Tag: manamohan singh

  • ಮನಮೋಹನ್ ಸಿಂಗ್ ಪಿಎಂ ಆಗಿದ್ದಾಗ ಈಗಿನಂತೆ ಗಡಿ ಸಮಸ್ಯೆ ಇದ್ದಿದ್ರೆ ರಾಜೀನಾಮೆ ಕೊಡ್ತಿದ್ರು: ಮೋದಿ ವಿರುದ್ಧ ರಾಗಾ ವಾಗ್ದಾಳಿ

    ಮನಮೋಹನ್ ಸಿಂಗ್ ಪಿಎಂ ಆಗಿದ್ದಾಗ ಈಗಿನಂತೆ ಗಡಿ ಸಮಸ್ಯೆ ಇದ್ದಿದ್ರೆ ರಾಜೀನಾಮೆ ಕೊಡ್ತಿದ್ರು: ಮೋದಿ ವಿರುದ್ಧ ರಾಗಾ ವಾಗ್ದಾಳಿ

    ನವದೆಹಲಿ: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಈಗಿನಂತೆ ಭಾರತ-ಚೀನಾ ಗಡಿ ಸಮಸ್ಯೆ ಇದ್ದಿದ್ದರೆ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

    ಭಾರತ-ಚೀನಾ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹರಿಹಾಯ್ದಿದ್ದಾರೆ.

    ವೀಡಿಯೋ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ ಚೀನಾವು ಭಾರತದ ಭೂಮಿಯನ್ನು ಅಕ್ರಮಿಸಿದ್ದರೆ ಅವರು ರಾಜೀನಾಮೆ ನೀಡುತ್ತಿದ್ದರು. ಆದರೆ ಚೀನಾ, ಭಾರತದ ಪ್ರದೇಶಗಳನ್ನು ವಶಪಡಿಸಿಕೊಂಡರೂ ಮೋದಿ ಸುಮ್ಮನಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸಂಸತ್ತಿನಲ್ಲೇ ಪರಸ್ಪರ ಹೊಡೆದಾಡಿಕೊಂಡ ಜನಪ್ರತಿನಿಧಿಗಳು

    ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಗುಂಪು ದ್ವೇಷವನ್ನು ಹರಡುತ್ತಿದೆ. ಇದನ್ನು ಪ್ರೀತಿಯಿಂದ ಎದುರಿಸಬೇಕಾಗಿದೆ. ಕಾಂಗ್ರೆಸ್‌ನ ಸಿದ್ಧಾಂತಗಳು ದೇಶದ ಜನರನ್ನು ತಲುಪುವಂತೆ ನೋಡಿಕೊಳ್ಳಬೇಕು. ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಹುಸಿ ರಾಷ್ಟ್ರೀಯತೆ ಪ್ರಚಾರಗಳ ವಿರುದ್ಧ ನಾವು ಒಟ್ಟುಗೂಡಬೇಕು ಎಂದು ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

    ಬಿಜೆಪಿ ಮತ್ತು ಆರ್‌ಎಸ್‌ಎಸ್ ಧರ್ಮ ರಾಜಕಾರಣ ಮಾಡುತ್ತಿವೆ. ಅವರಿಗೆ ಬೇರೆ ಏನೂ ಕೆಲಸ ಇಲ್ಲ. ಕಾಂಗ್ರೆಸ್ ಈ ದೇಶದ ಜನರ ಹೃದಯವನ್ನು ಗೆದ್ದಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ – ಹಲವು ವಲಯಗಳಿಂದ ಇನ್ನು ಸಿಕ್ಕಿಲ್ಲ ಪರಿಪೂರ್ಣ ಬೆಂಬಲ

  • ಅಪ್ಪ-ಮಕ್ಕಳಿಗೆ ಮಹದಾಯಿ ಸಮಸ್ಯೆ ಬಗೆಹರಿಸೋಕೆ ಇಷ್ಟ ಇಲ್ಲ- ಎಚ್‍ಡಿಕೆ, ದೇವೇಗೌಡರ ವಿರುದ್ಧ ಬಿಎಸ್‍ವೈ ಕಿಡಿ

    ಅಪ್ಪ-ಮಕ್ಕಳಿಗೆ ಮಹದಾಯಿ ಸಮಸ್ಯೆ ಬಗೆಹರಿಸೋಕೆ ಇಷ್ಟ ಇಲ್ಲ- ಎಚ್‍ಡಿಕೆ, ದೇವೇಗೌಡರ ವಿರುದ್ಧ ಬಿಎಸ್‍ವೈ ಕಿಡಿ

