Tag: Mansukh Mandaviya

  • ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿ ಆಡಲ್ಲ: ಸಚಿವ ಮನ್ಸುಖ್ ಮಾಂಡವಿಯಾ

    ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿ ಆಡಲ್ಲ: ಸಚಿವ ಮನ್ಸುಖ್ ಮಾಂಡವಿಯಾ

    – ಬಿಸಿಸಿಐಗೂ ಕ್ರೀಡಾ ಮಸೂದೆ ಕಡ್ಡಾಯ

    ಮುಂಬೈ: ಭಾರತ ಯಾವುದೇ ಕಾರಣಕ್ಕೂ ಪಾಕಿಸ್ತಾನದ (Ind vs Pak Match) ಜೊತೆಗೆ ದ್ವಿಪಕ್ಷೀಯ ಸರಣಿಯನ್ನಾಡುವುದಿಲ್ಲ ಎಂದು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) ಹೇಳಿದ್ದಾರೆ.

    ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಇಂಡೋ ಪಾಕ್‌ ಸರಣಿ, ಬಿಸಿಸಿಐಗೆ (BCCI) ಕ್ರೀಡಾ ಮಸೂದೆ ಅನ್ವಯವಾಗುವ ವಿಷಯಗಳನ್ನ ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ಟೆಸ್ಟ್‌ ಕ್ಯಾಪ್ಟನ್‌ ಗಿಲ್‌ಗೆ ಅನಾರೋಗ್ಯ – ಏಷ್ಯಾಕಪ್‌ ಟೂರ್ನಿಗೆ ಅಯ್ಯರ್‌ಗೆ ಸಿಗುತ್ತಾ ಚಾನ್ಸ್‌?

    ಭಾರತ-ಪಾಕ್‌ ಪಂದ್ಯಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು, ನಾವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿ ಆಡುತ್ತಿಲ್ಲ. ಅಂತಾರಾಷ್ಟ್ರೀಯ ಸರಣಿಗಳಲ್ಲಿ ಮಾತ್ರವೇ ಆಡಲಾಗುತ್ತಿದೆ. ಏಕೆಂದ್ರೆ ಐಸಿಸಿ ನಿಯಮವನ್ನು ಗೌರವಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾಗೆ ಅಯ್ಯರ್ ಒನ್‌ಡೇ ಕ್ಯಾಪ್ಟನ್? – ವದಂತಿಗಳಿಗೆ ತೆರೆ ಎಳೆದ ಬಿಸಿಸಿಐ

    ಮುಂದುವರಿದು.. ಕ್ರೀಡಾ ಮಸೂದೆ (Sports Bill) ಅಡಿಯಲ್ಲಿ ವೀಸಾಗಳನ್ನು ಸಕಾಲಿಕವಾಗಿ ನೀಡುವುದು ಮೂಲ ನಿಯಮವಾಗಿದೆ. ಹಾಗಾಗಿ ಯಾವುದೇ ದೇಶವು ಮತ್ತೊಂದು ರಾಷ್ಟ್ರದ ಕ್ರೀಡಾಪಟುಗಳಿಗೆ ವೀಸಾ ನಿರಾಕರಿಸಲು ಸಾಧ್ಯವಿಲ್ಲ. ಅಲ್ಲದೇ ವಿಶ್ವ ದರ್ಜೆಯ, ಎಲ್ಲಾ ಸೌಲಭ್ಯಗಳೊಂದಿಗೆ ಭಾರತವನ್ನ ಜಾಗತಿಕ ಕ್ರೀಡಾ ಕೇಂದ್ರವಾಗಿ ಸ್ಥಾಪಿಸುವುದು, ಇತರ ರಾಷ್ಟ್ರಗಳು ದೇಶದಲ್ಲಿ ಟೂರ್ನಿ ಆಯೋಜಿಸಲು ಪ್ರೋತ್ಸಾಹಿಸುವುದು ಸರ್ಕಾರ ಗುರಿಯಾಗಿದೆ ಎಂದು ಪ್ರತಿಪಾದಿಸಿದ್ದಾರೆ.

    ಇನ್ನೂ ಕ್ರೀಡಾ ಮಸೂದೆ ಕುರಿತು ಮಾತನಾಡಿ, ಪ್ರಧಾನಿ ಮೋದಿ ಅವರ ದೂರದೃಷ್ಟಿಯಿಂದ ಹೊಸದಾಗಿ ಪರಿಚಯಿಸಲಾದ ಕ್ರೀಡಾ ಮಸೂದೆಯು ಐತಿಹಾಸಿಕ ಮತ್ತು ಪರಿವರ್ತನಾತ್ಮಕ ಶಾಸನವಾಗಿದೆ. 1985 ರಿಂದ ಇಂತಹ ಮಸೂದೆಗೆ ಕರಡು ಅಸ್ತಿತ್ವದಲ್ಲಿದ್ದರೂ, ಇದು ಶಾಸನ ಆಗಿರಲಿಲ್ಲ. ಭಾರತವು ಮುಂದೆ ಒಲಿಂಪಿಕ್ಸ್‌ಗೆ ಬಿಡ್‌ ಮಾಡ್ತಿರೋದ್ರಿಂದ ಈ ಮಸೂದೆ ಐತಿಹಾಸಿಕ ಕೂಡ ಆಗಿದೆ ಎಂದು ತಿಳಿದ್ದಾರೆ. ಇದನ್ನೂ ಓದಿ: ನವೆಂಬರ್‌ನಲ್ಲಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ ಅರ್ಜೆಂಟಿನಾದ ಫುಟ್‌ಬಾಲ್ ಆಟಗಾರ ಮೆಸ್ಸಿ

    ಅಲ್ಲದೇ, ಹೊಸ ಕ್ರೀಡಾ ಮಸೂದೆ ಅಡಿಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೇರಿದಂತೆ ಎಲ್ಲಾ ಕ್ರೀಡಾ ಒಕ್ಕೂಟಗಳು ಹೊಸ ಕ್ರೀಡಾ ಮಂಡಳಿಯಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ ಎಂದರಲ್ಲದೇ ಭವಿಷ್ಯದಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ಅನ್ನು ಹೊಸ ಕ್ರೀಡಾ ಮಂಡಳಿಯಲ್ಲಿ ವಿಲೀನಗೊಳಿಸುವ ಯೋಜನೆಯನ್ನು ಸಹ ಪ್ರಸ್ತಾಪಿಸಿದ್ದಾರೆ.

  • ಸಿಂಗ್‌ ಅವಧಿಯಲ್ಲಿ 2.9 ಕೋಟಿ, ಮೋದಿ ಕಾಲದಲ್ಲಿ 17 ಕೋಟಿ ಉದ್ಯೋಗ ಸೃಷ್ಟಿ: ಕೇಂದ್ರ

    ಸಿಂಗ್‌ ಅವಧಿಯಲ್ಲಿ 2.9 ಕೋಟಿ, ಮೋದಿ ಕಾಲದಲ್ಲಿ 17 ಕೋಟಿ ಉದ್ಯೋಗ ಸೃಷ್ಟಿ: ಕೇಂದ್ರ

    – UPAಗಿಂತ NDA ಕಾಲದಲ್ಲೇ ಅಧಿಕ ಉದ್ಯೋಗ: ಕೇಂದ್ರ ಸಚಿವ ಮಾಂಡವಿಯಾ

    ನವದೆಹಲಿ: ಯುಪಿಎ (UPA) ಅವಧಿಗಿಂತ ಎನ್‌ಡಿಎ (NDA) ಆಡಳಿತದಲ್ಲಿ 5 ಪಟ್ಟು ಅಧಿಕ ಉದ್ಯೋಗ ಸೃಷ್ಟಿಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

    2014-15ರಲ್ಲಿ 47.15 ಕೋಟಿ ಇದ್ದ ಉದ್ಯೋಗಕ್ಕೆ ಹೋಲಿಸಿದರೆ 2023-24ರಲ್ಲಿ ಶೇ.36ರಷ್ಟು ಏರಿಕೆಯಾಗಿದ್ದು, ಎನ್‌ಡಿಎ ಅವಧಿಯಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮನ್ಸೂಖ್ ಮಾಂಡವಿಯಾ ತಿಳಿಸಿದ್ದಾರೆ.‌ ಇದನ್ನೂ ಓದಿ: ಬಾಂಗ್ಲಾ ಭಯೋತ್ಪಾದಕರು ಒಳನುಸುಳಲು BSF ಸಹಕಾರ: ದೀದಿ ಆರೋಪ

    2004-2014ರ ನಡುವಿನ ಕಾಂಗ್ರೆಸ್ ನೇತೃತ್ವದ ಆಡಳಿತದೊಂದಿಗೆ ದತ್ತಾಂಶವನ್ನು ಹೋಲಿಸಿದ ಸಚಿವರು, ಯುಪಿಎ ಅಧಿಕಾರಾವಧಿಯಲ್ಲಿ ಭಾರತದಲ್ಲಿ ಉದ್ಯೋಗವು ಕೇವಲ 7 ಪ್ರತಿಶತದಷ್ಟು ಬೆಳೆದಿದೆ. 2.9 ಕೋಟಿ ಹೆಚ್ಚುವರಿ ಉದ್ಯೋಗ ಸೃಷ್ಟಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಮೋದಿ ಸರ್ಕಾರದ ಅಡಿಯಲ್ಲಿ, 2014-24 ರ ನಡುವೆ 17.19 ಕೋಟಿ ಉದ್ಯೋಗಗಳು ಸೃಷ್ಟಿಯಾಗಿವೆ. ದೇಶದಲ್ಲಿ ಸುಮಾರು 4.6 ಕೋಟಿ ಉದ್ಯೋಗಗಳು ಇವೆ ಎಂದು ಮಾಂಡವಿಯಾ ಹೇಳಿದ್ದಾರೆ. ಇದನ್ನೂ ಓದಿ: ʼಇಂಡಿಯಾʼಗೆ ಬನ್ನಿ, ಬಾಗಿಲು ಸದಾ ತೆರೆದಿದೆ: ನಿತೀಶ್‌ಗೆ ಲಾಲೂ ಆಫರ್‌

    ದೇಶದಲ್ಲಿ ಉದ್ಯೋಗಗಳನ್ನು ಸೃಷ್ಟಿಸಲು ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ನೀಡಿರುವ ಈ ಮಾಹಿತಿಯು ಮಹತ್ವದ್ದಾಗಿದೆ.

  • ವಿನೇಶ್ ತರಬೇತಿಗೆ ಕೇಂದ್ರ 75 ಲಕ್ಷ ರೂ. ಖರ್ಚು ಮಾಡಿದೆ – ಮನ್ಸುಖ್ ಮಾಂಡವಿಯಾ ಮಾಹಿತಿ

    ವಿನೇಶ್ ತರಬೇತಿಗೆ ಕೇಂದ್ರ 75 ಲಕ್ಷ ರೂ. ಖರ್ಚು ಮಾಡಿದೆ – ಮನ್ಸುಖ್ ಮಾಂಡವಿಯಾ ಮಾಹಿತಿ

    – ವಿನೇಶ್ ಫೋಗಟ್ ಅನರ್ಹ; ಷಡ್ಯಂತ್ರ್ಯದ ಶಂಕೆ ವ್ಯಕ್ತಪಡಿಸಿದ ಕಾಂಗ್ರೆಸ್

    ಪ್ಯಾರಿಸ್: ವಿನೇಶ್ ಫೋಗಟ್ (Vinesh Phoga) ಅನರ್ಹತೆಯ ವಿಚಾರದಲ್ಲೂ ರಾಜಕೀಯ ಕೆಸರೆರಚಾಟ ನಡೆದಿದೆ. ಈ ಹಿಂದೆ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದ, ಬಿಜೆಪಿ ಮಾಜಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸಿದ್ದ ಕಾರಣಕ್ಕೆ ಈಗ ವಿನೇಶ್ ವಿರುದ್ಧ ಷಡ್ಯಂತ್ರ್ಯ ನಡೆದಂತೆ ಕಾಣುತ್ತಿದೆ ಎಂದು ಕಾಂಗ್ರೆಸ್ ಸಂಸದ ಬಲವಂತ್ ವಾಂಖೆಡೆ (Balwant Wankhede) ಆರೋಪ ಮಾಡಿದ್ದಾರೆ.

    ವಿನೇಶ್‌ ಫೋಗಟ್‌ ಅನರ್ಹತೆಯ ಹಿಂದೆ ಷಡ್ಯಂತ್ರ ಇರುವಂತಿದೆ. ಆಕೆ ದೆಹಲಿಯ (New Delhi) ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದನ್ನು ಇಡೀ ದೇಶ ನೋಡಿತ್ತು. ಆದರೆ, ಆಕೆಗೆ ಆಗ ನ್ಯಾಯ ಸಿಕ್ಕಿರಲಿಲ್ಲ. ಈಗ ವಿನೇಶ್ ಪದಕ (Olympic Medal) ಗೆದ್ದು ಬಂದ್ರೆ ಆಕೆಯನ್ನು ಸ್ವಾಗತಿಸಿ, ಗೌರವಿಸಬೇಕಾಗುತ್ತದೆ. ಇದು ಕೆಲವರಿಗೆ ಇಷ್ಟ ಇರಲಿಲ್ಲ ಎಂದು ಬಲ್ವಂತ್ ವಾಂಖೆಡೆ ಲೇವಡಿ ಮಾಡಿದ್ದಾರೆ.

    ಅಲ್ಲದೇ ವಿನೇಶ್ ಫೋಗಟ್ ಅನರ್ಹಗೊಳಿಸಿದ ವಿಚಾರವನ್ನು ಕ್ರೀಡಾಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) ಲೋಕಸಭೆಯಲ್ಲಿ (Lok Sabha) ಪ್ರಸ್ತಾಪಿಸಿದರು. ವಿನೇಶ್ ವಿಚಾರದಲ್ಲಿ ಏನೆಲ್ಲಾ ಬೆಳವಣಿಗೆ ನಡೆಯಿತು ಎಂಬುದರ ಬಗ್ಗೆ ಲೋಕಸಭೆಗೆ ವಿವರಿಸಿದ್ರು. ವಿನೇಶ್‌ಗೆ ತರಬೇತಿ ನೀಡುವ ವಿಚಾರದಲ್ಲಿ ಯಾವುದೇ ಲೋಪ ಆಗಿಲ್ಲ. ತರಬೇತಿಗೆ ಕೇಂದ್ರ 75 ಲಕ್ಷ ರೂ. ಖರ್ಚು ಮಾಡಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು, 1,200 ದಾದಿಯರ ನೇಮಕ: ಶರಣಪ್ರಕಾಶ್‌ ಪಾಟೀಲ್

    ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕರು ವಿನೇಶ್ ವಿಚಾರದಲ್ಲಿ ಕೇಂದ್ರದ ನಿಲುವು ಸರಿಯಿಲ್ಲ ಎಂದರು. ಬಳಿಕ ವಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿ, ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: 20 ಲಕ್ಷ ಕೋಟಿ ಮಾರುಕಟ್ಟೆ ಬಂಡವಾಳ ಮೌಲ್ಯ ತಲುಪಿದ ಭಾರತದ ಮೊದಲ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್

    ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿನೇಶ್‌ ಅವರನ್ನು ಹೊರಗಿಡುವ ವಿಚಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಭಾರತೀಯ ಒಲಿಂಪಿಕ್ಸ್‌ ಅಸೋಸಿಯೇಷನ್‌ ಮುಖ್ಯಸ್ಥೆ ಪಿ.ಟಿ ಉಷಾ ಅವರಿಗೆ ಸೂಚಿಸಿದ್ದರು. ಈ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾಗಿದ್ದ ವಿನೇಶ್‌ ಅವರನ್ನು ಭೇಟಿಯಾದ ಪಿ.ಟಿ ಉಷಾ ಅವರು, ಎಲ್ಲ ರೀತಿಯಿಂದಲೂ ಅಗತ್ಯ ಸಹಕಾರ ನೀಡುವುದಾಗಿ ಧೈರ್ಯ ಹೇಳಿದ್ದರು. ಇದನ್ನೂ ಓದಿ: ತಲೆಗೂದಲು ಕಟ್‌, ರಕ್ತ ಹೊರತೆಗೆತ, ಕಠಿಣ ವ್ಯಾಯಾಮ, ಆಹಾರದಿಂದ ದೂರ – ತೂಕ ಇಳಿಸಲು ಏನೆಲ್ಲಾ ಮಾಡಿದ್ರು ವಿನೇಶ್‌? 

  • ತೀವ್ರ ಕೋವಿಡ್‌ ಸಮಸ್ಯೆ ಎದುರಿಸಿದವರು ಹೃದಯಾಘಾತದಿಂದ ಪಾರಾಗಲು ಕಠಿಣ ವ್ಯಾಯಾಮ ಬಿಡಿ: ಮನ್ಸುಖ್ ಮಾಂಡವಿಯಾ

    ತೀವ್ರ ಕೋವಿಡ್‌ ಸಮಸ್ಯೆ ಎದುರಿಸಿದವರು ಹೃದಯಾಘಾತದಿಂದ ಪಾರಾಗಲು ಕಠಿಣ ವ್ಯಾಯಾಮ ಬಿಡಿ: ಮನ್ಸುಖ್ ಮಾಂಡವಿಯಾ

    ಗಾಂಧಿನಗರ: ಕೋವಿಡ್‌-19 ಸೋಂಕಿಗೆ ತುತ್ತಾಗಿ ತೀವ್ರ ಸಮಸ್ಯೆ ಎದುರಿಸಿದವರು ಹೃದಯಾಘಾತದಿಂದ (Heart Attack) ಪಾರಾಗಲು ಕನಿಷ್ಠ ಒಂದರಿಂದ ಎರಡು ವರ್ಷಗಳ ಕಾಲ ಕಠಿಣ ವ್ಯಾಯಾಮ ಹಾಗೂ ಅತಿಯಾದ ಶ್ರಮದ ಕೆಲಸಗಳಲ್ಲಿ ತೊಡಗದಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) ಸಲಹೆ ನೀಡಿದ್ದಾರೆ.

    ನವರಾತ್ರಿ ಹಬ್ಬದ ಆಚರಣೆ ವೇಳೆ ಗರ್ಬಾ ನೃತ್ಯದಲ್ಲಿ ತೊಡಗಿದ್ದಾಗ 10 ಮಂದಿ ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ತೀವ್ರವಾಗಿ ಕಾಡಿದ್ದ ಕೋವಿಡ್-19ನ (COVID-19) ಪ್ರಭಾವ ಕಡಿಮೆಯಾಗಿ ಇನ್ನೂ ಸಾಕಷ್ಟು ನಮಯ ಕಳೆದಿಲ್ಲ. ಹೀಗಿರುವಾಗ ನಾವು ನಮ್ಮ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರ ಚೇಂಜ್ ಮಾಡುವ ಶಕ್ತಿ ನಮ್ಮ ಸಮಾಜದ ಲೀಡರ್‌ಗಳಿಗಿದೆ- ಖರ್ಗೆ ಆಪ್ತ ಶಾಸಕನಿಂದ ಹೊಸ ಬಾಂಬ್

    ಐಸಿಎಂಆರ್ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯಲ್ಲಿ ಕೋವಿಡ್‌ ಸಂತ್ರಸ್ತರು ಹೃದಯಾಘಾತವನ್ನು ತಪ್ಪಿಸಲು ಕನಿಷ್ಠ ಒಂದು ವರ್ಷ ಅಥವಾ ಎರಡು ವರ್ಷಗಳ ಕಾಲ ಅತಿಯಾದ ಆಯಾಸವಾಗುವಂತಹ ಕೆಲಸ, ಓಟ ಹಾಗೂ ಕಠಿಣ ವ್ಯಾಯಾಮದಲ್ಲಿ ತೊಡಗದಂತೆ ಉಲ್ಲೇಖಿಸಿದೆ. ಈ ಕಾರಣದಿಂದಾಗಿ ಜನರು ಎಚ್ಚರಿಕೆಯಿಂದ ಇರಬೇಕು. ಕೋವಿಡ್ ಸಮಸ್ಯೆಯಿಂದ ಬಳಲಿ ಗುಣಮುಖರಾದವರು ಈ ಬಗ್ಗೆ ಮತ್ತಷ್ಟು ಜಾಗ್ರತೆ ವಹಿಸಬೇಕು. ಹೃದಯಾಘಾತದಿಂದ ತಪ್ಪಿಸಿಕೊಳ್ಳಲು ಇದು ಸರಿಯಾದ ಮಾರ್ಗ ಎಂದು ಅವರು ಹೇಳಿದ್ದಾರೆ.

    ಇತ್ತೀಚೆಗೆ ಗುಜರಾತಿನ ಗಾರ್ಬಾ ನೃತ್ಯದಲ್ಲಿ ತೊಡಗಿದ್ದ ಹತ್ತಕ್ಕೂ ಹೆಚ್ಚು ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದರು. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಹಗರಣ- ಮನೀಶ್ ಸಿಸೋಡಿಯಾ ಜಾಮೀನು ನಿರಾಕರಿಸಿದ ಸುಪ್ರೀಂ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೈದ್ಯರು ಜೆನೆರಿಕ್‌ ಔಷಧಗಳನ್ನೇ ಶಿಫಾರಸು ಮಾಡಬೇಕೆಂಬ NMC ಆದೇಶಕ್ಕೆ ತಡೆ

    ವೈದ್ಯರು ಜೆನೆರಿಕ್‌ ಔಷಧಗಳನ್ನೇ ಶಿಫಾರಸು ಮಾಡಬೇಕೆಂಬ NMC ಆದೇಶಕ್ಕೆ ತಡೆ

    ನವದೆಹಲಿ: ಜೆನೆರಿಕ್‌ ಔಷಧಗಳ (Generic Medicines) ಹೊರತಾಗಿ ಬೇರೆ ಔಷಧಗಳನ್ನು ವೈದ್ಯರು (Doctors) ಶಿಫಾರಸು ಮಾಡದಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಹೊರಡಿಸಿದ್ದ ಆದೇಶವನ್ನ ತಡೆಹಿಡಿಯಲಾಗಿದೆ.

    ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA) ಮತ್ತು ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನ ಸಂಪರ್ಕಿಸಿದ ನಂತರ ಈ ಬೆಳಗಣಿಗೆ ಕಂಡುಬಂದಿದೆ. ಇದನ್ನೂ ಓದಿ: ಚಂದ್ರನ ಮೇಲೆ ಭಾರತ – 14 ದಿನಗಳ ನಂತ್ರ ವಿಕ್ರಮ್‌ ಲ್ಯಾಂಡರ್‌, ಪ್ರಗ್ಯಾನ್‌ ರೋವರ್‌ ಕಥೆ ಏನು?

    ರಾಷ್ಟ್ರೀಯ ವೈದ್ಯಕೀಯ ಆಯೋಗದ ನೋಂದಾಯಿತ ವೈದ್ಯಕೀಯ ಪ್ರಾಕ್ಟೀಷನರ್ (ವೃತ್ತಿಪರ ನಡವಳಿಕೆ) ನಿಯಮಗಳು, 2023, ಇತರ ನಿರ್ದೇಶನಗಳೊಂದಿಗೆ ವೈದ್ಯರಿಗೆ ಜೆನೆರಿಕ್ ಔಷಧಿಗಳ ಪ್ರಿಸ್ಕ್ರಿಪ್ಷನ್ ಅನ್ನು ಕಡ್ಡಾಯಗೊಳಿಸಿದೆ. ಬ್ರಾಂಡೆಡ್ ಔಷಧಿಗಳಿಗಿಂತ ಜೆನೆರಿಕ್ ಔಷಧಿಗಳು 30% ರಿಂದ 80% ರಷ್ಟು ಅಗ್ಗವಾಗಿರುವುದರಿಂದ, ಈ ಹೊಸ ನಿಯಮವು ಆರೋಗ್ಯ ವೆಚ್ಚವನ್ನು ಕಡಿಮೆ ಮಾಡುತ್ತದೆ ಎಂದು ಆಯೋಗ ಹೇಳಿದೆ. ಆದ್ರೆ ಆಯೋಗದ ಅಧಿಸೂಚನೆ ವಿರುದ್ಧ ವೈದ್ಯರು ತಿರುಗಿಬಿದ್ದಿದ್ದಾರೆ. ಭಾರತದಲ್ಲಿ ಜೆನೆರಿಕ್‌ ಔಷಧಗಳ ಗುಣಮಟ್ಟ ಕಳಪೆಯಾಗಿದೆ, ಇದರಿಂದ ರೋಗಿಗಳಿಗೆ ಅಪಾಯ ಉಂಟಾಗಲಿದೆ ಎಂದು ವಾದಿಸಿದ್ದಾರೆ.

    ಈ ನಡುವೆ ಬ್ರಾಂಡೆಡ್ ಜೆನೆರಿಕ್‌ ಔಷಧಗಳನ್ನು ಸೂಚಿಸದ ನೋಂದಾಯಿತ ವೈದ್ಯಕೀಯ ವೈದ್ಯರ ವಿರುದ್ಧ ಕಠಿಣ ಶಿಸ್ತುಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್‌) ಅರ್ಜಿ ಸಲ್ಲಿಸಲಾಗಿದೆ. ಇದನ್ನೂ ಓದಿ: Breaking- ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಹಿರಿಯ ಪತ್ರಕರ್ತ ಸುಬ್ರಮಣ್ಯ ಬಾಡೂರು (ಬಾನಾಸು)ಗೆ ರಾಷ್ಟ್ರೀಯ ಗರಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ: ಬೊಮ್ಮಾಯಿ

    ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ: ಬೊಮ್ಮಾಯಿ

    ಬೆಂಗಳೂರು: ಸಿಲಿಕಾನ್‌ ಸಿಟಿಯ ನಾಗರಿಕರ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಅತಿ ಹೆಚ್ಚಿನ ಗಮನವನ್ನು ನೀಡಲಾಗಿದ್ದು, ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ವತಿಯಿಂದ ಜಯನಗರದಲ್ಲಿ ಆಯೋಜಿಸಿದ್ದ ಜನೌಷಧಿ ದಿವಸ್ ಆಚರಣೆ-2023 ಮತ್ತು 100ನೇ ಜನೌಷಧಿ ಕೇಂದ್ರವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿ ಮಾತನಾಡಿದರು.

    ಬೆಂಗಳೂರಿನ (Bengaluru) ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು, ಪ್ರತಿ ವಾರ್ಡಿಗೆ ನಮ್ಮ ಕ್ಲಿನಿಕ್ ಪ್ರಾರಂಭ ಮಾಡಲಾಗಿದೆ. ಈಗಾಗಲೇ 100 ಪ್ರಾರಂಭ ಮಾಡಲಾಗಿದ್ದು, ಇನ್ನೂ ನೂರು ಇದೇ ವಾರದಲ್ಲಿ ಪ್ರಾರಂಭಿಸಲಾಗುತ್ತಿದೆ. 240 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭವಾಗುತ್ತಿದೆ. ಸುಮಾರು 19 ಪಿ.ಹೆಚ್.ಸಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. 4 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಎಲ್ಲೆಡೆ ಜನೌಷಧ ಕೇಂದ್ರಗಳನ್ನು ತೆರೆಯಲಾಗಿದೆ. ಇಂದು ಸಂಚಾರಿ ಆಸ್ಪತ್ರೆಯನ್ನೂ ಹಾಗೂ ಡಯಾಲಿಸಿಸ್ ಕೇಂದ್ರವನ್ನೂ ಉದ್ಘಾಟಿಸಲಾಗಿದ್ದು, ರೋಗಿಗಳ ಮುಖದಲ್ಲಿ ಮಂದಹಾಸ ನೋಡಿದಾಗ ಸಾರ್ಥಕ ಭಾವ ಮೂಡುತ್ತದೆ ಎಂದು ತಿಳಿಸಿದರು.

    ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಮತ್ತು ಬಡವರ ಬಗ್ಗೆ ಅವರಿಗಿರುವ ಕಾಳಜಿಯನ್ನು ತೋರಿಸುತ್ತದೆ. ಅವರು ಪ್ರಧಾನಿಯಾಗುವ ಮುನ್ನ ಅತ್ಯಂತ ಕಡಿಮೆ ದರದಲ್ಲಿ ಔಷಧಗಳನ್ನು ನೀಡುವ ಕಾರ್ಯಕ್ರಮ ಇರಲಿಲ್ಲ. ಆಡಳಿತಗಾರರಿಗೆ ಸೂಕ್ಷ್ಮಾತಿಸೂಕ್ಷ್ಮ ವಿಷಯಗಳ ಬಗ್ಗೆ ಕಳಕಳಿ ಇರಬೇಕು. ಬಡತನವನ್ನು ಅನುಭವಿಸಿದಾಗ, ಹತ್ತಿರದಿಂದ ನೋಡಿ ಬಡವರ ಸಂಕಷ್ಟವನ್ನು ತಿಳಿದುಕೊಂಡಾಗ ಮಾತ್ರ ಬರುತ್ತದೆ. ನರೇಂದ್ರ ಮೋದಿಯವರಿಗೆ ಬಡತನ ಎಂದರೇನು ಎಂದು ತಿಳಿದಿದೆ. ನೂರು ರೂ.ಗಳೂ ಸಹ ಇಲ್ಲದ ಸ್ಥಿತಿಯಲ್ಲಿರುತ್ತಾರೆ. ಔಷಧಿ ಕಂಪನಿಗಳ ದರ ದಕ್ಕೆ ಹತ್ತುಪಟ್ಟು ಮಾಡಿರುತ್ತಾರೆ. ಬಡವರ ಕಷ್ಟವನ್ನು ಅರ್ಥಮಾಡಿಕೊಂಡಿರುವ ಪ್ರಧಾನಿಗಳು ಬಡವರಿಗಾಗಿ ಸುಲಭ ಮತ್ತು ಕಡಿಮೆ ದರದಲ್ಲಿ ದೊರೆಯಬೇಕೆಂದು, ಗುಣಮುಖರಾಗಿ ಆರೋಗ್ಯವಂತರಾಗಬೇಕು. ಭಾರತ ಸಶಕ್ತವಾಗಬೇಕಾದರೆ, ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳು ತಲುಪಬೇಕೆಂದು ಇಂಥ ಕಾರ್ಯಕ್ರಮ ರೂಪಿಸಿದ್ದಾರೆ ಎಂದರು.

    ಆರೋಗ್ಯಕ್ಕೆ ಮೊದಲು ಅಗತ್ಯವಿರುವುದು ಶುದ್ಧವಾದ ನೀರು, ದೇಶದ ಗ್ರಾಮಗಳಲ್ಲಿರುವ ಎಲ್ಲರ ಮನೆಗೆ ಮುಂದಿನ 5 ವರ್ಷಗಳಲ್ಲಿ ನೀರು ಕೊಡುವುದಾಗಿ ಘೋಷಿಸಿದ್ದ ಪ್ರಧಾನಿಗಳು, ನಾಯಕನಿಗೆ ಬದ್ಧತೆ, ಛಲ. ಬುದ್ಧಿವಂತಿಕೆ ಹಾಗೂ ಬುದ್ಧಿವಂತಿಕೆಗೆ ಹಣ ಕೊಡುವ ಹೃದಯ ವೈಶಾಲ್ಯವಿದ್ದರೆ ಅದು ಸಾಧ್ಯವಿದೆ. ಜಲ್ ಜೀವನ್ ಮಿಷನ್ ಅಡಿಯಲ್ಲಿ ಅಸಾಧ್ಯವಾದುದ್ದನ್ನು ಸಾಧ್ಯ ಮಾಡಲಾಗುತ್ತಿದೆ. ಅಸಾಧ್ಯವಾದುದನ್ನು ಸಾಧ್ಯ ಮಾಡುವುದೇ ನಿಜವಾದ ನಾಯಕತ್ವ. 10 ಕೋಟಿಗಳಿಂತ ಹೆಚ್ಚು ಮನೆಗಳಿಗೆ ಮೋದಿಯವರು ಶುದ್ಧವಾದ ಕುಡಿಯುವ ನೀರನ್ನು ಕೊಡುತ್ತಿದ್ದಾರೆ. ಕರ್ನಾಟಕ ಒಂದರಲ್ಲಿಯೇ 72 ವರ್ಷ ಕೇವಲ 25 ಲಕ್ಷ ಮನೆಗಳಿಗೆ ನೀರು ಕೊಡಲಾಗಿತ್ತು. ಕಳೆದ ಮೂರು ವರ್ಷಗಳಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರನ್ನು ಒದಗಿಸಲಾಗಿದೆ. ಇದು ಬದ್ಧತೆಯ ನಾಯಕತ್ವ, ಹಾಗೂ ಬದ್ಧತೆ ಎಂದರು.

    ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಕೂಡ ಕ್ರಿಯಾಶೀಲ ಸಚಿವರು. ರಾಜ್ಯಕ್ಕೆ ಹೆಚ್ಚುವರಿ ಲಸಿಕೆಯನ್ನು ಒದಗಿಸಿದ್ದಲ್ಲದೇ ಯೂರಿಯಾ ಕೊರತೆಯಾದಾಗಲೂ ಆದೇಶ ಮಾಡಿ ಕೊರತೆ ನೀಗಿಸಿದ್ದರು ಎಂದು ಸ್ಮರಿಸಿದರು.

    ಸಂಸದ ತೇಜಸ್ವಿ ಸೂರ್ಯ ಅವರ ಕ್ಷೇತ್ರದಲ್ಲಿ ನೂರನೇ ಜನೌಷಧಿ ಕೇಂದ್ರ ಉದ್ಘಾಟನೆಗೊಂಡಿದ್ದು, ಇಡೀ ದೇಶದಲ್ಲಿ ಸಂಸದರೊಬ್ಬರ ಕ್ಷೇತ್ರದಲ್ಲಿ ಇರುವುದು ಒಂದು ದಾಖಲೆ. ಇದು ಜನಪರ ಕಾಳಜಿಯನ್ನು ತೋರಿಸುತ್ತದೆ ಎಂದರು. ವಾಸವಿ ಚಾರಿಟಬಲ್ ಆಸ್ಪತ್ರೆಗೆ ಅಭಿನಂದನೆಗಳನ್ನು ಸಲ್ಲಿಸಿದ ಅವರು ಕೆ.ಎಸ್.ಆರ್.ಟಿ.ಸಿ ಯಲ್ಲಿ ಆಸ್ಪತ್ರೆಯಾಗಿ ಪರಿವರ್ತನೆ ಮಾಡಿರುವುದನ್ನು ದತ್ತು ಪಡೆದು ಡಯಾಲಿಸ್ ಕೇಂದ್ರ ತೆರೆದು ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಎಂದರು. ಸಚಿವ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • ಶೀಘ್ರವೇ 2ನೇ ಬೂಸ್ಟರ್ ಡೋಸ್? – ಕೇಂದ್ರ ಆರೋಗ್ಯ ಸಚಿವರಿಗೆ ವೈದ್ಯಾಧಿಕಾರಿಗಳ ಡಿಮಾಂಡ್

    ಶೀಘ್ರವೇ 2ನೇ ಬೂಸ್ಟರ್ ಡೋಸ್? – ಕೇಂದ್ರ ಆರೋಗ್ಯ ಸಚಿವರಿಗೆ ವೈದ್ಯಾಧಿಕಾರಿಗಳ ಡಿಮಾಂಡ್

    ನವದೆಹಲಿ: ನೆರೆಯ ರಾಷ್ಟ್ರ ಚೀನಾದಲ್ಲಿ (China) ಕೋವಿಡ್-19 (Covid-19) ಪ್ರಕರಣಗಳು ಹಠಾತ್ತನೆ ಏರಿಕೆ ಕಾಣುತ್ತಿರುವುದರಿಂದ ಭಾರತದಲ್ಲಿ (India) ಮತ್ತೊಂದು ಅಲೆಯ ಭೀತಿಯನ್ನು ಹುಟ್ಟುಹಾಕಿದೆ. ಇದೀಗ ಕೇಂದ್ರ ಸರ್ಕಾರ ಕಟ್ಟುನಿಟ್ಟಾದ ಮಾರ್ಗಸೂಚಿಗಳು ಹಾಗೂ ಸಲಹೆಗಳನ್ನು ನೀಡುವ ಮೂಲಕ ಸೋಂಕು ಹರಡುವಿಕೆ ವಿರುದ್ಧ ಹೋರಾಡಲು ಸಜ್ಜಾಗಿದೆ.

    ಭಾರತದಲ್ಲಿ ಕೊರೊನಾ (Corona) ಹರಡುವುದನ್ನು ತಡೆಗಟ್ಟುವ ಪ್ರಯತ್ನದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಭಾರತೀಯ ವೈದ್ಯಕೀಯ ಸಂಘದ (IMA) ವೈದ್ಯರು ಹಾಗೂ ಆರೋಗ್ಯ ತಜ್ಞರೊಂದಿಗೆ ಸಭೆ ನಡೆಸಿದ್ದಾರೆ. ಕೋವಿಡ್ ಮತ್ತೆ ಭಾರತಕ್ಕೆ ಪ್ರವೇಶಿಸಿದರೆ ಅದರ ಹರಡುವಿಕೆಯನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

    ಚರ್ಚೆಯ ವೇಳೆ ವೈದ್ಯಾಧಿಕಾರಿಗಳು ದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ತಡೆಗಟ್ಟಲು ಕೋವಿಡ್-19 ಲಸಿಕೆಯ 2ನೇ ಬೂಸ್ಟರ್ ಡೋಸ್‌ಗೆ ಅನುಮತಿ ನೀಡುವಂತೆ ಮನ್ಸುಖ್ ಮಾಂಡವಿಯಾ ಅವರನ್ನು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಕೊರೊನಾ ಭೀತಿಗೆ ಶಿಕ್ಷಣ ಇಲಾಖೆ ಅಲರ್ಟ್- ಶಾಲಾ-ಕಾಲೇಜುಗಳಲ್ಲಿ ಕೆಲ ನಿಯಮ ಜಾರಿಗೆ ಚಿಂತನೆ

    ವರದಿಗಳ ಪ್ರಕಾರ, ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಅನ್ನು ನೀಡಲು 1 ವರ್ಷದ ಹಿಂದೆ ಪ್ರಾರಂಭಿಸಲಾಯಿತು. ಸಮಯ ಕಳೆದಂತೆ ಲಸಿಕೆಯ ಪ್ರತಿರಕ್ಷೆ ಕ್ಷೀಣಿಸುವುದರಿಂದ ಅಪಾಯದಲ್ಲಿರುವ ಜನರಿಗೆ, ವಿಶೇಷ ವೈದ್ಯರಿಗೆ, ನರ್ಸ್‌ಗಳಿಗೆ, ಇತರ ಆಸ್ಪತ್ರೆ ಸಿಬ್ಬಂದಿಗೆ 4ನೇ ಮುನ್ನೆಚ್ಚರಿಕಾ ಲಸಿಕೆಯನ್ನು ಪಡೆಯಲು ಅನುಮತಿ ನೀಡುವಂತೆ ಸಚಿವರನ್ನು ಕೇಳಲಾಗಿದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

    ದೇಶದಲ್ಲಿ ಕೋವಿಡ್‌ನ ಹೊಸ ರೂಪಾಂತರಗಳು ಹರಡುವುದನ್ನು ತಡೆಯಲು ಜನನಿಬಿಡ ಸ್ಥಳಗಳು ಹಾಗೂ ಹಲವಾರು ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್‌ಗಳ ಬಳಕೆಯನ್ನು ಕಡ್ಡಾಯಗೊಳಿಸಬೇಕೆಂದು ವೈದ್ಯರು ಸೂಚಿಸಿದ್ದಾರೆ. ಮಾಸ್ಕ್ ಕಡ್ಡಾಯವನ್ನು ಕಟ್ಟುನಿಟ್ಟಾಗಿ ಹೇರಬೇಕು ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ. ಇದನ್ನೂ ಓದಿ: 8 ತಿಂಗಳು ಬಂದ್ ಆಗಲಿದೆ ತಿರುಪತಿಯ ಗರ್ಭಗುಡಿ!

    Live Tv
    [brid partner=56869869 player=32851 video=960834 autoplay=true]

  • ಸೈಕಲ್ ರೈಡ್‌ನಲ್ಲಿ ಸಂಸತ್ತಿಗೆ ಬಂದ ಕೇಂದ್ರ ಆರೋಗ್ಯ ಸಚಿವ

    ಸೈಕಲ್ ರೈಡ್‌ನಲ್ಲಿ ಸಂಸತ್ತಿಗೆ ಬಂದ ಕೇಂದ್ರ ಆರೋಗ್ಯ ಸಚಿವ

    ನವದೆಹಲಿ: ಸೈಕಲ್ ಮೂಲಕವಾಗಿ ಕೇಂದ್ರ ಆರೋಗ್ಯ ಸಚಿವ ಮನ್‍ಸುಖ್ ಮಾಂಡವಿಯಾ ಅವರು ಸಂಸತ್ತಿಗೆ ಬಂದಿದ್ದಾರೆ. ಈ ವೀಡೀಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    2021ರ ನವೆಂಬರ್‌ನಲ್ಲಿ ಭಾರತ ಅಂತರಾಷ್ಟ್ರೀಯ ವ್ಯಾಪಾರ ಮೇಳದಲ್ಲಿ ಹೆಲ್ತ್ ಪೆವಿಲಿಯನ್ ಅನ್ನು ಉದ್ಘಾಟಿಸಲು ಮತ್ತು ಹೆಚ್ಚುತ್ತಿರುವ ಮಾಲಿನ್ಯ, ಆರೋಗ್ಯ ಜಾಗೃತಿ ಮತ್ತು ಫಿಟ್‍ನೆಸ್‍ಗೆ ಜನರನ್ನು ಪ್ರೇರೇಪಿಸಲು  ಸೈಕಲ್ ಸವಾರಿ ಮಾಡಿದ್ದರು. ಕೇಂದ್ರ ಸಚಿವರು ಮನೆಯಿಂದ ಸಂಸತ್ತಿಗೆ ಸೈಕಲ್ ಮೂಲಕ ಬರುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಹಲವಾರು ಸಂದರ್ಭಗಳಲ್ಲಿ, ಅವರು ಆರೋಗ್ಯ ಜಾಗೃತಿಗಾಗಿ ಸಂದೇಶವನ್ನು ಕಳುಹಿಸಲು ಸೈಕಲ್ ಸವಾರಿ ಮಾಡಿದ್ದಾರೆ. ಇದನ್ನೂ ಓದಿ:  ಬಿಜೆಪಿಗೆ ಸೇರಿದರೆ ನನ್ನನ್ನು ಹೇಮಾ ಮಾಲಿನಿಯಾಗಿ ಮಾಡುತ್ತಿದ್ದರು: ಜಯಂತ್ ಚೌಧರಿ

    2022-23ರ ಕೇಂದ್ರ ಬಜೆಟ್‍ನಲ್ಲಿ ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆಯ ಘೋಷಣೆಯನ್ನು ಸಚಿವ ಮಾಂಡವಿಯಾ ಮಂಗಳವಾರ ಶ್ಲಾಘಿಸಿದರು. ಇದು ನಾಗರಿಕರ ಜೀವನ ಸೌಕರ್ಯವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ಸ್ವಾವಲಂಬಿ ಭಾರತವನ್ನಾಗಿಸಲು ಮತ್ತು ಉದ್ದೇಶಿತ ಅಂತ್ಯೋದಯ ಯೋಜನೆಗಳನ್ನು ಬಲಪಡಿಸಲು ಬಜೆಟ್ ಪರಿಣಾಮಕಾರಿ ಎಂದು ಸಾಬೀತುಪಡಿಸಿದೆ ಎಂದು ಮಾಂಡವೀಯ ಹೇಳಿದರು. ಇದನ್ನೂ ಓದಿ:  ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ

  • ಭಾರತದಲ್ಲಿ ಓಮಿಕ್ರಾನ್‌ ಪತ್ತೆಯಾಗಿಲ್ಲ: ಕೇಂದ್ರ ಆರೋಗ್ಯ ಸಚಿವ

    ಭಾರತದಲ್ಲಿ ಓಮಿಕ್ರಾನ್‌ ಪತ್ತೆಯಾಗಿಲ್ಲ: ಕೇಂದ್ರ ಆರೋಗ್ಯ ಸಚಿವ

    ನವದೆಹಲಿ: ಕೊರೊನಾ ವೈರಸ್‌ ರೂಪಾಂತರ ಓಮಿಕ್ರನ್‌ಗೆ ಸಂಬಂಧಿಸಿದ ಒಂದೇ ಒಂದು ಪ್ರಕರಣ ಕೂಡ ಈವರೆಗೂ ದಾಖಲಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಮನುಸುಖ್‌ ಮಾಂಡವೀಯ ಹೇಳಿದ್ದಾರೆ.

    ರಾಜ್ಯಸಭೆಯಲ್ಲಿ ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಶಂಕಿತ ಪ್ರಕರಣಗಳನ್ನು ತ್ವರಿತವಾಗಿ ಪರೀಕ್ಷೆಗೆ ಒಳಪಡಿಸುತ್ತಿದ್ದೇವೆ. ಜಿನೋಮ್‌ ಅನುಕ್ರಮಗಳನ್ನು ಪಾಲಿಸುತ್ತಿದ್ದೇವೆ. ಕೊರೊನಾ ಸಾಂಕ್ರಾಮಿಕದಿಂದ ನಾವು ಈಗಾಗಲೇ ಬಹಳಷ್ಟು ಕಲಿತಿದ್ದೇವೆ. ಪ್ರಸ್ತುತ ನಮ್ಮಲ್ಲಿ ಸಾಕಷ್ಟು ಪ್ರಯೋಗಾಲಯಗಳು, ಸಂಪನ್ಮೂಲಗಳಿವೆ. ಈ ಸಂದಿಗ್ಧತೆಯನ್ನು ನಿರ್ವಹಿಸಲು ನಾವು ಸಮರ್ಥರಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ರೂಪಾಂತರಿ ನಮ್ಮ ದೇಶದಲ್ಲೂ ಇರಬಹುದು: ಡಾ.ಸಿ.ಎಸ್ ಮಂಜುನಾಥ್

    ಐಸಿಎಂಆರ್‌ ಸಾಂಕ್ರಾಮಿಕ ರೋಗತಜ್ಞ ಡಾ. ಸಮಿರಾನ್‌ ಪಾಂಡೆ ಅವರು ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿ, ಭಾರತದಲ್ಲಿ ಓಮಿಕ್ರಾನ್‌ ಹೊಸ ತಳಿ ಪತ್ತೆಯಾಗುವುದರೆ ಯಾವುದೇ ಅಚ್ಚರಿ ಪಡಬೇಕಾಗಿಲ್ಲ. ಅದು ತುಂಬಾ ವೇಗವಾಗಿ ಹರಡುವ ತಳಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದರು. ಇದನ್ನೂ ಓದಿ: OMICRON ಸೋಂಕಿಗೆ ಪ್ರತ್ಯೇಕ ಆಸ್ಪತ್ರೆ: ದೆಹಲಿ ಸರ್ಕಾರ

    ಇದಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರದ ಆರೋಗ್ಯ ಸಚಿವರು ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾಗಿರುವ ಓಮಿಕ್ರಾನ್‌ ತಳಿ ಈಗ ಯುಕೆ, ಜರ್ಮನಿ, ಜಪಾನ್‌, ಹಾಂಗ್‌ಕಾಂಗ್‌ಗೂ ಹರಡಿದೆ. ಆದರೆ ಭಾರತದಲ್ಲಿ ಈವರೆಗೂ ಹೊಸ ತಳಿಯ ಒಂದು ಪ್ರಕರಣವೂ ದೃಢಪಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

  • ಗುಜರಾತ್ ಮುಂದಿನ ಸಿಎಂ ಯಾರು?- ಪಟೇಲ್ ಸಮುದಾಯಕ್ಕೆ ಮಣೆ ಹಾಕುವ ಚಿಂತನೆ

    ಗುಜರಾತ್ ಮುಂದಿನ ಸಿಎಂ ಯಾರು?- ಪಟೇಲ್ ಸಮುದಾಯಕ್ಕೆ ಮಣೆ ಹಾಕುವ ಚಿಂತನೆ

    ಗಾಂಧಿನಗರ: ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೂತನ ಸಿಎಂ ಯಾರಾಗಲಿದ್ದಾರೆ ಎಂಬುದು ಕೂತುಹಲ ಮೂಡಿಸಿದೆ.

    ಕರ್ನಾಟಕದಂತೆ ಗುಜರಾತ್‍ನಲ್ಲೂ ನಾಯಕತ್ವ ಬದಲಾವಣೆಯಾಗಿದ್ದು, ಇಂದು ಅಥವಾ ನಾಳೆ ನೂತನ ಸಿಎಂ ಆಯ್ಕೆ ಮಾಡವ ಸಾಧ್ಯತೆ ಇದೆ. ಮುಂದಿನ ಸಿಎಂ ಆಯ್ಕೆ ಮಾಡುವ ಬಗ್ಗೆ ಈಗಾಗಲೇ ಚರ್ಚೆ ನಡೆಯುತ್ತಿದ್ದು, ಪಟೇಲ್ ಸಮುದಾಯಕ್ಕೆ ಮಣೆ ಹಾಕಲು ಚಿಂತನೆ ನಡೆಸಲಾಗಿದೆ ಎಂದು ಅವರದಿಯಾಗಿದೆ. ಉಪ ಮುಖ್ಯಮಂತ್ರಿ ನಿತಿನ್ ಪಟೇಲ್, ರಾಜ್ಯ ಕೃಷಿ ಸಚಿವರಾದ ಆರ್.ಸಿ ಫಾಲ್ಡು, ಕೇಂದ್ರ ಸಚಿವರಾದ ಪುರುಷೋತ್ತಮ್ ರೂಪಾಲ, ಮನ್ಸುಖ್ ಮಾಂಡವೀಯ ಸೇರಿದಂತೆ ಕೆಲ ನಾಯಕರ ಹೆಸರುಗಳು ನೂತನ ಸಿಎಂ ಸ್ಥಾನಕ್ಕೆ ಕೇಳಿಬರುತ್ತಿದೆ. ಇದನ್ನೂ ಓದಿ: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ

    ಗುಜರಾತ್‍ನಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ಒಂದು ವರ್ಷವಷ್ಟೇ ಬಾಕಿ ಇದೆ. ಈ ನಡುವೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಹೈಕಮಾಂಡ್ ಯಾವುದೇ ಕಾರಣವನ್ನೂ ತಿಳಿಸದೇ ಸಿಎಂ ಬದಲಾವಣೆ ಮಾಡಿರುವುದು ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

    ಈ ಮಧ್ಯೆ ರಾಜೀನಾಮೆ ಬಳಿಕ ಮಾತನಾಡಿದ ವಿಜಯ್ ರೂಪಾನಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ನಾಯಕರಿಗೆ ಧನ್ಯವಾದ ತಿಳಿಸುತ್ತೇನೆ. ಗುಜರಾತ್ ಪ್ರಗತಿಗೆ ಹೊಸ ನಾಯಕತ್ವ ಬರಬೇಕೆಂದು ನಾನು ನಂಬುತ್ತೇನೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದರು. ಇದನ್ನೂ ಓದಿ: ನೈಟ್ ಕರ್ಫ್ಯೂ ಹೊತ್ತಲ್ಲಿ ಯುವಜನತೆಯ ಮೋಜು ಮಸ್ತಿ – ಪೊಲೀಸರ ಮುಂದೆಯೇ ಬಿಂದಾಸ್ ಸುತ್ತಾಟ

    ಇದೀಗ ಹೊಸ ನಾಯಕರ ರೇಸ್ ನಲ್ಲಿ ಪಟೇಲ್, ಫಾಲ್ಡು, ರೂಪಾಲ, ಮಾಂಡವೀಯ ಹೆಸರುಗಳು ಹೆಚ್ಚಾಗಿ ಕೇಳಿಬರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬುದನ್ನು ನಿರ್ಧರಿಸಿದ್ದಾರೆ ಹಾಗಾಗಿ ಅಚ್ಚರಿಯ ಹೆಸರು ಸೇರ್ಪಡೆಗೊಂಡರು ಕೂಡ ಆಶ್ಚರ್ಯ ಪಡಬೇಕಾಗಿಲ್ಲ ಎಂಬ ಅಭಿಪ್ರಾಯವು ಕೇಳಿಬರುತ್ತಿದೆ.

    2016 ರಲ್ಲಿ ಆನಂದಿ ಬೆನ್ ಪಟೇಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗ, ನಿತಿನ್ ಪಟೇಲ್ ಮುಂದಿನ ಸಿಎಂ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಅಂತಿಮ ಕ್ಷಣದಲ್ಲಿ ರೂಪಾನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ನಿತಿನ್ ಪಟೇಲ್ ಅವರನ್ನೇ ಸಿಎಂ ಮಾಡಬೇಕೆಂಬ ಆಗ್ರಹ ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಕೇಂದ್ರ ಹೈಕಮಾಂಡ್ ಯಾವುದೇ ಗುಟ್ಟು ಬಿಟ್ಟುಕೊಡುತ್ತಿಲ್ಲ. ಇದನ್ನೂ ಓದಿ: ಚುನಾವಣೆ ಸಂದರ್ಭ ಮಾತ್ರವಲ್ಲ, ನಿರಂತರವಾಗಿ ಜನರ ಯೋಗಕ್ಷೇಮ ವಿಚಾರಿಸಬೇಕು: ಆರ್.ಅಶೋಕ್