Tag: Mangalore Goalibar

  • ಆಯ್ದ ವಿಡಿಯೋಗಳನ್ನು ಮಾತ್ರ ಬಿಡುಗಡೆ ಮಾಡೋದನ್ನು ನಿಲ್ಲಿಸಿ: ಮಂಗಳೂರು ಕಮಿಷನರ್

    ಆಯ್ದ ವಿಡಿಯೋಗಳನ್ನು ಮಾತ್ರ ಬಿಡುಗಡೆ ಮಾಡೋದನ್ನು ನಿಲ್ಲಿಸಿ: ಮಂಗಳೂರು ಕಮಿಷನರ್

    ಮಂಗಳೂರು: ಸಿಐಡಿ ಮತ್ತು ಮ್ಯಾಜಿಸ್ಟ್ರೀಯಲ್ ತನಿಖೆ ಬಳಿಕ ಮಂಗಳೂರು ಗಲಭೆಯ ಮೂಲ ಸತ್ಯ ಬಯಲಾಗಲಿದೆ. ಅಲ್ಲಿಯವರೆಗೆ ಎಡಿಟ್ ಮಾಡಿದ ವಿಡಿಯೋಗಳನ್ನು ಬಿಡುಗಡೆ ಮಾಡುವುದನ್ನು ನಿಲ್ಲಿಸಿ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್ ಹರ್ಷ ಹೇಳಿದ್ದಾರೆ.

    ಮಂಗಳೂರು ಗಲಭೆ ಸಂಬಂಧ ನಿನ್ನೆ ಮಾಜಿ ಸಿ.ಎಂ ಕುಮಾರಸ್ವಾಮಿ ರಿಲೀಸ್ ಮಾಡಿರುವ ವಿಡಿಯೋ ಬಗ್ಗೆ ಸ್ಪಷ್ಟನೆ ನೀಡಿರುವ ಅವರು ಇತ್ತೀಚೆಗೆ ಕೆಲವರು ಆಯ್ದ ವಿಡಿಯೋವನ್ನು ತಮಗೆ ಬೇಕಾದ ರೀತಿ ಎಡಿಟ್ ಮಾಡಿ ಬಿಡುಗಡೆ ಮಾಡಿದ್ದಾರೆ. ಆದ್ರೆ ಗಲಭೆಯ ಸತ್ಯಾಂಶ ಮುಂದೆ ತನಿಖೆಯಲ್ಲಿ ತಿಳಿದು ಬರಲಿದೆ ಎಂದರು.

    ಈಗಾಗಲೇ ಪೊಲೀಸರು ಗಲಭೆಯ ಎಲ್ಲಾ ವಿಡಿಯೋಗಳನ್ನು ತನಿಖಾ ಸಂಸ್ಥೆಗಳಿಗೆ ನೀಡಿದ್ದಾರೆ, ಡಿ.19 ರಂದು ಮಂಗಳೂರು ಪೊಲೀಸರು ಗಲಭೆ ನಿಯಂತ್ರಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು. ಶುಕ್ರವಾರ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಮಂಗಳೂರು ಗಲಭೆಗೆ ಸಂಬಂಧಿಸಿದ ಕೆಲ ವಿಡಿಯೋ ಮತ್ತು ಫೋಟೋಗಳನ್ನು ಬಿಡುಗಡೆ ಮಾಡಿ ಮಂಗಳೂರು ಗಲಭೆ ಪೊಲೀಸರ ಪೂರ್ವ ನಿಯೋಜಿತ ಕೃತ್ಯ ಎಂದು ಆರೋಪ ಮಾಡಿದ್ದರು.