    ಹುಬ್ಬಳ್ಳಿ: ಮಹದಾಯಿ ವಿಷಯದಲ್ಲಿ ಕಾಂಗ್ರೆಸ್ ನಾಟಕ ಮಾಡುತ್ತಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಬೇಜವಾಬ್ದಾರಿ ಮನುಷ್ಯ. ಅಪ್ಪ-ಮಕ್ಕಳಿಗೆ ಮಹದಾಯಿ ಸಮಸ್ಯೆ ಬಗೆಹರಿಸೋಕೆ ಇಷ್ಟ ಇಲ್ಲ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿಸ್ ಯಡಿಯೂರಪ್ಪ ಎಚ್‍ಡಿ ಕುಮಾರಸ್ವಾಮಿ ಹಾಗೂ ದೇವೇಗೌಡರ ವಿರುದ್ಧ ಕಿಡಿ ಕಾರಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹದಾಯಿ ನೀರಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೆ. 2008 ರಲ್ಲಿ ಮಾಜಿ ಪ್ರಧಾನಿ ವಾಜಪೇಯಿ ಅನುಮತಿ ನೀಡಿದ್ದರು. ಕಾಂಗ್ರೆಸ್ ಸರ್ಕಾರ 2012 ರಲ್ಲಿ ಗೋವಾ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿತ್ತು. ಆಗ ಯಾಕೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಮಧ್ಯಪ್ರವೇಶ ಮಾಡಲಿಲ್ಲ ಅಂತ ಕಿಡಿ ಕಾರಿದ್ರು.

    ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುವುದಾಗಿ ಗೋವಾ ಮುಖ್ಯಮಂತ್ರಿ ಹೇಳಿದ್ದಾರೆ. ಗೋವಾ ಸಿಎಂ ಅವರಿಗೆ ಯಾಕೆ ಪತ್ರ ಬರೆಯಬೇಕು ಎಂಬುದನ್ನು ನಾನು ಹೇಳುವುದು ಸರಿಯಲ್ಲ. ಅವರು ನೀರು ಕೊಡಲು ಒಲವು ತೋರಿದ್ದಾರೆ. ಹೀಗಿರುವಾಗ ಯಾರಿಗೆ ಪತ್ರ ಬರೆದಿದ್ದಾರೆ ಎಂಬುದು ಮುಖ್ಯವಲ್ಲ ಅಂತ ಹೇಳಿದ್ರು.

    ಈ ಹಿಂದೆ ನಮ್ಮ ಮುಖ್ಯಮಂತ್ರಿ ಹಲವು ಸಾರಿ ಹೇಳುತ್ತಾ ಬಂದಿದ್ದಾರೆ. ನೀವು ಗೋವಾ ಸಿಎಂ ಅವರನ್ನು ಒಪ್ಪಿಸಿ ಎಂದಿದ್ದರು. ನಾವು ಈಗ ಗೋವಾ ಸಿಎಂ ಅವರನ್ನು ಒಪ್ಪಿಸಿದ್ದೇವೆ. ಹೀಗಾಗಿ ಅವರು ಮಾತುಕತೆಗೆ ಒಪ್ಪಿ ನಮಗೆ ಲಿಖಿತವಾಗಿ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಸರ್ಕಾರ ನೀರಿನ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ ಅಂತ ಸಿಡಿಮಿಡಿಗೊಂಡ್ರು.

    2005-12 ರವರೆಗೆ ಗೋವಾ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಅವಾಗ ಯಾಕೆ ಕಾಂಗ್ರೆಸ್ ಮಹದಾಯಿ ಸಮಸ್ಯೆ ಇತ್ಯರ್ಥಪಡಿಸಲಿಲ್ಲ. ಆವಾಗ್ಯಾಕೆ ಇವರು ರಾಜಕೀಯ ದೊಂಬರಾಟ ಮಾಡಿದ್ರು? ಆದ್ರೂ ನಮ್ಮ ಪ್ರಯತ್ನ ಮಾಡಿದ್ದೇವೆ. ನಮ್ಮ ರಾಷ್ಟ್ರೀಯ ಅಧ್ಯಕ್ಷರ ನೇತೃತ್ವದಲ್ಲಿ ಗೋವಾ ಸಿಎಂ ಮನವೊಲಿಸಿದ್ದೇವೆ. ಗೋವಾ ಸಿಎಂ ನಮಗೆ ಒಪ್ಪಿಗೆ ನೀಡಿ ಪತ್ರ ನೀಡಿದ್ದಾರೆ. ಈ ಪತ್ರವನ್ನು ಟ್ರಿಬ್ಯುನಲ್ ಮುಂದೆ ತೆಗೆದುಕೊಂಡು ಹೋಗಿ ಸಮಸ್ಯೆ ಬಗೆಹರಿಯುತ್ತೆ. ನಿಮ್ಮಿಂದ 15 ವರ್ಷದಿಂದ ಆಗದೇ ಇರೋ ಕೆಲಸ ನಾವು ಮಾಡಿದ್ದೇವೆ. ಈಗಲಾದ್ರೂ ಸಮಸ್ಯೆ ಇತ್ಯರ್ಥ ಮಾಡೋಕೆ ಒಟ್ಟಾಗಿ ಪ್ರಯತ್ನ ಮಾಡೋಣ ಅಂತ ಕಾಂಗ್ರೆಸ್ಸಿಗರಿಗೆ ಬಿಎಸ್‍ವೈ ಸಲಹೆಯಿತ್ತರು.