Tag: Manipal University

  • ಆ ಕಾಲ ಹೋಯ್ತು.. ಭಾರತದ ತಂಟೆಗೆ ಬಂದ್ರೆ ಮುಖಮೂತಿ ನೋಡಲ್ಲ – ರಾಜನಾಥ್ ಸಿಂಗ್ ಎಚ್ಚರಿಕೆ

    ಆ ಕಾಲ ಹೋಯ್ತು.. ಭಾರತದ ತಂಟೆಗೆ ಬಂದ್ರೆ ಮುಖಮೂತಿ ನೋಡಲ್ಲ – ರಾಜನಾಥ್ ಸಿಂಗ್ ಎಚ್ಚರಿಕೆ

    ಉಡುಪಿ: ಆ ಕಾಲ ಹೋಯ್ತು.. ಭಾರತದ ತಂಟೆಗೆ ಬಂದ್ರೆ ನಾವು ಮುಖಮೂತಿ ನೋಡಲ್ಲ ಎಂದು ಶತ್ರು ರಾಷ್ಟ್ರಗಳಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಎಚ್ಚರಿಕೆ ನೀಡಿದ್ದಾರೆ. ಇಡೀ ಪ್ರಪಂಚ ಭಾರತದ ಮಾತು ಕೇಳುವ ಕಾಲ ಬಂದಿದೆ ಎಂದು ಅವರು ಹೇಳಿದರು.

    ಉಡುಪಿಯ (Udupi) ಮಣಿಪಾಲ ಮಾಹೆ ವಿವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾಜನಾಥ್ ಸಿಂಗ್, ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಐದು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಿ ಮಾತನಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ನಾಯಕರೇ ಅಲ್ಲ – ರಾಜ್ಯಕ್ಕೆ ಒಬ್ಬರೇ ಮಾಸ್ ಲೀಡರ್ ಅದು BSY: ವರ್ತೂರು ಪ್ರಕಾಶ್ ವಾಗ್ದಾಳಿ

    ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು ಕೆರೆದುಕೊಂಡು ನಾವು ಯಾರ ಜೊತೆಯೂ ತಗಾದೆ ಶುರು ಮಾಡುವುದಿಲ್ಲ. ಭಾರತದ ತಂಟೆಗೆ ಬಂದರೆ ಮುಖಮೂತಿ ನೋಡದೆ ಉತ್ತರ ಕೊಡುತ್ತೇವೆ ಎಂದರು.

    ಐದು ವರ್ಷದಲ್ಲಿ ವಿಶ್ವದ ಮೂರನೇ ಆರ್ಥಿಕ ದೇಶವಾಗಿ ಭಾರತ ಸದೃಢವಾಗಿ ನಿಲ್ಲಲಿದೆ. ಭಾರತ 2047ಕ್ಕೆ ಪ್ರಪಂಚದ ಮೊದಲ ಸ್ಥಾನದಲ್ಲಿರಲಿದೆ. ದೇಶವನ್ನು ಐದು ಟ್ರಿಲಿಯನ್ ಆರ್ಥಿಕ ರಾಷ್ಟ್ರ ಮಾಡುವುದು ಪ್ರಧಾನಿ ಮೋದಿ ಕನಸು. ದೇಶದ ಯುವಜನಾಂಗ ಇದಕ್ಕೆ ಕೊಡುಗೆ ನೀಡುತ್ತಿದ್ದೇವೆ. ಗ್ಲೋಬಲ್ ಸಿಟಿಜನ್ ನಿರ್ಮಿಸಲು ಎನ್‌ಇಪಿ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: 2025ರ ಜೂನ್‌ಗೆ 175 ಕಿಮೀ ಮೆಟ್ರೋ ಮಾರ್ಗ- ಅಂಜುಂ ಪರ್ವೇಜ್

    ಮಾಹೆ ವಿವಿಯ ಸತ್ಯ ನಾದೆಲ್ಲಾ ಮೈಕೋಸಾಫ್ಟ್‌ನ ನೇತೃತ್ವ ವಹಿಸಿದ್ದಾರೆ. ಮೈಕ್ರೋಸಾಫ್ಟ್ ಮೀರಿಸುವಂತಹ ಕಂಪನಿ ಭಾರತದಲ್ಲಿ ಸ್ಥಾಪನೆ ಆಗಬೇಕು. ಅಂತಾರಾಷ್ಟ್ರೀಯ ಕಂಪನಿ ಸಿಇಒಗಳು ಭಾರತ ಮೂಲದವರು ಎಂಬುದು ನಮ್ಮ ಹೆಗ್ಗಳಿಕೆ ಎಂದು ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

  • ಮಣಿಪಾಲ ವಿವಿಯ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಇಲ್ಲ- ವೈದ್ಯಕೀಯ ವರದಿಯಲ್ಲಿ ಧೃಡ

    ಮಣಿಪಾಲ ವಿವಿಯ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಇಲ್ಲ- ವೈದ್ಯಕೀಯ ವರದಿಯಲ್ಲಿ ಧೃಡ

    ಉಡುಪಿ: ಅಮೆರಿಕ ಹಾಗೂ ಕುವೈತ್‍ನಿಂದ ಬಂದಿರುವ ಉಡುಪಿಯ ಮಣಿಪಾಲ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳ ಕೊರೊನಾದ ವೈದ್ಯಕೀಯ ವರದಿ ನೆಗೆಟಿವ್ ಬಂದಿದೆ. ಆತಂಕದಲ್ಲಿದ್ದ ಮಣಿಪಾಲ ವಿವಿ ಸದ್ಯ ನಿರಾಳವಾಗಿದೆ.

    ಶಂಕಿತ ಕೊರೊನಾ ವೈರಸ್ ಸೋಂಕಿನ ಪರೀಕ್ಷೆಗಾಗಿ ಮಣಿಪಾಲದ ಕೆಎಂಸಿಯ ಪ್ರತ್ಯೇಕಿತ ವಾರ್ಡ್ ಗೆ ದಾಖಲಾಗಿದ್ದ ಮಣಿಪಾಲ ಕೆಎಂಸಿಯ ಇಬ್ಬರು ವಿದ್ಯಾರ್ಥಿಗಳಲ್ಲಿ ಸೋಂಕು ಕಂಡುಬಂದಿಲ್ಲ. ಆ ಇಬ್ಬರು ಆಂಧ್ರ ಪ್ರದೇಶ ಹಾಗೂ ಕೇರಳ ಮೂಲದವರಾಗಿದ್ದು, ಅಮೆರಿಕ ಹಾಗೂ ಕುವೈಟ್ ಪ್ರವಾಸ ಮಾಡಿ ಬಂದಿದ್ದಾಗ ಜ್ವರ, ಶೀತ ಕಾಣಿಸಿಕೊಂಡಿತ್ತು. ಇದನ್ನೂ ಓದಿ: ಕೊರೊನಾ ವೈರಸ್‍ಗೆ ದೇಶದಲ್ಲಿ ಎರಡನೇ ಬಲಿ

    ಕೊರೊನಾದ ಪ್ರಾಥಮಿಕ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಶಿವಮೊಗ್ಗಕ್ಕೆ ಕಳುಹಿಸಲಾದ ಅವರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯ ಪರೀಕ್ಷೆ ಇಂದು ಕೈಸೇರಿದ್ದು, ಅದರಲ್ಲಿ ಸೋಂಕು ಇಲ್ಲ ಎಂದು ಖಚಿತವಾಗಿದೆ ಅಂತ ಡಿಎಚ್‍ಒ ಡಾ.ಸುಧೀರ್‍ಚಂದ್ರ ಸೂಡ ತಿಳಿಸಿದರು. ಇದನ್ನೂ ಓದಿ: ಜಪಾನ್ ಹಡಗಿನಲ್ಲಿದ್ದ ವ್ಯಕ್ತಿಗೆ ಕೊರೊನಾ ಶಂಕೆ- ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲು

    ಇಂದು ದಾಖಲಾದ ಮತ್ತೊಬ್ಬ ಕೆಎಂಸಿಯ ವಿದ್ಯಾರ್ಥಿ ಮೂಲತಃ ದುಬೈನವ. ಆತ ಮಲೇಷ್ಯಾಕ್ಕೆ ಹೋಗಿ ಮಣಿಪಾಲಕ್ಕೆ ಬಂದಿದ್ದ. ಆತನ ಮಾದರಿಗಳನ್ನು ಪರೀಕ್ಷೆಗಾಗಿ ಇಂದು ಕಳುಹಿಸಲಾಗಿದ್ದು ವರದಿ ನಾಳೆ ಬರಲಿದೆ. ವಿವಿಯಲ್ಲಿ 60 ದೇಶದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಸೋಂಕು ಇತರರಿಗೂ ಹರಡುವ ಸಾಧ್ಯತೆ ಬಗ್ಗೆ ವಿವಿಗೆ ಆತಂಕವಾಗಿತ್ತು. ಇಬ್ಬರು ವಿದ್ಯಾರ್ಥಿಗಳ ವರದಿ ನೆಗೆಟಿವ್ ಬಂದಿರುವುದರಿಂದ ವಿವಿ ವಿದ್ಯಾರ್ಥಿಗಳು, ಆಡಳಿತ ವಿಭಾಗ ನೆಮ್ಮದಿಯಾಗಿದೆ.

  • ಮಣಿಪಾಲ ವಿವಿಯ ಮೂವರು ವಿದ್ಯಾರ್ಥಿಗಳಿಗೆ ಶಂಕಿತ ಕೊರೊನಾ

    ಮಣಿಪಾಲ ವಿವಿಯ ಮೂವರು ವಿದ್ಯಾರ್ಥಿಗಳಿಗೆ ಶಂಕಿತ ಕೊರೊನಾ

    ಉಡುಪಿ: ಜಿಲ್ಲೆಯಲ್ಲಿ ಈವರೆಗೆ ಎಂಟು ಶಂಕಿತ ಕೊರೊನಾ ಪ್ರಕರಣ ದಾಖಲಾಗಿದೆ. ಈ ಪೈಕಿ ಐದು ಕೇಸ್ ಕೊರೊನಾ ನೆಗೆಟಿವ್ ಅಂತ ವರದಿ ಬಂದಿದೆ. ಇದೀಗ ಮಣಿಪಾಲ ವಿಶ್ವ ವಿದ್ಯಾನಿಲಯದ ಮೂವರು ವಿದ್ಯಾರ್ಥಿಗಳಲ್ಲಿ ಕೊರೊನಾದ ಲಕ್ಷಣಗಳು ಕಂಡು ಬಂದಿದೆ.

    ಶಂಕಿತ ಅನಾರೋಗ್ಯ ಪೀಡಿತರನ್ನು ಮಣಿಪಾಲ ಕೆಎಂಸಿಯ ಸ್ಪೆಷಲ್ ವಾರ್ಡಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬ ವಿದ್ಯಾರ್ಥಿ ಅಮೆರಿಕ ಪ್ರವಾಸವನ್ನು ಮುಗಿಸಿ ಮಣಿಪಾಲಕ್ಕೆ ವಾಪಸಾಗಿದ್ದು, ಮತ್ತೊಬ್ಬ ವಿದ್ಯಾರ್ಥಿನಿ ಕುವೈತ್ ದೇಶದಿಂದ ಮಣಿಪಾಲಕ್ಕೆ ವಾಪಸ್ ಬಂದವಳು. ಇಂದಿನ ಮೂರನೇ ಪ್ರಕರಣದಲ್ಲಿ ಮಲೆಷ್ಯಾದಿಂದ ಬಂದ ಮೆಡಿಕಲ್ ವಿದ್ಯಾರ್ಥಿನಿಯಲ್ಲಿ ಸೋಂಕಿನ ಲಕ್ಷಣ ಕಾಣಿಸಿದೆ.

