Tag: Mangaluru Blast

  • ಮಂಗಳೂರು ಬ್ಲಾಸ್ಟ್‌ಗೂ ರಾಮೇಶ್ವರಂ ಕೆಫೆ ಸ್ಪೋಟಕ್ಕೂ ಲಿಂಕ್ ಕಾಣ್ತಿದೆ: ಡಿಕೆಶಿ

    ಮಂಗಳೂರು ಬ್ಲಾಸ್ಟ್‌ಗೂ ರಾಮೇಶ್ವರಂ ಕೆಫೆ ಸ್ಪೋಟಕ್ಕೂ ಲಿಂಕ್ ಕಾಣ್ತಿದೆ: ಡಿಕೆಶಿ

    ಬೆಂಗಳೂರು: ಮಂಗಳೂರು ಬಾಂಬ್ ಬ್ಲಾಸ್ಟ್ ಗೂ (Mangaluru Bomb Blast) ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೂ ಲಿಂಕ್ ಕಾಣುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮಂಗಳೂರು ಬ್ಲಾಸ್ಟ್ ಗೂ ಇದಕ್ಕೂ ಲಿಂಕ್ ಕಾಣುತ್ತಿದೆ. ಟೈಮರ್ ಎಲ್ಲಾ ಲಿಂಕ್ ಕಾಣ್ತಿದೆ. 8-10 ಅಡಿಯಲ್ಲಿ ಎಫೆಕ್ಟ್ ಆಗಿದೆ. ಸೌಂಡ್ ಜೋರಾಗಿ ಬಂದಿದೆ. ಬಸ್ಸಲ್ಲಿ ಬಂದಿದ್ದಾರೆ ಎಲ್ಲಾ ಗೊತ್ತಾಗಿದೆ ಎಂದರು.

    ನಾನು ಹೋಮ್ ಮಿನಿಸ್ಟರ್, ಸಿಎಂ ಎಲ್ಲರೂ ಸೀರಿಯಸ್ ಆಗಿ ಈ ಬಗ್ಗೆ ಚರ್ಚೆ ನಡೆಸಿದ್ದೇವೆ. 8 ಟೀಂ ಮಾಡಿದ್ದೀವಿ ಎಲ್ಲಾ ಆಯಾಮದಲ್ಲೂ ತನಿಖೆ ಮಾಡುತ್ತಿದ್ದೇವೆ. ಬಿಜೆಪಿಯವರು (BJP) ರಾಜಕಾರಣ ಮಾಡೋದಾದರೆ ಮಾಡಲಿ. ಅವರು ಬೆಂಗಳೂರು ಇಮೇಜ್ ಹಾಳು ಮಾಡೋಕೆ ಪ್ರಯತ್ನಿಸುತ್ತಿದ್ದಾರೆ. ಅವರು ರಾಜಕೀಯ ಮಾಡೋದು ಬೇಡ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಂಗಳೂರಿನ ಕುಕ್ಕರ್ ಬ್ಲಾಸ್ಟ್‌ಗು ಕೆಫೆಯಲ್ಲಿ ನಡೆದ ಸ್ಫೋಟಕ್ಕೂ ಸಾಮ್ಯತೆ ಇಲ್ಲ: ಸಿಎಂ

    ನಡೆದಿದ್ದೇನು..?: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಶುಕ್ರವಾರ ಮಧ್ಯಾಹ್ನ 1 ಗಂಟೆ 05 ನಿಮಿಷ ಸುಮಾರಿಗೆ ನಡೆದ ಘಟನೆಯಲ್ಲಿ ಕೆಲವರು ಗಾಯಗೊಂಡು ಆಸ್ಪತ್ರೆಯಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರೀ ಸ್ಫೋಟದ ಪರಿಣಾಮ ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿಕೊಂಡಿತ್ತು. ಘಟನೆ ನಡೆಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಪ್ರಾಥಮಿಕ ಹಂತದಲ್ಲಿ ಸಿಲಿಂಡರ್ ಸ್ಫೋಟದಿಂದ ಘಟನೆ ನಡೆದಿದೆ ಎನ್ನಲಾಗಿತ್ತು. ಆದರೆ ಇದೀಗ ಬಾಂಬ್ ಬ್ಲಾಸ್ಟ್ ಆಗಿರುವುದು ಬಯಲಾಗಿದೆ.

    ಆರೋಪಿ ಚಹರೆ ಪತ್ತೆ: ಬ್ಲಾಸ್ಟ್ ಮಾಡಿದ ಆರೋಪಿಯ ಎಕ್ಸ್ ಕ್ಲೂಸೀವ್ ವೀಡಿಯೋ ಹಾಗೂ ಫೋಟೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ತನ್ನ ಚಹರೆ ಎಲ್ಲೂ ಬೀಳದಿರಲಿ ಅಂತಾ ಶಂಕಿತ ಉಗ್ರ ಮುಖಕ್ಕೆ ಮಾಸ್ಕ್ ಕಣ್ಣಿಗೆ ಕೂಲಿಂಗ್ ಗ್ಲಾಸ್, ತಲೆ ಮೇಲೆ ವೈಟ್ ಹ್ಯಾಟ್ ಹಾಕಿಕೊಳ್ಳುವ ಮೂಲಕ ಮೊದಲೇ ಪ್ರೀ ಪ್ಲಾನ್ ಮಾಡಿಕೊಂಡು ಕೆಫೆಗೆ ಎಂಟ್ರಿ ಕೊಟ್ಟಿದ್ದಾನೆ. ಜೊತೆಗೆ ಬಲಭುಜದ ಹಿಂಬದಿಗೆ ಕಪ್ಪು ಬಣ್ಣದ ಬ್ಯಾಗ್ ಹಾಕಿಕೊಂಡು ಹೋಟೆಲ್ ಗೆ ಬಂದಿರುವ ಆರೋಪಿ ಹೋಟೆಲ್ ನಲ್ಲಿ ತಿಂಡಿ ತಿಂದು ಸಾಗುವ ದೃಶ್ಯಗಳು ಸಿಕ್ಕಿವೆ.

    ಟೋಕನ್ ತೆಗೆದುಕೊಂಡ ಶಂಕಿತ ರವೆ ಇಡ್ಲಿ ತಿಂದು ಹ್ಯಾಡ್ ವಾಶಿಂಗ್‍ಗೆ ಹೋಗಿದ್ದಾನೆ. ಹ್ಯಾಂಡ್ ವಾಶ್ ಮಾಡಿ ಬ್ಯಾಗ್ ಅಲ್ಲೇ ಇಟ್ಟು ಬೈಕ್‍ನಲ್ಲಿ ತೆರಳಿದ್ದಾನೆ. ಆತ ಹೋದ ಸುಮಾರು ಒಂದು ಗಂಟೆಯ ಬಳಿಕ ಈ ಬ್ಯಾಗ್ ಬ್ಲಾಸ್ಟ್ ಆಗಿದೆ. ಸದ್ಯ ಬೈಕ್ ಮಾಲೀಕ ಯಾರು..? ಬೈಕ್ ಎಲ್ಲಿನದ್ದು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಮಂಗಳೂರು ಕುಕ್ಕರ್‌ ಸ್ಫೋಟ ಕೇಸ್‌ – ಎರಡೂವರೆ ತಿಂಗಳ ಬಳಿಕ ಶಾರೀಕ್ ಡಿಸ್ಚಾರ್ಜ್‌

    ಮಂಗಳೂರು ಕುಕ್ಕರ್‌ ಸ್ಫೋಟ ಕೇಸ್‌ – ಎರಡೂವರೆ ತಿಂಗಳ ಬಳಿಕ ಶಾರೀಕ್ ಡಿಸ್ಚಾರ್ಜ್‌

    ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (Mangaluru Cooker Bomb Blast) ಪ್ರಕರಣದ ಪ್ರಮುಖ ಆರೋಪಿ ಉಗ್ರ ಶಾರೀಕ್ (Mohammed Shariq) ಎರಡೂವರೆ ತಿಂಗಳ ಸತತ ಚಿಕಿತ್ಸೆ ನಂತರ  ಸೋಮವಾರ ಬಿಡುಗಡೆಯಾಗಿದ್ದಾನೆ.

    ಗಂಭೀರವಾಗಿ ಗಾಯಗೊಂಡಿದ್ದ ಉಗ್ರ ಶಾರೀಕ್ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ. ಆದರೆ ಸ್ಫೋಟದ ವೇಳೆ ಸುಟ್ಟಗಾಯಗಳಿಂದ ಗಂಭೀರವಾಗಿ ಗಾಯಗೊಂಡಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಮಂಗಳೂರು, ಕೊಯಮತ್ತೂರಲ್ಲಿ ಸ್ಫೋಟ ಮಾಡಿದ್ದು ನಾವೇ- ಹೊಣೆ ಹೊತ್ತ ಐಎಸ್‍ಕೆಪಿ

    ಸತತ ಎರಡೂವರೆ ತಿಂಗಳು ಚಿಕಿತ್ಸೆ ಪಡೆದ ಶಾರೀಕ್, ಇಂದು ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖವಾಗಿ ಡಿಸಾರ್ಜ್‌ ಆಗಿದ್ದಾನೆ. ಆಸ್ಪತ್ರೆಯಿಂದ ನೇರವಾಗಿ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಎನ್‌ಐಎ ವಿಶೇಷ ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಹತ್ತು ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ನೀಡಿದ್ದಾರೆ.

    ಮಂಗಳವಾರದಿಂದ ಅಧಿಕೃತವಾಗಿ ಸ್ಫೋಟದ ಬಗ್ಗೆ ಎನ್‌ಐಎ ಅಧಿಕಾರಿಗಳು ವಿಚಾರಣೆ ಶುರು ಮಾಡಲಿದ್ದಾರೆ. ವಿಚಾರಣೆ ನಂತರ ಮಂಗಳೂರು ಸೇರಿದಂತೆ ವಿವಿಧ ಜಾಗಗಳಲ್ಲಿ ಸ್ಥಳ ಮಹಜರು ಮಾಡಿ ಮತ್ತಷ್ಟು ತನಿಖೆ ಚುರುಕುಗೊಳಿಸಲು ಸಿದ್ಧತೆ ನಡೆದಿದೆ.

  • ತೀರ್ಥಹಳ್ಳಿಯಲ್ಲಿ ಶಂಕಿತ ಉಗ್ರರ ಮನೆಗಳ ಶೋಧ – ಕಿಮ್ಮನೆ ಬಳಿಯೂ ಮಾಹಿತಿ ಸಂಗ್ರಹ

    ತೀರ್ಥಹಳ್ಳಿಯಲ್ಲಿ ಶಂಕಿತ ಉಗ್ರರ ಮನೆಗಳ ಶೋಧ – ಕಿಮ್ಮನೆ ಬಳಿಯೂ ಮಾಹಿತಿ ಸಂಗ್ರಹ

    ಶಿವಮೊಗ್ಗ: ಮಂಗಳೂರು ಸ್ಫೋಟ (Mangaluru Blast) ಪ್ರಕರಣ ಸಂಬಂಧ ರಾಜ್ಯದಲ್ಲಿ ಎನ್‍ಐಎ (NIA) ದಾಳಿ ಮುಂದುವರೆದಿದೆ. ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ (Thirthahalli) ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಎನ್‍ಐಎ ಅಧಿಕಾರಿಗಳು, ಮೂವರು ಶಂಕಿತ ಉಗ್ರರ ಮನೆ ಮತ್ತು ಅವರಿಗೆ ಸಂಬಂಧಿಸಿದ ಸ್ಥಳಗಳನ್ನು ಜಾಲಾಡಿದ್ದಾರೆ.

    ಮಾಜ್, ಮತಿನ್ ಮತ್ತು ಶಾರೀಕ್ ಮನೆ ಸೇರಿ ಅಕ್ಕಪಕ್ಕದ ಮನೆಗಳಿಗೂ ತೆರಳಿದ ಎನ್‍ಐಎ ಅಧಿಕಾರಿಗಳು, ಮೊದಲು ಮೊಬೈಲ್ ಸ್ವಿಚ್ ಆಫ್ ಮಾಡಿಸಿ, ಫೋಟೋ, ವಿಡಿಯೋ ಮಾಡುವುದನ್ನು ನಿರ್ಬಂಧಿಸಿ, ಶಂಕಿತ ಉಗ್ರರ ಹಣಕಾಸು ಮೂಲ, ಹಿನ್ನೆಲೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯ ಹಿಂದುತ್ವ, ಧರ್ಮ, ದೇವರುಗಳನ್ನ ನಂಬಬೇಡಿ – ಜನತೆಗೆ ಸಿದ್ದರಾಮಯ್ಯ ಮನವಿ

    ಇದೇ ವೇಳೆ, ಮಾಜಿ ಮಂತ್ರಿ ಕಿಮ್ಮನೆ ರತ್ನಾಕರ್ (Kimmane Ratnakar) ಕಚೇರಿ ಇರುವ ಕಟ್ಟಡದ ಮೇಲೆಯೂ ಎನ್‍ಐಎ ದಾಳಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಿಮ್ಮನೆ ರತ್ನಾಕರ್, ಕಚೇರಿ ಕಟ್ಟಡ ಬಾಡಿಗೆ ಪಡೆದಿರುವ ಬಗ್ಗೆ ಎನ್‍ಐಎ ಅಧಿಕಾರಿಗಳು ಮಾಹಿತಿ ಕೇಳಿದ್ದರು. ಈ ಕಟ್ಟಡ ಹಾಸಿಂ ಎನ್ನುವವರಿಗೆ ಸೇರಿದ್ದು ಈ ಬಗ್ಗೆ ವಿವರ ನೀಡಿದ್ದೇನೆ. ಆದರೆ ಬಿಜೆಪಿಯವರು ನನ್ನ ಮನೆ ಮೇಲೆ ಎನ್‍ಐಎ ದಾಳಿ ನಡೆದಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ ʼನಮ್ಮ ಬ್ರದರ್ಸ್ʼ ಎನ್ನಬೇಕಿತ್ತೇ – ಬಿಜೆಪಿ

    ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ ʼನಮ್ಮ ಬ್ರದರ್ಸ್ʼ ಎನ್ನಬೇಕಿತ್ತೇ – ಬಿಜೆಪಿ

    ಬೆಂಗಳೂರು: ಕುಕ್ಕರ್ ಸ್ಫೋಟದ ಭಯೋತ್ಪಾದಕ ಪ್ರಕರಣವನ್ನು ʼಭಯೋತ್ಪಾದಕ ಕೃತ್ಯʼ ಎಂದು ಡಿಜಿಪಿಯವರು ತನಿಖೆಯ ಆಧಾರದಲ್ಲಿ ಘೋಷಿಸಿದರೆ ಡಿಕೆ ಶಿವಕುಮಾರ್‌(DK Shivakumar) ಕೆಂಡಾಮಂಡಲವಾಗಿದ್ದಾರೆ. ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ ʼನಮ್ಮ ಬ್ರದರ್ಸ್ʼ ಎನ್ನಬೇಕಿತ್ತೇನು? ದೇಶದ ಭದ್ರತೆಯ ವಿಚಾರದಲ್ಲಿ ಕಾಂಗ್ರೆಸ್(Congress) ಉಗ್ರರ ಪರ ನಿಲ್ಲುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

    ತನಿಖೆ ನಡೆಸದೇ ಮಂಗಳೂರು ಕುಕ್ಕರ್‌ ಸ್ಫೋಟದ ಆರೋಪಿ ಶಾರೀಕ್‌ನನ್ನು ಉಗ್ರ ಎಂದು ಕರೆದಿದ್ದು ಹೇಗೆ ಎಂಬ ಡಿಕೆ ಶಿವಕುಮಾರ್‌ ಪ್ರಶ್ನೆಗೆ ಬಿಜೆಪಿ(BJP) ಸರಣಿ ಟ್ವೀಟ್‌ ಮಾಡುವ ಮೂಲಕ ಕಿಡಿಕಾರಿದೆ.

    ಟ್ವೀಟ್‌ನಲ್ಲಿ ಏನಿದೆ?
    ಸ್ಫೋಟದ ಬಳಿಕ ಎನ್‌ಐಎ ಪ್ರಕರಣವನ್ನು ತೀವ್ರಗತಿಯಲ್ಲಿ ಪರಿಗಣಿಸಿ ಡಿಕೆಶಿ ‘ಬ್ರದರ್’‌ನನ್ನು ಬಂಧಿಸಿದ ನಂತರ ಉಗ್ರಗಾಮಿ ಸಂಘಟನೆಗಳು ನೇರವಾಗಿ ಬೆಂಬಲ ಘೋಷಿಸಿದ್ದೂ ಅಲ್ಲದೇ ‘ನಮ್ಮ ಹುಡುಗ ಯಶಸ್ವಿಯಾಗಿದ್ದಾನೆ’ ಎಂದು ಹೇಳಿಕೆ‌ ನೀಡಿತ್ತು.

    ಉಗ್ರಗಾಮಿಗಳೇ‌ “ಉಗ್ರ ನಮ್ಮವನು” ಎಂದು ಅಬ್ಬರಿಸಿದರು ಡಿಕೆಶಿ ಒಪ್ಪಿಕೊಳ್ಳದಿರುವುದು ಯಾಕಾಗಿ? ಒಂದು ಸಮುದಾಯದಿಂದ ಸಿಗುವ ನಾಲ್ಕು ಮತಗಳಿಗಾಗಿ ಉಗ್ರನನ್ನೇ‌ ಉಗ್ರನಲ್ಲ ಎನ್ನುವ ಹಂತದಲ್ಲಿ ಕಾಂಗ್ರೆಸ್ ‌ಇದೆ ಎಂದರೆ,‌ ಇವರಿಗೆ ಅಧಿಕಾರ ಕೊಟ್ಟರೆ ಉಗ್ರರ ಟೆಕ್ ಪಾರ್ಕ್‌ನ್ನೇ ನಿರ್ಮಿಸಿದರೂ ಅಚ್ಚರಿಯಿಲ್ಲ. ಇದನ್ನೂ ಓದಿ: ಆರ್‌ಎಸ್‌ಎಸ್‌ನಲ್ಲಿ ಮಹಿಳೆಯರಿಗೆ ಅವಕಾಶವಿಲ್ಲ, ಸೀತಾ ಮಾತೆಯನ್ನು ಅವಮಾನಿಸುತ್ತಿದೆ: ರಾಹುಲ್ ಗಾಂಧಿ

    ಕಾಂಗ್ರೆಸ್ ಇಷ್ಟು ವರ್ಷ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಮಾಡಿದ್ದೆಲ್ಲವೂ ಇಂಥದ್ದೇ. ನಿಜವಾದ ಉಗ್ರರನ್ನು ಬಚ್ಚಿಟ್ಟು, ಹಿಂದೂಗಳ ಮೇಲೆಯೇ ಉಗ್ರರು ಎಂದು ಸುಳ್ಳು ಕೇಸ್ ಹಾಕುತ್ತಾ ಕುಳಿತಿದ್ದಕ್ಕೇ ಅಲ್ಲವೇ ಮುಂಬೈ ತಾಜ್ ಮೇಲೆ‌ ಉಗ್ರರ ದಾಳಿಯಾಗಿದ್ದು? ಕಾಶ್ಮೀರ ಕಣಿವೆಯಲ್ಲಿ ಉಗ್ರರ ಅಟ್ಟಹಾಸವಿದ್ದಿದ್ದು?

    ಮಂಗಳೂರು ಕುಕ್ಕರ್ ಸ್ಪೋಟವನ್ನು ಸಮರ್ಥಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷರು ತಮ್ಮದು ಭಯೋತ್ಪಾದನಾ ಸಮರ್ಥಕರ ಪಕ್ಷ ಎಂದು ಘೋಷಿಸಿಕೊಂಡಿದೆ. ಚುನಾವಣೆ ಸಮೀಪಿಸಿದಾಗ ಭಾವನಾತ್ಮಕ ಸಂಗತಿಗಳ ಹರಡುವಿಕೆ ಎನ್ನುವ ಡಿಕೆಶಿಯವರು, ದೇಶದ ಭದ್ರತೆಗೆ ಕಂಟಕ ತರುವ ಹೇಳಿಕೆ ನೀಡಿದ್ದಾರೆ.

    ಮಂಗಳೂರು ಕುಕ್ಕರ್ ಸ್ಫೋಟವನ್ನು ಇಡೀ ಸಮಾಜ ಖಂಡಿಸಿದೆ. ಮುಸಲ್ಮಾನ ಸಮಾಜವೂ ಅದನ್ನು ಖಂಡಿಸಿದೆ. ಆದರೆ ಕಾಂಗ್ರೆಸ್ ಅಧ್ಯಕ್ಷರು ಮಾತ್ರ ಅದನ್ನು ಸಮರ್ಥಿಸಿಕೊಳ್ಳುತ್ತಾರೆ. ಆ ಮೂಲಕ ತಾವು ಅಧಿಕಾರಕ್ಕೆ ಬಂದರೆ ಏನಾಗುತ್ತದೆ ಎಂಬುದರ ಮುನ್ಸೂಚನೆಯನ್ನು ನೀಡಿದ್ದಾರೆ.

    ಸರ್ಜಿಕಲ್ ಸ್ಟ್ರೈಕನ್ನು ಅಲ್ಲಗೆಳೆದರು, ಏರ್ ಸ್ಟ್ರೈಕನ್ನು ಅಲ್ಲಗೆಳೆದರು, ಪುಲ್ವಾಮಾ ದಾಳಿಯನ್ನು ಪಾಕಿಸ್ಥಾನದಲ್ಲ ಎಂದು ಸಮರ್ಥಿಸಿಕೊಂಡರು. ದೇಶದಲ್ಲಿ ನಡೆದ ಬಹುತೇಕ ಭಯೋತ್ಪಾದನಾ ಘಟನೆಗಳನ್ನೂ ಸಮರ್ಥಿಸಿಕೊಂಡರು. ಕಾಂಗ್ರೆಸ್ ಏನನ್ನು ಹೇಳಲು ಹೊರಟಿದೆ? ಭಯೋತ್ಪಾದಕರನ್ನು ಭಯೋತ್ಪಾದಕೆನ್ನಲು ಕಾಂಗ್ರೇಸಿಗೇಕೆ ಭಯ?

    ಕಾಂಗ್ರೆಸ್ ಆಡಳಿತಾವಧಿಯಲ್ಲಿ ಉಗ್ರ ಯಾಸಿನ್ ಮಲಿಕ್‌ಗೆ ಪ್ರಧಾನಿಗಳ ಕಚೇರಿಯವರೆಗೂ ಸಂಪರ್ಕ-ಸಂಬಂಧ-ಬಾಂಧವ್ಯವಿತ್ತು‌. ಕಾಂಗ್ರೆಸ್ ಸರ್ಕಾರವಿಲ್ಲದಿರುವ ಈಗ ಪೊಲೀಸರು ಉಗ್ರರು ಯಾರು ಎಂದು ಡಿಕೆ ಶಿವಕುಮಾರ್‌ರನ್ನು ಕೇಳಿ ನಿರ್ಧರಿಸಬೇಕೆಂದರೆ, ಅಧಿಕಾರವಿದ್ದಾಗ ಎಷ್ಟು ಉಗ್ರರನ್ನು ಧರ್ಮ ಪ್ರಚಾರಕರನ್ನಾಗಿಸಿರಬಹುದು?

    ಓಲೈಕೆ ರಾಜಕಾರಣದ ಕುಳಿಗೆ ಬಿದ್ದ ಕಾಂಗ್ರೆಸಿಗೆ ಸ್ವತಃ ತಾನೇ ಕುಳಿಗೆ ಬಿದ್ದಿದೆ ಕುಕ್ಕರ್ ಬಾಂಬ್ ಸ್ಪೋಟವನ್ನು ಸಮರ್ಥಿಸುವ ಮೂಲಕ ಕರ್ನಾಟಕವನ್ನು ಭಯೋತ್ಪಾದಕರ ಸ್ವರ್ಗ ಮಾಡಲುಹೊರಟಿದೆ. ಮುಂದಿನ ಚುನಾವಣೆಯಲ್ಲಿ “ಸ್ಪೋಟಕ್ಕೆ ಬೆಂಬಲ”, “ಸ್ಪೋಟಕ್ಕೆ ಸಮರ್ಥನೆ” ಕಾಂಗ್ರೆಸ್ ಪ್ರಣಾಳಿಕೆಯಲ್ಲಿದ್ದರೂ ಆಶ್ಚರ್ಯವಿಲ್ಲ!

    Live Tv
    [brid partner=56869869 player=32851 video=960834 autoplay=true]

  • ಉಗ್ರ ಶಾರೀಕ್‍ಗೆ ಹರಿದು ಬರುತ್ತಿತ್ತು ಡಾಲರ್ ಮನಿ – ಕರೆನ್ಸಿ ವರ್ಗಾಯಿಸಿದ 40ಕ್ಕೂ ಅಧಿಕ ಜನರ ವಿಚಾರಣೆ

    ಉಗ್ರ ಶಾರೀಕ್‍ಗೆ ಹರಿದು ಬರುತ್ತಿತ್ತು ಡಾಲರ್ ಮನಿ – ಕರೆನ್ಸಿ ವರ್ಗಾಯಿಸಿದ 40ಕ್ಕೂ ಅಧಿಕ ಜನರ ವಿಚಾರಣೆ

    ಮಂಗಳೂರು: ನಗರದಲ್ಲಿ ಕುಕ್ಕರ್ ಬಾಂಬ್ ಸ್ಫೋಟಿಸಿದ ಉಗ್ರ ಶಾರೀಕ್‍ನ (Mohammed Shariq)  ತನಿಖೆ ಮುಂದುವರೆದಿದೆ. ತನಿಖೆ ವೇಳೆ ಎನ್‍ಐಎ (NIA) ಅಧಿಕಾರಿಗಳಿಗೆ ಸ್ಫೋಟಕ ಮಾಹಿತಿಗಳು ಸಿಕ್ತಾ ಇದೆ. ಆತನ ಹಣದ (Money) ಮೂಲ ಜಾಲಾಡಿದ ಅಧಿಕಾರಿಗಳಿಗೆ ಶಾಕ್ ಆಗಿದ್ದು ಹೆಚ್ಚಿನ ಹಣ ಡಾಲರ್ (Dollar Money) ಮೂಲಕ ಅಕೌಂಟ್‍ಗೆ ಬರುತ್ತಿದ್ದ ದಾಖಲೆ ಸಿಕ್ಕಿದೆ. ಮೈಸೂರಿನ (Mysuru) ನೂರಾರು ಮಂದಿಯ ಅಕೌಂಟ್‍ಗೆ ಡಾಲರ್ ಭಾರತೀಯ ಕರೆನ್ಸಿಯಾಗಿ ವರ್ಗಾವಣೆ ಆಗಿದ್ದು 40ಕ್ಕೂ ಅಧಿಕ ಜನರನ್ನು ವಿಚಾರಣೆ ನಡೆಸಲಾಗಿದೆ.

    ಉಗ್ರ ಮಹಮ್ಮದ್ ಶಾರೀಕ್‍ನ ಒಂದೊಂದೇ ಉಗ್ರ ಕೃತ್ಯಗಳು ಬೆಳಕಿಗೆ ಬರುತ್ತಿದೆ. ಆತನ ಉಗ್ರ ಕೃತ್ಯಕ್ಕೆ ವಿದೇಶದಿಂದ ಸಹಕಾರ ಮಾಡುತ್ತಿದ್ದವರು ಡಾಲರ್ ಮೂಲಕ ಆರ್ಥಿಕ ಸಹಾಯ ನೀಡುತ್ತಿರುವ ಬಗ್ಗೆ ಎನ್‍ಐಎ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ. ಮಂಗಳೂರಿನ ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್‍ನನ್ನು ಎನ್‍ಐಎ ಅಧಿಕಾರಿಗಳು ನಿರಂತರ ವಿಚಾರಣೆ ನಡೆಸುತ್ತಿದ್ದು, ಈ ವೇಳೆ ಆತನ ಹಣದ ಮೂಲವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಆತನ ಡಾರ್ಕ್ ವೆಬ್‍ನಲ್ಲಿರುವ (Dark Web) ಅಕೌಂಟ್‍ಗೆ ಡಾಲರ್‌ ರೂಪದಲ್ಲಿ ಸಾಕಷ್ಟು ಹಣ ಬಂದಿರುವ ದಾಖಲೆ ಲಭ್ಯವಾಗಿದ್ದು ಅಧಿಕಾರಿಗಳು ಅದರ ಜಾಡು ಹಿಡಿದು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಕುಕ್ಕರ್ ಬ್ಲಾಸ್ಟ್ ಕೇಸ್‍ನಲ್ಲಿ NIAಗೆ ಸ್ಫೋಟಕ ಮಾಹಿತಿ- ಉಗ್ರನ ಅಕೌಂಟ್‍ಗೆ ಬರ್ತಿತ್ತು ಡಾಲರ್

    ಡಾರ್ಕ್ ವೆಬ್‍ನಲ್ಲಿರುವ ಶಾರೀಕ್ ಅಕೌಂಟ್‍ಗೆ ಲಕ್ಷಾನುಗಟ್ಟಲೇ ಮೌಲ್ಯದ ಡಾಲರ್ ಡೆಪೋಸಿಟ್ ಆಗಿದ್ದು, ಬಳಿಕ ಅದನ್ನು ಆತ ಭಾರತೀಯ ಕರೆನ್ಸಿಯಾಗಿ ವರ್ಗಾಯಿಸುತ್ತಿದ್ದ. ಭಾರತೀಯ ಕರೆನ್ಸಿಯನ್ನು ತನ್ನ ಪರಿಚಯಸ್ಥರ ಅಕೌಂಟ್‍ಗೆ ಹಾಕಿಸಿ ಅದನ್ನು ಉಪಯೋಗಿಸುತ್ತಿದ್ದ. ಮೈಸೂರಿನಲ್ಲಿ ತಾನೊಬ್ಬ ಹಿಂದೂ ಎಂದು ಹೇಳಿಕೊಂಡು ಸಾಕಷ್ಟು ಜನರನ್ನು ಪರಿಚಯ ಮಾಡಿಕೊಂಡಿದ್ದು, ಅವರ ಅಕೌಂಟ್‍ಗೆ ಹಣ ವರ್ಗಾವಣೆ ಮಾಡುತ್ತಿದ್ದ. ಸುಮಾರು 100 ಅಧಿಕ ಮೈಸೂರಿಗರ ಅಕೌಂಟ್‍ಗೆ ಹಣ ವರ್ಗಾವಣೆಯಾಗಿದ್ದು, ಎನ್‍ಐಎ ಅಧಿಕಾರಿಗಳು 40 ಹೆಚ್ಚು ಜನರನ್ನು ವಿಚಾರಣೆ ನಡೆಸಿದ್ದಾರೆ. ಈತನ ಕೃತ್ಯ ತಿಳಿಯದೇ ಇದ್ದ ಸಾಕಷ್ಟು ಜನ ಈತನ ಸ್ನೇಹವನ್ನು ನಂಬಿ ಅಕೌಂಟ್‍ಗೆ ಹಣ ಹಾಕಿ ಶಾರೀಕ್ ಹೇಳಿದ ಬೇರೆ, ಬೇರೆ ಅಕೌಂಟ್‍ಗೆ ವರ್ಗಾಯಿಸುತ್ತಿದ್ದರು. ಇದನ್ನೂ ಓದಿ: ಕೊಡಗಿನ ಹೋಂಸ್ಟೇಯಲ್ಲಿ ಇಬ್ಬರು ಮಹಿಳೆಯರೊಂದಿಗೆ ತಂಗಿದ್ದ ಶಾರೀಕ್!

    ಮೈಸೂರು ಮಾತ್ರವಲ್ಲದೆ ನೆರೆಯ ತಮಿಳುನಾಡು, ಕೇರಳ, ಮಧ್ಯ ಪ್ರದೇಶ, ಜಾರ್ಖಂಡ್ ಸೇರಿದಂತೆ ವಿವಿಧ ರಾಜ್ಯಗಳ ಅಕೌಂಟ್‍ಗೂ ಈತನ ಹಣ ವರ್ಗಾವಣೆ ಆಗಿದೆ. ಹೀಗಾಗಿ ಎನ್‍ಐಎ ಅಧಿಕಾರಿಗಳು ಈ ಎಲ್ಲಾ ರಾಜ್ಯದಲ್ಲೂ ತನಿಖೆ ಆರಂಭಿಸಿದ್ದು, ಉಗ್ರನ ಜಾಲ ಇಡೀ ದೇಶದಲ್ಲೇ ಪಸರಿಸಿದ ಆತಂಕ ಎದುರಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಅಶ್ಲೀಲ ವೀಡಿಯೋ ಕಳುಹಿಸಿ ಮುಸ್ಲಿಮ್‌ ಯುವಕರ ತಲೆಕೆಡಿಸಿದ್ದ ಶಾರೀಕ್‌

    ಅಶ್ಲೀಲ ವೀಡಿಯೋ ಕಳುಹಿಸಿ ಮುಸ್ಲಿಮ್‌ ಯುವಕರ ತಲೆಕೆಡಿಸಿದ್ದ ಶಾರೀಕ್‌

    – 10ಕ್ಕೂ ಹೆಚ್ಚು ಫೋನ್‌ ಬಳಸಿ, ಮಾರಾಟ
    – ಮೊಬೈಲ್‌ನಲ್ಲಿ 500ಕ್ಕೂ ಹೆಚ್ಚು ಸೆಕ್ಸ್‌ ವೀಡಿಯೋ

    ಮಂಗಳೂರು: ಉಗ್ರ ಶಾರೀಕ್‌ನ(Shariq) ಮುಖವಾಡಗಳು ಪೊಲೀಸ್ ತನಿಖೆಯಿಂದ ಕಳಚಿ ಬೀಳುತ್ತಿದೆ. ಇದೀಗ ಆತನ ಟೆರರ್ ಚಟುವಟಿಕೆಗಳಿಗೆ(Terror Activity) ಮುಸ್ಲಿಂ ಯುವಕರನ್ನು ಸೆಳೆಯಲು ಸೆಕ್ಸ್ ವೀಡಿಯೋವನ್ನು ಕಳುಹಿಸುತ್ತಿದ್ದ ವಿಚಾರ ತನಿಖೆಯಿಂದ ಬೆಳಕಿಗೆ ಬಂದಿದೆ.

    ಸೆಕ್ಸ್ ವಿಡಿಯೋಗಳಿಂದಲೇ ಕರಾವಳಿಯ 40 ಕ್ಕೂ ಹೆಚ್ಚು ಮುಸ್ಲಿಂ(Muslim) ಯುವಕರನ್ನು ಉಗ್ರ ಚಟುವಟಿಕೆಗೆ ಸೇರಿಸಿದ್ದಾನೆ ಎಂಬ ಆಘಾತಕಾರಿ ಮಾಹಿತಿ ಪೊಲೀಸ್ ತನಿಖೆಯಿಂದ ಹೊರ ಬಿದ್ದಿದೆ. ಈತನ ಮೊಬೈಲ್ ನಲ್ಲಿ ಬರೋಬ್ಬರಿ 500 ಕ್ಕೂ ಹೆಚ್ಚು ಸೆಕ್ಸ್ ವೀಡಿಯೋಗಳು ಪತ್ತೆಯಾಗಿದ್ದು ಇದನ್ನೇ ಅಸ್ತ್ರವನ್ನಾಗಿಸಿ ನೂರಾರು ಮುಸ್ಲಿಂ ಯುವಕರ ತಲೆ ಕೆಡಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಮಂಗ್ಳೂರಲ್ಲಿ ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರ ಆರೋಪ – ಪ್ರಸಿದ್ಧ ವೈದ್ಯೆ, ಯುವಕನ ವಿರುದ್ಧ ದೂರು ದಾಖಲು

    ಶಾರೀಕ್ ಹತ್ತಕ್ಕೂ ಹೆಚ್ಚು ಪೋನ್‌ಗಳನ್ನು ಹೊಂದಿದ್ದು, ಅದನ್ನು ಬಳಕೆ ಮಾಡಿದ ನಂತರ ಮೊಬೈಲನ್ನು ಮಾರಾಟ ಮಾಡುತ್ತಿದ್ದ. ಹೀಗಾಗಿ ಯಾವುದೂ ಬೆಳಕಿಗೆ ಬರುತ್ತಿರಲಿಲ್ಲ. ಜೊತೆಗೆ ಮೊಬೈಲ್ ಅಂಗಡಿಯಲ್ಲೇ ಕೆಲಸ ಮಾಡುತ್ತಿದ್ದಾಗ ಸಾಕಷ್ಟು ಮೊಬೈಲ್ ಸಂಖ್ಯೆಗಳು ಆತನಿಗೆ ಸಿಗುತ್ತಿತ್ತು. ಹೀಗೆ ಬೇರೆ ಬೇರೆ ಕಡೆಗಳಲ್ಲಿ ಸಿಕ್ಕ ನಂಬರ್ ನಲ್ಲಿ ಮುಸ್ಲಿಂ ಯುವಕರ ನಂಬರ್‌ಗಳನ್ನು ಖಚಿತಪಡಿಸಿ ಬಳಿಕ ಹಾಯ್ ಬಾಯ್ ಸಂದೇಶ ಕಳಿಸುತ್ತಿದ್ದ ಎಂದು ಮೂಲಗಳು ಪಬ್ಲಿಕ್‌ ಟಿವಿಗೆ ತಿಳಿಸಿವೆ.  ಇದನ್ನೂ ಓದಿ: ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ- ಯಾವ ದಿನ, ಯಾವ ಪರೀಕ್ಷೆ?

    ಉತ್ತಮ ಪ್ರತಿಕ್ರಿಯೆ ಬಂದ ಯುವಕರಿಗೆ ಸೆಕ್ಸ್ ವೀಡಿಯೋಗಳನ್ನೂ ಕಳುಹಿಸುತ್ತಿದ್ದ. ಈ ರೀತಿ ಸಲುಗೆ ಬೆಳೆದ ನಂತರ ಅವರನ್ನು ತನ್ನ ಉಗ್ರ ಚಟುವಟಿಕೆಗಳಿಗೆ ತಲೆ ಕೆಡಿಸಿ ಭಯೋತ್ಪಾದನೆಯ ವೀಡಿಯೋಗಳನ್ನು ಕಳುಹಿಸುತ್ತಿದ್ದ. ಈತನ ಮಾತಿಗೆ ಮರುಳಾದ ಯುವಕರನ್ನು ಖುದ್ದು ಭೇಟಿಯಾಗಿ ಬಳಿಕ ಅವರಿಗೆ ತರಬೇತಿಯನ್ನು ನೀಡಿರುವುದು ಬೆಳಕಿಗೆ ಬಂದಿದೆ. ಕರಾವಳಿಯಲ್ಲೇ ಈತನಿಂದ 40 ಕ್ಕೂ ಹೆಚ್ಚು ಮುಸ್ಲಿಂ ಯುವಕರು ಐಸಿಸ್ ಮಾದರಿಯ ತರಬೇತಿ ಪಡೆದಿದ್ದಾರೆ ಅನ್ನೋದು ತನಿಖೆ ವೇಳೆ ಬಹಿರಂಗಗೊಂಡಿದೆ.

    ಉಗ್ರ ಚಟುವಟಿಕೆಗಳಿಗೆ ಮರುಳಾದ ಯುವಕರಿಗೆ ಅರಣ್ಯ ಪ್ರದೇಶ, ನದಿ ತೀರದ ನಿರ್ಜನ ಪ್ರದೇಶಗಳಲ್ಲಿ ಟ್ರಯಲ್ ಬ್ಲಾಸ್ಟ್, ಬಾಂಬ್ ತಯಾರಿಕೆ, ಬಾಂಬ್ ಇಡುವ ಸ್ಥಳದ ಆಯ್ಕೆ, ಕೃತ್ಯ ನಡೆಸಿ ಪರಾರಿಯಾಗುವ ಪ್ಲಾನ್ ಸೇರಿದಂತೆ ಎಲ್ಲವನ್ನೂ ಐಸಿಸ್ ಉಗ್ರರಂತೆಯೇ ತರಬೇತಿ ನೀಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

    ಐಆರ್‌ಸಿ ಮೂಲ ಪತ್ತೆ: ಇಸ್ಲಾಮಿಕ್ ರೆಸಿಸ್ಟನ್ಸ್ ಕೌನ್ಸಿಲ್ ಮೂಲವನ್ನು ಎನ್‍ಐಎ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಸೌದಿ ಅರೇಬಿಯಾದಿಂದಲೇ ಡಾರ್ಕ್ ವೆಬ್ ಬಳಸಿ ಐಆರ್‌ಸಿ ಪತ್ರ ಅಪ್‍ಲೋಡ್ ಆಗಿದ್ದು, ಎಲ್ಲದಕ್ಕೂ ಅರಾಫತ್ ಆಲಿಯೇ ಮೂಲ ಕಾರಣ ಎನ್ನಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕದ್ರಿ ದೇವಸ್ಥಾನ ಮಾತ್ರವಲ್ಲ 6 ಸ್ಥಳಗಳು ಟಾರ್ಗೆಟ್‌ – ಮೊಬೈಲ್‌ನಲ್ಲಿ 6 ಜಾಗ ಸರ್ಚ್‌ ಮಾಡಿದ್ದ ಬಾಂಬರ್‌

    ಕದ್ರಿ ದೇವಸ್ಥಾನ ಮಾತ್ರವಲ್ಲ 6 ಸ್ಥಳಗಳು ಟಾರ್ಗೆಟ್‌ – ಮೊಬೈಲ್‌ನಲ್ಲಿ 6 ಜಾಗ ಸರ್ಚ್‌ ಮಾಡಿದ್ದ ಬಾಂಬರ್‌

    ಮಂಗಳೂರು: ಕುಕ್ಕರ್‌ ಬಾಂಬರ್‌ ಶಾರೀಕ್‌ನ(Shariq) ಗುರಿ ಕದ್ರಿ ದೇವಸ್ಥಾನ(Kadri Temple) ಆಗಿತ್ತು ಎಂದು ಉಗ್ರ ಸಂಘಟನೆ ಹೇಳಿದ್ದರೂ ಆತ ಮೊಬೈಲ್‌ನಲ್ಲಿ ಮಂಗಳೂರಿನ(Mangaluru) ಹಲವು ಪ್ರದೇಶಗಳನ್ನು ಸರ್ಚ್‌ ಮಾಡಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

    ಹೌದು. ಶಾರೀಕ್‌ ಮೊಬೈಲ್‌ನಲ್ಲಿ ಯಾವ ಸ್ಥಳಗಳನ್ನು ಸರ್ಚ್‌ ಮಾಡಿದ್ದ ಎನ್ನುವುದು ಗೊತ್ತಾಗಿದೆ. ಸರ್ಕಾರಕ್ಕೆ ನೀಡಿದ ಪ್ರಾಥಮಿಕ ವರದಿಯಲ್ಲಿ ತನಿಖಾ ತಂಡ ಮೂರು ದೇವಸ್ಥಾನ ಮತ್ತು ಎರಡು ಸಾರ್ವಜನಿಕ ಸ್ಥಳದಲ್ಲಿ ಬಾಂಬ್ ಇಡಲು ಪ್ಲಾನ್‌ ಮಾಡಿದ್ದ ಎಂಬುದನ್ನು ಉಲ್ಲೇಖಿಸಿದೆ.

    ಎರಡು ಶಿವ ದೇವಸ್ಥಾನ, ಒಂದು ದೇವಿ ದೇವಸ್ಥಾನ, ಎರಡು ಸಾರ್ವಜನಿಕ ಸ್ಥಳ, ಒಂದು ಕಾರ್ಯಕ್ರಮ ಆತನ ಟಾರ್ಗೆಟ್‌ ಆಗಿತ್ತು ಎಂದು ಪೊಲೀಸ್ ಉನ್ನತ ಮೂಲಗಳು ಪಬ್ಲಿಕ್‌ ಟಿವಿಗೆ ಮಾಹಿತಿ ನೀಡಿವೆ.

    ಟಾರ್ಗೆಟ್‌ ಆಗಿದ್ದ ಸ್ಥಳಗಳು ಯಾವುದು?
    ಕದ್ರಿ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನ ಮತ್ತು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ(Kudroli Gokarnanatheshwara Temple) ಲಕ್ಷದೀಪೋತ್ಸವ ನಡೆಯಿತ್ತಿದೆ. ಕಾರ್ತಿಕ ಮಾಸದಲ್ಲಿ ನಡೆಯುವ ದೀಪೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿರುತ್ತಾರೆ. ಈ ಸಂದರ್ಭದಲ್ಲೇ ಸ್ಪೋಟ ಮಾಡುವ ಬಗ್ಗೆ ಸಂಚು ರೂಪಿಸಿದ್ದನೇ ಎಂಬ ಪ್ರಶ್ನೆ ಎದ್ದಿದೆ.

    ತನ್ನ ವಾಟ್ಸಪ್‌ ಡಿಪಿಯಲ್ಲಿ ಕೊಯಮತ್ತೂರಿನ ಆದಿಯೋಗಿ ಶಿವನ ಪ್ರತಿಮೆಯ(Adiyogi Shiva Statue) ಫೋಟೋವನ್ನು ಹಾಕಿದ್ದ. ಶಿವನ ಡಿಪಿಯ ಅಸಲಿಯತ್ತನ್ನು ಡೀಕೋಡ್ ಮಾಡುವಾಗಿ ಪೊಲೀಸರಿಗೆ ಅನುಮಾನ  ಬಂದಿದ್ದು ಶಿವ ದೇವಾಲಯಲ್ಲಿ ಕೃತ್ಯ ನಡೆಸಲು ಪ್ಲಾನ್‌ ಮಾಡಿದ್ದನೇ ಎಂಬ ಶಂಕೆ ವ್ಯಕ್ತವಾಗಿದೆ.

    ಮಂಗಳದೇವಿ ದೇವಸ್ಥಾನಕ್ಕೂ(Mangaladevi Temple) ಸ್ಕೆಚ್ ಹಾಕಿರೋ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಈ ನಿಟ್ಟಿನಲ್ಲೂ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಮಂಗಳೂರಿನ ಪಡೀಲು ಬಳಿ ಇರುವ ರೈಲ್ವೇ ನಿಲ್ದಾಣ(Railway Station) ಮತ್ತು ಬಿಜೈನಲ್ಲಿರುವ ಕೆಎಸ್‌ಆರ್‌ಟಿಸಿ(KSRTC) ಬಸ್‌ ನಿಲ್ದಾಣವನ್ನು ಆತ ಸರ್ಚ್‌ ಮಾಡಿದ್ದಾನೆ. ಸಾಕಷ್ಟು ಜನರು ಇಲ್ಲಿದ ಪ್ರಯಾಣ ನಡೆಸುವ ಹಿನ್ನೆಲೆಯಲ್ಲಿ ಇಲ್ಲೂ ಕೃತ್ಯ ನಡೆಸಲು ಪ್ರಯತ್ನಿಸಿದ್ದನೇ ಎಂಬ ಅನುಮಾನ ಎದ್ದಿದೆ.

    ಆರ್‌ಎಸ್ಎಸ್(RSS) ಪ್ರಮುಖ ಕಚೇರಿ ʼಸಂಘನಿಕೇತನʼ ಇರುವ ಮಣ್ಣಗುಡ್ಡವನ್ನು ಶಾರೀಕ್‌ ಸರ್ಚ್‌ ಮಾಡಿದ್ದಾನೆ. ಸ್ಫೋಟಗೊಂಡ ದಿನವಾದ ನ.19 ರಂದು ಸಂಘನಿಕೇತನದಲ್ಲಿ(Sanghaniketan) ಬೃಹತ್ ವಿದ್ಯಾರ್ಥಿ ಸಮಾವೇಶ ನಡೆಯುತ್ತಿತ್ತು. ಸಾವಿರಾರು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

     

    ಕೇಶವ ಸ್ಮೃತಿ ಸಂವರ್ಧನ ಸಮಿತಿಯು ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಆತ್ಮವಿಶ್ವಾಸ ವೃದ್ಧಿ ಹಾಗೂ ವಿದ್ಯಾರ್ಥಿ ಸಮುದಾಯದಲ್ಲಿ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಕುರಿತ ಅರಿವನ್ನು ವಿಸ್ತರಿಸುವ ಉದ್ದೇಶದಿಂದ ನ.19 ಮತ್ತು 20ರಂದು ಸಂಘನಿಕೇತನದಲ್ಲಿ ಬೃಹತ್ ವಿದ್ಯಾರ್ಥಿ ಸಮಾವೇಶ ಆಯೋಜಿಸಿತ್ತು. ಶಾರೀಕ್‌ ಮೊಬೈಲ್‌ನಲ್ಲಿ ಮಣ್ಣಗುಡ್ಡವನ್ನು ಸರ್ಚ್‌ ಮಾಡಿದ ಹಿನ್ನೆಲೆಯಲ್ಲಿ ಇಲ್ಲೂ ಕೃತ್ಯ ನಡೆಸಲು ಮುಂದಾಗಿದ್ನಾ ಎಂಬ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್‌ – ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ

    ಶಿವ ದೇವಸ್ಥಾನದಲ್ಲಿ ದೀಪೋತ್ಸವ:
    ಹಿಂದೂ ಪಂಚಾಂಗದಲ್ಲಿ ಚಳಿಗಾಲದಲ್ಲಿ ಆರಂಭವಾಗುವ ಕಾರ್ತಿಕ ಮಾಸ ಅತ್ಯಂತ ಪವಿತ್ರ ಮತ್ತು ಶ್ರೇಷ್ಠ ಮಾಸ ಎಂದು ಕರೆಯಲಾಗುತ್ತದೆ. ಈ ಸಂದರ್ಭದಲ್ಲಿ ದೀಪಾರಾಧನೆ ಮಾಡಿದರೆ ಐಶ್ವರ್ಯ, ಸಂಪತ್ತು, ಆರೋಗ್ಯ ಭಾಗ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಕಾರ್ತಿಕ ನಕ್ಷತ್ರ ನವೆಂಬರ್‌/ಡಿಸೆಂಬರ್‌ ತಿಂಗಳಿನಲ್ಲಿ ಚಂದ್ರನಿಗೆ ಅತ್ಯಂತ ಹತ್ತಿರದಲ್ಲಿ ಇರುತ್ತದೆ. ಈ ಕಾರಣಕ್ಕೆ ಹಿಂದೂ ಪಂಚಾಂಗದ ಎಂಟನೇ ತಿಂಗಳಿಗೆ ಕಾರ್ತಿಕ ಮಾಸ ಎಂದು ಕರೆಯಲಾಗುತ್ತದೆ. ಪ್ರತಿ ಮಾಸಕ್ಕೆ ಒಬೊಬ್ಬ ದೇವರು ಇರುವಂತೆ ಕಾರ್ತಿಕ ಮಾಸದ ಅಧಿಪತಿ ಶಿವ. ಪರಿಣಾಮವಾಗಿ ಹುಣ್ಣಿಮೆಯ ಚಂದ್ರನು ಪ್ರಕಾಶಮಾನವಾಗಿ ಕಾಣುತ್ತಾನೆ. ಈ ಕಾರಣಕ್ಕೆ ಶಿವ ದೇವಾಲಯಗಳಲ್ಲಿ ಕಾರ್ತಿಕ ದೀಪೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತದೆ. ಹೆಚ್ಚಿನ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಾರೆ.

    Live Tv
    [brid partner=56869869 player=32851 video=960834 autoplay=true]

  • ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್‌ – ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ

    ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್‌ – ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ

    ಬೆಂಗಳೂರು:  ಮಂಗಳೂರು ಬಾಂಬ್‌ ಸ್ಫೋಟ(Mangaluru Blast Case) ಉಗ್ರ ಕೃತ್ಯ ಎಂದು ದೃಢಪಟ್ಟರೂ ಶಾರೀಕ್‌(Shariq) ಹಿಂದೆ ಯಾರಿದ್ದಾರೆ ಎನ್ನುವುದು ತಿಳಿದು ಬಂದಿರಲಿಲ್ಲ. ಆದರೆ ಈಗ ʼಇಸ್ಲಾಮಿಕ್‌ ರೆಸಿಸ್ಟೆನ್ಸ್‌ ಕೌನ್ಸಿಲ್‌ʼ ಹೆಸರಿನ ಸಂಘಟನೆಯೊಂದು ಈ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿದೆ.

    ಸಾಮಾಜಿಕ ಜಾಲತಾಣದಲ್ಲಿ Islamic Resistance Council ಸಂಘಟನೆ ಅರೆಬಿಕ್‌ ಭಾಷೆಯಲ್ಲಿ ಪೋಸ್ಟ್‌ ಹಂಚಿಕೊಂಡಿದೆ. ನಮ್ಮ ದಾಳಿ ಕದ್ರಿ ದೇವಸ್ಥಾನ(Kadri Temple) ಆಗಿತ್ತು. ಆದರೆ ಉದ್ದೇಶಿತ ಗುರಿಯನ್ನು ತಲುಪುವ ಮೊದಲೇ ಬಾಂಬ್‌ ಸ್ಫೋಟಗೊಂಡಿದೆ ಸಂಘಟನೆ ಹೇಳಿಕೊಂಡಿದೆ.

    ಶಾರೀಕ್‌ ಪಂಪ್‌ವೆಲ್‌ ಬಳಿ ಬಾಂಬ್‌ ಸ್ಫೋಟ ನಡೆಸಲು ಪ್ಲ್ಯಾನ್‌ ನಡೆಸಿದ್ದ ಎಂಬ ಮಾಹಿತಿ ಆರಂಭದಲ್ಲಿ ಸಿಕ್ಕಿತ್ತು. ಆದರೆ ಈಗ ಕದ್ರಿ ದೇವಸ್ಥಾನ ಉಗ್ರರ ಟಾರ್ಗೆಟ್‌ ಆಗಿದ್ದರಿಂದ ಈ ಪ್ರಕರಣ ಈಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಇದನ್ನೂ ಓದಿ: ಬುದ್ಧಿವಾದ ಹೇಳಿದ್ದಕ್ಕೆ ಶಾಲೆ ಬಿಟ್ಟ ಶಾರೀಕ್- ಕುಕ್ಕರ್ ಬಾಂಬರ್ ಹಿನ್ನೆಲೆಯೇ ರೋಚಕ

    ನ.23ರಂದು ಪ್ರಕಟಿಸಲಾದ ಅರೆಬಿಕ್‌ ಭಾಷೆಯಲ್ಲಿರುವ “Majlis Almuqawamat Al’islamia” ಪೋಸ್ಟ್‌ ಜೊತೆ ಬಾಂಬ್‌ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್‌ ಎರಡು ಹಳೆಯ ಫೋಟೋಗಳನ್ನು ಅಪ್ಲೋಡ್‌ ಮಾಡಲಾಗಿದೆ.

    ಅಷ್ಟೇ ಅಲ್ಲದೇ ಎಡಿಜಿಪಿ ಅಲೋಕ್‌ ಕುಮಾರ್‌ ಅವರಿಗೆ ಬೆದರಿಕೆ ಹಾಕಲಾಗಿದೆ. ನಿಮ್ಮ ಸಂತೋಷವು ಅಲ್ಪಕಾಲಿಕವಾಗಿರುತ್ತದೆ ಮತ್ತು ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಅನುಭವಿಸುತ್ತೀರಿ ಎಂದು ಹೇಳಿದೆ.

    ರಾಜ್ಯದಲ್ಲಿ ಗುಂಪು ಹತ್ಯೆ, ದಬ್ಬಾಳಿಕೆಯ ಕಾನೂನುಗಳು ಮತ್ತು ಶಾಸನಗಳು ಮತ್ತು ಧರ್ಮದಲ್ಲಿ ಹಸ್ತಕ್ಷೇಪದ ನಡೆಯುವ ಮೂಲಕ ನಮ್ಮ ಮೇಲೆ ಯುದ್ಧ ಸಾರಲಾಗಿದೆ. ಈ ಯುದ್ಧಕ್ಕೆ ಪ್ರತಿಯಾಗಿ ದಾಳಿ ನಡೆಸಲಾಗುತ್ತಿದೆ ಎಂದು ಸಂಘಟನೆ ಹೇಳಿದೆ.

    ಈ ಸಂಘಟನೆ ಇದೆಯೋ ಇಲ್ಲವೋ ಎನ್ನುವುದು ತಿಳಿದು ಬಂದಿಲ್ಲ. ಕರ್ನಾಟಕ ಪೊಲೀಸ್‌ ಈ ಸಂಘಟನೆ ಅಸ್ತಿತ್ವದಲ್ಲಿದೆಯೇ ಇದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಕೇಂದ್ರ ಗೃಹ ಇಲಾಖೆಯ ಸಹಾಯವನ್ನು ಕೇಳಿದೆ.

    ಕದ್ರಿಯಲ್ಲಿರುವ ಮಂಜುನಾಥ ದೇವಸ್ಥಾನ 10ನೇ ಶತಮಾನದಲ್ಲಿ ನಿರ್ಮಾಣವಾಗಿದ್ದು ಮಂಗಳೂರಿನ ಪ್ರಸಿದ್ಧ ದೇವಸ್ಥಾನವಾಗಿದೆ. ಮಂಗಳೂರು ಪಂಪ್‌ವೆಲ್‌ನಿಂದ 5 ಕಿ.ಮೀ ದೂರದಲ್ಲಿದ್ದರೆ ಸ್ಫೋಟ ನಡೆದ ಸ್ಥಳದಿಂದ 4.5 ಕಿ.ಮೀ ದೂರದಲ್ಲಿದೆ.

    Live Tv
    [brid partner=56869869 player=32851 video=960834 autoplay=true]

  • ವಿರೋಧಪಕ್ಷ ಮತಕ್ಕೋಸ್ಕರ ಭಯೋತ್ಪಾದನೆಗೆ ಸಪೋರ್ಟ್ ಮಾಡ್ತಿದೆ: ಪ್ರಮೋದ್ ಮುತಾಲಿಕ್

    ವಿರೋಧಪಕ್ಷ ಮತಕ್ಕೋಸ್ಕರ ಭಯೋತ್ಪಾದನೆಗೆ ಸಪೋರ್ಟ್ ಮಾಡ್ತಿದೆ: ಪ್ರಮೋದ್ ಮುತಾಲಿಕ್

    ರಾಮನಗರ: ಮಂಗಳೂರು ಕುಕ್ಕರ್ ಸ್ಫೋಟಕ್ಕೆ (Mangaluru Cooker bomb Blast) ತಮಿಳುನಾಡಿನ ಎಸ್‌ಡಿಪಿಐ ಲಿಂಕ್ ಸಿಗುತ್ತಿದೆ. ಕರಾವಳಿ ಭಾಗದಲ್ಲಿ ಇಸ್ಲಾಮಿಕ್ ಗೂಂಡಾ ಶಕ್ತಿ ಬೆಳೆಯುತ್ತಿದೆ. ಇದು ಪೊಲೀಸರಿಗೂ ಗೊತ್ತು. ಆದರೆ ಈ ಬಗ್ಗೆ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಘಟನೆ ಆದಾಗ ಮಾತ್ರ ಕಾರ್ಯಾಚರಣೆ ಮಾಡ್ತಾರೆ. ರಾಜ್ಯ ಸರ್ಕಾರ ಜಾಗೃತವಾಗಬೇಕು. ಘಟನೆ ಆದ ಬಳಿಕ ತನಿಖೆ ಮಾಡಿ ಪ್ರಯೋಜನ ಇಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಂಕಿತ ಉಗ್ರ ಶಾರೀಕ್ (Shariq) ಈ ಹಿಂದೆ ಬಂಧನವಾಗಿದ್ದ ವ್ಯಕ್ತಿ. ಆತನ ಬಿಡುಗಡೆ ಮಾಡದಿದ್ದರೆ ಈ ಬಾಂಬ್ ಸ್ಫೋಟ ಆಗುತ್ತಿರಲಿಲ್ಲ. ಸರ್ಕಾರ ಕೇವಲ ಚುನಾವಣೆ, ಅಧಿಕಾರ ಅಂತ ಕೂರಬಾರದು. ವಿರೋಧ ಪಕ್ಷ ಕೂಡಾ ಟೀಕೆ ಮಾಡಿ ಕೂರಬಾರದು. ವೋಟ್‌ಗೋಸ್ಕರ ಭಯೋತ್ಪಾದಕತೆಗೆ ಸಪೋರ್ಟ್ ಮಾಡುತ್ತಿದ್ದಾರೆ. ವಿರೋಧ ಪಕ್ಷದವರು ನಿಮ್ಮ ನೀಚ ಬುದ್ದಿ ಬಿಡಿ. ಸರ್ಕಾರ ಇದನ್ನ ಗಂಭೀರವಾಗಿ ತೆಗೆದುಕೊಳ್ಳಬೇಕು. ಕೇರಳ ಹಾಗೂ ತಮಿಳುನಾಡು ಗಡಿ ಭಾಗಗಳಲ್ಲಿ ಎಚ್ಚರಿಕೆ ವಹಿಸಿ. ಸೂಕ್ಷ್ಮ ಪ್ರದೇಶಗಳಲ್ಲಿ ಎನ್‌ಐಎ ಶಾಖೆ ಸ್ಥಾಪನೆ ಮಾಡಬೇಕು. ದೇಶ, ರಾಜ್ಯದ ರಕ್ಷಣೆ ಬಗ್ಗೆ ಚಿಂತನೆ ಮಾಡಿ ಎಂದರು. ಇದನ್ನೂ ಓದಿ: ಕುಕ್ಕರ್‌ ಬಾಂಬರ್‌ ಶಾರೀಕ್‌ ಗುಣಮುಖನಾಗಲು 25 ದಿನ ಬೇಕು

    ರಾಮನಗರ ಜಿಲ್ಲೆಯಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ನಡೆಯುತ್ತಿದೆ. ಕಾಂಗ್ರೆಸ್ ಕುಮ್ಮಕ್ಕಿನಿಂದ ಕನಕಪುರದಲ್ಲಿ ಮತಾಂತರ ನಡೆಯುತ್ತಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮೆಚ್ಚಿಸಲು ಮತಾಂತರ ಮಾಡಲಾಗುತ್ತಿದೆ. ಇಲ್ಲಿ ಕಾನೂನು ಬಾಹಿರ ಚರ್ಚ್ಗಳು ತಲೆ ಎತ್ತುತ್ತಿವೆ. ಅವರಿಗೆ ಕುಮ್ಮಕ್ಕು ನೀಡಲು ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆ ಮಾಡಲು ಹೊರಟಿದ್ದಾರೆ. ಆದರೆ ಸರ್ಕಾರ ಈ ಬಗ್ಗೆ ಕ್ರಮವಹಿಸಿಲ್ಲ. ಈ ಬಗ್ಗೆ ಎಸ್‌ಪಿ, ಡಿಸಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ದೆಹಲಿಯ ಶ್ರದ್ಧಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಹಿಂದೂ ಹುಡುಗಿಯರು ಎಚ್ಚರಿಕೆ ವಹಿಸಿ. ಆತುರದಲ್ಲಿ ಪ್ರೀತಿಗೆ ಮೋಸ ಹೋಗಿ ಪೀಸ್ ಪೀಸ್ ಆಗಬೇಡಿ. ದೆಹಲಿಯ ಘಟನೆಯಿಂದ ಎಲ್ಲರೂ ಎಚ್ಚೆತ್ತುಕೊಳ್ಳಿ. ಪ್ರೀತಿ ಮಾಡುವ ಮುನ್ನ ಯೋಚಿಸಿ. ಪೋಷಕರು ಕೂಡಾ ಈ ಬಗ್ಗೆ ಜಾಗೃತಿ ವಹಿಸಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಫ್ತಾಬ್ ನನ್ನನ್ನು ಕೊಂದು ಪೀಸ್ ಪೀಸ್ ಮಾಡ್ತಾನೆ – 2 ವರ್ಷದ ಹಿಂದೆಯೇ ಪೊಲೀಸರಿಗೆ ಪತ್ರ ಬರೆದಿದ್ದ ಶ್ರದ್ಧಾ

    Live Tv
    [brid partner=56869869 player=32851 video=960834 autoplay=true]

  • ಕೊಯಮತ್ತೂರು ಬಾಂಬ್‌ ಸ್ಫೋಟ, ಪಿಎಫ್‌ಐ ನಾಯಕರ ಜೊತೆ ಬಾಂಬರ್‌ ಶಾರೀಕ್‌ಗೆ ನಂಟು

    ಕೊಯಮತ್ತೂರು ಬಾಂಬ್‌ ಸ್ಫೋಟ, ಪಿಎಫ್‌ಐ ನಾಯಕರ ಜೊತೆ ಬಾಂಬರ್‌ ಶಾರೀಕ್‌ಗೆ ನಂಟು

    ಮಂಗಳೂರು: ಉಗ್ರರ ಕೃತ್ಯಕ್ಕೆ ಸಹಕಾರ ನೀಡಿದ ಆರೋಪದಲ್ಲಿ ಭಾಗಿಯಾಗಿ ನಿಷೇಧಕ್ಕೆ ಒಳಗಾಗಿರುವ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(PFI) ಸಂಘಟನೆಯ ನಾಯಕರ ಜೊತೆ ಶಾರೀಕ್(Shariq) ನಂಟು ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

    ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌(Mangaluru Blast Case) ಸ್ಫೋಟಿಸಿದ ಪ್ರಕರಣದ ಆರೋಪಿ ಮೊಹಮ್ಮದ್‌ ಶಾರೀಕ್‌ಗೂ ತಮಿಳುನಾಡಿನ ಕೊಯಮತ್ತೂರಿನಲ್ಲಿ(Coimbatore) ದೀಪಾವಳಿ ಸಮಯದಲ್ಲಿ ಅ.23 ರಂದು ಸಂಗಮೇಶ್ವರ ದೇವಸ್ಥಾನ ಬಳಿಯ ನಡೆದಿದ್ದ ಕಾರು ಬಾಂಬ್‌ ಸ್ಫೋಟ ಪ್ರಕರಣಕ್ಕೂ(Car Bomb Blast)ನಂಟು ಇರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಅನುಮಾನ ಯಾಕೆ?
    ಸಂಗಮೇಶ್ವರ ದೇವಸ್ಥಾನ ಬಳಿ ಸ್ಫೋಟ ಸಂಭವಿಸುವುದಕ್ಕೆ ಒಂದೂವರೆ ತಿಂಗಳ ಮೊದಲು ಶಾರೀಕ್‌ ಕೊಯಮತ್ತೂರಿಗೆ ಹೋಗಿದ್ದ ವಿಚಾರ ಬೆಳಕಿಗೆ ಬಂದಿದೆ. ಅಲ್ಲೂ ಸುಳ್ಳು ಮಾಹಿತಿ ನೀಡಿ ಹಿಂದೂ ಎಂದು ಪರಿಚಯಿಸಿಕೊಂಡು ಮೂರು ನಾಲ್ಕು ದಿನ ಅಲ್ಲಿಯೇ ಬಾಡಿಗೆ ಕೊಠಡಿಯಲ್ಲಿ ನೆಲೆಸಿದ್ದ. ಇಲ್ಲಿ ಬಳ್ಳಾರಿಯ ಸಂಡೂರಿನ ಅರುಣ್‌ ಕುಮಾರ್‌ ಗಾವಳಿ ಅವರ ಆಧಾರ್‌ ಕಾರ್ಡ್‌ ನೀಡಿದ್ದ. ಅರುಣ್‌ ಕುಮಾರ್‌ ಗಾವಳಿ ಅವರನ್ನು ಪೊಲೀಸರು ವಿಚಾರಣೆ ನಡೆಸಿದಾಗ ಅವರ ಆಧಾರ್‌ ಕಾರ್ಡ್ 6 ತಿಂಗಳ ಹಿಂದೆ ಕಳವಾಗಿದ್ದು ಗೊತ್ತಾಗಿತ್ತು. ಅವರು ಕೊಯಮತ್ತೂರಿಗೆ ಹೋಗಿಯೇ ಇರಲಿಲ್ಲ ವಿಚಾರ ದೃಢಪಟ್ಟಿತ್ತು.

    ಕೊಯಮತ್ತೂರು ಬಾಂಬ್‌ ಸ್ಫೋಟದ ಆರೋಪಿಗಳಿಗೂ ಶಾರಿಕ್‌ಗೂ ನಂಟು ಇರುವ ಬಗ್ಗೆ ಪೊಲೀಸರಿಗೆ ಈಗ ಬಲವಾದ ಸಂಶಯ ಇದೆ. ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟದಲ್ಲಿ ಶಾರೀಕ್‌ ಗಾಯಗೊಂಡ ಮಾಹಿತಿ ಸಿಗುತ್ತಿದ್ದಂತೆಯೇ ಕೊಯಮತ್ತೂರು ಪೊಲೀಸರ ತಂಡವೂ ಮಂಗಳೂರಿಗೆ ಆಗಮಿಸಿದೆ.

    ಕೊಯಮತ್ತೂರು ನಂಟು ಏನು?
    ಕೊಯಮತ್ತೂರಿನಲ್ಲಿ ಪಿಎಫ್‌ಐ ನಾಯಕರನ್ನು ಶಾರೀಕ್ ಭೇಟಿಯಾಗಿದ್ದ ಶಂಕೆ ವ್ಯಕ್ತವಾಗಿದೆ. ಜೊತೆಗೆ 1998ರ ಕೊಯಮತ್ತೂರು ಬಾಂಬ್ ಬ್ಲಾಸ್ಟ್ ರೂವಾರಿ ಎಸ್‌‌.ಎ.ಬಾಷಾ ಸಂಬಂಧಿ ಮುಹಮ್ಮದ್ ತಲ್ಕನನ್ನು ಭೇಟಿಯಾದ ಅನುಮಾನ ಬಂದಿದೆ. ಮೋಸ್ಟ್ ವಾಂಟೆಡ್‌ ಅಬ್ದುಲ್ ಮತೀನ್‌ನಿಂದ ಮುಹಮ್ಮದ್ ತಲ್ಕ ಪರಿಚಯವಾಗಿರಬಹುದು ಎನ್ನಲಾಗುತ್ತಿದೆ. ತಮಿಳುನಾಡು ಹಿಂದೂ ಮುಖಂಡನ ಹತ್ಯೆಯಲ್ಲಿ ಮತೀನ್ ಹೆಸರು ಕೇಳಿ ಬಂದಿತ್ತು. ತಮಿಳುನಾಡಿನ ಹಲವು ಉಗ್ರ ಜಾಲ ಹೊಂದಿದ್ದವರ ಜೊತೆ ಮತೀನ್‌ಗೆ ಸಂಪರ್ಕ ಇದ್ದು ಆತನೇ ಶಾರೀಕ್‌ಗೆ ಪರಿಚಯ ಮಾಡಿದ್ದಾನೆ ಎಂಬ ಅನುಮಾನ ಬಂದಿದೆ. ಈ ಅನುಮಾನ ಬಂದ ಹಿನ್ನೆಲೆಯಲ್ಲಿ ತಮಿಳುನಾಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅಷ್ಟೇ ಅಲ್ಲದೇ ಶಾರೀಕ್‌ ತಮಿಳುನಾಡಿಗೆ ಹೋಗಿದ್ದಾಗ ಅಲ್ಲಿ ತಂಗಲು ಪಿಎಫ್‌ಐ ನಾಯಕರು ಶಾರೀಕ್‌ಗೆ ಸಹಾಯ ಮಾಡಿರಬಹುದು ಎಂಬ ಶಂಕೆ ಬಂದಿದೆ. ಇದನ್ನೂ ಓದಿ: ಉಗ್ರ ಕೃತ್ಯಕ್ಕೆ ಹಿಂದುತ್ವ ಹಣೆಪಟ್ಟಿಗೆ ಸಂಚು – ಮುಂಬೈ ಕಸಬ್‌ನಂತೆ ದಾಳಿಗೆ ಬಾಂಬರ್‌ ಶಾರೀಕ್ ಸ್ಕೆಚ್‌

    ಮಾಧ್ಯಮಗಳ ಜೊತೆ ಮಾತನಾಡಿದ್ದ ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌, ಕೊಯಮತ್ತೂರಿನ ಸ್ಫೋಟ ಪ್ರಕರಣದ ಆಯಾಮದಲ್ಲೂ ತನಿಖೆ ನಡೆಯಲಿದೆ. ಮಂಗಳೂರಿನ ಘಟನೆ ನಡೆಯುವುದಕ್ಕೆ ಮುನ್ನ ಆರೋಪಿ ಯಾವೆಲ್ಲ ಪ್ರದೇಶಗಳಿಗೆ ಭೇಟಿ ನೀಡಿದ್ದ, ಯಾರನ್ನೆಲ್ಲ ಭೇಟಿ ಮಾಡಿದ್ದ ಎಂಬ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದಿದ್ದರು.

    ತಮಿಳಿನಲ್ಲಿ ಮಾತನಾಡುತ್ತಿದ್ದ:
    ಮೈಸೂರಿನಲ್ಲಿ ಮೊಬೈಲ್‌ ತರಬೇತಿ ಕೇಂದ್ರದಲ್ಲಿದ್ದಾಗ ಶಾರೀಕ್‌ ಮೊಬೈಲ್‌ನಲ್ಲಿ ತಮಿಳು ಭಾಷೆಯಲ್ಲಿ ಮಾತನಾಡುತ್ತಿದ್ದ. ಧಾರವಾಡ ಮೂಲದ ನಿನಗೆ ತಮಿಳು ಹೇಗೆ ಬರುತ್ತದೆ ಎಂದು ಪ್ರಶ್ನಿಸಿದ್ದಕ್ಕೆ ಆತ ನಾನು ಕೆಲ ಸಮಯ ತಮಿಳುನಾಡಿನಲ್ಲಿ ನೆಲೆಸಿದ್ದೆ. ಅಲ್ಲೂ ನನಗೆ ಸ್ನೇಹಿತರಿದ್ದಾರೆ. ಅವರ ಜೊತೆ ನಾನು ಮಾತನಾಡುತ್ತಿದ್ದೇನೆ ಎಂದು ಹೇಳಿದ್ದ.

    1998ರಲ್ಲಿ ಏನಾಗಿತ್ತು?
    ಫೆ.14 ಶನಿವಾರ ಕೊಯಮತ್ತೂರಿನ 11 ಜಾಗದಲ್ಲಿ 12 ಬಾಂಬ್‌ ಸ್ಫೋಟಗೊಂಡಿತ್ತು. ಈ ದಾಳಿಯಲ್ಲಿ 58 ಮಂದಿ ಮೃತಪಟ್ಟಿದ್ದರೆ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. 12 ಕಿ.ಮೀ ಅಂತರದಲ್ಲಿ ಸ್ಫೋಟ ಸಂಭವಿಸಿತ್ತು.

    Live Tv
    [brid partner=56869869 player=32851 video=960834 autoplay=true]