Tag: manjummel boys

  • ‘ಮಂಜುಮ್ಮೆಲ್ ಬಾಯ್ಸ್’ ಚಿತ್ರತಂಡಕ್ಕೆ ಲೀಗಲ್ ನೋಟಿಸ್ ಕೊಟ್ಟ ಇಳಯರಾಜ

    ‘ಮಂಜುಮ್ಮೆಲ್ ಬಾಯ್ಸ್’ ಚಿತ್ರತಂಡಕ್ಕೆ ಲೀಗಲ್ ನೋಟಿಸ್ ಕೊಟ್ಟ ಇಳಯರಾಜ

    ಲಯಾಳಂನಲ್ಲಿ ಇತ್ತೀಚೆಗೆ ತೆರೆಕಂಡ ‘ಮಂಜುಮ್ಮೆಲ್ ಬಾಯ್ಸ್’ (Manjummel Boys) ಇದೀಗ ಸಂಕಷ್ಟ ಎದುರಾಗಿದೆ. ಈ ಚಿತ್ರದಲ್ಲಿ ತಾವು ಸಂಗೀತ ಸಂಯೋಜನೆ ಮಾಡಿದ್ದ ‘ಕಣ್ಮಣಿ’ ಹಾಡನ್ನು ಬಳಸಲಾಗಿದೆ ಎಂದು ಸಂಗೀತ ಮಾಂತ್ರಿಕ ಇಳಯರಾಜ (Ilaiyaraja) ಕಾನೂನು ಸಮರ ಸಾರಿದ್ದಾರೆ. ತಮ್ಮ ಹಾಡು ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದಲ್ಲಿ ಬಳಕೆ ಆಗಿದೆ ಎಂದು ಚಿತ್ರದ ನಿರ್ಮಾಪಕರಿಗೆ ನೋಟಿಸ್ ನೀಡಿದ್ದಾರೆ.

    ಕಮಲ್‌ ಹಾಸನ್‌ ನಟನೆಯ ‘ಗುಣ’ (Guna) ಸಿನಿಮಾ ರಿಲೀಸ್ ಆಗಿದ್ದು 1991ರಲ್ಲಿ. ಈ ಚಿತ್ರಕ್ಕೆ ಇಳಯರಾಜ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಈ ಸಿನಿಮಾದ ‘ಕಣ್ಮಣಿ ಅನ್ಬೊದು’ ಹಾಡು ಗಮನ ಸೆಳೆದಿತ್ತು. ಈ ಹಾಡು ‘ಮಂಜುಮ್ಮೇಲ್ ಬಾಯ್ಸ್’ನಲ್ಲಿ ಬಳಕೆ ಆಗಿದೆ. ಆದರೆ, ಇದನ್ನು ಅಕ್ರಮವಾಗಿ ಬಳಕೆ ಮಾಡಿದ್ದಾರೆ ಎಂದು ಇಳಯರಾಜ ಆರೋಪಿಸಿದ್ದಾರೆ. ಇದನ್ನೂ ಓದಿ:ಮತ್ತೆ ಡೈರೆಕ್ಟರ್‌ ಶಶಾಂಕ್‌ ಜೊತೆ ಕೈಜೋಡಿಸಿದ ಡಾರ್ಲಿಂಗ್ ಕೃಷ್ಣ

    ‘ಮಂಜುಮ್ಮೇಲ್ ಬಾಯ್ಸ್’ ನಿರ್ಮಾಣ ಮಾಡಿದ್ದ ಸೌಬಿನ್ ಶಾಹಿರ್ ಅವರಿಗೆ ಇಳಯರಾಜ ಕಡೆಯಿಂದ ನೋಟಿಸ್ ಹೋಗಿದೆ. ‘ಕಣ್ಮಣಿ ಅನ್ಬೋದು ಕಾದಲನ್’ ಹಾಡಿನ ಹಕ್ಕು ನಮ್ಮದು ಎಂದು ಅವರು ಹೇಳಿದ್ದಾರೆ. ಕಣ್ಮಣಿ ಹಾಡನ್ನು ಅಕ್ರಮವಾಗಿ ಬಳಕೆ ಮಾಡಲಾಗಿದ್ದು, ಇಳಯರಾಜ ಅವರು ಈ ಹಾಡಿನ ಸಂಪೂರ್ಣ ಹಕ್ಕನ್ನು ಹೊಂದಿದ್ದಾರೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

    ಈ ಎಲ್ಲಾ ಸಂಗೀತ ಕೃತಿಗಳ ಮೇಲೆ ನೈತಿಕ ಹಕ್ಕುಗಳನ್ನು ಒಳಗೊಂಡಂತೆ ಸಂಪೂರ್ಣ ಹಕ್ಕುಗಳನ್ನು ಹೊಂದಿದ್ದಾರೆ. ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದ ನಿರ್ಮಾಪಕರಿಗೆ ಸಂಗೀತ ಸಂಯೋಜಕರ ಅನುಮತಿ ಪಡೆಯಿರಿ ಅಥವಾ 15 ದಿನಗಳಲ್ಲಿ ಪರಿಹಾರವನ್ನು ಪಾವತಿಸುವಂತೆ ಜೊತೆಗೆ ಚಿತ್ರದಿಂದ ಹಾಡನ್ನು ತೆಗೆದು ಹಾಕುವಂತೆ ನೋಟಿಸ್‌ನಲ್ಲಿ ಸೂಚನೆ ನೀಡಿದ್ದಾರೆ ಇಳಯರಾಜ ಪರ ವಕೀಲರು. ಎರಡು ಆಯ್ಕೆಯಲ್ಲಿ ಒಂದನ್ನು ಪಾಲಿಸದಿದ್ದರೆ ಅವರ ವಿರುದ್ಧ ನೋಟಿಸ್ ನೀಡೋದಾಗಿ ಎಚ್ಚರಿಕೆ ನೀಡಿದ್ದಾರೆ.

  • ಕನ್ನಡದಲ್ಲೂ ನೋಡಿ ಮಲಯಾಳಂನ ‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾ

    ಕನ್ನಡದಲ್ಲೂ ನೋಡಿ ಮಲಯಾಳಂನ ‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾ

    ಬಾಕ್ಸ್ ಆಫೀಸ್ ನಲ್ಲಿ ಇನ್ನೂರು ಕೋಟಿಗೂ ಅಧಿಕ ಹಣವನ್ನು ಬಾಚಿರುವ ಮಲಯಾಳಂನ ಮಂಜುಮ್ಮೆಲ್ ಬಾಯ್ಸ್ ಸಿನಿಮಾ ಓಟಿಟಿಗೆ ಬರುವ ಸಜ್ಜಾಗಿದೆ. ಸಿನಿಮಾ ಬಿಡುಗಡೆಯಾದಾಗ ಮಲಯಾಳಂ ಮತ್ತು ತೆಲುಗಿನಲ್ಲಿ ನೋಡಿದ ಪ್ರೇಕ್ಷಕರು ಓಟಿಟಿಯಲ್ಲಿ (OTT) ಕನ್ನಡವೂ (Kannada) ಸೇರಿದಂತೆ ಇತರ ಭಾಷೆಗಳಲ್ಲೂ ನೋಡಬಹುದಾಗಿದೆ.

    ಮೇ 2 ರಂದು ಹಾಟ್ ಸ್ಟರ್ ನಲ್ಲಿ ಈ ಸಿನಿಮಾ ಸ್ಟ್ರೀಮಿಂಗ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ 50 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿರುವ ಚಿತ್ರವು ಮೊನ್ನೆಯಷ್ಟೇ ತೆಲುಗಿಗೂ ಡಬ್ ಆಗಿದೆ.

    ‘ಮಂಜುಮ್ಮೆಲ್ ಬಾಯ್ಸ್’ (Manjummel Boys) ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಅದಷ್ಟೇ ಅಲ್ಲ, ಈ ಸಿನಿಮಾ ನೋಡಿ, ಚಿತ್ರತಂಡವನ್ನು ಮನೆಗೆ ಕರೆಸಿ ರಜನಿಕಾಂತ್ (Rajanikanth) ಮೊನ್ನೆಯಷ್ಟೇ ಸತ್ಕರಿಸಿದ್ದಾರೆ. ತಂಡದ ಶ್ರಮಕ್ಕೆ ತಲೈವಾ ಭೇಷ್ ಎಂದಿದ್ದಾರೆ.

     

    ‘ಮಂಜುಮ್ಮೆಲ್ ಬಾಯ್ಸ್’ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಗಳಿಕೆ ಕಾಣುತ್ತಿದೆ. ಕಮಲ್ ಹಾಸನ್ ನಂತರ ರಜನಿಕಾಂತ್ ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಚೆನ್ನೈನಲ್ಲಿರುವ ತಮ್ಮ ನಿವಾಸಕ್ಕೆ ಕರೆಸಿ ಚಿತ್ರತಂಡವನ್ನು ರಜನಿಕಾಂತ್ ಸತ್ಕರಿಸಿದ್ದಾರೆ. ನಟರಾದ ಗಣಪತಿ, ಚಂದು ಸಲೀಂಕುಮಾರ್, ದೀಪಕ್ ಪರಂಬೋಲ್, ನಟ ಅರುಣ್ ಜೊತೆ ಡೈರೆಕ್ಟರ್ ಚಿದಂಬರಂ ಅವರು ರಜನಿಕಾಂತ್‌ರನ್ನು ಭೇಟಿಯಾಗಿ ಸಂಭ್ರಮಿಸಿದ್ದಾರೆ.

  • ಏಪ್ರಿಲ್ 6ಕ್ಕೆ ತೆಲುಗಿನಲ್ಲಿ ರಿಲೀಸ್ ಆಗಲಿದೆ ‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ

    ಏಪ್ರಿಲ್ 6ಕ್ಕೆ ತೆಲುಗಿನಲ್ಲಿ ರಿಲೀಸ್ ಆಗಲಿದೆ ‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ

    ಲಯಾಳಂ ಸೂಪರ್ ಹಿಟ್ ಸಿನಿಮಾ ಮಂಜುಮ್ಮೇಲ್ ಬಾಯ್ಸ್ (Manjummel Boys) ಏಪ್ರಿಲ್ 6ರಂದು ತೆಲುಗಿನಲ್ಲಿ (Telugu) ಬಿಡುಗಡೆ ಆಗುತ್ತಿದೆ. ಬಾಕ್ಸ್ ಆಫೀಸಿನಲ್ಲಿ ನೂರಾರು ಕೋಟಿಗಳನ್ನು ಬಾಚಿರುವ ಈ ಚಿತ್ರ ತೆಲುಗಿನಲ್ಲಿ ಹೇಗೆ ಮೋಡಿ ಮಾಡಬಹುದು ಎನ್ನುವ ಕುತೂಹಲ ಮೂಡಿದೆ. ತೆಲುಗಿಗೆ ಡಬ್ಬಿಂಗ್ ರೈಟ್ಸ್ ತಗೆದುಕೊಂಡಾಗಲೇ ಭಾರೀ ಸದ್ದು ಮಾಡಿತ್ತು. ಇದೀಗ ಅಷ್ಟೇ ಉತ್ಸಾಹದಿಂದಲೇ ತೆಲುಗಿನಲ್ಲಿ ಬಿಡುಗಡೆ ಮಾಡಲಾಗುತ್ತಿದೆ.

    ಮೊನ್ನೆಯಷ್ಟೇ ಈ ಸಿನಿಮಾವನ್ನು ವೀಕ್ಷಿಸಿದ್ದ ರಜನಿಕಾಂತ್ ಚಿತ್ರತಂಡವನ್ನು ಮನೆಗೆ ಕರೆಸಿ ಸತ್ಕರಿಸಿದ್ದರು. ಪ್ರತಿಯೊಬ್ಬ ಸದಸ್ಯನ ಶ್ರಮಕ್ಕೆ ತಲೈವಾ ಭೇಷ್ ಎಂದಿದ್ದರು. ಇಂತಹ ಸಿನಿಮಾಗಳನ್ನು ಎಲ್ಲರೂ ಮೆಚ್ಚಬೇಕು ಎಂದು ಕರೆ ನೀಡಿದ್ದರು.

    ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಗಳಿಕೆ ಕಾಣುತ್ತಿದೆ. ಕಮಲ್ ಹಾಸನ್ ನಂತರ ರಜನಿಕಾಂತ್ ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಚೆನ್ನೈನಲ್ಲಿರುವ ತಮ್ಮ ನಿವಾಸಕ್ಕೆ ಕರೆಸಿ ಚಿತ್ರತಂಡವನ್ನು ರಜನಿಕಾಂತ್ ಸತ್ಕರಿಸಿದ್ದಾರೆ. ನಟರಾದ ಗಣಪತಿ, ಚಂದು ಸಲೀಂಕುಮಾರ್, ದೀಪಕ್ ಪರಂಬೋಲ್, ನಟ ಅರುಣ್ ಜೊತೆ ಡೈರೆಕ್ಟರ್ ಚಿದಂಬರಂ ಅವರು ರಜನಿಕಾಂತ್‌ರನ್ನು ಭೇಟಿಯಾಗಿ ಸಂಭ್ರಮಿಸಿದ್ದಾರೆ.

     

    ರಜನಿಕಾಂತ್ (Rajanikanth) ಅವರಿಗೆ ಯಾವುದೇ ಸಿನಿಮಾ ಅವರಿಗೆ ಇಷ್ಟವಾದಲ್ಲಿ ಆ ಚಿತ್ರತಂಡವನ್ನು ಮನೆಗೆ ಕರೆಸಿ ಉಪಚರಿಸುತ್ತಾರೆ. ಚಿತ್ರತಂಡಕ್ಕೆ ಮೆಚ್ಚುಗೆ ತಿಳಿಸುತ್ತಾರೆ. ಈ ಹಿಂದೆ ಕೂಡ ‘ಕಾಂತಾರ’ (Kantara) ಚಿತ್ರದ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರನ್ನು ಸತ್ಕರಿಸಿದ್ದರು. ‘ಕಾಂತಾರ’ ಚಿತ್ರವನ್ನು ತಲೈವಾ ಹಾಡಿ ಹೊಗಳಿದ್ದರು. ಅದಷ್ಟೇ ಅಲ್ಲ, ಚಿನ್ನದ ಚೈನ್ ಅನ್ನು ಉಡುಗೊರೆಯಾಗಿ ನೀಡಿದ್ದರು.

  • ‘ಮಂಜ್ಞುಮ್ಮೆಲ್ ಬಾಯ್ಸ್’ ಚಿತ್ರತಂಡವನ್ನು ಮನೆಗೆ ಆಹ್ವಾನಿಸಿ ಭೇಷ್‌ ಎಂದ ತಲೈವಾ

    ‘ಮಂಜ್ಞುಮ್ಮೆಲ್ ಬಾಯ್ಸ್’ ಚಿತ್ರತಂಡವನ್ನು ಮನೆಗೆ ಆಹ್ವಾನಿಸಿ ಭೇಷ್‌ ಎಂದ ತಲೈವಾ

    ಮಾಲಿವುಡ್‌ನಲ್ಲಿ (Mollywood) ಇದೀಗ ಹೊಸಬರ ತಂಡವೊಂದು ಭಾರೀ ಸದ್ದು ಮಾಡುತ್ತಿದೆ. ‘ಮಂಜ್ಞುಮ್ಮೆಲ್ ಬಾಯ್ಸ್’ (Manjummel Boys) ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಅದಷ್ಟೇ ಅಲ್ಲ, ಈ ಸಿನಿಮಾ ನೋಡಿ, ಚಿತ್ರತಂಡವನ್ನು ಮನೆಗೆ ಕರೆಸಿ ರಜನಿಕಾಂತ್ (Rajanikanth) ಸತ್ಕರಿಸಿದ್ದಾರೆ. ತಂಡದ ಶ್ರಮಕ್ಕೆ ತಲೈವಾ ಭೇಷ್ ಎಂದಿದ್ದಾರೆ.

    ‘ಮಂಜ್ಞುಮ್ಮೆಲ್ ಬಾಯ್ಸ್’ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಗಳಿಕೆ ಕಾಣುತ್ತಿದೆ. ಕಮಲ್ ಹಾಸನ್ ನಂತರ ರಜನಿಕಾಂತ್ ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಚೆನ್ನೈನಲ್ಲಿರುವ ತಮ್ಮ ನಿವಾಸಕ್ಕೆ ಕರೆಸಿ ಚಿತ್ರತಂಡವನ್ನು ರಜನಿಕಾಂತ್ ಸತ್ಕರಿಸಿದ್ದಾರೆ. ನಟರಾದ ಗಣಪತಿ, ಚಂದು ಸಲೀಂಕುಮಾರ್, ದೀಪಕ್ ಪರಂಬೋಲ್, ನಟ ಅರುಣ್ ಜೊತೆ ಡೈರೆಕ್ಟರ್ ಚಿದಂಬರಂ ಅವರು ರಜನಿಕಾಂತ್‌ರನ್ನು ಭೇಟಿಯಾಗಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ:‘ಕಲ್ಪನಾ 2’ ಚಿತ್ರದ ಖಳನಟ ಪ್ರಕಾಶ್ ಹೆಗ್ಗೋಡು ನಿಧನ

    ರಜನಿಕಾಂತ್ (Rajanikanth) ಅವರಿಗೆ ಯಾವುದೇ ಸಿನಿಮಾ ಅವರಿಗೆ ಇಷ್ಟವಾದಲ್ಲಿ ಆ ಚಿತ್ರತಂಡವನ್ನು ಮನೆಗೆ ಕರೆಸಿ ಉಪಚರಿಸುತ್ತಾರೆ. ಚಿತ್ರತಂಡಕ್ಕೆ ಮೆಚ್ಚುಗೆ ತಿಳಿಸುತ್ತಾರೆ. ಈ ಹಿಂದೆ ಕೂಡ ‘ಕಾಂತಾರ’ (Kantara) ಚಿತ್ರದ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರನ್ನು ಸತ್ಕರಿಸಿದ್ದರು. ‘ಕಾಂತಾರ’ ಚಿತ್ರವನ್ನು ತಲೈವಾ ಹಾಡಿ ಹೊಗಳಿದ್ದರು. ಅದಷ್ಟೇ ಅಲ್ಲ, ಚಿನ್ನದ ಚೈನ್ ಅನ್ನು ಉಡುಗೊರೆಯಾಗಿ ನೀಡಿದ್ದರು.

    ‘ಮಂಜ್ಞುಮ್ಮೆಲ್ ಬಾಯ್ಸ್’ ಚಿತ್ರ ನಿರ್ದೇಶಕನಿಗೆ ಧನುಷ್‌ಗೆ ನಿರ್ದೇಶನ ಮಾಡುವ ಅವಕಾಶ ಸಿಕ್ಕಿದೆ ಎನ್ನಲಾಗುತ್ತಿದೆ.  ಈ ಸಿನಿಮಾ ಬಗ್ಗೆ ಅಧಿಕೃತ ಮಾಹಿತಿ ಸಿಗುವವರೆಗೂ ಕಾಯಬೇಕಿದೆ.