Tag: Mansoon Session

  • ಅಶ್ವಥ್ ನಾರಾಯಣ್‌ ನೀನು ಭ್ರಷ್ಟಾಚಾರದ ಪಿತಾಮಹ: ಡಿಕೆಶಿ ಕೆಂಡಾಮಂಡಲ

    ಅಶ್ವಥ್ ನಾರಾಯಣ್‌ ನೀನು ಭ್ರಷ್ಟಾಚಾರದ ಪಿತಾಮಹ: ಡಿಕೆಶಿ ಕೆಂಡಾಮಂಡಲ

    – ರಾಮನಗರದಲ್ಲಿ ಒಂದು ಕ್ಷೇತ್ರ ಗೆಲ್ಲಲಾಗದ ಅಶ್ವಥ್ ನಾರಾಯಣ್, ಅಲ್ಪಸಂಖ್ಯಾತ ನಾಯಕನನ್ನು ಅಸಮರ್ಥ ಎನ್ನುತ್ತೀಯಾ?
    – ಏಕವಚನದಲ್ಲೇ ಡಿಸಿಎಂ ಆಕ್ರೋಶ

    ಬೆಂಗಳೂರು: ಅಶ್ವಥ್ ನಾರಾಯಣ್ (Ashwath Narayan) ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹರು. ರಾಮನಗರದಲ್ಲಿ ಒಂದೂ ಕ್ಷೇತ್ರ ಗೆಲ್ಲಲಾಗದವ, ಅಲ್ಪಸಂಖ್ಯಾತ ನಾಯಕನನ್ನು ಅಸಮರ್ಥ ಎನ್ನುತ್ತೀಯಾ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹರಿಹಾಯ್ದರು.

    ವಿಧಾನಸಭೆ ಕಲಾಪದಲ್ಲಿ (Karnataka Legislative Assembly) ರಸಗೊಬ್ಬರ ಕೊರತೆ ವಿಚಾರವಾಗಿ ನಡೆದ ಚರ್ಚೆ ವೇಳೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಬುಧವಾರ ಬಿರುಸಿನ ಮಾತಿನ ಚಕಮಕಿ ನಡೆಯಿತು. ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಚರ್ಚೆ ವೇಳೆ ಮಾತನಾಡುವಾಗ ತಪ್ಪು ಅಂಕಿ ಅಂಶಗಳನ್ನು ನೀಡಿದ ಕಾರಣ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಸರಿ ಅಂಕಿ-ಅಂಶಗಳ ಸ್ಪಷ್ಟನೆ ನೀಡಲು ಮುಂದಾದರು. ಇದನ್ನೂ ಓದಿ: ನಾನು ಕೇಂದ್ರಕ್ಕೆ ಹೋಗಲ್ಲ, ರಾಜ್ಯದಲ್ಲೇ ಇರ್ತೀನಿ: ಸಿದ್ದರಾಮಯ್ಯ

    ಈ ವೇಳೆ ಅಶ್ವಥ್ ನಾರಾಯಣ್ ಮಧ್ಯಪ್ರವೇಶಿಸಿ ವಾಗ್ವಾದ ಆರಂಭಿಸಿದರು. ಆಗ ಸಚಿವ ಕೆ.ಜೆ ಜಾರ್ಜ್, ಸುಳ್ಳು ಹೇಳಬೇಡಿ ಎಂದು ಹೇಳಿದಾಗ, ಅಶ್ವಥ್ ನಾರಾಯಣ್, ಸ್ಮಾರ್ಟ್ ಮೀಟರ್ ವಿಚಾರವಾಗಿ ಮಾತನಾಡಲು ನಿಮಗೆ ಧಮ್, ಯೋಗ್ಯತೆ ಇಲ್ಲ. ನೀವು ಅಸಮರ್ಥ ಎಂದು ಟೀಕೆ ಮಾಡಿದರು.

    ಈ ವೇಳೆ ಮಧ್ಯ ಪ್ರವೇಶಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಅಸಮರ್ಥರು ಅವರಲ್ಲ. ನೀವು ಅಸಮರ್ಥರು. ರಾಜ್ಯದ ಜನ ಮತ ನೀಡಿ ಅಧಿಕಾರ ನಡೆಸಲು ಅವಕಾಶ ನೀಡಿರುವ ಜಾರ್ಜ್ ಅವರು ಅಸಮರ್ಥರಲ್ಲ. ನೀವು ಅಸಮರ್ಥರಾಗಿರುವ ಕಾರಣ ನಿಮ್ಮ ಪಕ್ಷ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತಿದೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ನಾಳೆ ದರ್ಶನ್‌ ಪಾಲಿಗೆ ಬಿಗ್‌ ಡೇ – ಸುಪ್ರೀಂ ತೀರ್ಪಿನತ್ತ ಚಿತ್ತ, ಮತ್ತೆ ಜೈಲುಪಾಲಾಗ್ತಾರಾ ನಟ?

    ಈ ಸಂದರ್ಭ ಅಶ್ವತ್ ನಾರಾಯಣ್, ಈ ಸರ್ಕಾರ ಅಸಮರ್ಥ, ಜನವಿರೋಧಿ, ಭ್ರಷ್ಟಾಚಾರ ಸರ್ಕಾರ ಎಂದರು. ಇದಕ್ಕೆ ಏಕವಚನದಲ್ಲೇ ತಿರುಗೇಟು ನೀಡಿದ ಡಿ.ಕೆ ಶಿವಕುಮಾರ್, ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹರು. ನಿಮ್ಮ ಭ್ರಷ್ಟಾಚಾರದಿಂದಲೇ ನಾವು 135 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದಿದ್ದೇವೆ. ನೀನು ರಾಮನಗರಕ್ಕೆ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ಬಂದಿದ್ಯಲ್ಲ. ಆಗ ನಿನಗೆ ಡೆಪಾಸಿಟ್ ಕೂಡ ಬರಲಿಲ್ಲ. ರಾಮನಗರದಲ್ಲಿ 1 ಸೀಟ್ ಕೂಡ ಬರಲಿಲ್ಲ. ನೀನು ನಿಜವಾದ ಅಸಮರ್ಥ ಎಂದು ಕೆಂಡಾಮಂಡಲರಾದರು.

    ಈ ವೇಳೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವೆ ವಾಗ್ವಾದ ಹೆಚ್ಚಾದ ಕಾರಣ ಸ್ಪೀಕರ್ ಅವರು ಕಲಾಪವನ್ನು ಅಲ್ಪಾವಧಿಗೆ ಮುಂದೂಡಿದರು.

  • ನಾಳೆಯಿಂದ ಸಂಸತ್‌ನ ಮುಂಗಾರು ಅಧಿವೇಶನ ಆರಂಭ

    ನಾಳೆಯಿಂದ ಸಂಸತ್‌ನ ಮುಂಗಾರು ಅಧಿವೇಶನ ಆರಂಭ

    – ಎನ್‌ಡಿಎ, ಇಂಡಿಯಾ ಒಕ್ಕೂಟಗಳ ನಡುವೆ ವಾಕ್ಸಮರ, ಜಟಾಪಟಿಗೆ ವೇದಿಕೆ ಸಜ್ಜು

    ನವದೆಹಲಿ: ನಾಳೆಯಿಂದ ಸಂಸತ್‌ನ ಮುಂಗಾರು ಅಧಿವೇಶನ (Parliament Mansoon Session) ಆರಂಭವಾಗಲಿದೆ. ಆಡಳಿತ ಮತ್ತು ವಿಪಕ್ಷಗಳ ನಡುವಿನ ಮಾತಿನ ಸಮರಕ್ಕೆ ಅಖಾಡ ಸಜ್ಜಾಗಿದೆ. ಬಿಹಾರ ವಿಧಾನಸಭಾ ಚುನಾವಣೆ ಸಮೀಪದಲ್ಲಿಯೇ ನಡೆಯಲಿರುವ ಈ ಸಂಸತ್ ಅಧಿವೇಶನ ರಾಜಕೀಯ ಸಭೆಗೆ ವೇದಿಕೆಯಾಗಲಿದೆ.

    ಬಿಹಾರ ವಿಧಾನಸಭಾ ಚುನಾವಣೆ ಅಕ್ಟೋಬರ್- ನವೆಂಬರ್‌ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ಈ ಅಧಿವೇಶನವು ರಾಜಕೀಯ ಶಕ್ತಿಪ್ರದರ್ಶನಕ್ಕೆ ವೇದಿಕೆಯಾಗಲಿದೆ. ಇಂಡಿಯಾ ಒಕ್ಕೂಟದ ವಿರೋಧ ಪಕ್ಷಗಳಾದ ಕಾಂಗ್ರೆಸ್, ಆರ್‌ಜೆಡಿ, ಮತ್ತು ಟಿಎಂಸಿ, ಬಿಹಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ, ಆಪರೇಷನ್ ಸಿಂಧೂರ, ಅಹಮದಾಬಾದ್‌ನ ಏರ್ ಇಂಡಿಯಾ ವಿಮಾನ ದುರಂತ, ಮತ್ತು ಭಾರತ-ಪಾಕಿಸ್ತಾನ ಕದನ ವಿರಾಮದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಮಧ್ಯಸ್ಥಿಕೆಯ ಬಗ್ಗೆ ಆಡಳಿತ ಪಕ್ಷವನ್ನು ತೀವ್ರವಾಗಿ ಪ್ರಶ್ನಿಸಲು ಸಿದ್ಧವಾಗಿವೆ. ಇದರ ಜೊತೆಗೆ, ಪಹಲ್ಗಾಮ್‌ನ ಭಯೋತ್ಪಾದಕ ದಾಳಿ ಮತ್ತು ವಿದೇಶಾಂಗ ನೀತಿಯಂತಹ ವಿಷಯಗಳನ್ನು ಎತ್ತಿಹಿಡಿಯಲು ವಿರೋಧ ಪಕ್ಷಗಳು ತಯಾರಿ ನಡೆಸಿವೆ. ಇದನ್ನೂ ಓದಿ: ಕಾವೇರಿ ಹಿನ್ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ನೀರುಪಾಲು

    ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವು ಈ ಆರೋಪಗಳಿಗೆ ತಿರುಗೇಟು ನೀಡಲು ಸಿದ್ಧವಾಗಿದ್ದು, ತನ್ನ ಸಾಧನೆಗಳನ್ನು ಮಂಡಿಸಿ ವಿರೋಧ ಪಕ್ಷಗಳ ವಿಮರ್ಶೆಗೆ ಉತ್ತರ ನೀಡಲು ಕಾರ್ಯತಂತ್ರ ರೂಪಿಸಿದೆ. ಈ ನಡುವೆ ಕೇಂದ್ರ ಸರ್ಕಾರ ಎಂಟು ಮಸೂದೆಗಳನ್ನು ಮಂಡಿಸುವ ಲೆಕ್ಕಚಾರದಲ್ಲಿದೆ. ಆದಾಯ ತೆರಿಗೆ ಮಸೂದೆ 2025 ಕೂಡ ಲೋಕಸಭೆಯಲ್ಲಿ ಮಂಡನೆಯಾಗಲಿದ್ದು, ಇದನ್ನು ಫೆಬ್ರವರಿಯಲ್ಲಿ ಲೋಕಸಭೆಯ ಆಯ್ದ ಸಮಿತಿಗೆ ಕಳುಹಿಸಲಾಗಿತ್ತು. ಈ ವರದಿಯನ್ನು ಇಂದು ಲೋಕಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಮುಂಗಾರು ಅಧಿವೇಶನದಲ್ಲಿ ಆಪರೇಷನ್‌ ಸಿಂಧೂರ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧ: ಕಿರಣ್‌ ರಿಜಿಜು

    ಮಣಿಪುರದಲ್ಲಿ ಫೆಬ್ರವರಿ 13ರಂದು ಜಾರಿಗೊಂಡ ರಾಷ್ಟ್ರಪತಿ ಆಳ್ವಿಕೆಯ ವಿಸ್ತರಣೆಗೆ ಸಂಸತ್‌ನ ಅನುಮೋದನೆಯನ್ನು ಸರ್ಕಾರ ಕೋರಲಿದೆ. ಈ ವಿಷಯವು ವಿರೋಧ ಪಕ್ಷಗಳಿಂದ ತೀವ್ರ ಚರ್ಚೆಗೆ ಕಾರಣವಾಗಲಿದೆ. ಸಂಸತ್‌ನ ಈ ಮುಂಗಾರು ಅಧಿವೇಶನವು ಒಟ್ಟು 21 ಕಲಾಪಗಳನ್ನು ಒಳಗೊಂಡಿದ್ದು, ಆಗಸ್ಟ್ 12ರಿಂದ 18ರವರೆಗೆ ರಕ್ಷಾಬಂಧನ ಮತ್ತು ಸ್ವಾತಂತ್ರ‍್ಯ ದಿನಾಚರಣೆಗಾಗಿ ವಿರಾಮ ಘೋಷಿಸಲಾಗಿದೆ. ಈ ಅವಧಿಯಲ್ಲಿ, ಗೋವಾದ ಶಾಸಕಾಂಗ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿಗಳ ಪ್ರಾತಿನಿಧ್ಯದ ಮರುಹೊಂದಾಣಿಕೆ ಮಸೂದೆ 2024, ವಾಣಿಜ್ಯ ನೌಕಾಯಾನ ಮಸೂದೆ 2024, ಮತ್ತು ಭಾರತೀಯ ಬಂದರು ಮಸೂದೆ 2025 ಕೂಡ ಲೋಕಸಭೆಯಲ್ಲಿ ಅನುಮೋದನೆಗೆ ಕಾಯುತ್ತಿವೆ. ಇದನ್ನೂ ಓದಿ: ಜಿಎಸ್‌ಟಿ ಮಾಡಿರೋದು ಕೇಂದ್ರ ಸರ್ಕಾರ – ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್‌ ನೋಟಿಸ್‌ ವಿಚಾರಕ್ಕೆ ಸಿಎಂ ರಿಯಾಕ್ಷನ್‌

    ಪ್ರಮುಖ ಮಸೂದೆಗಳು:
    *ಮಣಿಪುರ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಮಸೂದೆ, 2025: ರಾಜ್ಯದ ಜಿಎಸ್‌ಟಿ ಕಾನೂನನ್ನು ಕೇಂದ್ರ ಕಾನೂನಿಗೆ ಸಮನ್ವಯಗೊಳಿಸುವ ಗುರಿ.
    *ಜನ ವಿಶ್ವಾಸ (ನಿಬಂಧನೆಗಳ ತಿದ್ದುಪಡಿ) ಮಸೂದೆ, 2025: ವ್ಯಾಪಾರ ಸುಗಮಗೊಳಿಸುವಿಕೆ ಮತ್ತು ನಿಯಂತ್ರಣ ಅನುಸರಣೆಯನ್ನು ಸುಧಾರಿಸುವ ಉದ್ದೇಶ.
    *ಭಾರತೀಯ ನಿರ್ವಹಣಾ ಸಂಸ್ಥೆ (ತಿದ್ದುಪಡಿ) ಮಸೂದೆ, 2025: ಐಐಎಂ ಗುವಾಹಟಿಯನ್ನು ಐಐಎಂ ಕಾಯ್ದೆಯ ಅಡಿಯಲ್ಲಿ ಔಪಚಾರಿಕವಾಗಿ ಒಳಗೊಳ್ಳುವ ಗುರಿ.
    *ತೆರಿಗೆ ಕಾನೂನುಗಳ (ತಿದ್ದುಪಡಿ) ಮಸೂದೆ, 2025: ತೆರಿಗೆ ಕಾನೂನುಗಳ ಸರಳೀಕರಣಕ್ಕೆ ಒತ್ತು.
    *ಭೂ ಪರಂಪರೆ ತಾಣಗಳು ಮತ್ತು ಭೂಅವಶೇಷಗಳ (ಸಂರಕ್ಷಣೆ ಮತ್ತು ನಿರ್ವಹಣೆ) ಮಸೂದೆ; ಭೂವೈಜ್ಞಾನಿಕ ತಾಣಗಳ ಸಂರಕ್ಷಣೆ.
    *ಕಲ್ಲುಗಣಿ (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ: ಗಣಿಗಾರಿಕೆ ಕ್ಷೇತ್ರದಲ್ಲಿ ಸುಧಾರಣೆ.
    *ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆ: ಕ್ರೀಡಾ ಆಡಳಿತದಲ್ಲಿ ಸುಧಾರಣೆಗೆ ಒತ್ತು.
    *ರಾಷ್ಟ್ರೀಯ ಡೋಪಿಂಗ್ ವಿರೋಧಿ (ತಿದ್ದುಪಡಿ) ಮಸೂದೆ: ಕ್ರೀಡೆಯಲ್ಲಿ ಡೋಪಿಂಗ್ ನಿಯಂತ್ರಣಕ್ಕೆ ಕ್ರಮ