Tag: manish pandey

  • ವಿಧಾನಸೌಧದ ಎದುರು ಡಿಕೆಶಿ ಯೋಗ – ನಟಿ ಅನು ಪ್ರಭಾಕರ್‌, ಕ್ರಿಕೆಟಿಗ ಮನಿಷ್‌ ಪಾಂಡೆ ಸಾಥ್‌

    ವಿಧಾನಸೌಧದ ಎದುರು ಡಿಕೆಶಿ ಯೋಗ – ನಟಿ ಅನು ಪ್ರಭಾಕರ್‌, ಕ್ರಿಕೆಟಿಗ ಮನಿಷ್‌ ಪಾಂಡೆ ಸಾಥ್‌

    ಬೆಂಗಳೂರು: ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ. ಭಾರತೀಯ ಯೋಗ (Yoga) ಪರಂಪರೆಯಿಂದು ವಿಶ್ವವ್ಯಾಪಿಯಾಗಿದೆ. ಭಾರತ ಮತ್ತು ಇತರ ದೇಶಗಳ ಸಂಬಂಧವನ್ನು ಆರೋಗ್ಯಪೂರ್ಣವಾಗಿಸುವ ಮಹತ್ವದ ಕಾರ್ಯವಾಗಿ ರೂಪುಗೊಂಡಿದೆ.

    ಯೋಗವು ಯಾವುದೇ ಜಾತಿ, ಧರ್ಮ, ಮತ ಪಂಥಕ್ಕೆ ಸೀಮಿತವಾಗದೇ ಎಲ್ಲವನ್ನೂ ಎಲ್ಲರನ್ನೂ ಮೀರಿಸುವ ವಿಶ್ವಕುಟುಂಬಿಯಾಗಿ ಹಾಗೂ ವಿಶ್ವ ಆರೋಗ್ಯಕ್ಕಾಗಿ (World Health) ಎನ್ನುವ ನಿಟ್ಟಿನಲ್ಲಿ ಸಾಕಾರಾರಗೊಂಡಿದೆ. ಇದೇ ನಿಟ್ಟಿನಲ್ಲಿ ಬೆಂಗಳೂರಿನಲ್ಲಿಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಇದನ್ನೂ ಓದಿ: International Yoga Day: ‘ಯೋಗ’ವೆಂಬ ಗಿನ್ನಿಸ್‌ ರೆಕಾರ್ಡ್‌ – ಯಾವ ವರ್ಷ, ಎಲ್ಲಿ ದಾಖಲೆಯಾಗಿತ್ತು?

    ಕರ್ನಾಟಕ ಸರ್ಕಾರದ ವತಿಯಿಂದ ವಿಧಾನಸೌಧದ ಎದುರು ಆಯೋಜಿಸಿದ್ದ ʻಯೋಗೋತ್ಸವʼ ಕಾರ್ಯಕ್ರಮದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌, ರಾಜ್ಯಾಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸಚಿವರಾದ ದಿನೇಶ್ ಗುಂಡೂರಾವ್, ಸಭಾಪತಿ ಬಸವರಾಜ ಹೊರಟ್ಟಿ, ನಟಿ ಅನು ಪ್ರಭಾಕರ್, ನಟ ಶರಣ್, ಅಶ್ವಿನಿ ನಾಚಪ್ಪ, ಟೀಂ ಇಂಡಿಯಾ ಕ್ರಿಕೆಟಿಗ ಮನೀಷ್ ಪಾಂಡೆ ಸಹ ಪಾಲ್ಗೊಂಡಿದ್ದರು.

    ಇದರೊಂದಿಗೆ ನೂರಾರು ಸಾರ್ವಜನಿಕರು, ವಿವಿಧ ಶಾಲಾ ಕಾಲೇಜು ಮಕ್ಕಳು ಯೋಗ ಪ್ರದರ್ಶಿಸಿ ಆರೋಗ್ಯ ಸುರಕ್ಷತೆಗಳ ಬಗ್ಗೆ ಜಾಗೃತಿ ಮೂಡಿಸಿದರು. ಇದನ್ನೂ ಓದಿ: ಅಫ್ಘಾನ್‌ ವಿರುದ್ಧ ಭಾರತಕ್ಕೆ 47 ರನ್‌ಗಳ ಸೂಪರ್‌ ಜಯ – ಹಿಟ್‌ಮ್ಯಾನ್‌ ವಿಶೇಷ ಸಾಧನೆ!

    ಈ ಬಾರಿಯ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ (Yoga for Self and Society) ವಸ್ತು ವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶವಾಗಿದೆ.

  • Ranji Trophy: ರೈಲ್ವೇಸ್ ವಿರುದ್ಧ ಕರ್ನಾಟಕಕ್ಕೆ ಒಂದು ವಿಕೆಟ್ ರೋಚಕ ಜಯ

    Ranji Trophy: ರೈಲ್ವೇಸ್ ವಿರುದ್ಧ ಕರ್ನಾಟಕಕ್ಕೆ ಒಂದು ವಿಕೆಟ್ ರೋಚಕ ಜಯ

    ಸೂರತ್: ಇಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ (Ranji Trophy) ಅನುಭವಿ ಬ್ಯಾಟರ್ ಮನೀಶ್ ಪಾಂಡೆ (Manish Pandey ) ಅವರ ಅರ್ಧಶತಕದ ನೆರವಿನಿಂದ ಕರ್ನಾಟಕ ತಂಡವು (Karnataka Team) ರೈಲ್ವೇಸ್ ವಿರುದ್ಧ 1 ವಿಕೆಟ್ ರೋಚಕ ಗೆಲುವು ಸಾಧಿಸಿದೆ.

    226 ರನ್ ಗೆಲುವಿನ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ಒಂದು ಹಂತದಲ್ಲಿ 214ಕ್ಕೆ ಒಂಬತ್ತು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಕೊನೆಯ ವಿಕೆಟ್‍ಗೆ ಗೆಲುವಿಗೆ 12 ರನ್‍ಗಳು ಬೇಕಾಗಿತ್ತು. ಈ ವೇಳೆ ಹೋರಾಟ ನಡೆಸಿದ ಪಾಂಡೆ ತಂಡಕ್ಕೆ ಗೆಲುವು ತಂದುಕೊಟ್ಟರು. ಇದನ್ನೂ ಓದಿ: IND vs ENG Test: 11 ತಿಂಗಳ ಬಳಿಕ ಟೆಸ್ಟ್‌ನಲ್ಲಿ ಶತಕ ಸಿಡಿಸಿದ ಶುಭಮನ್ ಗಿಲ್

    ಮನೀಶ್ ಪಾಂಡೆ 121 ಎಸೆತಗಳಲ್ಲಿ 67 ರನ್ ಗಳಿಸಿ (6 ಬೌಂಡರಿ, 1 ಸಿಕ್ಸರ್) ಅಜೇಯರಾಗಿ ಉಳಿದರು. ಕಡೆಯದಾಗಿ ಕಣಕ್ಕಿಳಿದ ವಾಸುಕಿ ಕೌಶಿಕ್ ಎರಡು ಎಸೆತಗಳಲ್ಲಿ ಅಜೇಯ 1 ರನ್ ಗಳಿಸಿದರು. ರವಿಕುಮಾರ್ ಸಮರ್ಥ್ (35), ಅನೀಶ್ ಕೆವಿ (34), ಶ್ರೀನಿವಾಸ ಶರತ್ (23) ಹಾಗೂ ವಿಜಯಕುಮಾರ್ ವೈಶಾಖ (38) ತಂಡಕ್ಕೆ ಉತ್ತಮ ಮೊತ್ತ ನೀಡಿದರು.

    ಎರಡೂ ಇನ್ನಿಂಗ್ಸ್‌ಗಳಿಂದ ತಲಾ ಐದು ವಿಕೆಟ್ ಸೇರಿ ಪಂದ್ಯದಲ್ಲಿ ಒಟ್ಟು 10 ವಿಕೆಟ್ ಗಳಿಸಿದ ರೈಲ್ವೇಸ್ ತಂಡದ ಸ್ಪಿನ್ನರ್ ಆಕಾಶ್ ಪಾಂಡೆ ಹೋರಾಟ ಫಲಿಸಲಿಲ್ಲ. ರೈಲ್ವೇಸ್‍ನ 155 ರನ್‍ಗಳ ಗುರಿ ಬೆನ್ನಟ್ಟಿದ ಕರ್ನಾಟಕ ಮೊದಲ ಇನಿಂಗ್ಸ್‍ನಲ್ಲಿ 174 ರನ್ ಗಳಿಸಿತ್ತು. ಬಳಿಕ ವಿಜಯಕುಮಾರ್ ವೈಶಾಖ (67ಕ್ಕೆ 5 ವಿಕೆಟ್) ದಾಳಿಗೆ ತತ್ತರಿಸಿದ್ದ ರೈಲ್ವೇಸ್ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ 244ಕ್ಕೆ ಆಲೌಟ್ ಆಗಿತ್ತು. ಇದನ್ನೂ ಓದಿ: ಪಬ್ಲಿಕ್‌ ಟಿವಿ ವಾರ್ಷಿಕೋತ್ಸವ – ಪಬ್ಲಿಕ್ ಹುಡುಗರು ಚಾಂಪಿಯನ್ಸ್‌

  • IPL 2023: ಡೆಲ್ಲಿಗೆ ಸತತ 5ನೇ ಸೋಲು – ತವರಿನಲ್ಲಿ RCBಗೆ 23 ರನ್‌ಗಳ ಭರ್ಜರಿ ಜಯ

    IPL 2023: ಡೆಲ್ಲಿಗೆ ಸತತ 5ನೇ ಸೋಲು – ತವರಿನಲ್ಲಿ RCBಗೆ 23 ರನ್‌ಗಳ ಭರ್ಜರಿ ಜಯ

    ಬೆಂಗಳೂರು: ವಿರಾಟ್‌ ಕೊಹ್ಲಿ (Virat Kohli) ಅರ್ಧ ಶತಕದ ಬ್ಯಾಟಿಂಗ್‌ ಹಾಗೂ ಶಿಸ್ತುಬದ್ಧ ಬೌಲಿಂಗ್‌ ದಾಳಿ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 23 ರನ್‌ ಭರ್ಜರಿ ಜಯ ಸಾಧಿಸಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) 2023ರ ಐಪಿಎಲ್‌ನಲ್ಲಿ ಸತತ 5ನೇ ಸೋಲು ಎದುರಿಸಿ ತೀವ್ರ ಮುಖಭಂಗ ಅನುಭವಿಸಿದೆ.

    ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ (Faf du Plessis) ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ವಿಕೆಟ್‌ ಕಳೆದುಕೊಂಡ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಉತ್ತಮ ರನ್‌ ಕಲೆಹಾಕಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು. 175 ರನ್‌ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 151 ರನ್‌ಗಳಿಸಿ ಸತತ 5ನೇ ಸೋಲು ಕಂಡಿತು.

    ಚೇಸಿಂಗ್‌ ಆರಂಭಿಸುತ್ತಿದ್ದಂತೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಅಗ್ರಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳು ಆರ್‌ಸಿಬಿ ಬೌಲರ್‌ಗಳ ದಾಳಿಗೆ ತರಗೆಲೆಗಳಂತೆ ಉದುರಿದರು. ಪೃಥ್ವಿ ಶಾ, ಮಿಚೆಲ್‌ ಮಾರ್ಷ್‌ ಶೂನ್ಯಕ್ಕೆ ಔಟಾದರೆ, ಯಶ್‌ ಧುಲ್‌ ಕೇವಲ 1 ರನ್‌ ಗಳಿಸಿ ಪೆವಿಲಿಯನ್‌ ಸೇರಿಕೊಂಡರು. ನಾಯಕ ಡೇವಿಡ್‌ ವಾರ್ನರ್‌ (David Warner) ಸಹ 13 ಎಸೆತಗಳಲ್ಲಿ 19 ರನ್‌ ಗಳಿಸಿ ಸಿಂಪಲ್‌ ಕ್ಯಾಚ್‌ ನೀಡಿ ವಿಕೆಟ್‌ ಒಪ್ಪಿಸಿದರು. ಇದರಿಂದ ತಂಡ ಸೋಲುವುದು ಬಹುತೇಕ ಖಚಿತವಾಯಿತು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಮನಿಷ್‌ ಪಾಂಡೆ (Manish Pandey) 38 ಎಸೆತಗಳಲ್ಲಿ 50 ರನ್‌ (5 ಬೌಂಡರಿ, 1 ಸಿಕ್ಸರ್‌) ಗಳಿಸಿ ಏಕಾಂಗಿ ಹೋರಾಟ ನಡೆಸಿದರೂ ಪ್ರಯೋಜನವಾಗಲಿಲ್ಲ.

    ನಂತರ ಕಣಕ್ಕಿಳಿದ ಅಕ್ಷರ್‌ ಪಟೇಲ್‌ (Axar Pate) 21 ರನ್‌, ಅಮನ್‌ ಹಕೀಮ್‌ ಖಾನ್‌ 18 ರನ್‌ ಹಾಗೂ ಅಭಿಷೇಕ್ ಪೊರೆಲ್ ಕೇವಲ 5ರನ್‌ ಗಳಿಸಿದ್ದು ಬಿಟ್ಟರೇ ಉಳಿದ ಯಾರೊಬ್ಬರು ಕ್ರೀಸ್‌ನಲ್ಲಿ ಹೆಚ್ಚುಹೊತ್ತು ಉಳಿಯಲಿಲ್ಲ. ಕೊನೆಯಲ್ಲಿ ಅನ್ರಿಚ್ ನಾರ್ಟ್ಜೆ 23 ರನ್‌ ಹಾಗೂ ಕುಲ್‌ದೀಪ್‌ ಯಾದವ್‌ 7 ರನ್‌ ಗಳಿಸಿ ಅಜೇಯರಾಗುಳಿದರು.

    ಆರ್‌ಸಿಬಿ ಪರ ಮಿಂಚಿನ ಬೌಲಿಂಗ್‌ ದಾಳಿ ನಡೆಸಿದ ವಿಜಯಕುಮಾರ್ ವೈಶಾಕ್ ಭರ್ಜರಿ 4 ಓವರ್‌ಗಳಲ್ಲಿ 20 ರನ್‌ ನೀಡಿ 3 ವಿಕೆಟ್‌ ಕಿತ್ತರೆ, ಮೊಹಮ್ಮದ್‌ ಸಿರಾಜ್‌ 2 ವಿಕೆಟ್‌ ಕಿತ್ತರೆ, ವೇಯ್ನ್ ಪಾರ್ನೆಲ್, ವಾನಿಂದು ಹಸರಂಗ (Wanindu Hasaranga) ಹಾಗೂ ಹರ್ಷಲ್‌ ಪಟೇಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್‌ ಕೊಹ್ಲಿ ಮತ್ತು ಫಾಫ್‌ ಡು ಪ್ಲೆಸಿಸ್‌ ಆರಂಭದಲ್ಲಿ ಆಕ್ರಮಣಕಾರಿ ಬ್ಯಾಟಿಂಗ್‌ ನಡೆಸಿದರು. ಮೊದಲ ವಿಕೆಟ್‌ ಪತನಕ್ಕೆ ಈ ಜೋಡಿ 4.4 ಓವರ್‌ಗಳಲ್ಲಿ 42 ರನ್‌ ಕಲೆಹಾಕಿತ್ತು. ಈ ವೇಳೆ 16 ಎಸೆತಗಳಲ್ಲಿ 22 ರನ್ (3 ಬೌಂಡರಿ, 1 ಸಿಕ್ಸರ್) ಗಳಿಸಿದ್ದ ನಾಯಕ ಡುಪ್ಲೆಸಿಸ್ ವಿಕೆಟ್ ಒಪ್ಪಿಸಿದರು.

    ನಂತರ ಬಂದ ಮಹಿಪಾಲ್ ಲೊಮ್ರೊರ್ 18 ಎಸೆತಗಳಲ್ಲಿ 2 ಭರ್ಜರಿ ಸಿಕ್ಸರ್ ಸಮೇತ 26 ರನ್ ಗಳಿಸಿ ಔಟಾದರು. ಈ ಬೆನ್ನಲ್ಲೇ ವಿರಾಟ್‌ 34 ಎಸೆತಗಳಲ್ಲಿ 50 ರನ್ (6 ಬೌಂಡರಿ, 1 ಸಿಕ್ಸರ್) ಗಳಿಸಿ, ಕ್ಯಾಚ್‌ ನೀಡಿ ಪೆವಿಲಿಯನ್‌ ಸೇರಿಕೊಂಡರು.

    ವಿರಾಟ್ ಕೊಹ್ಲಿ ಬಳಿಕ ಕ್ರೀಸ್‌ಗೆ ಬಂದ ಗ್ಲೆನ್ ಮ್ಯಾಕ್ಸ್‌ವೆಲ್ ಆರಂಭದಿಂದಲೇ ಅಬ್ಬರಿಸಲು ಶುರು ಮಾಡಿದ್ರು. 13 ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್‌ನೊಂದಿಗೆ 24 ರನ್ ಬಾರಿಸಿದ್ದರು. ತಾವು ಎದುರಿಸಿದ 14ನೇ ಎಸೆತದಲ್ಲಿ ಮತ್ತೊಂದು ಸಿಕ್ಸರ್‌ ಸಿಡಿಸುವ ಬರದಲ್ಲಿ ಕ್ಯಾಚ್‌ ನೀಡಿ ಔಟಾದರು. ಇದರಿಂದ 200 ರನ್‌ಗಳ ಗಡಿ ತಲುಪುವ ನಿರೀಕ್ಷೆಯಲ್ಲಿದ್ದ ಆರ್‌ಸಿಬಿ ತಂಡಕ್ಕೆ ನಿರಾಸೆಯಾಯಿತು.

    ನಂತರ ಕಣಕ್ಕಿಳಿದವರಲ್ಲಿ ಹರ್ಷಲ್‌ ಪಟೇಲ್‌ 6ರನ್‌, ಅನುಜ್ ರಾವತ್ 15 ರನ್‌ ಗಳಿಸಿದರೆ, ಶಹಬಾಜ್‌ ಅಹ್ಮದ್‌ 20 ರನ್‌ ಗಳಿಸಿ ಅಜೇಯರಾಗುಳಿದರು. ಮತ್ತೊಮ್ಮೆ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ದಿನೇಶ್‌ ಕಾರ್ತಿಕ್‌ ಒಂದೇ ಎಸೆತದಲ್ಲಿ ಡಕೌಟ್‌ ಆದರು.

    ಡೆಲ್ಲಿ ಕ್ಯಾಪಿಟಲ್ಸ್‌ ಪರ ಮಿಚೆಲ್ ಮಾರ್ಷ್ 4 ಓವರ್‌ಗಳಲ್ಲಿ 18 ರನ್ ನೀಡಿ 2 ವಿಕೆಟ್ ಪಡೆದರೆ, ಕುಲ್‌ದೀಪ್ ಯಾದವ್ 4 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್, ಅಕ್ಷರ್ ಪಟೇಲ್ ಮತ್ತು ಲಲಿತ್ ಯಾದವ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.

  • ರಣಜಿಯಲ್ಲಿ ಬ್ಯಾಟಿಂಗ್ ಅಬ್ಬರ- ಮನೀಷ್ ದ್ವಿಶತಕ ಮಿಂಚಿಂಗ್, ಸೂರ್ಯನಿಗೆ ಶತಕ ಮಿಸ್ಸಿಂಗ್

    ರಣಜಿಯಲ್ಲಿ ಬ್ಯಾಟಿಂಗ್ ಅಬ್ಬರ- ಮನೀಷ್ ದ್ವಿಶತಕ ಮಿಂಚಿಂಗ್, ಸೂರ್ಯನಿಗೆ ಶತಕ ಮಿಸ್ಸಿಂಗ್

    ಮುಂಬೈ/ಪಣಜಿ: ಟೀಂ ಇಂಡಿಯಾದ ಆಟಗಾರ ಮನೀಷ್ ಪಾಂಡೆ (Manish Pandey) ತನ್ನ ಕೆರಿಯರ್‌ನ 100ನೇ ಪ್ರಥಮ ದರ್ಜೆ ಪಂದ್ಯದಲ್ಲಿ ಭರ್ಜರಿ ದ್ವಿಶತಕ ಬಾರಿಸಿ ಮಿಂಚಿದ್ದಾರೆ. ಸೌರಾಷ್ಟ್ರ ವಿರುದ್ಧ ಇನ್ನಿಂಗ್ಸ್‌ನಲ್ಲಿರುವ ಸೂರ್ಯಕುಮಾರ್ ಯಾದವ್ (Suryakumar Yadav) ಟೀಂ ಇಂಡಿಯಾ ಟಿ20 ಉಪನಾಯಕನಾದ ಮೊದಲ ಪಂದ್ಯದಲ್ಲಿ ಶತಕ ವಂಚಿತರಾಗಿದ್ದಾರೆ.

    ಗೋವಾ ವಿರುದ್ಧದ ರಣಜಿ ಟ್ರೋಫಿ (Ranji Trophy) ಕ್ರಿಕೆಟ್ (Cricket) ಪಂದ್ಯದ 2ನೇ ದಿನದಾಟದಲ್ಲಿ ಅಬ್ಬರಿಸಿದ ಮನೀಷ್ ಪಾಂಡೆ ಔಟಾಗದೆ 208 ರನ್ ಚಚ್ಚಿದ್ದಾರೆ. 14 ಬೌಂಡರಿ ಹಾಗೂ 11 ಸಿಕ್ಸರ್‌ಗಳು ಇದರಲ್ಲಿ ಸೇರಿವೆ. ಈ ಮೂಲಕ ಕರ್ನಾಟಕ ತಂಡವನ್ನು ಬೃಹತ್ ಮೊತ್ತಕ್ಕೆ ಕೊಂಡೊಯ್ದಿದ್ದಾರೆ. ಇನ್ನೂ ಕನ್ನಡಿಗ ಮಯಾಂಕ್ ಅಗರ್ವಾಲ್ ಬಳಗ 7 ವಿಕೆಟ್ ನಷ್ಟಕ್ಕೆ 603 ರನ್ ಗಳಿಸಿ ಮೊದಲ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಬುಧವಾರದ ಆಟದ ಅಂತ್ಯಕ್ಕೆ ಗೋವಾ ಮೊದಲ ಇನಿಂಗ್ಸ್‌ನಲ್ಲಿ  3 ವಿಕೆಟ್‌ಗೆ 146 ರನ್ ಗಳಿಸಿ, 457 ರನ್‌ಗಳ ಬೃಹತ್ ಹಿನ್ನಡೆ ಕಾಯ್ದುಕೊಂಡಿದೆ.

    ಕರ್ನಾಟಕ ತಂಡ (Team India) 3 ವಿಕೆಟ್‌ಗೆ 294 ರನ್‌ಗಳಿಂದ 2ನೇ ದಿನದಾಟ ಮುಂದುವರಿಸಿತ್ತು. ಮೊದಲ ದಿನ ಎಂಟು ರನ್‌ಗಳೊಂದಿಗೆ ಅಜೇಯರಾಗುಳಿದಿದ್ದ ಪಾಂಡೆ, 2ನೇ ದಿನ ಭರ್ತಿ 200 ರನ್ ಕಲೆಹಾಕಿದರು. ಇದನ್ನೂ ಓದಿ: ಟಿ20ಗೆ ಪಾಂಡ್ಯ ನಾಯಕ, ಸೂರ್ಯ ಉಪನಾಯಕ – ಟೀಂ ಇಂಡಿಯಾದಲ್ಲಿ ಪಂತ್‍ಗಿಲ್ಲ ಸ್ಥಾನ

    ಇನ್ನೊಂದೆಡೆ ಟೀಂ ಇಂಡಿಯಾದ (Team India) T20 ಉಪನಾಯಕನಾಗಿ ಕಣಕ್ಕಿಳಿರುವ ಸೂರ್ಯಕುಮಾರ್ ಯಾದವ್ ಸದ್ಯ ರಣಜಿ ಟ್ರೋಫಿಯಲ್ಲಿ ಅಬ್ಬರಿಸುತ್ತಿದ್ದಾರೆ. ರಣಜಿಯಲ್ಲೂ ಅದ್ಭುತ ಫಾರ್ಮ್ ಕಾಯ್ದುಕೊಂಡಿರುವ ಸೂರ್ಯಕುಮಾರ್ ಸೌರಾಷ್ಟ್ರ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ 107 ಎಸೆತಗಳಿಗೆ 95 ರನ್‌ಗಳಿಸಿ ಔಟಾಗುವ ಮೂಲಕ ಶತಕ ವಂಚಿತರಾಗಿದ್ದಾರೆ. ಇದರಲ್ಲಿ 14 ಬೌಂಡರಿ ಹಾಗೂ 1 ಸಿಕ್ಸರ್ ಸೇರಿವೆ. ಇದನ್ನೂ ಓದಿ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿ ಹಲವರಿಗೆ T20 ಯಿಂದ ಬ್ರೇಕ್?

    ಇಂದು ಸೌರಾಷ್ಟ್ರ ವಿರುದ್ಧ ಮುಂಬೈ 2ನೇ ಇನ್ನಿಂಗ್ಸ್ ಮುಂದುವರಿಸಿದ್ದು, 16 ಓವರ್‌ಗಳಲ್ಲಿ 70 ರನ್‌ಗಳಿಗೆ ಒಂದು ವಿಕೆಟ್ ಕಳೆದುಕೊಂಡಿದೆ. ಪೃಥ್ವಿ ಶಾ 41 ರನ್ (59 ಎಸೆತ, 6 ಬೌಂಡರಿ) ಗಳಿಸಿದ್ರೆ, ಸೂರ್ಯಕುಮಾರ್ 20 ರನ್ (25 ಎಸೆತ, 3 ಬೌಂಡರಿ) ಗಳಿಸಿ (1 ಗಂಟೆ ಸಮಯಕ್ಕೆ) ಕ್ರೀಸ್‌ನಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮನೀಶ್ ಪಾಂಡೆ, ಶಂಕರ್ ದಾಖಲೆಯ ಜೊತೆಯಾಟ – ಹೈದರಾಬಾದ್‍ಗೆ 8 ವಿಕೆಟ್‍ಗಳ ಭರ್ಜರಿ ಜಯ

    ಮನೀಶ್ ಪಾಂಡೆ, ಶಂಕರ್ ದಾಖಲೆಯ ಜೊತೆಯಾಟ – ಹೈದರಾಬಾದ್‍ಗೆ 8 ವಿಕೆಟ್‍ಗಳ ಭರ್ಜರಿ ಜಯ

    – ಬರೋಬ್ಬರಿ 8 ಸಿಕ್ಸರ್ ಸಿಡಿಸಿ ಮಿಂಚಿದ ಕನ್ನಡಿಗ ಪಾಂಡೆ

    ದುಬೈ: ಇಂದು ದುಬೈ ಮೈದಾನದಲ್ಲಿ ನಡೆದ ಐಪಿಎಲ್-2020ಯ 40ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್‍ರೈಸರ್ಸ್ ಹೈದರಾಬಾದ್ ತಂಡ ಎಂಟು ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಎಂಟು ಅಂಕಗಳೊಂದಿಗೆ ಐದನೇ ಸ್ಥಾನಕ್ಕೆ ಜಿಗಿದಿದೆ.

    ಇಂದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ಸನ್‍ರೈಸರ್ಸ್ ಹೈದರಾಬಾದ್ ಬೌಲಿಂಗ್ ದಾಳಿಗೆ ತತ್ತರಿಸಿ ಹೋಯ್ತು. ಈ ಮೂಲಕ ನಿಗದಿತ 20 ಓವರಿನಲ್ಲಿ ಆರು ವಿಕೆಟ್ ಕಳೆದುಕೊಂಡು ಕೇವಲ 154 ರನ್ ಸೇರಿಸಿತು. ಈ ಗುರಿಯನ್ನು ಬೆನ್ನಟ್ಟಿದ ಹೈದರಾಬಾದ್ ತಂಡ ಮೊದಲ ಎರಡು ವಿಕೆಟ್ ಬೇಗನೇ ಕಳೆದುಕೊಂಡರು ಮೂರನೇ ವಿಕೆಟ್‍ಗೆ ಭರ್ಜರಿ ಜೊತೆಯಾಟವಾಡಿದ ಪಾಂಡೆ ಮತ್ತು ಶಂಕರ್ 140 ರನ್‍ಗಳನ್ನು ಹೊಡೆದು ರೈಸರ್ಸ್ ಗೆ 8 ವಿಕೆಟ್‍ಗಳ ಜಯ ತಂದಿತ್ತರು.

    ಪಾಂಡೆ, ಶಂಕರ್ ದಾಖಲೆಯ ಜೊತೆಯಾಟ
    ನಾಯಕ ಡೇವಿಡ್ ವಾರ್ನರ್ ಮತ್ತು ಜಾನಿ ಬೈರ್‍ಸ್ಟೋವ್ ಅವರು ಬೇಗನೇ ಔಟ್ ಆದರು. ಆದರೆ ಮೂರನೇ ವಿಕೆಟ್‍ಗೆ ಜೊತೆಯಾದ ಮನೀಶ್ ಪಾಂಡೆ ಮತ್ತು ವಿಜಯ್ ಶಂಕರ್ ಅವರು 140 ರನ್‍ಗಳ ಜೊತೆಯಾಟವಾಡಿ ದಾಖಲೆ ಬರೆದರು. ಈ ಮೂಲಕ ಇಬ್ಬರು ಭಾರತ ಆಟಗಾರೇ ಸೇರಿ ಸನ್‍ರೈಸರ್ಸ್ ಹೈದರಾಬಾದ್ ತಂಡಕ್ಕಾಗಿ ಶತಕ ಜೊತೆಯಾಟವಾಡಿದ ಮೊದಲ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

    2013ರಲ್ಲಿ ಐಪಿಎಲ್‍ಗೆ ಪಾದಾರ್ಪಾಣೆ ಮಾಡಿದ ಸನ್‍ರೈಸರ್ಸ್ ಹೈದರಾಬಾದ್ ತಂಡದ ಆಟಗಾರರು ಇದುವರೆಗೂ 24 ಬಾರಿ ಶತಕ ಜೊತೆಯಾಟವಾಡಿದ್ದಾರೆ. ಆದರೆ ಇದರಲ್ಲಿ 23 ಬಾರಿಯೂ ವಿದೇಶಿ ಆಟಗಾರರು ಪಾಲುದಾರಿಕೆ ಹೊಂದಿದ್ದಾರೆ. ಆದರೆ ಏಳು ವರ್ಷದಲ್ಲಿ ಇದೇ ಮೊದಲ ಬಾರಿಗೆ ಯಾವುದೇ ವಿದೇಶಿ ಆಟಗಾರನ ಪಾಲುದಾರಿಕೆ ಇಲ್ಲದೇ ಮನೀಶ್ ಪಾಂಡೆ ಮತ್ತು ರವಿ ಶಂಕರ್ ಶತಕ ಜೊತೆಯಾಟವಾಡಿ ದಾಖಲೆ ಬರೆದಿದ್ದಾರೆ.

    155 ರನ್ ಗುರಿಯನ್ನು ಬೆನ್ನಟ್ಟಿದ ಸನ್‍ರೈಸರ್ಸ್ ಹೈದರಾಬಾದ್ ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ತಂಡದ ವೇಗಿ ಜೋಫ್ರಾ ಆರ್ಚರ್ ಆರಂಭಿಕ ಆಘಾತ ನೀಡಿದರು. ಈ ಮೂಲಕ ಇನ್ನಿಂಗ್ಸ್ ನ ನಾಲ್ಕನೇ ಬಾಲಿನಲ್ಲೇ ನಾಯಕ ಡೇವಿಡ್ ವಾರ್ನರ್ ಅವರನ್ನು ಔಟ್ ಮಾಡಿದರು. ನಂತರ ಜೋಫ್ರಾ ಆರ್ಚರ್ ಅವರೇ 2ನೇ ಓವರ್ ನಾಲ್ಕನೇ ಬಾಲಿನಲ್ಲಿ 10 ರನ್ ಗಳಿಸಿದ್ದ ಜಾನಿ ಬೈರ್‍ಸ್ಟೋವ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು.

    ನಂತರ ಅಬ್ಬರಿಸಿದ ಕನ್ನಡಿಗ ಮನೀಶ್ ಪಾಂಡೆ ಅವರು, ವಿಜಯ್ ಶಂಕರ್ ಅವರ ಜೊತೆಗೂಡಿ ಸಿಕ್ಸರ್ ಬೌಂಡರಿಗಳ ಸುರಿಮಳೆಗೈದರು. ಈ ಮೂಲಕ ಪವರ್ ಪ್ಲೇ ಅಂತ್ಯದ ವೇಳೆಗೆ ಹೈದರಾಬಾದ್ ತಂಡ ಎರಡು ವಿಕೆಟ್ ಕಳೆದುಕೊಂಡು ಬರೋಬ್ಬರಿ 58 ರನ್ ಪೇರಿಸಿತು. ಜೊತೆಗೆ ಪಾಂಡೆ ಮತ್ತು ವಿಜಯ್ ಶಂಕರ್ ಜೋಡಿ ಕೇವಲ 30 ಬಾಲಿನಲ್ಲಿ ಅರ್ಧಶತಕದ ಜೊತೆಯಾಟವಾಡಿ ಆರಂಭದಲ್ಲಿ ಕುಸಿದಿದ್ದ ತಂಡಕ್ಕೆ ನೆರವಾದರು.

    ಇದರ ಜೊತೆಗೆ ಆರಂಭದಿಂದಲೂ ಉತ್ತಮವಾಗಿ ಆಡಿಕೊಂಡು ಬಂದ ಮನೀಶ್ ಪಾಂಡೆ ಅವರು ಅರ್ಧಶತಕ ಸಿಡಿಸಿ ಮಿಂಚಿದರು. ಜೊತೆಗೆ ಈ ಜೋಡಿ 71 ಬಾಲಿಗೆ ಶತಕದ ಜೊತೆಯಾಟವಾಡಿತು. ಜೊತೆಗೆ 51 ಬಾಲಿಗೆ ವಿಜಯ್ ಶಂಕರ್ ಅವರು ಅರ್ಧಶತಕ ಸಿಡಿಸಿದರು. ಕೊನೆಯವರೆಗೂ ಔಟ್ ಆಗದೇ ಉಳಿದ ಮನೀಶ್ ಪಾಂಡೆ 47 ಬಾಲಿನಲ್ಲಿ ಬರೋಬ್ಬರಿ 8 ಸಿಕ್ಸರ್ ಮತ್ತು 4 ಫೋರ್ ಸಮೇತ 83 ರನ್ ಸಿಡಿಸಿ ಮಿಂಚಿದರು.

    ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ರಾಜಸ್ಥಾನ್ ರಾಯಲ್ಸ್ ತಂಡ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಕುಂಟುತ್ತಾ ಸಾಗಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಅವರು 26 ಬಾಲಿಗೆ 36 ರನ್ ಸಿಡಿಸಿ ಕೊಂಚ ವೇಗ ನೀಡಿದರು. ಕೊನೆಯಲ್ಲಿ ರಿಯಾನ್ ಪರಾಗ್ ಮತ್ತು ಜೋಫ್ರಾ ಆರ್ಚರ್ ಅವರು ಸ್ಫೋಟಕ ಬ್ಯಾಟಿಂಗ್ ಆಡಿದ ಕಾರಣ ರಾಜಸ್ಥಾನ್ ತಂಡ 20 ಓವರಿನಲ್ಲಿ ಆರು ವಿಕೆಟ್ ಕಳೆದುಕೊಂಡು 154 ರನ್ ಸಿಡಿಸಿತ್ತು.

  • ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಮನೀಶ್ ಪಾಂಡೆ ದಂಪತಿ

    ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಮನೀಶ್ ಪಾಂಡೆ ದಂಪತಿ

    ಮಂಗಳೂರು: ಭಾರತ ಕ್ರಿಕೆಟ್ ತಂಡದ ಆಟಗಾರ ಹಾಗೂ ಕರ್ನಾಟಕ ಏಕದಿನ ತಂಡದ ನಾಯಕ ಮನೀಶ್ ಪಾಂಡೆ ತಮ್ಮ ಪತ್ನಿ ಜೊತೆ ತುಳುನಾಡಿನ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಸ್ಥಾನಕ್ಕೆ ಭೇಟಿ ನೀಡಿದ್ದಾರೆ.

    ಮನೀಶ್ ಪಾಂಡೆ ತಮ್ಮ ಪತ್ನಿ ಆಶ್ರಿತಾ ಶೆಟ್ಟಿ ಜೊತೆ ಇಂದು ಶ್ರೀಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಕಳೆದ ಡಿಸೆಂಬರ್ ತಿಂಗಳಿನಲ್ಲಿ ಮನೀಶ್ ಪಾಂಡೆ ವಿವಾಹ ತುಳುನಾಡಿನ ಬೆಡಗಿ, ತಮಿಳು ಹಾಗೂ ತುಳು ನಟಿ ಆಶ್ರಿತಾ ಶೆಟ್ಟಿ ಜೊತೆ ಮುಂಬೈಯಲ್ಲಿ ನಡೆದಿತ್ತು. ವಿವಾಹದ ಬಳಿಕ ದಂಪತಿ ಮೊದಲ ಬಾರಿಗೆ ಕುಕ್ಕೆ ಕ್ಷೇತ್ರಕ್ಕೆ ಬಂದಿದ್ದಾರೆ. ಇದನ್ನೂ ಓದಿ: ರಾತ್ರಿ ಟ್ರೋಫಿ ಗೆದ್ದು ಮರುದಿನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ

    ಮಾರ್ಚ್ 6 ರಂದು ಕುಕ್ಕೆ ಸುಬ್ರಹಣ್ಯಕ್ಕೆ ತಮ್ಮ ಗೆಳೆಯನ ಜೊತೆ ಆಗಮಿಸಿದ ದಂಪತಿ ಇಲ್ಲಿನ ಖಾಸಗಿ ಹೋಟೆಲ್ ಒಂದರಲ್ಲಿ ತಂಗಿದ್ದರು. ಇಂದು ಬೆಳಿಗ್ಗೆ ದಂಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ನಾಗದೇವರಿಗೆ ವಿಶೇಷ ಪೂಜೆಯಾದ ಆಶ್ಲೇಷ ಪೂಜೆಯನ್ನು ನೆರೆವೇರಿಸಿದರು. ಬಳಿಕ ಆದಿ ಸುಬ್ರಹ್ಮಣ್ಯ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ದೇವರ ದರ್ಶನ ಪಡೆದರು.

  • ಜಮ್ಮು-ಕಾಶ್ಮೀರ ವಿರುದ್ಧ ಭರ್ಜರಿ ಬ್ಯಾಟಿಂಗ್- ಸೆಮಿಯತ್ತ ಕರ್ನಾಟಕ?

    ಜಮ್ಮು-ಕಾಶ್ಮೀರ ವಿರುದ್ಧ ಭರ್ಜರಿ ಬ್ಯಾಟಿಂಗ್- ಸೆಮಿಯತ್ತ ಕರ್ನಾಟಕ?

    ಜಮ್ಮು: ಆರ್.ಸಿದ್ದಾರ್ಥ್, ಮನೀಶ್ ಪಾಂಡೆ ಹಾಗೂ ದೇವದತ್ತ ಪಡಿಕ್ಕಲ್ ಉತ್ತಮ ಬ್ಯಾಟಿಂಗ್‍ನಿಂದ ಕರ್ನಾಟಕ ತಂಡವು ಸೆಮಿ ಫೈನಲ್ ಪ್ರವೇಶದ ಭರವಸೆಯನ್ನು ಮೂಡಿಸಿದೆ.

    ರಣಜಿಯ ಟ್ರೋಫಿ 2019-20ರ ಭಾಗವಾಗಿ ಜಮ್ಮುವಿನ ಗಾಂಧಿ ಮೆಮೊರಿಯಲ್ ಸರ್ಕಾರಿ ಸೈನ್ಸ್ ಕಾಲೇಜಿನ ಮೈದಾನದಲ್ಲಿ ನಡೆಯುತ್ತಿರುವ ಜಮ್ಮು-ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ಉತ್ತಮ ಮುನ್ನಡೆ ಸಾಧಿಸಿದೆ.

    ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಕರ್ನಾಟಕ ತಂಡವು 69.1 ಓವರಿಗೆ 206 ರನ್ ಗಳಿಸಿ ಸರ್ವಪತನ ಕಂಡಿತ್ತು. ಈ ವೇಳೆ ಕರ್ನಾಟಕದ ಕೆ.ವಿ.ಸಿದ್ದಾರ್ಥ್ 76 ರನ್ (189 ಎಸೆತ, 9 ಬೌಂಡರಿ), ಮನೀಶ್ ಪಾಂಡೆ 37 ರನ್ (26 ಎಸೆತ, 7 ಬೌಂಡರಿ) ಗಳಿಸಿದ್ದರು.

    ಬಳಿಕ ಬ್ಯಾಟಿಂಗ್ ಆರಂಭಿಸಿದ ಜಮ್ಮು-ಕಾಶ್ಮೀರ ತಂಡವು ಆರಂಭದಲ್ಲೇ ಆಘಾತಕ್ಕೆ ತುತ್ತಾಗಿತ್ತು. ಪ್ರಮುಖ ಬ್ಯಾಟ್ಸ್‌ಮನ್‌ ಸೂರ್ಯಾಂಶ್ ರೈನಾ 12 ರನ್‍ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ತೆರಳಿದರು. ಬಳಿಕ ಬಂದ ಬ್ಯಾಟ್ಸ್‌ಮನ್‌ಗಳು ಬಹುಬೇಗ ವಿಕೆಟ್ ಒಪ್ಪಿಸಿ ಪೆವಿಲಿಯನ್ ಕಡೆಗೆ ಪರೇಡ್ ನಡೆಸಿದರು. ಪರಿಣಾಮ ಜಮ್ಮು-ಕಾಶ್ಮೀರ 62.4 ಓವರ್‌ಗಳಲ್ಲಿ 192 ಆಲೌಟ್ ಆಯಿತು. ಈ ಮೂಲಕ ಕರ್ನಾಟಕ ತಂಡವು ಮೊದಲ ಇನ್ನಿಂಗ್ಸ್ ನಲ್ಲಿ 14 ರನ್ ಮುನ್ನಡೆ ಸಾಧಿಸಿತ್ತು.

    ಈ ಸಮಯದಲ್ಲಿ ಜಮ್ಮು-ಕಾಶ್ಮೀರದ ಪರ ಶುಭಂ ಖಜುರಿಯಾ 62 ರನ್ (155 ಎಸೆತ, 10 ಬೌಂಡರಿ) ಹಾಗೂ ಅಬ್ದುಲ್ ಸಾಮದ್ 43 ರನ್ (50 ಎಸೆತ, 6 ಬೌಂಡರಿ, 1 ಸಿಕ್ಸ್) ಗಳಿಸಿದ್ದರು. ಕರ್ನಾಟಕದ ಪರ ಪ್ರಸಿದ್ಧ ಕೃಷ್ಣ 4 ವಿಕೆಟ್ ಪಡೆದು ಮಿಂಚಿದರೆ, ರೋನಿತ್ ಮೊರೆ ಹಾಗೂ ಸುಚಿತ್ ಜಿ ತಲಾ ಎರಡು ವಿಕೆಟ್ ಕಿತ್ತಿದ್ದರು. ಉಳಿದಂತೆ ಗೌತಮ್ ಕೆ ಒಂದು ವಿಕೆಟ್ ಪಡೆದರೆ, ಅಭಿಮನ್ಯು ಮಿಥುನ್ ಯಾವುದೇ ವಿಕೆಟ್ ಪಡೆಯದಿದ್ದರೂ ಕನಿಷ್ಠ 25 ರನ್ ನೀಡಿದ್ದರು.

    ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ ಉತ್ತಮ ಆರಂಭ ನೀಡಿತು. ಆರ್.ಸಮರ್ಥ್ ಹಾಗೂ ದೇವದತ್ತ ಪಡಿಕ್ಕಲ್ ಜೋಡಿಯು ಮೊದಲ ವಿಕೆಟ್‍ಗೆ 53 ರನ್‍ಗಳ ಕೊಡುಗೆ ನೀಡಿತು. ದೇವದತ್ತ 34 ರನ್ (33 ಎಸೆತ, 8 ಬೌಂಡರಿ) ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ ಮೈದಾನಕ್ಕಿಳಿ ನಾಯಕ ಕರುಣ್ ನಾಯರ್ 15 ರನ್ (33 ಎಸೆತ, 2 ಬೌಂಡರಿ) ದಾಖಲಿಸಿ ವಿಕೆಟ್ ಕಳೆದುಕೊಂಡರು. ಈ ಬೆನ್ನಲ್ಲೇ ಮೈದಾಕ್ಕಿಳಿದ ಸಿದ್ದಾರ್ಥ್ ಆರಂಭಿಕ ಬ್ಯಾಟ್ಸ್‌ಮನ್ ಸಮರ್ಥ್ ಜೊತೆ ಸೇರಿ ಉತ್ತಮ ಇನ್ನಿಂಗ್ಸ್ ಕಟ್ಟಿದರು. ಈ ಜೋಡಿಯು ಮೂರನೇ ವಿಕೆಟ್‍ಗೆ 98 ರನ್ ಕೊಡುಗೆ ನೀಡಿತು. ಸಮರ್ಥ್ 74 ರನ್ (133 ಎಸೆತ, 7 ಬೌಂಡರಿ) ಗಳಿಸಿ ವಿಕೆಟ್ ಒಪ್ಪಿಸಿದರು.

    5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಮನೀಶ್ ಪಾಂಡೆ 35 ರನ್ (35 ಎಸೆತ, 5 ಬೌಂಡರಿ, 1 ಸಿಕ್ಸ್) ಗಳಿಸಿ ವಿಕೆಟ್ ಒಪ್ಪಿಸಿದರು. 4ನೇ ದಿನದ ಮುಕ್ತಾಯದ ವೇಳೆಗೆ ಕರ್ನಾಟಕ ತಣಡವು 4 ವಿಕೆಟ್ ನಷ್ಟಕ್ಕೆ 245 ರನ್ ಪೇರಿಸಿದೆ. ಸಿದ್ದಾರ್ಥ್ 75 ರನ್ (136 ಎಸೆತ, 6 ಬೌಂಡರಿ, 2 ಸಿಕ್ಸರ್) ಹಾಗೂ ಎಸ್.ಶರತ್ 9 ರನ್ (33 ಎಸೆತ) ಗಳಿಸಿ ಅಜೇಯರಾಗಿ ಉಳಿದಿದ್ದಾರೆ.

    ಕರ್ನಾಟಕ ಈಗ 259 ರನ್ ಗಳ ಭರ್ಜರಿ ಮುನ್ನಡೆ ಸಾಧಿಸಿದೆ. ಮೊದಲ ಎರಡು ದಿನ ಆಟ ನಡೆಯದ ಕಾರಣ ಮತ್ತೆ ಮೂರು ದಿನ ಪಂದ್ಯ ನಡೆಯದೇ ಇದ್ದಲ್ಲಿ ಲೀಗ್ ಪಂದ್ಯ ಅಂಕದ ಆಧಾರದಲ್ಲಿ ಜಮ್ಮು ಕಾಶ್ಮೀರ ಸೆಮಿಫೈನಲ್ ಸುಲಭವಾಗಿ ಪ್ರವೇಶಿಸುತಿತ್ತು. ಆದರೆ ಈಗ ಕರ್ನಾಟಕ ಮೊದಲ ಇನ್ನಿಂಗ್ಸ್ ನಲ್ಲಿ 14 ರನ್ ಗಳ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಸೆಮಿ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ. ಜಮ್ಮು ಕಾಶ್ಮೀರ ಸೆಮಿ ಪ್ರವೇಶಿಸಬೇಕಾದರೆ ಸೋಮವಾರ ಕರ್ನಾಟಕವನ್ನು ಬೇಗನೇ ಆಲ್ ಔಟ್ ಮಾಡಿ ಚೇಸಿಂಗ್ ಮಾಡಿ ಜಯಗಳಿಸುವ ಅನಿವಾರ್ಯತೆ ಎದುರಾಗಿದೆ.

  • ‘ಬೇಡ ಮಗಾ ಬೇಡ, ನಾರ್ಮಲ್ ಆಡು’- ಕಿವೀಸ್ ನೆಲದಲ್ಲಿ ಕನ್ನಡ ಡಿಂಡಿಮ

    ‘ಬೇಡ ಮಗಾ ಬೇಡ, ನಾರ್ಮಲ್ ಆಡು’- ಕಿವೀಸ್ ನೆಲದಲ್ಲಿ ಕನ್ನಡ ಡಿಂಡಿಮ

    – ಕನ್ನಡಿಗರ ಮನಗೆದ್ದ ರಾಹುಲ್-ಪಾಂಡೆ ಮಾತು
    – ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 5 ವಿಕೆಟ್ ಸೋಲು
    – ರಾಹುಲ್ ಶತಕ, ಚಹಲ್ ಉತ್ತಮ ಬೌಲಿಂಗ್ ವ್ಯರ್ಥ

    ಮೌಂಟ್ ಮಾಂಗನುಯಿ: ಟೀಂ ಇಂಡಿಯಾದಲ್ಲಿ ಮತ್ತೆ ಕನ್ನಡಿಗರ ಕಮಾಲ್ ಶುರುವಾಗಿದೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಕೊನೆಯ ಹಾಗೂ ಮೂರನೇ ಪಂದ್ಯದಲ್ಲಿ ಮೂವರು ಕನ್ನಡಿಗರು ಆಡುವ ಇಲೆವೆನ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದರು. ಈ ವೇಳೆ ರನ್ ಓಡುವಾಗ ಕೆ.ಎಲ್.ರಾಹುಲ್ ಹಾಗೂ ಮನೀಶ್ ಪಾಂಡೆ ಕನ್ನಡದಲ್ಲೇ ಮಾತನಾಡಿದ್ದಾರೆ.

    ಇಂದಿನ ಪಂದ್ಯದಲ್ಲಿ ಕೆ.ಎಲ್.ರಾಹುಲ್, ಮಯಾಂಕ್ ಅಗರ್ವಾಲ್ ಹಾಗೂ ಮನೀಶ್ ಪಾಂಡೆ ಆಡಿದರು. ಅದರಲ್ಲೂ ಮನೀಶ್ ಪಾಂಡೆ ಹಾಗೂ ಕೆ.ಎಲ್.ರಾಹುಲ್ ಜೋಡಿ ಮೈದಾನದಲ್ಲಿ ಕಮಾಲ್ ಮಾಡಿತು. ಭಾರತದ ಇನ್ನಿಂಗ್ಸ್ ನ 31ನೇ ಓವರಿನಲ್ಲಿ ಶ್ರೇಯಸ್ ಅಯ್ಯರ್ ವಿಕೆಟ್ ಒಪ್ಪಿಸಿದರು. ಈ ವೇಳೆ ಟೀಂ ಇಂಡಿಯಾ 162 ರನ್ ಗಳಿಸಿತ್ತು. ಬಳಿಕ ಕೆ.ಎಲ್.ರಾಹುಲ್‍ಗೆ ಮನೀಶ್ ಪಾಂಡೆ ಸಾಥ್ ನೀಡಿದರು. ಈ ಜೋಡಿ 5ನೇ ವಿಕೆಟ್‍ಗೆ 107 ರನ್‍ಗಳ ಜೊತೆಯಾಟದ ಕೊಡುಗೆ ನೀಡಿತು.

    ಇನ್ನಿಂಗ್ಸ್ 41 ಓವರಿನಲ್ಲಿ ರಾಹುಲ್, ‘ಮೆತ್ತಗೆ ಆಡಬೇಕಾ ಮಾಮ್ಸ್’ ಎಂದು ಮನೀಶ್ ಪಾಂಡೆ ಅವರನ್ನು ಪ್ರಶ್ನಿಸಿದರು. ಆಗ ಪಾಂಡೆ, ‘ಹೌದು ನಾರ್ಮಲ್ ಆಡು’ ಎಂದು ಹೇಳಿದರು. ಈ ಸಂಭಾಷಣೆ ಸ್ಟಂಪ್ ನಲ್ಲಿರುವ ಮೈಕ್ ನಲ್ಲಿ ದಾಖಲಾಗಿದೆ. ಅಷ್ಟೇ ಅಲ್ಲದೆ 45 ನೇ ಓವರಿನಲ್ಲಿ ಸ್ಟ್ರೈಕ್‍ನಲ್ಲಿದ್ದ ರಾಹುಲ್ ಎರಡು ರನ್ ಕದಿಯಲು ಮುಂದಾದರು. ಆಗ ಇಬ್ಬರು ‘ಬಾ.. ಬಾ.. ಬೇಡ ಬೇಡ’ ಎಂದು ಹೇಳಿದರು. ಬಳಿಕ ಮನೀಶ್ ಪಾಂಡೆ ಒಂಟಿ ರನ್ ಓಡಲು ಯತ್ನಿಸಿದರು. ಆದರೆ ನಾನ್ ಸ್ಟ್ರೈಕ್‍ನಲ್ಲಿದ್ದ ಕೆ.ಎಲ್ ರಾಹುಲ್ ಮನೀಶ್ ಪಾಂಡೆಗೆ ‘ಬೇಡ ಬೇಡ’ ಎಂದು ಜೋರಾಗಿ ಕೂಗಿದರು. ಪಂದ್ಯದಲ್ಲಿ ಕನ್ನಡದ ಮತು ಕೇಳಿದ ಕನ್ನಡಿಗರು ಫುಲ್ ಖುಷ್ ಆಗಿದ್ದಾರೆ.

    ಕೆ.ಎಲ್.ರಾಹುಲ್ 112 ರನ್ (113 ಎಸೆತ, 9 ಬೌಂಡರಿ ಹಾಗೂ 2 ಸಿಕ್ಸರ್) ಸಿಡಿಸಿ ವಿಕೆಟ್ ಒಪ್ಪಿಸಿದರು. ಈ ಬೆನ್ನಲ್ಲೇ ಮನೀಶ್ ಪಾಂಡೆ 42 ರನ್ (48 ಎಸೆತ, 2 ಬೌಂಡರಿ) ಗಳಿಸಿ ವಿಕೆಟ್ ಕಳೆದುಕೊಂಡರು. ಈ ಇಬ್ಬರು ಕರ್ನಾಟಕದ ಆಟಗಾರರು. ಅಷ್ಟೇ ಅಲ್ಲದೆ ಉತ್ತಮ ಸ್ನೇಹಿತರೂ ಹೌದು. ಭಾರತದ ಇನ್ನಿಂಗ್ಸ್ ವೇಳೆ ರಾಹುಲ್ ಮತ್ತು ಮನೀಶ್ ಪಾಂಡೆ ಕನ್ನಡದಲ್ಲಿ ಮಾತನಾಡಿ ಕನ್ನಡಿಗರ ಮನಗೆದ್ದಿದ್ದಾರೆ.

    ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಕೊನೆಯ ಹಾಗೂ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ. ಆರಂಭಿಕ ಬ್ಯಾಟ್ಸ್‌ಮನ್‌ಗಳ ವೈಫಲ್ಯದ ಪರಿಣಾಮ ಕೊಹ್ಲಿ ಪಡೆ 300 ಗಡಿ ದಾಟಲು ಸಾಧ್ಯವಾಗಲಿಲ್ಲ. ಈ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಎರಡಂಕಿ ದಾಡುವಲ್ಲಿ ವಿಫಲರಾದರು. ಕೆ.ಎಲ್.ರಾಹುಲ್ 112 ರನ್ (113 ಎಸೆತ, 9 ಬೌಂಡರಿ ಹಾಗೂ 2 ಸಿಕ್ಸರ್), ಶ್ರೇಯಸ್ ಅಯ್ಯರ್ 62 ರನ್ (63 ಎಸೆತ, 9 ಬೌಂಡರಿ), ಮನೀಶ್ ಪಾಂಡೆ 42 ರನ್ (48 ಎಸೆತ, 2 ಬೌಂಡರಿ) ಹಾಗೂ ಪೃಥ್ವಿ ಶಾ 40 ರನ್ (42 ಎಸೆತ, 3 ಬೌಂಡರಿ, 2 ಸಿಕ್ಸ್) ಸಹಾಯದಿಂದ ಭಾರತ 7 ವಿಕೆಟ್‍ಗೆ 296 ರನ್ ಪೇರಿಸಿತ್ತು.

    ಟೀಂ ಇಂಡಿಯಾ ನೀಡಿದ್ದ ಸಾಧಾರಣ ರನ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 47.1 ಓವರಿನಲ್ಲಿ 5 ವಿಕೆಟ್‍ಗೆ 300 ರನ್ ಸಿಡಿಸಿ ಭರ್ಜರಿ ಗೆಲುವು ಸಾಧಿಸಿತು. ನ್ಯೂಜಿಲೆಂಡ್ ಭಾರತದ ವಿರುದ್ಧ 3-0 ಅಂತರದಿಂದ ಕ್ಲೀನ್‍ಸ್ವೀಪ್ ಮೂಲಕ ಸರಣಿಯನ್ನು ಗೆದ್ದು ಬೀಗಿದೆ. ನ್ಯೂಜಿಲೆಂಡ್ ಪರ ಮಾರ್ಟಿನ್ ಗಪ್ಟಿಲ್ 66 ರನ್ (46 ಎಸೆತ, 6 ಬೌಂಡರಿ, 4 ಸಿಕ್ಸರ್), ನಿಕೋಲಸ್ 80 ರನ್ (103 ಎಸೆತ, 9 ಬೌಂಡರಿ), ಗ್ಯಾಂಡ್‍ಹೋಮ್ ಔಟಾಗದೆ 58 ರನ್ (28 ಎಸೆತ, 6 ಬೌಂಡರಿ, 3 ಸಿಕ್ಸರ್) ಗಳಿಸಿದರು.

  • ಟೀಂ ಇಂಡಿಯಾದಲ್ಲಿ ಕನ್ನಡಿಗರ ಕಮಾಲ್

    ಟೀಂ ಇಂಡಿಯಾದಲ್ಲಿ ಕನ್ನಡಿಗರ ಕಮಾಲ್

    ನ್ಯೂಜಿಲೆಂಡ್: ಟೀಂ ಇಂಡಿಯಾದಲ್ಲಿ ಕನ್ನಡಿಗರು ಕಮಾಲ್ ಮಾಡಲು ಸಿದ್ಧರಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಮೂವರು ಕನ್ನಡಿಗರು ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಬ್ಯಾಟ್ಸ್‌ಮನ್‌ಗಳಾದ ಕೆ.ಎಲ್.ರಾಹುಲ್, ಮನೀಶ್ ಪಾಂಡೆ ಬಳಿಕ ಈಗ ಮಯಾಂಕ್ ಅಗರ್ವಾಲ್ ತಂಡ ಸೇರಿಕೊಂಡಿದ್ದಾರೆ.

    ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ಕ್ಯಾಪನ್ನು ಮಯಾಂಕ್ ಅಗರ್ವಾಲ್ ತೊಡಲಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಲಿದ್ದಾರೆ. ಈಗಾಗಲೇ ಟೆಸ್ಟ್‍ನಲ್ಲಿ ಕೊಟ್ಟ ಅವಕಾಶವನ್ನು ಚೆನ್ನಾಗಿಯೇ ಬಳಸಿಕೊಂಡಿರುವ ಮಯಾಂಕ್ ಅಗರ್ವಾಲ್ ಏಕದಿನ ಕ್ರಿಕೆಟ್‍ನಲ್ಲಿ ಕಿವೀಸ್ ನಾಡಲ್ಲೂ ಸ್ಫೋಟಕ ಬ್ಯಾಟಿಂಗ್‍ಗೆ ಸನ್ನದ್ಧರಾಗಿದ್ದಾರೆ.

    ನ್ಯೂಜಿಲೆಂಡ್ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಕನ್ನಡಿಗರಾದ ಕೆ.ಎಲ್.ರಾಹುಲ್ ಹಾಗೂ ಮನೀಶ್ ಪಾಂಡೆ ಸಖತ್ ಮಿಂಚಿದ್ದಾರೆ. ಕೆ.ಎಲ್.ರಾಹುಲ್ 5 ಪಂದ್ಯಗಳಲ್ಲೂ ಬ್ಯಾಟಿಂಗ್ ಹಾಗೂ ಕೀಪಿಂಗ್‍ನಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಂಡಿದ್ದರು.

    ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡ ಮನೀಶ್ ಪಾಂಡೆ ಸಹ ಮಿಡಲ್ ಆರ್ಡರ್‍ನಲ್ಲಿ ತಂಡಕ್ಕೆ ನೆರವಾಗಿ, ಪಂದ್ಯದ ಗೆಲುವಿನ ಕಾರಣಿಕರ್ತರಾದರು. ಇದರೊಂದಿಗೆ ತಂಡದಲ್ಲಿ ಕೆ.ಎಲ್.ರಾಹುಲ್, ಮನೀಶ್ ಪಾಂಡೆ ಸ್ಥಾನವನ್ನು ಭದ್ರ ಮಾಡಿಕೊಂಡಿದ್ದಾರೆ. ಮಯಾಂಕ್ ಅಗರ್ವಾಲ್ ಸಹ ಬುಧವಾರದ ಪಂದ್ಯದಲ್ಲಿ ಮಿಂಚಿದರೆ 11 ರ ಬಳಗದಲ್ಲಿ ನೆಲೆಯುರಲಿದ್ದಾರೆ.

    ಒಟ್ಟಿನಲ್ಲಿ ಮೂವರು ಕನ್ನಡಿಗರು ಬುಧವಾರದ ಪಂದ್ಯದಲ್ಲಿ ಅವಕಾಶಗಿಟ್ಟಿಸಿಕೊಂಡರೆ ಇತಿಹಾಸ ಮರುಕಳುಹಿಸಲಿದೆ. ದಶಕದ ಹಿಂದೆ ಭಾರತ ತಂಡದಲ್ಲಿ ಕನ್ನಡಿಗ ಆಟಗಾರರೇ ಹೆಚ್ಚಿದ್ದರು. ಮಾಜಿ ಕ್ರಿಕೆಟಿಗರಾದ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್ ಒಟ್ಟಿಗೆ ಕಣಕ್ಕಿಳಿದಿದ್ದು ಇದೀಗ ಇತಿಹಾಸ.

  • ತಮ್ಮ ಸೂಪರ್ ಫುಡ್ ರಿವೀಲ್ ಮಾಡಿದ ನವದೀಪ್ ಸೈನಿ

    ತಮ್ಮ ಸೂಪರ್ ಫುಡ್ ರಿವೀಲ್ ಮಾಡಿದ ನವದೀಪ್ ಸೈನಿ

    – ಸೈನಿ ತಯಾರಿಸಿ ಫ್ರೂಟ್ ಸ್ಮೂಥಿ ಕುಡಿದ ಮನೀಶ್ ಖುಷ್

    ವೆಲ್ಲಿಂಗ್ಟನ್: ಭಾರತೀಯ ಕ್ರಿಕೆಟ್ ತಂಡದ ಯುವ ವೇಗದ ಬೌಲರ್ ನವದೀಪ್ ಸೈನಿ ಉತ್ತಮ ಬೌಲಿಂಗ್ ಪ್ರದರ್ಶನದ ಮೂಲಕ ಮಿಂಚುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ನಾಲ್ಕನೇ ಪಂದ್ಯಕ್ಕೆ ರೋಚಕ ತಿರುವು ನೀಡಿದ್ದ ಸೈನಿ ತಮ್ಮ ಸೂಪರ್ ಫುಡ್ ರಿವೀಲ್ ಮಾಡಿದ್ದಾರೆ.

    ನವದೀಪ್ ಸೈನಿ ಫ್ರೂಟ್ ಸ್ಮೂಥಿ ತಯಾರಿಸಿ ಕನ್ನಡಿಗ, ಬ್ಯಾಟ್ಸ್‌ಮನ್‌ ಮನೀಶ್ ಪಾಂಡೆಗೆ ನೀಡಿದ ವಿಡಿಯೋವೊಂದನ್ನು ಬಿಸಿಸಿಐ ಟ್ವೀಟ್ ಮಾಡಿದೆ. ‘ನಾನು ಈಗ ಫ್ರೂಟ್ ಸ್ಮೂಥಿ ತಯಾರಿಸುತ್ತಿವೆ. ಇದಕ್ಕೆ ಎರಡು ಟೀ ಸ್ಪೂನ್ ಪ್ರೋಟೀನ್, ಒಂದು ಬಾಳೆಹಣ್ಣು, ಒಂದು ಸೇಬು, ಡ್ರೈಫ್ರೂಟ್ ಹಾಗೂ ಸ್ವಲ್ಪ ನೀರು ಹಾಕಿ ಮಿಕ್ಸ ಮಾಡಬೇಕು ಎಂದು ಸೈನಿ ತಿಳಿಸಿದ್ದಾರೆ. ಇದನ್ನೂ ಓದಿ: ಸೈನಿ, ಶಾರ್ದೂಲ್, ರಾಹುಲ್, ಪಾಂಡೆ ಕಮಾಲ್- ಸೂಪರ್ ಓವರಿನಲ್ಲಿ ಮತ್ತೆ ಭಾರತಕ್ಕೆ ಜಯ

    ಸೈನಿ ತಾವು ತಯಾರಿಸಿದ ಫ್ರೂಟ್ ಸ್ಮೂಥಿಯನ್ನು ಮನೀಶ್ ಪಾಂಡೆಗೆ ನೀಡಿದ್ದಾರೆ. ಅದನ್ನು ಕುಡಿದ ಮನೀಶ್, ಪಾಂಡೆ ಬಹುದಿನಗಳ ನಂತರ ರುಚಿಕರವಾದ ಫ್ರೂಟ್ ಸ್ಮೂಥಿ ಕುಡಿದೆ. ಥ್ಯಾಂಕ್ಸ್ ಸೈನಿ ಎಂದು ತಿಳಿಸಿದ್ದಾರೆ.

    ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ನಾಲ್ಕನೇ ಪಂದ್ಯದಲ್ಲಿ ಮನೀಶ್ ಪಾಂಡೆ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಔಟಾಗದೆ 50 ರನ್ (36 ಎಸೆತ, 3 ಬೌಂಡರಿ) ಗಳಿಸಿ ತಂಡದ ಮೊತ್ತವನ್ನು ಏರಿಸಿದ್ದರು. ಇನಿಂಗ್ಸ್ ಅಂತ್ಯದಲ್ಲಿ ಯಜುವೇಂದ್ರ ಚಾಹಲ್ 1 ರನ್ ಹಾಗೂ ನವದೀಪ್ ಸೈನಿ ಔಟಾಗದೆ 11 ರನ್ ಗಳಿಸಿದ್ದರು. ಈ ಮೂಲಕ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್‍ಗೆ 165 ರನ್‍ಗಳ ಸವಾಲಿನ ಮೊತ್ತ ಪೇರಿಸಿತ್ತು.

    ಇನ್ನಿಂಗ್ಸ್ ನ ಕೊನೆಯ ಎರಡು ಓವರಿನಲ್ಲಿ ನ್ಯೂಜಿಲೆಂಡ್ ಗೆಲ್ಲಲು 11 ರನ್ ಬೇಕಿತ್ತು. 19ನೇ ಓವರ್ ನವದೀಪ್ ಸೈನಿ ಎಸೆದು ಯಾವುದೇ ವಿಕೆಟ್ ಪಡೆಯದೇ ಕೇವಲ 4 ರನ್ ನೀಡುವ ಮೂಲಕ ಪಂದ್ಯವನ್ನು ರೋಚಕ ಘಟ್ಟಕ್ಕೆ ತಂದು ನಿಲ್ಲಿಸಿದ್ದರು.