Tag: Manik Shah Parade Ground

  • ಕೋವಿಡ್‍ನಿಂದ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ – ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಭದ್ರತೆಯ

    ಕೋವಿಡ್‍ನಿಂದ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ – ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಭದ್ರತೆಯ

    – ಸಾಂಸ್ಕೃತಿಕ ಕಾರ್ಯಕ್ರಮ ಇಲ್ಲ, ಸಾರ್ವಜನಿಕರಿಗೂ ಪ್ರವೇಶ ಇಲ್ಲ

    ಬೆಂಗಳೂರು: ಇಂದು 74ನೇ ಸ್ವಾತಂತ್ರ್ಯ ದಿನಾಚರಣೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ.

    ರಾಜ್ಯ ರಾಜಧಾನಿಯಲ್ಲಿ ಸಿಎಂ ಯಡಿಯೂರಪ್ಪ ಧ್ವಜಾರೋಹಣ ಮಾಡಲಿದ್ದಾರೆ. ಉಳಿದ ಜಿಲ್ಲಾ ಕೇಂದ್ರಗಳಲ್ಲಿ ಸ್ಥಳೀಯ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಲಿದ್ದಾರೆ. ಇನ್ನೂ ಕೆಲ ಜಿಲ್ಲೆಗಳಲ್ಲಿ ಡಿಸಿಗಳಿಂದ ಧ್ವಜಾರೋಹಣ ಆಗಲಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಬೆಳಗ್ಗೆ 9 ಗಂಟೆಗೆ ಸಿಎಂ ಧ್ವಜಾರೋಹಣ ನೆರವೇರಿಸಲಿದ್ದಾರೆ.

    ಧ್ವಜಾರೋಹಣ ಬಳಿಕ ರಾಷ್ಟ್ರಗೀತೆ, ನಂತರ ಮುಖ್ಯಮಂತ್ರಿ ಅವರು ಸ್ವಾತಂತ್ರ್ಯೋತ್ಸವದ ಭಾಷಣ ಮಾಡಲಿದ್ದಾರೆ. ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಹಾಗೂ ಡಿಜಿಪಿ ಪ್ರವೀಣ್ ಸೂದ್, ಬೆಂಗಳೂರು ನಗರ ಡಿಸಿ ಶಿವಮೂರ್ತಿ, ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್, ಹಾಗೂ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಇವರ ಜೊತೆಗೆ ಸ್ಥಳೀಯ ಶಾಸಕರು ಹಾಗೂ ಕೆಲ ಪ್ರಮುಖ ಗಣ್ಯರು ಭಾಗಿಯಾಗಲಿದ್ದಾರೆ.

    ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ. ದಿನಾಚರಣೆಗೆ ಈ ಬಾರಿ ಹೆಚ್ಚು ಜನರು ಭಾಗವಹಿಸುವಂತಿಲ್ಲ. ಅಲ್ಲದೇ ಸಾರ್ವಜನಿಕರಿಗೂ ಪ್ರವೇಶ ಇಲ್ಲವಾಗಿದೆ. ಬರೀ ಕೋವಿಡ್ ವಾರಿಯರ್ಸ್ ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. 75 ವಾರಿಯರ್ಸ್ ಗಳಿಗೆ ಕಾರ್ಯಕ್ರಮಕ್ಕೆ ಬರಲು ಆಹ್ವಾನ ನೀಡಲಾಗಿದೆ. 25 ಜನ ಕೋವಿಡ್‍ನಿಂದ ಗುಣಮುಖ ಆದವರಿಗೆ ಆಹ್ವಾನ ನೀಡಲಾಗಿದೆ.

    ಈ ಬಾರಿ ಗೌರವ ವಂದನೆ ನೀಡುವ ತುಕಡಿಗಳು ಹೆಚ್ಚು ಇರೋದಿಲ್ಲ. ಬರೀ 16 ತುಕಡಿಗಳ 350 ಮಂದಿಯಿಂದ ಮಾತ್ರ ಗೌರವ ವಂದನೆ ಇರುತ್ತದೆ. ಟ್ರಾಫಿಕ್ ಪೊಲೀಸ್, ಕೆಎಸ್‌ಆರ್‌ಪಿ, ಬಿಎಸ್‍ಎಫ್, ಸಿಎಆರ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್ ಸೇರಿದಂತೆ 16 ತುಕಡಿಗಳಿಗೆ ಅವಕಾಶ ನೀಡಲಾಗಿದೆ. ಪಥ ಸಂಚಲದಲ್ಲಿ ಭಾಗವಹಿಸುವವರು ಒಂದು ದಿನ ಮುಂಚಿತವಾಗಿ ಆಂಟಿಜೆನ್ ಟೆಸ್ಟ್ ಮಾಡಿಸಿರಬೇಕು. ಜೊತೆಗೆ ಶಾಲಾ ಮಕ್ಕಳಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ಮಕ್ಕಳು ಹಾಗೂ 65 ವರ್ಷ ಮೇಲ್ಪಟ್ಟ ಮಕ್ಕಳಿಗೆ ಪ್ರವೇಶ ನಿರ್ಬಂಧ ಮಾಡಲಾಗಿದೆ.

    ಸರಳ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಬಿಗಿ ಭದ್ರತೆಯನ್ನು ಮಾಡಲಾಗಿದೆ. ಬೆಂಗಳೂರಲ್ಲಿ ಗಲಭೆ ಹಿನ್ನೆಲೆಯೂ ಹೆಚ್ಚು ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ. ಯಾವುದೇ ಸಮಸ್ಯೆ ಆಗದ ರೀತಿ ಪೊಲೀಸ್ ಕಟ್ಟೆಚ್ಚರವಹಿಸಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರವನ್ನು ದೂರದರ್ಶನ ಹಾಗೂ ವೆಬ್ ಕ್ಯಾಸ್ಟ್ ಮೂಲಕ ಪ್ರಸಾರ ಮಾಡಲಾಗುತ್ತದೆ.

    9 ಜನ ಡಿಸಿಪಿ ಸೇರಿದಂತೆ 680 ಜನ ಪೊಲೀಸರಿಂದ ಭದ್ರತೆ ನಿಯೋಜನೆ ಮಾಡಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಅಲ್ಲದೇ 70 ಸಿಸಿ ಕ್ಯಾಮರಾಗಳು ಹಾಗೂ 2 ಬ್ಯಾಗೇಜ್ ಸ್ಕ್ಯಾನರ್‌ಗಳು ವ್ಯವಸ್ಥೆ ಮಾಡಲಾಗಿದೆ.

  • ಮಾಣಿಕ್ ಷಾ ಮೈದಾನದಲ್ಲಿ ಸೆಲ್ಫಿ, ಕಪ್ಪು ಬಟ್ಟೆಗೆ ನೋ ಎಂಟ್ರಿ

    ಮಾಣಿಕ್ ಷಾ ಮೈದಾನದಲ್ಲಿ ಸೆಲ್ಫಿ, ಕಪ್ಪು ಬಟ್ಟೆಗೆ ನೋ ಎಂಟ್ರಿ

    ಬೆಂಗಳೂರು: ಆಗಸ್ಟ್ 15ರಂದು 73 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತದೆ. ಮೈದಾನದಲ್ಲಿ ಶಾಮಿಯಾನ, ವೇದಿಕೆ ನಿರ್ಮಾಣ, ಬ್ಯಾರಿಕೇಡ್ ಮತ್ತು ಆಸನಗಳ ವ್ಯವಸ್ಥೆಯಾಗಿದೆ. ಹಾಗೆಯೇ ಈ ಬಾರಿ ಹೊಸ ನಿಯಮಗಳನ್ನು ಕೂಡ ಮಾಡಲಾಗಿದ್ದು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾಗುವವರು ಇದನ್ನೂ ಪಾಲಿಸಬೇಕಿದೆ.

    ಈ ಬಗ್ಗೆ ಬಿಬಿಎಂಪಿ ಕಮೀಷನರ್, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಜಂಟಿ ಸುದ್ದಿಗೋಷ್ಠಿ ನಡೆಸಿ ಆ.15ರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಆ.15ರಂದು ಮುಖ್ಯಮಂತ್ರಿಗಳು ಬೆಳಿಗ್ಗೆ 8.58ಕ್ಕೆ ಮೈದಾನ ಪ್ರವೇಶಿಸಲಿದ್ದು, 9 ಗಂಟೆ ಸರಿಯಾಗಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಆಗ ಪುಷ್ಪವೃಷ್ಠಿ ಮಾಡಿ 3 ಸೇನಾದಳದಿಂದ ಗೌರವ ಸ್ವೀಕರಿಸಲಿದ್ದಾರೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ತಿಳಿಸಿದರು.

