Tag: mangala gowri maduve

  • `ನೀಲಿ ಚಿತ್ರದಲ್ಲಿ ಆಕ್ಟ್ ಮಾಡ್ತೀರಾ’ ಎಂದು ಕೇಳಿದ ಯೂಟ್ಯೂಬರ್‌ಗೆ ತನಿಷಾ ಖಡಕ್‌ ಕ್ಲಾಸ್

    `ನೀಲಿ ಚಿತ್ರದಲ್ಲಿ ಆಕ್ಟ್ ಮಾಡ್ತೀರಾ’ ಎಂದು ಕೇಳಿದ ಯೂಟ್ಯೂಬರ್‌ಗೆ ತನಿಷಾ ಖಡಕ್‌ ಕ್ಲಾಸ್

    `ಮಂಗಳಗೌರಿ ಮದುವೆ’ (Mangala Gowri Maduve) ಸೀರಿಯಲ್‌ನಲ್ಲಿ ಖಡಕ್ ವಿಲನ್ ಆಗಿ ಮನಗೆದ್ದ ತನಿಷಾ ಕುಪ್ಪಂಡ (Tanisha Kuppanda) ಅವರು Pentagon ಸಿನಿಮಾದಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಿರುವ ನಟಿ ತನಿಷಾ ಮುಜುಗರದ ಸನ್ನಿವೇಶವೊಂದು ಎದುರಾಗಿದೆ. ಸಂದರ್ಶನವೊಂದರಲ್ಲಿ ಯೂಟ್ಯೂಬರ್ ಅಸಭ್ಯ ಪ್ರಶ್ನೆಗೆ ತನಿಷಾ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

    `ಪೆಂಟಗನ್’ ಸಿನಿಮಾ ಇದೇ ಏಪ್ರಿಲ್ 7ಕ್ಕೆ ತೆರೆಗೆ ಅಬ್ಬರಿಸುತ್ತಿದೆ. ಚಿತ್ರದಲ್ಲಿ ಕಾಮನ ಬಿಲ್ಲು (Kamana Billu) ಎಂಬ ಹಾಡಿನಲ್ಲಿ ಸಖತ್ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ಸಂದರ್ಶನದಲ್ಲಿ ಯೂಟ್ಯೂಬರ್, ನಟಿಗೆ ನ್ಯೂಡ್ ಸಿನಿಮಾದಲ್ಲಿ ಆಕ್ಟ್ ಮಾಡ್ತೀರಾ ಎಂದು ಕೇಳಿದ್ದಾರೆ. ಅದಕ್ಕೆ ನಟಿ ತನಿಷಾ ಗರಂ ಆಗಿದ್ದಾರೆ. ಅಷಕ್ಕೂ ಆಗಿದ್ದೇನು?

    ನೀವು ನೀಲಿ ಚಿತ್ರದಲ್ಲಿ ನಟಿಸಲು ಸಿದ್ಧವಿದ್ದೀರಾ? ಎಂದು ಓರ್ವ ಯೂಟ್ಯೂಬರ್ ಪ್ರಶ್ನೆ ಮಾಡಿದ್ದಾರೆ. ಆಗ ಸಿಟ್ಟಾದ ತನಿಷಾ ಕುಪ್ಪಂಡ ಹಾಗಿದ್ರೆ ನಾನು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇರಬಾರದಿತ್ತು. ನೀಲಿ ಸಿನಿಮಾ ಇಂಡಸ್ಟ್ರಿಯಲ್ಲೇ ಇರಬೇಕಿತ್ತು. ಬೋಲ್ಡ್ ಆಗಿ ನಟಿಸಿದ್ದೀವಿ ಅಂದ ಮಾತ್ರಕ್ಕೆ. ಈ ತರಹ ಪ್ರಶ್ನೆ ಕೇಳೋದ್ರಲ್ಲಿ ಅರ್ಥವೇ ಇಲ್ಲ. ನೀಲಿ ಚಿತ್ರದ ತಾರೆಯರು ಬೆತ್ತಲಾಗುತ್ತಾರೆ. ನಾನು ನೀಲಿ ಚಿತ್ರದ ತಾರೆಯಲ್ಲ. ಯಾಕೆ ಈ ರೀತಿ ಪ್ರಶ್ನೆ ಮಾಡ್ತಿದ್ದೀರಾ.? ಪ್ರಶ್ನೆ ಮಾಡೋಕೂ ಮುನ್ನ ನಿಮಗೆ ಕಾಮನ್ ಸೆನ್ಸ್ ಇರಬೇಕು. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಯಾರು ಬೆತ್ತಲೆ ಸಿನಿಮಾ ಮಾಡ್ತಿದ್ದಾರೆ? ಯಾಕೆ ಈ ರೀತಿ ಅಸಭ್ಯವಾಗಿ ಪ್ರಶ್ನೆಯನ್ನ ಕೇಳುತ್ತಿದ್ದೀರಾ? ಎಂದು ಹೇಳಿ ಸಂದರ್ಶನವನ್ನ ಮೊಟಕುಗೊಳಿಸುತ್ತಾರೆ. ಇದನ್ನೂ ಓದಿ:ಮಗ ಸತ್ತಾಗ ಆತ್ಮಸ್ಥೈರ್ಯ ತುಂಬಿ ಜೊತೆಯಾಗಿದ್ದು, ಪ್ರಭುದೇವ: ಪ್ರಕಾಶ್‌ ರಾಜ್‌

    ಇದೇ ವೇಳೆ ಯೂಟ್ಯೂಬರ್‌ನ `ಪೆಂಟಗನ್’ ಚಿತ್ರತಂಡ ತರಾಟೆಗೆ ತೆಗೆದುಕೊಂಡಿದೆ. ಯೂಟ್ಯೂಬರ್ ವಿರುದ್ಧ ನಟಿ ತನಿಷ ಕುಪ್ಪಂಡ ಮತ್ತು ಚಿತ್ರತಂಡ ಕಿಡಿಕಾರಿದೆ. ತಮ್ಮ ಆಕ್ರೋಶವನ್ನ ತನಿಷಾ ಕುಪ್ಪಂಡ ಹೊರಹಾಕಿದ್ದಾರೆ.

  • ಬಿಗ್ ಬಾಸ್ ಮನೆಗೆ ನಾನು ಲವ್ ಮಾಡೋಕೆ ಬಂದಿಲ್ಲ: ಗೊಬ್ಬರಗಾಲಗೆ ಕಾವ್ಯಶ್ರೀ ವಾರ್ನಿಂಗ್

    ಬಿಗ್ ಬಾಸ್ ಮನೆಗೆ ನಾನು ಲವ್ ಮಾಡೋಕೆ ಬಂದಿಲ್ಲ: ಗೊಬ್ಬರಗಾಲಗೆ ಕಾವ್ಯಶ್ರೀ ವಾರ್ನಿಂಗ್

    ದೊಡ್ಮನೆ ಇದೀಗ ಒಂಭತ್ತು ದಿನಗಳನ್ನ ಪೂರೈಸಿ 10ನೇ ದಿನದತ್ತ ಕಾಲಿಟ್ಟಿದೆ. ದಿನದಿಂದ ದಿನಕ್ಕೆ ಬಿಗ್ ಬಾಸ್(Bigg Boss House) ಮನೆಯ ಆಟ ಹಲವು ತಿರುವುಗಳನ್ನ ಪಡೆದುಕೊಳ್ಳುತ್ತಿದೆ. ಪ್ರೀತಿ ,ಕೋಪ,ಜಗಳ ಎಲ್ಲವೂ ಹೈಲೆಟ್ ಆಗುತ್ತಿದೆ. ಇದೀಗ ವಿನೋದ್ ಗೊಬ್ಬರಗಾಲ(Vinod Gobbaragala) ಮಾತಿಗೆ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಜೊತೆಗೆ ಬಿಗ್ ಬಾಸ್ ಮನೆಗೆ ನಾನು ಲವ್ ಮಾಡೋಕೆ ಬಂದಿಲ್ಲ ಎಂಬ ಖಡಕ್ ವಾರ್ನಿಂಗ್ ಕೂಡ ಕೊಟ್ಟಿದ್ದಾರೆ.

    ಬಿಗ್ ಬಾಸ್ ಮನೆಯಲ್ಲಿ(Bigg Boss) ಕಳೆದಿರುವ ಒಂದೇ ವಾರಕ್ಕೆ ಅಸಮಾಧಾನದ ಹೊಗೆಯಾಡುತ್ತಿದೆ. ಅದರಲ್ಲೂ ಕಾವ್ಯಶ್ರೀ ಗೌಡ, ವಿನೋದ್ ಗೊಬ್ಬರಗಾಲಾ ತಮಾಷೆ ಮಾಡಲು ಹೋಗಿ, ಹೋಗಿ ಜಗಳ ಆಡ್ತಾ ಇದ್ದಾರೆ. ಕಾವ್ಯಶ್ರೀ(Kavyashree) ಕಣ್ಣೀರು ಹಾಕಿದ್ದಾರೆ. ಮನೆಮಂದಿಗೆ ರಂಜಿಸಲು ನಾಟಕ ಮಾಡುವಾಗ ಮುಸರೆ ತಿಕ್ಕುವವಳು, ಕಸ ಗುಡಿಸುವವಳನ್ನು ಯಾಕೆ ರಾಣಿ ಮಾಡಿದ್ದೀರಾ ಎಂದು ಗೊಬ್ಬರ ಹೇಳಿರುವ ಮಾತು ಕಾವ್ಯಶ್ರೀಗೆ ಬೇಸರವಾಗಿದೆ.

    ಬಳಿಕ ಊಟ ಮಾಡುವಾಗ ಕೂಡ ಈ ಜಟಾಪಟಿ ಮುಂದುವರೆದಿದೆ. ಬಾ ಅನ್ನ ಹಾಕು ಎಂದು ಗೊಬ್ಬರಗಾಲ ಆಡಿರುವ ಮಾತು ಕಾವ್ಯಶ್ರೀ ಕಣ್ಣೀರಿಗೆ ಕಾರಣವಾಗಿದೆ. ಗೌರವ ಕೊಡದೇ ಗೊಬ್ಬರಗಾಲ ಮಾತನಾಡುತ್ತಾರೆ. ನಾನು ಅವರಿಗೆ ಅಷ್ಟು ಸಲುಗೆ ಕೊಟ್ಟಿಲ್ಲ ಎಂದು ಮನೆಯವರ ಮುಂದೆ ಕಾವ್ಯಶ್ರೀ ಅಳಲು ತೋಗಿಕೊಂಡಿದ್ದಾರೆ. ಇದನ್ನೂ ಓದಿ:ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ ಮೂರು ದಿನದ ಗಳಿಕೆ 230 ಕೋಟಿಗೂ ಅಧಿಕ

    ಬಳಿಕ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ದುಷ್ಟ ಗುಣ ಬಗ್ಗೆ ಟ್ಯಾಗ್ ಲೈನ್ ವಿವರಣೆ ಕೊಡುವ ಟಾಸ್ಕ್ ಇತ್ತು. ಈ ವೇಳೆ ಕಾವ್ಯ ಕೋಪ ಮತ್ತು ಅಹಂಕಾರದ ಬೋರ್ಡ್ ಅನ್ನು ಗೊಬ್ಬರಗಾಲಗೆ ಕೊಟ್ಟು ವಿವರಿಸಿದ್ದರು. ಒಬ್ಬ ವ್ಯಕ್ತಿಗೆ ಮರ್ಯಾದೆ ಕೊಟ್ಟು ಮಾತನಾಡುವ ಗುಣವಿಲ್ಲ. ಕೇಳುವ ಪರಿಜ್ಞಾನವೂ ಇಲ್ಲ. ಬಿಗ್ ಬಾಸ್ ಮನೆಗೆ ನಾನು ಲವ್ ಮಾಡೋಕೆ ಬಂದಿಲ್ಲ. ಬದುಕು ಕಟ್ಟಿಕೊಳ್ಳಲು ಬಂದಿದ್ದೇನೆ. ನನಗೆ ಬದಕಲು ಬಿಡಿ ಎಂದು ವಿನೋದ್‌ಗೆ ಕಾವ್ಯಶ್ರೀ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]