Tag: Mandagadde

  • ಶಿವಮೊಗ್ಗ | ನದಿಗೆ ಉರುಳಿದ ಕಾರು – ಮಹಿಳೆ ದುರ್ಮರಣ

    ಶಿವಮೊಗ್ಗ | ನದಿಗೆ ಉರುಳಿದ ಕಾರು – ಮಹಿಳೆ ದುರ್ಮರಣ

    ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ನದಿಗೆ ಉರುಳಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡಗದ್ದೆ (Mandagadde) ಬಳಿ ನಡೆದಿದೆ.

    ಮೃತ ಮಹಿಳೆಯನ್ನು ಕುಂದಾಪುರದ (Kundapura) ತೆಕ್ಕಟ್ಟೆಯ ನಿವಾಸಿ ಸವಿತಾ ದೇವಾಡಿಗ (57) ಎಂದು ಗುರುತಿಸಲಾಗಿದೆ. ತೆಕ್ಕಟ್ಟೆಯ ಶಂಕರ ದೇವಾಡಿಗ ಅವರು ತಮ್ಮ ಮಾರುತಿ ಸ್ವಿಫ್ಟ್‌ ಕಾರಿನಲ್ಲಿ ಕುಟುಂಬದ ಆರು ಮಂದಿ ಸದಸ್ಯರೊಂದಿಗೆ ಶಿವಮೊಗ್ಗದಲ್ಲಿರುವ (Shivamogga) ಮಗಳ ಮನೆಗೆ ತೆರಳುತ್ತಿದ್ದರು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಮಂಡಗದ್ದೆ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ರಸ್ತೆ ಪಕ್ಕದಲ್ಲಿದ್ದ ನದಿಗೆ ಉರುಳಿದೆ. ಇದನ್ನೂ ಓದಿ: ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ – ನಾಲ್ವರು ದುರ್ಮರಣ

    ಕಾರು ನೀರಿನಲ್ಲಿ ಮುಳುಗುತ್ತಿದ್ದಂತೆಯೇ ಸ್ಥಳೀಯರು ರಕ್ಣಣೆಗೆ ಮುಂದಾಗಿದ್ದಾರೆ. ಆದರೆ, ಶಂಕರ ದೇವಾಡಿಗ ಅವರ ಪತ್ನಿ ಸವಿತಾ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಅಪಘಾತದಲ್ಲಿ ಪೆಟ್ಟಾಗಿ ಅವರ ಸಾವು ಸಂಭವಿಸಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

    ಶಂಕರ ದೇವಾಡಿಗ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರ ಪುತ್ರರಾದ ಅರುಣ್‌ ದೇವಾಡಿಗ ಮತ್ತು ಅಶ್ವತ್ಥ ದೇವಾಡಿಗ, ಪುತ್ರಿ ಅಮೃತಾ, ಅಳಿಯ ಸುರೇಶ್‌ ದೇವಾಡಿಗ ಹಾಗೂ ಎರಡೂವರೆ ವರ್ಷದ ಮೊಮ್ಮಗ ಅಭಿಶ್ರೇಯ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಅಪಘಾತದಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕ್ರೇನ್ ಸಹಾಯದಿಂದ ನದಿಯಿಂದ ಹೊರತೆಗೆಯಲಾಯಿತು. ಈ ಸಂಬಂಧ ಮಾಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಟ್ರೈನಿ ನರ್ಸ್ ಪ್ರಿಯತಮೆಯನ್ನು ಕತ್ತು ಸೀಳಿ ಕೊಂದ ಪ್ರಿಯಕರ – ಬಳಿಕ ತಾನೂ ಆತ್ಮಹತ್ಯೆಗೆ ಯತ್ನ

  • ಭಾರೀ ಮಳೆಯಿಂದಾಗಿ ಮಂಡಗದ್ದೆಯಲ್ಲಿ ಮೂಕ ಪಕ್ಷಿಗಳ ರೋಧನೆ!

    ಭಾರೀ ಮಳೆಯಿಂದಾಗಿ ಮಂಡಗದ್ದೆಯಲ್ಲಿ ಮೂಕ ಪಕ್ಷಿಗಳ ರೋಧನೆ!

    ಶಿವಮೊಗ್ಗ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಾ ನದಿಯು ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಜಿಲ್ಲೆಯ ಪ್ರಸಿದ್ಧ ಮಂಡಗದ್ದೆ ಪಕ್ಷಿಧಾಮದಲ್ಲಿ ನೀರಿನ ರಭಸಕ್ಕೆ ಸಾವಿರಾರು ಪಕ್ಷಿಗಳು ಕೊಚ್ಚಿ ಹೋಗಿವೆ.

    ಪ್ರಸಿದ್ಧ ಪಕ್ಷಿಧಾಮ ಮಂಡಗದ್ದೆಯಲ್ಲೀಗ ಶೋಕ ಮಡುಗಟ್ಟಿದ್ದು, ಪ್ರತಿ ವರ್ಷ ಸಂತಾನಭಿವೃದ್ಧಿಗೆ ಬರುವ ಸಾವಿರಾರು ಪಕ್ಷಿಗಳು ತುಂಗೆಯ ಅಬ್ಬರಕ್ಕೆ ತತ್ತರಿಸಿ ಹೋಗಿವೆ. ನಿರಂತರ ಮಳೆಯಿಂದಾಗಿ ತುಂಗಾ ನದಿಯು ಅಪಾಯದಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದಲ್ಲಿ ಇಲ್ಲಿನ ಸಾವಿರಾರು ಪಕ್ಷಿಗಳ ಗೂಡುಗಳು ಕೊಚ್ಚಿಕೊಂಡು ಹೋಗಿವೆ.

    ಪ್ರತಿ ವರ್ಷ ಉತ್ತರ ಭಾರತದಿಂದ ಮೇ ಹಾಗೂ ಜೂನ್ ತಿಂಗಳಲ್ಲಿ ಬರುವ ಜಾಲಪಾದ, ತುಪ್ಪಳದ ಹಕ್ಕಿಗಳು ಇಲ್ಲಿ ಗೂಡು ಕಟ್ಟಿ, ಮೊಟ್ಟೆ ಇಟ್ಟು ಮರಿಗಳೊಂದಿಗೆ ಅಕ್ಟೋಬರ್ ವೇಳೆಗೆ ಹಿಂತಿರುಗುತ್ತವೆ. ಆದರೆ ಈ ವರ್ಷ ಪ್ರವಾಹದಿಂದಾಗಿ ತಳಮಟ್ಟದಲ್ಲಿದ್ದ ಗೂಡುಗಳು ಮೊಟ್ಟೆ-ಮರಿಗಳ ಸಮೇತ ಕೊಚ್ಚಿಕೊಂಡು ಹೋಗಿವೆ.

    ಮೇಲ್ಭಾಗದಲ್ಲಿ ಇರುವ ಕೆಲವು ಗೂಡುಗಳು ಮಾತ್ರ ಉಳಿದುಕೊಂಡಿದ್ದು, ನಿರಂತರ ಮಳೆಯಿಂದಾಗಿ ಪಕ್ಷಿಗಳು ತತ್ತರಿಸಿ ಹೋಗಿವೆ. ಎಂದು ಮಳೆ ನಿಲ್ಲುವುದೋ ಎಂದು ಪಕ್ಷಿಗಳು ಆಕಾಶ ನೋಡುವಂತಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv