Tag: Mangala Angadi

  • ಬಿಜೆಪಿ ಗೆಲುವಿನ ಅಂತರಕ್ಕಿಂತ ನೋಟಾಗೆ ಹೆಚ್ಚು ಮತಗಳು – ಶೇ.42.56ರಷ್ಟು ಮತ ಪಡೆದ ಕಾಂಗ್ರೆಸ್

    ಬಿಜೆಪಿ ಗೆಲುವಿನ ಅಂತರಕ್ಕಿಂತ ನೋಟಾಗೆ ಹೆಚ್ಚು ಮತಗಳು – ಶೇ.42.56ರಷ್ಟು ಮತ ಪಡೆದ ಕಾಂಗ್ರೆಸ್

    ಬೆಳಗಾವಿ: ಕುಂದಾ ನಗರಿ ಬೆಳಗಾವಿಯನ್ನ ತನ್ನಲ್ಲೇ ಉಳಿಸಿಕೊಳ್ಳಲು ಬಿಜೆಪಿ ಯಶಸ್ವಿಯಾದ್ರೆ, ಕಾಂಗ್ರೆಸ್ ವೀರೋಚಿತ ಸೋಲು ಕಂಡಿದೆ. ಬಿಜೆಪಿ ಗೆಲುವಿನ ಅಂತರ ನೋಟಾಗೆ ಬಿದ್ದ ಮತಗಳಿಂತ ಕಡಿಮೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 5,240 ಮತಗಳ ಅಂತರದಿಂದ ಕಾಂಗ್ರೆಸ್ಸಿನ ಸತೀಶ್ ಜಾರಕಿಹೊಳಿ ವಿರುದ್ಧ ಗೆದ್ದಿದ್ದಾರೆ. ಆದ್ರೆ ಬೆಳಗಾವಿ ಲೋಕಸಭಾ ಕ್ಷೇತ್ರದ 10,631 ಜನರು ನೋಟಾಗೆ ಮತ ಚಲಾಯಿಸಿದ್ದಾರೆ.

    ಸತೀಶ್ ಜಾರಕಿಹೊಳಿ ಶೇ.42.56 ಮತ್ತು ಮಂಗಳಾ ಅಂಗಡಿ ಶೇ.43.07ರಷ್ಟು ಮತ ಗಳಿಸಿದ್ದಾರೆ. ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ತನ್ನ ಮತಗಳನ್ನ ಗಟ್ಟಿ ಮಾಡಿಕೊಳ್ಳುವಲ್ಲಿ ಮೇಲ್ನೋಟಕ್ಕೆ ಯಶಸ್ವಿಯಾಗಿದ್ದು, ಇಂದು ಮುಂದಿನ ಚುನಾವಣೆಗೆ ಸ್ಫೂರ್ತಿ ಮತ್ತಿ ಹುಮ್ಮಸ್ಸು ನೀಡಲಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

    ಸಾರ್ವತ್ರಿಕ ಚುನಾವಣೆಯಲ್ಲಿ ಮೂರು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸುರೇಶ್ ಅಂಗಡಿ ಗೆದ್ದಿದ್ದರು. ಆದ್ರೆ ಈ ಬಾರಿ ಅತ್ಯಲ್ಪ ಮತಗಳಿಂದ ಅಂತರದಿಂದ ಗೆಲ್ಲುವ ಮೂಲಕ ಬಿಜೆಪಿ ಸೇಫ್ ಆಗಿದೆ. ಬೆಳಗಾವಿ ಚುನಾವಣೆಯಲ್ಲಿ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ, ಜಗದೀಶ್ ಶೆಟ್ಟರ್ ಸೇರಿದಂತೆ ಇಡೀ ಕಮಲ ನಾಯಕರೇ ಪ್ರಚಾರ ನಡೆಸಿದ್ದರು. ಅದ್ಯಾಗಿಯೂ ಬಿಜೆಪಿಗೆ ದೊಡ್ಡ ಹೊಡೆತವನ್ನ ಬೆಳಗಾವಿ ಉಪ ಚುನಾವಣೆ ನೀಡಿದೆ.

    ಇನ್ನೂ ಎಂಇಎಸ್ ನಿಂದ ಕಣಕ್ಕಿಳಿದಿದ್ದ ಶುಭಮ್ ವಿಕ್ರಾಂತ್ ಶೆಲ್ಕೆ 1,16,923 ಮತಗಳನ್ನ ಪಡೆದಿದ್ದಾರೆ. ಪ್ರತಿ ಬಾರಿ ಎಂಇಎಸ್ ನ ಪರೋಕ್ಷ ಬೆಂಬಲವನ್ನ ಬಿಜೆಪಿ ಪಡೆದುಕೊಳ್ಳುತ್ತಿತ್ತು. ಇದೇ ಕಾರಣದಿಂದ ಬಿಜೆಪಿಯ ಅತ್ಯಲ್ಪ ಮತಗಳ ಗೆಲುವಿಗೆ ಪ್ರಮುಖ ಕಾರಣ ಅಂತಾನೂ ಹೇಳಲಾಗುತ್ತಿದೆ.

    ಯಾರಿಗೆ ಎಷ್ಟು ಮತ?
    * ಮಂಗಳಾ ಅಂಗಡಿ (ಬಿಜೆಪಿ): 4,40,327 (ಇವಿಎಂ 4,36,868+ ಪೋಸ್ಟಲ್ 3,459) – ಶೇ.43.07
    * ಸತೀಶ್ ಜಾರಕಿಹೊಳಿ (ಕಾಂಗ್ರೆಸ್): 4,35,087 (ಇವಿಎಂ 4,32,882+ಪೋಸ್ಟಲ್ 2,205) – ಶೇ.42.56
    * ನೋಟಾ: 10,631 (ಇವಿಎಂ 10,563 + ಪೋಸ್ಟಲ್ 68) – ಶೇ.1.04

  • ಬಿಜೆಪಿಗೆ ಬೆಳಗಾವಿಯ ಕುಂದಾ – ಮಂಗಳಾ ಅಂಗಡಿ ಗೆಲುವು

    ಬಿಜೆಪಿಗೆ ಬೆಳಗಾವಿಯ ಕುಂದಾ – ಮಂಗಳಾ ಅಂಗಡಿ ಗೆಲುವು

    – ಕೊನೆ ಎರಡು ಸುತ್ತಿನಲ್ಲಿ ಕಾಂಗ್ರೆಸ್‍ಗೆ ಬಿಗ್ ಶಾಕ್

    ಬೆಳಗಾವಿ: ಕುಂದಾ ನಗರಿ ಬೆಳಗಾವಿಯನ್ನ ಬಿಜೆಪಿ ತನ್ನಲ್ಲೇ ಉಳಿಸಿಕೊಂಡಿದ್ದು, ಮಂಗಳಾ ಅಂಗಡಿ 2,903 ಮತಗಳ ಅಂತರದಲ್ಲಿ ಗೆಲುವಿನ ಮಾಲೆ ಧರಿಸಿದ್ದಾರೆ.

    ಒಟ್ಟು 81 ಸುತ್ತಿನ ಮತ ಎಣಿಕೆ ಕ್ಷಣ ಕ್ಷಣಕ್ಕೂ ಕುತೂಹಲವುನ್ನುಂಟು ಮಾಡಿತ್ತು. ಆರಂಭದಲ್ಲಿ ಸುಮಾರು 40 ಸುತ್ತುಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿತ್ತು. ನಂತರ ಕಾಂಗ್ರೆಸ್ ನ ಸತೀಶ್ ಜಾರಕಿಹೊಳಿ ಮುನ್ನಡೆ ಕಾಯ್ದುಕೊಂಡಿದ್ದರು. 75ನೇ ಸುತ್ತಿನ ಬಳಿಕ ಸತೀಶ್ ಜಾರಕಿಹೊಳಿ ಅವರ ಮುನ್ನಡೆಯ ಅಂತರ ಕಡಿಮೆಯಾಗುತ್ತಾ ಬಂತು. 80ನೇ ಸುತ್ತಿನಲ್ಲಿ ಮಂಗಳಾ ಅಂಗಡಿ 3101 ಮತಗಳ ಭಾರೀ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಕಾಂಗ್ರೆಸ್‍ಗೆ ಶಾಕ್ ನೀಡಿದರು.

    79ನೇ ಸುತ್ತಿನಲ್ಲಿ ಬಿಜೆಪಿಗೆ ಮುನ್ನಡೆ ಸಿಕ್ಕಿತ್ತು. ಕೊನೆಯ 4 ಸುತ್ತಿನಲ್ಲಿ ಮುನ್ನಡೆಯನ್ನು ಉಳಿಸಿಕೊಂಡ ಬಂದ ಮಂಗಳಾ ಅಂಗಡಿ ಕೊನೆಗೆ ಗೆಲುವಿನ ನಗೆ ಬೀರಿದರು.

    88 ಸುತ್ತಿನಲ್ಲಿ ಬಿಜೆಪಿ 4,123 ಮತಗಳಿಂದ ಮುಂದಿದ್ದರೆ 89 ಸುತ್ತಿನಲ್ಲಿ ಈ ಅಂತರ 2,941 ಕುಸಿದಿತ್ತು. ಎಂಇಎಸ್ ಪರ 1 ಲಕ್ಷಕ್ಕೂ ಹೆಚ್ಚು ಮತಗಳು ಬಿದ್ದ ಬಿಜೆಪಿಗೆ ಭಾರೀ ಹೊಡೆತ ನೀಡಿತ್ತು.

    2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 3,91,304 ಮತಗಳಿಂದ ಗೆದ್ದುಕೊಂಡಿತ್ತು. ಸುರೇಶ್ ಅಂಗಡಿಗೆ 7,61,991 ಮತಗಳು ಸಿಕ್ಕಿದ್ದರೆ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಸಾಧುನವರ್ ಅವರಿಗೆ 3,70,687 ಮತಗಳು ಸಿಕ್ಕಿತ್ತು.

    ಬೆಳಗಾವಿಯ ಆರ್ ಪಿಡಿ ಕಾಲೇಜಿನಲ್ಲಿ ನಡೆಯುತ್ತಿರುವ ಮತ ಎಣಿಕೆ ನಡೆಯುತ್ತಿದೆ. ಈ ಮಧ್ಯೆ ಮಧ್ಯಾಹ್ನದ ವೇಳೆ ಸರ್ವರ್ ಸಮಸ್ಯೆಯಾದ ಹಿನ್ನೆಲೆಯಲ್ಲಿ 20 ನಿಮಿಷ ಎಣಿಕೆಯಾದ ಮತಗಳ ವಿವರವನ್ನು ಅಪ್ಲೋಡ್ ಮಾಡಲು ಸಾಧ್ಯವಾಗದೇ ಸಿಬ್ಬಂದಿ ಸುಮ್ಮನೆ ಕುಳಿತ ಪ್ರಸಂಗ ನಡೆಯಿತು.

    ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿಯಿಂದಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಸ್ಪರ್ಧಿಸಿದ್ದರು.

  • ಐ ಡೋಂಟ್ ವಾಂಟ್ ಟು ರಿಯಾಕ್ಟ್ ವಿಜಯೇಂದ್ರ : ಸಿದ್ದರಾಮಯ್ಯ

    ಐ ಡೋಂಟ್ ವಾಂಟ್ ಟು ರಿಯಾಕ್ಟ್ ವಿಜಯೇಂದ್ರ : ಸಿದ್ದರಾಮಯ್ಯ

    ಕೊಪ್ಪಳ: ಐ ಡೋಂಟ್ ವಾಂಟ್ ಟು ರಿಯಾಕ್ಟ್ ವಿಜಯೇಂದ್ರ. ನಾನು ಯಾವುದೇ ಕಾರಣಕ್ಕೂ ವಿಜಯೇಂದ್ರ ಬಗ್ಗೆ ಪ್ರತಿಕ್ರಿಯೆ ನೀಡಲಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಖಡಕ್ ಆಗಿ ಹೇಳಿದ್ದಾರೆ.

    ಕೊಪ್ಪಳದ ಕಾರಟಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿಜಯೇಂದ್ರಗೆ ಯಾವ ಅರ್ಹತೆ ಇದೆ? ಅವರೇನಾದ್ರೂ ಸಚಿವರಾಗಿದ್ರಾ ಅಥವಾ ಸಿಎಂ ಆಗಿದ್ರಾ? ಯಡಿಯೂರಪ್ಪನವರ ಮಗ ಅನ್ನೋದು ಬಿಟ್ರೆ ಬೇರೆ ಯಾವ ಕ್ವಾಲಿಫಿಕೇಶನ್ ಇದೆ? ವಿಜಯೇಂದ್ರ ರಾಜಕೀಯದಲ್ಲಿ ಏನೂ ಅಲ್ಲ ಎಂದು ಹೇಳಿದರು.

