. ಆದರೆ ಇತ್ತ ಬಿಜೆಪಿ ಮಾತ್ರ ಚುನಾವಣೆಯಲ್ಲಿ ಅನುಕಂಪ ಗಿಟ್ಟಿಸಿಕೊಳ್ಳಲು ದೀದಿ ನಾಟಕ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿದೆ.
ಕೋಲ್ಕತ್ತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಮತ್ತೊಮ್ಮೆ ರಸ್ತೆ ಬದಿಯಲ್ಲಿ ಟೀ ಮಾರಾಟ ಮಾಡಿ ಸುದ್ದಿಯಾಗಿದ್ದಾರೆ.
ಹೌದು. ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ದಿನವಾದ ಇಂದು ಮಮತಾ ಅವರು ರಸ್ತೆ ಬದಿಯ ಅಂಗಡಿಗೆ ತೆರಳಿ ಇತತರಿಗೆ ಟೀ ಕೊಟ್ಟು ಬಳಿಕ ತಾವೂ ಕುಡಿದಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ವೀಡಿಯೋದಲ್ಲಿ ಏನಿದೆ…?
ಸ್ಥಳೀಯ ಜನರ ಜೊತೆ ಸಂವಹನ ನಡೆಸಲು ತೆರಳಿದ್ದ ಮಮತಾ ಅವರು ರಸ್ತೆ ಬದಿಯಲ್ಲಿದ್ದ ಟೀ ಸ್ಟಾಲ್ ಗೆ ತೆರಳಿದ್ದಾರೆ. ನಂತರ ಅಲ್ಲಿದ್ದ ಪೇಪರ್ ಗ್ಲಾಸುಗಳಿಗೆ ತಾವೇ ಟೀ ಹೊಯ್ದು ಅದನ್ನು ಸುತ್ತಮುತ್ತ ಇದ್ದವರಿಗೆ ನೀಡಿದ್ದಾರೆ. ಕೊನೆಗೆ ತಾವು ಕೂಡ ಕುಡಿದಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.
ಮಮತಾ ಅವರು ಸಾರ್ವಜನಿಕ ಸ್ಥಳಗಳಲ್ಲಿ ಟೀ ಸರ್ವ್ ಮಾಡುವುದು ಇದೇ ಮೊದಲಲ್ಲ. ಈ ಹಿಂದೆಯೂ ಅಂದರೆ 2019ರ ಆಗಸ್ಟ ತಿಂಗಳಲ್ಲಿಯೂ ದುತ್ತಾಪುರ ಗ್ರಾಮದಲ್ಲಿ ಟೀ ಸ್ಟಾಲ್ ಗೆ ತೆರಳಿದ್ದರು. ಅಲ್ಲದೆ ಸ್ವತಃ ತಾವೇ ಟೀ ಮಾಡಿ ಇತರರಿಗೆ ನೀಡಿ ಸುದ್ದಿಯಾಗಿದ್ದರು.
Sometimes the little joys in life can make us happy. Making and sharing some nice tea (cha/chai) is one of them. Today, in Duttapur, Digha | কখনো জীবনের ছোট ছোট মুহূর্ত আমাদের বিশেষ আনন্দ দেয়। চা বানিয়ে খাওয়ানো তারমধ্যে একটা। আজ দীঘার দত্তপুরে। #Banglapic.twitter.com/cC1Bo0GuYy
ಕೆಲವು ಬಾರಿ ನಾವು ಮಾಡುವ ಚಿಕ್ಕ ಚಿಕ್ಕ ಕೆಲಸಗಳು ಕೂಡ ನಮಗೆ ಅತ್ಯಂತ ಸಂತಸವನ್ನು ನೀಡುತ್ತವೆ. ಅವುಗಳಲ್ಲಿ ಉತ್ತಮವಾದ ಟೀ ಮಾಡಿ ಅದನ್ನು ಹಂಚುವುದಾಗಿದೆ ಎಂದು ಮಮತಾ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಬರೆದುಕೊಂಡಿದ್ದರು.
ಇದೀಗ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ನಂದಿಗ್ರಾಮ್ ನಲ್ಲಿ ಎರಡು ದಿನಗಳ ಕ್ಯಾಂಪೇನ್ ಮಾಡಲು ಆಗಮಿಸಿದ್ದರು. ಈ ವೇಳೆ ಮತ್ತೊಮ್ಮೆ ಟೀ ಸ್ಟಾಲ್ ಗೆ ತೆರಳಿ ಟೀ ನೀಡುವ ಮೂಲಕ ಕ್ಷೇತ್ರದ ಜನರನ್ನು ತನ್ನತ್ತ ಸೆಳೆಯುವ ಪ್ರಯತ್ನ ಮಾಡಿದ್ದಾರೆ.
8 ಹಂತಗಳಲ್ಲಿ ಚುನಾವಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್.27, ಏಪ್ರಿಲ್.1, ಏಪ್ರಿಲ್.6, ಏಪ್ರಿಲ್.10, ಏಪ್ರಿಲ್.17, ಏಪ್ರಿಲ್.22, ಏಪ್ರಿಲ್.26 ಮತ್ತು ಏಪ್ರಿಲ್.29ರಂದು ಮತದಾನ ನಡೆಯಲಿದೆ. ಮೇ.2ರಂದು ಚುನಾವಣೆಯ ಅಂತಿಮ ಫಲಿತಾಂಶ ಹೊರ ಬೀಳಲಿದೆ.