Tag: Manju Warrior

  • ‌’ವೆಟ್ಟೈಯಾನ್’ ಚಿತ್ರದ ಸಾಂಗ್ ರಿಲೀಸ್- ಮಂಜು ವಾರಿಯರ್ ಜೊತೆ ತಲೈವಾ ಸಖತ್ ಸ್ಟೆಪ್ಸ್

    ‌’ವೆಟ್ಟೈಯಾನ್’ ಚಿತ್ರದ ಸಾಂಗ್ ರಿಲೀಸ್- ಮಂಜು ವಾರಿಯರ್ ಜೊತೆ ತಲೈವಾ ಸಖತ್ ಸ್ಟೆಪ್ಸ್

    ಜನಿಕಾಂತ್ (Rajanikanth) ನಟನೆಯ ‘ವೆಟ್ಟೈಯಾನ್’ (Vettaiyan) ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ನಟಿ ಮಂಜು ವಾರಿಯರ್ ಜೊತೆ ಸಖತ್ ಆಗಿ ತಲೈವಾ ಹೆಜ್ಜೆ ಹಾಕಿದ್ದಾರೆ. ‘ಜೈಲರ್’ ಸಿನಿಮಾದ ಬಳಿಕ ಮತ್ತೊಂದು ಡ್ಯಾನ್ಸ್ ನಂಬರ್ ಹಾಡಿನಲ್ಲಿ ಕುಣಿದು ಕುಪ್ಪಳಿಸಿದ್ದಾರೆ.

    ‘ವೆಟ್ಟೈಯಾನ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಇದರ ನಡುವೆ ಕಲರ್‌ಫುಲ್ ಹಾಡಿನಲ್ಲಿ ತಲೈವಾ ಮಿಂಚಿದ್ದಾರೆ. 73ನೇ ವಯಸ್ಸಿನಲ್ಲೂ ಡ್ಯಾನ್ಸ್‌ನಲ್ಲಿ ಹಿಂದೆ ಬೀಳದೇ ರಜನಿಕಾಂತ್ ಅವರು ಮಂಜು ವಾರಿಯರ್ ಜೊತೆ ಸಖತ್‌ ಆಗಿಯೇ ಹೆಜ್ಜೆ ಹಾಕಿದ್ದಾರೆ. ‘ಮನಸಿಲಾಯೋ’ ಎಂಬ ಹಾಡಿನಲ್ಲಿ ತಮಿಳು ಮತ್ತು ಮಲಯಾಳಂ ಸಾಹಿತ್ಯ ಒಳಗೊಂಡಿದೆ. ಈ ಸಾಂಗ್‌ ಫ್ಯಾನ್ಸ್‌ಗೆ ಇಷ್ಟವಾಗಿದೆ.

     

    View this post on Instagram

     

    A post shared by Anirudh (@anirudhofficial)

    ತಲೈವಾ ಮತ್ತು ಮಂಜು ವಾರಿಯರ್ ಜೊತೆ ಗೆಸ್ಟ್ ಆಗಿ ಸಂಗೀತ ನಿರ್ದೇಶಕ ಅನಿರುದ್ಧ ರವಿಚಂದರ್ ಕೂಡ ಹೆಜ್ಜೆ ಹಾಕಿದ್ದಾರೆ. ಇತ್ತೀಚೆಗೆ ಅವರು ಚಿತ್ರಕ್ಕೆ ಕಂಪೋಸ್‌ ಮಾಡಿದ ಹಾಡುಗೆಳೆಲ್ಲಾ ಹಿಟ್‌ ಆಗಿದೆ. ಈ ಹಾಡಿಗೂ ಕೂಡ ಈಗ ಉತ್ತಮ ರೆಸ್ಪಾನ್ಸ್‌ ಸಿಕ್ಕಿದೆ. ಇದನ್ನೂ ಓದಿ:ಒಂದು ಅವಕಾಶ ಕಳೆದು ಹೋದರೆ, ನೂರಾರು ಅವಕಾಶಗಳು ಬರುತ್ತವೆ: ಕಾಸ್ಟಿಂಗ್‌ ಕೌಚ್ ಬಗ್ಗೆ ಸನ್ನಿ ಲಿಯೋನ್ ಪ್ರತಿಕ್ರಿಯೆ

    ಇನ್ನೂ ‘ವೆಟ್ಟೈಯಾನ್’ ಚಿತ್ರ ಅಕ್ಟೋಬರ್ 10ರಂದು ಬಹುಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಈ ಚಿತ್ರವನ್ನು ಟಿ.ಜೆ ಜ್ಞಾನ್‌ವೇಲ್ ನಿರ್ದೇಶನ ಮಾಡಿದ್ದಾರೆ. ‘ಜೈಲರ್’ ಸಿನಿಮಾದಂತೆ ‘ವೆಟ್ಟೈಯಾನ್’ ಕೂಡ ಸಕ್ಸಸ್ ಲಿಸ್ಟ್‌ಗೆ ಸೇರುತ್ತಾ? ಕಾದುನೋಡಬೇಕಿದೆ. ಚಿತ್ರದ ಮೇಲೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ.

  • ಮಲಯಾಳಂ ಖ್ಯಾತ ನಟಿಯ ಜೀವ ಅಪಾಯದಲ್ಲಿದೆ ಎಂದು ಪೊಲೀಸರ ವಶವಾದ ಡೈರೆಕ್ಟರ್

    ಮಲಯಾಳಂ ಖ್ಯಾತ ನಟಿಯ ಜೀವ ಅಪಾಯದಲ್ಲಿದೆ ಎಂದು ಪೊಲೀಸರ ವಶವಾದ ಡೈರೆಕ್ಟರ್

    ಲಯಾಳಂನಲ್ಲಿ ಹಲವು ಹಿಟ್ ಸಿನಿಮಾಗಳನ್ನು ಕೊಟ್ಟಿರುವ ಸನಲ್ ಕುಮಾರ್ ಶಶಿಧರನ್ ಸದ್ಯ ಪೊಲೀಸ್ ವಶದಲ್ಲಿದ್ದಾರೆ. ಮಲಯಾಳಂ ಖ್ಯಾತ ನಟಿ ಮಂಜು ವಾರಿಯರ್ ಕುರಿತಾಗಿ ಅವರು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು ಎನ್ನುವ ಕಾರಣಕ್ಕಾಗಿ ಪೊಲೀಸ್ ರು ಸನಲ್ ಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಿಸುತ್ತಿದ್ದಾರೆ. ತಮ್ಮನ್ನು ಪೊಲೀಸ್ ರು ವಶಕ್ಕೆ ಪಡೆಯುತ್ತಿರುವ ದೃಶ್ಯವನ್ನು ಸನಲ್ ಕುಮಾರ್ ಫೇಸ್ ಬುಕ್ ಲೈವ್ ಮಾಡಿದ್ದಾರೆ. ಇದನ್ನೂ ಓದಿ : ಶತ್ರುಘ್ನಾ ಸಿನ್ಹಾ ಮೇಲೆ ಲೈಂಗಿಕ ಹಗರಣ ದಂಧೆ ಆರೋಪ : ನಟಿ ವಿರುದ್ಧ ತಿರುಗಿ ಬಿದ್ದ ಸಿನ್ಹಾ ಕುಟುಂಬ

    ಮಂಜು ವಾರಿಯರ್ ಕೆಲ ಪಟ್ಟಭದ್ರ ಹಿತಾಸಕ್ತಿಗಳ ವಶದಲ್ಲಿದ್ದಾರೆ. ಅವರು ಜೀವನ ಅಪಾಯದಲ್ಲಿದೆ. ಅವರಿಂದಾಗಿ ಕೆಲವರಿಗೆ ತೊಂದರೆ ಕೂಡ ಆಗಲಿದೆ ಎಂದು ನಿರ್ದೇಶಕ ಸನಲ್, ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದನ್ನು ಮಂಜು ವಾರಿಯರ್ ಗಂಭೀರವಾಗಿ ತಗೆದುಕೊಂಡು ದೂರು ನೀಡಿದ್ದರು. ತಮಗೆ ಆ ನಿರ್ದೇಶಕರಿಂದ ಬ್ಲ್ಯಾಕ್ ಮೇಲ್ ಆಗುತ್ತಿದೆ ಮತ್ತು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಮಾನಹಾನಿ ಆಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಿದ್ದರು. ಇದನ್ನೂ ಓದಿ : ಸ್ಟಾರ್ ನಟಿ ಪೂಜಾ ಹೆಗಡೆ ನಿದ್ದೆಗೆಡಿಸಿದ ಸಾಲು ಸಾಲು ಸೋಲು

    ಮಂಜು ವಾರಿಯರ್ ಮೇಲೆ ಆರೋಪ ಮಾಡಿದ್ದ ನಿರ್ದೇಶಕ ಸನಲ್, ತಿರುವನಂತಪುಂನಲ್ಲಿದ್ದರು. ಅಲ್ಲಿಂದಲೇ ಪೊಲೀಸ್ ರು ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಮಂಜು ವಾರಿಯರ್ ಮತ್ತು ಸನಲ್ ಈ ಹಿಂದೆ ಕಯಟ್ಟಮ್ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆನಂತರ ಇಬ್ಬರ ಮಧ್ಯ ಮನಸ್ತಾಪ ಬಂದಿದೆ ಎನ್ನಲಾಗುತ್ತಿದೆ. ಅಲ್ಲಿಂದ ಮಂಜು ಅವರ ಬಗ್ಗೆ ಸನಲ್ ಆಗಾಗ್ಗೆ ಆರೋಪ ಮಾಡುತ್ತಾ ಬಂದಿದ್ದರು ಎಂದು ಹೇಳಲಾಗುತ್ತಿದೆ.