    ಈಶ್ವರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈಶ್ವರಪ್ಪ ಒಬ್ಬ ಪೆದ್ದ. ಅವನಿಗೆ ಬ್ರೈನ್‍ಗೂ ನಾಲಿಗೆಗೂ ಲಿಂಕ್ ಇಲ್ಲ. ಬಾಯಿಗೆ ಬಂದಂತೆ ಮಾತಾಡ್ತಾನೆ. ನಾನು ಹೇಗೆ ಕಾಂಗ್ರೆಸ್ ಪಾರ್ಟಿ ಸೇರಿದೆ ಎಂದು ನಿಮಗೆ ಗೊತ್ತಾ? ನನ್ನನ್ನು ಜೆಡಿಎಸ್‍ನಿಂದ ಹೊರಹಾಕಿದರು. ಬಳಿಕ ನಾನು ಒಂದು ವರ್ಷ ಅಹಿಂದಾ ಸಂಘಟನೆ ಮಾಡುತ್ತಿದ್ದೆ. ಆಮೇಲೆ ಕಾಂಗ್ರೆಸ್ ನಾಯಕ ಅಹಮದ್ ಪಟೇಲ್ ನನಗೆ ಕಾಂಗ್ರೆಸ್ ಸೇರಲು ಆಹ್ವಾನ ನೀಡಿದ ಮೇಲೆ ನಾನು ಕಾಂಗ್ರೆಸ್ ಪಕ್ಷ ಸೇರಿಕೊಂಡೆ. ಬಿಜೆಪಿ ವಿರುದ್ಧ ಹೋರಾಡಲು ನಾನು ಕಾಂಗ್ರೆಸ್ ಪಕ್ಷ ಸೇರಿಕೊಂಡೆ. ಈಶ್ವರಪ್ಪನಿಗೆ ಇದ್ಯಾವುದೂ ಗೊತ್ತಿಲ್ಲ ಎಂದು ಟೀಕಿಸಿದರು.

    ಕೊರೊನಾ ವಿಚಾರವಾಗಿ ಪ್ರತಿಕ್ರಿಯಿಸಿ, ನಿನ್ನೆ ಒಂದೇ ದಿನ 10 ಸಾವಿರಕ್ಕೂ ಅಧಿಕ ಕೇಸ್ ಬಂದಿವೆ. ಸರ್ಕಾರ ಬಿಗಿ ಕ್ರಮ ಕೈಗೊಂಡಿಲ್ಲ. ಸರ್ಕಾರದ ತಪ್ಪಿನಿಂದ ಎರಡನೇ ಅಲೆಯಲ್ಲಿ ಕೇಸ್‍ಗಳು ಹೆಚ್ಚುತ್ತಿವೆ. ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ. ಬಿಗಿ ಕ್ರಮ ಕೈಗೊಳ್ಳಬೇಕು. ಸರಿಯಾಗಿ ಕೋವಿಡ್ ಟೆಸ್ಟ್ ನಡೆಸಬೇಕು. ಗಡಿ ಭಾಗಗಳಲ್ಲಿ ಸರಿಯಾಗಿ ಟೆಸ್ಟ್ ನಡೆಸುತ್ತಿಲ್ಲ. ಮಹಾರಾಷ್ಟ್ರ, ಕೇರಳದಿಂದ ಬರುತ್ತಿರುವವರಿಗೆ ಸರಿಯಾಗಿ ಕೋವಿಡ್ ಟೆಸ್ಟ್ ಮಾಡುತ್ತಿಲ್ಲ. ಸರ್ಕಾರ ದುಡ್ಡು ಹೊಡೆಯೋದ್ರಲ್ಲಿ ಕಾಲಹರಣ ಮಾಡುತ್ತಿದೆ ಎಂದು ದೂರಿದರು.

    ನಳೀನ್ ಕುಮಾರ್ ಕಟೀಲ್ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ನಳೀನ್ ಕುಮಾರ್ ಕಟೀಲ್ ಒಬ್ಬ ವಿಧೂಷಕ. ಜೋಕರ್ ಇದ್ದ ಹಾಗೆ. ಅವರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.

    ಮಂಗಳಾ ಅಂಗಡಿ ಬಗ್ಗೆ ಸಿದ್ದರಾಮಯ್ಯ ಮಾತನಾಡಿ, ನಾನು ಮಂಗಳಾ ಅಂಗಡಿಯವರಿಗೆ ಅವಮಾನ ಮಾಡಿಲ್ಲ. ಸುರೇಶ್ ಅಂಗಡಿಯೇ ರಾಜ್ಯ ಸರ್ಕಾರಕ್ಕೆ ಬರಬೇಕಾದ ಹಣವನ್ನು ಕೇಳಿಲ್ಲ. ಇನ್ನೂ ಈ ಅಮ್ಮ ಎಲ್ಲಿ ಕೇಳ್ತಾರೆ ಎಂದು ಹೇಳಿದ್ದೆ ಅಷ್ಟೇ. ಸುರೇಶ್ ಅಂಗಡಿಗೆ 4 ಬಾರಿ ವೋಟ್ ಹಾಕಿದ್ದೀರಿ. ಈ ಬಾರಿ ಬದಲಾವಣೆ ಇರಲಿ ಎಂದು ಸತೀಶ್ ಜಾರಕಿಹೊಳಿಗೆ ವೋಟ್ ಹಾಕಿ ಎಂದಿದ್ದೆ. ಈ ಬಗ್ಗೆ ಜಗದೀಶ್ ಶೆಟ್ಟರ್ ಏನೇ ಹೇಳಬಹುದು. ಅದಕ್ಕೆಲ್ಲಾ ನಾನು ಉತ್ತರ ಕೊಡಲು ಸಾಧ್ಯವಿಲ್ಲ. ನಾನು ಸ್ಟೇಟ್ ಮೆಂಟ್ ನೀಡುವುದು ಜನರಿಗೆ, ಶೆಟ್ಟರ್‍ ಗಳಲ್ಲ ಎಂದರು.

  • ಬೆಳಗಾವಿಗೆ ರಾಹುಲ್ ಗಾಂಧಿ ಪ್ರಚಾರಕ್ಕೆ ಬಂದ್ರೆ ಬಿಜೆಪಿ ಅಭ್ಯರ್ಥಿ ಗೆಲ್ತಾರೆ : ಪ್ರಹ್ಲಾದ್ ಜೋಶಿ

    ಬೆಳಗಾವಿಗೆ ರಾಹುಲ್ ಗಾಂಧಿ ಪ್ರಚಾರಕ್ಕೆ ಬಂದ್ರೆ ಬಿಜೆಪಿ ಅಭ್ಯರ್ಥಿ ಗೆಲ್ತಾರೆ : ಪ್ರಹ್ಲಾದ್ ಜೋಶಿ

    ಬೆಳಗಾವಿ: ಇನ್ನೂ 20 ವರ್ಷ ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುತ್ತದೆ. ನೀವು ರಾಹುಲ್ ಗಾಂಧಿಯನ್ನು ಪ್ರಚಾರಕ್ಕೆ ಕರೆಸಬಹುದು. ಆದರೆ ನಿಮಗೆ ಅಧಿಕಾರ ಸಿಗುವುದಿಲ್ಲ. ರಾಹುಲ್ ಗಾಂಧಿ ಕಾಲಿಟ್ಟರೆ ಸಾಕು ಐದಾರು ಲಕ್ಷ ಮತಗಳ ಅಂತರದಲ್ಲಿ ಮಂಗಳ ಅಂಗಡಿ ಗೆಲ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

    ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ನಡೆದ ಉಪ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ದೇಶದ ರಕ್ಷಣೆ, ಸಮಗ್ರತೆ ಪ್ರಶ್ನೆ ಬಂದಾಗ ಕಾಂಗ್ರೆಸ್ ಪಕ್ಷವು ವಿದೇಶಗಳೊಂದಿಗೆ ರಾಜಿ ಮಾಡಿಕೊಂಡ ಅನೇಕ ಉದಾಹರಣೆಗಳಿವೆ. ಕಾಂಗ್ರೆಸ್ ಪಕ್ಷವು ಚೀನಾದಿಂದ ಹಣ ಪಡೆದುಕೊಂಡು ಉಚಿತ ವ್ಯಾಪಾರದ ಒಪ್ಪಂದವನ್ನು ಮಾಡಿಕೊಂಡು, ಭಾರತದ ವ್ಯಾಪಾರ-ವಹಿವಾಟುಗಳಿಗೆ ನಷ್ಟ ಮಾಡಿದೆ. ದೇಶದ ಹಿತದ ವಿರುದ್ದವಾದ ಒಂದು ಪಕ್ಷ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ ಎಂದು ವಾಗ್ದಾಳಿ ನಡೆಸಿದರು.

    ಕಾಂಗ್ರೆಸ್ ಪಕ್ಷ ಸತೀಶ್ ಜಾರಕಿಹೊಳಿಯನ್ನು ಇಲ್ಲಿ ಒತ್ತಾಯಪೂರ್ವಕವಾಗಿ ಚುನಾವಣೆಗೆ ನಿಲ್ಲಿಸಿದೆ. ಡಿಕೆಶಿ ಸತೀಶ್ ಜಾರಕಿಹೊಳಿಯನ್ನು ಹಿಡಿದುಕೊಂಡು ಬಂದು ಇಲ್ಲಿ ಚುನಾವಣೆಗೆ ನಿಲ್ಲಿಸಿದ್ದಾರೆ. ಸತೀಶ್ ಜಾರಕಿಹೊಳಿ ಗೆಲ್ಲುವ ಪ್ರಶ್ನೆ ಇಲ್ಲ. ಒಂದು ವೇಳೆ ಗೆದ್ದರೆ, ಪಾರ್ಲಿಮೆಂಟ್ ನಲ್ಲಿ ಸದನದ ಬಾವಿಯೊಳಗಿಳಿದು ಮೋದಿ ವಿರುದ್ದ ಧಿಕ್ಕಾರ ಎಂದು 51 ಜನ ಕೂಗುತ್ತಿರುತ್ತಾರೆ. ಅವರೊಂದಿಗೆ ಇವರು 52ನೇಯವರಾಗಿ ಸೇರಿಕೊಳ್ಳುತ್ತಾರೆ. ಈ ರೀತಿ ಸದನದೊಳಗೆ ಕೂಗಾಡುವವರು ಬೇಕೋ ಅಥವಾ ದೇಶದಲ್ಲಿ ಕೃಷಿಗಾಗಿ ಒಳ್ಳೆಯ ಕಾನೂನನ್ನು ತಂದು, ನೀರಾವರಿಗೆ ದುಡ್ಡು ಕೊಟ್ಟು, ಜಗತ್ತಿನಲ್ಲಿ ದೇಶದ ಗರಿಮೆಯನ್ನು ಜಾಸ್ತಿ ಮಾಡಿರುವ ಪಕ್ಷದ ನಾಯಕನ ಪರವಾಗಿ ಕೈ ಎತ್ತುವವರು ಬೇಕೋ ನೀವೇ ನಿರ್ಧರಿಸಿ ಎಂದು ಮನವಿ ಮಾಡಿದರು.

    ರಾಮಮಂದಿರ ನಿರ್ಮಾಣಕ್ಕೆ ಯಾರು ಒಂದು ನಯಾ ಪೈಸೆ ದುಡ್ಡು ಕೊಟ್ಟಿಲ್ಲವೋ ಅವರು ಲೆಕ್ಕ ಕೇಳ್ತಿದ್ದಾರೆ. ನೀವು ಹಣ ಕೊಟ್ಟಿಲ್ಲ. ಹಾಗಾಗಿ ನಿಮಗೆ ಲೆಕ್ಕ ಕೊಡಲ್ಲ. ಜನರಿಗೆ ಕೊಡ್ತೀವಿ. ಸಿದ್ದರಾಮಯ್ಯ ನಾನು ಸಿಎಂ ಆಗ್ತಿನೋ ಡಿಕೆಶಿ ಸಿಎಂ ಆಗ್ತಾರೋ ಅಂತ ಕನಸು ಕಾಣ್ತಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಸರ್ಕಾರ ಬರಲು ಸಾಧ್ಯವೇ ಇಲ್ಲ. ನೀವು ಸುಮ್ಮನೆ ಮನೆಗೆ ಹೋಗ್ತಿರಿ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದರು.