Tag: manish pandey

  • 50 ರನ್ ಹೊಡೆದ ಪಾಂಡೆ ಕಳೆದ 6 ಪಂದ್ಯಗಳಲ್ಲಿ ಔಟಾಗಿಲ್ಲ

    50 ರನ್ ಹೊಡೆದ ಪಾಂಡೆ ಕಳೆದ 6 ಪಂದ್ಯಗಳಲ್ಲಿ ಔಟಾಗಿಲ್ಲ

    ಬೆಂಗಳೂರು: ನ್ಯೂಜಿಲೆಂಡ್ ವಿರುದ್ಧದ 4ನೇ ಟಿ 20 ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಭಾರತವನ್ನು ಪಾರು ಮಾಡಿದ್ದ ಮನೀಷ್ ಪಾಂಡೆ ಕಳೆದ 6 ಪಂದ್ಯಗಳಲ್ಲಿ ಔಟಾಗಿಲ್ಲ.

    ಮನೀಷ್ ಪಾಂಡೆ ಕೊನೆಯ ಬಾರಿಗೆ ಔಟಾಗಿದ್ದು ಆಗಸ್ಟ್ ತಿಂಗಳಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಪಂದ್ಯದಲ್ಲಿ. ಈ ಪಂದ್ಯದಲ್ಲಿ 8 ಎಸೆತ ಎದುರಿಸಿದ ಪಾಂಡೆ 6 ರನ್ ಗಳಿಸಿದ್ದರು. ಕಳೆದ 6 ಇನ್ನಿಂಗ್ಸ್ ಗಳಲ್ಲಿ ಪಾಂಡೆ 133 ರನ್ ಗಳಿಸಿದ್ದಾರೆ. ಇದನ್ನೂ ಓದಿ: ಶಾರ್ದೂಲ್ ನೀಡಿದ ಬಾಲನ್ನು ವಿಕೆಟ್‍ಗೆ ಎಸೆದು ಪಂದ್ಯಕ್ಕೆ ರೋಚಕ ತಿರುವು ಕೊಟ್ಟ ಕೊಹ್ಲಿ: ವಿಡಿಯೋ

    ಹಾಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯದಲ್ಲಿ 14, 14, 50 ರನ್ ಹೊಡೆದಿದ್ದಾರೆ. ಎರಡನೇ ಪಂದ್ಯದಲ್ಲಿ ಬ್ಯಾಟಿಂಗ್ ನಡೆಸಲು ಪಾಂಡೆಗೆ ಅವಕಾಶ ಸಿಕ್ಕಿರಲಿಲ್ಲ.

    ನ್ಯೂಜಿಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದ ವೇಳೆ 8.4 ಓವರ್ ಗಳಲ್ಲಿ 75 ರನ್‍ಗಳಿಗೆ 4 ವಿಕೆಟ್ ಕಳೆದುಕೊಂಡು ಅಪಾಯಕ್ಕೆ ಸಿಲುಕಿದಾಗ ಪಾಂಡೆ ಔಟಾಗದೇ 50 ರನ್(36 ಎಸೆತ, 3 ಬೌಂಡರಿ) ಹೊಡೆದು ತಂಡವನ್ನು ಪಾರು ಮಾಡಿದ್ದರು. 7ನೇ ವಿಕೆಟಿಗೆ ಶಾರ್ದೂಲ್ ಠಾಕೂರ್ ಜೊತೆ 43 ರನ್ ಜೊತೆಯಾಟವಾಡಿದ ಪಾಂಡೆ ಮುರಿಯದ 9ನೇ ವಿಕೆಟಿಗೆ ನವದೀಪ್ ಶೈನಿ ಜೊತೆ 22 ರನ್‍ಗಳ ಜೊತೆಯಾಟವಾಡಿದ್ದರು. ಕೊನೆಯಲ್ಲಿ ವಿಕೆಟ್ ಉಳಿಸಿಕೊಂಡ ಪರಿಣಾಮ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತ್ತು. ಇದನ್ನೂ ಓದಿ: ಶೈನಿ, ಶಾರ್ದೂಲ್, ರಾಹುಲ್, ಪಾಂಡೆ ಕಮಾಲ್- ಸೂಪರ್ ಓವರಿನಲ್ಲಿ ಮತ್ತೆ ಭಾರತಕ್ಕೆ ಜಯ

  • ಶೈನಿ, ಶಾರ್ದೂಲ್, ರಾಹುಲ್, ಪಾಂಡೆ ಕಮಾಲ್- ಸೂಪರ್ ಓವರಿನಲ್ಲಿ ಮತ್ತೆ ಭಾರತಕ್ಕೆ ಜಯ

    ಶೈನಿ, ಶಾರ್ದೂಲ್, ರಾಹುಲ್, ಪಾಂಡೆ ಕಮಾಲ್- ಸೂಪರ್ ಓವರಿನಲ್ಲಿ ಮತ್ತೆ ಭಾರತಕ್ಕೆ ಜಯ

    – 1 ಸಿಕ್ಸರ್, 1 ಬೌಂಡರಿ ಸಿಡಿಸಿದ ರಾಹುಲ್
    – 13 ರನ್ ಬಿಟ್ಟುಕೊಟ್ಟ ಬುಮ್ರಾ
    – ಕೊನೆಯ ಓವರಿನಲ್ಲಿ 4 ವಿಕೆಟ್ ಕಳೆದುಕೊಂಡ ಕಿವೀಸ್

    ವೆಲ್ಲಿಂಗ್ಟನ್: ಸೂಪರ್ ಓವರಿನಲ್ಲಿ ಭಾರತ ಮತ್ತೊಮ್ಮೆ ಕಮಾಲ್ ಮಾಡಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದೆ. ಈ ಮೂಲಕ 5 ಪಂದ್ಯಗಳ ಟಿ 20 ಸರಣಿಯಲ್ಲಿ 4 ಪಂದ್ಯಗಳನ್ನು ಗೆದ್ದು  ಕ್ಲೀನ್ ಸ್ವೀಪ್‌ನತ್ತ ಚಿತ್ತ ಹರಿಸಿದೆ.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 8 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿದರೆ ನ್ಯೂಜಿಲೆಂಡ್ 7 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತು. ಪಂದ್ಯ ಟೈ ಆದ ಹಿನ್ನೆಲೆಯಲ್ಲಿ ಸೂಪರ್ ಓವರ್ ಮೊರೆ ಹೊಗಲಾಯಿತು. ಇದನ್ನೂ ಓದಿ: ಮಗುವಿನಂತೆ ಹಾರಿ ರೋಹಿತ್‍ರನ್ನು ಬಿಗಿದಪ್ಪಿ ಅಭಿನಂದಿಸಿದ ಕೊಹ್ಲಿ – ವಿಡಿಯೋ ವೈರಲ್

    ಸೂಪರ್ ಓವರ್ ಹೀಗಿತ್ತು:
    ನ್ಯೂಜಿಲೆಂಡ್ ಪರವಾಗಿ ಸೀಫರ್ಟ್ ಮತ್ತು ಮನ್ರೋ ಕ್ರೀಸಿಗೆ ಆಗಮಿಸಿದರು. ಬುಮ್ರಾ ಎಸೆದ ಮೊದಲ ಓವರಿನಲ್ಲಿ ಸೀಫರ್ಟ್ ಬಲವಾಗಿ ಹೊಡೆದಿದ್ದು ಶ್ರೇಯಸ್ ಅಯ್ಯರ್ ಕ್ಯಾಚ್ ಕೈ ಚೆಲ್ಲಿದ ಪರಿಣಾಮ 2 ರನ್ ಬಂತು. ನಂತರ ಸೀಫರ್ಟ್ ಬೌಂಡರಿ ಹೊಡೆದರೆ ನಂತರದ ಎಸೆತದಲ್ಲಿ ಎರಡು ರನ್ ಕದ್ದರು. 4ನೇ ಎಸೆತದಲ್ಲಿ ಸೀಫರ್ಟ್ ಕ್ಯಾಚ್ ನೀಡಿ ಔಟಾದರು. 5ನೇ ಎಸೆತದಲ್ಲಿ ಮನ್ರೋ ಬೌಂಡರಿ ಹೊಡೆದರೆ, ಕೊನೆಯ ಎಸೆತದಲ್ಲಿ 1 ರನ್ ಬಂತು. ಇದನ್ನೂ ಓದಿ: ನ್ಯೂಜಿಲೆಂಡ್ ತಂಡವನ್ನು ಹಾಡಿ ಹೊಗಳಿದ ಹಿಟ್‍ಮ್ಯಾನ್

    14 ರನ್ ಗಳ ಸವಾಲು ಪಡೆದ ಭಾರತ ಪರವಾಗಿ ಕೆ.ಎಲ್. ರಾಹುಲ್ ಟಿಮ್ ಸೌಥಿ ಎಸೆದ ಮೊದಲ ಎಸೆತವನ್ನು ಸಿಕ್ಸರ್ ಗೆ ಅಟ್ಟಿದರೆ ಎರಡನೇ ಎಸೆತವನ್ನು ಬೌಂಡರಿಗೆ ಹೊಡೆದರು. ಮೂರನೇ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದರು. ನಂತರ ಕೊಹ್ಲಿ ಎರಡು ರನ್ ತೆಗೆದರೆ, 5ನೇ ಎಸೆತವನ್ನು ಬೌಂಡರಿಗೆ ಹೊಡೆಯುವ ಮೂಲಕ ಭಾರತಕ್ಕೆ ಜಯವನ್ನು ತಂದಿಟ್ಟರು.

    ತಿರುವು ನೀಡಿದ್ದು ಕೊನೆಯ 2 ಓವರ್:
    ಕೊನೆಯ ಎರಡು ಓವರಿನಲ್ಲಿ ನ್ಯೂಜಿಲೆಂಡ್ ಗೆಲ್ಲಲು 11 ರನ್ ಬೇಕಿತ್ತು. 19ನೇ ಓವರ್ ಶೈನಿ ಎಸೆದಿದ್ದು ಯಾವುದೇ ವಿಕೆಟ್ ಪಡೆಯದೇ ಕೇವಲ 4 ರನ್ ನೀಡುವ ಮೂಲಕ ಪಂದ್ಯವನ್ನು ರೋಚಕ ಘಟ್ಟಕ್ಕೆ ತಂದು ನಿಲ್ಲಿಸಿದರು.

    ಕೊನೆಯ ಓವರ್ ಎಸೆಯಲು ಬಂದಿದ್ದು ಶಾರ್ದೂಲ್ ಠಾಕೂರ್. ಮೊದಲ ಎಸೆತದಲ್ಲಿ ಸಿಕ್ಸ್ ಹೊಡೆಯಲು ಯತ್ನಿಸಿದ ಟೇಲರ್ ಶ್ರೇಯಸ್ ಅಯ್ಯರ್ ಗೆ  ಕ್ಯಾಚ್ ನೀಡಿ ಔಟಾದರು. ನಂತರದ ಎಸೆತವನ್ನು ಮಿಚೆಲ್ ಬೌಂಡರಿ ಹೊಡೆದರು. ಮೂರನೇ ಎಸೆತಕ್ಕೆ ಬೈ ಮೂಲಕ ರನ್ ಕದಿಯುವ ಯತ್ನದಲ್ಲಿದ್ದಾಗ ರಾಹುಲ್ ನೇರವಾಗಿ ವಿಕೆಟಿಗೆ ಎಸೆದ ಪರಿಣಾಮ ಸೀಫರ್ಟ್ ರನ್‍ಔಟ್ ಆದರು. ನಂತರ ಬಂದ ಸ್ಯಾಂಟ್ನರ್ 1 ರನ್ ಓಡಿದರು. ಕೊನೆಯ ಎರಡು ಎಸೆತದಲ್ಲಿ 2 ರನ್ ಬೇಕಿತ್ತು. 5ನೇ ಎಸೆತವನ್ನು ಬಲವಾಗಿ ಹೊಡೆದ ಮಿಚೆಲ್ ಶಿವಂ ದುಬೆಗೆ ಕ್ಯಾಚ್ ನೀಡಿ ಔಟಾದರು. ಕೊನೆಯ ಒಂದು ಎಸೆತದಲ್ಲಿ 2 ರನ್ ಬೇಕಿತ್ತು. ಕೊನೆಯ ಎಸೆತವನ್ನು ಬಲವಾಗಿ ಸ್ಯಾಂಟ್ನರ್ ಹೊಡೆದರೂ ಬಾಲ್ ಸಂಜು ಸ್ಯಾಮ್ಸನ್ ಕೈಗೆ ಸೇರಿತು. ಎರಡು ರನ್ ಕದಿಯಲು ಹೋಗಿ ರನೌಟ್ ಆದ ಪರಿಣಾಮ ಪಂದ್ಯ ಸೂಪರ್ ಓವರ್ ಕಡೆ ತಿರುಗಿತು. ಕೊನೆಯ ಓವರಿನಲ್ಲಿ ರನ್ ನಿಯಂತ್ರಿಸಿದ್ದಕ್ಕೆ ಶಾರ್ದೂಲ್‍ಗೆ ಪಂದ್ಯಶ್ರೇಷ್ಠ ಗೌರವ ನೀಡಲಾಯಿತು.

    ಕಾಲಿನ್ ಮನ್ರೋ 64 ರನ್ (47 ಎಸೆತ, 6 ಬೌಂಡರಿ, 3 ಸಿಕ್ಸರ್), ಟೀಂ ಸೀಫರ್ಟ್ 57 ರನ್ (39 ಎಸೆತ, 4 ಬೌಂಡರಿ, 3 ಸಿಕ್ಸರ್) ಹಾಗೂ ರಾಸ್ ಟೇಲರ್ 24 ರನ್ (18 ಎಸೆತ, 2 ಬೌಂಡರಿ) ಗಳಿಸಿದರು.

    ಸ್ಯಾಮ್ಸನ್ ವೈಫಲ್ಯ:
    ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ನ್ಯೂಜಿಲೆಂಡ್ ತಂಡವು ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳನ್ನು ಕಾಡಿತು. ಈ ಪಂದ್ಯದಲ್ಲಿ ಅನುಭವಿ ಆಟಗಾರ ರೋಹಿತ್ ಶರ್ಮಾ ಅವರ ಸ್ಥಾನದಲ್ಲಿ ಇನಿಂಗ್ಸ್ ಆರಂಭಿಸುವ ಅವಕಾಶವನ್ನು ಸಂಜು ಸ್ಯಾಮ್ಸನ್‍ಗೆ ನೀಡಲಾಗಿತ್ತು. ಆದರೆ ಅವರು ಮತ್ತೊಮ್ಮೆ ನಿರಾಸೆ ಮೂಡಿಸಿದರು. ಇತ್ತೀಚೆಗೆ ಶ್ರೀಲಂಕಾ ವಿರುದ್ಧದ ಸರಣಿಯಲ್ಲೂ ಸ್ಯಾಮ್ಸನ್ ಅವರಿಗೆ ಅವಕಾಶ ನೀಡಲಾಗಿತ್ತು. ಆಗ ಸಿಕ್ಸರ್ ಸಿಡಿಸಿ ವಿಕೆಟ್ ಒಪ್ಪಿಸಿದ್ದರು. ಅದೇ ರೀತಿ ಈ ಪಂದ್ಯದಲ್ಲೂ ಸಿಕ್ಸರ್ ಬಾರಿಸಿ ನಂತರ ವಿಕೆಟ್ ಕಳೆದುಕೊಂಡರು.

    ಸ್ಯಾಮ್ಸನ್ 8 ರನ್ (5 ಎಸೆತ, ಸಿಕ್ಸ್) ಗಳಿಸಿ ವಿಕೆಟ್ ಒಪ್ಪಿಸಿದರು. 14 ರನ್ ಗಳಿಗೆ ಭಾರತ ಮೊದಲ ವಿಕೆಟ್ ಕಳೆದುಕೊಂಡಿತು. ಬಳಿಕ ಮೈದಾಕ್ಕಿಳಿಸಿದ ವಿರಾಟ್ ಕೊಹ್ಲಿ 11 ರನ್, ಶ್ರೇಯಸ್ ಅಯ್ಯರ್ 1 ರನ್ ಪೆವಿಲಿಯನ್ ಕಡೆಗೆ ಪರೇಡ್ ನಡೆಸಿದರು. ವಿಕೆಟ್ ಕಾಯ್ದುಕೊಂಡು ರನ್ ಹೊಡೆಯುತ್ತಿದ್ದ ಕೆ.ಎಲ್.ರಾಹುಲ್ ಕ್ಯಾಚ್ ನೀಡಿ ಔಟಾದರು. ರಾಹುಲ್ 39 ರನ್ (26 ಎಸೆತ, 3 ಬೌಂಡರಿ, 2 ಸಿಕ್ಸರ್) ಸಿಡಿಸಿ ವಿಕೆಟ್ ಕಳೆದುಕೊಂಡರು. ಈ ಬೆನ್ನಲ್ಲೇ ಶಿವಂ ದುಬೆ 12 ರನ್ ಹಾಗೂ ವಾಷಿಂಗ್ಟನ್ ಸುಂದರ್ ಯಾವುದೇ ರನ್ ಗಳಿಸದೆ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ತೆರಳಿದರು.

    ಇನ್ನಿಂಗ್ಸ್ ನ 12ನೇ ಓವರಿನ 3ನೇ ಎಸೆತದ ವೇಳೆ 6 ವಿಕೆಟ್ ಕಳೆದುಕೊಂಡಿದ್ದ ಭಾರತ 88 ರನ್ ಪೇರಿಸಿತ್ತು. ಈ ವೇಳೆ ಮನೀಶ್ ಪಾಂಡೆ ಹಾಗೂ ಶಾರ್ದೂಲ್ ಠಾಕೂರ್ ವಿಕೆಟ್ ಕಾಯ್ದುಕೊಂಡು ಉತ್ತಮ ಜೊತೆಯಾಟ ಕಟ್ಟಿದರು. ಈ ಜೋಡಿಯು 7ನೇ ವಿಕೆಟ್‍ಗೆ 43 ರನ್ ಗಳಿಸಿ ತಂಡವನ್ನು 130 ರನ್‍ಗಳ ಗಡಿದಾಟಿಸಿತು.

    ಮನೀಶ್ ಅರ್ಧಶತಕ:
    15 ಎಸೆತಗಳಲ್ಲಿ 22 ರನ್‍ಗಳಿಸಿದ್ದ ಶಾರ್ದೂಲ್ ಠಾಕೂರ್ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ತೆರಳಿದರು. ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಮನೀಶ್ ಪಾಂಡೆ ಔಟಾಗದೆ 50 ರನ್ (36 ಎಸೆತ, 3 ಬೌಂಡರಿ) ಗಳಿಸಿ ತಂಡದ ಮೊತ್ತವನ್ನು ಏರಿಸಿದರು. ಇನಿಂಗ್ಸ್ ಅಂತ್ಯದಲ್ಲಿ ಯಜುವೇಂದ್ರ ಚಾಹಲ್ 1 ರನ್ ಹಾಗೂ ನವದೀಪ್ ಸೈನಿ ಔಟಾಗದೆ 11 ರನ್ ಗಳಿಸಿದರು. ಈ ಮೂಲಕ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್‍ಗೆ 165 ರನ್‍ಗಳ ಸವಾಲಿನ ಮೊತ್ತ ಪೇರಿಸಿತು.

    ಹಿರಿಯರಿಗೆ ವಿಶ್ರಾಂತಿ:
    ಸರಣಿ ಗೆದ್ದಿರುವ ಟೀಂ ಇಂಡಿಯಾ ಅನುಭವಿ ಆಟಗಾರರಾದ ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡಿತ್ತು. ಅವರ ಸ್ಥಾನದಲ್ಲಿ ಕ್ರಮವಾಗಿ ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್ ಮತ್ತು ನವದೀಪ್ ಸೈನಿಗೆ ಅವಕಾಶ ನೀಡಲಾಗಿತ್ತು.

  • ಸಿಕ್ಸ್ ಪ್ಯಾಕ್ ಫೋಟೋ ಹಂಚಿಕೊಂಡ ಚಹಲ್

    ಸಿಕ್ಸ್ ಪ್ಯಾಕ್ ಫೋಟೋ ಹಂಚಿಕೊಂಡ ಚಹಲ್

    ನವದೆಹಲಿ: ಕ್ರಿಕೆಟ್ ಟೀಂ ಇಂಡಿಯಾ ಆಟಗಾರರ ಸಿಕ್ಸ್ ಪ್ಯಾಕ್ ಫೋಟೋಗೆ ಮಹಿಳಾ ಅಭಿಮಾನಿಗಳು ಫಿದಾ ಆಗಿದ್ದು, ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಮಿಂಚಿನಂತೆ ಸುಳಿದಾಡುತ್ತಿದೆ.

    ಯಜುವೇಂದ್ರ ಚಹಲ್ ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಸಹ ಆಟಗಾರರೊಂದಿಗೆ ಪೋಸ್ ನೀಡಿರುವ ಫೋಟೋವನ್ನ ಅಪ್ಲೋಡ್ ಮಾಡಿಕೊಂಡಿದ್ದಾರೆ. ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಫಿಟ್ನೆಸ್ ಮೂಲಕ ಇತರ ಆಟಗಾರರಿಗೆ ಮಾದರಿಯಾಗಿದ್ದಾರೆ. ಉಳಿದಂತೆ ಸಹ ಆಟಗಾರರು ತಮ್ಮ ಫಿಟ್ನೆಸ್ ಕಾಪಾಡಿಕೊಳ್ಳಲು ಆಟದೊಂದಿಗೆ ಜಿಮ್ ನಲ್ಲಿಯೂ ಸಮಯ ಕಳೆಯುತ್ತಿದ್ದಾರೆ. ಮೊದಲಿಗೆ ಒಬ್ಬರೇ ತಮ್ಮ ಸಿಕ್ಸ್ ಪ್ಯಾಕ್ ಮತ್ತು ಆ್ಯಬ್ಸ್ ತೋರಿಸುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದರು.

    ಚಹಲ್ ಅಪ್ಲೋಡ್ ಮಾಡಿಕೊಂಡಿರುವ ಫೋಟೋದಲ್ಲಿ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ ಮತ್ತು ನವದೀಪ್ ಸೈನಿರನ್ನು ಕಾಣಬಹುದು. ದೊಡ್ಡ ಕನ್ನಡಿ ಮುಂದೆ ನಿಂತು ಎಲ್ಲರೂ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಫೋಟೋ ಇದುವರೆಗೂ 2 ಲಕ್ಷಕ್ಕೂ ಅಧಿಕ ಲೈಕ್ ಪಡೆದುಕೊಂಡಿದೆ.

    https://www.instagram.com/p/B7Vz1uGhAua/

  • ಮನೀಶ್ ಪಾಂಡೆ ಮದುವೆಯಲ್ಲಿ ಎಲ್ಲರ ಗಮನ ಸೆಳೆದ ಯುವರಾಜ್: ವಿಡಿಯೋ

    ಮನೀಶ್ ಪಾಂಡೆ ಮದುವೆಯಲ್ಲಿ ಎಲ್ಲರ ಗಮನ ಸೆಳೆದ ಯುವರಾಜ್: ವಿಡಿಯೋ

    ಮುಂಬೈ: ಭಾರತ ಕ್ರಿಕೆಟ್ ತಂಡದ ಸ್ಟೈಲಿಶ್ ಆಟಗಾರ ಮನೀಶ್ ಪಾಂಡೆ ಆರತಕ್ಷತೆಯಲ್ಲಿ ಮಾಜಿ ಆಟಗಾರ ಯುವರಾಜ್ ಸಿಂಗ್ ಪಂಜಾಬಿ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಅಲ್ಲದೆ ಅವರು ಡ್ಯಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

    ಸೋಮವಾರ ಮನೀಶ್ ನಟಿ ಆಶ್ರಿತಾ ಶೆಟ್ಟಿ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆಯ ಆಚರಣೆ ಎರಡು ದಿನಗಳ ಕಾಲ ನಡೆದಿದೆ. ಮನೀಶ್ ಅವರ ಆರತಕ್ಷತೆಯಲ್ಲಿ ಮಾಜಿ ಕ್ರಿಕೆಟ್ ಆಟಗಾರ ಯುವರಾಜ್ ಸಿಂಗ್ ಭಾಗವಹಿಸಿದ್ದರು. ಈ ವೇಳೆ ಅವರು ಡೋಲು ಸದ್ದಿಗೆ ಬಾಂಗ್ರಾ ನೃತ್ಯ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ತುಳು ನಟಿಯನ್ನು ವರಿಸಲಿದ್ದಾರೆ ಕ್ರಿಕೆಟಿಗ ಮನೀಶ್ ಪಾಂಡೆ

    ಯುವರಾಜ್ ಅವರು ಒಬ್ಬರೇ ನೃತ್ಯ ಮಾಡುತ್ತಿರುವುದನ್ನು ನೋಡಿ ಮನೀಶ್ ಕೂಡ ಅವರ ಜೊತೆ ಸೇರಿ ಡ್ಯಾನ್ಸ್ ಮಾಡಿದ್ದಾರೆ. ಈ ವೇಳೆ ಡೋಲು ಬಾರಿಸುತ್ತಿದ್ದವರು ಯುವರಾಜ್ ಹಾಗೂ ಮನೀಶ್ ಡ್ಯಾನ್ಸ್ ನೋಡಿ ಖುಷಿಪಟ್ಟಿದ್ದಾರೆ. ಇದನ್ನೂ ಓದಿ: ರಾತ್ರಿ ಟ್ರೋಫಿ ಗೆದ್ದು ಮರುದಿನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ

    ಯುವರಾಜ್ ಸಿಂಗ್ ತಮ್ಮ ಇನ್‍ಸ್ಟಾದಲ್ಲಿ ಮನೀಶ್ ಹಾಗೂ ಆಶ್ರಿತಾ ಜೊತೆಗಿರುವ ಫೋಟೋ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ, “ಪ್ರೀತಿಯ ಮನೀಶ್ ಹಾಗೂ ಆಶ್ರಿತಾ ನೀವು ಜೀವನದಲ್ಲಿ ಯಾವಾಗಲೂ ಸಂತೋಷವಾಗಿರಿ ಎಂದು ನಾನು ಹಾರೈಸುತ್ತೇನೆ. ಉಳಿದರು ನಮ್ಮ ಹಿಂದೆ ನಿಂತಿರುವ ಡೋಲು ಬಾರಿಸುವವನನ್ನು ನೋಡಿ” ಎಂದು ಬರೆದುಕೊಂಡಿದ್ದರು.

    ಸೋಮವಾರ ಮನೀಶ್, ನಟಿ ಆಶ್ರಿತಾ ಶೆಟ್ಟಿ ಅವರ ಜೊತೆ ವಿವಾಹವಾಗಿದ್ದರು. ಹಿಂದಿನ ದಿನ ಎಂದರೆ ಭಾನುವಾರ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮನೀಶ್ ಅವರ ನಾಯಕತ್ವದಲ್ಲಿ ತಮಿಳುನಾಡಿನ ತಂಡದ ವಿರುದ್ಧ ಕರ್ನಾಟಕ ತಂಡ ಜಯಗಳಿಸಿತ್ತು. ಈ ಪಂದ್ಯದಲ್ಲಿ ಮನೀಶ್ 60 ರನ್‍ಗಳನ್ನು ಗಳಿಸಿದ್ದರು.

     

    View this post on Instagram

     

    Nice dance #yuvrajsingh and #manishpandey #ashritashetty with my team #dholibros Rocking ???????????? performance

    A post shared by Vijay Bhatt (@vijaybhatt888) on

  • ರಾತ್ರಿ ಟ್ರೋಫಿ ಗೆದ್ದು ಮರುದಿನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ

    ರಾತ್ರಿ ಟ್ರೋಫಿ ಗೆದ್ದು ಮರುದಿನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ

    ಮುಂಬೈ: ಭಾರತದ ಕ್ರಿಕೆಟ್ ತಂಡದ ಆಟಗಾರ ಮನೀಶ್ ಪಾಂಡೆ ಇಂದು ತುಳು ನಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ಆಶ್ರಿತಾ ಶೆಟ್ಟಿ ಅವರ ಜೊತೆ ವಿವಾಹವಾಗಿದ್ದಾರೆ. ಐಪಿಎಲ್‍ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್‍ರೈಸರ್ಸ್ ಹೈದರಾಬಾದ್ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಇದನ್ನೂ ಓದಿ: ತುಳು ನಟಿಯನ್ನು ವರಿಸಲಿದ್ದಾರೆ ಕ್ರಿಕೆಟಿಗ ಮನೀಶ್ ಪಾಂಡೆ

    ವರದಿಗಳ ಪ್ರಕಾರ ಮದುವೆಯ ಆಚರಣೆ ಇನ್ನೂ ಎರಡು ದಿನಗಳ ಕಾಲ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರು ಭಾಗಿಯಾಗಿದ್ದಾರೆ. ಈ ಹಿಂದೆ ಮನೀಶ್ ಪಾಂಡೆ ಹಾಗೂ ಆಶ್ರಿತಾ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್‍ಗಳಿಗೆ ತೆರೆ ಎಳೆದಿದ್ದಾರೆ.

    2012ರಲ್ಲಿ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆಶ್ರಿತಾ ‘ಇಂದ್ರಜಿತ್’, ‘ಒರು ಕಣ್ಣಿಯುನ್ ಮೂನು ಕಲಾವಾನಿಕಲಂ’, ‘ಉದಯಂ ಎನ್.ಎಚ್4’ ಸೇರಿದಂತೆ ಹಲವು ಚಿತಗಳಲ್ಲಿ ನಟಿಸಿದ್ದಾರೆ. ಬ್ಯೂಟಿ ಕಾಂಪಿಟೇಶನ್ ಭಾಗವಹಿಸಿದ ಆಶ್ರಿತಾ ಜಾಹೀರಾತುಗಳಲ್ಲಿಯೂ ಅಭಿನಯಿಸಿದ್ದಾರೆ.

    ಭಾನುವಾರ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮನೀಶ್ ಪಾಂಡೆ ಅವರ ನಾಯಕತ್ವದಲ್ಲಿ ತಮಿಳುನಾಡಿನ ತಂಡದ ವಿರುದ್ಧ ಕರ್ನಾಟಕ ತಂಡ ಜಯಗಳಿಸಿದೆ. ಈ ಪಂದ್ಯದಲ್ಲಿ ಮನೀಶ್ 60 ರನ್‍ಗಳನ್ನು ಗಳಿಸಿದ್ದಾರೆ.

  • ತುಳು ನಟಿಯನ್ನು ವರಿಸಲಿದ್ದಾರೆ ಕ್ರಿಕೆಟಿಗ ಮನೀಶ್ ಪಾಂಡೆ

    ತುಳು ನಟಿಯನ್ನು ವರಿಸಲಿದ್ದಾರೆ ಕ್ರಿಕೆಟಿಗ ಮನೀಶ್ ಪಾಂಡೆ

    ಮುಂಬೈ: ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

    ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಡಿಸೆಂಬರ್ 2ರಂದು 30 ವರ್ಷದ ಮನೀಶ್, 26 ವರ್ಷದ ಆಶ್ರಿತಾ ಜೊತೆ ಮುಂಬೈನಲ್ಲಿ ಮದುವೆ ಆಗಲಿದ್ದಾರೆ.

    2012ರಲ್ಲಿ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆಶ್ರಿತಾ ‘ಇಂದ್ರಜಿತ್’, ‘ಒರು ಕಣ್ಣಿಯುನ್ ಮೂನು ಕಲಾವಾನಿಕಲಂ’, ‘ಉದಯಂ ಎನ್.ಎಚ್4’ ಸೇರಿದಂತೆ ಹಲವು ಚಿತಗಳಲ್ಲಿ ನಟಿಸಿದ್ದಾರೆ. ಬ್ಯೂಟಿ ಕಾಂಪಿಟೇಶನ್ ಭಾಗವಹಿಸಿದ ಆಶ್ರಿತಾ ಜಾಹೀರಾತುಗಳಲ್ಲಿಯೂ ಅಭಿನಯಿಸಿದ್ದಾರೆ.

    ಮನೀಶ್ ಕರ್ನಾಟಕದ ಪರ ಉತ್ತಮ ಪ್ರದರ್ಶನ ನೀಡುವ ಮೂಲಕ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಏಕದಿನ ಪಂದ್ಯದಲ್ಲಿ ಮನೀಶ್ ಮಿಡಿಲ್ ಆರ್ಡರ್ ನಲ್ಲಿ ಆಡುತ್ತಾರೆ. ಜೊತೆಗೆ ಮನೀಶ್ ಐಪಿಎಲ್ ಪಂದ್ಯಗಳಲ್ಲೂ ಮಿಂಚಿದ್ದಾರೆ. ಮನೀಶ್ ಈಗ ಕರ್ನಾಟಕ ಕ್ರಿಕೆಟ್ ತಂಡದ ನಾಯಕನಾಗಿದ್ದು, ವಿಜಯ್ ಹಜಾರೆ ಟ್ರೋಫಿಯಲ್ಲೂ ಆಡುತ್ತಿದ್ದಾರೆ.

    ಮನೀಶ್ ಹಾಗೂ ಆಶ್ರಿತಾ ಮದುವೆಯಲ್ಲಿ ಕೇವಲ ಆತ್ಮೀಯ ಸ್ನೇಹಿತರು ಹಾಗೂ ಸಂಬಂಧಿಕರು ಭಾಗಿಯಾಗಲಿದ್ದು, ಎರಡು ದಿನಗಳ ಕಾಲ ಈ ಮದುವೆ ನಡೆಯಲಿದೆ. ಮನೀಶ್ ಮದುವೆಯಲ್ಲಿ ಭಾರತ ಕ್ರಿಕೆಟ್ ತಂಡದ ಆಟಗಾರರು ಭಾಗವಹಿಸುವ ಸಾಧ್ಯತೆಯಿದೆ.

  • ಆ ಕಡೆ ಯಾಕೆ ನೋಡ್ತಿದ್ದಿ, ನನ್ನನ್ನು ನೋಡು – ಪಾಂಡೆ ವಿರುದ್ಧ ಕ್ಯಾಪ್ಟನ್ ಕೂಲ್ ಗರಂ

    ಆ ಕಡೆ ಯಾಕೆ ನೋಡ್ತಿದ್ದಿ, ನನ್ನನ್ನು ನೋಡು – ಪಾಂಡೆ ವಿರುದ್ಧ ಕ್ಯಾಪ್ಟನ್ ಕೂಲ್ ಗರಂ

    ಸೆಂಚೂರಿಯನ್: ಕ್ಯಾಪ್ಟನ್ ಕೂಲ್ ಎಂದೇ ಫೇಮಸ್ ಆಗಿರುವ ಟೀಂ ಇಂಡಿಯಾದ ಮಾಜಿ ನಾಯಕ ಧೋನಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡನೇ ಟಿ -20 ಪಂದ್ಯದಲ್ಲಿ ಮನೀಶ್  ಪಾಂಡೆ ವಿರುದ್ಧ ಗರಂ ಆಗಿದ್ದಾರೆ.

    ಕೊನೆಯ ಸ್ಲಾಗ್ ಓವರ್ ಗಳಲ್ಲಿ ಧೋನಿ ತಂಡದ ಮೊತ್ತ ಹೆಚ್ಚಿಸಲು ವೇಗವಾಗಿ ಓಡುತ್ತಿದ್ದರು. ಈ ವೇಳೆ ಮನೀಶ್ ಪಾಂಡೆ ಅವರಿಂದ ಸರಿಯಾದ ಸಹಕಾರ ಸಿಕ್ಕಿರಲಿಲ್ಲ. ಕೊನೆಯ ಓವರ್ ಮೊದಲ ಎಸೆತದ ಬಳಿಕ ಪಾಂಡೆ ಗಮನವನ್ನು ಬೇರೆ ಕಡೆ ಹರಿಸಿದ್ದರು. ಇದನ್ನು ನೋಡಿದ ಧೋನಿ, “ಆ ಕಡೆ ಯಾಕೆ ನೋಡುತ್ತಿದ್ದಿ. ನನ್ನನ್ನು ನೋಡು” ಎಂದು ಗರಂ ಆಗಿ ಹೇಳುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಪಾಂಡೆಯನ್ನು ತರಾಟೆಗೆ ತೆಗೆದುಕೊಂಡ ನಂತರದ ಎಸೆತವನ್ನು ಧೋನಿ ಸಿಕ್ಸರ್ ಗೆ ಅಟ್ಟಿದ್ದರು. ಕೊನೆಯ ಓವರ್ ನಲ್ಲಿ ಧೋನಿ ಎರಡು ಬೌಂಡರಿ, 1 ಸಿಕ್ಸರ್ ಸಿಡಿಸಿ ಅರ್ಧಶತಕ ಸಿಡಿಸಿದ್ದರು. ಈ ಓವರ್ ನಲ್ಲಿ ಭಾರತಕ್ಕೆ 19 ರನ್ ಗಳು ಬಂದಿತ್ತು.

    ಧೋನಿ ಔಟಾಗದೇ 52 ರನ್ (28 ಎಸೆತ, 4 ಬೌಂಡರಿ, 3 ಸಿಕ್ಸರ್), ಮನೀಶ್ ಪಾಂಡೆ ಔಟಾಗದೇ 79 ರನ್(48 ಎಸೆತ, 6 ಬೌಂಡರಿ, 3 ಸಿಕ್ಸರ್) ಹೊಡೆದಿದ್ದರು. ಅಂತಿಮವಾಗಿ ಭಾರತ 4 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತ್ತು.

    ಸವಾಲಿನ ಮೊತ್ತವಾದರೂ ನಾಯಕ ಡುಮಿನಿ ಔಟಾಗದೇ 64 ರನ್(40 ಎಸೆತ, 4 ಬೌಂಡರಿ, 3 ಸಿಕ್ಸರ್), ಕ್ಲಾಸನ್ 69 ರನ್( 30 ಎಸೆತ, 3 ಬೌಂಡರಿ, 7 ಸಿಕ್ಸರ್) ಸಿಡಿಸಿದ ಪರಿಣಾಮ ದಕ್ಷಿಣ ಆಫ್ರಿಕಾ 18.4 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 189 ರನ್ ಗಳಿಸುವ ಮೂಲಕ 6 ವಿಕೆಟ್ ಗಳಿಂದ ಜಯಗಳಿಸಿತು.

    ಮೂರನೇ ಹಾಗೂ ಅಂತಿಮ ಪಂದ್ಯ ಫೆ.24 ಶನಿವಾರ ಕೇಪ್ ಟೌನ್ ನಲ್ಲಿ ನಡೆಯಲಿದೆ. ಇದನ್ನೂ ಓದಿ: ಮೊದಲ ಟಿ-20ಯಲ್ಲಿ ಧೋನಿಯಿಂದ ವಿಶ್ವದಾಖಲೆ

  • ಶ್ರೀಲಂಕಾ ವಿರುದ್ಧದ ಟಿ20ಯಲ್ಲೂ ಟೀಂ ಇಂಡಿಯಾಗೆ ಗೆಲುವು

    ಶ್ರೀಲಂಕಾ ವಿರುದ್ಧದ ಟಿ20ಯಲ್ಲೂ ಟೀಂ ಇಂಡಿಯಾಗೆ ಗೆಲುವು

    ಕೊಲಂಬೋ: ಶ್ರೀಲಂಕಾ ವಿರುದ್ಧದ ಏಕೈಕ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳ ಜಯಗಳಿಸಿದೆ. ಈ ಮೂಲಕ ಟೆಸ್ಟ್, ಏಕದಿನ, ಟಿ20 ಪಂದ್ಯವನ್ನೂ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಮಾಡಿದೆ.

    171 ರನ್ ಗಳ ಟಾರ್ಗೆಟ್ ಬೆನ್ನತ್ತಿದ ಭಾರತ 19.2 ಓವರ್ ಗಳಲ್ಲಿ ಗೆಲುವು ಸಾಧಿಸಿದೆ. ಟೀಂ ಇಂಡಿಯಾ ಪರವಾಗಿ ನಾಯಕ ವಿರಾಟ್ ಕೊಹ್ಲಿ ಹಾಗೂ ಮನೀಷ್ ಪಾಂಡೆ ಆಕ್ರಮಣಕಾರಿಯಾಗಿ ಆಡಿದರು. ಕೇವಲ 30 ಎಸೆತಗಳಲ್ಲಿ ಕೊಹ್ಲಿ ಅರ್ಧ ಶತಕ ದಾಖಲಿಸಿದರು. 19ನೇ ಓವರ್‍ನಲ್ಲಿ 54 ಎಸೆತಗಳಲ್ಲಿ 82 ರನ್ ಗಳಿಸಿದ್ದ ಕೊಹ್ಲಿ ಔಟಾದರು. ರೋಹಿತ್ ಶರ್ಮಾ 9 (8 ಬಾಲ್), ಕೆ.ಎಲ್.ರಾಹುಲ್ 24 (18) ರನ್ ಗಳಿಸಿ ಔಟಾದರು. ಬೌಂಡರಿ ಮೂಲಕ ಗೆಲುವಿನ ರನ್ ಬಾರಿಸಿ ಮನೀಷ್ ಪಾಂಡೆ ಅರ್ಧ ಶತಕ ದಾಖಲಿಸಿದರು. ಶ್ರೀಲಂಕಾ ಪರವಾಗಿ ಉದನ, ಲಸಿತ್ ಮಾಲಿಂಗ, ಪ್ರಸನ್ನ ತಲಾ 1 ವಿಕೆಟ್ ಗಳಿಸಿದರು.

    ಟಾಸ್ ಗೆದ್ದ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಆರಂಭದಲ್ಲೇ ಶ್ರೀಲಂಕಾ ತಂಡ ಆಕ್ರಮಣಕಾರಿ ಆಟಕ್ಕಿಳಿದಿತ್ತು. ಆದರೆ 3ನೇ ಓವರ್ ನಲ್ಲೇ ಭುವನೇಶ್ವರ್ ಕುಮಾರ್ ಮೊದಲ ವಿಕೆಟ್ ಪಡೆದರು. ನಂತರ ಬ್ಯಾಟಿಂಗ್ ಗೆ ಆಗಮಿಸಿದ ಮುನವೀರ ಆಕ್ರಮಣಕಾರಿ ಆಟಕ್ಕಿಳಿದರು. ಕೇವಲ 29 ಎಸೆತಗಳಲ್ಲಿ 5 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 53 ರನ್ ಗಳಿಸಿ ಸ್ಪಿನ್ನರ್ ಕುಲದೀಪ್ ಯಾದವ್ ಎಸೆತದಲ್ಲಿ ಬೌಲ್ಡ್ ಆದ್ರು. ಶ್ರೀಲಂಕಾ ಪರವಾಗಿ ಡಿಕ್ವೆಲ್ಲಾ 17 (14 ಬಾಲ್), ಪ್ರಿಯಾಂಜನ್ 40 (40 ಬಾಲ್), ಪಿರೇರಾ 11 (7 ಬಾಲ್), ಪ್ರಸನ್ನ 11 (8 ಬಾಲ್), ಉದನ 19 (10), ಮ್ಯಾಥ್ಯೂಸ್ 7 (5) ರನ್ ಗಳಿಸಿದರು. ನಿಗದಿತ 20 ಓವರ್ ಗಳು ಮುಗಿದಾಗ ಶ್ರೀಲಂಕಾ 7 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿತ್ತು.

    ಟೀಂ ಇಂಡಿಯಾ ಪರವಾಗಿ ಚಹಲ್ 3, ಕುಲದೀಪ್ ಯಾದವ್ 2, ಭುವನೇಶ್ವರ್ ಕುಮಾರ್ ಹಾಗೂ ಜಸ್ಪ್ರೀತ್ ಬೂಮ್ರಾ ತಲಾ 1 ವಿಕೆಟ್ ಗಳಿಸಿದರು.

  • ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಪ್ರಕಟ: ಯಾರಿಗೆ ಸ್ಥಾನ ಸಿಕ್ಕಿದೆ?

    ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಪ್ರಕಟ: ಯಾರಿಗೆ ಸ್ಥಾನ ಸಿಕ್ಕಿದೆ?

    ಮುಂಬೈ: ಇಂಗ್ಲೆಂಡ್‍ನಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸುವ 15 ಜನ ಸದಸ್ಯರ ಟೀಂ ಇಂಡಿಯಾ ತಂಡ ಪ್ರಕಟವಾಗಿದೆ.

    ಎಂಎಸ್ ಕೆ ಪ್ರಸಾದ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ತಂಡವನ್ನು ಪ್ರಕಟಿಸಿದೆ. ತಂಡದಲ್ಲಿ 6 ಜನ ಬ್ಯಾಟ್ಸ್ ಮನ್‍ಗಳಿಗೆ ಸ್ಥಾನ ನೀಡಲಾಗಿದ್ದು, ವಿಕೆಟ್ ಕೀಪರ್, ಆಲ್‍ರೌಂಡರ್ಸ್ ಮತ್ತು ಸ್ಪಿನ್ನರ್ ವಿಭಾಗದಲ್ಲಿ ತಲಾ ಇಬ್ಬರಿಗೆ ಸ್ಥಾನ ಕಲ್ಪಿಸಲಾಗಿದೆ. ಜೊತೆಗೆ ಐವರು ವೇಗಿಗಳನ್ನು ಆಯ್ಕೆ ಸಮಿತಿ ತಂಡದಲ್ಲಿ ಇರಿಸಿದೆ.

    ಐಸಿಸಿಯ ನೂತನ ಹಣಕಾಸು ಹಂಚಿಕೆ ನೀತಿಗೆ ವಿರೋಧ ವ್ಯಕ್ತಪಡಿಸಿದ್ದ ಕಾರಣವನ್ನು ಮುಂದಿಟ್ಟುಕೊಂಡು ಬಿಸಿಸಿಐ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಟೀಂ ಇಂಡಿಯಾ ಕಳುಹಿಸಲು ಹಿಂದೇಟು ಹಾಕಿತ್ತು. ಬಳಿಕ ಸುಪ್ರೀಂ ಕೋರ್ಟ್ ನೇಮಿಸಿರುವ ಆಡಳಿತ ಸಮಿತಿಯ ಎಚ್ಚರಿಕೆಯ ನಂತರ ಆಯ್ಕೆ ಸಮಿತಿ ತಂಡವನ್ನು ಪ್ರಕಟಿಸಿದೆ.

    ಭುಜದ ನೋವಿಗೆ ತುತ್ತಾಗಿ ಸದ್ಯ ಇಂಗ್ಲೆಂಡಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಎಲ್ ರಾಹುಲ್ ಫಿಟ್ ಆಗದ ಕಾರಣ ಅವರ ಬದಲಿಗೆ ಅಜಿಂಕ್ಯಾ ರಹಾನೆ ಸ್ಥಾನ ಪಡೆದಿದ್ದಾರೆ. ಆರಂಭಿಕ ಬ್ಯಾಟ್ಸ್ ಮನ್‍ಗಳ ಪೈಕಿ ಗೌತಮ್ ಗಂಭೀರ್ ಮತ್ತು ಶಿಖರ್ ಧವನ್ ನಡುವೆ ಸ್ಪರ್ಧೆ ಇತ್ತು. ಆದರೆ ಆಯ್ಕೆ ಸಮಿತಿ ಶಿಖರ್ ಧವನ್ ಅವರಿಗೆ ಸ್ಥಾನ ನೀಡಿದ್ದಾರೆ.

    ಜೂನ್ 1 ರಿಂದ 18ರ ವರೆಗೆ 18 ದಿನಗಳ ಅವಧಿಯಲ್ಲಿ ಇಂಗ್ಲೆಂಡ್ ಮತ್ತು ವೇಲ್ಸ್‍ನ 3 ಕ್ರಿಕೆಟ್ ಮೈದಾನಗಳಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ 2017 ಪಂದ್ಯಗಳು ನಡೆಯಲಿವೆ.

    ಟೀಂ ಇಂಡಿಯಾ ತಂಡ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಅಜಿಂಕ್ಯಾ ರಹಾನೆ, ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯಾ, ಆರ್. ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ಜಸ್‍ಪ್ರೀತ್ ಬೂಮ್ರಾ ಮತ್ತು ಮನೀಷ್ ಪಾಂಡೆ.