    ಇಂದು ಬೆಂಗಳೂರು ಪೊಲೀಸ್ ಕಮೀಷನರ್ ಹಾಗೂ ಬಿಬಿಎಂಪಿ ಕಮೀಷನರ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ತಾಲೀಮು ನಡೆಸಿದರು. ಈ ವೇಳೆ ಪರೇಡ್ ಮಾಡುವ ತಂಡಗಳು ಶಿಸ್ತು ಕಾಯ್ದುಕೊಳ್ಳುವಂತೆ ಪೊಲೀಸ್ ಕಮೀಷನರ್ ಕ್ಲಾಸ್ ತೆಗೆದುಕೊಂಡರು. ಸ್ವಾತಂತ್ರ್ಯ ದಿನಾಚರಣೆ ವೇಳೆ ಪಥಸಂಚಲದಲ್ಲಿ  ಕೆಎಸ್‌ಆರ್‌ಪಿ, ಸ್ಕೌಟ್ಸ್, ಗೈಡ್ಸ್, ಎನ್‍ಸಿಸಿ, ಸೇವಾದಳ ಹಾಗೂ ಶಾಲಾ ಮಕ್ಕಳನ್ನು ಒಳಗೊಂಡ ಕವಾಯತು ಮತ್ತು ಬ್ಯಾಂಡಿನ 34 ತುಕಡಿಗಳಲ್ಲಿ ಸುಮಾರು 1130 ಮಂದಿ ಭಾಗವಹಿಸಲಿದ್ದಾರೆ.

    ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1250 ಶಾಲಾ ಮಕ್ಕಳು ಭಾಗಿಯಾಗಲಿದ್ದು, ನಾಡಗೀತೆ, ರೈತ ಗೀತೆ, ಭಾರತಾಂಬೆಯ ಮಡಿಲಿನ ಮಕ್ಕಳು, ಜಲಿಯನ್ ವಾಲಾಬಾಗ್ ಹತ್ಯಾಕಾಂಡ 1919, ಜಿಮ್ನಾಸ್ಟಿಕ್ಸ್, ಕಳರಿಪಯಟ್ಟು ಕಾರ್ಯಕ್ರಮ ಪ್ರದರ್ಶನ ನೀಡಲಿದ್ದಾರೆ. ಜೊತೆಗೆ ಈ ಬಾರಿ ಹೊಸ ನಿಯಮಗಳನ್ನು ಕೂಡ ಮಾಡಲಾಗಿದೆ.

    ಏನಿದು ನಿಯಮ?
    – ಮೈದಾನದ ಒಳಗಡೆ ಸೆಲ್ಫಿ ತೆಗೆಯಲು ಅವಕಾಶ ಇಲ್ಲ
    – ಕಪ್ಪು ಬಟ್ಟೆ ಹಾಕಿದ್ರೆ ನೋ ಎಂಟ್ರಿ
    – 1 ಗಂಟೆ ಮುಂಚಿತವಾಗಿ ಕಾರ್ಯಕ್ರಮಕ್ಕೆ ಆಗಮಿಸಬೇಕು
    – ಗುರುತಿನ ಚೀಟಿ ಇದ್ರೆ ಮಾತ್ರ ಪ್ರವೇಶ
    – ಶೌಚಾಲಯ, ನೀರಿನ ವ್ಯವಸ್ಥೆ ಇದೆ
    – ಅನಗತ್ಯ ಲಗೇಜ್ ತರುವಂತಿಲ್ಲ
    – ಸಿಗರೇಟ್, ಬೆಂಕಿ ಪೆಟ್ಟಿಗೆ, ಕರಪತ್ರಗಳು, ಬಣ್ಣದ ದ್ರಾವಣ, ವಿಡಿಯೋ ಮತ್ತು ಸ್ಡಿಲ್ ಕ್ಯಾಮರಾ, ನೀರಿನ ಬಾಟಲ್, ಕ್ಯಾನ್, ಶಸ್ತ್ರಾಸ್ತ್ರ, ಹರಿತವಾದ ವಸ್ತು, ಚಾಕು – ಚೂರಿ, ಕಪ್ಪು ಕರವಸ್ತ್ರಗಳು, ತಿಂಡಿ, ಮದ್ಯದ ಬಾಟಲ್, ಮಾದಕ ವಸ್ತುಗಳು, ಬಾವುಟ, ಪಟಾಕಿ ಮತ್ತು ಸ್ಫೋಟಕ ವಸ್ತುಗಳು ತರುವಂತಿಲ್ಲ.

    ಮೈದಾನದಲ್ಲಿ 13,200 ಆಸನಗಳ ವ್ಯವಸ್ಥೆಯಿದ್ದು, ಇಡೀ ಕಾರ್ಯಕ್ರಮ ಮುಗಿಯುವವರೆಗೂ ಕಬ್ಬನ್ ರಸ್ತೆ ವಾಹನ ಸಂಚಾರ ಸ್ಥಗಿತಗೊಳ್ಳಲಿದೆ. ಅಲ್ಲದೆ ಮೈದಾನದ ಸುತ್ತ ಪೊಲೀಸರ ಸರ್ಪಗಾವಲಿನ ಜೊತೆಗೆ 50 ಸಿಸಿಟಿವಿ ಅಳವಡಿಕೆಯಾಗಿದೆ.

  • ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಮೈದಾನಕ್ಕೆ ಯಾವೆಲ್ಲ ವಸ್ತು ತರುವಂತಿಲ್ಲ?

    ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಮೈದಾನಕ್ಕೆ ಯಾವೆಲ್ಲ ವಸ್ತು ತರುವಂತಿಲ್ಲ?

    ಬೆಂಗಳೂರು: 72 ಸ್ವಾತಂತ್ರ್ಯ ದಿನಾಚರಣೆಗೆ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಜೋರಾಗಿ ನಡೆಯುತ್ತಿದೆ.

    ಪೊಲೀಸ್ ಪಡೆ, ಹೊಂಗಾಡ್ರ್ಸ್, ಎನ್‍ಸಿಸಿ, ಶಾಲಾ ಮಕ್ಕಳು, ವಾದ್ಯಗೋಷ್ಠಿ ತಂಡ ಸೇರಿದಂತೆ ವಿವಿಧ ತಂಡಗಳು ಇಂದು ತಾಲೀಮು ನಡೆಸಿದರು. ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್, ಬೆಂಗಳೂರು ಪೊಲೀಸ್ ಕಮಿಷನರ್ ಸುನೀಲ್ ಕುಮಾರ್ ಜಂಟಿಯಾಗಿ ತಾಲೀಮು ಪರಿಶೀಲನೆ ನಡೆಸಿದರು.

    ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ಮೈದಾನ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ. ಭದ್ರತೆಗಾಗಿ ಮೈದಾನದ ಸುತ್ತ 1,500 ಪೊಲೀಸರ ನಿಯೋಜನೆ ಮಾಡಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 9 ಡಿಸಿಪಿ, 16 ಎಸಿಪಿ, 47 ಪಿಐ, 102 ಪಿಎಸ್‍ಐ, 77 ಎಎಸ್‍ಐ, 540 ಪಿಸಿ, 75 ಮಹಿಳಾ ಸಿಬ್ಬಂದಿ, 114 ಮಪ್ತಿ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಮೈದಾನದ ಸುತ್ತ ಮುತ್ತ 56 ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ ಎಂದರು.

    ಇಷ್ಟೇ ಅಲ್ಲದೇ 9 ಕೆಎಎಸ್‍ಆರ್‍ಪಿ ತುಕಡಿ, 5 ಸಿಎಆರ್ ತುಕಡಿ, 3 ಅಗ್ನಿಶಾಮಕ ವಾಹನ, 2 ಆಂಬುಲೆನ್ಸ್, 2 ಕ್ಷಿಪ್ರ ಕಾರ್ಯಾಚರಣೆ ಪಡೆ, 1 ಡಿ-ಸ್ವಾಟ್, 1 ಆರ್ ಯಯವಿ ನಿಯೋಜನೆ, 4 ಬ್ಯಾಗೇಜ್ ಸ್ಕ್ಯಾನರ್ ಅಳವಡಿಕೆ ಮಾಡಲಾಗಿದೆ. ಮೈದಾನಕ್ಕೆ ಬರುವ ಸಾರ್ವಜನಿಕರು ಮೊಬೈಲ್, ಸಿಗರೇಟ್, ಬೆಂಕಿ ಪೊಟ್ಟಣ, ಕರಪತ್ರ, ಬಣ್ಣದ ದ್ರಾವಣ, ವಿಡಿಯೋ, ಸ್ಟಿಲ್ ಕ್ಯಾಮೆರಾ, ನೀರಿನ ಬಾಟಲ್, ಶಸ್ತ್ರಾಸ್ತ್ರ, ಚಾಕು, ಚೂರಿ, ಕಪ್ಪು ಕರವಸ್ತ್ರ, ತಿಂಡಿ ತಿನಿಸು, ಮದ್ಯದ ಬಾಟಲಿ, ಬಾವುಟ, ಪಟಾಕಿ, ಸ್ಫೋಟಕ ವಸ್ತು ತರುವಂತಿಲ್ಲ ಎಂದು ಪೊಲೀಸ್ ಇಲಾಖೆ ಮನವಿ ಮಾಡಿಕೊಂಡಿದೆ.

    ಆಗಸ್ಟ್ 15 ರಂದು ಹಸಿರು ಕರ್ನಾಟಕಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ ನೀಡಲಿದ್ದು, ಸಾಂಕೇತಿಕವಾಗಿ ಗಿಡ ನೆಟ್ಟು ಮತ್ತು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸುವ ಎಲ್ಲಾ ಸಾರ್ವಜನಿಕರಿಗೆ ಗಿಡ ವಿತರಿಸುವ ಮೂಲಕ ಚಾಲನೆ ನೀಡಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews