Tag: Mansoor Khan

  • ಐಎಂಎ ಗೋಲ್ಡ್‌ನಿಂದ 5 ಕೋಟಿ ಮೌಲ್ಯದ ಚಿನ್ನಾಭರಣ ಪಡೆದಿದ್ದ ಶಾಸಕ ಜಮೀರ್!

    ಐಎಂಎ ಗೋಲ್ಡ್‌ನಿಂದ 5 ಕೋಟಿ ಮೌಲ್ಯದ ಚಿನ್ನಾಭರಣ ಪಡೆದಿದ್ದ ಶಾಸಕ ಜಮೀರ್!

    ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಐಎಂಎ ಗೋಲ್ಡ್‌ನಿಂದ 5 ಕೋಟಿ ಮೌಲ್ಯದ ಚಿನ್ನಾಭರಣ ಪಡೆದಿರುವ ಮಾಹಿತಿ ಹೊರಬಿದ್ದಿದೆ.

    ಹೌದು. ಮಗಳ ಮದುವೆಯ ಸಂದರ್ಭದಲ್ಲಿ ಜಮೀರ್ ಅವರು ಮನ್ಸೂರ್ ಬಳಿ 9 ಕೋಟಿ ಹಣ ಪಡೆದಿದ್ದಾರೆ. ಉಳಿದಿದ್ದ ಹಣವನ್ನು ಚಿನ್ನದ ರೂಪದಲ್ಲಿ ಪಡೆದುಕೊಂಡಿದ್ದರು. ಐಎಂಎ ಗೋಲ್ಡ್‍ನಿಂದ 5 ಕೋಟಿ ಮೌಲ್ಯದ ಚಿನ್ನಾಭರಣ ಪಡೆದಿದ್ದ ಜಮೀರ್, ಬಡ್ಡಿಯ ರೂಪದಲ್ಲಿಯೂ ಕೂಡ ಹಣ ಪಡೆದುಕೊಂಡಿದ್ದರೆಂಬ ಮಾಹಿತಿ ತಿಳಿದುಬಂದಿದೆ.

    ಸದ್ಯ ಶಾಸಕ ಮತ್ತು ಮಾಜಿ ಸಚಿವ ರೋಷನ್ ಬೇಗ್ ಜಾರಿ ನಿರ್ದೇಶನಾಲಯದ ಬಂಧನದ ಭೀತಿಯಲ್ಲಿದ್ದಾರೆ. ಇಂದು ಬೆಳಗ್ಗೆ ಇಬ್ಬರ ನಿವಾಸಗಳ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಡತಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ. ಇದನ್ನೂ ಓದಿ: ಬಂಧನದ ಭೀತಿಯಲ್ಲಿ ಜಮೀರ್ ಅಹ್ಮದ್ ಖಾನ್, ರೋಷನ್ ಬೇಗ್!

    ಐಎಂಎ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಗೆ ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿಯಲ್ಲಿರುವ ಆಸ್ತಿಯನ್ನು ಮಾರಾಟ ಮಾಡಿದ್ದರು. 2.5 ಕೋಟಿ ಬೆಲೆ ಬಾಳುವ ಆಸ್ತಿಯನ್ನು 5 ಕೋಟಿ ರೂ.ಗೆ ಮಾರಿದ್ದರು. ಇದೇ ನಿವೇಶನ ಜಮೀರ್ ಅಹ್ಮದ್ ಅವರಿಗೆ ಕಂಟಕವಾಗುತ್ತಾ ಅನ್ನೋ ಪ್ರಶ್ನೆ ಮೂಡಿದೆ. ಈ ಸಂಬಂಧ ಎಸ್‍ಐಟಿ ಮತ್ತು ಸಿಬಿಐ ವಿಚಾರಣೆಗೂ ಜಮೀರ್ ಅಹ್ಮದ್ ಹಾಜರಾಗಿದ್ದರು.

  • ಇಂದು ರೋಷನ್ ಬೇಗ್ ಜಾಮೀನು ಅರ್ಜಿ ವಿಚಾರಣೆ – ಬೇಲ್ ಟೆನ್ಷನ್‍ನಲ್ಲಿ ರಾತ್ರಿ ಕಳೆದ ಮಾಜಿ ಸಚಿವ

    ಇಂದು ರೋಷನ್ ಬೇಗ್ ಜಾಮೀನು ಅರ್ಜಿ ವಿಚಾರಣೆ – ಬೇಲ್ ಟೆನ್ಷನ್‍ನಲ್ಲಿ ರಾತ್ರಿ ಕಳೆದ ಮಾಜಿ ಸಚಿವ

    ಬೆಂಗಳೂರು: ಐಎಂಎ ಜ್ಯುವೆಲ್ಸ್ ಬಹುಕೋಟಿ ಹಗರಣಕ್ಕೆ ಸಂಬಮಧಿಸಿದಂತೆ ಪರಪ್ಪನ ಅಗ್ರಹಾರ ಸೇರಿರುವ ಮಾಜಿ ಸಚಿವ ರೋಷನ್ ಬೇಗ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

    ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಬೆಳಗ್ಗೆ ಹಾಗೂ ಸಂಜೆ ಎರಡು ಬಾರಿ ತಮ್ಮ ವಕೀಲರ ಜೊತೆ ಬೇಗ್ ಮಾತುಕತೆ ನಡೆಸಿದ್ದಾರೆ. ಹೇಗಾದರು ಮಾಡಿ ಬೇಲ್ ಸಿಗಲೇ ಬೇಕು ಅಂತ ಮಾತುಕತೆ ವೇಳೆ ತಿಳಿಸಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಇತ್ತ ಜಾಮೀನು ಟೆನ್ಷನ್ ನಲ್ಲಿಯೇ ರೋಷನ್ ಬೇಗ್ ದಿನ ಕಳೆದಿದ್ದು, ರೋಷನ್ ಪಾಲಿಗೆ ಇಂದು ಮಹತ್ವದ ದಿನವಾಗಲಿದೆ. ಬೇಲ್ ಸಿಗುತ್ತಾ ಅಥವಾ ಸಿಬಿಐ ವಶಕ್ಕೆ ಪಡೆದುಕೊಳ್ಳುತ್ತಾರಾ ಎಂದು ಆತಂಕಕ್ಕೊಳಗಾಗಿದ್ದಾರೆ. ಇಂದು ಜಾಮೀನು ಮಂಜೂರು ಮಾಡದಂತೆ ಸಿಬಿಐ ಆಕ್ಷೇಪಣೆ ಸಲ್ಲಿಕೆ ಮಾಡಲಿದೆ. ಜೊತೆಗೆ ಪೊಲೀಸ್ ಕಸ್ಟಡಿಗೆ ನೀಡುವಂತೆ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ. ದಾಳಿಯ ಬಳಿಕ ಸಿಬಿಐ ದಾಖಲೆ ಪರಿಶೀಲನೆ ಮಾಡಿದೆ.

    ಸದ್ಯ ಜೈಲಿನಲ್ಲಿನ ಊಟವನ್ನೇ ಸೇವಿಸುತ್ತಿರುವ ಬೇಗ್, ಇಂದು ಬುಧವಾರ ಅವಲಕ್ಕಿ ಚಿತ್ರನ್ನಾವನ್ನು ಸವಿಯಲಿದ್ದಾರೆ.

    ಬಂಧನ ಯಾಕೆ?
    ಈ ಹಿಂದೆ ಸಿಬಿಐ ಎರಡು ಬಾರಿ ನೋಟಿಸ್ ನೀಡಿ ರೋಷನ್ ಬೇಗ್ ಅವರನ್ನು ವಿಚಾರಣೆ ನಡೆಸಿತ್ತು. ಬಳಿಕ ಯಾವುದೇ ವಿಚಾರಣೆ ನಡೆಸಿರಲಿಲ್ಲ. ಈ ನಡುವೆ ಮನ್ಸೂರ್ ಖಾನ್ ನಾನು ರೋಷನ್ ಬೇಗ್ ಅವರಿಗೆ ಹಣ ನೀಡಿದ್ದೇನೆ. ಈ ಹಣವನ್ನು ರೋಷನ್ ಬೇಗ್ ಅವರಿಂದ ಪಡೆಯಲೇಬೇಕು ಎಂದು ಹೇಳಿದ್ದಾನೆ. ಒಂದು ವೇಳೆ ಹಣವನ್ನು ಪಡೆಯದೇ ಇದ್ದರೆ ನಿಮ್ಮ ವಿರುದ್ಧವೇ ನ್ಯಾಯಾಧೀಶರಿಗೆ ದೂರು ನೀಡುತ್ತೇನೆ ಎಂದು ಮನ್ಸೂರ್ ಖಾನ್ ಸಿಬಿಐ ಅಧಿಕಾರಿಗಳ ಮೇಲೆ ಒತ್ತಡ ಹಾಕಿದ್ದ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ರೋಷನ್ ಬೇಗ್ ಅವರಿಗೆ ಮನ್ಸೂರ್ ಖಾನ್ 200 ಕೋಟಿ ಸೇರಿದಂತೆ ಐಷಾರಾಮಿ ಕಾರು, ಉಡುಗೊರೆ ನೀಡಿದ್ದ ಆರೋಪ ಈ ಪ್ರಕರಣ ಬೆಳಕಿಗೆ ಬಂದಾಗಲೇ ಬಂದಿತ್ತು. ಆದರೆ ಈಗ ಮನ್ಸೂರ್ ಖಾನ್ ಒತ್ತಡ ಹಾಕಿದ್ದ ಕಾರಣ ಇಂದು ಬೆಳಗ್ಗೆ ಸಿಬಿಐ ಅಧಿಕಾರಿಗಳು ಮನೆಗೆ ತೆರಳಿ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಮೂರು ದಿನಗಳ ಹಿಂದೆ ಸಂಜೆಯ ವೇಳೆ ಬಂಧಿಸಿದೆ.

  • ಐಎಂಎ ಕೇಸ್ – ಮೌಲ್ವಿ ಸೇರಿ ಇಬ್ಬರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆ

    ಐಎಂಎ ಕೇಸ್ – ಮೌಲ್ವಿ ಸೇರಿ ಇಬ್ಬರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆ

    ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಎರಡನೇ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಮೌಲ್ವಿ ಅಫ್ಸರ್ ಹನೀಜ್ ಸೇರಿ ಇಬ್ಬರ ಮೇಲೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ.

    ಆರ್.ಟಿ.ನಗರ ಮೂಲದ ಮೌಲ್ವಿ ಅಫ್ಸರ್ ಹನೀಜ್ ಮನ್ಸೂರ್ ಖಾನ್‍ನಿಂದ ಮೂರು ಕೋಟಿ ರೂ. ಮೌಲ್ಯದ ಬಂಗಲೆ ಪಡೆದುಕೊಂಡಿದ್ದ. ಬಂಗಲೆ ಪಡೆದಿದ್ದರಿಂದ ತನ್ನ ಸಮುದಾಯದವರಿಗೆ ಐಎಂಎನಲ್ಲಿ ಹೂಡಿಕೆ ಮಾಡುವಂತೆ ಪ್ರೇರಣೆ ನೀಡುತ್ತಿದ್ದ. ಮಸೀದಿಯಲ್ಲಿ ಪ್ರಾರ್ಥನೆಗೆ ಬಂದ ವೇಳೆ ಪ್ರೇರೇಪಣೆ ನೀಡಿ ಹೂಡಿಕೆ ಮಾಡುವಂತೆ ಸೂಚನೆ ನೀಡುತ್ತಿದ್ದ. ಈ ಹಿನ್ನೆಲೆ ಸೆಪ್ಟೆಂಬರ್‍ನಲ್ಲಿ ಎಸ್‍ಐಟಿ ಅಧಿಕಾರಿಗಳು ಮೌಲ್ವಿಯನ್ನು ಬಂಧಿಸಿದ್ದರು.

    ಹನೀಫ್ ಅಫ್ಸರ್ ಅಜೀಜ್ ಶಿವಾಜಿನಗರ ಒಪಿಎಚ್ ರಸ್ತೆಯ ಬೇಪಾರಿಯನ್ ಮಸೀದಿಯ ಧರ್ಮ ಗುರುವಾಗಿದ್ದು, 2017ರಲ್ಲಿ ಹೆಚ್‍ಬಿಆರ್ ಲೇಔಟ್ ನಲ್ಲಿ ಮೂರು ಕೋಟಿ ರೂ. ಮೌಲ್ಯದ ಮನೆ ಉಡುಗೊರೆ ಪಡೆದಿದ್ದ.

    ಮಸೀದಿಗೆ ಬರುವ ಸಾವಿರಾರು ಭಕ್ತರ ಭಾವನೆಗಳ ಜೊತೆ ಆಟವಾಡಿದ್ದ ಹನೀಫ್ ಅಫ್ಸರ್ ಜನಸಾಮಾನ್ಯರ ಧಾರ್ಮಿಕ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡು ಐಎಂಎ ನಲ್ಲಿ ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸುತ್ತಿದ್ದ. ನಮಾಜ್‍ಗೆ ಬಂದ ಜನರಿಗೆ ಐಎಂಎನಲ್ಲಿ ಹಣ ಹೂಡುವಂತೆ ಪ್ರಚೋದನೆ ಮಾಡುತ್ತಿದ್ದ. ಈ ಧರ್ಮಗುರು ಮಾತನ್ನು ನಂಬಿ ಸಾವಿರಾರು ಜನ ಮುಸ್ಲಿಂ ಸಮುದಾಯದವರು ಐಎಂಎನಲ್ಲಿ ಹೂಡಿಕೆ ಮಾಡಿದ್ದರು. ಹೂಡಿಕೆ ಮಾಡಿಸಿದ್ದರಿಂದ ಧರ್ಮಗುರುವಿನ ಋಣ ತೀರಿಸಲು ಮೂರು ಕೋಟಿ ರೂ. ಮೌಲ್ಯದ ಮನೆಯನ್ನು ಮನ್ಸೂರ್ ಖಾನ್ ನೀಡಿದ್ದ.

  • ಐಎಂಎ ವಂಚನೆ ಪ್ರಕರಣ- ಎಫ್‌ಐಆರ್‌ನಲ್ಲಿದ್ದ ಹೆಸರು ಚಾರ್ಜ್ ಶೀಟ್‍ನಲ್ಲಿ ಕಣ್ಮರೆ

    ಐಎಂಎ ವಂಚನೆ ಪ್ರಕರಣ- ಎಫ್‌ಐಆರ್‌ನಲ್ಲಿದ್ದ ಹೆಸರು ಚಾರ್ಜ್ ಶೀಟ್‍ನಲ್ಲಿ ಕಣ್ಮರೆ

    ಬೆಂಗಳೂರು: ಭಾರೀ ಸುದ್ದಿಯಾಗಿದ್ದ ಐಎಂಎ ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನೆ ವಂಚನೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರೆತಿದೆ.

    ಗ್ರಾಹಕರಿಗೆ ವಂಚನೆ ಮಾಡಿರುವ ಸಂಬಂಧ ಎಫ್‌ಐಆರ್‌ನಲ್ಲಿದ್ದ ಆರೋಪಿಗಳ ಹೆಸರು ಚಾರ್ಜ್ ಶೀಟ್‍ನಲ್ಲಿ ಕಣ್ಮರೆಯಾಗಿದೆ. ಚಾರ್ಜ್ ಶೀಟ್‍ನಲ್ಲಿ ಐವರು ಆರೋಪಿಗಳ ಹೆಸರನ್ನು ಸಿಬಿಐ ಕೈಬಿಟ್ಟಿದೆ. ಮಾಜಿ ಡಿಸಿ ವಿಜಯ್‍ಶಂಕರ್, ಎಸಿ ಎಲ್‍ಸಿ ನಾಗರಾಜ್, ಬಿಡಿಎ ಎಂಜಿನಿಯರ್ ಪಿಡಿ ಕುಮಾರ್, ಗ್ರಾಮಲೆಕ್ಕಿಗ ಮಂಜುನಾಥ್ ಹೆಸರು ಐವರು ಹೆಸರು ಇಲ್ಲವಾಗಿದೆ.

    ಹೆಸರು ನಾಪತ್ತೆ ಯಾಕೆ..?
    ಸರ್ಕಾರಿ ಅಧಿಕಾರಿಗಳ ವಿರುದ್ಧ ಚಾರ್ಜ್ ಶೀಟ್‍ಗೆ ಅನುಮತಿ ಬೇಕು. ಐಎಎಸ್ ಮೇಲೆ ಚಾರ್ಜ್ ಶೀಟ್‍ಗೆ ರಾಷ್ಟ್ರಪತಿಗಳ ಅನುಮತಿ ಬೇಕು. ಅಲ್ಲದೆ ಯುಪಿಎಸ್‍ಸಿ ಪರ್ಮೀಷನ್ ಕೂಡ ಅಗತ್ಯವಿದೆ ಎಂದು ಹೇಳಲಾಗುತ್ತಿದೆ.

    ಎಸಿ ನಾಗರಾಜ್ ಸೇರಿ ಉಳಿದವರ ಚಾರ್ಜ್ ಶೀಟ್‍ಗೂ ರಾಜ್ಯ ಸರ್ಕಾರದ ಅನುಮತಿ ಬೇಕು. ಹೀಗಾಗಿ ಪಿಸಿ ಆ್ಯಕ್ಟ್ ನಡಿ ಸಿಬಿಐ ಸರ್ಕಾರದ ಅನುಮತಿ ಕೇಳಿದೆ. ಸರ್ಕಾರ ಅನುಮತಿ ಕೊಟ್ಟರೆ ಮಾತ್ರ ಐವರ ವಿರುದ್ಧ ಚಾರ್ಜ್ ಶೀಟ್‍ ಸಲ್ಲಿಕೆಯಾಗುತ್ತದೆ. ಸರ್ಕಾರ ವಿಳಂಬ ಮಾಡಿದಷ್ಟೂ ಆರೋಪಿಗಳು ಬಚಾವಾಗುವ ಸಾಧ್ಯತೆ ಇದೆ.

    ಐಎಂಎ ವಂಚನೆ ಪ್ರಕರಣ ಸಂಬಂಧ ಎಸ್‍ಐಟಿ ಅಧಿಕಾರಿಗಳು ಸುಮಾರು 25 ಮಂದಿಯನ್ನು ಬಂಧಿಸಿದ್ದರು. ಆದರೆ ಇದೀಗ ಕೇವಲ 20 ಮಂದಿಯ ಹೆಸರು ಮಾತ್ರ ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಲಾಗಿದೆ.

  • ಮನ್ಸೂರ್‌ನಿಂದ 38 ಕೆಜಿ ಚಿನ್ನ ಕರಗಿಸಿದ 9 ಕೋಟಿ ಪಡೆದಿದ್ದ ಸ್ನೇಹಿತನಿಗೆ ನೋಟಿಸ್

    ಮನ್ಸೂರ್‌ನಿಂದ 38 ಕೆಜಿ ಚಿನ್ನ ಕರಗಿಸಿದ 9 ಕೋಟಿ ಪಡೆದಿದ್ದ ಸ್ನೇಹಿತನಿಗೆ ನೋಟಿಸ್

    ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸದ್ಯ ಎಸ್‍ಐಟಿಯಿಂದ ಸಿಬಿಐಗೆ ವರ್ಗಾವಣೆ ಆಗಿದೆ. ಆದರೆ ಮನ್ಸೂರ್ ಖಾನ್ ಚಿನ್ನ ಕರಗಿಸಿ ಬರೋಬ್ಬರಿ 9 ಕೋಟಿ ರೂ. ಹಣವನ್ನು ಸ್ನೇಹಿತನಿಗೆ ಕೊಟ್ಟಿದ್ದು, ಈ ಬಗ್ಗೆ ತಿಳಿದ ಬಳಿಕ ಎಸ್‍ಐಟಿಯಿಂದ ಮನ್ಸೂರ್ ಸ್ನೇಹಿತನಿಗೆ ನೋಟಿಸ್ ನೀಡಲಾಗಿದೆ.

    ಮನ್ಸೂರ್ ಖಾನ್ ಸ್ನೇಹಿತ ಅಬ್ಬಾಸ್‍ಗೆ ಎಸ್‍ಐಟಿಯಿಂದ ನೋಟಿಸ್ ಜಾರಿಗೊಳಿಸಲಾಗಿದೆ. ದೇಶ ಬಿಟ್ಟು ಹೋಗುವ ಮುನ್ನವೇ ಮನ್ಸೂರ್ ಖಾನ್ ದುಬೈನಲ್ಲಿ ವಾಸವಾಗಿರೋ ಅಬ್ಬಾಸ್‍ಗೆ 38 ಕೆಜಿ ಚಿನ್ನ ಕರಗಿಸಿ ಮಾರಾಟ ಮಾಡಿ, ಸುಮಾರು 9 ಕೋಟಿ ಹಣವನ್ನು ನೀಡಿದ್ದನು. ಹಣ ನೀಡಿದ ಬಳಿಕ ದುಬೈಗೆ ಮನ್ಸೂರ್ ಎಸ್ಕೇಪ್ ಆಗಿದ್ದನು ಎನ್ನಲಾಗಿದೆ.

    ಹೀಗಾಗಿ ಎಸ್‍ಐಟಿ ಅಬ್ಬಾಸ್‍ಗೆ ನೋಟಿಸ್ ನೀಡಿದೆ. ನೋಟಿಸ್‍ಗೆ ಮಣಿದು ವಿಚಾರಣೆಗೆ ಅಬ್ಬಾಸ್ ಹಾಜರಾದರೆ ಎಸ್‍ಐಟಿ ಅಧಿಕಾರಿಗಳು ಆತನ ವಿಚಾರಣೆ ನಡೆಸುತ್ತಾರೆ, ಇಲ್ಲವಾದರೆ ಅಬ್ಬಾಸ್‍ನನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸೋ ಸಾಧ್ಯತೆಯಿದೆ. ಕೇವಲ ಎಸ್‍ಐಟಿ ಮಾತ್ರವಲ್ಲದೆ, ಇಡಿ ಅಧಿಕಾರಿಗಳಿಂದಲೂ ಅಬ್ಬಾಸ್‍ಗೆ ನೋಟಿಸ್ ಜಾರಿಗೊಳಿಸಲಾಗಿದೆ.

    ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ನನ್ನು ಬಂಧಿಸಿ ತೀವ್ರ ವಿಚಾರಣೆ ಒಳಪಡಿಸಿದ ಬೆನ್ನಲ್ಲೇ ಎಸ್‍ಐಟಿ ಅಧಿಕಾರಿಗಳು ಮನೆ ಮೇಲೆ ದಾಳಿ ಮಾಡಿದ್ದರು. ಬೆಂಗಳೂರಿನ ಶಾಂತಿನಗರದಲ್ಲಿರುವ ಮನ್ಸೂರ್ ಮನೆ ಮೇಲೆ ದಾಳಿ ನಡೆಸಿದ ವೇಳೆ 300 ಕೆ.ಜಿ ಚಿನ್ನದ ಬಿಸಕೆಟ್ ಗಳು ಪತ್ತೆಯಾಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

  • ಸಿಮೆಂಟ್ ಬ್ಲಾಕ್ ಫ್ಯಾಕ್ಟರಿಯಲ್ಲಿ ಸಿಕ್ತು ನೂರಾರು ಕೋಟಿ – ಮನ್ಸೂರ್ ಆಪ್ತ ಅರೆಸ್ಟ್

    ಸಿಮೆಂಟ್ ಬ್ಲಾಕ್ ಫ್ಯಾಕ್ಟರಿಯಲ್ಲಿ ಸಿಕ್ತು ನೂರಾರು ಕೋಟಿ – ಮನ್ಸೂರ್ ಆಪ್ತ ಅರೆಸ್ಟ್

    ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಆರೋಪಿ ಮನ್ಸೂರ್ ಜನರಿಗೆ ಮೋಸ ಮಾಡಿದ್ದ ಹಣವನ್ನು ಎಲ್ಲೆಲ್ಲಿ ಬಚ್ಚಿಟ್ಟಿದ್ದ ಎಂದು ಕೇಳಿದರೆ ದಂಗಾಗುತ್ತೀರಿ. ಕೇವಲ ಬೆಂಗಳೂರು ಮಾತ್ರವಲ್ಲದೆ ಬೇರೆ ಜಿಲ್ಲೆಗಳಲ್ಲಿಯೂ ಚಿನ್ನ, ಹಣವನ್ನು ಮನ್ಸೂರ್ ಬಚ್ಚಿಟ್ಟಿದ್ದನು.

    ಹೌದು, ಸದ್ಯ ಇಡಿ ಅಧಿಕಾರಿಗಳ ಬಳಿಕ ಮನ್ಸೂರ್ ಖಾನ್ ಎಸ್‍ಐಟಿ ಪೊಲೀಸರ ವಶದಲ್ಲಿದ್ದು ವಿಚಾರಣೆ ನಡೆಯುತ್ತಿದೆ. ಈ ವೇಳೆ ಬೆಂಗಳೂರು ನಗರದಲ್ಲಷ್ಟೇ ಅಲ್ಲದೇ ಹೊರಗಿನ ಜಿಲ್ಲೆಗಳಲ್ಲಿ ಕೋಟಿಗಟ್ಟಲೆ ಹಣವನ್ನು ಬಚ್ಚಿಟ್ಟಿದ್ದ ವಿಚಾರ ಬೆಳಕಿಗೆ ಬಂದಿದೆ.

    ಎಸ್‍ಐಟಿ ಪೊಲೀಸರ ತನಿಖೆಯಲ್ಲಿ ಮನ್ಸೂರ್ ಮತ್ತೊಂದು ಅಡುಗುತಾಣ ಬಯಲಾಗಿದೆ. ಕೋಲಾರದ ಮಾಲೂರಿನ ಬಳಿ ಇರುವ ಸಿಮೆಂಟ್ ಬ್ಲಾಕ್ ತಯಾರಕ ಫ್ಯಾಕ್ಟರಿಯಲ್ಲಿ ಮನ್ಸೂರ್ ನೂರಾರು ಕೋಟಿ ಹಣ, ಚಿನ್ನಾಭರಣ ಪತ್ತೆಯಾಗಿದೆ.

    ಅಷ್ಟೇ ಅಲ್ಲದೆ, ಈ ಹಣ, ಒಡವೆ ಕಾಯಲೆಂದೇ ಫ್ಯಾಕ್ಟರಿಯಲ್ಲಿ ಗನ್‍ಮ್ಯಾನ್‍ಗಳನ್ನು ಕೂಡ ನೇಮಕ ಮಾಡಲಾಗಿತ್ತು. ಮನ್ಸೂರ್ ಖಾನ್ ಸ್ನೇಹಿತ ನಾಟಿ ವೈದ್ಯ ಖಮರುಲ್ಲಾ ಜಮಾಲ್ ಇದರ ಉಸ್ತುವಾರಿ ವಹಿಸಿಕೊಂಡಿದ್ದನು. ತಾನೇ ಜಮೀನು ತೆಗೆದುಕೊಂಡು, ಖಮರುಲ್ಲಾ ಜಮಾಲ್‍ಗೆ ಮನ್ಸೂರ್ ಫ್ಯಾಕ್ಟರಿ ಮಾಡಿಕೊಟ್ಟಿದ್ದನು. ಹಾಗೆಯೇ ನಾಟಿ ವೈದ್ಯದ ಜೊತೆ ಮಾಟ ಮಂತ್ರ ಮಾಡುತ್ತೇನೆ ಎಂದು ಖಮರುಲ್ಲಾ ಜನರನ್ನು ಹೆದರಿಸುತ್ತಿದ್ದನು. ಹೀಗೆ ಈ ಫ್ಯಾಕ್ಟರಿ ಬಳಿ ಜನರು ಬಾರದಂತೆ ನೋಡಿಕೊಂಡಿದ್ದನು.

    ಈ ಬಗ್ಗೆ ತಿಳಿದು ಸಿಮೆಂಟ್ ಫ್ಯಾಕ್ಟರಿ ಪರಿಶೀಲನೆ ನಡೆಸಿರುವ ಎಸ್‍ಐಟಿ ಪೊಲೀಸರು ಖಮರುಲ್ಲಾನನ್ನು ಬಂಧಿಸಿ, ನಗದು ಹಾಗೂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಹಾಗೆಯೇ ಶಾಂತಿನಗರದ ತನ್ನ ಅಪಾರ್ಟ್‌ಮೆಂಟಿನಲ್ಲಿ ಮನ್ಸೂರ್ ಸ್ವಿಮ್ಮಿಂಗ್ ಪೂಲ್‍ನಲ್ಲಿ 300 ನಕಲಿ ಚಿನ್ನದ ಬಿಸ್ಕತ್ ಬಚ್ಚಿಟ್ಟಿರುವುದು ಕೂಡ ಬೆಳಕಿಗೆ ಬಂದಿದ್ದು, ಅದನ್ನೂ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

  • ಶಾ ಎರಡನೇ ಆದೇಶ-ಘಟಾನುಘಟಿಗಳು ಲಾಕ್, ಬಿಎಸ್‍ವೈ ರಾಕ್!

    ಶಾ ಎರಡನೇ ಆದೇಶ-ಘಟಾನುಘಟಿಗಳು ಲಾಕ್, ಬಿಎಸ್‍ವೈ ರಾಕ್!

    -ಐಎಂಎ ಪ್ರಕರಣ ಸಿಬಿಐಗೆ?

    ಬೆಂಗಳೂರು: ಫೋನ್ ಟ್ಯಾಪಿಂಗ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಫೋನ್ ಕದ್ದಾಲಿಕೆ ಪ್ರಕರಣವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಬಿಐಗೆ ವರ್ಗಾಯಿಸಿದ್ದಾರೆ. ಇದೀಗ ಅಮಿತ್ ಶಾ ಎರಡನೇ ಸಂದೇಶವೊಂದನ್ನು ರವಾನಿಸಿದ್ದು, ಘಟಾನುಘಟಿ ನಾಯಕರುಗಳಿಗೆಲ್ಲ ನಡುಕು ಶುರುವಾಗಿದೆ ಎನ್ನಲಾಗುತ್ತಿದೆ.

    ಏನದು ಆದೇಶ?
    ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ಗೆ ವಹಿಸಿದ ಮೇಲೆ ಇದೀಗ ರಾಜ್ಯದಲ್ಲಿ ಸದ್ದು ಮಾಡಿದ್ದ ಐಎಂಎ ಬಹುಕೋಟೆ ಹಗರಣವನ್ನು ಸಿಬಿಐಗೆ ವರ್ಗಾಯಿಸಲು ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ. ಐಎಂಎ ಬಹುಕೋಟೆ ಹಗರಣದಲ್ಲಿ ಈಗಾಗಲೇ ಹಲವು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಹೆಸರುಗಳು ಕೇಳಿ ಬಂದಿವೆ. ಇತ್ತ ಅಧಿಕಾರಿಗಳು ತನ್ನಿಂದ ಅಪಾರ ಪ್ರಮಾಣದ ಹಣ ಪಡೆದಿದ್ದಾರೆ ಎಂದು ವಂಚಕ ಮನ್ಸೂರ್ ಖಾನ್ ಆರೋಪಿಸಿದ್ದಾನೆ.

    ಈ ಹಿನ್ನೆಲೆಯಲ್ಲಿ ಐಎಂಎ ಪ್ರಕರಣವನ್ನು ಸಿಬಿಐಗೆ ನೀಡಿದ್ರೆ ರಾಜಕೀಯ ವಿರೋಧಿಗಳನ್ನು ಸುಲಭವಾಗಿ ಕಟ್ಟಿ ಹಾಕಬಹದು ಎಂದು ಅಮಿತ್ ಶಾ ಪ್ಲಾನ್ ಮಾಡಿಕೊಂಡಿದ್ದಾರಂತೆ. ಇತ್ತ ಯಡಿಯೂರಪ್ಪ ಈ ಸಂಬಂಧ ಹಿರಿಯ ಅಧಿಕಾರಿಗಳು, ಕಾನೂನು ತಜ್ಞರು ಮತ್ತು ಆಪ್ತರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಯಾರಿಗೆಲ್ಲ ಸಂಕಷ್ಟ?
    ಐಎಂಎ ಬಹುಕೋಟಿ ಹಗರಣದಲ್ಲಿ ಆರಕ್ಕೂ ಅಧಿಕ ರಾಜಕೀಯ ನಾಯಕರು, ಐಪಿಎಸ್, ಐಎಎಸ್ ಅಧಿಕಾರಿಗಳಿಗೆ ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಮಾಜಿ ಸಚಿವರುಗಳಾದ ಜಮೀರ್ ಅಹ್ಮದ್, ರೋಷನ್ ಬೇಗ್, ಕೆ.ಜೆ.ಜಾರ್ಜ್, ಆರ್.ವಿ.ದೇಶಪಾಂಡೆ, ಅಜಯ್ ಹಿಲೋರಿ-ಐಪಿಎಸ್ ಅಧಿಕಾರಿ, ರಮೇಶ್‍ಕುಮಾರ್-ಎಸಿಪಿ, ರಮೇಶ್-ಇನ್ಸ್ ಪೆಕ್ಟರ್, ವಿಜಯ್‍ಶಂಕರ್-ಐಎಎಸ್ ಅಧಿಕಾರಿ, ನಾಗರಾಜ್-ಸಹಾಯಕ ಆಯುಕ್ತ, ಕುಮಾರ್-ಬಿಡಿಎ ಅಧಿಕಾರಿ, ಇಸ್ತಿಯಾಕ್- ಶಿವಾಜಿನಗರ ಕಾರ್ಪೋರೇಟರ್ ಗಂಡ, ಮುಜಾಹೀದ್- ಜಮೀರ್, ಬೇಗ್ ಶಿಷ್ಯ.

  • ಮನ್ಸೂರ್ ಖಾನ್ ಪೊಲೀಸ್ ಕಸ್ಟಡಿ ಅಂತ್ಯ- ಎಸ್‍ಐಟಿಗೆ ಸಿಕ್ಕಿಲ್ಲ ಪೂರ್ಣ ಮಾಹಿತಿ

    ಮನ್ಸೂರ್ ಖಾನ್ ಪೊಲೀಸ್ ಕಸ್ಟಡಿ ಅಂತ್ಯ- ಎಸ್‍ಐಟಿಗೆ ಸಿಕ್ಕಿಲ್ಲ ಪೂರ್ಣ ಮಾಹಿತಿ

    ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಮನ್ಸೂರ್ ಖಾನ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ.

    ಸತತ 14 ದಿನಗಳ ಕಾಲ ಮನ್ಸೂರ್ ಖಾನ್ ವಿಚಾರಣೆ ನಡೆಸಿದರೂ ಇನ್ನಷ್ಟು ಮಾಹಿತಿಗಳು ಹೊರಬರಬೇಕಿದೆ. ಶಿವಾಜಿನಗರ ಅನರ್ಹ ಶಾಸಕ ರೋಷನ್ ಬೇಗ್‍ಗೆ 400 ಕೋಟಿ ಕೊಟ್ಟಿರೋದು ಸತ್ಯ ಎಂದು ಎಸ್‍ಐಟಿ ಪೊಲೀಸರ ಬಳಿ ಮನ್ಸೂರ್ ಹೇಳಿಕೊಂಡಿದ್ದಾನೆ.

    ಆದರೆ ಅನಾರೋಗ್ಯದ ನೆಪವೊಡ್ಡಿ ರೋಷನ್‍ಬೇಗ್ ಅವರು ಮಾತ್ರ ವಿಚಾರಣೆಗೆ ಹಾಜರಾಗುತ್ತಿಲ್ಲ. ಹೇಗಾದರೂ ಮಾಡಿ ರೋಷನ್ ಬೇಗ್ ಅವರನ್ನು ವಿಚಾರಣೆಗೆ ಕರೆಸಿ, ಮನ್ಸೂರ್ ಖಾನ್ ಎದುರು ಕೂರಿಸಿ ವಿಚಾರಣೆ ಮಾಡೊ ಪ್ಲಾನ್‍ನಲ್ಲಿ ಎಸ್‍ಐಟಿ ಅಧಿಕಾರಿಗಳು ಇದ್ದಾರೆ.

    ರಾಜ್ಯವಲ್ಲದೇ ದೇಶದ ನಾನಾ ಭಾಗಗಳಲ್ಲಿ ಆಸ್ತಿ ಹೊಂದಿರೋದಾಗಿ ಮನ್ಸೂರ್ ಖಾನ್ ಹೇಳಿದ್ದಾನೆ. ಎಸ್‍ಐಟಿ ಅಧಿಕಾರಿಗಳು ಹೊರ ರಾಜ್ಯಗಳಲ್ಲಿನ ಆಸ್ತಿ ಪತ್ತೆ ಹಚ್ಚಲು ತೆರಳಿದ್ದಾರೆ. ಹೀಗಾಗಿ ವಿಚಾರಣೆ ಇನ್ನೂ ಮುಗಿಯದ ಹಿನ್ನೆಲೆಯಲ್ಲಿ ಮತ್ತೆ ಪೊಲೀಸ್ ಕಸ್ಟಡಿಗೆ ಕೇಳುವ ಸಾಧ್ಯತೆಯಿದೆ.

    ಮನ್ಸೂರ್ ಸಿಕ್ಕಿಬಿದ್ದಿದ್ದು ಹೇಗೆ?
    ಸುಮಾರು 60 ಸಾವಿರ ಮಂದಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಜೂನ್ 8 ರಂದು ರಾತ್ರೋರಾತ್ರಿ ದುಬೈಗೆ ಎಸ್ಕೇಪ್ ಆಗಿದ್ದನು. ವಿಷಯ ತಿಳಿದ ಹೂಡಿಕೆದಾರರು ಎಸ್‍ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. ಆ ಬಳಿಕ ವಿಡಿಯೋ ಬಿಡುಗಡೆ ಮಾಡಿ ಗ್ರಾಹಕರ ಹಣ ಹಿಂದಿರುಗಿಸುವುದಾಗಿ ಹೇಳಿದ್ದನು.

    ನಂತರ ಅನಾರೋಗ್ಯದ ಕಾರಣ ನೀಡಿ ಭಾರತಕ್ಕೆ ಮರಳುತ್ತಿದ್ದೇನೆ ತಮಗೆ ಜೀವ ಭಯ ಇದ್ದು, ಪೊಲೀಸರು ರಕ್ಷಣೆ ಕೊಡಬೇಕು ಎಂದು ಕೋರಿ ಮತ್ತೊಂದು ವಿಡಿಯೋ ಒಂದನ್ನು ರಿಲೀಸ್ ಮಾಡಿದ್ದನು. ಆದರೆ ವಿಡಿಯೋ ಬಿಡುಗಡೆ ಮಾಡಿದ 24 ಗಂಟೆಗಳಲ್ಲಿ ಮನ್ಸೂರ್ ವಾಪಸ್ ಬರಲಿಲ್ಲ. ಹೀಗಾಗಿ ಜುಲೈ 9ರಂದು ಮಧ್ಯರಾತ್ರಿ 1.30ರ ಸುಮಾರಿಗೆ ದುಬೈನಿಂದ ದೆಹಲಿಗೆ ಬಂದಿಳಿದ ಮನ್ಸೂರ್ ಖಾನ್‍ನನ್ನು ಎಸ್‍ಐಟಿ (ವಿಶೇಷ ತನಿಖಾ ತಂಡ) ಪೊಲೀಸರು ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲೇ ಬಂಧಿಸಿ. ನಂತರ ಆತನನ್ನು ಬೆಂಗಳೂರಿಗೆ ಕರೆತರಲಾಗಿತ್ತು.

  • ಮನ್ಸೂರ್ ಖಾನ್ ಮನೆ ಮೇಲೆ ಎಸ್‍ಐಟಿ ದಾಳಿ- 300 ಕೆ.ಜಿ ನಕಲಿ ಚಿನ್ನದ ಬಿಸ್ಕೆಟ್ ಪತ್ತೆ

    ಮನ್ಸೂರ್ ಖಾನ್ ಮನೆ ಮೇಲೆ ಎಸ್‍ಐಟಿ ದಾಳಿ- 300 ಕೆ.ಜಿ ನಕಲಿ ಚಿನ್ನದ ಬಿಸ್ಕೆಟ್ ಪತ್ತೆ

    ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ಅಧಿಕಾರಿಗಳು ಐಎಂಎ ಮಾಲೀಕ ಮನ್ಸೂರ್ ಖಾನ್‍ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಇದರ ಬೆನ್ನಲ್ಲೇ ಇದೀಗ ಮನ್ಸೂರ್ ಖಾನ್ ಮನೆ ಮೇಲೆ ದಾಳಿ ನಡೆಸಿದ್ದಾರೆ.

    ಬೆಂಗಳೂರಿನ ಶಾಂತಿ ನಗರದಲ್ಲಿರುವ ಆರೋಪಿ ಮನ್ಸೂರ್ ಖಾನ್ ಮನೆ ಮೇಲೆ ಎಸ್‍ಐಟಿ ದಾಳಿ ನಡೆಸಿದ್ದು, ದಾಳಿಯ ವೇಳೆ 300 ಕೆ.ಜಿ ನಕಲಿ ಚಿನ್ನದ ಬಿಸ್ಕೆಟ್ ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

    ಡಿಸಿಪಿ ಗಿರೀಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಮನೆಯ ಕೊನೆಯಲ್ಲಿ ಟೆರೆಸ್ ಮೇಲೆ ಇದ್ದ ಈಜುಕೊಳದಲ್ಲಿ ಈ ನಕಲಿ ಬಿಸ್ಕೆಟ್‍ಗಳನ್ನು ಮನ್ಸೂರ್ ಖಾನ್ ಬಚ್ಚಿಟ್ಟಿದ್ದ ಎಂದು ತಿಳದು ಬಂದಿದೆ. ಮನ್ಸೂರ್ ಖಾನ್‍ನ್ನು ಎಸ್‍ಐಟಿ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಅನಾರೋಗ್ಯದ ನೆಪವೊಡ್ಡಿದರೂ ಸಹ ಚಿಕಿತ್ಸೆ ಕೊಡಿಸಿ ವಿಚಾರಣೆಯನ್ನು ಮುಂದುವರಿಸಿದ್ದಾರೆ.

    ಮನ್ಸೂರ್ ಖಾನ್ ಭೇಟಿಯಾಗಲು ಯಾರಿಗೂ ಅವಕಾಶ ನೀಡದೆ ವಿಚಾರಣೆ ನಡೆಸಲಾಗುತ್ತಿದ್ದು, ಕುಟುಂಬಸ್ಥರು, ಪ್ರಭಾವಿಗಳು ಹಾಗೂ ರಾಜಕಾರಣಿಗಳು ಸೇರಿದಂತೆ ಯಾರನ್ನೂ ಸಹ ಮನ್ಸೂರ್ ಖಾನ್‍ನನ್ನು ಭೇಟಿಯಾಗಲು ಬಿಡುತ್ತಿಲ್ಲ.

    ಈ ಹಿಂದೆ ಎಸ್‍ಐಟಿ ಅಧಿಕಾರಿಗಳ ವಿಚಾರಣೆ ವೇಳೆ ಎದೆ ನೋವು ಎಂದು ಮನ್ಸೂರ್ ಖಾನ್ ಕುಂಟು ನೆಪವೊಡ್ಡಿದ್ದ. ಬಳಿಕ ಅಧಿಕಾರಿಗಳು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ಎಸ್‍ಐಟಿ ಅಧಿಕಾರಿಗಳು ಇತ್ತೀಚೆಗೆ ಮನ್ಸೂರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಪ್ರಾರಂಭಿಸಿದ್ದರು. ಡಿಸಿಪಿ ಗಿರೀಶ್ ಹಾಗೂ ಎಸಿಪಿ ಬಾಲರಾಜ್ ನೇತೃತ್ವದಲ್ಲಿ ವಿಚಾರಣೆ ನಡೆಸುತ್ತಿದ್ದ ವೇಳೆ ತಡರಾತ್ರಿ ಮತ್ತೆ ಎದೆ ನೋವು ಎಂದು ಮನ್ಸೂರ್ ಖಾನ್ ಹೇಳಿದ್ದು, ನಂತರ ಅಧಿಕಾರಿಗಳು ಮನ್ಸೂರ್ ಖಾನ್ ನನ್ನು ಜಯದೇವ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರು.

  • ಎಸ್‍ಐಟಿ ಮುಂದೆ ಹಾಜರಾಗದ್ದಕ್ಕೆ ರೋಷನ್ ಬೇಗ್ ಕುಂಟು ನೆಪ

    ಎಸ್‍ಐಟಿ ಮುಂದೆ ಹಾಜರಾಗದ್ದಕ್ಕೆ ರೋಷನ್ ಬೇಗ್ ಕುಂಟು ನೆಪ

    ಬೆಂಗಳೂರು: ಐಎಂಎ ಜ್ಯುವೆಲ್ಸ್ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಎಸ್‍ಐಟಿ(ವಿಶೇಷ ತನಿಖಾ ದಳ) ಮುಂದೆ ಹಾಜರಾಗದ್ದಕ್ಕೆ ಅನರ್ಹ ಶಾಸಕ ರೋಷನ್ ಬೇಗ್ ಕುಂಟು ನೆಪ ಹೇಳಿದ್ದಾರೆ.

    ಅನಾರೋಗ್ಯ ಇತ್ತು ಹೀಗಾಗಿ ನಿನ್ನೆ ವಿಚಾರಣೆಗೆ ಬಂದಿರಲಿಲ್ಲ. ಆಗಸ್ಟ್ 15ರ ಬಳಿಕ ವಿಚಾರಣೆಗೆ ಬರುತ್ತೇನೆ ಎಂದು ಸಬೂಬು ಹೇಳಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಎಸ್‍ಐಟಿ ಅವರು ರೋಷನ್ ಬೇಗ್ ಅವರನ್ನು ಒಮ್ಮೆ ಮಾತ್ರ ವಿಚಾರಣೆ ನಡೆಸಿದ್ದಾರೆ. ಹೀಗಾಗಿ ಮತ್ತೆ ವಿಚಾರಣೆಗೆ ಬರಬೇಕೆಂದು ಪದೇ ಪದೇ ನೋಟೀಸ್ ಕೊಟ್ಟರೂ ಅನರ್ಹ ಶಾಸಕ ಕ್ಯಾರೇ ಎಂದಿಲ್ಲ.

    ಈ ಹಿನ್ನೆಲೆಯಲ್ಲಿ ಇದೀಗ ಎಸ್‍ಐಟಿಯವರು ರೋಷನ್ ಬೇಗ್ ವಿರುದ್ಧ ನ್ಯಾಯಾಲಯದ ಮೊರೆ ಹೋಗಲು ತೀರ್ಮಾನ ಮಾಡಿದ್ದಾರೆ. ವಿಚಾರಣೆಗೆ ಸರಿಯಾಗಿ ಬರುತ್ತಿಲ್ಲ. ಕಾನೂನು ಕ್ರಮ ಮುಂದುವರಿಸಲು ಅವಕಾಶಕ್ಕೆ ಮನವಿ ಮಾಡಲು ನಿರ್ಧರಿಸಿದ್ದು, ಎಸ್‍ಐಟಿ ಇಂದು ಅಥವಾ ನಾಳೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ತೀರ್ಮಾನಿಸಿದೆ. ಪದೇ ಪದೇ ಇವರಿಗೆ ಅವಕಾಶ ನೀಡಿದರೆ ಬೇರೆ ಆರೋಪಿಗಳು ಕೂಡ ಇದೇ ಚಾಳಿ ಮುಂದುವರಿಸುತ್ತಾರೆ. ಅದಕ್ಕಾಗಿ ನ್ಯಾಯಾಲಯದ ಮೊರೆ ಹೋಗಲು ನಿರ್ಧಾರ ಮಾಡಿರುವುದಾಗಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ.

    ವಂಚನೆ ಆರೋಪದ ಮೇಲೆ ಬಂಧಿತನಾಗಿರುವ ಐಎಂಎ ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಖಾನ್ ನಿಂದ ಭಾರೀ ಹಣ ಪಡೆದ ಪಡೆದಿರುವ ಆರೋಪವನ್ನು ರೋಷನ್ ಬೇಗ್ ಎದುರಿಸುತ್ತಿದ್ದಾರೆ. ಮನ್ಸೂರ್ ಬಂಧನಕ್ಕೂ ಮುನ್ನ ಬಿಡುಗಡೆ ಮಾಡಿರುವ ಆಡಿಯೋದಲ್ಲಿ ಶಿವಾಜಿನಗರ ಶಾಸಕರು ತನ್ನಿಂದ ಹಣ ಪಡೆದು ವಾಪಸ್ ಕೊಟ್ಟಿಲ್ಲ ಎಂದು ದೂರಿದ್ದರು. ಈ ಸಂಬಂಧ ಪುಣೆಗೆ ಹೊರಟಿದ್ದು ರೋಷನ್ ಬೇಗ್ ಅವರನ್ನು ಏರ್ ಪೋರ್ಟಿನಲ್ಲೇ ಎಸ್‍ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು.