Tag: Mangaluru Airport

  • ಮಂಗ್ಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ

    ಮಂಗ್ಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ

    ಮಂಗಳೂರು: ನಗರದ ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್ ಬಳಿ ಅನುಮಾನಾಸ್ಪದವಾದ ಲ್ಯಾಪ್‍ಟಾಪ್ ಬ್ಯಾಗ್ ಪತ್ತೆಯಾಗಿತ್ತು. ಅನುಮಾನ ಹಿನ್ನೆಲೆ ಬಾಂಬ್ ಸ್ಕ್ವಾಡ್ ತಂಡದಿಂದ ತಪಾಸಣೆ ನಡೆಸಿದಾಗ ಸಜೀವ ಬಾಂಬ್ ಪತ್ತೆಯಾಗಿದೆ.

    ಬಾಂಬ್ ಪತ್ತೆಯಾದ ಕೂಡಲೇ ಎಚ್ಚೆತ್ತ ಸಿಬ್ಬಂದಿ, ವಿಮಾನ ನಿಲ್ದಾಣದಲ್ಲಿನ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿದ್ದಾರೆ. ಬಾಂಬ್ ಇರಿಸಲಾಗಿದ್ದ ಬ್ಯಾಗ್ ನ್ನು ನಿಲ್ದಾಣದ ಆವರಣದ ಹೊರಗೆ ತರಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಿಐಎಸ್‍ಎಫ್ ಭದ್ರತಾ ಪಡೆ ನಿಲ್ದಾಣದ ಸುತ್ತಲೂ ಬಿಗಿ ಬಂದೋಬಸ್ತ್ ಕೈಗೊಂಡಿದೆ.

    ಆಟೋದಲ್ಲಿ ಬಂದ ಅಪರಿಚಿತ ವ್ಯಕ್ತಿ ಬ್ಯಾಗ್ ನ್ನು ವಿಮಾನ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳದ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಸದ್ಯ ಸಜೀವ ಬಾಂಬ್ ನ್ನು ಪ್ರೂಫ್ ವೆಹಿಕಲ್ ನಲ್ಲಿ ಇರಿಸಲಾಗಿದೆ.

  • ಮೋದಿ ಸ್ವಾಗತಕ್ಕೆ ಸಜ್ಜಾದ ಶ್ರೀ ಕ್ಷೇತ್ರ – ಎಲ್ಲೆಲ್ಲೂ ಸ್ಪೆಷಲ್ ಕಮಾಂಡೋಗಳ ಭರಾಟೆ

    ಮೋದಿ ಸ್ವಾಗತಕ್ಕೆ ಸಜ್ಜಾದ ಶ್ರೀ ಕ್ಷೇತ್ರ – ಎಲ್ಲೆಲ್ಲೂ ಸ್ಪೆಷಲ್ ಕಮಾಂಡೋಗಳ ಭರಾಟೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪವಿತ್ರ ಯಾತ್ರಾ ಸ್ಥಳ ಧರ್ಮಸ್ಥಳಕ್ಕೆ ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಅಭೂತಪೂರ್ವ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

    ಎಲ್ಲೆಲ್ಲೂ ಪೊಲಿಸ್ ಸರ್ಪಗಾವಲಿದೆ. ಎನ್‍ಎಸ್‍ಜಿ, ಎಸ್‍ಪಿಜಿ.. ಹೀಗೆ ಸ್ಪೆಷಲ್ ಕಮಾಂಡೋಗಳ ಭರಾಟೆ ಇದೆ. ಜೊತೆಗೆ ನಕ್ಸಲ್ ನಿಗ್ರಹ ದಳವೂ ಬೀಡುಬಿಟ್ಟಿದೆ. ಇನ್ನು ಇಂದು ಮಧ್ಯಾಹ್ನ 2 ಗಂಟೆವರೆಗೆ ಸಾಮಾನ್ಯ ಭಕ್ತರಿಗೆ ಮಂಜುನಾಥನ ದರ್ಶನ ಭಾಗ್ಯ ನಿರ್ಬಂಧಿಸಲಾಗಿದೆ.

    ಬೆಳಗ್ಗೆ 9ರಿಂದ ಧರ್ಮಸ್ಥಳ-ಉಜಿರೆ-ಕೊಕ್ಕಡ ನಡುವೆ ವಾಹನ ಸಂಚಾರ ಬಂದ್ ಮಾಡಲಾಗಿದೆ. ಆದ್ರೆ ಚಾರ್ಮಾಡಿ, ಮಂಗಳೂರು ರಸ್ತೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತ ಮಾಡಲಾಗಿದೆ. ಇನ್ನು ಉಜಿರೆಯಲ್ಲಿ ನಡೆಯಲಿರುವ ಸಮಾವೇಶಕ್ಕೆ ಬೆಳಗ್ಗೆ 9.30ರೊಳಗೆ ಆಗಮಿಸುವಂತೆ ಸಾರ್ವಜನಿಕರಿಗೆ ದೇವಳದ ಆಡಳಿತ ಮಂಡಳಿ ತಿಳಿಸಿದೆ.

    ಶನಿವಾರ ಎಸ್‍ಪಿಜಿ ಕಮ್ಯಾಂಡೋಗಳು ಕಾನ್‍ವೇ ಪರಿಶೀಲಿಸಿದರು. ಹೆಲಿಪ್ಯಾಡ್‍ನಿಂದ ದೇವಳದವರೆಗೆ ರಿಹಾರ್ಸಲ್ ನಡೆಸಿದರು. ಮೋದಿ ಬಳಸಲಿರುವ ಲ್ಯಾಂಡ್ ಕ್ರ್ಯೂಸರ್, ಪೈಲಟ್ ಜೀಪ್ ಸೇರಿದಂತೆ 16 ವಾಹನಗಳಲ್ಲಿ ರಿಹರ್ಸಲ್ ನಡೀತು. ಬಳಿಕ ಧಮಸ್ಥಳ- ಉಜಿರೆ ಹಾದಿಯಲ್ಲೂ ಎಸ್‍ಪಿಜಿ ಪರಿಶೀಲನೆ ನಡೀತು. ಪ್ರಧಾನಿಯ ವಾಹನ ಧರ್ಮಸ್ಥಳದಿಂದ ತೆರಳಿ ಅರ್ಧ ಗಂಟೆಯ ನಂತರ ಸಾರ್ವಜನಿಕರ ವಾಹನಗಳ ಓಡಾಟಕ್ಕೆ ಪೆÇಲೀಸರು ಅವಕಾಶ ಮಾಡಿಕೊಡಲಿದ್ದಾರೆ.

    ಹಾಗಿದ್ರೆ ಮೋದಿಯವರ ಇಂದಿನ ದಿನಚರಿ ಧರ್ಮಸ್ಥಳದಲ್ಲಿ ಹೇಗಿರುತ್ತೆ ಅಂತ ನೋಡೋದಾದ್ರೆ..

    * ಬೆಳಗ್ಗೆ 10.45 ಗಂಟೆಗೆ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ
    * ಬೆಳಗ್ಗೆ 11.00 ಗಂಟೆಗೆ ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ
    * ಮಂಜುನಾಥನ ಸನ್ನಿಧಿಯಲ್ಲಿ ಮೋದಿ ಪೂಜೆ
    * ಸುಮಾರು 10 ನಿಮಿಷ ಮೋದಿ ಧ್ಯಾನ ಸಾಧ್ಯತೆ
    * ಅಣ್ಣಪ್ಪ ಸ್ವಾಮಿ ದರ್ಶನ, ಅನ್ನಪೂರ್ಣ ಹಾಲ್‍ಗೆ ಭೇಟಿ ನೀಡಲಿರುವ ಮೋದಿ
    * 12.15ಕ್ಕೆ ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಮೋದಿ ಭಾಷಣ

    https://www.youtube.com/watch?v=F-C0cUhjm6c

  • ಕರಾವಳಿಯ ಆಗಸದಲ್ಲಿ ತಪ್ಪಿತು ದುರಂತ – ಸೇನಾ ವಿಮಾನ ಮಂಗಳೂರಲ್ಲಿ ತುರ್ತು ಭೂಸ್ಪರ್ಶ

    ಕರಾವಳಿಯ ಆಗಸದಲ್ಲಿ ತಪ್ಪಿತು ದುರಂತ – ಸೇನಾ ವಿಮಾನ ಮಂಗಳೂರಲ್ಲಿ ತುರ್ತು ಭೂಸ್ಪರ್ಶ

    ಮಂಗಳೂರು: ಕರಾವಳಿಯ ಆಗಸದಲ್ಲಿ ಭಾರೀ ದುರಂತವೊಂದು ಮಂಗಳವಾರ ಪೈಲಟ್‍ಗಳ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಜಸ್ಟ್ ಮಿಸ್ ಆಗಿದೆ. ಭಾರತೀಯ ಸೇನೆಗೆ ಸೇರಿದ ಮಿಲಿಟರಿ ವಿಮಾನವೊಂದು ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದ್ದರಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯ ನಿರ್ವಹಣೆ ಇಂದು 5 ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡಿತ್ತು.

    ಮಿಗ್ ಫೈಟರ್-29 ಯುದ್ಧ ವಿಮಾನ ಇಂದು ಸಂಜೆ 4 ಗಂಟೆ ವೇಳೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಈ ವೇಳೆ ವಿಮಾನದ ಟೈರ್ ಸ್ಫೋಟಗೊಂಡಿದೆ.

    ನೆರೆಯ ರಾಜ್ಯ ಗೋವಾದಲ್ಲಿದ್ದ ಯುದ್ಧ ವಾಹಕ ನೌಕೆ ಐಎನ್‍ಎಸ್ ವಿಕ್ರಮಾದಿತ್ಯದಿಂದ ಟೇಕಾಫ್ ಆಗಿತ್ತು. ತರಬೇತಿಗಾಗಿ ಈ ಹಾರಾಟ ನಡೆಸಲಾಗುತ್ತಿತ್ತು. ಆದರೆ ಆಗಸದಲ್ಲಿ ಹೈಡ್ರಾಲಿಕ್ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಯಿತು. ಯುದ್ಧ ವಿಮಾನದ ತರಬೇತಿ ವೇಳೆ ಮಿಗ್ 29ಕೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿತು. ತಕ್ಷಣ ವಿಮಾನವನ್ನು ಮಂಗಳೂರಿಗೆ ಡೈವರ್ಟ್ ಮಾಡಲಾಗಿದೆ ಎಂದು ನೌಕಾಪಡೆಯ ವಕ್ತಾರರಾದ ಕ್ಯಾಪ್ಟನ್ ಡಿಕೆ ಶರ್ಮಾ ತಿಳಿಸಿದ್ದಾರೆ. ಆದರೆ ವಿಮಾನ ತುರ್ತು ಭೂಸ್ಪರ್ಶವಾಗುತ್ತಿದ್ದಂತೆ 2 ಟೈರ್ ಸ್ಫೋಟಗೊಂಡಿವೆ. ಇದರಿಂದ ಮಂಗಳೂರು ವಿಮಾನನಿಲ್ದಾಣದಲ್ಲಿ ವಿಮಾನ ಸಂಚಾರಕ್ಕೆ ಅಡ್ಡಿಯಾಗಿದೆ ಎಂದೂ ಅವರು ತಿಳಿಸಿದ್ದಾರೆ.

    8 ವಿಮಾನಗಳ ಹಾರಾಟಕ್ಕೆ ಅಡ್ಡಿ: ಘಟನೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಎರಡು ರನ್ ವೇಗಳನ್ನು ಬಂದ್ ಮಾಡಿದ್ದರು. ಇದರಿಂದಾಗಿ ಸಂಜೆ 5ರಿಂದ 8 ಗಂಟೆಯೊಳಗಿನ ಒಟ್ಟು 8 ವಿಮಾನಗಳ ಹಾರಾಟಕ್ಕೆ ಅಡ್ಡಿಯಾಗಿದೆ. ಮಂಗಳೂರಿಗೆ ಬರುವ ವಿಮಾನಗಳನ್ನು ಡೈವರ್ಟ್ ಮಾಡಿ ಬೆಂಗಳೂರಿಗೆ ಕಳಿಸಲಾಯಿತು. ಅಲ್ಲದೆ ದೆಹಲಿಯಿಂದ ಮಂಗಳೂರಿಗೆ ಆಗಮಿಸಿದ್ದ ವಿಮಾನ ಬೆಂಗಳೂರಿಗೆ ಹಿಂತಿರುಗಿದೆ.

    3 ವಿಮಾನಗಳ ಲ್ಯಾಂಡಿಂಗ್ ಹಾಗೂ 5 ವಿಮಾನಗಳ ಟೇಕಾಫ್‍ಗೆ ಸಮಸ್ಯೆಯಾಯಿತು ಎಂದು ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.