Tag: manjula

  • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರನ್ನ ಹುಡುಕಿ ಕೊಡಿ – ಬಿಜೆಪಿ ರಾಜ್ಯಾಧ್ಯಕ್ಷೆ ಮಂಜುಳಾ ಲೇವಡಿ

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರನ್ನ ಹುಡುಕಿ ಕೊಡಿ – ಬಿಜೆಪಿ ರಾಜ್ಯಾಧ್ಯಕ್ಷೆ ಮಂಜುಳಾ ಲೇವಡಿ

    ಬೆಂಗಳೂರು: ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಮೇಲ್ಛಾವಣಿ ಕುಸಿದು ಅಂಗನವಾಡಿ (Anganavadi) ಮಕ್ಕಳಿಗೆ ಗಾಯವಾಗಿರೋ ಪ್ರಕರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರು ರಾಜೀನಾಮೆ ನೀಡಬೇಕು ಅಂತ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಮಂಜುಳಾ (Manjula) ಆಗ್ರಹಿಸಿದ್ದಾರೆ‌.

    ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಚಿವರನ್ನ ಹುಡುಕಿಕೊಂಡಿ ಅಂತ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಂಗಾರಪೇಟೆಯಲ್ಲಿ ಅಂಗನವಾಡಿ ಮೇಲ್ಛಾವಣಿ ಬಿದ್ದು 7 ಮಕ್ಕಳು ಆಸ್ಪತ್ರೆಗೆ ಸೇರಿದ್ದಾರೆ. 4 ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಇದೇನಾ ಮುಖ್ಯಮಂತ್ರಿಗಳ ಬಡವರ ಪರ ಕಾಳಜಿ ಕಿಡಿಕಾರಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಎಲ್ಲಿದ್ದಾರೆ? ಅವರನ್ನು ಹುಡುಕಿಕೊಡಿ ಮುಖ್ಯಮಂತ್ರಿಗಳೇ (Chief Minister) ಎಂದು ಕೇಳಿದ್ದಾರೆ.

    ಇಲ್ಲಿಗೆ ಬಡವರ- ಕೂಲಿಕಾರರ ಮಕ್ಕಳು ಬರುತ್ತಾರೆ. ಅವರಿಗೆ ಯಾವ ರಕ್ಷಣೆ ಇದೆ? ಈ ಸರಕಾರವು ಯಾವ ನೈತಿಕತೆ ಮೇಲೆ ಸದಾ ವಿಪಕ್ಷವನ್ನು ಟೀಕೆ ಮಾಡುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ತಮ್ಮ ಮನೆ ಮತ್ತು ಕಚೇರಿಯಿಂದ ಹೊರಕ್ಕೆ ಬಂದು ಇಲಾಖೆಯಲ್ಲಿ ಏನು ನಡೆಯುತ್ತಿದೆ ಎಂದು ಗಮನಿಸಿ ಸರಿಪಡಿಸಲಿ. ಇಲ್ಲವಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಸಚಿನ್ ಆತ್ಮಹತ್ಯೆ ಕೇಸ್ – ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ನಾಯಕರು ಮುತ್ತಿಗೆಗೆ ಯತ್ನ

    ರಾಜ್ಯದಲ್ಲಿ ಬಾಣಂತಿಯರ ಸಾವು ನಿತ್ಯೋತ್ಸವವಾಗಿ ರಾಜ್ಯ ತಲ್ಲಣಗೊಂಡ ಸಂದರ್ಭದಲ್ಲೂ ಕೂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮ ಮನೆ ಮತ್ತು ಕಚೇರಿಯಿಂದ ಹೊರಗೆ ಬಂದು ಕೆಲಸ ಮಾಡುತ್ತಿಲ್ಲ. ಕಳೆದ ಒಂದೂವರೆ ವರ್ಷದಿಂದ ಅವರು ಸಚಿವೆಯಾಗಿದ್ದಾರೆ. ಇದೇನಾ ಈ ಸರ್ಕಾರ ಮಹಿಳೆಯರಿಗೆ ಕೊಡುವ ಗೌರವ ಮತ್ತು ನ್ಯಾಯ ಅಂತ ಕಿಡಿಕಾರಿದರು. ಇದನ್ನೂ ಓದಿ: ಬೆಂಬಲ ಬೆಲೆಗಿಂತಲೂ ಕಡಿಮೆ ದರಕ್ಕೆ ದಲ್ಲಾಳಿಗಳಿಗೆ ಭತ್ತ ಮಾರಾಟ – ಖರೀದಿ ಕೇಂದ್ರ ತೆರೆಯದ್ದಕ್ಕೆ ಅಶೋಕ್‌ ಆಕ್ರೋಶ

    ಗೃಹ ಸಚಿವರ ತವರು ಜಿಲ್ಲೆ ಮಧುಗಿರಿಯಲ್ಲಿ ಡಿವೈಎಸ್ಪಿಯೊಬ್ಬರು ಠಾಣೆಗೆ ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯವನ್ನು ಠಾಣೆಯಲ್ಲೇ ಮಾಡಿದ್ದಾರೆ. ಇದು ರಾಜ್ಯದಲ್ಲಿ ಮಹಿಳೆಯರಿಗೆ ಪೊಲೀಸ್ ಠಾಣೆಯಲ್ಲೇ ರಕ್ಷಣೆ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ. ಗೃಹ ಇಲಾಖೆಯಲ್ಲಿ ಹೊಕ್ಕಿರುವ ಹೆಗ್ಗಣಗಳನ್ನು ಹೊರಹಾಕಿ ಪೊಲೀಸ್ ಇಲಾಖೆಗೆ ಬರುವ ಮತ್ತು ರಾಜ್ಯದಲ್ಲಿ ಬದುಕುವ ಮಹಿಳೆಯರಿಗೆ ಈ ಸರ್ಕಾರ, ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಸುರಕ್ಷತೆ ಕೊಡಬೇಕೆಂದು ಅವರು ಆಗ್ರಹಿಸಿದರು. ಇದನ್ನೂ ಓದಿ: ಪ್ರೀತಿಸಿದ ಯುವತಿ-ಕುಟುಂಬಸ್ಥರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ, ರೈಲಿಗೆ ತಲೆಕೊಟ್ಟು ಭಗ್ನ ಪ್ರೇಮಿ ಆತ್ಮಹತ್ಯೆ

  • ಅಜ್ಞಾತ ಸಖಿ ಸಹವಾಸ, ಲಕ್ಷ ಲಕ್ಷ ಗೋತ – ಬಣ್ಣದ ಮಾತಿನಿಂದ 41 ಲಕ್ಷ ಪೀಕಿದ ಮಾಯಾಂಗನೆ!

    ಅಜ್ಞಾತ ಸಖಿ ಸಹವಾಸ, ಲಕ್ಷ ಲಕ್ಷ ಗೋತ – ಬಣ್ಣದ ಮಾತಿನಿಂದ 41 ಲಕ್ಷ ಪೀಕಿದ ಮಾಯಾಂಗನೆ!

    ವಿಜಯಪುರ: ಇತ್ತಿಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ (Social Media) ಸದುಪಯೋಗದ ಬದಲು ದುರುಪಯೋಗವೇ ಹೆಚ್ಚಾಗುತ್ತಿದೆ. ಇನ್ನು ಕೆಲವರಂತು ಇದನ್ನೇ ಬಂಡವಾಳ ಮಾಡಿಕೊಂಡು ಹೊಸ ಹೊಸ ವಿನೂತನ ಹಣ ದೋಚಿ ಪರಾರಿಯಾಗುವ ಸುದ್ದಿಗಳು ಬಂದಿವೆ. ಇಷ್ಟಾದ್ರೂ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಬೆಳದಿಂಗಳ ಬಾಲೆಯ ಬಲೆಗೆ ಬಿದ್ದು ಅಮಾಯಕನೋರ್ವ ಲಕ್ಷ ಲಕ್ಷ ಕಳೆದುಕೊಂಡು ಕಂಗಾಲಾದಿದ್ದಾನೆ.

    ಮೂಲತಃ ವಿಜಯಪುರ ಜಿಲ್ಲೆಯ ಅಲಮೇಲ ತಾಲೂಕಿನ ಬಗಲೂರ ಗ್ರಾಮದ ಪರಮೇಶ್ವರ್ (Parameshwar) ಹಿಪ್ಪರಗಿ. ಇವರು ಸದ್ಯ ತೆಲಾಂಗಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿ. ತನ್ನ ಸ್ವಗ್ರಾಮದಲ್ಲಿದ್ದಾಗ ಕಳೆದ ಜೂನ್ 29 ರಂದು ಮಂಜುಳಾ ಕೆ.ಆರ್ ಎಂಬ ಫೇಸ್ ಬುಕ್ (Facebook) ಅಕೌಂಟ್‍ನಿಂದ ಫ್ರೇಂಡ್ ರಿಕ್ವೆಸ್ಟ್ ಬಂದಿದೆ. ಅದನ್ನ ಪರಮೇಶ್ವರ್ ಕನ್ ಫರ್ಮ ಮಾಡ್ತಿದಂತೆ ಆ ಕಡೆಯಿಂದ ಯುವತಿ ಮೆಸೆಂಜರ್‍ನಲ್ಲಿ ಹಾಯ್ ಅಂತಾ ಸಂದೇಶ ಕಳಿಸಿ ಪರಮೇಶ್ವರನನ್ನ ಖೆಡ್ಡಾಕ್ಕೆ ಕೆಡವಿದ್ದಾಳೆ. ನಂತರ ಪ್ರತಿ ದಿನ ಮೆಸೇಜ್ ಮಾಡುವ ಮೂಲಕ ಅಜ್ಞಾತ ಸಖಿಯೊಂದಿಗೆ ಪರಮೇಶ್ವರ್ ಸಲುಗೆ ಬೆಳಸಿಕೊಂಡಿದ್ದಾನೆ.

    BRIBE

    ಅಕ್ಟೋಬರ್ 14 ರಂದು ತಾಯಿ ಆರೋಗ್ಯ ಸರಿಯಿಲ್ಲ 700 ರೂ ಫೋನ್ ಪೇ ಮಾಡಲು ಸಂದೇಶ ಬಂದಿದೆ. ಆಗ ಪರಮೇಶ್ವರ 2000 ರೂ ಹಾಕಿದ್ದಾನೆ. ನಂತರ ಒಂದು ವಾರದ ಕಳೆದ ಮೇಲೆ ತಾಯಿ ಮೃತಳಾಗಿದ್ದಾಳೆ ಅಂತಾ 2000 ರೂ. ಕಳಿಸಲು ಸಂದೇಶ ಬಂದಿದೆ. ಆಗಲೂ ಕೂಡ ಪರಮೇಶ್ವರ್ 2000 ರೂ ಹಾಕಿದ್ದಾನೆ. ಅದೇ ರೀತಿ ಬೆಳದಿಂಗಳ ಬಾಲೆ ಕೇಳಿದಷ್ಟು, ಕೇಳಿದಾಗೆಲ್ಲ ಪರಮೇಶ್ವರ ಹಣ ಹಾಕಿದ್ದಾನೆ. ಕೆಲ ದಿನಗಳ ನಂತರ ಮಂಜುಳಾ ಕರೆ ಮಾಡಿ ಪರಮೇಶ್ವರ್‍ಗೆ ತಾನು ಐಎಎಸ್ (IAS) ಪರೀಕ್ಷೆ ಪಾಸ್ ಆಗಿದ್ದೇನೆ. ಡಿಸಿ ಪೋಸ್ಟ್ ಸಿಗುತ್ತದೆ. ಸದ್ಯ ಹಾಸನದಲ್ಲಿದ್ದೇನೆ ನನ್ನನ್ನು ನೋಡಿಕೊಳ್ಳುವವರು ಯಾರೂ ಇಲ್ಲ. ಬೆಂಗಳೂರಿಗೆ ಹೋಗಬೇಕಿದ್ದು, ಖರ್ಚಿಗೆ ಹಣವಿಲ್ಲ. ಹಣಕಾಸಿನ ಸಹಾಯ ಮಾಡಿದ್ರೆ ಮದುವೆ ಆಗುತ್ತೇನೆ ಅಂತಾ ಬುರುಡೆ ಬಿಟ್ಟಿದ್ದಾಳೆ. ಇದನ್ನೂ ಓದಿ: ಚಿಲುಮೆ ಅಕ್ರಮ ಪ್ರಕರಣ – ಪ್ರಮುಖ ಆರೋಪಿ ರವಿಕುಮಾರ್ ಬಂಧನ

    ಇದನ್ನ ನಂಬಿ ದುರಾಸೆಗೆ ಬಿದ್ದ ಪರಮೇಶ್ವರ್ 50 ಸಾವಿರ ರೂ ಹಾಕಿದ್ದಾನೆ. ಮತ್ತೆ ಕೆಲ ದಿನಗಳ ನಂತರ ಮತ್ತಷ್ಟು ಸಲುಗೆಯಿಂದ, ಪ್ರೀತಿಯಿಂದ ಮಾತನಾಡಿ ಹಂತ, ಹಂತವಾಗಿ ಅಷ್ಟಿಷ್ಟಲ್ಲ ಬರೋಬ್ಬರಿ 41.26 ಲಕ್ಷ ಪೀಕಿದ್ದಾಳೆ. ನಂತರ ತನ್ನ ಕಿಸೆ ಖಾಲಿ ಆಗಿದೆ ಅಂತಾ ಪರಮೆಶ್ವರ್ ಮಂಜುಳಾಗೆ ಹೇಳಿದ್ದಾನೆ. ಆಗ ಪಾಪ ಸ್ವಲ್ಪ ಖರ್ಚಿಗೆ ಇರ್ಲಿ ಅಂತಾ ಪರಮೇಶ್ವರ್‍ಗೆ ಮಂಜುಳಾ 2.21 ಲಕ್ಷ ರೂ ಹಾಕಿದ್ದಾಳೆ. ತದನಂತರ ಮಂಜುಳಾ ಮತ್ತೆ ಹಣಕ್ಕೆ ಪರಮೇಸ್ವರ್‍ಗೆ ಬೇಡಿಕೆ ಇಟ್ಟಿದ್ದಾಳೆ. ಈ ವೇಳೆ ಬೆಳದಿಂಗಳ ಬಾಲೆಯ ಮೇಲೆ ಸಂಶಯ ಬಂದು ಪರಮೇಶ್ವರ್ ನವೆಂಬರ್ 15ರಂದು ವಿಜಯಪುರದ ಸಿಇಎನ್ ಪೋಲಿಸ್ ಠಾಣೆಯಲ್ಲಿ ಮಂಜುಳಾ ವಿರುದ್ಧ ವಂಚನೆ ಕೇಸ್ ದಾಖಲಿಸಿದ್ದಾನೆ. ಸದ್ಯ ಸಿಂದಗಿ ಪೊಲಿಸ್ ಠಾಣೆಗೆ ಕೇಸ್ ವರ್ಗಾವಣೆ ಆಗಿದ್ದು, ಮಹಾ ವಂಚಕಿ ಬೆಳದಿಂಗಳ ಬಾಲೆ ಮಂಜುಳಾಗಾಗಿ ಬಲೆ ಬೀಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]