ಬೆಂಗಳೂರು: ಕಾಂಗ್ರೆಸ್ (Congress) ಮುಖಂಡ ಮಂಜುನಾಥ ಗೌಡ (Manjunath Gowda) ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದ್ದು 13.91 ಕೋಟಿ ರೂ. ಮೌಲ್ಯದ ಚರಾಸ್ತಿ ಹಾಗೂ ಸ್ತಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನಲ್ಲಿ (Shivamogga DCC Bank Scam) ನಕಲಿ ಚಿನ್ನಾಭರಣ ಅಡವಿಟ್ಟು 62.77 ಕೋಟಿ ರೂ. ಸಾಲ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕಳೆದ ಏಪ್ರಿಲ್ ನಲ್ಲಿ ಶಿವಮೊಗ್ಗದಲ್ಲಿ ಮಂಜುನಾಥ ಗೌಡ ಅವರ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ ನಡೆಸಿತ್ತು. ಇದನ್ನೂ ಓದಿ: ಪತ್ನಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆ
ಸ್ಥಿರ ಮತ್ತು ಚರ ಆಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇಡಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.
ಶಿವಮೊಗ್ಗದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶಿವಮೊಗ್ಗ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಮಂಜುನಾಥ್ ಗೌಡ ಪರಪ್ಪನ ಅಗ್ರಹಾರದಲ್ಲಿ (Parappana Agrahara) ನ್ಯಾಯಾಂಗ ಬಂಧನದಲ್ಲಿದ್ದಾರೆ.
ಶಿವಮೊಗ್ಗ/ ಬೆಂಗಳೂರು: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank Shivamogga) ಹಗರಣ ಪ್ರಕರಣದಲ್ಲಿ ಬ್ಯಾಂಕ್ನ ಮಾಜಿ ಅಧ್ಯಕ್ಷ ಮಂಜುನಾಥ್ ಅವರನ್ನು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬಂಧಿಸಿದ್ದಾರೆ.
ಮಂಗಳವಾರ (ಏ.8) ಮಂಜುನಾಥ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದರು. ಅವರ ನಿವಾಸ ಸೇರಿದಂತೆ 8 ಕಡೆ ಇಡಿ ದಾಳಿ ನಡೆಸಿದೆ. ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಗೆಸ್ಟ್ಹೌಸ್ ಮೇಲೂ ದಾಳಿ ನಡೆಸಲಾಗಿತ್ತು. ಈ ವೇಳೆ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಇಂದು (ಏ.9) ಅವರನ್ನು ಬಂಧಿಸಿ, 1ನೇ ಸಿಸಿಹೆಚ್ ಕೋರ್ಟ್ಗೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಅವರನ್ನು 14 ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿದೆ. ಇದನ್ನೂ ಓದಿ: ಶಿವಮೊಗ್ಗ ಡಿಸಿಸಿ ಬ್ಯಾಂಕ್, ಅಧ್ಯಕ್ಷ ಮಂಜುನಾಥ ಗೌಡ ನಿವಾಸದ ಮೇಲೆ ಇಡಿ ದಾಳಿ
ಕೋಟ್ಯಂತರ ರೂ. ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಡಿಸಿಸಿ ಬ್ಯಾಂಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಮಂಜುನಾಥ ಗೌಡ ಅವರನ್ನು ಎಸಿಬಿ ಬಂಧನ ಮಾಡಿತ್ತು. ಆದರೆ ಚಾರ್ಜ್ ಶೀಟ್ನಲ್ಲಿ ಮಂಜುನಾಥ್ ಗೌಡ ಹೆಸರನ್ನು ಕೈಬಿಡಲಾಗಿತ್ತು. ಬಳಿಕ ಇಡಿ ಇಸಿಐಆರ್ ದಾಖಲು ಮಾಡಿ ತನಿಖೆ ನಡೆಸಲು ಮುಂದಾಗಿತ್ತು.
ಕೋಟ್ಯಂತರ ರೂ ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಡಿಸಿಸಿ ಬ್ಯಾಂಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಮಂಜುನಾಥ ಗೌಡ ಅವರನ್ನು ಎಸಿಬಿ ಬಂಧನ ಮಾಡಿತ್ತು. ಆದರೆ ಚಾರ್ಜ್ ಶೀಟ್ ಅಲ್ಲಿ ಮಂಜುನಾಥ್ ಗೌಡ ಹೆಸರನ್ನು ಕೈಬಿಡಲಾಗಿತ್ತು. ಬಳಿಕ ಇಡಿ ಇಸಿಐಆರ್ ದಾಖಲು ಮಾಡಿ ತನಿಖೆ ನಡೆಸಲು ಮುಂದಾಗಿತ್ತು.
ಇಡಿ ತನಿಖೆಗೆ ಮುಂದಾಗುತ್ತಿದ್ದಂತೆ ಮಂಜುನಾಥ್ ಗೌಡ ಹೈಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದರು. ಇಡಿ ಕಾನೂನು ಹೋರಾಟದ ಬಳಿಕ ಹೈಕೋರ್ಟ್ ತಡೆಯಾಜ್ಞೆ ತೆರವು ಮಾಡಿತ್ತು.
ಕೆಂಪೇಗೌಡ ರಥ ಚಲಾಯಿಸುತ್ತಿದ್ದ ಚಾಲಕನ ಮೇಲೂ ಹಲ್ಲೆ ಮಾಡಿ ಕೆಳಗಿಳಿಸಿ ತಾನೇ ರಥದ ವಾಹನ ಚಲಾವಣೆ ಮಾಡಿದ್ದು ಬಿಜೆಪಿ (BJP) ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ವಿಶೇಷ ಎಂದರೆ ಇಷ್ಟೆಲ್ಲಾ ಸಂಸದ ಮುನಿಸ್ವಾಮಿ ಎದುರೇ ನಡೆದಿದ್ದು, ಮುನಿಸ್ವಾಮಿ ಮಾತಿಗೂ ಕೇರ್ ಮಾಡದೇ ನುಗ್ಗುವ ಮಾಜಿ ಶಾಸಕನ ದೌರ್ಜನ್ಯದ ವಿರುದ್ಧ ಜನ ಎಚ್ಚೆತ್ತುಕೊಳ್ಳಬೇಕು ಎಂದು ಎಲ್ಲೆಡೆ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ಹರಿ ಬಿಡಲಾಗಿದೆ. ಇದನ್ನೂ ಓದಿ: ಬಾಡಿಗೆ ತಾಯ್ತನ ಮೂಲಕ ಮಗ-ಸೊಸೆಯ ಮಗುವಿಗೆ ಜನ್ಮ ಕೊಟ್ಟ ಅಜ್ಜಿ
ಕೆಂಪೇಗೌಡ ರಥಯಾತ್ರೆಗೆ ಸ್ವಾಗತಿಸುವ ವೇಳೆಯಲ್ಲಿ ಬಿಜೆಪಿ ಎರಡು ಗುಂಪುಗಳ ನಡುವೆ ನಿನ್ನೆ ಸಂಜೆ ಮಾರಾಮಾರಿ ನಡೆದಿತ್ತು. ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್ ಹಾಗೂ ಮಾಜಿ ಶಾಸಕ ಮಂಜುನಾಥಗೌಡ ಬಣಗಳ ನಡುವೆ ಮಾರಾಮಾರಿ ತಳ್ಳಾಟ ನೂಕಾಟ ನಡೆದು ದೊಡ್ಡ ಹೈಡ್ರಾಮಾವೇ ನಡೆದಿತ್ತು. ರಥಯಾತ್ರೆಗೆ ಕಳಶಗಳೊಂದಿಗೆ ಸ್ವಾಗತಕ್ಕೆ ಮಾಡಲಾಗಿದ್ದ ಸಿದ್ಧತೆಯನ್ನು ಲೆಕ್ಕಿಸದೇ ರಥದ ವಾಹನ ಹತ್ತಿದ ಮಾಜಿ ಶಾಸಕ ಜನರತ್ತ ನುಗ್ಗಿಸುವ ವೀಡಿಯೋ ಇದಾಗಿದೆ. ಮಂಜುನಾಥಗೌಡ ರಥಯಾತ್ರೆ ಬರುವ ಮುನ್ನವೇ ಕಳಶಗಳನ್ನು ವೇದಿಕೆ ಬಳಿ ಕೆರದೊಯ್ದ ಹಿನ್ನೆಲೆ, ಹೂಡಿ ವಿಜಯ್ ಕುಮಾರ್ ಮತ್ತು ಬೆಂಬಲಿಗರು ಕಳಶಗಳನ್ನು ರಥಯಾತ್ರೆ ಜೊತೆಗೆ ಕೆರತರಲು ಒತ್ತಾಯಿಸಿ ರಥಯಾತ್ರೆ ಎದುರು ಪ್ರತಿಭಟನೆಯನ್ನು ನಡೆಸಿದ್ದಾರೆ.
ಈ ವೇಳೆ ನುಗ್ಗಿ ಬರುವ ಮಂಜುನಾಥಗೌಡ ಪೊಲೀಸರನ್ನು ತಳ್ಳಿ, ಬಿಜಿಪಿ ಮುಖಂಡ ಗೋಪಾಲಗೌಡ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೇ ಮಂಜುನಾಥ್ ಗೌಡರ ಈ ದೌರ್ಜನ್ಯ ಸರಿಯಲ್ಲ ತಾಲೂಕಿನ ಹೊರಗಿನವರು ಇಲ್ಲಿ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡರು ಆಕ್ರೋಶ ಹೊರ ಹಾಕಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ತೀರ್ಥಹಳ್ಳಿ ಕಾಂಗ್ರೆಸ್ನ ಎರಡೆರಡು ನಿಯೋಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರನ್ನು ಸದಾಶಿವನಗರ ನಿವಾಸದಲ್ಲಿ ಇಂದು ಭೇಟಿ ಮಾಡಿ ರಾಜಕೀಯ ಮೇಲಾಟಕ್ಕೆ ವೇದಿಕೆಯನ್ನಾಗಿಸಿಕೊಂಡಿದ್ದಾರೆ.
ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಕಾಂಗ್ರೆಸ್ ಅಧಿಕಾರ ಹಿಡಿದ ಹಿನ್ನೆಲೆಯಲ್ಲಿ ಸದಸ್ಯರನ್ನು ಡಿಕೆಶಿ ನಿವಾಸಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಕರೆ ತಂದಿದ್ದರು. ಕಿಮ್ಮೆನೆ, ಡಿಕೆಶಿ ನಿವಾಸಕ್ಕೆ ಭೇಟಿ ನೀಡಿದ ಬೆನ್ನಲ್ಲೆ ಡಿಕೆಶಿ ನಿವಾಸಕ್ಕೆ ಮಂಜುನಾಥ ಗೌಡ ಸಹಾ ಬಂದಿದ್ದಾರೆ. ಮಂಜುನಾಥ ಗೌಡ ಡಿಕೆಶಿ ಆಪ್ತ. ಕಿಮ್ನೆನೆ ವಿರೋಧದ ನಡುವೆ ಮಂಜುನಾಥ ಗೌಡರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದ ಡಿ.ಕೆ.ಶಿವಕುಮಾರ್, ಈಗ ಪಟ್ಟಣ ಪಂಚಾಯತ್ ಸದಸ್ಯರನ್ನು ಡಿಕೆಶಿ ನಿವಾಸಕ್ಕೆ ಕರೆತರುವಲ್ಲು ಇಬ್ಬರ ನಡುವೆ ಪೈಪೋಟಿ ಉಂಟಾಗಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ – ಗೃಹಸಚಿವರೇ ಧಮ್ ಇದ್ದರೆ ಅರೆಸ್ಟ್ ಮಾಡಿ: ಡಿಕೆಶಿ
ತೀರ್ಥಹಳ್ಳಿಯಲ್ಲಿ ಕಿಮ್ಮನೆ, ಮಂಜುನಾಥ್ ಗೌಡ ಫೈಟ್
ಡಿ.ಕೆ.ಶಿವಕುಮಾರ್ ಮನೆ ಅಂಹಳದಲ್ಲಿ ಟಾಕ್ ಫೈಟ್ ಆಗಿ ಪರಿವರ್ತನೆ ಆಯ್ತು. ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕಿಮ್ಮನೆ ರತ್ನಾಕರ್, ತೀರ್ಥಹಳ್ಳಿ ಕ್ಷೇತ್ರದಲ್ಲಿ ಏನೇ ಗೊಂದಲ ಇದ್ರು ಪಕ್ಷದ ವೇದಿಕೆಯಲ್ಲಿ ಚರ್ಚೆಮಾಡುತ್ತೇವೆ. ಆದರೆ ತೀರ್ಥಹಳ್ಳಿಯಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಏನೇ ಇದ್ದರು ಪಕ್ಷದ ವೇದಿಕೆಯಲ್ಲಿ ನಾಲ್ಕು ಗೋಡೆಗಳ ಮದ್ಯೆ ಪ್ರಸ್ತಾಪ ಮಾಡುತ್ತೇನೆ. ಭಿನ್ನಾಭಿಪ್ರಾಯ ಇರಬೇಕು ಅದು ಆಂತರಿಕ ಪ್ರಜಾಪ್ರಭುತ್ವಕ್ಕೆ ಸಾಕ್ಷಿ ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವವಿಲ್ಲ. ಅಲ್ಲಿ ಮೋದಿ ಜೊತೆ ಪಕ್ಷದ ಮುಖಂಡರು ಮಾತನಾಡಲು ಸಾಧ್ಯವಿಲ್ಲ. ಆದರೆ ಕಾಂಗ್ರೆಸ್ನಲ್ಲಿ ಆಂತರಿಕ ಚರ್ಚೆ ಮಾಡಲು ಸಾಧ್ಯವಿದೆ ಏನೇ ಭಿನ್ನಾಭಿಪ್ರಾಯ ಇದ್ದರು ಪಕ್ಷದ ನಾಯಕರ ಜೊತೆ ಚರ್ಚೆ ಮಾಡುತ್ತೇನೆ. ನಾನು ಪತ್ರ ಬರೆದಿದ್ದು ಪಕ್ಷದ ವೇದಿಕೆಯಲ್ಲಿ ಬರೆದಿದ್ದು ಅದನ್ನು ಮಾಧ್ಯಮ ಮುಂದೆ ಹೇಳುವ ಅವಶ್ಯಕತೆ ಇಲ್ಲ. ಮುಂದಿನ ಚುನಾವಣೆಯಲ್ಲಿ ಟಿಕೆಟ್ ಯಾರಿಗೆ ಅಂತ ನಾಯಕರು ತೀರ್ಮಾನ ಮಾಡ್ತಾರೆ. ಮತದಾರರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಯಾವುದೇ ಗೊಂದಲವಿಲ್ಲ ಎಂದರು. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – 10 ಸಾವಿರ ಕೋಟಿ ರೂ. ಹಗರಣ!
ಮಂಜುನಾಥ ಗೌಡ ಮಾತನಾಡಿ, ಕ್ಷೇತ್ರದಲ್ಲಿ ಆಕಾಂಕ್ಷಿಗಳು ಸಾಕಷ್ಟು ಜನ ಇದ್ದಾರೆ. ಆಕಾಂಕ್ಷಿಗಳು ಎಲ್ಲಾ ಅಭ್ಯರ್ಥಿ ಆಗಲು ಸಾಧ್ಯವಿಲ್ಲ. ನಾನು ಕೂಡ ಟಿಕೆಟ್ ಪ್ರಬಲ ಆಕಾಂಕ್ಷಿ. ಟಿಕೆಟ್ ಯಾರಿಗೆ ಕೊಡಬೇಕು ಎಂದು ತೀರ್ಥಹಳ್ಳಿಯಲ್ಲಿ ತೀರ್ಮಾನ ಆಗಲ್ಲ. ಕೆಪಿಸಿಸಿ ಮಟ್ಟದಲ್ಲಿ ತೀರ್ಮಾನ ಆಗುತ್ತದೆ. ಇಲ್ಲದಿದ್ದರೇ ಎಐಸಿಸಿ ಮಟ್ಟದಲ್ಲಿ ತೀರ್ಮಾನ ಆಗುತ್ತದೆ. ನನ್ನ ನಾಯಕರು ಡಿ.ಕೆ ಶಿವಕುಮಾರ್ ಅವರು ಹೇಳಿದಂತೆ ನಾನು ಕೇಳುತ್ತೇನೆ. ಕೆಲವರು ಪತ್ರವನ್ನು ಪ್ರೀತಿಯಿಂದ ಬರೆದಿರಬಹುದು. ಕಠೋರ ಶಬ್ದ ಬಳಸಿರಬಹುದು, ಪ್ರೀತಿ ಮಾಡುವ ವಯಸ್ಸು ಇದಲ್ಲ ಎಂದು ಕಿಮ್ಮನೆ ರತ್ನಾಕರ್ ಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ ಮುಚ್ಚಿಹಾಕಲು ಬಿಜೆಪಿ, ಕಾಂಗ್ರೆಸ್ ಯತ್ನ: ಎಚ್ಡಿಕೆ