Tag: Manoj Sinha

  • ಬಿಗಿಭದ್ರತೆಯೊಂದಿಗೆ ಅಮರನಾಥ ಯಾತ್ರೆಗೆ ಚಾಲನೆ

    ಬಿಗಿಭದ್ರತೆಯೊಂದಿಗೆ ಅಮರನಾಥ ಯಾತ್ರೆಗೆ ಚಾಲನೆ

    ಶ್ರೀನಗರ: ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ (Amarnath Yatra) ಇಂದು ಬಿಗಿಭದ್ರತೆಯೊಂದಿಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ (Manoj Sinha) ಅವರು ಚಾಲನೆ ನೀಡಿದರು.

    ಅಧಿಕೃತವಾಗಿ ನಾಳೆಯಿಂದ ಆರಂಭವಾಗಲಿದ್ದು, ಇಂದು ಜಮ್ಮುವಿನ ಭಗವತಿ ನಗರದಲ್ಲಿ 5,880 ಭಕ್ತರಿದ್ದ ಮೊದಲ ಶಿಬಿರಕ್ಕೆ ಧ್ವಜ ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ಜು.3ರಂದು ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಯಾತ್ರೆ ಅಧಿಕೃತವಾಗಿ ಪ್ರಾರಂಭವಾಗಲಿದ್ದು, ಆ.7ರವರೆಗೆ 38 ದಿನಗಳ ಕಾಲ ಅಮರನಾಥ ಯಾತ್ರೆ ನಡೆಯಲಿದೆ. ಈ ಹಿನ್ನೆಲೆ ಕಥುವಾದ ಲಖನ್‌ಪುರದಿಂದ ಪವಿತ್ರ ಗುಹೆಯವರೆಗೆ ಸುಮಾರು 1 ಲಕ್ಷ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಇದನ್ನೂ ಓದಿ: ಏಷ್ಯಾ ಕಪ್‌ ಟೂರ್ನಿಗೆ ಮುಹೂರ್ತ ಫಿಕ್ಸ್‌; ಸೆ.7ಕ್ಕೆ ಭಾರತ-ಪಾಕ್‌ ಮುಖಾಮುಖಿ

    ಜಮ್ಮು-ಶ್ರೀನಗರ ಹೆದ್ದಾರಿ ಸಾವಿರಾರು ಯಾತ್ರಿಕರಿಗೆ ಪ್ರಮುಖ ಮಾರ್ಗಗಳಲ್ಲಿ ಒಂದಾಗಿದೆ. ಹೀಗಾಗಿ ಸಿಆರ್‌ಪಿಎಫ್ ಅದರ ಮೇಲೆ ಕಣ್ಗಾವಲು ಹೆಚ್ಚಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆ-9 ಶ್ವಾನ ದಳಗಳನ್ನು ಅದರ ಸಿಬ್ಬಂದಿಯೊಂದಿಗೆ ನಿಯೋಜಿಸಲಾಗಿದೆ.

    ಉಧಮ್‌ಪುರ ವಲಯದಂತಹ ಸೂಕ್ಷ್ಮ ಪ್ರದೇಶಗಳ ಮೇಲೆ ವಿಶೇಷ ಗಮನಹರಿಸಿ ಹೆದ್ದಾರಿ ಗಸ್ತು ತಿರುಗುವಿಕೆಯನ್ನು ನಡೆಸಲಾಗುತ್ತಿದೆ. ಈ ಸಂಬಂಧ ಸಭೆ ನಡೆಸಿ ಪೊಲೀಸರು, ಧಾರ್ಮಿಕ ಸಂಸ್ಥೆಗಳು, ಟ್ಯಾಕ್ಸಿ ಒಕ್ಕೂಟಗಳು, ವ್ಯಾಪಾರಿಗಳು, ಮಾರುಕಟ್ಟೆ ಮತ್ತು ಹೋಟೆಲ್ ಸಂಘದ ಅಧಿಕಾರಿಗಳಿಂದ ಸಲಹೆಗಳನ್ನು ಪಡೆದಿದ್ದಾರೆ. ಅಮರನಾಥ ಯಾತ್ರಿಕರಿಗೆ ವಸತಿ ಮತ್ತು ಆಹಾರದಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಸಾಕಷ್ಟು ಕುಡಿಯುವ ನೀರು ಮತ್ತು ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಲಾಗಿದೆ ಎಂದು ಆಯುಕ್ತರು ಹೇಳಿದರು.

    ಬೇಸ್ ಕ್ಯಾಂಪ್‌ನಲ್ಲಿ ಯಾತ್ರಿಕರಿಗೆ ಎಸಿ ಹಾಲ್, ಹ್ಯಾಂಗರ್, ಸಮುದಾಯ ಲಂಗಾರ್ ಸೇವೆ, ಸ್ವಚ್ಛ ಮೊಬೈಲ್ ಶೌಚಾಲಯಗಳನ್ನು ಒದಗಿಸಲಾಗಿದೆ. ಇದರೊಂದಿಗೆ, ಕಥುವಾದ ಲಖನ್‌ಪುರದಿಂದ ಲಂಬಾರ್ ಮತ್ತು ರಾಂಬನ್‌ನ ಬನಿಹಾಲ್‌ಗೆ ಯಾತ್ರೆಯ ಮಾರ್ಗದಲ್ಲಿರುವ ಜಿಲ್ಲೆಗಳ ವಸತಿ ಕೇಂದ್ರಗಳಲ್ಲಿ ಯಾತ್ರಿಕರಿಗೆ ಇದೇ ರೀತಿಯ ಸೌಲಭ್ಯಗಳು ಸಿಗುತ್ತವೆ. ಈಗಾಗಲೇ ಜುಲೈ 1ರಿಂದ ಆಫ್‌ಲೈನ್ ನೋಂದಣಿ ಆರಂಭವಾಗಿದೆ.ಇದನ್ನೂ ಓದಿ: ಬೈಕ್ ಟ್ಯಾಕ್ಸಿಗೆ ಕೇಂದ್ರದಿಂದ ಅಸ್ತು – ಮಾರ್ಗಸೂಚಿ ಬಿಡುಗಡೆ

  • ಬಸ್‍ಗಳ ನಡುವೆ ಡಿಕ್ಕಿ – ಭೀಕರ ಅಪಘಾತದಲ್ಲಿ ಮೂವರು ಸಾವು, 12 ಮಂದಿಗೆ ಗಾಯ

    ಬಸ್‍ಗಳ ನಡುವೆ ಡಿಕ್ಕಿ – ಭೀಕರ ಅಪಘಾತದಲ್ಲಿ ಮೂವರು ಸಾವು, 12 ಮಂದಿಗೆ ಗಾಯ

    ಶ್ರೀನಗರ: ಎರಡು ಬಸ್‍ಗಳು ಡಿಕ್ಕಿ ಹೊಡೆದ ಪರಿಣಾಮ 13 ವರ್ಷದ ಬಾಲಕಿ ಸೇರಿದಂತೆ ಮೂವರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ಸಾಂಬಾ (Samba) ಜಿಲ್ಲೆಯ ಜಮ್ಮು-ಪಠಾಣ್‍ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ (Jammu-Pathankot National Highway) ನಡೆದಿದೆ.

    ಓವರ್‌ಟೇಕ್ ಮಾಡಲು ಚಾಲಕ ಪ್ರಯತ್ನಿಸುವಾಗ ಅತಿವೇಗದಿಂದ ಅಪಘಾತ ಸಂಭವಿಸಿದೆ. ಗಾಯಗೊಂಡವರಲ್ಲಿ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವೈದ್ಯಾಧಿಕಾರಿ ಡಾ.ಭರತ್ ಭೂಷಣ್ ತಿಳಿಸಿದ್ದಾರೆ.

    ಘಟನೆ ಕುರಿತಂತೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ (Lieutenant Governor Manoj Sinha) ಅವರು ಸಂತಾಪ ವ್ಯಕ್ತಪಡಿಸಿದ್ದು, ದೋಡಾ (Doda) ಮತ್ತು ಸಾಂಬಾದಲ್ಲಿ (Samba) ಸಂಭವಿಸಿದ ರಸ್ತೆ ಅಪಘಾತದಲ್ಲಿ ಆದ ಸಾವು-ನೋವಿನಿಂದ ಮನಸ್ಸಿಗೆ ತುಂಬಾ ನೋವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋಗೆ ಹೈಟೆಕ್ ಟಚ್ – ನಿಲ್ದಾಣದ ಒಳಗೆ ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಪ್ಲ್ಯಾನ್

    ಈ ಸಂಬಂಧ ಟ್ವೀಟ್ ಮಾಡಿರುವ ಅವರು, “ದೋಡಾ ಮತ್ತು ಸಾಂಬಾದಲ್ಲಿ ಸಂಭವಿಸಿದ ದುರದೃಷ್ಟಕರ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ತೀವ್ರ ನೋವಾಗಿದೆ. ಮೃತರ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲಾ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗುಜರಾತ್‍ನಲ್ಲಿ ಕಾಂಗ್ರೆಸ್‍ಗೆ ಮತ್ತೆ ಆಘಾತ – ಝಲೋದ್ ಭವೇಶ್ ಕಟಾರಾ ರಾಜೀನಾಮೆ

    Live Tv
    [brid partner=56869869 player=32851 video=960834 autoplay=true]

  • 32 ವರ್ಷಗಳ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮಲ್ಟಿಪ್ಲೆಕ್ಸ್ ಥಿಯೇಟರ್ ಓಪನ್

    32 ವರ್ಷಗಳ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮಲ್ಟಿಪ್ಲೆಕ್ಸ್ ಥಿಯೇಟರ್ ಓಪನ್

    ಶ್ರೀನಗರ: 32 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಮಲ್ಟಿಪ್ಲೆಕ್ಸ್ (Multiplex) ಚಿತ್ರಮಂದಿರಗಳು (Cinema Halls) ಉದ್ಘಾಟನೆಗೊಂಡಿದ್ದು, ಇದೇ ಸೆಪ್ಟೆಂಬರ್ 20 ರಿಂದ ಆಮೀರ್ ಖಾನ್ ನಟನೆಯ ಲಾಲ್‌ಸಿಂಗ್ ಚಡ್ಡಾ (Laal Singh Chaddha) ಸಿನಿಮಾದೊಂದಿಗೆ ಪ್ರದರ್ಶನ ಆರಂಭವಾಗಲಿದೆ.

    ಜಮ್ಮು ಮತ್ತು ಕಾಶ್ಮೀರದ ಸರ್ಕಾರದ ಯುವ ಸಬಲೀಕರಣ (Youth Empowerment Department) ಇಲಾಖೆ ಹಾಗೂ ಜಿಲ್ಲಾಡಳಿದ ಸಹಯೋಗದೊಂದಿಗೆ ಚಿತ್ರಮಂದಿರಗಳನ್ನು ಸ್ಥಾಪನೆ ಮಾಡುವ ವಿವಿಧೊದ್ದೇಶ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಅದರ ಭಾಗವಾಗಿ ಇದೇ ಸೆಪ್ಟೆಂಬರ್ 20ರಿಂದಲೇ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಸಿನಿ ಪ್ರದರ್ಶನ ಆರಂಭಿಸಲಾಗುತ್ತಿದೆ. ಇದನ್ನೂ ಓದಿ: ಬೇಬಿ ಬಂಪ್‌ ಲುಕ್‌ನಲ್ಲಿ ಮುದ್ದಾಗಿ ಕ್ಯಾಮೆರಾ ಕಣ್ಣಿಗೆ ಪೋಸ್‌ ಕೊಟ್ಟ ಬಿಪಾಶಾ ಬಸು

    ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ (Manoj Sinha) ಅವರಿಂದು ದಕ್ಷಿಣ ಕಾಶ್ಮೀರದ ಅವಳಿ ಜಿಲ್ಲೆಗಳಾದ ಪುಲ್ವಾಮಾ (Pulwama) ಮತ್ತು ಶೋಪಿಯಾನ್‌ನಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳನ್ನು ಉದ್ಘಾಟಿಸಿದರು. ಅಲ್ಲದೇ ಇಲ್ಲಿನ ಅನಂತನಾಗ್, ಶ್ರೀನಗರ, ಬಂಡಿಪೋರಾ, ಗಂದರ್‌ಬಾಲ್, ದೋಡಾ, ರಾಜೌರಿ, ಪೂಂಚ್, ಕಿಶ್ತ್ವಾರ್ ಮತ್ತು ರಿಯಾಸಿ ಜಿಲ್ಲೆಗಳಲ್ಲೂ ಚಿತ್ರಮಂದಿರಗಳು ಉದ್ಘಾಟನೆಗೊಳ್ಳಲಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸೋನು ಶ್ರೀನಿವಾಸ್ ಗೌಡ ಸಂಬಳ ಕೇಳಿದ್ರೆ, ನೀವೂ ಅದೇ ಕೆಲಸ ಮಾಡ್ತೀರಿ

    ಬಳಿಕ ಮಾತನಾಡಿದ ಮನೋಜ್ ಸಿನ್ಹಾ (Manoj Sinha), ಜಮ್ಮು ಮತ್ತು ಕಾಶ್ಮೀರಕ್ಕೆ ಇಂದು ಐತಿಹಾಸಿಕ ದಿನವಾಗಿದೆ. ಹೊಸ ಚಿತ್ರಮಂದಿರಗಳು ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ. ಜೊತೆಗೆ ಯುವಕರಿಗೆ ಸಿನಿಮಾ ತರಬೇತಿ ಹಾಗೂ ವಿಚಾರ ಸಂಕಿರಣಗಳಿಗೆ ಸ್ಥಳಾವಕಾಶ ಒದಗಿಸಿದಂತೆಯೂ ಆಗುತ್ತದೆ. ಅದಕ್ಕೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

    1980ರ ದಶಕದಲ್ಲಿ ಸುಮಾರು 12 ಚಿತ್ರಮಂದಿರಗಳು ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿದ್ದವು. ಆದರೆ ಭಯೋತ್ಪಾದಕರ ಬೆದರಿಕೆಗಳಿಂದ ಅವುಗಳ ಕಾರ್ಯ ಸ್ಥಗಿತಗೊಂಡಿತು. 1990ರ ದಶಕದ ಉತ್ತರಾರ್ಧದಲ್ಲಿ ಅಧಿಕಾರಿಗಳು ಕೆಲವು ಚಿತ್ರಮಂದಿರಗಳನ್ನು ಪುನರಾರಂಭಿಸಲು ಪ್ರಯತ್ನಿಸಿದರು. ಆದರೆ 1999ರಲ್ಲಿ ಉಗ್ರಗಾಮಿಗಳು ನಡೆಸಿದ ಗ್ರೆನೇಡ್ ದಾಳಿ ಆ ಪ್ರಯತ್ನಕ್ಕೂ ಕಲ್ಲು ಹಾಕಿತು. ಇದೀಗ ಮತ್ತೆ ಚಿತ್ರಮಂದಿರಗಳು ತಲೆ ಎತ್ತುತ್ತಿವೆ.

    Live Tv
    [brid partner=56869869 player=32851 video=960834 autoplay=true]

  • ಹುತಾತ್ಮ ಯೋಧರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಲೆಫ್ಟಿನೆಂಟ್ ಗವರ್ನರ್

    ಹುತಾತ್ಮ ಯೋಧರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಲೆಫ್ಟಿನೆಂಟ್ ಗವರ್ನರ್

    ಶ್ರೀನಗರ: ನಿನ್ನೆ ನಡೆದ ದುರ್ಘಟನೆಯಲ್ಲಿ ಹುತಾತ್ಮರಾದ ಐಟಿಬಿಪಿ ಯೋಧರ ಪುಷ್ಪಾರ್ಚನೆ ಸಮಾರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಭಾಗವಹಿಸಿ ಯೋಧರ ಪಾರ್ಥಿವ ಶರೀರದ ಶವ ಪಟ್ಟಿಗೆಗೆ ಹೆಗಲು ನೀಡುವ ಮೂಲಕ ತಮ್ಮ ಅಂತಿಮ ನಮನವನ್ನು ಸಲ್ಲಿಸಿದರು.

    ನಿನ್ನೆ ಕಾಶ್ಮೀರದ ಪಹಲ್ಗಾಮ್‍ನ ಫ್ರಿಸ್ಲಾನ್‍ನಲ್ಲಿ ಐಟಿಬಿಪಿ ಮತ್ತು ಜಮ್ಮು ಕಾಶ್ಮೀರ ಪೊಲೀಸರನ್ನು ಹೊತ್ತೊಯ್ಯುತ್ತಿದ್ದ ಬಸ್ ಬ್ರೇಕ್ ಫೇಲ್ ಆಗಿ ನದಿ ಕಣಿವೆಗೆ ಉರುಳಿ ಬಿದ್ದ ಪರಿಣಾಮ 7 ಮಂದಿ ಐಟಿಬಿಪಿ ಸಿಬ್ಬಂದಿ ಹುತಾತ್ಮರಾಗಿದ್ದರು.

    ಅಮರನಾಥ ಯಾತ್ರೆ ಪ್ರದೇಶದಲ್ಲಿ ಭದ್ರತೆಗಾಗಿ ನಿಯೋಜಿಸಿದ್ದ 37 ಐಟಿಬಿಪಿ, ಇಬ್ಬರು ಜಮ್ಮು-ಕಾಶ್ಮೀರ ಪೊಲೀಸರನ್ನು ಚಂದನ್ವಾರಿಯಿಂದ ಪಹಲ್ಗಾಮ್ ಕಡೆಗೆ ಕರೆದೊಯ್ಯುಲಾಗುತ್ತಿತ್ತು. ಈ ಸಂದರ್ಭದಲ್ಲಿ ಘಟನೆ ನಡೆದಿದ್ದು, ಇನ್ನು ಹಲವು ಸಿಬ್ಬಂದಿಗಳು ಗಾಯಗಳಾಗಿತ್ತು. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಮೃತ ದಲಿತ ಬಾಲಕನ ಕುಟುಂಬದವರನ್ನು ಭೇಟಿಯಾಗಲು ಹೊರಟಿದ್ದ ಚಂದ್ರಶೇಖರ್‌ ಆಜಾದ್‌ ಬಂಧನ

    ಅಪಘಾತದ ಕುರಿತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮೃತ ಐಟಿಬಿಪಿ ಸಿಬ್ಬಂದಿಯ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ದುರಂತ ಘಟನೆಯ ಬಗ್ಗೆ ಸಂತಾಪವನ್ನು ಸೂಚಿಸಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಕೊರೊನಾ ಏರಿಕೆ – ವಿಮಾನ ಪ್ರಯಾಣದ ವೇಳೆ ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಿ: ಡಿಜಿಸಿಎ

    Live Tv
    [brid partner=56869869 player=32851 video=960834 autoplay=true]

  • ಕಾಶ್ಮೀರದಲ್ಲಿ ಇನ್ನು ಭಾರತದ ಧ್ವಜ ಮಾತ್ರ ಹಾರುತ್ತದೆ, ಪಾಕ್ ಧ್ವಜ ಇತಿಹಾಸ ಮಾತ್ರ: ಮನೋಜ್ ಸಿನ್ಹಾ

    ಕಾಶ್ಮೀರದಲ್ಲಿ ಇನ್ನು ಭಾರತದ ಧ್ವಜ ಮಾತ್ರ ಹಾರುತ್ತದೆ, ಪಾಕ್ ಧ್ವಜ ಇತಿಹಾಸ ಮಾತ್ರ: ಮನೋಜ್ ಸಿನ್ಹಾ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದ ಧ್ವಜಗಳು ಇನ್ನು ಇತಿಹಾಸ ಮಾತ್ರ. ಇನ್ನು ಇಲ್ಲಿ ಭಾರತದ ರಾಷ್ಟçಧ್ವಜವನ್ನು ಮಾತ್ರ ಹಾರಿಸಲಾಗುತ್ತದೆ ಎಂದು ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಭಾನುವಾರ ಹೇಳಿದ್ದಾರೆ.

    ಶ್ರೀನಗರದ ದಾಲ್ ಸರೋವರದ ಉದ್ದಕ್ಕೂ ತಿರಂಗಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿನ್ಹಾ, ಜಮ್ಮು, ಕಾಶ್ಮೀರದಲ್ಲಿ ಪಾಕಿಸ್ತಾನದ ಧ್ವಜ ಎತ್ತುವುದು ಇತಿಹಾಸ. ಈ ಹಿಂದೆ ತ್ರಿವರ್ಣ ಧ್ವಜ ಏರಿಸಲು ಪ್ರಯತ್ನಗಳು ನಡೆದಿರುವುದೇ ವಿರಳ. ಆದರೆ ಈಗ ಜನರು ಕೂಡಾ ತಿರಂಗವನ್ನು ಏರಿಸಲು ಬಯಸುತ್ತಾರೆ ಎಂದರು. ಇದನ್ನೂ ಓದಿ: ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಸಾಲುಮರದ ತಿಮ್ಮಕ್ಕ

    ಇಂದಿನ ತಿರಂಗಾ ಯಾತ್ರೆ ಈ ಪ್ರದೇಶದಲ್ಲಿ ನಡೆದ ಮೊದಲ ಕಾರ್ಯಕ್ರಮವಾಗಿದೆ. ಅದೂ ಸಹ ಆಗಸ್ಟ್ 14 ರಂದು. ಭದ್ರತಾ ಸವಾಲುಗಳ ನಡುವೆಯೂ ತಿರಂಗವನ್ನು ಹಾರಿಸಲಾಗುತ್ತಿದೆ. ಸಮಾಜದ ಎಲ್ಲಾ ವರ್ಗಗಳು ಬೃಹತ್ ಮಟ್ಟದಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿವೆ. ಎಲ್ಲೆಡೆ ತಿರಂಗವನ್ನು ಬೆಳೆಸಲಾಗುತ್ತಿದೆ ಎಂದರು. ಇದನ್ನೂ ಓದಿ: ಹರ್‌ಘರ್ ತಿರಂಗ ಅಭಿಯಾನ – ಮಕ್ಕಳಿಗೆ ರಾಷ್ಟ್ರಧ್ವಜ ಹಂಚಿ ಸಂತಸಗೊಂಡ ಮೋದಿ ತಾಯಿ

    ಈ ವೇಳೆ ಸೇನಾ ಸಿಬ್ಬಂದಿ, ಗಡಿ ಪೊಲೀಸ್ ಪಡೆ, ಕೇಂದ್ರ ಮೀಸಲು ಪೊಲೀಸ್ ಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತಿರಂಗಾ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಉಗ್ರ ಬಿಟ್ಟಾ ಕರಾಟೆಯ ಪತ್ನಿ ಸೇರಿದಂತೆ ನಾಲ್ವರು ಸರ್ಕಾರಿ ನೌಕರರು ವಜಾ

    ಉಗ್ರ ಬಿಟ್ಟಾ ಕರಾಟೆಯ ಪತ್ನಿ ಸೇರಿದಂತೆ ನಾಲ್ವರು ಸರ್ಕಾರಿ ನೌಕರರು ವಜಾ

    ಶ್ರೀನಗರ: ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಆಡಳಿತವು ಬಿಟ್ಟಾ ಕರಾಟೆಯ ಪತ್ನಿ ಸೇರಿದಂತೆ ನಾಲ್ವರು ಸರ್ಕಾರಿ ನೌಕರರನ್ನು ಸೇವೆಯಿಂದಲೇ ವಜಾಗೊಳಿಸಿದೆ.

    ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ನಿರ್ದೇಶನದ ಮೇರೆಗೆ ಶನಿವಾರ ನಾಲ್ವರು ಸರ್ಕಾರಿ ನೌಕರರನ್ನು ವಜಾಗೊಳಿಸಿದೆ. ಭಯೋತ್ಪಾದಕರ ಸಂಪರ್ಕವನ್ನು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಬಿಟ್ಟಾ ಕರಾಟೆಯ ಪತ್ನಿ, ಹಿಜ್ಬುಲ್ ಮುಜಾಹಿದ್ದೀನ್‌ನ ಸೈಯದ್ ಸಲಾವುದ್ದೀನ್ ಪುತ್ರ ಸೇರಿದಂತೆ ನಾಲ್ವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಇನ್ನಿಬ್ಬರು ಮಾಜಿ ಎಲ್‌ಇಟಿ ಭಯೋತ್ಪಾದಕ ಮತ್ತು ಕಾಶ್ಮೀರ ವಿಶ್ವವಿದ್ಯಾಲಯದ ವಿಜ್ಞಾನಿಯಾಗಿದ್ದ ಸಹಾಯಕ ಪ್ರಾಧ್ಯಾಪಕರು ಸೇರಿದ್ದಾರೆ. ಈ ಎಲ್ಲಾ ಸರ್ಕಾರಿ ನೌಕರರು ರಾಜ್ಯದ ಹಿತಾಸಕ್ತಿಗಳಿಗೆ ಹಾನಿ ಉಂಟಾಗುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    ಡಾ. ಮುಹೀತ್ ಅಹ್ಮದ್ ಭಟ್- ಕಾಶ್ಮೀರ ವಿವಿಯ ಕಂಪ್ಯೂಟರ್ ಸೈನ್ಸ್‌ನ ಸ್ನಾತಕೋತ್ತರ ವಿಭಾಗದಲ್ಲಿ ವಿಜ್ಞಾನಿ ಆಗಿದ್ದಾನೆ. ಈತ ಪಾಕಿಸ್ತಾನ ಹಾಗೂ ಅದರ ಕೆಲ ಕಾರ್ಯಗಳನ್ನು ಮುಂದಕ್ಕೆ ತರಲು ವಿದ್ಯಾರ್ಥಿಗಳನ್ನು ಆಮೂಲಾಗ್ರಗೊಳಿಸುವ ಮೂಲಕ ಕಾಶ್ಮೀರಿ ವಿವಿಯಲ್ಲಿ ಪ್ರತ್ಯೇಕವಾದು ಭಯೋತ್ಪಾದಕ ಅಜೆಂಡಾವನ್ನು ಪ್ರಚಾರ ಮಾಡುವ ಕೆಲಸದಲ್ಲಿ ತೊಡಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಅರೆಸ್ಟ್ ಮಾಡೋ ಭಯ – ಅಗ್ನಿಪಥ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಆತ್ಮಹತ್ಯೆ

    ಮಾಜಿದ್ ಹುಸೇನ್ ಖಾದ್ರಿ- ಜಮ್ಮು ಕಾಶ್ಮೀರ ವಿಶ್ವ ವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ವಿಭಾಗದ ಹಿರಿಯ ಸಹಾಯಕ ಪ್ರೊಫೆಸರ್ ಆಗಿರುವ ಈತ ಎಲ್‌ಇಟಿ ಸೇರಿದಂತೆ ಅನೇಕ ಭಯೋತ್ಪಾದಕ ಸಂಘಟನೆಗಳೊಂದಿಗೆ ಸುದೀರ್ಘ ಸಂಬಂಧವನ್ನು ಹೊಂದಿದ್ದಾನೆ. ಈ ಹಿಂದೆಯೂ ಸಹ ಈತನ ವಿರುದ್ಧ ಸಾರ್ವಜನಿಕ ಸುರಕ್ಷತಾ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.

    ಸೈಯದ್ ಅಬ್ದುಲ್ ಮುಯೀದ್- ಜೆಕೆಇಡಿಐನ ಐಟಿ ಮ್ಯಾನೇಜರ್ ಆಗಿದ್ದಾನೆ. 3 ಭಯೋತ್ಪಾದಕ ದಾಳಿಗಳಲ್ಲಿ ಈತನ ಪಾತ್ರವಿದೆ ಎಂಬುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೇ ಈತನಿಂದಾಗಿ ಸಂಸ್ಥೆಯಲ್ಲಿ ಪ್ರತ್ಯೇಕತಾವಾದಿ ಕೂಗುಗಳು ಹೆಚ್ಚಾಗಿವೆ. ಇದನ್ನೂ ಓದಿ: ಪಬ್ಲಿಕ್‌ ಟಿವಿ ಬೆಳಕು ಇಂಪ್ಯಾಕ್ಟ್‌ – ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ನಾರಾಯಣಸ್ವಾಮಿ

    ಅಸ್ಸಾಬಾ ಉಲ್ ಅರ್ಜಮಂಡ್ ಖಾನ್- ಈಕೆ ಕಾಶ್ಮೀರದ ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದಾಳೆ. ಈಕೆ ಪಾಸ್‌ಪೋರ್ಟ್‌ಗಾಗಿ ತಪ್ಪು ಮಾಹಿತಿಯನ್ನು ಒದಗಿಸುವಲ್ಲಿ ತೊಡಗಿರುವುದು ಕಂಡುಬಂದಿದೆ. ಈಕೆ ಅನೇಕ ವಿದೇಶಿ ಉಗ್ರರೊಂದಿಗೆ ಸಂಪರ್ಕವನ್ನು ಹೊಂದಿರುವುದು ತಿಳಿದುಬಂದಿದೆ. ಜೊತೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶ ವಿರೋಧಿ ಚಟುವಟಿಕೆಗಳಿಗೆ ಧನಸಹಾಯಕ್ಕಾಗಿ ಹಣವನ್ನು ಸಾಗಿಸುವಲ್ಲಿ ಆಕೆ ತೊಡಗಿಸಿಕೊಂಡಿದ್ದಾಳೆ.

    ಅಸ್ಸಬಾ ಖಾನ್ ಯಾರಿಕೆ?: ಅಸ್ಸಬಾ ಖಾನ್ 2011ರಲ್ಲಿ ಹಿಂದೂಗಳ ನರಮೇಧದಲ್ಲಿ ತೊಡಗಿದ್ದ ಬಿಟ್ಟಾ ಕರಾಟೆಯನ್ನು ಮದುವೆಯಾಗಿದ್ದಾಳೆ. ಶ್ರೀನಗರದಲ್ಲಿ 1972ರಲ್ಲಿ ಜನಿಸಿದ್ದ ಫರೂಕ್ ಅಹ್ಮದ್ ದಾರ್ ಅಡ್ಡ ಹೆಸರು ಬಿಟ್ಟಾ. ಸಮರ ಕಲೆಗಳಲ್ಲಿ ಪಾಂಡಿತ್ಯ ಪಡೆದಿದ್ದರಿಂದ ಇತನಿಗೆ ಕರಾಟೆ ಎಂಬ ಹೆಸರು ಬಂದಿದೆ. ಈ ಕಾರಣಕ್ಕೆ ಈತ ಬಿಟ್ಟ ಕರಾಟೆ ಎಂದು ಫೇಮಸ್ ಆಗಿದ್ದಾನೆ. 1990ರ ದಶಕದಲ್ಲಿ ಕಣಿವೆ ರಾಜ್ಯದಲ್ಲಿ ಪಂಡಿತರ ಮೇಲೆ ಎಸಗಿದ ಕೃತ್ಯದಿಂದ ಈತ ಕುಖ್ಯಾತನಾಗಿದ್ದಾನೆ.

    1980-1990ರಲ್ಲಿ ಈತ ಪಂಡಿತರನ್ನು ಹುಡುತ್ತಾ ಶ್ರೀನಗರದ ಬೀದಿಗಳಲ್ಲಿ ಸಂಚರಿಸುತ್ತಿದ್ದ. ಪಂಡಿತರೆಂದು ತಿಳಿದ ತಕ್ಷಣ ಆತ ತನ್ನಲ್ಲಿದ್ದ ಪಿಸ್ತೂಲ್‌ನಿಂದ ಗುಂಡಿಕ್ಕಿ ಕೊಲ್ಲುತ್ತಿದ್ದ. ಕನಿಷ್ಠ 20 ಕಾಶ್ಮೀರಿ ಪಂಡಿತರನ್ನು ಕೊಂದಿದ್ದೇನೆ ಎಂದು ವಿಡಿಯೋ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದ. ಬಾಲ್ಯ ಸ್ನೇಹಿತ ಸತೀಶ್ ಟಿಕ್ಕೂ ಈತ ಹತ್ಯೆ ಮಾಡಿದ್ದ. ಇದು ಈತ ಹತ್ಯೆ ಮಾಡಿದ ಮೊದಲ ಪ್ರಕರಣ ಆಗಿತ್ತು.

    ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಬಿಟ್ಟಾ ಕರಾಟೆಯ ವಿರುದ್ಧ 31 ವರ್ಷದ ಹಿಂದೆ ನಡೆದ ಪ್ರಕರಣದ ವಿಚಾರಣೆ ನಡೆಸುವಂತೆ ಟಿಕ್ಕೂ ಕುಟುಂಬಸ್ಥರು ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: 20 ಪಂಡಿತರ ಹತ್ಯೆ, ಕೆಎಎಸ್ ಅಧಿಕಾರಿ ಜೊತೆ ಮದುವೆ – ಕಾಶ್ಮೀರದ ರಕ್ತಪಾತದ ವಿಲನ್ ಬಿಟ್ಟಾ ಕರಾಟೆಯ ಕಥೆಯಿದು

    Live Tv
    [brid partner=56869869 player=32851 video=960834 autoplay=true]

  • ಹಿಂದೂಗಳು ಕಣಿವೆ ಪ್ರದೇಶಕ್ಕೆ, ಅಲ್ಪಸಂಖ್ಯಾತರನ್ನು ಉಗ್ರಪೀಡಿತ ಕಾಶ್ಮೀರಕ್ಕೆ ಶಿಫ್ಟ್ ಮಾಡಲು ಕ್ರಮ

    ಹಿಂದೂಗಳು ಕಣಿವೆ ಪ್ರದೇಶಕ್ಕೆ, ಅಲ್ಪಸಂಖ್ಯಾತರನ್ನು ಉಗ್ರಪೀಡಿತ ಕಾಶ್ಮೀರಕ್ಕೆ ಶಿಫ್ಟ್ ಮಾಡಲು ಕ್ರಮ

    ಶ್ರೀನಗರ: ಹಿಂದೂ ಶಾಲೆಯ ಶಿಕ್ಷಕಿಯ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ಬ್ಯಾಂಕ್ ವ್ಯವಸ್ಥಾಪಕನನ್ನೂ ಹತ್ಯೆ ಮಾಡಲಾಗಿದೆ. ಭಯೋತ್ಪಾದಕ ದಾಳಿಯ ನಂತರ ಕಾಶ್ಮೀರಿ ಪಂಡಿತರು ಸಾಮೂಹಿಕ ವಲಸೆಗೆ ಬೆದರಿಕೆ ಹಾಕಿದ್ದು, ಇದರಿಂದ ಜಿಲ್ಲಾಡಳಿತ ಅವರನ್ನು ಕಾಶ್ಮೀರಿ ಕಣಿವೆಯೋಳಗೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕೆಲಸಕ್ಕೆ ಮುಂದಾಗಿದೆ.

    ಪ್ರಧಾನ ಮಂತ್ರಿ ಉದ್ಯೋಗ ಖಾತ್ರಿ ಯೋಜನೆಯ ಸುಮಾರು 6 ಸಾವಿರ ಹಿಂದೂ ಫಲಾನುಭವಿಗಳನ್ನು ಕಣಿವೆ ಪ್ರದೇಶಕ್ಕೆ ಮತ್ತು ಜಮ್ಮು ಮೂಲದ ಅಲ್ಪಸಂಖ್ಯಾತ ನೌಕರರನ್ನು ಉಗ್ರ ಪೀಡಿತ ಕಾಶ್ಮೀರಕ್ಕೆ ಕಳುಹಿಸಲು ಯೋಜನೆ ನಡೆಯುತ್ತಿದೆ. ಮುಂದಿನ ಸೋಮವಾರ ಸೋಮವಾರ ಅಂದರೆ ಜೂನ್ 6ರ ಒಳಗೆ ಅವರಿಗೆ ಕೆಲಸದ ಸ್ಥಳ ನಿಯೋಜನೆಯಾಗಲಿದೆ. ಇದರಿಂದ ಹಿಂದೂಗಳಿಗೆ ಭದ್ರತೆಯೂ ಸಿಗಲಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಸೋನಿಯಾ ಗಾಂಧಿ ಶೀಘ್ರವೇ ಗುಣಮುಖರಾಗಲಿ – ಮೋದಿ ಶುಭಹಾರೈಕೆ

    ಅಲ್ಲದೆ ಹಿಂದೂಗಳ ಮೇಲಿನ ದಾಳಿಯನ್ನು ತಪ್ಪಿಸಲು ಸಹಾಯವಾಣಿಯನ್ನು ಪ್ರಾರಂಭಿಸಿದೆ. ಕಾಶ್ಮೀರದಲ್ಲಿರುವ ಹಿಂದೂಗಳಿಗೆ ಉದ್ದೇಶಪೂರ್ವಕವಾಗಿ ತೊಂದರೆ ಕೊಡುತ್ತಿದ್ದರೆ ದೂ.ಸಂ.0194 – 2506111 ಮತ್ತು 0194 – 2506112ಗೆ ಕರೆ ಮಾಡಿ ಅಥವಾ jk.minoritycell@gmail.com ಗೆ ಇ-ಮೇಲ್ ಮಾಡಿ ದೂರು ದಾಖಲಿಸಬಹುದಾಗಿದೆ. ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೂ ಸಂಪರ್ಕ ಸಂಖ್ಯೆ ಲಭ್ಯವಿರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇದನ್ನೂ ಓದಿ: ಸೋನಿಯಾ, ರಾಹುಲ್ ಗಾಂಧಿಗೆ ಇಡಿ ಸಮನ್ಸ್

    ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಕಾಶ್ಮೀರಿ ಪಂಡಿತರು, ಹಿಂದೂ ಶಿಕ್ಷಕ, ಬ್ಯಾಂಕ್ ವ್ಯವಸ್ಥಾಪಕ ಹಾಗೂ ಮೂವರು ಪೊಲೀಸರು ಸೇರಿದಂತೆ ಕಳೆದ ತಿಂಗಳು 7 ಜನರ ಉದ್ದೇಶಿತ ಹತ್ಯೆಗಳ ಕುರಿತು ಚರ್ಚಿಸಲು ನಿನ್ನೆ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ್ದರು.

    ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆಗಳು ಸಮೀಪಿಸುತ್ತಿರುವ ಕಾರಣ, ಸದ್ಯದಲ್ಲಿ ಭಯೋತ್ಪಾದಕ ದಾಳಿಗಳು ಪುನರಾವರ್ತನೆಯಾಗುವ ಸಾಧ್ಯತೆ ಹೆಚ್ಚಿದೆ. ಕಣಿವೆಯಲ್ಲಿ ಪ್ರಧಾನಮಂತ್ರಿ ಉದ್ಯೋಗ ಖಾತ್ರಿ ಯೋಜನೆಯ ಕಾಶ್ಮೀರಿ ಪಂಡಿತ ಫಲಾನುಭವಿಗಳು ಮತ್ತು ಕಾಶ್ಮೀರದಲ್ಲಿ ನಿಯೋಜಿಸಲಾದ ಜಮ್ಮುವಿನ ಅಲ್ಪಸಂಖ್ಯಾತ ಸಮುದಾಯದ ಉದ್ಯೋಗಿಗಳು ವಿಶೇಷವಾಗಿ ಭಯೋತ್ಪಾದಕ ದಾಳಿಗೆ ಗುರಿಯಾಗುತ್ತಾರೆ. ಇದನ್ನೂ ಓದಿ: ನಕಲಿ ಗಾಂಧಿಗಳ ನಾಯಕತ್ವಕ್ಕೆ ಕಾಂಗ್ರೆಸ್ ಕಾರ್ಯಕರ್ತರೇ ಬೇಸತ್ತಿದ್ದಾರೆ – ಎಚ್ಚರ ಡಿಕೆಶಿ ಎಚ್ಚರ: ಬಿಜೆಪಿ

    ಈ ಉದ್ಯೋಗಿಗಳನ್ನು ಜಿಲ್ಲಾ ಮತ್ತು ತಹಶೀಲ್ದಾರ್ ಪ್ರಧಾನ ಕಚೇರಿಗಳಲ್ಲಿ ನಿಯೋಜಿಸಲಾಗುವುದು, ಅಲ್ಲಿ ಭದ್ರತಾ ಉಪಕರಣವು ಸಾಮಾನ್ಯವಾಗಿ ಬಿಗಿಯಾಗಿರುತ್ತದೆ. ಅವರಿಗೆ ಸರ್ಕಾರಿ ವಸತಿ ಸೌಲಭ್ಯ ಸಿಗಲಿದೆ. ಅವರನ್ನು ಕಣಿವೆಯ ಸುರಕ್ಷಿತ ಸ್ಥಳಗಳಲ್ಲಿ ಕಳುಹಿಸುವ ಪ್ರಕ್ರಿಯೆಯು ಜೂನ್ 6ರ ಒಳಗೆ ಪೂರ್ಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

    ಭದ್ರತಾ ಪರಿಶೀಲನೆ: ಕಣಿವೆಯಲ್ಲಿ ಉದ್ದೇಶಿತ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ 15 ದಿನಗಳೊಳಗೆ 2ನೇ ಬಾರಿಗೆ ಜಮ್ಮು ಮತ್ತು ಕಾಶ್ಮೀರ ಭದ್ರತೆಯ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಸಭೆ ಕರೆದಿದ್ದಾರೆ.

  • ಬಾರಾಮುಲ್ಲಾದಲ್ಲಿ ಬಸ್, ಟ್ರಕ್ ಮುಖಾಮುಖಿ ಡಿಕ್ಕಿ – ಓರ್ವ ಸಾವು, 6 ಮಂದಿಗೆ ಗಾಯ

    ಬಾರಾಮುಲ್ಲಾದಲ್ಲಿ ಬಸ್, ಟ್ರಕ್ ಮುಖಾಮುಖಿ ಡಿಕ್ಕಿ – ಓರ್ವ ಸಾವು, 6 ಮಂದಿಗೆ ಗಾಯ

    ಶ್ರೀನಗರ: ಬಸ್, ಟ್ರಕ್ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿ, 6 ಮಂದಿ ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

    ಕುಪ್ವಾರ ಜಿಲ್ಲೆಯ ಸರಪಂಚ್ ಫಯಾಜ್ ಅಹ್ಮದ್ ಭಟ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಪೊಲೀಸರು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದಿಯನ್ನ ರಾಷ್ಟ್ರೀಯ ಭಾಷೆಯನ್ನಾಗಿ ಮಾಡಿದ್ರೆ ತಪ್ಪೇನಿಲ್ಲ: ಮುರುಗೇಶ್ ನಿರಾಣಿ

    ಘಟನೆ ಕುರಿತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸರಪಂಚ್ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಬಾರಾಮುಲ್ಲಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸರಪಂಚ್ ಫಯಾಜ್ ಅಹ್ಮದ್ ಭಟ್ ಅವರ ದುರದೃಷ್ಟಕರ ನಿಧನದಿಂದ ನೋವಾಗಿದೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬದೊಂದಿಗೆ ಇವೆ. ಗಾಯಾಳುಗಳಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದೇವೆ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ನೆನಪಿಸಬಯಸುತ್ತೇನೆ: ಡಿಕೆಶಿ

  • LPG ಸಿಲಿಂಡರ್ ಸ್ಫೋಟ: ನಾಲ್ವರು ಸಾವು, 15 ಜನರಿಗೆ ಗಂಭೀರ ಗಾಯ

    LPG ಸಿಲಿಂಡರ್ ಸ್ಫೋಟ: ನಾಲ್ವರು ಸಾವು, 15 ಜನರಿಗೆ ಗಂಭೀರ ಗಾಯ

    ಶ್ರೀನಗರ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿದ ಹಾಗೂ 15 ಜನರು ಗಾಯಗೊಂಡಿರುವ ಘಟನೆ ಜಮ್ಮುವಿನ ರೆಸಿಡೆನ್ಸಿ ರಸ್ತೆಯಲ್ಲಿ ನಡೆದಿದೆ.

    ಜಮ್ಮುವಿನ ರೆಸಿಡೆನ್ಸಿ ರಸ್ತೆಯಲ್ಲಿರುವ ಸ್ಕ್ರ್ಯಾಪ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಅಂಗಡಿಯಲ್ಲಿ ಎಲ್‍ಪಿಜಿ ಸಿಲಿಂಡರ್‌ಗಳನ್ನು ಅಂಗಡಿಯೊಳಗೆ ಇಡಲಾಗಿತ್ತು. ಇದರಿಂದಾಗಿ ಪಕ್ಕದ ಕಟ್ಟಡಗಳಿಗೆ ವ್ಯಾಪಿಸಿದೆ. ಗ್ಯಾಸ್ ಸಿಲಿಂಡರ್ ಸ್ಫೋಟದ ನಂತರ ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಬಗ್ಗೆ ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಮಾತನಾಡಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ನಾಲ್ಕು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಂಸದ ವಿಜಯ್ ಗೋಯೆಲ್ ಫೋನ್ ಕದ್ದ ಖತರ್ನಾಕ್ ಕಳ್ಳ

    ವಿಷಯ ತಿಳಿಸಿದ ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು, ತೀವ್ರ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಜಮ್ಮು ಮತ್ತು ಕಾಶ್ಮಿರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸಂತ್ರಸ್ತ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಜಮ್ಮು ಎಲ್‍ಪಿಜಿ ಸಿಲಿಂಡರ್ ಸ್ಫೋಟ ಘಟನೆಯಲ್ಲಿ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ 25,000 ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ:
    ಚಿನ್ನದ ನಾಡಿನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯುತ್ತಾರಾ ಸಿದ್ದರಾಮಯ್ಯ..?

  • ಉತ್ತರಾಖಂಡ್‍ನಲ್ಲಿಂದು ತ್ರಿವೇಂದ್ರ ಸಿಂಗ್ ರಾವತ್ ಪ್ರಮಾಣವಚನ

    ಉತ್ತರಾಖಂಡ್‍ನಲ್ಲಿಂದು ತ್ರಿವೇಂದ್ರ ಸಿಂಗ್ ರಾವತ್ ಪ್ರಮಾಣವಚನ

    – ಉತ್ತರಪ್ರದೇಶದ ಸಾರಥಿ ಯಾರು? ಇಂದು ನಿರ್ಧಾರ

    ನವದೆಹಲಿ: ಉತ್ತರಾಖಂಡ್‍ನಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ತ್ರಿವೇಂದ್ರ ಸಿಂಗ್ ರಾವತ್ ಮುಖ್ಯಮಂತ್ರಿಯಾಗಿ ಅಧಿಕಾರದ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.

    ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ಕೇಂದ್ರ ಸಚಿವರು ಭಾಗಿಯಾಗಲಿದ್ದಾರೆ. ಮಾಜಿ ಸಂಘ ಪ್ರಚಾರಕರಾಗಿರುವ ರಾವತ್, ದೋಯ್‍ವಾಲಾ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸಿದ್ದಾರೆ.

    ಬಿಜೆಪಿ ಪ್ರಚಂಡ ಜಯ ಸಾಧಿಸಿರುವ ಉತ್ತರಪ್ರದೇಶದಲ್ಲಿ ಸರ್ಕಾರದ ಸಾರಥಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಮನೋಜ್ ಸಿನ್ಹಾ ಅವರು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ರೆ ನಾನು ಸಿಎಂ ರೇಸ್‍ನಲ್ಲಿ ಇಲ್ಲ ಎಂದು ಸಿನ್ಹಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಸಿಎಂ ಯಾರಾಗ್ತಾರೆ ಎಂಬ ಬಗ್ಗೆ ಇವತ್ತು ಅಧಿಕೃತ ಘೋಷಣೆ ಹೊರಬೀಳಲಿದೆ.

    ಮಾರ್ಚ್ 11ರಂದು ಫಲಿತಾಂಶ ಬಂದಿತ್ತಾದರೂ ಯಾರನ್ನು ಸಿಎಂ ಮಾಡಬೇಕೆಂಬ ಲೆಕ್ಕಾಚಾರದಲ್ಲೇ ಬಿಜೆಪಿ ತೊಡಗಿಕೊಂಡಿತ್ತು. ಇಂದು ಲಕ್ನೋದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಇದರಲ್ಲಿ ಮನೋಜ್ ಸಿನ್ಹಾರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

    ಭಾನುವಾರ ಮಧ್ಯಾಹ್ನ 2.15ಕ್ಕೆ ಲಕ್ನೋದಲ್ಲಿರುವ ಉಪವನದಲ್ಲಿ ರಾಜ್ಯಪಾಲ ರಾಮ್‍ನಾಯ್ಕ್ ನೂತನ ಸಿಎಂ ಮತ್ತು ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಾಕ್ಷಿಯಾಗಲಿದ್ದಾರೆ.

                                    

    ಸದ್ಯ ಸಿನ್ಹಾ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದಾರೆ ಮತ್ತು ದೂರಸಂಪರ್ಕ ಖಾತೆಯ ಸ್ವತಂತ್ರ ಸಚಿವರಾಗಿದ್ದಾರೆ. ಗಾಜಿಪುರ್ ಸಂಸದರಾಗಿರುವ ಮನೋಜ್ ಸಿನ್ಹಾ ಭೂಮಿಹಾರ್ ಸಮುದಾಯಕ್ಕೆ ಸೇರಿದವರು. ಸಿವಿಲ್ ಎಂಜಿನಿಯರಿಂಗ್‍ನಲ್ಲಿ ಪದವಿ ಪಡೆದಿರುವ ಸಿನ್ಹಾ 1959ರಲ್ಲಿ ಗಾಜಿಯಪುರದ ಮೋಹನ್‍ಪುರದಲ್ಲಿ ಜನಿಸಿದ್ದರು. 1996ರಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿದ್ದ ಇವರು ಸಂಸದರ ಪ್ರದೇಶಾಭಿವೃದ್ಧಿ ನಿಧಿಯನ್ನು ಸಂಪೂರ್ಣವಾಗಿ ಬಳಸಿಕೊಂಡ ಸಂಸದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರುವ ಸಿನ್ಹಾ ಪ್ರಾಮಾಣಿಕ, ದಕ್ಷ ಸಂಸದರಲ್ಲಿ ಒಬ್ಬರು ಎಂಬ ಖ್ಯಾತಿಯನ್ನು ಹೊಂದಿದ್ದಾರೆ.