Tag: mann ki baat

  • ಗದಗಿನ ಕಾವೇಂಶ್ರೀಯನ್ನು ಪ್ರಶಂಸಿಸಿದ ಮೋದಿ

    ಗದಗಿನ ಕಾವೇಂಶ್ರೀಯನ್ನು ಪ್ರಶಂಸಿಸಿದ ಮೋದಿ

    ನವದೆಹಲಿ: ಗದಗ (Gadag) ಜಿಲ್ಲೆಯ ಕಾವೇಂಶ್ರೀ ಅವರು ಕಲಾ ಸಂಸ್ಕೃತಿಯ ಪೋಷಿಸಲು ಅವರು ಕೈಗೊಂಡ ಪ್ರಯತ್ನಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿಸಿದರು.

    ಈ ವರ್ಷದ ಕೊನೆಯ ಮನ್ ಕೀ ಬಾತ್ (Mann ki Baat) ಪ್ರಸಾರದಲ್ಲಿ ಮಾತನಾಡಿದ ಅವರು, ಗದಗ ಮೂಲದ ಹೋಟೆಲ್ ಉದ್ಯಮಿ ಕಾವೇಂಶ್ರೀ (ಕಾಳಮಂಜಿ ವೆಂಕಟಗಿರಿಯಪ್ಪ ಶ್ರೀನಿವಾಸ) ಅವರು ಸಂಸ್ಕೃತಿ ಉಳಿಸಲು ತಮ್ಮನ್ನು ತಾವು ಅರ್ಪಿಸಿಕೊಂಡಿರುವ ಬಗ್ಗೆ ತಿಳಿಸಿದರು.

    ಕಾವೇಂಶ್ರೀ ಅವರು ಈ ಹಿಂದೆ ಗದಗ ರೆಸ್ಟೋರೆಂಟ್‍ನಲ್ಲಿ ಮ್ಯಾನೇಜರ್ ಆಗಿದ್ದರು. ಅದಾದ ಬಳಿಕ ಅವರು ಕಳೆದ 25 ವರ್ಷಗಳಿಂದ ಕರ್ನಾಟಕದ ಕಲೆ-ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಉದ್ದೇಶದಲ್ಲಿ ನಿರಂತರವಾಗಿ ತೊಡಗಿಸಿಕೊಂಡರು. ಅವರು ಸಂಸ್ಕøತಿ ಮತ್ತು ಸಂಪ್ರದಾಯದೊಂದಿಗಿನ ಅವರ ಬಾಂಧವ್ಯವು ಎಷ್ಟು ಆಳವಾಗಿದೆಯೆಂದರೆ, ಅದನ್ನು ತಮ್ಮ ಧ್ಯೇಯವನ್ನಾಗಿ ಮಾಡಿಕೊಂಡರು ಎಂದು ಹೇಳಿದರು.

    ಅಷ್ಟೇ ಅಲ್ಲದೇ ಕಾವೇಂಶ್ರೀ ಅವರು, ಕಲಾ ಚೇತನ ಎಂಬ ಹೆಸರಿನಲ್ಲಿ ವೇದಿಕೆ ಸೃಷ್ಟಿಸಿದರು. ಈ ವೇದಿಕೆಯು ಇಂದು ಕರ್ನಾಟಕ, ಭಾರತ ಮತ್ತು ವಿದೇಶಗಳ ಕಲಾವಿದರಿಂದ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಸ್ಥಳೀಯ ಕಲೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸಲು ಈ ವೇದಿಕೆಯಿಂದ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ರೆಡ್ಡಿ ಪಕ್ಷದಿಂದ ಬಿಜೆಪಿಗೆ ಸಂಕಷ್ಟ ಆಗುತ್ತಾ? – ಅಂಕಿ ಸಂಖ್ಯೆ ಏನು ಹೇಳುತ್ತೆ?

    ಇದೇ ವೇಳೆ ಕೊರೊನಾ ಕುರಿತು ಮಾತನಾಡಿದ ಅವರು, ಅನೇಕ ದೇಶಗಳಲ್ಲಿ ಕೊರೊನಾ (Corona) ಸೋಂಕು ಹೆಚ್ಚುತ್ತಿರುವುದನ್ನು ಗಮನಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಜನರು ಜಾಗರೂಕರಾಗಿರಿ ಜೊತೆಗೆ ಕೊರೊನಾ ವಿರುದ್ಧ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ ಎಂದು ಸಲಹೆ ನೀಡಿದರು.

    ಕ್ರಿಸ್‍ಮಸ್ ಹಾಗೂ ಹೊಸವರ್ಷದ ಆಚರಣೆಗಾಗಿ ಬೇರೆ ಕಡೆ ಹೋಗಿ ಸಂಭ್ರಮಿಸುತ್ತಿರಿ. ಆದರೆ ಅಂತಹ ಸಂದರ್ಭದಲ್ಲಿ ಮಾಸ್ಕ್ ಹಾಗೂ ಸೆನಿಟೈಸರ್ ಹೀಗೆ ಅನೇಕ ಮಾರ್ಗಸೂಚಿಗಳನ್ನು ಅನುಸರಿಸಿ. ಇದರಿಂದಾಗಿ ಕೊರೊನಾ ವಿರುದ್ಧ ಹೋರಾಡಬಹುದು ಎಂದು ತಿಳಿಸಿದರು. ಇದನ್ನೂ ಓದಿ: ರಾಜಕೀಯ ಜಂಜಾಟದ ನಡುವೆ ಯುವಕರೊಂದಿಗೆ ಕಬಡ್ಡಿ ಆಡಿದ ಶಾಸಕ ಶಿವಲಿಂಗೇಗೌಡ

    Live Tv
    [brid partner=56869869 player=32851 video=960834 autoplay=true]

  • ಮನ್ ಕಿ ಬಾತ್‍ನಲ್ಲಿ ಬೆಂಗಳೂರಿನ ಸುರೇಶ್ ಕುಮಾರ್​ರನ್ನು ಪ್ರಶಂಸಿಸಿದ ಮೋದಿ

    ಮನ್ ಕಿ ಬಾತ್‍ನಲ್ಲಿ ಬೆಂಗಳೂರಿನ ಸುರೇಶ್ ಕುಮಾರ್​ರನ್ನು ಪ್ರಶಂಸಿಸಿದ ಮೋದಿ

    ನವದೆಹಲಿ: ಬೆಂಗಳೂರಿನ (Bengaluru) ಸಹಕಾರ ನಗರದಲ್ಲಿ (Sahakara Nagara) ಸಾವಿರಾರು ವೃಕ್ಷಗಳನ್ನು ನೆಟ್ಟು, ಪೋಷಿಸಿರುವ ಸುರೇಶ್ ಕುಮಾರ್ (Suresh Kumar) ಅವರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶ್ಲಾಘಿಸಿದ್ದಾರೆ.

    ಇಂದು ಪ್ರಧಾನಿ ಮೋದಿ ಮನ್ ಕಿ ಬಾತ್ (Mann Ki Baat) ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಬೆಂಗಳೂರಿನ ಸುರೇಶ್ ಕುಮಾರ್ ಅವರಿಗೆ ಪರಿಸರದ ಮೇಲೆ ಇರುವ ಕಾಳಜಿ, ಹಾಗೂ ಕನ್ನಡ ನಾಡು ನುಡಿಯ ಬಗ್ಗೆ ಇರುವ ಅಭಿಮಾನವನ್ನು ಪ್ರಶಂಸಿದರು.

    ಮೋದಿ ಹೇಳಿದ್ದೇನು?:ಕರ್ನಾಟಕದ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಸುರೇಶ್ ಕುಮಾರ್ ಅವರು ಸಹಕಾರ ನಗರದ ಅರಣ್ಯವನ್ನು ಪುನರುಜ್ಜೀವನಗೊಳಿಸಲು ಮುಂದಾಗಿದ್ದರು. ಆದರೆ ಇದು ಬಹಳ ಕಷ್ಟವಾದ ಕೆಲಸವಾಗಿತ್ತು. ಕಷ್ಟವಾದರೂ ಅದನ್ನು ಚಿಂತಿಸದೇ 20 ವರ್ಷಗಳ ಹಿಂದೆ ಸಹಕಾರ ನಗರದಲ್ಲಿ ಸಸಿಗಳನ್ನು ನೆಟ್ಟಿ ಅದನ್ನು ಪ್ರತಿನಿತ್ಯವೂ ಪೋಷಿಸಿದರು. ಇದೀಗ ಅವರ ಶ್ರಮದ ಪ್ರತಿಫಲವಾಗಿ ಆ ಸಸಿಗಳು 40 ಅಡಿ ಎತ್ತರದ ಬೃಹತ್ ಮರವಾಗಿ ಬೆಳೆದಿವೆ. 20 ವರ್ಷಗಳಲ್ಲಿ ಸುರೇಶ್ ಕುಮಾರ್ ಅವರು ಸುಮಾರು 2,000 ಗಿಡಗಳನ್ನು ನೆಟ್ಟಿದ್ದಾರೆ. ಪ್ರತಿಯೊಬ್ಬರು ಈ ಹಸಿರಿನ ಸೌಂದರ್ಯವನ್ನು ಮೆಚ್ಚುತ್ತಿದ್ದಾರೆ. ಇದು ಅಲ್ಲಿನ ನಿವಾಸಿಗಳಿಗೂ ಗರ್ವದ ಸಂಗತಿಯಾಗಿದೆ. ಇದನ್ನೂ ಓದಿ: ಒಟ್ಟು 9 ಸಾವಿರ ವ್ಯಾಗನ್ ಆರ್, ಸೆಲೆರಿಯೊ, ಇಗ್ನಿಸ್ ಕಾರುಗಳನ್ನು ಹಿಂದಕ್ಕೆ ಪಡೆದ ಮಾರುತಿ

    ಇದರ ಜೊತೆಗೆ ಅವರಿಗೆ ಕನ್ನಡ, ನಾಡು-ನುಡಿಯ ಬಗ್ಗೆಯೂ ಅಪಾರವಾದ ಅಭಿಮಾನವಿದೆ. ಈ ಹಿನ್ನೆಲೆಯಲ್ಲಿವ ಕನ್ನಡ ಭಾಷೆಯನ್ನು ಇನ್ನೂ ಹೆಚ್ಚು ಮುನ್ನೆಲೆಗೆ ತರುವ ದೃಷ್ಟಿಯಿಂದ ಅವರು ಸಹಕಾರ ನಗರದಲ್ಲಿ ಬಸ್ ಸ್ಟ್ಯಾಂಡ್‍ನ್ನು ನಿರ್ಮಿಸಿದ್ದಾರೆ. ಆ ಬಸ್ ಸ್ಟ್ಯಾಂಡ್‍ಗೆ ಸುವರ್ಣ ಕರ್ನಾಟಕ ಬಸ್ ನಿಲ್ದಾಣ ಸಹಕಾರನಗರ ಎಂದು ಕನ್ನಡದಲ್ಲೇ ಹೆಸರನ್ನು ಬರೆಸಿದ್ದಾರೆ. ಅಲ್ಲಿ ಕನ್ನಡ, ನಾಡು ನುಡಿಯ ಬಗ್ಗೆ ಅರಿವು ಮೂಡಿಸುವ ಫಲಕಗಳನ್ನು ಅಚ್ಚುಕಟ್ಟಾಗಿ ಅಳವಡಿಸಿದ್ದಾರೆ. ಇಲ್ಲಿ ಕನ್ನಡ ಸಿನಿಮಾ, ಕನ್ನಡದ ಪ್ರಸಿದ್ಧ ಕವಿಗಳು, ರಾಜ್ಯಕ್ಕೆ ಸಂಬಂಧಿಸಿದ ಗಣ್ಯ ವಯ್ಕಿಗಳ ಚಿತ್ರಗಳನ್ನು ಅಳವಡಿಸಲಾಗಿದೆ. ಜೊತೆಗೆ ಈ ಬಸ್‍ನಿಲ್ದಾಣದಲ್ಲಿ ಕನ್ನಡ ಪತ್ರಿಕೆಗಳು ಲಭ್ಯವಿದ್ದು, ಈ ಮೂಲಕ ಕನ್ನಡನಾಡು, ನುಡಿಯ ಹಿರಿಮೆಯನ್ನು ಪಸರಿಸುತ್ತಿದ್ದಾರೆ. ಇದನ್ನೂ ಓದಿ: ಭೀಕರ ಅಪಘಾತ – ಬೆಂಗಳೂರಿನ ರಸ್ತೆಗುಂಡಿಗೆ ಮತ್ತೊಬ್ಬ ಯುವಕ ಬಲಿ

    Live Tv
    [brid partner=56869869 player=32851 video=960834 autoplay=true]

  • ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರು : ನರೇಂದ್ರ ಮೋದಿ

    ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರು : ನರೇಂದ್ರ ಮೋದಿ

    ಚಂಡೀಗಢ: ಹರಿಯಾಣದ ಚಂಡೀಗಢ ವಿಮಾನ ನಿಲ್ದಾಣಕ್ಕೆ (Chandigarh airport) ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ (Bhagat Singh) ಅವರ ಹೆಸರನ್ನು ಮರುನಾಮಕರಣ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ತಿಳಿಸಿದ್ದಾರೆ.

    ಪ್ರತಿ ತಿಂಗಳ ಜನಪ್ರಿಯ ಕಾರ್ಯಕ್ರಮ ಮನ್ ಕಿ ಬಾತ್ (Mann Ki Baat) ಮೂಲಕ ದೇಶವನ್ನುದ್ದೇಶಿ ಇಂದು ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಹೆಸರನ್ನು ಚಂಡೀಗಢ ವಿಮಾನ ನಿಲ್ದಾಣಕ್ಕೆ ಇಡುವ ಮೂಲಕ ಗೌರವ ಅರ್ಪಿಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ವಿವಾಹಿತ ಬಾಯ್‌ಫ್ರೆಂಡ್‌ಗೆ ಹಾಸ್ಟೆಲ್‌ಮೇಟ್ಸ್ ಬೆತ್ತಲೆ ವೀಡಿಯೋ ಕಳಿಸಿದ BED ಪದವೀಧರೆ- ಇಬ್ಬರೂ ಅರೆಸ್ಟ್

    ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಹುಟ್ಟೂರಾದ ಖಟ್ಕರ್ ಕಲಾನ್‍ನಲ್ಲಿ ಪಂಜಾಬ್ ಮುಖ್ಯಮಂತ್ರಿ (Punjab Chief Minister) ಭಗವತ್ ಮಾನ್ ಅವರು ಅದ್ದೂರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಆ ಸಮಾರಂಭದ ನಿಮಿತ್ತ ಖಟ್ಕರ್ ಕಲಾನ್ ಹಳದಿಮಯವಾಗಿತ್ತು. ಇಲ್ಲಿ ಬಸಂತಿ ಅಥವಾ ಹಳದಿ ಬಣ್ಣ ಸ್ವಾತಂತ್ರ್ಯ ಹೋರಾಟದೊಂದಿಗೆ ಗುರುತಿಸಿಕೊಂಡ ಬಣ್ಣ, ಸ್ವಾತಂತ್ರ್ಯ ಹೋರಾಟಗಾರರು ಇದೇ ಬಣ್ಣವನ್ನು ಸಂಕೇತವಾಗಿ ಬಳಸುತ್ತಿದ್ದರು. ಭಗವತ್ ಮಾನ್ (Bhagwant Mann) ಅವರು ಕೂಡ ಸದಾ ಹಳದಿ ಬಣ್ಣದ ಪೇಟವನ್ನೇ ಧರಿಸುತ್ತಾರೆ.

    ಕೇಂದ್ರಾಡಳಿತ ಪ್ರದೇಶದ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಅವರ ಹೆಸರನ್ನು ಮರುನಾಮಕರಣ ಮಾಡುವ ಬಗ್ಗೆ ಪ್ರಸ್ತಾಪ ನಡೆದಿರುವುದು ಇದೇ ಮೊದಲಲ್ಲ. ಬಿಜೆಪಿ ನೇತೃತ್ವದ ಹರಿಯಾಣ ವಿಧಾನಸಭೆಯಲ್ಲಿ 2016ರ ಏಪ್ರಿಲ್‍ನಲ್ಲಿ ಅವಿರೋಧವಾಗಿ ನಿರ್ಣಯವನ್ನು ಅಂಗೀಕರಿಸಿತ್ತು. ಈ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಶೀಘ್ರದಲ್ಲೇ ಪತ್ರ ಬರೆದು ಮನವಿ ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿತ್ತು.

    Live Tv
    [brid partner=56869869 player=32851 video=960834 autoplay=true]

  • ಮನ್ ಕಿ ಬಾತ್‌ನಲ್ಲಿ ಶಿರಸಿಯ ಜೇನು ಕೃಷಿಕ ಮಧುಕೇಶ್ವರ ಹೆಗಡೆ ಸಾಧನೆ ಶ್ಲಾಘಿಸಿದ ಮೋದಿ

    ಮನ್ ಕಿ ಬಾತ್‌ನಲ್ಲಿ ಶಿರಸಿಯ ಜೇನು ಕೃಷಿಕ ಮಧುಕೇಶ್ವರ ಹೆಗಡೆ ಸಾಧನೆ ಶ್ಲಾಘಿಸಿದ ಮೋದಿ

    ಕಾರವಾರ: ಪ್ರಧಾನಿ ನರೇಂದ್ರ ಮೋದಿ ನಡೆಸಿದ 91ನೇ ಆವೃತ್ತಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಶಿರಸಿ ತಾಲೂಕಿನ ತಾರಗೋಡ ಗ್ರಾಮದ ಜೇನು ಕೃಷಿಕ ಮಧುಕೇಶ್ವರ ಹೆಗಡೆ ಅವರನ್ನು ಶ್ಲಾಘಿಸಿದ್ದಾರೆ.

    ದೇಶದ ವಿವಿಧೆಡೆಯ ಜೇನು ಕೃಷಿಕರು, ಆಯುರ್ವೇದಿಕ್ ಗಿಡಮೂಲಿಕೆ ಬೆಳೆಗಾರರನ್ನು ಶ್ಲಾಘಿಸಿದ ಪ್ರಧಾನಿ ಮೋದಿ ಅವರು ಮಧುಕೇಶ್ವರ ಅವರ ಜೇನು ಕೃಷಿ ಸಾಧನೆಯನ್ನು ವಿಶೇಷವಾಗಿ ಕೊಂಡಾಡಿದರು.

    ಸರ್ಕಾರದ ಸಹಾಯಧನ ಸೌಲಭ್ಯ ಪಡೆದಿದ್ದ ಮಧುಕೇಶ್ವರ ಹೆಗಡೆ ಕಳೆದ 35 ವರ್ಷದ ಹಿಂದೆ ಕೇವಲ 50 ಜೇನು ಕಾಲೋನಿಯನ್ನು ಇಟ್ಟುಕೊಂಡು ಜೇನು ಕೃಷಿ ಪ್ರಾರಂಭಿಸಿ ವಾರ್ಷಿಕ 1,500ಕ್ಕೂ ಹೆಚ್ಚು ಪೆಟ್ಟಿಗೆಗಳಲ್ಲಿ ಜೇನು ಬೆಳೆಸುತ್ತಿದ್ದಾರೆ. ವಾರ್ಷಿಕ ಸರಾಸರಿ 4.5 ಟನ್ ಜೇನುತುಪ್ಪ ಉತ್ಪಾದಿಸುತ್ತಿದ್ದಾರೆ. ಇದನ್ನೂ ಓದಿ: ಆ.2 ರಿಂದ 15ರವರೆಗೆ ರಾಷ್ಟ್ರಧ್ವಜವನ್ನು ನಿಮ್ಮ ಪ್ರೊಫೈಲ್ ಚಿತ್ರವಾಗಿ ಬಳಸಿ: ಮೋದಿ

    ವಲಸ್ಪತಿ ಜೇನುತುಪ್ಪ ಉತ್ಪಾದಿಸುವ ಅವರು ನೇರಳೆ ಜೇನುತುಪ್ಪ, ತುಳಸಿ ಜೇನುತುಪ್ಪ, ಆಮ್ಲ ಜೇನುತುಪ್ಪ, ಅಂಟವಾಳ ಜೇನುತುಪ್ಪ, ಮಲ್ಲ್ಟಿಫ್ಲೋರಾ ಜೇನುತುಪ್ಪ ಸೇರಿದಂತೆ ಹಲವು ವಿಧದ ವನಸ್ಪತಿ ಜೇನು ತುಪ್ಪಗಳನ್ನು ಉತ್ಪಾದಿಸುತ್ತಾರೆ. ಇದಲ್ಲದೇ ನಿಸರಿ ಜೇನು ಕೃಷಿ ಸಹ ಮಾಡುತ್ತಿದ್ದು, ಜೇನಿನ ಮಕರಂದಗಳನ್ನು ಸಂಗ್ರಹಿಸಿ ಔಷಧಿಗೆ ಸಹ ಬಳಕೆ ಮಾಡುತ್ತಿದ್ದಾರೆ.

    ಇವರ ಜೇನುಗಳನ್ನು ಬೇರೆ ಬೇರೆ ಪ್ರದೇಶಗಳಲ್ಲಿ ಇಟ್ಟು ಅವುಗಳಿಂದ ತುಪ್ಪ ತಯಾರಿಸುತಿದ್ದು, ಜೇನು ಕೃಷಿಯ ಸಾಧನೆ ಅವರ ಹೆಸರನ್ನು ಪ್ರಸಿದ್ಧಿಗೆ ತಂದಿದೆ. ಈ ಕುರಿತು ಪ್ರಧಾನಿಯವರು ಪ್ರಸ್ತಾಪಿಸಿ ಇವರ ಸಾಧನೆಯನ್ನು ಬಣ್ಣಿಸಿದರು. ಇದನ್ನೂ ಓದಿ: ಅಸುರಕ್ಷತೆಯ ವಾತಾವರಣವಿದೆ, ಗನ್ ಮ್ಯಾನ್ ನೀಡಿ: ಜೆಡಿಎಸ್ ಸದಸ್ಯನ ಮನವಿ

    ಈ ಹಿಂದೆ ಪಬ್ಲಿಕ್ ಟಿವಿಯಲ್ಲೂ ಸಹ ಇವರ ಸಾಧನೆ ಕುರಿತು ವರದಿ ಪ್ರಸಾರ ಮಾಡಲಾಗಿತ್ತು. ಇನ್ನು ಇವರು ತಮ್ಮ ಮನೆಯ ಸುತ್ತ ಔಷಧೀಯ ಸಸ್ಯಗಳನ್ನು ಸಹ ಬೆಳೆಯುತ್ತಿದ್ದು, ಜೇನು ಕೃಷಿಯಲ್ಲಿ ಸಾಧನೆ ಮಾಡುವ ಮೂಲಕ ಹಲವು ಪ್ರಶಸ್ತಿಗಳನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

    ಕೃಷಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಜೇನು ಕೃಷಿ ಬಗ್ಗೆ ಉಚಿತ ವಸತಿ ಸೌಕರ್ಯ ನೀಡಿ ತರಬೇತಿ ಹಾಗೂ ಮಾಹಿತಿಯನ್ನು ನೀಡುತ್ತಾ ಬಂದಿದ್ದು, ಆಸಕ್ತರಿಗೆ ಮಾದರಿ ಎನಿಸಿದ್ದಾರೆ.

    ಪ್ರಧಾನಿ ಹೆಸರು ಉಲ್ಲೇಖಿಸಿರುವ ಕುರಿತು ಸಂತಸ ಹಂಚಿಕೊಂಡ ಮಧುಕೇಶ್ವರ ಹೆಗಡೆಯವರು, ಜೇನು ಕೃಷಿ ಮೂಲಕ ಪ್ರಧಾನ ಮಂತ್ರಿಯವರು ನನ್ನನ್ನು ಗುರುತಿಸುವಂತೆ ಮಾಡಿದೆ. ಮೋದಿಯವರಂತಹ ಪ್ರಧಾನಿ ನನ್ನ ಹೆಸರನ್ನು ಉಲ್ಲೇಖಿಸಬಹುದು ಎಂಬ ನಿರೀಕ್ಷೆ ಇರಲಿಲ್ಲ. ನನಗೆ ಅಚ್ಚರಿಯ ಜತೆ ಸಂತಸವಾಯಿತು ಎಂದು ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆ.2 ರಿಂದ 15ರವರೆಗೆ ರಾಷ್ಟ್ರಧ್ವಜವನ್ನು ನಿಮ್ಮ ಪ್ರೊಫೈಲ್ ಚಿತ್ರವಾಗಿ ಬಳಸಿ: ಮೋದಿ

    ಆ.2 ರಿಂದ 15ರವರೆಗೆ ರಾಷ್ಟ್ರಧ್ವಜವನ್ನು ನಿಮ್ಮ ಪ್ರೊಫೈಲ್ ಚಿತ್ರವಾಗಿ ಬಳಸಿ: ಮೋದಿ

    ನವದೆಹಲಿ: ಆ.2 ರಿಂದ 15ರವರೆಗೆ ರಾಷ್ಟ್ರಧ್ವಜವನ್ನು ಸಾಮಾಜಿಕ ಜಾಲತಾಣದ ನಿಮ್ಮ ಪ್ರೊಫೈಲ್ ಚಿತ್ರಗಳಾಗಿ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
    ಮನ್ ಕಿ ಬಾತ್‍ನಲ್ಲಿ ಮಾತನಾಡಿದ ಅವರು, ಇದು ಆಜಾದಿ ಕಾ ಅಮೃತ್ ಮಹೋತ್ಸವದ ಒಂದು ಭಾಗವಾಗಿದೆ. ಇದನ್ನು ಈ ವರ್ಷ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಪೂರ್ವಭಾವಿಯಾಗಿ ಹಲವಾರು ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಆಚರಿಸಲಾಗುತ್ತಿದೆ. ಅಷ್ಟೇ ಅಲ್ಲದೇ ಇದು ಸಾಮೂಹಿಕ ಆಂದೋಲನವಾಗಿ ಬದಲಾಗುತ್ತಿದೆ ಎಂದು ಮಾಹಿತಿ ನೀಡಿದರು.
    ಸಾಮಾಜಿಕ ಜಾಲತಾಣದಗಳಲ್ಲಿ ಪ್ರೋಫೈಲ್ ಪಿಕ್ಚರ್ ಡ್ರೈವ್ ಅನ್ನು ಪ್ರಾರಂಭಿಸಲು ಆ.2ಅನ್ನು ಆಯ್ಕೆ ಮಾಡಿದ್ದೇವೆ. ಈ ದಿನಾಂಕವು ನಮ್ಮ ರಾಷ್ಟ್ರಧ್ವಜವನ್ನು ವಿನ್ಯಾಸಗೊಳಿಸಿದ ಪಿಂಗಲ್ ವೆಂಕಯ್ಯ ಅವರ ಜನ್ಮದಿನವಾಗಿದೆ ಎಂದರು.
    ಆಗಸ್ಟ್ 13 ರಿಂದ 15ರ ವರೆಗೆ ಹರ್ ಘರ್ ತಿರಂಗಾ ಎನ್ನುವ ಆಂದೋಲವನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಈ ಆಂದೋಲನವನ್ನು ಮುಂದುವರಿಸೋಣ ಎಂದು ತಿಳಿಸಿದರು. ಇದನ್ನೂ ಓದಿ: ಆರೋಪಿಗಳೊಂದಿಗೆ ಅಜಿತ್‍ಗೆ ಸಂಪರ್ಕವಿದೆ – ಆದಷ್ಟು ಬೇಗ ಇತರ ಆರೋಪಿಗಳನ್ನು ಬಂಧಿಸುತ್ತೇವೆ: ಶಶಿಕುಮಾರ್
    ಈ ಮಹೋತ್ಸವದ ಅಂಗವಾಗಿ ಸಮಾಜದ ಎಲ್ಲಾ ವರ್ಗದ ಜನರು ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಭಾರತವು ತನ್ನ ಸ್ವಾತಂತ್ರ್ಯದ 75 ವರ್ಷಗಳನ್ನು ಪೂರ್ಣಗೊಳಿಸಿದಾಗ, ನಾವೆಲ್ಲರೂ ಅದ್ಭುತ ಮತ್ತು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದೇವೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಭಾವನಾತ್ಮಕ ವಿಷಯ ಕೆದಕಿ ಕೆಲ ಪಕ್ಷಗಳು ರಾಜಕೀಯ ಲಾಭ ಪಡೆಯಲು ಹೊರಟಿವೆ: ಹೆಚ್‍ಡಿಕೆ ಕಿಡಿ

    Live Tv
    [brid partner=56869869 player=32851 video=960834 autoplay=true]

  • ನಾನೂ ಸೈನಿಕನಂತೆ ಹೋರಾಡಿದ್ದೆ – ಮನ್ ಕಿ ಬಾತ್‌ನಲ್ಲಿ 1975ರ ತುರ್ತು ಪರಿಸ್ಥಿತಿ ನೆನಪಿಸಿಕೊಂಡ ಮೋದಿ

    ನಾನೂ ಸೈನಿಕನಂತೆ ಹೋರಾಡಿದ್ದೆ – ಮನ್ ಕಿ ಬಾತ್‌ನಲ್ಲಿ 1975ರ ತುರ್ತು ಪರಿಸ್ಥಿತಿ ನೆನಪಿಸಿಕೊಂಡ ಮೋದಿ

    ನವದೆಹಲಿ: ಆಕಾಶವಾಣಿಯಲ್ಲಿಂದು ಪ್ರಸಾರವಾದ `ಮನ್ ಕಿ ಬಾತ್’ 90ನೇ ಸಂಚಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು 1975ರ ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸಿಕೊಂಡರು.

    ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವಕ್ಕಾಗಿ ಸೈನಿಕನಂತೆ ಹೋರಾಡಿದ್ದೇನೆ. ಅಂದು ದೇಶವಾಸಿಗಳ ಹೋರಾಟಕ್ಕೆ ಸಾಕ್ಷಿಯಾಗುವ, ಪಾಲುದಾರನಾಗುವ ಸೌಭಾಗ್ಯ ನನಗೆ ಸಿಕ್ಕಿತ್ತು ಎಂದು ಸ್ಮರಿಸಿದ್ದಾರೆ. ಅಲ್ಲದೆ ಪ್ರತಿಯೊಬ್ಬ ನಾಗರಿಕನ ಜೀವನದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿರುವ ಇಂತಹ ಸಾಮೂಹಿಕ ಆಂದೋಲನದ ಬಗ್ಗೆ ನಾನು ನಿಮ್ಮೊಂದಿಗೆ ಚರ್ಚಿಸಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದ್ರೌಪದಿ ಮುರ್ಮು ಹುಟ್ಟೂರಿಗೆ ಮೊಟ್ಟ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ

    ತುರ್ತು ಪರಿಸ್ಥಿತಿ ಜಾರಿಯಲ್ಲಿದ್ದಾಗ ದೇಶದಲ್ಲಿ ನಾಗರಿಕರ ಹಕ್ಕುಗಳು ದಮನಗೊಂಡಿದ್ದವು. ಸಂವಿಧಾನದ 21ನೇ ಪರಿಚ್ಛೇದ ನೀಡಿರುವ ಜೀವಿಸುವ ಹಕ್ಕು, ವೈಯಕ್ತಿಕ ಸ್ವಾತಂತ್ರ‍್ಯದ ಹಕ್ಕುಗಳನ್ನೂ ಕಿತ್ತುಕೊಳ್ಳಲಾಗಿತ್ತು. ಆದರೆ ತುರ್ತು ಪರಿಸ್ಥಿತಿಯ ನಂತರವೂ ದೇಶದ ಜನರು ಪ್ರಜಾಪ್ರಭುತ್ವದ ಮೇಲಿನ ನಂಬಿಕೆ ಕಳೆದುಕೊಳ್ಳಲಿಲ್ಲ. ದೇಶವು ಸ್ವಾತಂತ್ರ‍್ಯಗಳಿಸಿದ ಅಮೃತ ಮಹೋತ್ಸವ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಯ ಸಂಕಷ್ಟಗಳನ್ನು ನಾವು ಮರೆಯಬಾರದು ಎಂದು ಅವರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಅರಬ್ಬೀ ಸಮುದ್ರದಲ್ಲಿ ಹಡಗು ಮುಳುಗಡೆ – ತೈಲ ಸೋರಿಕೆ ಆತಂಕದಲ್ಲಿ ದ.ಕ ಜಿಲ್ಲಾಡಳಿತ ಅಲರ್ಟ್

    200 ಕೋಟಿ ಲಸಿಕೆ ಗುರಿ: ದೇಶಾದ್ಯಂತ ಬಹುತೇಕ ಜನರು ಕೊರೊನಾ ಲಸಿಕೆ ಪಡೆದಿರೋದು ತೃಪ್ತಿ ತಂದಿದೆ. ಕೊರೊನಾ ವಿರುದ್ಧ ಜನತೆ ಇನ್ನಷ್ಟು ಸುರಕ್ಷತೆ ವಹಿಸಬೇಕು. ನಾವು ಶೀಘ್ರದಲ್ಲೇ 200 ಕೋಟಿ ಡೋಸ್ ಲಸಿಕೆ ಗುರಿ ತಲುಪಲಿದ್ದೇವೆ. ಈಗಾಗಲೇ 2ನೇ ಡೋಸ್ ಲಸಿಕೆ ಪಡೆದವರು ಬೂಸ್ಟರ್ ಡೋಸ್ ಪಡೆಯಬೇಕಾದ ಅಗತ್ಯತೆ ಇದೆ. ಮುಖ್ಯವಾಗಿ ವೃದ್ಧರು ಬೂಸ್ಟರ್ ಡೋಸ್ ಪಡೆಯಬೇಕು ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.

    ಜಲ ಸಂರಕ್ಷಣೆಗೆ ಮೋದಿ ಕರೆ: ಜಲ ಸಂರಕ್ಷಣೆಯೇ ನಿಜವಾಗಿಯೂ ಜೀವ ಸಂರಕ್ಷಣೆ. ಇಂದಿನ ದಿನಗಳಲ್ಲಿ ಎಷ್ಟು ‘ನದಿ ಉತ್ಸವ’ಗಳು ನಡೆಯಲಾರಂಭಿಸಿವೆ ಎಂಬುದನ್ನು ನೀವು ನೋಡಿರಬೇಕು. ನಿಮ್ಮ ನಗರಗಳಲ್ಲಿ ಅಂತಹ ನೀರಿನ ಮೂಲಗಳು ಏನೇ ಇರಲಿ, ನೀವು ಏನನ್ನಾದರೂ ಆಯೋಜಿಸಿ ನೀರಿನ ಮೂಲಗಳನ್ನು ಸಂರಕ್ಷಣೆ ಮಾಡಬೇಕು ಎಂದು ಕರೆ ನೀಡಿದ್ದಾರೆ.

    ಕ್ರೀಡಾ ತಾರೆಗಳಿಗೆ ಶುಭ ಹಾರೈಕೆ: 90ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಈಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್ ಹಾಗೂ ಫಿನ್‌ಲ್ಯಾಂಡ್‌ನ ಪಾವೊ ನೂರ್ಮಿ ಗೇಮ್ಸ್‌ನಲ್ಲಿ ಬೆಳ್ಳಿ ಗೆದ್ದ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರಿಗೆ ಶುಭ ಹಾರೈಸಿದರು.

    ಸ್ಟಾರ್ಟ್-ಅಪ್‌ಗಳ ಬಗ್ಗೆ ಯಾರೂ ಯೋಚಿಸಲಿಲ್ಲ: ಕೆಲವು ವರ್ಷಗಳ ಹಿಂದೆ ಬಾಹ್ಯಾಕಾಶ ಕ್ಷೇತ್ರದ ಸ್ಟಾರ್ಟ್ಅಪ್‌ಗಳ ಬಗ್ಗೆ ಯಾರೂ ಯೋಚಿಸಿರಲಿಲ್ಲ. ಇಂದು ಅವುಗಳ ಸಂಖ್ಯೆ ನೂರಕ್ಕೂ ಹೆಚ್ಚಾಗಿದೆ. ಈ ಎಲ್ಲ ಸ್ಟಾರ್ಟ್ಅಪ್‌ಗಳು ಅಂತಹ ಆಲೋಚನೆಗಳ ಮೇಲೆ ಕಾರ್ಯನಿರ್ವಹಿಸುತ್ತಿವೆ. ಇದನ್ನು ಮೊದಲು ಖಾಸಗಿ ವಲಯಕ್ಕೆ ಅಸಾಧ್ಯವೆಂದು ಪರಿಗಣಿಸಲಾಗಿತ್ತು ಎಂದು ಹೇಳಿದ್ದಾರೆ.

    Live Tv

  • ವರ್ಕ್ ಔಟ್ ಆಯ್ತು ಮೋದಿಯ ಮನ್ ಕೀ ಬಾತ್ ಐಡಿಯಾ – ಎಂ.ಟೆಕ್ ಪದವೀಧರೆಯ ಬಾಳು ಬೆಳಗುತ್ತಿದೆ ಬಾಳೆ ದಿಂಡು

    ವರ್ಕ್ ಔಟ್ ಆಯ್ತು ಮೋದಿಯ ಮನ್ ಕೀ ಬಾತ್ ಐಡಿಯಾ – ಎಂ.ಟೆಕ್ ಪದವೀಧರೆಯ ಬಾಳು ಬೆಳಗುತ್ತಿದೆ ಬಾಳೆ ದಿಂಡು

    ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಎಷ್ಟೋ ಮಂದಿಗೆ ಪ್ರೇರಣೆಯಾಗಿದೆ. ಮನ್ ಕೀ ಬಾತ್‍ನಿಂದಲೇ ಪ್ರೇರಣೆಗೊಂಡ ಚಾಮರಾಜನಗರದ ಎಂ.ಟೆಕ್ ಪದವೀಧರೆ ಮಹಿಳೆಯೊಬ್ಬರು ಕಸದಿಂದ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ.

    ರೈತರು ಬಾಳೆಗೊನೆ ಕೊಯ್ದ ನಂತರ ಬಾಳೆ ದಿಂಡು ಅನುಪಯುಕ್ತ ಎಂದು ಬಿಸಾಡುತ್ತಾರೆ. ಆದರೆ ಈ ಅನುಪಯುಕ್ತ ಬಾಳೆ ದಿಂಡಿನಿಂದ ಮ್ಯಾಟ್, ಫ್ಲೋರ್ ಮ್ಯಾಟ್, ಚಾಪೆ, ಬ್ಯಾಗ್, ಪರ್ಸ್‍ಗಳನ್ನು ತಯಾರಿಸಬಹುದು ಎಂಬುದನ್ನು ಚಾಮರಾಜನಗರದ ವರ್ಷಾ ತೋರಿಸಿಕೊಟ್ಟಿದ್ದಾರೆ. ಗುಂಡ್ಲುಪೇಟೆ ತಾಲೂಕು ಆಲಹಳ್ಳಿಯ ವರ್ಷಾ ಎಂ.ಟೆಕ್ ಪದವೀಧರೆಯಾದರು ಯಾವುದೇ ಉದ್ಯೋಗಕ್ಕೆ ಸೇರಿರಲಿಲ್ಲ. ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಎಂಬ ಹಂಬಲ ಹೊಂದಿದ್ದ ಅವರಿಗೆ ಬೇರೆಯವರ ಕೈ ಕೆಳಗೆ ಕೆಲಸ ಮಾಡಲು ಇಷ್ಟ ಇರಲಿಲ್ಲ. ಸ್ವ ಉದ್ಯೋಗ ಪ್ರಾರಂಭಿಸಬೇಕು, ಮಹಿಳೆಯರಿಗೆ ಉದ್ಯೋಗ ನೀಡಬೇಕು ಆ ಮೂಲಕ ಸ್ತ್ರೀ ಸಬಲೀಕರಣಕ್ಕೆ ಕೈ ಜೋಡಿಸಬೇಕು ಎಂದು ಕನಸು ಹೊತ್ತಿದ್ದ ವರ್ಷಾ ಅವರು ಯೂಟ್ಯೂಬ್‍ನಲ್ಲಿ ಸರ್ಚ್ ಮಾಡುತ್ತಿದ್ದಾಗ, ನರೇಂದ್ರ ಮೋದಿ ತಮ್ಮ ಮನ್ ಕೀ ಬಾತ್‍ನಲ್ಲಿ ಪ್ರಸ್ತಾಪಿಸಿದ್ದ ವಿಚಾರವೊಂದು ಗಮನ ಸೆಳೆದಿದೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಅಭಾವ – ಮುಂದಿನ ವಾರದಿಂದಲೇ ಶಾಲೆಗಳು ಬಂದ್

    ಅನುಪಯುಕ್ತ ಬಾಳೆ ದಿಂಡಿನಿಂದ ಹಲವು ರೀತಿಯ ಉಪಯುಕ್ತ ವಸ್ತುಗಳನ್ನು ತಯಾರಿಸಬಹುದು ಉದಾಹರಣೆ ಸಹಿತ ಹೇಳಿದ್ದ ಮೋದಿ ಅವರ ಮಾತಿನಿಂದ ಪ್ರೇರಣೆಗೊಂಡ ವರ್ಷಾ, ತಾವೇಕೆ ಪ್ರಯತ್ನಿಸಿಸಬಾರದು ಎಂದುಕೊಂಡು ಮತ್ತೆ ಯೂಟ್ಯೂಬ್‍ನಲ್ಲಿ ಸರ್ಚ್ ಮಾಡಿದಾಗ ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಾಳೆ ದಿಂಡಿನಿಂದ ಉತ್ಪನ್ನಗಳ ತಯಾರಿಕೆ ಮಾಡುತ್ತಿರುವ ದೃಶ್ಯಾವಳಿ ನೋಡಿದ್ದಾರೆ. ಬಳಿಕ ಕೊಯಮತ್ತೂರಿನಿಂದ 3 ಲಕ್ಷ ರೂಪಾಯಿಗಳಿಗೆ ಯಂತ್ರೋಪಕರಣಗಳನ್ನು ಖರೀದಿಸಿ ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿರುವ ತಮ್ಮ ಜಮೀನಿನಲ್ಲಿ ಬಾಳೆ ದಿಂಡು ಉತ್ಪನ್ನಗಳ ತಯಾರಿಕಾ ಉದ್ಯಮ ಆರಂಭಿಸಿದ್ದಾರೆ. ಇದನ್ನೂ ಓದಿ: ಅಂಗನವಾಡಿ ಶಿಕ್ಷಕಿಯಾಗಿ ದಲಿತೆ ನೇಮಕವಾಗಿದ್ದಕ್ಕೆ ಮಕ್ಕಳನ್ನು ಕಳುಹಿಸದ ಮೇಲ್ಜಾತಿ ಪಾಲಕರು!

    ಈ ಘಟಕದಲ್ಲಿ ಐವರು ಮಹಿಳೆಯರಿಗೆ ಉದ್ಯೋಗ ನೀಡಿರುವ ವರ್ಷಾ ನಗರ ಪ್ರದೇಶಗಳಲ್ಲಿರುವ ಆರ್ಗ್ಯಾನಿಕ್ ಶಾಪ್, ಗೂಗಲ್, ಫ್ಲಿಪ್‍ಕಾರ್ಟ್, ಅಮೆಜಾನ್ ಮೂಲಕ ಮಾರುಕಟ್ಟೆ ಸೃಷ್ಟಿಸಿಕೊಳ್ಳಲು ಮುಂದಾಗಿದ್ದಾರೆ. ಬಾಳೆ ದಿಂಡಿನಲ್ಲಿರುವ ರಸದಲ್ಲಿ ಪೊಟ್ಯಾಶಿಯಂ ಅಂಶ ಇರುವುದರಿಂದ ಅದನ್ನು ಬೀಸಾಡದೆ ರಾಸಾಯನಿಕ ಗೊಬ್ಬರದ ಬದಲು ಬಾಳೆ ದಿಂಡಿನ ರಸ ಹಾಗೂ ದಿಂಡಿನಿಂದ ನಾರು ತೆಗೆದ ನಂತರ ಉಳಿಯುವ ವೇಸ್ಟ್‌ನಿಂದ ಸಾವಯವ ಗೊಬ್ಬರ ತಯಾರಿಸಿ ತಮ್ಮ ಜಮೀನಿಗೆ ಬಳಸುತ್ತಿದ್ದಾರೆ. ಇವರು ತಯಾರಿಸುತ್ತಿರುವ ಬಾಳೆದಿಂಡಿನ ಚಾಪೆಗಳನ್ನು ಕೊಯಮತ್ತೂರಿನ ಕಂಪನಿಯೊಂದು ಖರೀದಿಸುತ್ತಿದ್ದು, ಬಾಳೆದಿಂಡಿನಿಂದ ತಯಾರಿಸಲಾದ ವಸ್ತುಗಳು ಪರಿಸರ ಸ್ನೇಹಿ ಆಗಿರುವುದರಿಂದ ಬೇಡಿಕೆ ಹೆಚ್ಚಾಗಬಹುದು ಎಂಬ ಆಶಯವನ್ನೂ ಅವರು ಹೊಂದಿದ್ದಾರೆ. ಇದನ್ನೂ ಓದಿ: ಮದುವೆಯಾಗಲು ಒತ್ತಾಯಿಸಿದ್ದಕ್ಕೆ ಪ್ರೀತಿಸಿದವಳನ್ನೇ ಇಟ್ಟಿಗೆಯಿಂದ ಹೊಡೆದು ಕೊಂದ

    ಮೈಸೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿ ಆಗಿರುವ ವರ್ಷಾ ಅವರ ಪತಿ ಶ್ರೀಕಂಠಸ್ವಾಮಿ ಅವರು ರಜಾ ದಿನಗಳಲ್ಲಿ ಬಾಳೆ ದಿಂಡಿನ ಉತ್ಪನ್ನಗಳನ್ನು ತಯಾರಿಸುವ ಕೆಲಸದಲ್ಲಿ ನಿರತರಾಗಿ ತಮ್ಮ ಪತ್ನಿಯ ಕಾರ್ಯಕ್ಕೆ ಸಾಥ್ ನೀಡುತ್ತಿದ್ದಾರೆ. ಈ ದಂಪತಿ ಸುತ್ತಮುತ್ತಲಿನ ಜಮೀನಿಗಳಲ್ಲಿ ಬಾಳೆ ಬೆಳೆಯುವ ರೈತರನ್ನು ಸಂಪರ್ಕಿಸಿ ಬಾಳೆ ದಿಂಡು ಬಿಸಾಡದೆ ತಮಗೆ ನೀಡುವಂತೆ ಕೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಒಂದು ಬಾಳೆ ದಿಂಡಿಗೆ 8 ರಿಂದ 10 ರೂಪಾಯಿಗೆ ಖರೀದಿಸಲು ಆಲೋಚಿಸಿದ್ದಾರೆ, ಇದರಿಂದ ಸುತ್ತಮುತ್ತಲಿನ ರೈತರಿಗೂ ಲಾಭವಾಗಲಿದೆ ಎಂಬುದು ಅವರ ಆಶಯವಾಗಿದೆ. ಒಟ್ಟಾರೆ ಮೋದಿ ಅವರ ಮನ್ ಕೀ ಬಾತ್ ವಿದ್ಯಾವಂತ ಮಹಿಳೆಯೊಬ್ಬರು ಯಶಸ್ವಿ ಉದ್ಯಮಿಯಾಗಲು ನಿಜಕ್ಕೂ ಪ್ರೇರಣೆ ನೀಡಿದೆ ಎಂದರೆ ತಪ್ಪಾಗಲಾರದು.

    Live Tv

  • ದೈನಂದಿನ ಜೀವನದ ಭಾಗವಾಗಲಿ ಯೋಗ – ಪ್ರಧಾನಿ ಮೋದಿ ಕರೆ

    ದೈನಂದಿನ ಜೀವನದ ಭಾಗವಾಗಲಿ ಯೋಗ – ಪ್ರಧಾನಿ ಮೋದಿ ಕರೆ

    ನವದೆಹಲಿ: ಆಜಾದಿ ಕಾ ಅಮೃತ್ ಮಹೋತ್ಸವ ಹಾಗೂ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಮೈಸೂರಿನಲ್ಲಿ ನಡೆಯಲಿರುವ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುತ್ತಿದ್ದು, ಅಂದು ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಸಾವಿರಾರು ಮಂದಿ ಯೋಗ ಮಾಡಲಿದ್ದಾರೆ.

    ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಯೋಗ ದಿನಕ್ಕೆ ಸಂದೇಶ ನೀಡಿದ್ದು, ಯೋಗವನ್ನು ತಮ್ಮ ದೈನಂದಿನ ಜೀವನದ ಭಾಗವಾಗಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಮೇಕ್ ಇನ್ ಇಂಡಿಯಾಗೆ ಉತ್ತೇಜನ – 96 ಸುಧಾರಿತ ಯುದ್ಧ ವಿಮಾನ ತಯಾರಿಸಲು ಐಎಎಫ್ ಯೋಜನೆ

    ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಂಬರುವ ದಿನಗಳಲ್ಲಿ ವಿಶ್ವವೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಿದೆ. ಈ ದಿನವನ್ನು ಆಚರಿಸುವ ಮೂಲಕ ಯೋಗ ನಿಮ್ಮ ದೈನಂದಿನ ಜೀವನದ ಭಾಗವಾಗಿ ಅಳವಡಿಸಿಕೊಳ್ಳಬೇಕು. ಏಕೆಂದರೆ ಇದರಲ್ಲಿ ಹಲವು ಪ್ರಯೋಜನಗಳಿವೆ ಎಂದೂ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

    ಇದರೊಂದಿಗೆ ಯೋಗ ಪ್ರದರ್ಶನ ಹಾಗೂ ಪ್ರಯೋಜನಗಳನ್ನು ತಿಳಿಸುವ ವೀಡಿಯೋ ಲಿಂಕ್ ಒಂದನ್ನು ಲಗತ್ತಿಸಿದ್ದಾರೆ. ಇದನ್ನೂ ಓದಿ: 2 ವಾರದಿಂದ ಸಿಕ್ಕಿಲ್ಲ ಸೈನಿಕರು – ಮುಂದುವರಿದ ಶೋಧಕಾರ್ಯ

    Narendra modi

    ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನಡೆದ ತಮ್ಮ 89ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕುರಿತು ಮಾತನಾಡಿದ್ದರು.

    ಈ ಬಾರಿ ಪ್ರತಿಯೊಬ್ಬರೂ ಯೋಗ ದಿನವನ್ನು ಆಚರಿಸಬೇಕು. ಅದಕ್ಕಾಗಿ ನಿಮ್ಮ ನಗರ, ಪಟ್ಟಣ ಅಥವಾ ಹಳ್ಳಿಯಲ್ಲಿನ ಯಾವುದಾರೂ ವಿಶೇಷ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಿ. ಅದು ಪುರಾತನ ದೇವಾಲಯವಾಗಿರಬಹುದು, ಪ್ರವಾಸಿ ಕೇಂದ್ರವಾಗಿರಬಹುದು ಅಥವಾ ಪ್ರಸಿದ್ಧ ನದಿಯ ತಪ್ಪಲಾಗಿರಬಹುದು. ಅಲ್ಲಿ ಯೋಗ ಪ್ರದರ್ಶನ ಮಾಡುವುದರಿಂದ ನಿಮ್ಮ ಪ್ರದೇಶವನ್ನೂ ಗುರುತಿಸಿದಂತಾಗುತ್ತದೆ. ಜೊತೆಗೆ ಪ್ರವಾಸೋದ್ಯಮಕ್ಕೂ ಉತ್ತೇಜನ ಸಿಗುತ್ತದೆ ಎಂದು ಅವರು ಸಲಹೆ ನೀಡಿದ್ದರು.

  • ನೀರನ್ನು ಮರುಬಳಕೆ ಮಾಡಿ: ಮೋದಿ ಕರೆ

    ನೀರನ್ನು ಮರುಬಳಕೆ ಮಾಡಿ: ಮೋದಿ ಕರೆ

    ನವದೆಹಲಿ: ನೀರನ್ನು ಮಿತವಾಗಿ ಬಳಸುವ ಜೊತೆಗೆ ಅದನ್ನು ಉಳಿಸಲು ಮತ್ತು ಸಾಧ್ಯವಾದಲ್ಲೆಲ್ಲಾ ನೀರನ್ನು ಮರುಬಳಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು.

    ಮನ್‍ ಕಿ ಬಾತ್‍ನ 87ನೇ ಕಂತಿನಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ನೀರಿನ ಮರುಬಳಕೆಗೆ ಹೆಚ್ಚಿನ ಒತ್ತನ್ನು ನೀಡಬೇಕು. ಮನೆಯಲ್ಲಿ ಬಳಸುವ ನೀರನ್ನು ತೋಟಕ್ಕೆ ಬಳಸುವ ಮೂಲಕ ಮರುಬಳಕೆ ಮಾಡಬಹುದಾಗಿದೆ ಎಂದರು.

    ನೀರನ್ನು ಉಳಿಸುವ ಈ ಕಾರ್ಯದಲ್ಲಿ ಮಕ್ಕಳು ಹೆಚ್ಚು ಕೈಜೋಡಿಸಬೇಕು. ಜಲ ಸಂರಕ್ಷಣೆನ್ನೆ ತಮ್ಮ ಜೀವನ ಧ್ಯೇಯವನ್ನಾಗಿ ಮಾಡಿಕೊಂಡಿರುವವರು ನಮ್ಮ ದೇಶದಲ್ಲಿ ಹಲವಾರು ಜನರಿದ್ದಾರೆ ಎಂದರು.

    ನದಿ ಹಾಗೂ ಕೆರೆಗಳನ್ನು ಸ್ವಚ್ಛಗೊಳಿಸುವ ಅಭಿಯಾನವನ್ನು ನಡೆಸುತ್ತಿರುವ ಚೆನ್ನೈನ ಅರುಣ್ ಕೃಷ್ಣಮೂರ್ತಿ ಅವರನ್ನು ಎಂದು ಪ್ರಶಂಸಿದರು. ಕೃಷ್ಣಮೂರ್ತಿ ಅವರು 150ಕ್ಕೂ ಹೆಚ್ಚು ಕೆರೆಗಳನ್ನು ಸ್ವಚ್ಛಗೊಳಿಸುವ ಜವಾಬ್ದಾರಿಯನ್ನು ವಹಿಸಿಕೊಂಡು ಯಶಸ್ಸನ್ನು ಪಡೆದಿದ್ದಾರೆ ಎಂದರು. ಇದನ್ನೂ ಓದಿ:  ಬಿಜೆಪಿ, ಮೋದಿ, ಯೋಗಿಯನ್ನು ಮುಸ್ಲಿಮರು ಪ್ರೀತಿಸುತ್ತಾರೆ: ದ್ಯಾನಿಶ್‌ ಅಜಾದ್‌ ಅನ್ಸಾರಿ

    ಮಹಾರಾಷ್ಟ್ರದ ರೋಹನ್ ಕಾಳೆ, ತಮಿಳುನಾಡಿನ ಮುಪ್ಪಟಂ ನಾರಾಯಣ ಅವರ ಉದಾಹರಣೆಯನ್ನು ತೆಗೆದುಕೊಂಡರು. ಜೊತೆಗೆ ನೀರಿನ ಕೊರತೆಯಿರುವ ಗುಜರಾತ್‍ನಲ್ಲಿ ಜಲಮಂದಿರ್ ಯೋಜನೆ ಪ್ರಮುಖ ಪಾತ್ರ ವಹಿಸಿದ್ದು, ನೀರು ಸಾಕಷ್ಟು ಮಟ್ಟದಲ್ಲಿ ಹೆಚ್ಚಲು ಕಾರಣವಾಗಿದೆ. ಸ್ಥಳೀಯ ಮಟ್ಟದಲ್ಲಿ ಎಲ್ಲರೂ ಇದೇ ರೀತಿ ಜಾಗೃತರಾದರೇ ಅಭಿಯಾನವನ್ನೇ ಪ್ರಾರಂಭಿಸಬಹುದು ಎಂದು ತಿಳಿಸಿದರು.

    ನೀರನ್ನು ಉಳಿಸಲು ಚೆಕ್ ಡ್ಯಾಂ ನಿರ್ಮಾಣ ಅಥವಾ ಮಳೆನೀರು, ಕೊಯ್ಲಿನಂತಹ ಪ್ರಯತ್ನಗಳು ಪ್ರಾಮುಖ್ಯತೆಯನ್ನು ಹೊಂದಿದೆ. ಇದರ ಜೊತೆಗೆ ಎಲ್ಲರೂ ಒಗ್ಗೂಡಿ ಪ್ರಯತ್ನಿಸುವುದು ಹಾಗೂ ವೈಯಕ್ತಿಕ ಪ್ರಯತ್ನಗಳು ಸಹ ಮುಖ್ಯವಾಗಿದೆ ಪ್ರತಿಯೊಬ್ಬರು ನೀರನ್ನು ಮಿತವಾಗಿ ಬಳಸಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಮೆಹಬೂಬಾ ಮುಫ್ತಿ ಏನೇ ಹೇಳುತ್ತಿದ್ದರೂ ಅದಕ್ಕೆಲ್ಲಾ ಬಿಜೆಪಿಯೇ ಹೊಣೆ: ಸಂಜಯ್ ರಾವತ್

  • ನಾನು ಅಧಿಕಾರ ಬಯಸಿಲ್ಲ, ಜನ ಸೇವೆಯೇ ಗುರಿ: ಮೋದಿ

    ನಾನು ಅಧಿಕಾರ ಬಯಸಿಲ್ಲ, ಜನ ಸೇವೆಯೇ ಗುರಿ: ಮೋದಿ

    ನವದೆಹಲಿ: ನಾನು ಅಧಿಕಾರವನ್ನು ಬಯಸಿಲ್ಲ, ಜನ ಸೇವೆಯೇ ಗುರಿಯಾಗಿದೆ. ಇಂದು, ಮುಂದೆಯೂ ಅಧಿಕಾರದಲ್ಲಿರಲು ಬಯಸುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

    ನಿನ್ನೆ 85ನೇ ಮಾಸಿಕ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದ ವೇಳೆ ಆಯುಷ್ಮಾನ್ ಭಾರತದ ಫಲಾನುಭವಿಯೊಬ್ಬರು ಮೋದಿ ಅವರು ಸದಾ ಅಧಿಕಾರದಲ್ಲೇ ಮುಂದುವರಿಯಬೇಕು ಎಂದು ಆಶಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮೋದಿ ಅವರು ನಾನು ಅಧಿಕಾದಲ್ಲಿ ಇರಲು ಬಯಸುವುದಿಲ್ಲ. ನಾನು ಕೇವಲ ಸೇವೆಯಲ್ಲಿ ಇರಲು ಬಯಸುತ್ತೇನೆ. ನನ್ನ ಪಾಲಿಗೆ ಈ ಹುದ್ದೆ, ಈ ಪ್ರಧಾನಿಗಿರಿ, ಈ ಎಲ್ಲಾ ವಿಷಯಗಳು ಅಧಿಕಾರಕ್ಕಾಗಿಯಲ್ಲ, ಎಲ್ಲಾ ಸೇವೆಗಾಗಿ ಆಗಿದೆ. ಸರ್ಕಾರದ ಹಲವು ಕಾರ್ಯಗಳು, ಯೋಜನೆಗಳು, ಮಾನವೀಯ ಸ್ಪಂದನೆಗಳಿಗೆ ಕುರಿತು ಮಾಡುವ ಕೆಲಸಗಳು ಸದಾ ನನಗೆ ವಿಶೇಷ ಸಂಭ್ರಮ ನೀಡುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಮನ್‌ ಕಿ ಬಾತ್‌: ಕೋವಿಡ್‌ ಇನ್ನೂ ಹೋಗಿಲ್ಲ- ದೇಶದ ಜನತೆಗೆ ಪ್ರಧಾನಿ ಮೋದಿ ಎಚ್ಚರಿಕೆ

    modi

    ಸ್ಟಾರ್ಟಪ್ ಯುಗ: ಇದೇ ವೇಳೆ ಪ್ರಸ್ತುತದ ಯುಗವನ್ನು ಸ್ಟಾರ್ಟಪ್‍ಗಳಯುಗ ಎಂದು ಬಣ್ಣಿಸಿದ ಪ್ರಧಾನಿ ಮೋದಿ ಅವರು ಭಾರತದ 70ಕ್ಕಿಂತ ಹೆಚ್ಚು ಸ್ಟಾರ್ಟಪ್‍ಗಳು ಇಂದು 7500 ಕೋಟಿ ರು. ಮೌಲ್ಯದ ವಹಿವಾಟು ನಡೆಸುತ್ತಿವೆ ಎಂದು ಕೊಂಡಾಡಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲೆಯ 25 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು

    ಮಾಹಾಮಾರಿ ಕೊರೊನಾ ಹಾವಳಿ ಇನ್ನೂ ನಮ್ಮನ್ನು ಬಿಟ್ಟು ಹೋಗಿಲ್ಲ. ಈ ವೈರಸ್ ಹರಡದಂತೆ ಎಚ್ಚರವಾಗಿರಬೇಕು. ಈ ಬಗ್ಗೆ ಹೆಚ್ಚು ಜಾಗೃತವಾಗಿರುವುದು ನಮ್ಮೆಲ್ಲರ ಹೊಣೆ ಎಂದು ದೇಶದ ಜನತೆಗೆ ಮೋದಿ ಎಚ್ಚರಿಸಿದ್ದಾರೆ.