Tag: Mangalapuram

  • ರಿಷಿ ಹೊಸ ಸಿನಿಮಾಗೆ ಮುಹೂರ್ತ: ಬಿಗ್ ಬಾಸ್ ಸ್ಪರ್ಧಿ ನಾಯಕಿ

    ರಿಷಿ ಹೊಸ ಸಿನಿಮಾಗೆ ಮುಹೂರ್ತ: ಬಿಗ್ ಬಾಸ್ ಸ್ಪರ್ಧಿ ನಾಯಕಿ

    ‘ಮಂಗಳಾಪುರಂ’ (Mangalapuram) ಸ್ಯಾಂಡಲ್‌ವುಡ್‌ನಲ್ಲಿ ಸೆಟ್ಟೇರಿದ ಮತ್ತೊಂದು ಹೊಸ ಸಿನಿಮಾ. ಆಪರೇಷನ್ ಅಲಮೇಲಮ್ಮ, ಕವಲುದಾರಿ ಖ್ಯಾತಿಯ ನಟ ರಿಷಿ ನಾಯಕನಾಗಿ ನಟಿಸುತ್ತಿರುವ ಸಿನಿಮಾ. ವಿಭಿನ್ನ ಸಿನಿಮಾಗಳ ಮೂಲಕ, ವಿನೂತನ ಪಾತ್ರಗಳ ಮೂಲಕ ಅಭಿಮಾನಿಗಳ ಮುಂದೆ ಬರುವ ನಟ ರಿಷಿ ಈ ಬಾರಿ ಮಂಗಳಾಪುರಂ ಎನ್ನುವ ಮತ್ತೊಂದು ವಿಭಿನ್ನ ಸಿನಿಮಾಗೆ ಬಣ್ಣ ಹಚ್ಚಿದ್ದಾರೆ. ರಿಷಿ ಜೊತೆಗೆ ಪ್ರಮುಖ ಪಾತ್ರದಲ್ಲಿ ಕಾಶಿನಾಥ್ ಅವ ಪುತ್ರ ಅಭಿಮನ್ಯು ಕಾಶಿನಾಥ್ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಟೈಟಲ್ ಮೂಲಕ ಗಮನ ಸೆಳೆದಿದ್ದ ಮಂಗಳಾಪುರಂ ಸಿನಿಮಾ ಇದೀಗ ಅದ್ದೂರಿ ಮುಹೂರ್ತ ಮಾಡಿಕೊಳ್ಳುವ ಮೂಲಕ ಚಿತ್ರೀಕರಣ ಪ್ರಾರಂಭಿಸಿದೆ.

    ಮಂಗಳಾಪುರಂ ಸಿನಿಮಾದ ಮುಹೂರ್ತ ಸಮಾರಂಭ ಮೂಡಬಿದಿರೆಯ ಅಲಂಗಾರಿನಲ್ಲಿರುವ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಮುಹೂರ್ತ ಸಮಾರಂಭದಲ್ಲಿ ಇಡೀ ಸಿನಿಮಾತಂಡದ ಜೊತೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವಾ, ಅಲಂಗಾರು ಈಶ್ವರ ಭಟ್, ಉದ್ಯಮಿ ಶ್ರೀಪತಿ ಭಟ್ ಸೇರಿದಂತೆ ಅನೇಕರು ಹಾಜರಿದ್ದು, ಸಿನಿಮಾತಂಡಕ್ಕೆ ಶುಭಹಾರೈಸಿದರು. ಇದನ್ನೂ ಓದಿ: ದುನಿಯಾ ವಿಜಯ್ ಪುತ್ರಿ ರಿತನ್ಯಾ ಹುಟ್ಟುಹಬ್ಬಕ್ಕೆ ಲ್ಯಾಂಡ್ ಲಾರ್ಡ್ ಫಸ್ಟ್ ಲುಕ್

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವಾ ಮಂಗಳಾಪುಂ ಸಿನಿಮಾಗೆ ಕ್ಲ್ಯಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಅಂದಹಾಗೆ ಮಂಗಳಾಪುರಂ ರಂಜಿತ್ ರಾಜ್ ಸುವರ್ಣ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಮೊದಲ ಕನ್ನಡ ಸಿನಿಮಾ. ಈ ಮೊದಲು ತುಳು ಸಿನಿಮಾ ಮಾಡಿದ್ದ ರಂಜಿತ್ ರಾಜ್ ಅವರು ಇದೀಗ ಮಂಗಳಾಪುರಂ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನೂ ವಾರಾಹಿ ಕ್ರಿಯೇಶನ್ ಮೂಲಕ ಈ ಚಿತ್ರವನ್ನು ವಿದ್ವಾನ್ ಪ್ರಸನ್ನ ತಂತ್ರಿ, ರಾಮ್ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ.

    ಮಂಗಳಾಪುರಂನಲ್ಲಿ ರಿಷಿಗೆ ಜೋಡಿಯಾಗಿ ಕಿರುತೆರೆಯಲ್ಲಿ ಖ್ಯಾತಿಗಳಿಸಿದ್ದ ನಟಿ ಗೌತಮಿ ಜಾದವ್ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿಗೆ ಗೌತಮಿ ಮತ್ತು ರಿಷಿ ತೆರೆ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಇನ್ನೂ ವಿಶೇಷ ಎಂದರೆ ಚಿತ್ರಕ್ಕೆ ಗೌತಮಿ ಜಜಾದವ್ ಅವರ ಪತಿ ಅಭಿಷೇಕ್ ಕಾಸರಗೋಡು ಛಾಯಾಗ್ರಹಣವಿದೆ. ಪತ್ನಿಯ ನಟನೆಯನ್ನು ಪತಿಯೇ ಸೆರೆಹಿಡಿಯುತ್ತಿರುವುದು ವಿಶೇಷ. ಇನ್ನೂ ಉಳಿದಂತೆ ಸಿವಿಮಾದಲ್ಲಿ ವಿದ್ಯನಾಥ್ ಬಿರಾದರ್, ದೀಪಕ್ ರೈ ದೇವರಾಜ್ ಕಾಪಿಕಾಡ್,ರಾಮದಾಸ್ ಸೇರಿದಂತೆ ಕರಾವಳಿಯ ಅನೇಕ ಕಲಾವಿದರು ಕಾಣಿಸಿಕೊಳ್ಳುತ್ತಿದ್ದಾರೆ. ಮಂಗಳಾಪುರಂ ಸಿನಿಮಾ ಒಂದು ಊರಿನಲ್ಲಿ ನಡೆಯುವ ಮರ್ಡರ್ ಮಿಸ್ಟ್ರಿ ಕಥೆ. ನಂಬಿಕೆ – ಮೂಡನಂಬಿಕೆ ಹಾಗೂ ಪವಾಡ ವಿಚಾರದ ಮೇಲೆ ಕಥೆ ಸಾಗಲಿದೆ ..ಕಾರ್ಕಳ, ತೀರ್ಥಹಳ್ಳಿ, ಮಡಿಕೆರಿ, ಬೆಂಗಳೂರು ಸುತ್ತಾಮುತ್ತಾ ಚಿತ್ರೀಕರಣ ನಡೆಯಲಿದೆ. ಅನೂಪ್ ಸೀಳಿನ್ ಸಂಗೀತ ಚಿತ್ರಕ್ಕಿದೆ.

  • ಮಂಗಳಾಪುರಂ ಚಿತ್ರಕ್ಕೆ ಬಿಗ್ ಬಾಸ್ ಖ್ಯಾತಿಯ ಗೌತಮಿ ನಾಯಕಿ

    ಮಂಗಳಾಪುರಂ ಚಿತ್ರಕ್ಕೆ ಬಿಗ್ ಬಾಸ್ ಖ್ಯಾತಿಯ ಗೌತಮಿ ನಾಯಕಿ

    ಕನ್ನಡ ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ಗೌತಮಿ ಜಾಧವ್ (Actor Gautami Jadav) ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಮಂಗಳಾಪುರಂ ಚಿತ್ರದಲ್ಲಿ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ. ಕವಲು ದಾರಿ ಖ್ಯಾತಿಯ ರಿಷಿ ಈ ಸಿನಿಮಾದ ನಾಯಕ ನಟ. ಈಗಾಗಲೇ ಸ್ಯಾಂಡಲ್ ವುಡ್ ನಲ್ಲಿ (Sandalwood) ನಾಯಕಿಯಾಗಿ ನಟಿಸಿರುವ ಗೌತಮಿಗೆ, ಹಿರಿತೆರೆಯಲ್ಲಿ ಹೇಳಿಕೊಳ್ಳುವಂಥ ಬ್ರೇಕ್ ಸಿಕ್ಕಿಲ್ಲ. ಮಂಗಳಾಪುರಂ (Mangalapuram) ಅವರ ಕೈ ಹಿಡಿಯುತ್ತಾ ಕಾದು ನೋಡಬೇಕು.

    ಅಂದಹಾಗೆ ಈ ಸಿನಿಮಾವನ್ನು ತುಳು ಚಿತ್ರರಂಗದ ನಿರ್ದೇಶಕ ರಂಜಿತ್ ರಾಜ್ ಸುವರ್ಣ ನಿರ್ದೇಶನ ಮಾಡುತ್ತಿದ್ದಾರೆ. ಮರ್ಡರ್ ಮಿಸ್ಟರಿ ಮತ್ತು ನಂಬಿಕೆ ಹಾಗೂ ಅಪನಂಬಿಕೆಗಳ ಸುತ್ತ ನಡೆಯುವಂಥ ಕಥೆಯನ್ನು ನಿರ್ದೇಶಕರು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರಂತೆ. ರಿಷಿ ಜೊತೆಗೆ ಕಾಶಿನಾಥ್ ಅವರ ಪುತ್ರ ಅಭಿಮನ್ಯು ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ರಾಧಿಕಾ ಹುಟ್ಟುಹಬ್ಬದಲ್ಲಿ ಸ್ಟಾರ್ ಗೆಳತಿಯರು, ಒಬ್ರಗಿಂತ ಒಬ್ರು ಸುಂದರಿಯರು

    ಗೌತಮಿ ಈ ಸಿನಿಮಾದಲ್ಲಿ ಸುಕನ್ಯಾ ಹೆಸರಿನ ಪಾತ್ರದಲ್ಲಿ ನಟಿಸುತ್ತಿದ್ದು, ಆಸ್ತಿಕರ ನಾಡಿನಲ್ಲಿ ನಾಸ್ತಿಕನ ಮಡದಿಯಾಗಿ ಗೌತಮಿ ಕಾಣಿಸಿಕೊಳ್ಳಲಿದ್ದಾರೆ. ತಮ್ಮ ಪಾತ್ರದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಗೌತಮ್, ಈ ಹೊಸ ಪಾತ್ರಕ್ಕೆ ತಮ್ಮೆಲ್ಲರ ಪ್ರೋತ್ಸಾಹವಿರಲಿ ಅಂತ ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕನ್ನಡ ಸಿನಿಮಾ ಹಾಡಿನಲ್ಲಿ ಹೀರೋಯಿನ್ ಹೊಕ್ಕಳಿನ ಮೇಲೆ ಹಣ್ಣಿನ ಸಲಾಡ್ ಮಾಡಲಾಗುತ್ತಿತ್ತು: `ಆ’ ನಟಿಯ ಹೇಳಿದ್ಯಾರಿಗೆ?