    ಎಲ್ಲರೂ ಜ್ವರ, ಶೀತ, ಸೀನುವಿನಿಂದ ಬಳಲುತ್ತಿದ್ದಾರೆ. ಇಬ್ಬರಲ್ಲಿ ಕೊಂಚ ಎದೆ ನೋವು ಕಾಣಿಸಿಕೊಂಡಿದೆ. ಎಲ್ಲರಿಗೂ ಮಣಿಪಾಲದಲ್ಲಿ ಚಿಕಿತ್ಸೆ ನೀಡಲಾಗಿದೆ. ವಾರ್ಡ್ ಗೆ ಯಾರೂ ಪ್ರವೇಶ ಮಾಡದಂತೆ ನಿಗಾ ವಹಿಸಲಾಗಿದೆ. ಮಣಿಪಾಲದಲ್ಲಿ 60 ದೇಶದ ವಿದ್ಯಾರ್ಥಿಗಳು ಇದ್ದಾರೆ. ವಿದೇಶಿ ವಿದ್ಯಾರ್ಥಿಗಳು ತಮ್ಮ ದೇಶಕ್ಕೆ ಹೋಗಿ ಬರುತ್ತಾ ಇರುತ್ತಾರೆ. ಶೈಕ್ಷಣಿಕ ಭಾಗವಾಗಿ ಇಂಟರ್ನ್ ಶಿಪ್‍ಗೆ ವಿದೇಶ ಪ್ರವಾಸ ಮಾಡುತ್ತಾರೆ. ವಿದೇಶದಿಂದ ಮತ್ತು ಹೊರ ರಾಜ್ಯದಿಂದ ಬಂದವರ ಮೇಲೆ ಜಿಲ್ಲಾಡಳಿತ ಮತ್ತು ಮಣಿಪಾಲ ವಿವಿ ನಿಗಾ ಇರಿಸಿದೆ. ಶಂಕಿತರು ಸಂಪರ್ಕಿಸಿದವರನ್ನೂ ತಪಾಸಣೆ ಮಾಡಲಾಗಿದೆ.

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಮಾಡಿದಾಗ ದೇಹದ ತಾಪಮಾನದ ಮೇಲೆ ಸಂಶಯ ಬಂದಿತ್ತು. ಮಣಿಪಾಲ ಬಂದ ಮೇಲೆ ಕೊರೊನಾದ ಲಕ್ಷಣಗಳು ಕಂಡು ಬಂದಿರುವುದರಿಂದ ಅವರನ್ನು ಶಂಕಿತರು ಎಂದು ನಿರ್ಧರಿಸಲಾಗಿದೆ. ಮೂವರು ವಿದ್ಯಾರ್ಥಿಗಳ ದೇಹದ ಸ್ಯಾಂಪಲನ್ನು ಬೆಂಗಳೂರಿಗೆ ರವಾನೆ ಮಾಡಲಾಗಿದ್ದು, ಎರಡು ದಿನದಲ್ಲಿ ವರದಿ ಬರಲಿದೆ.

    ವಿವಿಯಲ್ಲಿ ಸುಮಾರು 60 ದೇಶದ ವಿದ್ಯಾರ್ಥಿಗಳು ಇರುವುದರಿಂದ ಸಹಜವಾಗಿಯೇ ಮಣಿಪಾಲ ವಿಶ್ವವಿದ್ಯಾನಿಲಯ ಆತಂಕಗೊಂಡಿದೆ. ಉತ್ತರ ಭಾರತದ ಎಲ್ಲಾ ರಾಜ್ಯದ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಕೇರಳದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದಾರೆ.