Tag: manhole

  • 10 ಅಡಿ ಆಳದ ಮ್ಯಾನ್ ಹೋಲ್ ಗೆ ಬಿದ್ದ ಗಾಯಕಿಯ ರಕ್ಷಣೆ

    10 ಅಡಿ ಆಳದ ಮ್ಯಾನ್ ಹೋಲ್ ಗೆ ಬಿದ್ದ ಗಾಯಕಿಯ ರಕ್ಷಣೆ

    ಮುಂಬೈ: ದೇವಸ್ಥಾನದಿಂದ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಗಾಯಕಿಯೊಬ್ಬರು ಆಯತಪ್ಪಿ ಮ್ಯಾನ್ ಹೋಲ್ ಗೆ ಬಿದ್ದ ಘಟನೆ ನಡೆದಿದೆ.

    ಈ ಘಟನೆ ಮಂಗಳವಾರ ಬೆಳಗ್ಗೆ ಮುಲುಂದ್ ನ ಭಕ್ತಿ ಮಾರ್ಗ್ ಎಂಬಲ್ಲಿ ಸುಮಾರು 6.15ಕ್ಕೆ ನಡೆದಿದೆ. ಕೂಡಲೇ ಈ ಘಟನೆ ಗಮನಿಸಿದ ಅಲ್ಲೇ ಇದ್ದ ಸ್ಥಳೀಯರು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ರವಾನಿಸಿ ಮಹಿಳೆಯನ್ನು ರಕ್ಷಿಸಿದ್ದಾರೆ.

    ಗಾಯಕಿಯನ್ನು ನೀಲಿಮ ಪುರಾಣಿಕ್ ಎಂದು ಗುರುತಿಸಲಾಗಿದೆ. ಇವರು ಪ್ರತೀ ನಿತ್ಯದಂತೆ ನಿನ್ನೆಯೂ ಗಣೇಶನ ದೇವಸ್ಥಾನಕ್ಕೆ ಹೋಗಿ ಮರಳಿ ಮನೆಗೆ ಬರುತ್ತಿದ್ದ ವೇಳೆ ಆಯತಪ್ಪಿ ತೆರೆದ ಮ್ಯಾನ್ ಹೋಲ್ ಗೆ ಬಿದ್ದಿದ್ದಾರೆ ಅಂತ ಅದೇ ದೇವಸ್ಥಾನಕ್ಕೆ ಪ್ರತಿನಿತ್ಯ ಬರುವ ರಿಯಲ್ ಎಸ್ಟೇ ಏಜೆಂಟ್ ಗೋಪಾಲ್ ಮರಾಡಿಯರ್ ಹೇಳಿದ್ದಾರೆ.

    ನೀಲಿಮ ಅವರು ಪ್ರತೀ ದಿನ 6 ಗಂಟೆ ಸುಮಾರಿಗೆ ದೇವಸ್ಥಾನಕ್ಕೆ ಬರುತ್ತಾರೆ. ಬಳಿಕ ದೇವಸ್ಥಾನದಲ್ಲಿ 10 ರಿಂದ 15 ನಿಮಿಷ ಇದ್ದು ಹೊರಡುತ್ತಾರೆ. ನಿನ್ನೆ ನಾನು ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತೆರೆದ ಮ್ಯಾನ್ ಹೋಲ್ ಇರುವುದನ್ನು ಗಮನಿಸಿದ್ದೆ. ಅಲ್ಲದೇ ಅದರ ಮೇಲಿರುವ ಮುಚ್ಚಳವು ನಾಪತ್ತೆಯಾಗಿತ್ತು. 6.15ರ ಸುಮಾರಿಗೆ ಯಾರೋ ಒಬ್ಬರು ಮ್ಯಾನ್ ಯಾರೋ ಒಬ್ಬರು ಮ್ಯಾನ್ ಹೋಲ್ ಗೆ ಬಿದ್ದಿದ್ದಾರೆ ಎಂಬ ಸುದ್ದಿಯನ್ನು ಕೇಳಿದೆ. ಕೂಡಲೇ ನಾನು ಅಲ್ಲಿಗೆ ತೆರಳಿ ನೋಡಿದಾಗ ಅದು ನೀಲಿಮ ಎಂದು ತಿಳಿಯಿತು ಅಂತ ಅವರು ವಿವರಿಸಿದ್ದಾರೆ.

    ತಕ್ಷಣವೇ ನಾನು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದೆ. 20 ನಿಷದ ಬಳಿಕ ಅಧಿಕಾರಿಗಳು ರ್ಸಥಳಕ್ಕೆ ದೌಡಾಯಿಸಿ ನಿಲೀಮ ಅವರನ್ನು ಮ್ಯಾನ್ ಹೋಲ್ ನಿಂದ ಹೊರತೆಗೆದಿದ್ದಾರೆ. ಘಟನೆಯಿಂದ ದೇಹದ ಮೇಲೆ ಸ್ವಲ್ಪ ಗಾಯಾಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಅಂತ ಅಂದ್ರು.

    ನಿಲೀಮಾ ಅವರು 10 ಅಡಿ ಆಳಕ್ಕೆ ಬಿದಿದ್ದಾರೆ ಅಂತ ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸಹಾಯದಿಂದ ಮಹಿಳೆಯನ್ನು ರಕ್ಷಿಸಲಾಗಿದೆ. ಸದ್ಯ ಅವರು ವೀರ್ ಸಾಚರ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅಂತ ಹಿರಿಯ ಪೊಲೀಸ್ ಅಧಿಕಾರಿ ಶ್ರೀಪದ್ ಕಾಲೆ ತಿಳಿಸಿದ್ದಾರೆ.

    ಬಿಎಂಸಿ ಹಾಗೂ ಸ್ಥಳೀಯರಿಂದ ಇಂತಹ ಹಲವು ಘಟನೆಗಳ ಬಗ್ಗೆ ದೂರು ಸ್ವೀಕರಿಸಿದ್ದೇವೆ. ಸದ್ಯ ಪ್ರಕರಣಗಳ ತನಿಖೆ ನಡೆಸುವಂತೆ ಕೆಲವು ತಂಡಗಳನ್ನು ನಿಯೋಜಿಸಿದ್ದೇವೆ ಅಂತ ಅವರು ಹೇಳಿದ್ರು. ಈ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಅಂತ ಘಟನೆಗೆ ಸಂಬಂಧಿಸಿದಂತೆ ನಿಲೀಮ ಅವರ ಪುತ್ರ ನಿಖಿಲ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

  • ಮಂಗಳೂರು: ಪೌರ ಕಾರ್ಮಿಕರಿಂದ ಮ್ಯಾನ್‍ಹೋಲ್ ಸ್ವಚ್ಛ ಮಾಡಿಸಿದ ಗುತ್ತಿಗೆದಾರ

    ಮಂಗಳೂರು: ಪೌರ ಕಾರ್ಮಿಕರಿಂದ ಮ್ಯಾನ್‍ಹೋಲ್ ಸ್ವಚ್ಛ ಮಾಡಿಸಿದ ಗುತ್ತಿಗೆದಾರ

    ಮಂಗಳೂರು: ಮ್ಯಾನ್ ಹೋಲ್ ಕ್ಲೀನಿಂಗ್‍ಗಾಗಿ ಪೌರ ಕಾರ್ಮಿಕರನ್ನು ಹೊಂಡಕ್ಕೆ ಇಳಿಸಿ ಕೆಲಸ ಮಾಡಿಸಬಾರದೆಂದಿದ್ದರೂ ಆಡಳಿತ ವರ್ಗ ಮಾತ್ರ ಅಸಡ್ಡೆ ವಹಿಸುತ್ತಿದೆ.

    ಮಂಗಳೂರಿನ ನಗರ ಪ್ರದೇಶದ ಹಳೆ ಬಂದರಿನಲ್ಲಿ ಪೌರ ಕಾರ್ಮಿಕರನ್ನು ಮ್ಯಾನ್ ಹೋಲ್ ಗೆ ಇಳಿಸಿ ಸ್ವಚ್ಛ ಮಾಡಿಸಿದ ಘಟನೆ ನಡೆದಿದೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮ್ಯಾನ್ ಹೋಲ್ ಕ್ಲೀನಿಂಗ್ ಗುತ್ತಿಗೆ ಪಡೆದ ಕಾಂಟ್ರಾಕ್ಟರ್ ಈ ಕೆಲಸ ಮಾಡಿಸಿದ್ದಾನೆ. ವಿಶೇಷ ಅಂದ್ರೆ ಅತೀ ಹೆಚ್ಚು ಜನದಟ್ಟಣೆ ಇರುವ ಪ್ರದೇಶದಲ್ಲಿಯೇ ಹೀಗೆ ಪೌರ ಕಾರ್ಮಿಕರನ್ನು ದುಡಿಸಿಕೊಳ್ಳಲಾಗಿದೆ.

    ನಿಯಮದ ಪ್ರಕಾರ, ಯಾವುದೇ ಕಾರಣಕ್ಕೂ ಮ್ಯಾನ್ ಹೋಲ್ ಕ್ಲೀನಿಂಗ್ ಕೆಲಸಕ್ಕೆ ಕಾರ್ಮಿಕರನ್ನು ಬಳಸಬಾರದು. ಯಂತ್ರಗಳ ಮೂಲಕ ಮಾತ್ರ ಈ ಕೆಲಸ ಮಾಡಬೇಕಿದೆ. ಮ್ಯಾನ್ ಹೋಲ್ ಗೆ ಇಳಿದ ಕಾರ್ಮಿಕ ಹಿಂದೊಮ್ಮೆ ಸಾವನ್ನಪ್ಪಿದ ಬಳಿಕ ಈ ಕಾನೂನನ್ನು ಕಟ್ಟುನಿಟ್ಟು ಮಾಡಲಾಗಿತ್ತು. ಆದರೆ ಈ ನಿಯಮವನ್ನು ನಗರ ಪ್ರದೇಶದಲ್ಲಿಯೇ ಗಾಳಿಗೆ ತೂರಲಾಗಿದೆ. ಉತ್ತರ ಕರ್ನಾಟಕ ಮೂಲದ ಕಾರ್ಮಿಕರನ್ನು ಹೊಂಡಕ್ಕೆ ಇಳಿಸಿ ರಾಜಾರೋಷವಾಗಿ ಕೆಲಸ ಮಾಡಿಸಲಾಗಿದೆ.

  • ಪೌರಕಾರ್ಮಿಕರಿಂದ ಬರಿಗೈಯಲ್ಲೇ ಮ್ಯಾನ್ ಹೋಲ್ ಸ್ವಚ್ಛತಾ ಕಾರ್ಯ

    ಪೌರಕಾರ್ಮಿಕರಿಂದ ಬರಿಗೈಯಲ್ಲೇ ಮ್ಯಾನ್ ಹೋಲ್ ಸ್ವಚ್ಛತಾ ಕಾರ್ಯ

    ಮೈಸೂರು: ದೇಶದ ನಂಬರ್ ಓನ್ ಸ್ವಚ್ಛ ನಗರಿ ಎಂಬ ಪಟ್ಟ ಕಳೆದುಕೊಂಡ ಚಿಂತೆಯಲ್ಲಿ ಮೈಸೂರು ಮಹಾನಗರಪಾಲಿಕೆ ಇದೆ. ಆದರೆ ನಂಬರ್ 1 ಪಟ್ಟಕ್ಕಿಂತಾ ಮೈಸೂರನ್ನು ಸ್ವಚ್ಛ ಮಾಡುವ ಪೌರಕಾರ್ಮಿಕರನ್ನು ಮೊದಲು ಮನುಷ್ಯರಂತೆ ನೋಡುವ ಮನಃಸ್ಥಿತಿ ಬೆಳೆಸಿಕೊಳ್ಳುವ ಅಗತ್ಯ ಇದೆ.

    ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ಪೌರಕಾರ್ಮಿಕರೊಬ್ಬರು ಬರಿಗೈಯಲ್ಲೇ ಮ್ಯಾನ್ ಹೋಲ್ ಸ್ವಚ್ಛಗೊಳಿಸಿದ್ದಾರೆ. ಪಾಲಿಕೆಯ ಇನ್ಸ್ ಪೆಕ್ಟರ್ ಅಣತಿಯಂತೆ ಶ್ರೀನಿವಾಸ್ ಎಂಬ ಪೌರಕಾರ್ಮಿಕರು ಮೈಸೂರಿನ ಜೆ.ಪಿ ನಗರದ ಅಕ್ಕಮಹಾದೇವಿ ರಸ್ತೆಯಲ್ಲಿನ ಮ್ಯಾನ್ ಹೋಲ್ ಬರಿಗೈಯಲ್ಲಿ ಸ್ವಚ್ಛ ಮಾಡಿದ್ದಾರೆ.

    ಶ್ರೀನಿವಾಸ್ ಯಾವುದೇ ಸುರಕ್ಷತಾ ಕವಚಗಳನ್ನು ಧರಿಸದೇ ಬರಿಗೈಯಲ್ಲೇ ಮ್ಯಾನ್ ಹೋಲ್ ಸ್ವಚ್ಛ ಮಾಡುತ್ತಿರುವುದನ್ನು ಸ್ಥಳೀಯರೊಬ್ಬರು ಮೊಬೈಲ್‍ನಲ್ಲಿ ಸೆರೆಹಿಡಿದ್ದಾರೆ. ಮೈಸೂರು ಮಹಾನಗರಪಾಲಿಕೆ ಇನ್ಸ್ ಪೆಕ್ಟರ್ ಶಿವಕುಮಾರ್ ಸೂಚನೆ ಮೇರೆಗೆ ಬರಿಗೈಯಲ್ಲಿ ಕೆಲಸ ಮಾಡಿಸಲಾಗಿದೆ ಎನ್ನುವ ಆರೋಪವಿದೆ.

    ಇತ್ತೀಚೆಗೆ ಮೈಸೂರಿನ ಚಾಮುಂಡಿಬೆಟ್ಟ ಗ್ರಾಮಪಂಚಾಯ್ತಿ ವ್ಯಾಪ್ತಿಯ ತಾವರೆಕಟ್ಟೆ ಗ್ರಾಮದಲ್ಲೂ ಪೌರಕಾರ್ಮಿಕರೋರ್ವರನ್ನು ಮ್ಯಾನ್ ಹೋಲ್‍ಗೆ ಇಳಿಸಿದ ಪ್ರಕರಣ ನಡೆದಿತ್ತು. ಈ ಪ್ರಕರಣದಲ್ಲಿ ತಪ್ಪು ಮಾಡಿದ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯನ್ನು ಆ ಸ್ಥಾನದಿಂದ ಸರ್ಕಾರ ವಜಾ ಕೂಡ ಮಾಡಿತ್ತು.

    https://www.youtube.com/watch?v=NaK6Vp8nuwo

  • ಬಾಲಕನನ್ನು ಮ್ಯಾನಹೋಲ್‍ಗೆ ಇಳಿಸಿ ಕ್ಲೀನ್ ಮಾಡಿಸಿದ್ರು

    ಬಾಲಕನನ್ನು ಮ್ಯಾನಹೋಲ್‍ಗೆ ಇಳಿಸಿ ಕ್ಲೀನ್ ಮಾಡಿಸಿದ್ರು

    ಹುಬ್ಬಳ್ಳಿ: ಮ್ಯಾನಹೋಲ್‍ಗಳಲ್ಲಿ ಕಾರ್ಮಿಕರನ್ನು ಇಳಿಸಿ ಕೆಲಸ ಮಾಡಬಾರದು ಎಂಬ ನಿಯಮ ಇದೆ. ಆದ್ರೆ ಆ ನಿಯಮವನ್ನೇ ಗಾಳಿಗೆ ತೂರಿ ಹುಬ್ಬಳ್ಳಿಯಲ್ಲಿ ಬಾಲಕನೊಬ್ಬನನ್ನು ಮ್ಯಾನಹೋಲ್‍ಗೆ ಇಳಿಸಿ ಕ್ಲೀನ್ ಮಾಡಿಸಿದ ಘಟನೆ ನಡೆದಿದೆ.

    ಹೌದು. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆ ಬಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿನ ಮ್ಯಾನಹೋಲ್‍ನಲ್ಲಿ ಕಿರಣ್ ಎಂಬ ಹುಡುಗನನ್ನು ಕೆಳಗೆ ಇಳಿಸಿ ಸ್ವಚ್ಛತೆ ಮಾಡಿಸಿದ್ದಾರೆ.

    ಚನ್ನಮ್ಮ ವೃತ್ತದಲ್ಲಿನ ಯುಜಿಡಿ (ಒಳ ಚರಂಡಿ ವ್ಯವಸ್ಥೆ) ತುಂಬಿಕೊಂಡಿದ್ದು, ಇದೇ ವೃತ್ತದಲ್ಲಿ ಸಾರ್ವಜನಿಕ ಶೌಚಾಲಯವೊಂದು ದುರಸ್ತಿಗೊಂಡಿದೆ. ಹೀಗಾಗಿ ಶೌಚಾಲಯ ಗುತ್ತಿಗೆ ಪಡೆದ ಗುತ್ತಿಗೆದಾರ, ಕಿರಣ್‍ನನ್ನು ಮ್ಯಾನ್‍ಹೋಲ್‍ಗೆ ಇಳಿಸಿ ಕ್ಲೀನ್ ಮಾಡಿಸಿದ್ದಾರೆ.

    ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ತವರಲ್ಲೇ ನಡೆದಿದೆ ರಾಜ್ಯದ ಮಾನ ಹೋಗೋ ಘಟನೆ

    ಇನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬಳಿ ಮ್ಯಾನ್ ಹೋಲ್ ಕ್ಲೀನ್ ಮಾಡಲು ಅತ್ಯಾಧುನಿಕ ಯಂತ್ರಗಳಿದ್ರೂ ಈ ರೀತಿ ಕಾರ್ಮಿಕರನ್ನು ಬಳಸಿ ಕ್ಲೀನ್ ಮಾಡಿಸಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

    ಇದನ್ನೂ ಓದಿ: ಮ್ಯಾನ್‍ಹೋಲ್‍ನಲ್ಲಿ ಉಸಿರುಗಟ್ಟಿ 3 ಕಾರ್ಮಿಕರ ಸಾವು

    https://youtu.be/kcFSaXt6CH8

    https://youtu.be/xkvU06jGuCU

  • ಸಿಎಂ ಸಿದ್ದರಾಮಯ್ಯ ತವರಲ್ಲೇ ನಡೆದಿದೆ ರಾಜ್ಯದ ಮಾನ ಹೋಗೋ ಘಟನೆ

    ಸಿಎಂ ಸಿದ್ದರಾಮಯ್ಯ ತವರಲ್ಲೇ ನಡೆದಿದೆ ರಾಜ್ಯದ ಮಾನ ಹೋಗೋ ಘಟನೆ

    ಮೈಸೂರು: ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಮಾನವ ಕುಲವೇ ತಲೆ ತಗ್ಗಿಸುವ ಅನಿಷ್ಠ ಪದ್ದತಿ ಇನ್ನು ಜೀವಂತವಾಗಿದೆ. ಶೌಚಗುಂಡಿಗೆ ಪೌರಕಾರ್ಮಿಕರೊಬ್ಬರನ್ನು ಇಳಿಸಿ ಗುಂಡಿ ಸ್ವಚ್ಛಗೊಳಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

    ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ತಾವರೆಕಟ್ಟೆ ಗ್ರಾಮದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷೆ ಗೀತಾ ಎಂಬುವರು ಪೌರಕಾರ್ಮಿಕ ಗಣೇಶ್ ಅವರನ್ನ ಕರೆದು ತಮ್ಮ ಮನೆ ಮುಂದೆ ಇದ್ದ ಮ್ಯಾನ್ ಹೋಲ್ ಸ್ವಚ್ಛಗೊಳಿಸುವಂತೆ ಹೇಳಿದ್ದಾರೆ.

    ಮ್ಯಾನ್ ಹೋಲ್ ತೆರೆದು ನೋಡಿದ ಗಣೇಶ್ ಸಂಪೂರ್ಣ ಭರ್ತಿಯಾಗಿರುವುದನ್ನ ನೋಡಿ, ಇದನ್ನ ಸ್ವಚ್ಛಗೊಳಿಸಲು ಯಂತ್ರ ಬೇಕು ಎಂದು ಹೇಳಿದ್ದಾರೆ. ಯಾವುದೇ ಯಂತ್ರ ನೀಡದ ಗೀತಾ ಬೆಟ್ಟದ ಪಿಡಿಓ ಆನಂದ್ ಅವರಿಂದ ಫೋನ್ ಮಾಡಿಸಿ ಒಳಗೆ ಇಳಿದು ಸ್ವಚ್ಛಗೊಳಿಸಲು ತಾಕೀತು ಮಾಡಿಸಿದ್ದಾರೆ. ಇಲ್ಲವಾದಲ್ಲಿ ಕೆಲಸದಿಂದ ತೆಗೆದುಹಾಕುವ ಬೆದರಿಕೆ ಹಾಕಿದ್ದಾರೆ. ನಂತರ ಒತ್ತಡಕ್ಕೆ ಮಣಿದ ಗಣೇಶ್ ಯಾವುದೇ ರಕ್ಷಾ ಕವಚ ಇಲ್ಲದೆ ಶೌಚಗುಂಡಿಗೆ ಇಳಿದು ಸ್ವಚ್ಛ ಮಾಡಿದ್ದಾರೆ.

    ಮ್ಯಾನ್ ಹೋಲ್ ನಲ್ಲಿ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿದ ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ಇದೊಂದು ಅನಿಷ್ಟ ಪದ್ದತಿ ಇಂತಹ ಪ್ರಕರಣಗಳು ಮತ್ತೆ ಮರುಕಳಿಸಬಾರದು ಅಂತ ಎಲ್ಲ ರಾಜ್ಯ ಸರ್ಕಾರಗಳಿಗೆ 2014 ಮೇ 26 ರಂದು ಕಟ್ಟುನಿಟ್ಟಿನ ಆದೇಶ ನೀಡಿದೆ. ಆದರೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳ ತವರಲ್ಲೇ ಈ ಆದೇಶ ಕಾಲು ಕಸದಂತಾಗಿದ್ದು, ಈ ಬಗ್ಗೆ ಅಧಿಕಾರಿಗಳು ಸಹ ಮೌನ ವಹಿಸಿದ್ದಾರೆ.

    ಈ ಘಟನೆಗೆ ಇಡೀ ಪೌರಕಾರ್ಮಿಕರ ಸಂಘ ಖಂಡನೆ ವ್ಯಕ್ತಪಡಿಸಿದ್ದು, ಈ ಕೂಡಲೇ ಘಟನೆಗೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಬೇಕು. ಅಧಿಕಾರಿ ಹಾಗೂ ಜನಪ್ರತಿನಿಧಿಗಳನ್ನ ವಜಾ ಮಾಡಬೇಕೆಂದು ಆಗ್ರಹಿಸಿದ್ದಾರೆ. ಪಬ್ಲಿಕ್ ಟಿವಿ ಯಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಅಧಿಕಾರಿಗಳು ಘಟನೆ ನಡೆದ ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಪಡೆದಿದ್ದಾರೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಸದಸ್ಯತ್ವ ರದ್ದಾಗಿದ್ದು, ಕ್ರಿಮಿನಲ್ ಕೇಸ್ ದಾಖಲಾಗಿದೆ.

    https://www.youtube.com/watch?v=kcFSaXt6CH8

  • ಮ್ಯಾನ್‍ಹೋಲ್‍ನಲ್ಲಿ ಉಸಿರುಗಟ್ಟಿ 3 ಕಾರ್ಮಿಕರ ಸಾವು – ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ

    ಮ್ಯಾನ್‍ಹೋಲ್‍ನಲ್ಲಿ ಉಸಿರುಗಟ್ಟಿ 3 ಕಾರ್ಮಿಕರ ಸಾವು – ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ

    ಬೆಂಗಳೂರು: ನಗರದಲ್ಲಿ ಮ್ಯಾನ್‍ಹೋಲ್ ದುರಂತ ಸಂಭವಿಸಿದ್ದು, ಆಮ್ಲಜನಕದ ಕೊರತೆಯಿಂದ ಉಸಿರುಗಟ್ಟಿ ಮೂವರು ಕಾರ್ಮಿಕರು ದಾರುಣ ಸಾವನ್ನಪ್ಪಿದ್ದಾರೆ.

    ಕಗ್ಗದಾಸಪುರ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ. ದುರಂತದ ಬಳಿಕ ಎಚ್ಚೆತ್ತ ಜಲಮಂಡಳಿ, ಗುತ್ತಿಗೆದಾರ ಹಾಗೂ ಇಂಜಿನಿಯರ್ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

    ಮೇಯರ್ ಪದ್ಮಾವತಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಮೇಯರ್, ಜಲಮಂಡಳಿ ಕೆಲವೊಂದು ನಿರ್ದೇಶನಗಳನ್ನು ಪಾಲನೆ ಮಾಡುವಂತೆ ಸೂಚಿಸಿದೆ. ಆದ್ರೂ ನಿಯಮ ಉಲ್ಲಂಘನೆ ಮಾಡಲಾಗಿದೆ. ಇನ್ಮುಂದೆ ಇಂಥ ದುರ್ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ರು.

    ನಡೆದಿದ್ದೇನು?: ನೀರಿನ ಸಂಪರ್ಕ ಸರಿಪಡಿಸಲು 15 ಅಡಿ ಆಳವಿದ್ದ ಮ್ಯಾನ್‍ಹೋಲ್‍ಗೆ ಇಬ್ಬರು ಕಾರ್ಮಿಕರು ಇಳಿದಿದ್ರು. ಈ ವೇಳೆ ಆಮ್ಲಜನಕದ ಕೊರತೆಯಿಂದ ಉಸಿರಾಟಕ್ಕೆ ತೊಂದರೆಯಾಗಿ ಕಿರುಚಾಡೋಕೆ ಶುರು ಮಾಡಿದ್ರು. ಆಗ ಟ್ರಾಕ್ಟರ್ ಡ್ರೈವರ್, ಕಾರ್ಮಿಕರನ್ನು ರಕ್ಷಿಸಲು ಮ್ಯಾನ್‍ಹೋಲ್‍ಗೆ ಇಳಿದು ಅವರೂ ಜೀವಬಿಟ್ಟಿದ್ದಾರೆ. ಸ್ಥಳೀಯರು ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ರೂ ಪ್ರಯೋಜನವಾಗ್ಲಿಲ್ಲ.

    ಆಧುನಿಕ ಯಂತ್ರಪೋಕರಣ ಬಳಸಬೇಕೆಂಬ ನಿಯಮ ಇದ್ರೂ ಜಲಮಂಡಳಿ ಅಧಿಕಾರಿಗಳ ಹೊಣೆಗೇಡಿತನಕ್ಕೆ ಮುಗ್ಧ ಜೀವಗಳು ಬಲಿಯಾಗಿವೆ. ಕೆಲಸ ಮಾಡಲು ಬಂದಿದ್ದ ಕಾರ್ಮಿಕರಿಗೆ ಸೂಕ್ತ ರಕ್ಷಣಾ ಸಾಮಗ್ರಿಗಳನ್ನು ಒದಗಿಸದೇ ಇರುವುದು, 15 ಅಡಿ ಆಳದ ಮ್ಯಾನ್‍ಹೋಲ್‍ಗೆ ಇಳಿಯುವವರಿಗೆ ಆಮ್ಲಜನಕ ನೀಡದೇ ನಿರ್ಲಕ್ಷ್ಯ ವಹಿಸಿದ್ದೇ ಘಟನೆ ನಡೆಯಲು ಕಾರಣವಾಗಿದೆ. ಮೃತ ಕಾರ್ಮಿಕರು ಆಂಧ್ರ ಮೂಲದವರು ಎಂದು ಹೇಳಲಾಗಿದ್ದು, ಅವರ ಗುರುತಿನ ಬಗ್ಗೆ ಇನ್ನಷ್ಟೇ ತಿಳಿದುಬರಬೇಕಿದೆ.

    ಈ ಸಂಬಂಧ ಬೈಯಪ್ಪನಳ್ಳಿ ಪೊಲೀಸ್ ಠಾಣೆಯಲ್ಲಿ ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಾಗಿದೆ.