Tag: Manmul

  • ಮಂಡ್ಯದಲ್ಲಿ ದಳಪತಿಗಳಿಗೆ ಮುಖಭಂಗ – ಮತ್ತೆ ‘ಕೈ’ ವಶವಾಯ್ತು ಮನ್ಮುಲ್‌ ಗದ್ದುಗೆ

    ಮಂಡ್ಯದಲ್ಲಿ ದಳಪತಿಗಳಿಗೆ ಮುಖಭಂಗ – ಮತ್ತೆ ‘ಕೈ’ ವಶವಾಯ್ತು ಮನ್ಮುಲ್‌ ಗದ್ದುಗೆ

    – ಜೆಡಿಎಸ್‌ ಶಾಸಕರ ವಿರುದ್ಧವೇ ಗೆದ್ದು ಬೀಗಿದ ಬಂಡಾಯ ಅಭ್ಯರ್ಥಿ

    ಮಂಡ್ಯ: ಮಂಡ್ಯದಲ್ಲಿ (Mandya) ದಳಪತಿಗಳಿಗೆ ಮತ್ತೆ ಮುಖಭಂಗವಾಗಿದೆ. ಮನ್ಮುಲ್‌ (Manmul) ಗದ್ದುಗೆ ಮತ್ತೆ ‘ಕೈ’ ವಶವಾಗಿದೆ.

    ಚುನಾವಣೆ ಅಷ್ಟೇ ಅಲ್ಲ, ಕಾನೂನಾತ್ಮಕವಾಗಿಯೂ ದಳಪತಿಗಳಿಗೆ ಹಿನ್ನಡೆಯಾಗಿದೆ. ಜೆಡಿಎಸ್‌ ಅಭ್ಯರ್ಥಿಗಳಿಗೆ ಕೋರ್ಟ್‌ ತೀರ್ಪು ಶಾಕ್ ಕೊಟ್ಟಿದೆ. ತಿಂಗಳ ನಂತರ ಅಧಿಕೃತ ಫಲಿತಾಂಶ ಘೋಷಣೆಯಾಗಿದ್ದು, ಜೆಡಿಎಸ್‌ ಶಾಸಕನನ್ನೇ ಮಣಿಸಿ ಬಂಡಾಯ ಅಭ್ಯರ್ಥಿ ಗದ್ದುಗೆ ಏರಿದ್ದಾರೆ.

    ಕೆಆರ್‌ ಪೇಟೆಯ ಜೆಡಿಎಸ್‌ ಶಾಸಕ ಹೆಚ್‌.ಟಿ.ಮಂಜು ಅವರು ಶಾಸಕನಾಗಿಯೂ ಮನ್ಮುಲ್‌ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ, ಜೆಡಿಎಸ್‌ ಶಾಸಕನಿಗೆ ಬಂಡಾಯ ಅಭ್ಯರ್ಥಿ ಮಣ್ಣುಮುಕ್ಕಿಸಿದ್ದಾರೆ. ಅಧಿಕೃತವಾಗಿ ಮನ್ಮುಲ್‌ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

    ಡಾಲು ರವಿ, ಎಂ.ಬಿ.ಹರೀಶ್‌ಗೆ ವಿಜಯಮಾಲೆ ಒಲಿದಿದೆ. ಜೆಡಿಎಸ್‌ನಲ್ಲೇ ಇದ್ದು ಶಾಸಕ, ಬೆಂಬಲಿಗನ ವಿರುದ್ಧ ಬಂಡಾಯಗಾರರು ತೊಡೆತಟ್ಟಿದ್ದರು. ಅಧಿಕಾರ, ಜನ ಬಲದ ನಡುವೆಯೂ ರವಿ ಗೆದ್ದು ಬೀಗಿದ್ದಾರೆ. ಮನ್ಮುಲ್‌ ನೂತನ ನಿರ್ದೇಶಕರಾಗಿ ಗೆದ್ದು ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ.

    ನಮ್ಮ ಹೋರಾಟ ಶಾಸಕನ ವಿರುದ್ಧ ಅಷ್ಟೆ. ನಾವು ಈಗಲೂ ಜೆಡಿಎಸ್‌ನಲ್ಲಿದ್ದೇವೆ. ಚುನಾವಣೆಯಲ್ಲಿ ಚಲುವರಾಯಸ್ವಾಮಿ ಸಹಾಯ ಮಾಡಿದ್ದಾರೆ ಅಷ್ಟೆ. ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ನಮಗೆ ಆಲೋಚನೆಯೇ ಇಲ್ಲ ಎಂದು ಸ್ವಪಕ್ಷೀಯರ ವಿರುದ್ಧವೇ ಮನ್ಮುಲ್‌ ನೂತನ ನಿರ್ದೇಶಕ ಗುಡುಗಿದ್ದಾರೆ.

  • ಲೀಟರ್ ಹಾಲಿಗೆ 1.50 ರೂ. ಇಳಿಸಿ ಮನ್ಮುಲ್ ಆದೇಶ

    ಲೀಟರ್ ಹಾಲಿಗೆ 1.50 ರೂ. ಇಳಿಸಿ ಮನ್ಮುಲ್ ಆದೇಶ

    ಮಂಡ್ಯ: ಬರದ ನಡುವೆಯೇ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (Manmul) ರೈತರಿಗೆ ಶಾಕ್‌ ನೀಡಿದೆ. ಲೀಟರ್‌ ಹಾಲಿಗೆ 1.50 ರೂ. ಇಳಿಕೆ ಮಾಡಿ ಆದೇಶ ಹೊರಡಿಸಿದೆ.

    ಇತ್ತ ಮನ್ಮುಲ್‌ ಹಾಲಿನ ದರ (Milk Price) ಇಳಿಕೆ ಮಾಡಿದೆ. ಆದರೆ ಅತ್ತ ಪಶು ಆಹಾರದ ಬೆಲೆ ಏರಿಕೆಯಾಗಿದೆ. ಇದರಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಹೈನುಗಾರಿಕೆ ನಂಬಿಕೊಂಡಿರುವ ಮಂಡ್ಯ ರೈತರು ಕಂಗಾಲಾಗಿದ್ದಾರೆ. ಇದನ್ನೂ ಓದಿ: ಹಿಜಬ್ ಕುರಿತು ಎಚ್ಚರಿಕೆ ಹೆಜ್ಜೆ ಇಡಲು ಕೆಪಿಸಿಸಿ ನಿರ್ಧಾರ- ಸಿಎಂಗೆ ಹಿರಿಯರ ಸಲಹೆ ಏನು..?

    ಮನ್ಮುಲ್ ಆಡಳಿತ ಮಂಡಳಿ ನಿರ್ಧಾರಕ್ಕೆ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ KMF ಪಶು ಆಹಾರದ ಬೆಲೆ ಚೀಲಕ್ಕೆ 50 ರೂ. ಏರಿಕೆ ಮಾಡಿದೆ. ಡಿಸೆಂಬರ್ 1 ರಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ.

    ಈ ಹಿಂದೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 33.50 ರೂ. ನೀಡಲಾಗುತ್ತಿತ್ತು. ಇದೀಗ 1.50 ಕಡಿತಗೊಳಿಸಿದ್ದು, 32 ರೂ.ಗೆ ಇಳಿಕೆಯಾಗಿದೆ. ಬರಗಾಲದಲ್ಲಿ ಹಾಲಿನ ದರ ಕಡಿತಗೊಳಿಸಿರುವುದಕ್ಕೆ ರೈತ ಸಂಘ ಕಿಡಿಕಾರಿದೆ. ಕೂಡಲೇ ದರ ಹೆಚ್ಚಳ ಮಾಡದಿದ್ರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ದತ್ತಜಯಂತಿಯ ಶೋಭಾಯಾತ್ರೆಯಲ್ಲಿ 25 ಸಾವಿರಕ್ಕೂ ಹೆಚ್ಚು ಭಕ್ತರು ಭಾಗಿ

  • ಮನ್‌ಮುಲ್ ಮೆಗಾ ಡೈರಿ ಘಟಕದಲ್ಲಿ ಅಗ್ನಿ ಅವಘಡ

    ಮನ್‌ಮುಲ್ ಮೆಗಾ ಡೈರಿ ಘಟಕದಲ್ಲಿ ಅಗ್ನಿ ಅವಘಡ

    ಮಂಡ್ಯ: ಮಂಡ್ಯದ (Mandya) ಮದ್ದೂರು (Maddur) ಬಳಿಯ ಗೆಜ್ಜಲಗೆರೆಯ (Gejjala Gere) ಮನ್‌ಮುಲ್ (Manmul) ಮೆಗಾ ಡೈರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ (Fire) ಕಾಣಿಸಿಕೊಂಡಿದೆ.

    ಕಳೆದ 5 ತಿಂಗಳ ಹಿಂದಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಉದ್ಘಾಟನೆಯಾಗಿದ್ದ ಮೆಗಾ ಡೈರಿಯಲ್ಲಿ ಭಾನುವಾರ ಬೆಳಗ್ಗೆ 7 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

    ಶಾರ್ಟ್ ಸರ್ಕ್ಯೂಟ್‌ನಿಂದ ಪ್ಯಾಕಿಂಗ್ ಮೆಟೀರಿಯಲ್ಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಲಕ್ಷಾಂತರ ರೂ. ಮೌಲ್ಯದ ಪೇಡಾ, ತುಪ್ಪದ ಪ್ಯಾಕೆಟ್ ನಾಶವಾಗಿದೆ. ಅದೃಷ್ಟವಶಾತ್ ದೊಡ್ಡ ದುರಂತದಿಂದ ಮನ್‌ಮುಲ್ ಪಾರಾಗಿದೆ. ಬೆಂಕಿ ಬಿದ್ದಿದ್ದ ಪ್ಯಾಕಿಂಗ್ ಮೆಟೀರಿಯಲ್ಸ್ ಪಕ್ಕವೇ ಮೆಗಾಡೈರಿ ಪ್ಲಾಂಟ್ ಕಂಟ್ರೋಲರ್ ಇದ್ದು, ಸದ್ಯ ಅದಕ್ಕೆ ಯಾವುದೇ ಹಾನಿ ಆಗಿಲ್ಲ. ಒಂದು ವೇಳೆ ಕಂಟ್ರೋಲರ್‌ಗೆ ಹಾನಿಯಾಗಿದ್ದರೆ ದೊಡ್ಡ ದುರಂತ ಸಂಭವಿಸುವ ಸಾಧ್ಯತೆ ಇತ್ತು. ಇದರಿಂದ ಇಡೀ ಮೆಗಾ ಡೈರಿಗೆ ಹಾನಿಯಾಗುವ ಸಾಧ್ಯತೆ ಇತ್ತು ಎನ್ನಲಾಗಿದೆ. ಈಗ ಅಗ್ನಿಶಾಮಕ ಸಿಬ್ಬಂದಿ ಸಂಪೂರ್ಣ ಬೆಂಕಿ ನಂದಿಸಿರಿದ್ದಾರೆ. ನಾಶಗೊಂಡ ಪದಾರ್ಥಗಳನ್ನು ಸಿಬ್ಬಂದಿ ತೆರವು ಮಾಡುತ್ತಿದ್ದಾರೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ- ಗೋದಾಮು ಮಾಲೀಕ ಅರೆಸ್ಟ್

    ಮನ್‌ಮುಲ್‌ನಲ್ಲಿ ಅಗ್ನಿ ಅವಘಡ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಮನ್‌ಮುಲ್‌ನ ಮೆಗಾ ಡೈರಿ ಘಟಕದ ಪ್ಯಾಕಿಂಗ್ ವಿಭಾಗದಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಆಡಳಿತ ಮಂಡಳಿ ಮಾಧ್ಯಮದವರನ್ನು ಹೊರಗಿಟ್ಟು ಗೌಪ್ಯತೆ ಕಾಪಾಡುತ್ತಿದೆ. ಅಧ್ಯಕ್ಷ, ನಿರ್ದೇಶಕರು, ಎಂಡಿ ಸೂಚನೆಯಂತೆ ನಿರ್ಬಂಧ ಹೇರಲಾಗಿದೆ. ಮನ್‌ಮುಲ್ ಹೊರಗೇಟ್‌ನಲ್ಲಿಯೇ ಮಾಧ್ಯಮದವರಿಗೆ ತಡೆಯಲಾಗಿದೆ. ಕೆಲವು ನಿರ್ದೇಶಕರ ಸಮ್ಮುಖದಲ್ಲೇ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ದುರಂತದ ಬಗ್ಗೆ ಮಾಹಿತಿ ನೀಡುವಲ್ಲೂ ಆಡಳಿತ ಮಂಡಳಿ ಹಿಂದೇಟು ಹಾಕುತ್ತಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಖರೀದಿ ಹಾಲಿಗೆ ಲೀಟರ್‌ಗೆ 1.75 ರೂ. ಕಡಿತ ಮಾಡಿದ ಮನ್ಮುಲ್

    ಖರೀದಿ ಹಾಲಿಗೆ ಲೀಟರ್‌ಗೆ 1.75 ರೂ. ಕಡಿತ ಮಾಡಿದ ಮನ್ಮುಲ್

    ಮಂಡ್ಯ: ಹಳೆ ಮೈಸೂರು ಭಾಗದಲ್ಲಿ ಮುಂಗಾರು ಮಳೆ ಕ್ಷೀಣಿಸಿರುವ ಹಿನ್ನೆಲೆ ಬರಗಾಲದ ಮುನ್ಸೂಚನೆಯನ್ನು ಎದುರಿಸುತ್ತಿದೆ. ಈ ಹೊತ್ತಿನಲ್ಲಿ ಮಂಡ್ಯ (Mandya) ಜಿಲ್ಲೆಯ ರೈತರಿಗೆ ಮನ್ಮುಲ್ (MANMUL) ಬಿಗ್ ಶಾಕ್ ನೀಡಿದೆ.

    ರೈತರಿಂದ ಖರೀದಿ ಮಾಡುವ ಹಾಲಿಗೆ (Milk) ಲೀಟರ್‌ಗೆ 1.75 ರೂ. ಅನ್ನು ಕಡಿತ ಮಾಡಿದೆ. ಲೀಟರ್ ಹಾಲಿಗೆ 32.25 ರೂ. ಬದಲಿಗೆ 30.50 ರೂ. ಅನ್ನು ಇಂದಿನಿಂದ ನೀಡಲಾಗುತ್ತದೆ ಎಂದು ಮನ್ಮುಲ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಮನ್ಮುಲ್ ಒಕ್ಕೂಟದ ಸ್ಥಿತಿಗತಿಯನ್ನು ನೋಡಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖ ಮಾಡಲಾಗಿದೆ. ಇದನ್ನೂ ಓದಿ: ರಸ್ತೆಯಲ್ಲಿ ಸಿಕ್ಕ 12,900 ರೂ.ಹಣವನ್ನ ಪೊಲೀಸರಿಗೆ ಕೊಟ್ಟು ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿಗಳು

    ಮೊದಲೇ ಮಳೆ ಇಲ್ಲದೆ ವ್ಯವಸಾಯ ಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿ ಇರುವ ರೈತರು, ಹೈನುಗಾರಿಕೆಯನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದರು. ಇದೀಗ ಮನ್ಮುಲ್ ತೆಗೆದುಕೊಂಡಿರುವ ನಿರ್ಧಾರ ರೈತರಲ್ಲಿ ಆತಂಕ ಉಂಟುಮಾಡಿದೆ. ಇದನ್ನೂ ಓದಿ: ರಾಜ್ಯದ 28 ಜಿಲ್ಲೆಗಳಲ್ಲಿ ಮುಂಗಾರು ಮಳೆ ಕೊರತೆ – ಈವರೆಗೆ 26% ಮಾತ್ರ ಬಿತ್ತನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಡ್ಯ ರೈತರಿಗೆ ಶಾಕ್ ಕೊಟ್ಟ ಮನ್ಮುಲ್ – ಹಾಲಿನ ದರದಲ್ಲಿ ಲೀಟರ್‌ಗೆ 1 ರೂ. ಕಡಿತ

    ಮಂಡ್ಯ ರೈತರಿಗೆ ಶಾಕ್ ಕೊಟ್ಟ ಮನ್ಮುಲ್ – ಹಾಲಿನ ದರದಲ್ಲಿ ಲೀಟರ್‌ಗೆ 1 ರೂ. ಕಡಿತ

    ಮಂಡ್ಯ: ರೈತರ ಖರೀದಿ ಹಾಲಿನ (Milk) ದರದಲ್ಲಿ ಲೀಟರಿಗೆ 1 ರೂ. ಕಡಿತ ಮಾಡಿ ಮನ್ಮುಲ್ (MANMUL) ಆದೇಶ ಹೊರಡಿಸಿದ್ದು, ಮಂಡ್ಯ (Mandya) ರೈತರಿಗೆ ಬಿಗ್ ಶಾಕ್ ನೀಡಿದೆ.

    ಜೂನ್ ತಿಂಗಳಲ್ಲೇ ಮನ್ಮುಲ್ ಪರಿಷ್ಕೃತ ದರ ಆದೇಶ ಜಾರಿ ಮಾಡಿದ್ದು, ಮುಂದಿನ ಆದೇಶದವರೆಗೂ ಪರಿಷ್ಕೃತ ದರ ಮುಂದುವರೆಯಲಿದೆ. ಮನ್ಮುಲ್ ಪ್ರತೀ ಲೀಟರ್ ಹಾಲಿಗೆ 2 ರೂ. ಹೆಚ್ಚುವರಿ ಪ್ರೋತ್ಸಾಹ ಧನ ನೀಡುತ್ತಿತ್ತು. ಇದೀಗ ಖರೀದಿ ಹಾಲಿನ ದರದಲ್ಲಿ ಲೀಟರ್‌ಗೆ 1 ರೂ. ಕಡಿತಗೊಳಿಸಿ ರೈತರಿಗೆ ಶಾಕ್ ನೀಡಿದೆ. ಇದನ್ನೂ ಓದಿ: ರೈಲು ದುರಂತ – ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ

    ಮುಂಗಾರು ಮಳೆಯಾಗಿ ಹಸಿರು ಮೇವು ಲಭ್ಯತೆಗೆ ದರ ಕಡಿತಗೊಳಿಸಲಾಗಿದೆ ಎಂದು ಮನ್ಮುಲ್ ಸಮರ್ಥನೆ ನೀಡಿದೆ. ಸದ್ಯ ಹಾಲು ಉತ್ಪಾದಕರಿಗೆ 32.25 ರೂ. ಬದಲು 31.25 ರೂ. ಕೊಡುವುದಾಗಿ ನಿಗದಿಯಾಗಿದೆ. ಇದನ್ನೂ ಓದಿ: ಮಾದಪ್ಪನ ಕ್ಷೇತ್ರದ ಆನೆ ಉಮಾಮಹೇಶ್ವರಿಗೆ 5 ಲಕ್ಷ ರೂ. ಆರೋಗ್ಯ ವಿಮೆ

  • ಮನ್ಮುಲ್‌ನಲ್ಲಿ ಮೆಗಾ ಡೈರಿ ಉದ್ಘಾಟಿಸಿದ ಗೃಹ ಸಚಿವ ಅಮಿತ್ ಶಾ

    ಮನ್ಮುಲ್‌ನಲ್ಲಿ ಮೆಗಾ ಡೈರಿ ಉದ್ಘಾಟಿಸಿದ ಗೃಹ ಸಚಿವ ಅಮಿತ್ ಶಾ

    ಮಂಡ್ಯ: ಇಂದು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಜೆಡಿಎಸ್ ಭದ್ರಕೋಟೆ ಮಂಡ್ಯಗೆ (Mandya) ತೆರಳಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ. ಮಂಡ್ಯದ ಮನ್ಮುಲ್‌ನಲ್ಲಿ (Manmul) ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗಿರುವ ಮೆಗಾ ಡೈರಿಯನ್ನು (Milk Dairy) ಅಮಿತ್ ಶಾ ಉದ್ಘಾಟಿಸಿದ್ದಾರೆ.

    ಸಕ್ಕರೆ ನಾಡಿಗೆ ಬಂದಿಳಿದ ಅಮಿತ್ ಶಾ ಅವರನ್ನು ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಮದ್ದೂರು ತಾಲೂಕಿನ ಹುಲಿಗೆರೆಪುರ ಹೆಲಿಪ್ಯಾಡ್‌ಗೆ ಹೆಲಿಕಾಫ್ಟರ್ ಮೂಲಕ ಆಗಮಿಸಿದ ಅವರು ಬಳಿಕ ರಸ್ತೆ ಮಾರ್ಗವಾಗಿ ಮಂಡ್ಯದ ವಿವಿ ಆವರಣ ತಲುಪಿದ್ದಾರೆ. ಅಮಿತ್ ಶಾ ಅವರಿಗೆ ಅಪ್ಪಟ ರೇಷ್ಮೆ ಬಳಸಿ ತಯಾರಿಸಲಾಗಿರುವ ಮೈಸೂರು ಪೇಟವನ್ನು ಸ್ವಾಗತದ ವೇಳೆ ತೊಡಿಸಲಾಗಿದೆ. ಸರ್ದಾರ್ ವಲ್ಲಭಭಾಯಿ ಪಟೇಲರ ಬೆಳ್ಳಿಯಲ್ಲಿ ತಯಾರಾಗಿರುವ ಪ್ರತಿಮೆಯನ್ನೂ ಉಡುಗೊರೆಯಾಗಿ ನೀಡಲಾಗಿದೆ.

    ಅಮಿತ್ ಶಾ ಅವರು ಉದ್ಘಾಟಿಸಿರುವ ಮೆಗಾ ಡೈರಿ ಸುಮಾರು 260 ಕೋಟಿ ರೂ. ವೆಚ್ಚದಲ್ಲಿ ಸಿದ್ಧವಾಗಿದೆ. 10-14 ಲಕ್ಷ ಲೀ. ಹಾಲು ಸಂಸ್ಕರಣಾ ಸಾಮರ್ಥ್ಯವನ್ನು ಇದು ಹೊಂದಿದ್ದು, 30 ಮೆಟ್ರಿಕ್ ಟನ್ ಹಾಲಿನ ಪುಡಿ ಉತ್ಪಾದಿಸುವ ಸಾಮರ್ಥ್ಯವನ್ನೂ ಇದು ಹೊಂದಿದೆ. 2 ಲಕ್ಷ ಲೀ. ಯುಹೆಚ್‌ಡಿ ಹಾಲನ್ನು ಪ್ಯಾಕ್ ಮಾಡಬಹುದಾದ ಕಟ್ಟಡ ಇದಾಗಿದ್ದು, ಇಲ್ಲಿ ಬೆಣ್ಣೆ, ತುಪ್ಪ, ಪೇಡ, ಬರ್ಫಿ, ಕೋವಾ, ಲಾಡು, ಬೆಲ್ಲದ ಬರ್ಫಿ, ಮೊಸರು, ಮಜ್ಜಿಗೆ ತಯಾರಿಕಾ ಘಟಕವೂ ಇದೆ. ಮೆಗಾ ಡೈರಿಯಿಂದಾಗಿ ಮಂಡ್ಯ ಜಿಲ್ಲೆಯ 99 ಸಾವಿರ ರೈತರಿಗೆ ಅನುಕೂಲವಾಗಲಿದೆ. ಇದನ್ನೂ ಓದಿ: ಆಪರೇಷನ್ ಓಲ್ಡ್ ಮೈಸೂರು ಸುಳಿವು ನೀಡಿದ ಶಾ- ಜಾತಿ ಸಮೀಕರಣದ ಫಸ್ಟ್ ರಿಪೋರ್ಟ್ ಪಡೆದ ಚಾಣಕ್ಯ

    ಉದ್ಘಾಟನೆ ಬಳಿಕ ಮಾತನಾಡಿದ ಅಮಿತ್ ಶಾ, ಸಹಕಾರಿಗಳಿಗೆ, ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಮಂಡ್ಯ ಮೆಗಾ ಡೈರಿ ಉದ್ಘಾಟನೆ ಆಗಿದೆ. 260 ಕೋಟಿ ರೂ. ವೆಚ್ಚದಲ್ಲಿ ಮಿಲ್ಕ್ ಫ್ಲಾಂಟ್ ನಿರ್ಮಾಣ ಆಗಿದೆ. ಪ್ರತಿದಿನ 10 ಲಕ್ಷ ಲೀ. ಹಾಲು ಸಂಸ್ಕರಣೆ ಆಗುತ್ತದೆ. ಮುಂದಿನ ದಿನಗಳಲ್ಲಿ 14 ಲಕ್ಷ ಲೀ. ಸಂಸ್ಕರಣೆಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.

    ಅಮಿತ್ ಶಾ ಭಾಷಣವನ್ನು ಕನ್ನಡಕ್ಕೆ ಅನುವಾದಿಸುತ್ತಿದ್ದ ವೇಳೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬರಡು ನೆಲದಲ್ಲೂ ಕಮಲ ಅರಳಿಸುವುದು ಅಮಿತ್ ಶಾಗೆ ಗೊತ್ತಿದೆ. ಅದಕ್ಕೆ ಅವರನ್ನು ಚುನಾವಣಾ ಚಾಣಾಕ್ಷ ಎನ್ನುತ್ತಾರೆ ಎಂದು ಹೊಗಳಿದರು. ಇದನ್ನೂ ಓದಿ: ತಾಯಿಗೆ ಸರ್ಪ್ರೈಸ್‌ ಕೊಡಲು ತೆರಳ್ತಿದ್ದಾಗಲೇ ದುರಂತ – ಪಂತ್ ಅಭಿಮಾನಿಗಳ ಆಕ್ರಂದನ

    Live Tv
    [brid partner=56869869 player=32851 video=960834 autoplay=true]

  • ಮನ್‌ಮುಲ್‌‌ನಲ್ಲಿ ಮತ್ತೊಂದು ಹಗರಣ – ಹಾಲಿಗೆ ನೀರಾಯ್ತು, ಈಗ ರಾಸಾಯನಿಕ ಮಿಶ್ರಣ

    ಮನ್‌ಮುಲ್‌‌ನಲ್ಲಿ ಮತ್ತೊಂದು ಹಗರಣ – ಹಾಲಿಗೆ ನೀರಾಯ್ತು, ಈಗ ರಾಸಾಯನಿಕ ಮಿಶ್ರಣ

    ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಹಾಲಿಗೆ ನೀರು ಮಿಶ್ರಣ ಹಗರಣ ಆಯ್ತು, ಇದೀಗ ಹಾಲಿಗೆ ರಾಸಾಯನಿಕ ಬೆರಕೆ ಮಾಡುವುದು ಬೆಳಕಿಗೆ ಬಂದಿದೆ. ಈ ಮೂಲಕ ರೈತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಮನ್‌ಮುಲ್‌ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದೆ.

    ಕಳೆದ ವರ್ಷವಷ್ಟೇ ಮನ್‌ಮುಲ್‌‌ಗೆ ಸರಬರಾಜು ಆಗುವ ಹಾಲಿಗೆ ನೀರು ಮಿಶ್ರಣವಾಗುತ್ತಿದೆ ಎಂಬ ಹಗರಣ ಬೆಳಕಿಗೆ ಬಂದಿತ್ತು. ಪ್ರಕರಣ ಸಿಐಡಿ ತನಿಖೆಯಲ್ಲಿರುವಾಗಲೇ ಹಾಲಿಗೆ ರಾಸಾಯನಿಕ ಕಲಬೆರಕೆ ಹಗರಣ ಬೆಳಕಿಗೆ ಬಂದಿರುವುದು ರೈತರಲ್ಲಿ ಆತಂಕ ಮೂಡಿದೆ. ಇದನ್ನೂ ಓದಿ: ಮೃತ ಕೋವಿಡ್ ಕುಟುಂಬಗಳಿಗೆ ಸರ್ಕಾರ ಕೊಟ್ಟ ಚೆಕ್ ಬೌನ್ಸ್ – ಬ್ಯಾಂಕುಗಳಲ್ಲಿ ನಗದು ಆಗ್ತಿಲ್ಲ ಚೆಕ್

    ಏನಿದು ಹಾಲಿಗೆ ರಾಸಾಯನಿಕ ಬೆರಕೆ?
    ಪರೀಕ್ಷೆಯಲ್ಲಿ ಹಾಲಿನ ಗುಣಮಟ್ಟ ಹೆಚ್ಚು ತೋರಿಸುವಂತೆ ರಾಸಾಯನಿಕ ಬೆರಕೆ ಮಾಡಲಾಗುತ್ತಿತ್ತು. ಹಾಲಿಗೆ ನೀರು ಹಾಕಿದಾಗ ಕಡಿಮೆ ಕೊಬ್ಬಿನಾಂಶ ತೋರಬಾರದೆಂದು ರಾಸಾಯನಿಕ ಬೆರಕೆ ಮಾಡಲಾಗುತ್ತಿತ್ತು. ಉಪ್ಪಿನಾಂಶದ ರಾಸಾಯನಿಕ ಕಲಬೆರಕೆಯನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಟ್ಯಾಂಕರ್‌ನೊಳಗೆ ಮತ್ತೊಂದು ಬೇಬಿ ಟ್ಯಾಂಕ್ ನಿರ್ಮಿಸಿ ಕೋಟಿ ಕೋಟಿ ಹಣವನ್ನು ಹಾಲಿನ ರೂಪದಲ್ಲಿ ಮನ್‌ಮುಲ್‌ಗೆ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್‌ನ ನಿಜರೂಪ ಬಯಲಾಗಿದೆ.

    ಹೇಗೆ ಬೆಳಕಿಗೆ ಬಂತು?
    ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಹೊನ್ನಗೆರೆ ಡೈರಿಯಿಂದ ಪೂರೈಕೆಯಾಗುತ್ತಿದ್ದ ಹಾಲಿನಲ್ಲಿ ಮೊದಲಿಗೆ ರಾಸಾಯನಿಕ ಮಿಶ್ರಣ ಪತ್ತೆಯಾಗಿದೆ. ಗ್ರಾಮದಲ್ಲಿ ಶೇಖರಣೆಯಾದ ಹಾಲಿಗೆ ನೀರು ಹಾಗೂ ರಾಸಾಯನಿಕ ಬೆರಸಿ ಮನ್‌ಮುಲ್‌ಗೆ ವಂಚನೆ ಮಾಡುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಅನುಮಾನ ಬಂದಿದೆ. ನಂದಿನಿ ಹಾಲಿನ ಮೇಲೆ ಅನುಮಾನ ಮೂಡುವಂತೆ ವಂಚಕರು ಪ್ಲ್ಯಾನ್ ಮಾಡಿದ್ದಾರೆ. ಪ್ರತಿನಿತ್ಯ 35 ಕ್ಯಾನ್ ಹಾಲು ಸರಬರಾಜು ಮಾಡುತ್ತಿದ್ದ ಕೆ.ಹೊನ್ನಲಗೆರೆ ಡೈರಿಯ ಮೇಲೆ ಅನುಮಾನ ವ್ಯಕ್ತಪಡಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಇದು ಬೆಳಕಿಗೆ ಬಂದಿದೆ. ಇದೀಗ ಕೆ.ಹೊನ್ನಲಗೆರೆ ಡೈರಿಯಲ್ಲಿ ಹಾಲು ಶೇಖರಣೆ ಸ್ಥಗಿತಗೊಳಿಸುವಂತೆ ಮನ್‌ಮುಲ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಮೈಸೂರಿನಲ್ಲಿರುವ ಪ್ರವಾಸಿತಾಣಗಳಿಗೆ ಜಾರಿಯಾಗುತ್ತಾ ಟಫ್‍ರೂಲ್ಸ್..?

  • ಮನ್‍ಮುಲ್ ಹಗರಣ ಮುಚ್ಚಿ ಹಾಕಲು ಹುನ್ನಾರ: ವಕೀಲ ಟಿ.ಎಸ್.ಸತ್ಯಾನಂದ

    ಮನ್‍ಮುಲ್ ಹಗರಣ ಮುಚ್ಚಿ ಹಾಕಲು ಹುನ್ನಾರ: ವಕೀಲ ಟಿ.ಎಸ್.ಸತ್ಯಾನಂದ

    ಮಂಡ್ಯ: ಜಿಲ್ಲೆಯ ಮನ್‍ಮುಲ್ ನೀರು ಮಿಶ್ರಿತ ಹಾಲು ಪೂರೈಕೆ ಹಗರಣ ಸದ್ಯ ಸಿಐಡಿ ಅಂಗಳದಲ್ಲಿದೆ. ಸಿಐಡಿ ತನಿಖೆ ನಡುವೆಯೇ ಮನ್‍ಮುಲ್ ಆಡಳಿತ ಮಂಡಳಿ ಹಾಗೂ ಮಂಡ್ಯ ಪೊಲೀಸರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದೆ. ಹಾಲು ಹಗರಣವನ್ನ ವ್ಯವಸ್ಥಿತವಾಗಿ ಮುಚ್ಚಿ ಹಾಕುವುದರ ಜೊತೆಗೆ ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ ಎಂದು ವಕೀಲ ಟಿ.ಎಸ್.ಸತ್ಯಾನಂದ ಆರೋಪಿಸಿದ್ದಾರೆ.

    ಮೇ 27ರಂದು ಬೆಳಕಿಗೆ ಬಂದ ಮನ್‍ಮುಲ್ ನೀರು ಮಿಶ್ರಿತ ಹಾಲು ಪೂರೈಕೆ ಹಗರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಒತ್ತಾಯಗಳು ಕೇಳಿಬಂದಿದ್ದವು. ರೈತರು, ಜಿಲ್ಲೆಯ ಮುಖಂಡರ ಒತ್ತಾಯಕ್ಕೆ ಮಣಿದಿದ್ದ ಸರ್ಕಾರ ಸದ್ಯ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ಆದರೆ ಈ ನಡುವೆ ಮನ್‍ಮುಲ್ ಆಡಳಿತ ಮಂಡಳಿ ಹಾಗೂ ಮಂಡ್ಯ ಪೊಲೀಸರ ವಿರುದ್ಧ ಆರೋಪಗಳು ಕೇಳಿಬರ್ತಿವೆ. ಈ ಮೂಲಕ ಬಹುದೊಡ್ಡ ಹಾಲು ಹಗರಣವನ್ನು ವ್ಯವಸ್ಥಿತವಾಗಿ ಮುಚ್ಚಿಹಾಕುವ ಷಡ್ಯಂತ್ರಗಳು ನಡೆದಿತ್ತಾ ಎಂಬ ಅನುಮಾನಗಳು ಹುಟ್ಟಿ ಕೊಂಡಿವೆ.

    ಆಡಳಿತ ಮಂಡಳಿ ಹಾಗೂ ಪೊಲೀಸರು ಎಫ್‍ಐಆರ್ ಹಂತದಲ್ಲೇ ಪ್ರಕರಣದ ಶಕ್ತಿ ಕುಗ್ಗಿಸಿ ಆರೋಪಿಗಳ ರಕ್ಷಣೆ ಮಾಡಲು ಬೇಕಾದ ಎಲ್ಲಾ ಕಾನೂನು ಕ್ರಮ ಅನುಸರಿದ್ದಾರೆ ಎಂದು ವಕೀಲ ಸತ್ಯಾನಂದ ಅವರು ಆರೋಪಿಸಿದ್ದಾರೆ. ಮನ್‍ಮುಲ್ ಆಡಳಿತ ಮಂಡಳಿ ಹಾಗೂ ಜಿಲ್ಲಾ ಪೊಲೀಸರ ವಿರುದ್ಧ ನೇರ ಆರೋಪ ಮಾಡಿರುವ ಅವರು ರಾಜಕೀಯ ಕೆಸರೆರಚಾಟದಿಂದ ನೀರು ಮಿಶ್ರಿತ ಹಾಲು ಹಗರಣ ಹಳ್ಳಹಿಡಿಯುತ್ತಿದೆ. ಸಿಐಡಿ ತನಿಖೆಯಿಂದ ಸತ್ಯ ಹೊರಬರಲು ಸಾಧ್ಯವಿಲ್ಲ ವಿಶೇಷ ತನಿಖೆ ಅಥವಾ ಸಿಬಿಐಗೆ ವಹಿಸುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮನ್‍ಮುಲ್ ಹಾಲಿಗೆ ನೀರು ಬೆರೆಸಿ ವಂಚನೆ – ತನಿಖೆ ಆರಂಭಿಸಿದ ಸಿಐಡಿ

    ಇನ್ನು ಪೊಲೀಸರು ಹಾಗೂ ಆಡಳಿತ ಮಂಡಳಿ ವಂಚಕರ ನೆರವಿಗೆ ನಿಂತಿದ್ದು ಹೇಗೆ?
    1. ಮೇ 27ರಂದು ಪ್ರಕರಣ ಬಯಲಾಗಿತ್ತು. ಆದರೆ ಮೇ 28ರಂದು ದೂರು ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳಿಗೆ ಜಾಮೀನು ಸಿಗುವ ಮೊಕದ್ದಮೆ ದಾಖಲಿಸಿ ಸಹಾಯ ಮಾಡಿದ್ದರು.

    2. ಮನ್‍ಮುಲ್‍ನ ಶೇಖರಣೆ ಮತ್ತು ತಾಂತ್ರಿಕ ವಿಭಾಗದ ಮುಖ್ಯಸ್ಥರು ವಂಚನೆ, ಕಲಬೆರಕೆ, ಕಳ್ಳತನ ಸೇರಿ ಹಲವು ಅಂಶಗಳ ದೂರು ನೀಡಿದ್ದರು. ಕೇವಲ ವಂಚನೆ, ಕಲಬೆರಕೆಗೆ ಸಂಬಂಧಿಸಿದ ಪ್ರಕರಣ ಮಾತ್ರ ದಾಖಲಿಸಲಾಗಿತ್ತು

    3. ಟ್ಯಾಂಕರ್‍ನಲ್ಲಿ ಕಂಪಾರ್ಟ್‍ಮೆಂಟ್ ನಿರ್ಮಿಸಿ ಹಾಲಿಗೆ ನೀರು ಬೆರಸುವ ವಂಚನೆ ನ್ಯಾಯಾಲಯದ ಗಮನಕ್ಕೆ ತರದೆ ಕೇವಲ ಕಡತದಲ್ಲಷ್ಟೆ ದಾಖಲಿಸಿ ಕೊಂಡಿದ್ದರು.

    4. ಮೇ.29ರ ದೂರಿನಲ್ಲಿ ಪಿ.ರಾಜು ಜೊತೆಗೆ ಗುತ್ತಿಗೆದಾರ ರಂಜನ್‍ಕುಮಾರ್ ಹೆಸರಿದ್ದರು. ಆರೋಪಿಯನ್ನು ರಕ್ಷಿಸುವ ಉದ್ದೇಶದಿಂದ ನ್ಯಾಯಾಲಯದ ಗಮನಕ್ಕೆ ತರದೆ ಇರುವುದು.

    5. ಆರೋಪಿಗಳ ಜಾಮೀನು ಅರ್ಜಿ ಆದೇಶವಾಗುವ ಮುನ್ನ ಜೂ.10ರಂದು ಮತ್ತೆ 3 ಜಾಮೀನು ರಹಿತ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆಗೊಳಪಡುವ ಮೊಕದ್ದಮೆ ಸಂಖ್ಯೆಗಳನ್ನು ದಾಖಲಿಸಿ ಮದ್ದೂರು ನ್ಯಾಯಾಲಯಕ್ಕೆ ಮಾಹಿತಿ.

    6. ಜೂ.11ರಂದು ಆರೋಪಿಗಳಿಗೆ ಜಾಮೀನು ಮಂಜೂರು. ಜಾಮೀನು ಪಡೆಯುವ ವೇಳೆ ಆಡಳಿತ ಮಂಡಳಿ ಹಾಗೂ ವ್ಯವಸ್ಥಾಪಕ ನಿರ್ದೇಶಕರ ಶೀತಲ ಸಮರದಿಂದ ದೂರು ದಾಖಲಾಗಿದೆ ನಾವು ಅಮಾಯಕರು ಎಂದು ಆರೋಪಿಗಳ ವಾದ ಮಂಡನೆ.

    ಇಷ್ಟೆಲ್ಲವೂ ಪೊಲೀಸ್ ಇಲಾಖೆಯಲ್ಲಿ ಕಂಡುಬಂದ ಲೋಪಗಳಾದರೆ ಮನ್‍ಮುಲ್ ಆಡಳಿತ ಮಂಡಳಿ ವಿರುದ್ಧವೂ ಹಲವು ಆರೋಪಗಳು ಕೇಳಿಬಂದಿವೆ

    1. ಒಕ್ಕೂಟದ ಅನುಮತಿ ಇಲ್ಲದ ಖಾಸಗಿ ಟ್ಯಾಂಕರ್‍ ಗೆ ಹಾಲು ತುಂಬಿಸಿಕೊಳ್ಳಲು ಅವಕಾಶ ನೀಡಿರುವುದು.

    2. ಆರೋಪಿಗಳು ತಪ್ಪಿಸಿಕೊಳ್ಳದಂತೆ ಕಾನೂನು ಕ್ರಮ ಕೈಗೊಳ್ಳಬೇಕಿದ್ದ ಆಡಳಿತ ಮಂಡಳಿ. ಕಾನೂನು ಸಲಹೆಗಾರರ ಜೊತೆ ಚರ್ಚಿಸದೆ ಸುಮ್ಮನಾಗಿದ್ದು.

    3. ಸಿಬಿಐಗೆ ವಹಿಸುವಂತೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕಿದ್ದ ಆಡಳಿತ ಮಂಡಳಿ. ಬಾಯಿ ಮಾತಿಗೆ ಸಿಬಿಐಗೆ ವಹಿಸಿ ಎನ್ನುತ್ತಿರುವುದು.

    ಸಿಐಡಿಗೆ ತನಿಖೆ ನಡುವೆಯೂ ಮನ್‍ಮುಲ್ ಆಡಳಿತ ಮಂಡಳಿ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಸಾಕಷ್ಟು ಆರೋಪಗಳು ಕೇಳಿಬಂದಿದ್ದು. ಎಸ್‍ಐಟಿ ಅಥವಾ ಸಿಬಿಐಗೆ ಪ್ರಕರಣ ವಹಿಸದಿದ್ದರೆ ಹೈಕೋರ್ಟ್‍ಗೆ ಪಿಐಎಲ್ ಸಲ್ಲಿಸುವುದಾಗಿ ವಕೀಲ ಟಿ.ಎಸ್.ಸತ್ಯಾನಂದ ಅವರು ಎಚ್ಚರಿಕೆ ನೀಡಿದ್ದಾರೆ.

  • ಮನ್‍ಮುಲ್ ಹಾಲಿಗೆ ನೀರು ಬೆರೆಸಿ ವಂಚನೆ – ತನಿಖೆ ಆರಂಭಿಸಿದ ಸಿಐಡಿ

    ಮನ್‍ಮುಲ್ ಹಾಲಿಗೆ ನೀರು ಬೆರೆಸಿ ವಂಚನೆ – ತನಿಖೆ ಆರಂಭಿಸಿದ ಸಿಐಡಿ

    ಮಂಡ್ಯ: ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದಿದ್ದ ನೀರು ಬೆರೆಸಿದ ಹಾಲು ಪೂರೈಕೆ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ರೈತರ ಆಗ್ರಹಿಸುತ್ತಿದ್ದಾರೆ. ಈ ನಡುವೆ ಸಿಐಡಿ ಅಧಿಕಾರಿಗಳ ತಂಡ ಪ್ರಕರಣದ ತನಿಖೆ ಆರಂಭಿಸಿದ್ದು, ಮನ್‍ಮುಲ್ ಕಚೇರಿಗೆ ಭೇಟಿ ನೀಡಿ ಹಲವು ದಾಖಲೆಗಳನ್ನು ಸಂಗ್ರಹಿಸಿದೆ.

    ಏನಿದು ಪ್ರಕರಣ?
    ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಕಳೆದ ಒಂದೂವರೆ ತಿಂಗಳ ಹಿಂದೆ ಬೆಳಕಿಗೆ ಬಂದಿದ್ದ ಹಾಲಿಗೆ ನೀರು ಬೆರೆಸಿ ವಂಚನೆ ಮಾಡುತ್ತಿದ್ದ ಹಗರಣ ಸಾಕಷ್ಟು ಕಾರಣಗಳಿಂದ ಗಮನ ಸೆಳೆದಿತ್ತು. ಈ ಪ್ರಕರಣದ ತನಿಖೆ ಜವಾಬ್ದಾರಿ ಹೊತ್ತಿರುವ ಸಿಐಡಿ ಅಧಿಕಾರಿಗಳ ತಂಡ ಫುಲ್ ಆಕ್ಟೀವ್ ಆಗಿದ್ದು, ಈವರೆಗೆ ನಡೆದಿರುವ ತನಿಖೆ ಬಗ್ಗೆ ಪೊಲೀಸರಿಂದ ಮಾಹಿತಿ ಕಲೆ ಹಾಕುವ ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ. ಇನ್ನು ಹಳ್ಳಿಗಳಲ್ಲಿ ಸಂಗ್ರಹವಾಗುತ್ತಿದ್ದ ಹಾಲನ್ನು ಒಕ್ಕೂಟಕ್ಕೆ ಟ್ಯಾಂಕರ್ ಗಳಲ್ಲಿ ಪೂರೈಕೆ ಮಾಡುವಾಗ ಶೇ.30ರಷ್ಟು ಹಾಲನ್ನು ಖಾಸಗಿ ಡೈರಿಗಳಿಗೆ ಮಾರಾಟ ಮಾಡ್ತಿದ್ದ ವಂಚಕರು, ಉಳಿದ ಹಾಲಿಗೆ ನೀರು ಮಿಶ್ರಣ ಮಾಡಿ ಪ್ರತಿನಿತ್ಯ ಲಕ್ಷಾಂತರ ರೂಪಾಯಿ ವಂಚನೆ ಮಾಡ್ತಿದ್ರು. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಪರಸ್ಪರ ವಾಕ್ಸಮರ ಆರಂಭಿಸಿ ಆರೋಪ ಪ್ರತ್ಯಾರೋಪಕ್ಕೆ ಇಳಿದಿದ್ರು. ಇನ್ನೊಂದೆಡೆ ಪೊಲೀಸರ ಆಮೆಗತಿ ತನಿಖೆ ವಿರುದ್ಧ ಆಕ್ರೋಶಗೊಂಡಿದ್ದ ರೈತರು ಪ್ರಕರಣವನ್ನು ಸಿಬಿಐಗೆ ನೀಡುವಂತೆ ಒತ್ತಾಯಿಸಿದ್ರು. ರೈತರ ಹೋರಾಟಕ್ಕೆ ಸಂಸದೆ ಸುಮಲತಾ ಸಾಥ್ ನೀಡಿದ್ದರು.

    ಒತ್ತಡ ಹೆಚ್ಚಾದ ಬಳಿಕ ರಾಜ್ಯ ಸರ್ಕಾರ ಸಿಐಡಿಗೆ ಪ್ರಕರಣದ ತನಿಖೆಯ ಜವಾಬ್ದಾರಿ ನೀಡಿತ್ತು. ಇದೀಗ ಮನ್‍ಮುಲ್ ಗೆ ಭೇಟಿ ನೀಡಿದ್ದ ಸಿಐಡಿ ಇನ್ಸ್ ಪೆಕ್ಟರ್ ನರೇಂದ್ರ ನೇತೃತ್ವದ ತಂಡ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ಅವರಿಂದ ಮಾಹಿತಿ ಪಡೆದುಕೊಂಡಿತು. ಬಳಿಕ ಮದ್ದೂರು ಪೊಲೀಸ್ ಠಾಣೆಗೆ ಭೇಟಿ ನೀಡಿ ವಶಪಡಿಸಿಕೊಂಡಿರುವ ಟ್ಯಾಂಕರ್ ಗಳನ್ನು ಪರಿಶೀಲನೆ ಮಾಡಿ ಈವರೆಗೆ ನಡೆದಿರುವ ತನಿಖೆಯ ಸಂಪೂರ್ಣ ವರದಿಯನ್ನು ಪಡೆದುಕೊಂಡಿದೆ. ಇದನ್ನೂ ಓದಿ: ನೀರು ಮಿಶ್ರಿತ ಹಾಲು ಕೇಸ್ – ಮನ್‍ಮುಲ್‍ನ 7 ಅಧಿಕಾರಿಗಳು ಅಮಾನತು

    ಸಿಐಡಿ ತನಿಖೆಯಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗುವ ವಿಶ್ವಾಸ ವ್ಯಕ್ತಪಡಿಸಿರುವ ಮನ್ಮುಲ್ ಆಡಳಿತ ಮಂಡಳಿ, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದೆ. ಹಲವು ವರ್ಷಗಳಿಂದ ನಡೆಯುತ್ತಿದ್ದ ಹಾಲಿಗೆ ನೀರು ಬೆರಸಿ ವಂಚನೆ ಹಗರಣದಲ್ಲಿ ಮನ್‍ಮುಲ್ ಗೆ ನೂರಾರು ಕೋಟಿ ನಷ್ಟವಾಗಿದೆ ಎನ್ನಲಾಗುತ್ತಿದ್ದು, ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಅಧಿಕಾರಿಗಳು ಸಹ ಭಾಗಿಯಾಗಿದ್ದಾರೆಂಬ ಆರೋಪವೂ ದಟ್ಟವಾಗಿದೆ. ತನಿಖೆಯ ಬಳಿಕ ಸತ್ಯಾಸತ್ಯ ಹೊರಬರಬೇಕಿದೆ.

  • ಅಕ್ರಮ ಗಣಿಗಾರಿಕೆಗೂ ಅಂಬರೀಶ್ ಪಾರ್ಥಿವ ಶರೀರ ಮಂಡ್ಯಗೆ ತಂದಿದ್ದಕ್ಕೂ ಏನು ಸಂಬಂಧ: ಸುಮಲತಾ

    ಅಕ್ರಮ ಗಣಿಗಾರಿಕೆಗೂ ಅಂಬರೀಶ್ ಪಾರ್ಥಿವ ಶರೀರ ಮಂಡ್ಯಗೆ ತಂದಿದ್ದಕ್ಕೂ ಏನು ಸಂಬಂಧ: ಸುಮಲತಾ

    ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೂ, ಮನ್‍ಮುಲ್‍ನ ಹಗರಣಕ್ಕೂ, ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ನಾವು ತಂದಿದ್ದಕ್ಕೂ, ಜೆಡಿಎಸ್ ನಾಯಕರ ಹೇಳಿಕೆಗೂ ಏನು ಸಂಬಂಧ ಎಂದು ಸಂಸದೆ ಸುಮಲತಾ ಅಂಬರೀಶ್ ಪ್ರಶ್ನಿಸಿದ್ದಾರೆ.

    ಮಂಡ್ಯದ ಗೆಜ್ಜಲಗೆರೆ ಬಳಿ ಮನ್‍ಮುಲ್ ಹಗರಣವನ್ನು ಸಿಬಿಐಗೆ ನೀಡುವಂತೆ ರೈತರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಸಂಸದೆ ಸುಮಲತಾ ಅಂಬರೀಶ್ ಅವರು ಭೇಟಿ ನೀಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಈ ವೇಳೆ ಮಾತನಾಡಿದ ಅವರು, ನಾನು ಏನು ಮಾತನಾಡಿದರು ಸಹ ರಾಜಕೀಯವಾಗಿ ತೆಗೆದುಕೊಳ್ಳುತ್ತಾರೆ. ನಾನು ಜಿಲ್ಲೆಯ ಅಕ್ರಮ ಗಣಿಗಾರಿಕೆ ಹಾಗೂ ಮನ್‍ಮುಲ್ ಹಗರಣದ ಬಗ್ಗೆ ಮಾತನಾಡಿದರೆ ಅವರು ಅಂಬರೀಶ್ ಪಾರ್ಥಿವ ಶರೀರವನ್ನು ಮಂಡ್ಯಗೆ ತಂದಿದ್ದು ನಾವು ಎಂದು ಹೇಳುತ್ತಾರೆ. ನಾನು ಹೇಳಿದ್ದಕ್ಕೂ ಇವರು ಹೇಳುತ್ತಿರುವುದಕ್ಕೂ ಏನು ಸಂಬಂಧ ಎಂದು ಪಶ್ನೆ ಮಾಡಿದರು. ಇದನ್ನೂ ಓದಿ: ಸುಮಲತಾ ಬೇಬಿ ಬೆಟ್ಟಕ್ಕೆ ಬನ್ನಿ ಅಂದ್ರೆ ಬರುತ್ತೇನೆ: ಪುಟ್ಟರಾಜು

    ಸುಮಲತಾಗೆ ರಾಜಕೀಯ ಹೊಸದು ಅವರಿಗೆ ಮಾಹಿತಿ ಇಲ್ಲ ಎಂದು ಜೆಡಿಎಸ್ ನಾಯಕರು ಹೇಳುತ್ತಾರೆ. ಹೌದು ನನಗೆ ರಾಜಕೀಯ ಹೊಸದು ಒಪ್ಪಿಕೊಳ್ಳುತ್ತೇನೆ. ಹಾಗೆಯೇ ಭ್ರಷ್ಟಾಚಾರನೂ ಸಹ ಹೊಸದೇ, ನಾನು ಸಿನಿಮಾದಿಂದ ಬಂದವಳು ನಿಜ. ಸಿನಿಮಾದಲ್ಲಿ ಭ್ರಷ್ಟಾಚಾರ ಎನ್ನೋದು ಇರಲಿಲ್ಲ, ಆದರೆ ಇಲ್ಲಿ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ. ಇದರ ಬಗ್ಗೆ ನಾನು ಮಾತನಾಡಿದರೆ ರಾಜಕೀಯವಾಗಿ ತೆಗೆದುಕೊಂಡು ವೈಯಕ್ತಿಕವಾಗಿಯೂ ಟೀಕೆ ಮಾಡುತ್ತಾರೆ ಎಂದು ಕಿಡಿಕಾರಿದರು.