Tag: Manushi Chhillar

  • ವೀರ್ ಪಹಾರಿಯಾ ಜೊತೆ ನಟಿ ಮಾನುಷಿ ಚಿಲ್ಲರ್ ಡೇಟಿಂಗ್

    ವೀರ್ ಪಹಾರಿಯಾ ಜೊತೆ ನಟಿ ಮಾನುಷಿ ಚಿಲ್ಲರ್ ಡೇಟಿಂಗ್

    ಮಾಜಿ ವಿಶ್ವ ಸುಂದರಿ, ಬಾಲಿವುಡ್ ಬೆಡಗಿ ಮಾನುಷಿ ಚಿಲ್ಲರ್ (Manushi Chhillar) ಇದೀಗ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಜಾನ್ವಿ ಕಪೂರ್ (Janhvi Kapoor) ಬಾಯ್‌ಫ್ರೆಂಡ್ ಶಿಖರ್ ಅವರ ಕಿರಿಯ ಸಹೋದರ ವೀರ್ ಪಹಾರಿಯಾ (Veer Pahariya) ಜೊತೆ ಮಾನುಷಿ ಡೇಟಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿ ಈಗ ಗಾಸಿಪ್‌ ಪ್ರಿಯರ ಬಾಯಿಗೆ ಆಹಾರವಾಗಿದೆ.

    ಅಂಬಾನಿ ಮನೆ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಇದೇ ಜು.12ಕ್ಕೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸದ್ಯ ಈ ಜೋಡಿಯ ಸಂಗೀತ ಕಾರ್ಯಕ್ರಮ ಮುಂಬೈನಲ್ಲಿ ಅದ್ಧೂರಿಯಾಗಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ವೀರ್ ಜೊತೆ ಮಾನುಷಿ ಚಿಲ್ಲರ್ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಇಬ್ಬರ ಬಗ್ಗೆ ಡೇಟಿಂಗ್ ಕುರಿತು ಗುಮಾನಿ ಹಬ್ಬಿದೆ. ಇದನ್ನೂ ಓದಿ:‘ಟೈಟಾನಿಕ್’ ಸಿನಿಮಾ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

     

    View this post on Instagram

     

    A post shared by Snehkumar Zala (@snehzala)

    ಇಬ್ಬರೂ ಲೈಟ್ ಬಣ್ಣದ ಧಿರಿಸಿನಲ್ಲಿ ಕಾಣಿಸಿಕೊಂಡಿದ್ದಾರೆ. ಕಪಲ್ ಡ್ರೆಸ್ ಕೋಡ್‌ನಲ್ಲಿ ಎಂಟ್ರಿ ಕೊಟ್ಟಿರೋದು ಚರ್ಚೆಯಾಗ್ತಿದೆ. ಇದು ನಿಜನಾ ಎಂದು ನಟಿ ಪ್ರತಿಕ್ರಿಯೆ ನೀಡುವವರೆಗೂ ಕಾಯಬೇಕಿದೆ. ಅಂದಹಾಗೆ, ಈ ಹಿಂದೆ ಉದ್ಯಮಿ ನಿಖಿಲ್ ಕಾಮತ್ ಜೊತೆ ಮಾನುಷಿ ಚಿಲ್ಲರ್ ಹೆಸರು ಸದ್ದು ಮಾಡಿತ್ತು.

    ಇನ್ನೂ 2022ರಲ್ಲಿ ಅಕ್ಷಯ್ ಕುಮಾರ್‌ಗೆ ನಾಯಕಿಯಾಗಿ ‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರದ ಮೂಲಕ ಬಾಲಿವುಡ್‌ಗೆ ನಟಿ ಎಂಟ್ರಿ ಕೊಟ್ಟರು.

  • ಅಕ್ಷಯ್ ಜೊತೆಗಿನ ವಯಸ್ಸಿನ ಅಂತರದ ಬಗ್ಗೆ ಮೌನ ಮುರಿದ ಮಾನುಷಿ ಚಿಲ್ಲರ್

    ಅಕ್ಷಯ್ ಜೊತೆಗಿನ ವಯಸ್ಸಿನ ಅಂತರದ ಬಗ್ಗೆ ಮೌನ ಮುರಿದ ಮಾನುಷಿ ಚಿಲ್ಲರ್

    ಟಿ ಮಾನುಷಿ ಚಿಲ್ಲರ್ (Manushi Chhillar) ಬಾಲಿವುಡ್‌ನ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಅಕ್ಷಯ್ ಕುಮಾರ್ (Akshay Kumar) ಜೊತೆಗಿನ 30 ವರ್ಷಗಳ ಅಂತರದ ಬಗ್ಗೆ ನಟಿ ಮಾತನಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿನ ಹಲವು ಟ್ರೋಲ್‌ಗಳ ಬಗ್ಗೆ ನಟಿ ಮೌನ ಮುರಿದಿದ್ದಾರೆ.

    ಅಕ್ಷಯ್ ಕುಮಾರ್, ಮಾನುಷಿ ಎರಡು ಸಿನಿಮಾಗಳು ಜೊತೆಯಾಗಿ ನಟಿಸಿದ್ದಾರೆ. ಅಕ್ಷಯ್‌ಗೆ 56 ವರ್ಷ, ಮಾನುಷಿಗೆ 26 ವರ್ಷವಾಗಿದ್ದು, ಇಬ್ಬರ ನಡುವೆ 30 ವರ್ಷಗಳ ಅಂತರವಿದೆ. ಈ ವಿಚಾರ ಕೀಳು ಮಟ್ಟದಲ್ಲಿ ಟ್ರೋಲ್ ಆಗಿತ್ತು. ಈ ಬಗ್ಗೆ ನಟಿಗೆ ಸಂದರ್ಶನವೊಂದರಲ್ಲಿ ಪ್ರಶ್ನೆ ಎದುರಾಗಿದೆ. ಇದನ್ನೂ ಓದಿ:ತೆಲುಗು ಚಿತ್ರಗಳಿಂದ ಶ್ರೀಲೀಲಾ ಔಟ್- ಕಾಲಿವುಡ್‌ನತ್ತ ‘ಕಿಸ್’ ನಟಿ

    ನಟಿ ಪ್ರತಿಕ್ರಿಯಿಸಿ, ಸೂಪರ್ ಸ್ಟಾರ್ ಜೊತೆಗೆ ಕೆಲಸ ಮಾಡುವುದು ಒಳ್ಳೆಯದು. ನೀವು ಹಲವು ವಿಚಾರಗಳನ್ನು ಅರಿತುಕೊಳ್ಳುತ್ತೀರಿ. ಅಕ್ಷಯ್ ಕುಮಾರ್ ಅವರೊಂದಿಗೆ ನಟಿಸಿರುವುದು ಖುಷಿಯಿದೆ. ನಟನೆ ಅಂತ ಬಂದಾಗ ವಯಸ್ಸಿನ ಅಂತರ ಮ್ಯಾಟರ್‌ ಆಗಲ್ಲ ಎಂದು ತಿಳಿಸಿದ್ದಾರೆ. ನನ್ನ ಮೊದಲ ಸಿನಿಮಾದಲ್ಲಿ ನಟನೆಗೆ ಸ್ಕೋಪ್ ಇತ್ತು. ‘ಬಡೆ ಮಿಯಾನ್ ಚೋಟೆ ಮಿಯಾನ್’ ಸಿನಿಮಾದಲ್ಲಿ ಮಾರ್ಕೆಟಿಂಗ್‌ಗಾಗಿ ಹಾಡುಗಳನ್ನು ಮಾಡಿದ್ದೇವೆ. ಇದು ಲವ್ ಸ್ಟೋರಿ ಸಿನಿಮಾ ಅಲ್ಲ ಎಂದಿದ್ದಾರೆ.

    ಮಾನುಷಿ ಚಿಲ್ಲರ್ ನಟಿಸಿದ ಮೊದಲ ಸಿನಿಮಾನೇ ‘ಸಾಮ್ರಾಟ್ ಪೃಥ್ವಿರಾಜ್’ ಈ ಚಿತ್ರದಲ್ಲಿ ಅಕ್ಷಯ್‌ಗೆ ನಾಯಕಿಯಾಗಿ ನಟಿಸಿದ್ದರು. ಬಡೆ ಮಿಯಾನ್ ಚೋಟೆ ಮಿಯಾನ್ ಸಿನಿಮಾದಲ್ಲಿಯೂ ಮಾನುಷಿ ನಟಿಸಿದ್ದಾರೆ.

  • ರಶ್ಮಿಕಾ ಮಂದಣ್ಣ ನಟನೆಯನ್ನು ಹೊಗಳಿದ ಮಾನುಷಿ ಚಿಲ್ಲರ್

    ರಶ್ಮಿಕಾ ಮಂದಣ್ಣ ನಟನೆಯನ್ನು ಹೊಗಳಿದ ಮಾನುಷಿ ಚಿಲ್ಲರ್

    ಬಾಲಿವುಡ್ ಬೆಡಗಿ ಮಾನುಷಿ ಚಿಲ್ಲರ್ (Manushi Chhillar) ಬಾಲಿವುಡ್‌ನ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ‘ಅನಿಮಲ್’ (Animal) ಚಿತ್ರದಲ್ಲಿನ ರಶ್ಮಿಕಾ ಮಂದಣ್ಣ (Rashmika Mandanna) ನಟನೆ ಅದ್ಭುತವಾಗಿದೆ ಎಂದು ಮಾನುಷಿ ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ:‘ವೀರ ಮದಕರಿ’ ಬಾಲನಟಿ ಈಗ ನಾಯಕಿ- ಮಹೇಶ್ ಬಾಬು, ರಕ್ಷಿತ್ ಸಿನಿಮಾದಲ್ಲಿ ಜೆರುಶಾ

    ಇತ್ತೀಚಿನ ಸಂದರ್ಶನವೊಂದರಲ್ಲಿ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಚಿತ್ರದ ಕುರಿತು ನಟಿ ಮಾತನಾಡಿದ್ದಾರೆ. ‘ಅನಿಮಲ್’ ಚಿತ್ರದಲ್ಲಿ ನಟಿಸಲು ಮೊದಲು ಮಾನುಷಿಗೆ ಆಫರ್ ಬಂದಿತ್ತು ಎಂದು ಸುದ್ದಿಯೊಂದು ಹಬ್ಬಿತ್ತು. ಇದನ್ನೇ ಸಂದರ್ಶನದಲ್ಲಿ ಕೇಳಲಾಯ್ತು. ಈ ಸುದ್ದಿ ಸುಳ್ಳು ಎಂದು ನಟಿ ಸ್ಪಷ್ಟನೆ ನೀಡಿದ್ದರು.

    ಒಂದು ವೇಳೆ ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದರೆ, ರಶ್ಮಿಕಾ ಮಂದಣ್ಣ, ತೃಪ್ತಿ ದಿಮ್ರಿ ನಟಿಸಿದ ಪಾತ್ರಗಳ ನಡುವೆ ಯಾವ ರೋಲ್‌ಗೆ ಪ್ರಾಮುಖ್ಯತೆ ನೀಡುತ್ತಿದ್ದೀರಿ ಎಂದು ನಿರೂಪಕಿ ಮರು ಪ್ರಶ್ನೆ ಮಾಡಿದ್ದಾರೆ. ಆಗ ಮಾನುಷಿ, ಎರಡು ಪಾತ್ರಗಳು ಅದ್ಭುತವಾಗಿದೆ. ಆದರೆ ರಶ್ಮಿಕಾ ನಟಿಸಿದ ಪಾತ್ರ ತುಂಬಾ ಇಷ್ಟವಾಯಿತು ಎಂದಿದ್ದಾರೆ. ರಶ್ಮಿಕಾ ನಟಿಸಿದ ಪಾತ್ರದಲ್ಲೇ ನಾನು ಕೂಡ ನಟಿಸಲು ಇಷ್ಟಪಡುತ್ತೇನೆ ಎಂದಿದ್ದಾರೆ.

    ರಣ್‌ಬೀರ್‌ ಕಪೂರ್ (Ranbir Kapoor) ಪತ್ನಿಯ ಪಾತ್ರದಲ್ಲಿ ಅದ್ಭುತವಾಗಿ ನಟಿಸಿದ್ದಾರೆ. ಪತ್ನಿಯಾಗಿ ರಣ್‌ಬೀರ್‌ಗೆ ಪ್ರಶ್ನಿಸಿ ನಿಲ್ಲುವ ರೀತಿ ಚೆನ್ನಾಗಿದೆ. ಗೀತಾಂಜಲಿ ಪಾತ್ರ (ರಶ್ಮಿಕಾ ಮಂದಣ್ಣ) ನಟನೆಗೆ ಉತ್ತಮ ಅವಕಾಶ ಕಲ್ಪಿಸಿ ಕೊಟ್ಟಿದ್ದಾರೆ. ಅದನ್ನು ನಟಿ ಚೆನ್ನಾಗಿ ನಿಭಾಯಿಸಿದ್ದಾರೆ ಎಂದು ಮಾನುಷಿ ಮಾತನಾಡಿದ್ದಾರೆ.

    2017ರಲ್ಲಿ ಮಾನುಷಿ ಚಿಲ್ಲರ್ (Manushi Chhillar) ವಿಶ್ವಸುಂದರಿ ಪಟ್ಟ ಅಲಂಕರಿಸಿದ್ದರು. ಬಳಿಕ ಬಾಲಿವುಡ್ ಮತ್ತು ತೆಲುಗು ಸಿನಿಮಾಗಳಲ್ಲಿ ಇದೀಗ ನಟಿ ಆ್ಯಕ್ಟೀವ್ ಆಗಿದ್ದಾರೆ.

  • ವಾಯುಪಡೆ ಅಧಿಕಾರಿಯಾದ ನಟ ವರುಣ್ ತೇಜ್

    ವಾಯುಪಡೆ ಅಧಿಕಾರಿಯಾದ ನಟ ವರುಣ್ ತೇಜ್

    ಮೆಗಾಸ್ಟಾರ್ ಚಿರಂಜೀವಿ ಸಹೋದರ ನಾಗಬಾಬು ಸುಪುತ್ರ ವರುಣ್ ತೇಜ್  (Varun Tej) ನಟನೆಯ #VT13 ಸಿನಿಮಾದ ಶೂಟಿಂಗ್ ಮುಕ್ತಾಯಗೊಂಡಿದೆ. ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಕೊನೆಯ ಹಂತದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಶೀಘ್ರದಲ್ಲಿಯೇ ಬಿಡುಗಡೆ ದಿನಾಂಕ ಘೋಷಿಸಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ.

    ತೆಲುಗು ಜೊತೆ ಹಿಂದಿಯಲ್ಲಿ ಮೂಡಿ ಬರಲಿರುವ ಈ ಸಿನಿಮಾ ಮೂಲಕ ವರುಣ್ ಬಿಟೌನ್ ಅಂಗಳಕ್ಕೂ ಪದಾರ್ಪಣೆ ಮಾಡ್ತಿದ್ದಾರೆ. ಸೋನಿ ಪಿಕ್ಚರ್ಸ್ ಇಂಟರ್ ನ್ಯಾಷನಲ್ ಬ್ಯಾನರ್ ಸಹಯೋಗದಲ್ಲಿ ರೆನೈಸಾನ್ಸ್ ಪಿಕ್ಚರ್ಸ್ ನಡಿ ಸದೀಪ್ ಮುಡ್ಡಾ ದೊಡ್ಡ ಪ್ರಮಾಣದಲ್ಲಿ ಚಿತ್ರ ನಿರ್ಮಾಣ ಮಾಡ್ತಿದ್ದು, ನಂದಕುಮಾರ್ ಅಬ್ಬಿನೇನಿ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಇದನ್ನೂ ಓದಿ: ‘ವಿಷ್ಣುಪ್ರಿಯಾ’ಗಾಗಿ ಕೇರಳದಿಂದ ಹಾರಿಬಂದ ಕಣ್ಸನ್ನೆ ಬೆಡಗಿ ಪ್ರಿಯಾ

    ಸತ್ಯ ಘಟನೆಯಾಧಾರಿತ ಆಕ್ಷನ್ ಡ್ರಾಮಾ ಕಥಾಹಂದರ ಹೊಂದಿರುವ ಹೆಸರಿಡದ ಈ ಚಿತ್ರದಲ್ಲಿ ವರುಣ್ ತೇಜ್ ವಾಯು ಪಡೆ ಅಧಿಕಾರಿಯಾಗಿ ನಟಿಸ್ತಿದ್ದು, ಮಾಜಿ ವಿಶ್ವ ಸುಂದರಿ ಮಾನುಷಿ ಚಿಲ್ಲರ್  (Manushi Chillar) ರಾಡಾರ್ ಆಫೀಸ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

    ಈ ಚಿತ್ರಕ್ಕೆ ಶಕ್ತಿ ಪ್ರತಾಪ್ ಸಿಂಗ್ (Shakti Pratap Singh) ಆಕ್ಷನ್ ಕಟ್ ಹೇಳಿದ್ದು, ಜಾಹೀರಾತು ನಿರ್ದೇಶಕ ಹಾಗೂ ಛಾಯಾಗ್ರಹಕರಾಗಿರುವ ಅವರಿಗೆ ಇದು ಮೊದಲ ಸಿನಿಮಾವಾಗಿದೆ. ವಿಶೇಷ ಎಂದರೆ ಸಿನಿಮಾದ ಕಥೆಯನ್ನು ಶಕ್ತಿ ಪ್ರತಾಪ್ ಸಿಂಗ್ ಜೊತೆಗೆ ಆಮೀರ್ ಖಾನ್ ಹಾಗೂ ಸಿದ್ಧಾರ್ಥ್ ರಾಜ್ ಕುಮಾರ್ ಬರೆದಿದ್ದಾರೆ.

  • ಯುವರಾಜ್ ಕುಮಾರ್ ಚಿತ್ರಕ್ಕೆ ಮಾಜಿ ವಿಶ್ವಸುಂದರಿ ಮಾನುಷಿ ಚಿಲ್ಲರ್ ನಾಯಕಿ?

    ಯುವರಾಜ್ ಕುಮಾರ್ ಚಿತ್ರಕ್ಕೆ ಮಾಜಿ ವಿಶ್ವಸುಂದರಿ ಮಾನುಷಿ ಚಿಲ್ಲರ್ ನಾಯಕಿ?

    ನಿನ್ನೆಯಷ್ಟೇ ಹೊಂಬಾಳೆ ಫಿಲ್ಮ್ಸ್ ಕಚೇರಿಗೆ ಮಾಜಿ ವಿಶ್ವಸುಂದರಿ ಮಾನುಷಿ ಚಿಲ್ಲರ್ ಭೇಟಿ ನೀಡಿದ ಸುದ್ದಿಯನ್ನು ಬೆಳಗ್ಗೆಯಷ್ಟೇ ಪಬ್ಲಿಕ್ ಟಿವಿ ಡಿಜಿಟಲ್ ಪ್ರಕಟಿಸಿತ್ತು. ಹೊಂಬಾಳೆ ಬ್ಯಾನರ್ ನಲ್ಲಿ ಹಲವು ಸಿನಿಮಾಗಳು ಮೂಡಿ ಬರುತ್ತಿದ್ದು, ಯಾವ ಚಿತ್ರಕ್ಕಾಗಿ ಅವರನ್ನು ಕರೆಯಿಸಲಾಗಿದೆ ಎಂಬ ಕುತೂಹಲ ಕೂಡ ಮೂಡಿಸಿತ್ತು. ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಯುವರಾಜ್ ಕುಮಾರ್ ಸಿನಿಮಾಗೆ ಮಾನುಷಿ ಚಿಲ್ಲರ್ ನಾಯಕಿ ಎನ್ನಲಾಗುತ್ತಿದೆ.

    ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವರಾಜ್ ಕುಮಾರ್ ಅವರನ್ನು ಹೊಂಬಾಳೆ ಫಿಲ್ಮ್ಸ್ ಕನ್ನಡ ಸಿನಿಮಾ ಜಗತ್ತಿಗೆ ಲಾಂಚ್ ಮಾಡುತ್ತಿದೆ. ಈ ವಿಷಯವನ್ನೂ ಈಗಾಗಲೇ ಹೊಂಬಾಳೆ ಫಿಲ್ಮ್ಸ್ ಪ್ರಕಟಿಸಿದೆ. ಅದೇ ಸಿನಿಮಾದಲ್ಲೇ ಮಾನುಷಿ ನಾಯಕಿಯಾಗಿ ನಟಿಸಲಿದ್ದಾರಂತೆ. ಆ ವಿಷಯವನ್ನು ಮಾತನಾಡಲೆಂದೇ ನಿರ್ಮಾಪಕ ವಿಜಯ್ ಕಿರಗಂದೂರು ಬೆಂಗಳೂರಿಗೆ ಅವರನ್ನು ಕರೆಯಿಸಿಕೊಂಡಿದ್ದರು ಎನ್ನಲಾಗುತ್ತಿದೆ. ಆಕೆಯೂ ಕೂಡ ಈ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರಂತೆ. ಇದನ್ನು ಓದಿ:ರಶ್ಮಿಕಾ ಮಂದಣ್ಣ ಸಂಭಾವನೆ 5 ಕೋಟಿನಾ? : ನಂ.1 ಸ್ಥಾನಕ್ಕೆ ಏರಿದ ಕೊಡಗಿನ ಬೆಡಗಿ

    ಸಂತೋಷ್ ಆನಂದ್ ರಾಮ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಈಗಾಗಲೇ ಸ್ಕ್ರಿಪ್ಟ್ ಸೇರಿದಂತೆ ಹಲವು ಕೆಲಸಗಳು ಮುಗಿದಿವೆ. ಶೂಟಿಂಗ್ ಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಸಿನಿಮಾಗಾಗಿಯೇ ಹಲವು ತಿಂಗಳಿನಿಂದ ಯುವ ಸಖತ್ ತಯಾರಿ ಕೂಡ ಮಾಡಿಕೊಳ್ಳುತ್ತಿದ್ದಾರಂತೆ. ಕನ್ನಡ ಸಿನಿಮಾ ರಂಗಕ್ಕೆ ಯುವ ಮತ್ತು ಮಾನುಷಿ ಚಿಲ್ಲರ್ ಈ ಸಿನಿಮಾದ ಮೂಲಕ ಪರಿಚಯವಾಗಲಿದ್ದಾರೆ. ಅಂದಹಾಗೆ ಮಾನುಷಿ ಇದು ಎರಡನೇ ಸಿನಿಮಾವಾಗಲಿದೆ. ಈಗಾಗಲೇ ಬಾಲಿವುಡ್ ನಲ್ಲಿ ಅಕ್ಷಯ್ ಕುಮಾರ್ ಜೊತೆ ಸಾಮ್ರಾಟ್ ಪೃಥ್ವಿರಾಜ್ ಸಿನಿಮಾದಲ್ಲಿ ಅವರು ನಟಿಸಿದ್ದಾರೆ.

    Live Tv

  • ಪಠ್ಯಪುಸ್ತಕದಲ್ಲಿ ನಮ್ಮ ರಾಜರ ಬಗ್ಗೆ 2 ಸಾಲು, ಮೊಘಲರ ಬಗ್ಗೆ ಜಾಸ್ತಿ ಉಲ್ಲೇಖ: ಅಕ್ಷಯ್ ಕುಮಾರ್

    ಪಠ್ಯಪುಸ್ತಕದಲ್ಲಿ ನಮ್ಮ ರಾಜರ ಬಗ್ಗೆ 2 ಸಾಲು, ಮೊಘಲರ ಬಗ್ಗೆ ಜಾಸ್ತಿ ಉಲ್ಲೇಖ: ಅಕ್ಷಯ್ ಕುಮಾರ್

    ರಾಜ್ಯದಲ್ಲಿ ಪಠ್ಯಪುಸ್ತಕ ಸಂಘರ್ಷ ಕೊನೆ ಮೊದಲಿಲ್ಲದೇ ನಡೆಯುತ್ತಿರುವಾಗಲೇ ಬಾಲಿವುಡ್ ನಟ ಅಕ್ಷಯ್ ಕುಮಾರ್ ನೀಡಿದ ಹೇಳಿಕೆಯೊಂದು ಗಮನ ಸೆಳೆದಿದೆ. ಪೃಥ್ವಿರಾಜ್ ಸಿನಿಮಾ ಕುರಿತಂತೆ ಮಾತನಾಡುವ ಸಂದರ್ಭದಲ್ಲಿ ಅವರು, ದುರಾದೃಷ್ಟವಶಾತ್ ನಮ್ಮ ಚರಿತ್ರೆಯ ಪುಸ್ತಗಳಲ್ಲಿ ಸಾಮ್ರಾಟ್ ಪೃಥ್ವಿರಾಜ್ ಚೌಹಾಣ್ ಅವರಂತಹ ರಾಜರ ಬಗ್ಗೆ ಕೇವಲ 2-3 ಸಾಲುಗಳಷ್ಟೇ ಇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತಿಹಾಸದ ಪಠ್ಯಪುಸ್ತಕಗಳಲ್ಲಿ ಭಾರತೀಯ ರಾಜರ ಬಗ್ಗೆ ಜಾಸ್ತಿ ಉಲ್ಲೇಖವನ್ನು ಕಾಣುವುದಿಲ್ಲ. ದುರದೃಷ್ಟವಶಾತ್, ನಮ್ಮ ಇತಿಹಾಸ ಪಠ್ಯಪುಸ್ತಕಗಳಲ್ಲಿ ಸಾಮ್ರಾಟ್ ಪೃಥ್ವಿರಾಜ್ ಚೌಹಾಣ್ ಬಗ್ಗೆ ಕೇವಲ ಎರಡು-ಮೂರು ಸಾಲುಗಳಿವೆ. ಆದರೆ ಆಕ್ರಮಣಕಾರರು, ಮೊಘಲರ ಬಗ್ಗೆ ಸಾಕಷ್ಟು ಉಲ್ಲೇಖಿಸಲಾಗಿದೆ ಎಂದರು.

    ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಎರಡರ ಮಧ್ಯೆ ಬ್ಯಾಲೆನ್ಸ್ ಇರುವಂತೆ ಇತಿಹಾಸ ಪಠ್ಯಗಳನ್ನು ಪರಿಷ್ಕರಿಸಬೇಕು ಎಂದು ಕೇಂದ್ರ ಶಿಕ್ಷಣ ಇಲಾಖೆಗೆ ಮನವಿ ಮಾಡಿದ್ದಾರೆ. ಮೊಘಲರ ಆಡಳಿತದ ಬಗ್ಗೆ ತಿಳಿದುಕೊಳ್ಳುವುದು ನಮಗೆ ಮುಖ್ಯ. ಅದೇ ಸಂದರ್ಭದಲ್ಲಿ ನಮ್ಮ ರಾಜರ ಬಗ್ಗೆಯೂ ತಿಳಿದುಕೊಳ್ಳುವುದು ಅಗತ್ಯವಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸಿಧು ಮೂಸೆ ವಾಲಾ ಹತ್ಯೆ: ತನಿಖೆ ವೇಳೆ ಶಾಕಿಂಗ್ ವಿಚಾರ ಬಯಲು

    ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಫಿಸಿದ್ದು, ಭಾರತೀಯ ಚಲನಚಿತ್ರೋದ್ಯಮವು ಜಾಗತಿಕವಾಗಿ ತೆರೆದುಕೊಳ್ಳಲು ಮೋದಿ ಅವರಿಂದ ಸಾಧ್ಯವಾಯಿತು ಎಂದು ಧನ್ಯವಾದ ಹೇಳಿದರು.

    ಅಕ್ಷಯ್ ಕುಮಾರ್ ಮತ್ತು ಮಾನುಷಿ ಚಿಲ್ಲರ್ ಅಭಿನಯದ ‘ಪೃಥ್ವಿರಾಜ್’ ಚಿತ್ರ ಇದೇ ಶುಕ್ರವಾರ ತೆರೆಗೆ ಬರಲಿದೆ. ಈ ಹಿನ್ನೆಲೆ ಚಿತ್ರತಂಡ ಪ್ರಚಾರವನ್ನು ಬರದಿಂದ ಮಾಡುತ್ತಿದೆ.

  • `ಸಾಮ್ರಾಟ್ ಪೃಥ್ವಿರಾಜ್’ ರಿಲೀಸ್ ಬೆನ್ನಲ್ಲೆ ಅಕ್ಷಯ್ ಕುಮಾರ್ ಟೆಂಪಲ್ ರನ್

    `ಸಾಮ್ರಾಟ್ ಪೃಥ್ವಿರಾಜ್’ ರಿಲೀಸ್ ಬೆನ್ನಲ್ಲೆ ಅಕ್ಷಯ್ ಕುಮಾರ್ ಟೆಂಪಲ್ ರನ್

    ಕ್ಷಯ್ ಕುಮಾರ್ ಮತ್ತು ಮಾನುಷಿ ಚಿಲ್ಲರ್ ನಟನೆಯ ಬಹುನಿರೀಕ್ಷಿತ `ಸಾಮ್ರಾಟ್ ಪೃಥ್ವಿರಾಜ್’ ರಿಲೀಸ್‌ಗೆ ರೆಡಿಯಿದೆ. ಈ ಚಿತ್ರ ರಿಲೀಸ್‌ಗೆ ಹತ್ತಿರ ಬರುತ್ತಿದ್ದಂತೆ ಅಕ್ಷಯ್ ಕುಮಾರ್ ಮತ್ತು ಚಿತ್ರತಂಡ ವಾರಣಾಸಿಗೆ ತೆರಳಿದ್ದಾರೆ. ಚಿತ್ರದ ಯಶಸ್ಸಿಗಾಗಿ ವಿಶೇಷ ಪೂಜೆ ಮಾಡಿದ್ದಾರೆ. ಈ ಕುರಿತು ಅಕ್ಷಯ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

     

    View this post on Instagram

     

    A post shared by Akshay Kumar (@akshaykumar)

    ಮೊಟ್ಟ ಮೊದಲ ಬಾರಿಗೆ ಐತಿಹಾಸಿಕ ಪಾತ್ರದಲ್ಲಿ ಅಕ್ಷಯ್ ಕುಮಾರ್ ಬಣ್ಣ ಹಚ್ಚಿರುವ `ಸಾಮ್ರಾಟ್ ಪೃಥ್ವಿರಾಜ್’ ಇದೇ ಜೂನ್ 3ಕ್ಕೆ ತೆರೆಗೆ ಅಪ್ಪಳಿಸುತ್ತಿದೆ. ಈ ಚಿತ್ರದ ರಿಲೀಸ್ ಬೆನ್ನಲ್ಲೆ ಅಕ್ಷಯ್ ಕುಮಾರ್ ಮತ್ತು ನಾಯಕಿ ಮಾನುಷಿ ಜೊತೆಗೆ ಚಿತ್ರತಂಡ ವಾರಣಾಸಿಗೆ ಭೇಟಿ ಮಾಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಕ್ರಿಕೆಟಿಗ ರಾಹುಲ್ ಒಳ ಉಡುಪು ಕಂಡು ಹೆಸರಾಂತ ನಟಿ ಕಸ್ತೂರಿ ಕಾಮೆಂಟ್ : ಹೌದು ಹುಲಿಯಾ ಎಂದ ರಾಹುಲ್ ಅಭಿಮಾನಿಗಳು

     

    View this post on Instagram

     

    A post shared by Akshay Kumar (@akshaykumar)

    ಇನ್ನು ಅಕ್ಷಯ್ ಕುಮಾರ್ ಗಂಗಾ ನದಿಯಲ್ಲಿ ಸ್ನಾನ ಮಾಡಿದ ಬಳಿಕ ಚಿತ್ರತಂಡ¸ದ ಜತೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಕೂಡ ಅಕ್ಷಯ್ ಕುಮಾರ್ ಶೇರ್ ಮಾಡಿದ್ದಾರೆ. ಅಕ್ಷಯ್ ಕುಮಾರ್ ನಟನೆಯ `ಸಾಮ್ರಾಟ್ ಪೃಥ್ವಿರಾಜ್’ ಚಿತ್ರ ಜೂನ್ 3ಕ್ಕೆ ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ತೆರೆಗೆ ಅಪ್ಪಳಿಸುತ್ತಿದೆ. ಸದ್ಯ ವಾರಣಾಸಿಗೆ ಹೋಗಿರುವ ಚಿತ್ರತಂಡಕ್ಕೆ ಅಭಿಮಾನಿಗಳು ಕೂಡ ಶುಭ ಹಾರೈಸುತ್ತಿದ್ದಾರೆ.

  • ತನ್ನ ವ್ಯಾಲಂಟೈನ್ ಯಾರು ಎಂಬುದನ್ನು ಹೇಳಿದ ವಿಶ್ವಸುಂದರಿ ಮಾನುಷಿ ಚಿಲ್ಲರ್!

    ತನ್ನ ವ್ಯಾಲಂಟೈನ್ ಯಾರು ಎಂಬುದನ್ನು ಹೇಳಿದ ವಿಶ್ವಸುಂದರಿ ಮಾನುಷಿ ಚಿಲ್ಲರ್!

    ಮುಂಬೈ: ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡು ಇಡೀ ದೇಶ ಹಮ್ಮೆಪಡುವಂತೆ ಮಾಡಿದ್ದ ಮಾನುಷಿ ಚಿಲ್ಲರ್ ತಮ್ಮ ವ್ಯಾಲಂಟೈನ್ ಯಾರು ಎಂಬುದನ್ನು ಪ್ರಕಟಿಸಿದ್ದಾರೆ.

    ತನ್ನ ಮೊದಲ ವ್ಯಾಲಂಟೈನ್ ನನ್ನ ತಾಯಿ ಎಂದು ತಮ್ಮ ತಾಯಿ ಜೊತೆಯಲ್ಲಿರುವ ಫೋಟೋವನ್ನು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.

    ಮಾನುಷಿ ತಮ್ಮ ತಾಯಿಯ ಜೊತೆಯಿರುವ ಫೋಟೋ ಹಾಕಿ ಅದಕ್ಕೆ, ‘Happy Valentine’s Day to my constant’. ಪ್ರತಿ ವರ್ಷ ವ್ಯಾಲಂಟೈನ್ ಗೆ ನಾನು ಹಾಗೂ ನನ್ನ ತಾಯಿ ಒಬ್ಬರಿಗೊಬ್ಬರು ವಿಶ್ ಮಾಡುತ್ತೇವೆ. ಫೆ.14 ರಂದು ನನಗೆ ಚಾಕಲೇಟ್ಸ್ ಹಾಗೂ ಗುಲಾಬಿ ಹೂಗಳು ಸಿಕ್ಕುತ್ತಿರುವುದು ನನಗೆ ನೆನಪಿದೆ. ನಾನು ಮನೆಗೆ ಬಂದ ತಕ್ಷಣ ಅದನ್ನು ನನ್ನ ತಾಯಿಗೆ ಕೊಟ್ಟು ನೀನು ನನ್ನ ಮೊದಲ ವ್ಯಾಲಂಟೈನ್ ಎಂದು ಹೇಳುತ್ತಿದ್ದೆ. ಅತ್ಯಂತ ಸುಂದರ ಹಾಗೂ ಸಹಾನುಭೂತಿ ಮಹಿಳೆ ಆಗಿ ನೀನು ಇರುವುದಕ್ಕೆ ನನ್ನ ಧನ್ಯವಾದಗಳು ಎಂದು ಬರೆದು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.

    ಮಾನುಷಿ ಚಿಲ್ಲರ್ 2017ರಲ್ಲಿ ಚೀನಾದ ಸನ್ಯ ಸಿಟಿಯಲ್ಲಿ ವಿಶ್ವ ಸುಂದರಿ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದರು. 2000ರಲ್ಲಿ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ವಿಶ್ವ ಸುಂದರಿ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದರು. 17 ವರ್ಷಗಳ ನಂತರ ಮಾನುಷಿ ಮತ್ತೆ ವಿಶ್ವಸುಂದರಿ ಸ್ಪರ್ಧೆ ಗೆದ್ದು ಭಾರತಕ್ಕೆ ಹಮ್ಮೆ ಆಗುವಂತೆ ಮಾಡಿದ್ದಾರೆ.

    ವಿಶ್ವಸುಂದರಿ ಸ್ಪರ್ಧೆಯ ಟಾಪ್ 5 ಸ್ಥಾನಕ್ಕೆ ತಲುಪಿದಾಗ ಪ್ರಶ್ನೋತ್ತರ ಸುತ್ತಿನಲ್ಲಿ ಮಾನುಷಿ ಅವರಿಗೆ, ಅತಿ ಹೆಚ್ಚು ಸಂಬಳ ನೀಡುವ ಯಾವ ವೃತ್ತಿಗೆ ನೀವು ಅರ್ಹರು ಮತ್ತು ಯಾಕೆ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಈ ವೇಳೆ ಸಂಬಳ ಯಾವುದೇ ವೃತ್ತಿಯ ಗೌರವವನ್ನು ನಿರ್ಧರಿಸುವುದಿಲ್ಲ. ತಾಯಿಯಾಗುವ ವೃತ್ತಿ ಮಹಿಳೆಯ ಜೀವನದಲ್ಲಿ ದೊರೆಯುವ ಅತ್ಯಂತ ಗೌರವಯುತವಾದ ಹುದ್ದೆಯಾಗಿದೆ. ಕೇವಲ ಹಣದಿಂದ ಮಾತ್ರ ಪ್ರೀತಿ ಮತ್ತು ಗೌರವ ಸಿಗುತ್ತದೆ ಎಂಬ ವಿಚಾರದಲ್ಲಿ ನನಗೆ ನಂಬಿಕೆಯಿಲ್ಲ. ನನ್ನ ತಾಯಿ ನನಗೆ ಜೀವನದ ಅತಿ ದೊಡ್ಡ ಸ್ಪೂರ್ತಿಯ ಚಿಲುಮೆಯಾಗಿದ್ದಾರೆ. ಹಾಗಾಗಿ ತಾಯಿಯಾಗುವ ವೃತ್ತಿ ಜಗತ್ತಿನಲ್ಲಿ ಅತ್ಯಂತ ಗೌರವಯುತವಾದದ್ದು ಎಂದು ಮಾನುಷಿ ಭಾವನಾತ್ಮಕವಾಗಿ ಉತ್ತರಿಸಿದ್ದರು.

    ನವೆಂಬರ್ 18, 2018ರಲ್ಲಿ ವಿಶ್ವಸುಂದರಿ ಸ್ಪರ್ಧೆ ಗೆದ್ದು ಮಾನುಷಿ ಭಾರತದ 6ನೇ ವಿಶ್ವಸುಂದರಿ ಆಗಿದ್ದಾರೆ. ಅಷ್ಟೇ ಅಲ್ಲದೇ ಏಸ್ ಫೋಟೋಗ್ರಾಫರ್ ಆದ ಡಾಬೋ ರತ್ನಾನಿ ನಡೆಸಿದ 2018ರ ಕ್ಯಾಲೆಂಡರ್ ಫೋಟೋಶೂಟ್‍ನಲ್ಲಿ ಮಾನುಷಿ ಕೂಡ ಪಾಲ್ಗೊಂಡಿದ್ದರು. ಆ ಫೋಟೋಶೂಟ್‍ನಲ್ಲಿ ನಟ ಅಮಿತಾಬ್ ಬಚ್ಚನ್, ಶಾರೂಕ್ ಖಾನ್, ಐಶರ್ಯ ರೈ ಬಚ್ಚನ್, ಅಲಿಯಾ ಭಟ್, ಶ್ರದ್ಧ ಕಪೂರ್, ಫರಾನ್ ಅಖ್ತರ್ ಹಾಗೂ ಅರ್ಜುನ್ ರಾಮ್‍ಪಾಲ್ ಕೂಡ ಫೋಟೋಶೂಟ್ ಮಾಡಿಸಿದ್ದರು. ಇದ್ನನೂ ಓದಿ: ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಮೊದಲು ಡ್ಯಾನ್ಸ್ ಸ್ಟೆಪ್ ಕಲಿತಿದ್ದು ಬೆಂಗ್ಳೂರಿನಲ್ಲಿ!

  • ವಿಶ್ವಸುಂದರಿ ಮಾನುಷಿಯ ಖಡಕ್ ಪ್ರಶ್ನೆಗೆ ಕೊಹ್ಲಿ ಮನದಾಳದ ಉತ್ತರ ನೀಡಿದ್ದು ಹೀಗೆ

    ವಿಶ್ವಸುಂದರಿ ಮಾನುಷಿಯ ಖಡಕ್ ಪ್ರಶ್ನೆಗೆ ಕೊಹ್ಲಿ ಮನದಾಳದ ಉತ್ತರ ನೀಡಿದ್ದು ಹೀಗೆ

    ನವದೆಹಲಿ: ಚೀನಾದಲ್ಲಿ ನಡೆದ ವಿಶ್ವಸುಂದರಿ ಸ್ಪರ್ಧೆಯಲ್ಲಿ 17 ವರ್ಷಗಳ ನಂತರ ಭಾರತಕ್ಕೆ ಪ್ರಶಸ್ತಿ ಜಯಿಸಿಕೊಟ್ಟ ಮಾನುಷಿ ಚಿಲ್ಲರ್ ಮತ್ತು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ದೆಹಲಿಯಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

    ಆ ಕಾರ್ಯಕ್ರಮದಲ್ಲಿ ಮಾನುಷಿ ಚಿಲ್ಲರ್ ಟೀಂ ಇಂಡಿಯಾ ಕ್ಯಾಪ್ಟನ್ ಕೊಹ್ಲಿಗೆ, ಇಂದು ನೀವು ವಿಶ್ವದ ಅತ್ಯುತ್ತಮ ಬ್ಯಾಟ್ಸ್ ಮನ್ ಆಗಿದ್ದೀರಿ. ನೀವು ಎಲ್ಲರಿಗೂ ಒಂದು ಸ್ಫೂರ್ತಿ ಆಗಿದ್ದೀರಿ ಹಾಗೂ ನಮ್ಮ ಸಮಾಜಕ್ಕಾಗಿ ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದ್ದೀರಿ. ತುಂಬ ಜನರು ನಿಮ್ಮಿಂದ ಸ್ಫೂರ್ತಿ ಪಡೆಯುತ್ತಿದ್ದಾರೆ. ಹೀಗಾಗಿ ಕ್ರಿಕೆಟ್ ಜಗತ್ತಿನ ಮಕ್ಕಳಿಗೆ ನೀವು ಇದನ್ನು ಹೇಗೆ ಹಿಂತಿರುಗಿಸುತ್ತೀರಿ ಎಂದು ಪ್ರಶ್ನಿಸಿದರು.

    ನಾವು ಯಾವಾಗ ಏನು ಮಾಡುತ್ತೇವೆ ಎನ್ನುವುದನ್ನು ವ್ಯಕ್ತಪಡಿಸುವುದು ಮುಖ್ಯ. ನಾವು ಪ್ರಾಮಾಣಿಕವಾಗಿ ಆ ಕೆಲಸವನ್ನು ಮಾಡಬೇಕು. ಅಷ್ಟೇ ಅಲ್ಲದೇ ಮುಕ್ತ ಮನಸ್ಸಿನಿಂದ ಮಾಡಬೇಕು. ಇಲ್ಲದಿದ್ದರೆ ಜನರು ನಾವು ನಟಿಸುತ್ತಿದ್ದೇವೆ ಎಂದು ತಿಳಿದುಕೊಳ್ಳುತ್ತಾರೆ. ನಾನು ಬೇರೆಯವರ ರೀತಿ ಇರಲು ಯಾವತ್ತೂ ಪ್ರಯತ್ನಿಸಿಲ್ಲ. ನಾನು ಯಾವಾಗಲೂ ನಾನಾಗಿಯೇ ಇರಲು ಪ್ರಯತ್ನಿಸುತ್ತೇನೆ. ನಾನು ಇರುವ ರೀತಿ ಹಾಗೂ ನಾನು ತೊಡಗುವ ರೀತಿ ಜನರಿಗೆ ಇಷ್ಟವಾಗುವುದಿಲ್ಲ ಎನ್ನುವುದು ನನಗೆ ತಿಳಿದಿದೆ. ಆದರೆ ಈ ವಿಚಾರಗಳು ನನಗೆ ಎಂದಿಗೂ ತೊಂದರೆಯಾಗಿಲ್ಲ. ಯಾವಾಗ ನಾನು ಬದಲಾಗಬೇಕು ಎಂದು ಅನಿಸುತ್ತದೋ ಆಗ ನಾನು ಆ ಸಮಯದಲ್ಲಿ ಬದಲಾಗಿದ್ದೇನೆ ಎಂದು ವಿರಾಟ್ ಕೊಹ್ಲಿ ದೀರ್ಘ ಉತ್ತರವನ್ನು ನೀಡಿದ್ದಾರೆ.

    ನಾವು ಯಾವತ್ತೂ ನಮ್ಮ ಸ್ವಂತ ಅಸ್ತಿತ್ವವನ್ನು ಕಳೆದುಕೊಳ್ಳಬಾರದು. ಆಗ ನಾವು ಬೇರೆಯವರಿಗೆ ಸ್ಫೂರ್ತಿ ಆಗಲು ಸಾಧ್ಯವಿಲ್ಲ. ನಾವು ಯಾವತ್ತೂ ನಮ್ಮ ಗುರುತನ್ನು, ನಮ್ಮ ಪಾತ್ರವನ್ನು ಹಾಗೂ ವ್ಯಕ್ತಿತ್ವವನ್ನು ಕಳೆದುಕೊಳ್ಳಬಾರದು. ಯಾಕೆಂದರೆ ನೀವು ಬೇರೆಯವರ ರೀತಿ ಆಗಲೂ ಹೊರಟರೆ ನೀವು ಎಂದಿಗೂ ಯಶಸ್ಸು ಕಾಣುವುದಿಲ್ಲ ಹಾಗೂ ಬೇರೆಯವರಿಗೆ ಸ್ಫೂರ್ತಿ ಆಗಲು ಸಾಧ್ಯವಿಲ್ಲ ಎಂದು ಕೊಹ್ಲಿ ಮಾನುಷಿಗೆ ಉತ್ತರಿಸಿದ್ದಾರೆ.

  • ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಮೊದಲು ಡ್ಯಾನ್ಸ್ ಸ್ಟೆಪ್ ಕಲಿತಿದ್ದು ಬೆಂಗ್ಳೂರಿನಲ್ಲಿ!

    ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಮೊದಲು ಡ್ಯಾನ್ಸ್ ಸ್ಟೆಪ್ ಕಲಿತಿದ್ದು ಬೆಂಗ್ಳೂರಿನಲ್ಲಿ!

    ಬೆಂಗಳೂರು: ವಿಶ್ವ ಸುಂದರಿ ಕಿರೀಟವನ್ನು ಪಡೆದ 21 ವರ್ಷದ ಮಾನುಷಿ ಚಿಲ್ಲರ್‍ ಗೂ ಬೆಂಗಳೂರಿಗೂ ಸಂಬಂಧವಿದೆ. ಮಾನುಷಿ ಅವರು ತಮ್ಮ ಬಾಲ್ಯದ 5 ವರ್ಷಗಳನ್ನು ಬೆಂಗಳೂರಿನಲ್ಲಿ ಕಳೆದಿರುವುದು ವಿಶೇಷ.

    ಹೌದು. ಬಾಲ್ಯವನ್ನು ಕಳೆಯುವುದರ ಜೊತೆಗೆ ಅವರು ನೃತ್ಯ ಅಭ್ಯಾಸವನ್ನು ಆರಂಭಿಸಿದ್ದು ಬೆಂಗಳೂರಿನಲ್ಲೇ. ಎಳವೆಯಲ್ಲೇ ಪ್ರತಿಭಾವಂತರಾಗಿದ್ದ ಚಿಲ್ಲರ್ ಓದುವುದರಲ್ಲಿ ಟಾಪರ್ ಆಗಿದ್ದರು. 1997ರ ಮೇ 14 ರಂದು ಹರ್ಯಾಣದ ರೊಹ್ಟಕ್ ನಲ್ಲಿ ಜನಿಸಿದ್ದ ಮಾನುಷಿ 2 ವರ್ಷವಿದ್ದಾಗ ತಂದೆ ಮಿತ್ರ ಬಸು ಚಿಲ್ಲರ್ ಮತ್ತು ತಾಯಿ ನೀಲಮ್ ಚಿಲ್ಲರ್ ಬೆಂಗಳೂರಿಗೆ ಬಂದಿದ್ದರು. ಬೆಂಗಳೂರಿನಲ್ಲಿದ್ದಾಗ ಮಾನುಷಿ ಕುಚುಪುಡಿ ಕಲಿಯೋಕೆ ಆರಂಭಿಸಿದ್ದರು.

    ಮಾನುಷಿ ಈಗ ಸೋನೆಪತ್ ನಲ್ಲಿ ಬಿಪಿಎಸ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮೂರನೇ ವರ್ಷದ ಎಂಬಿಬಿಎಸ್ ಓದುತ್ತಿದ್ದು, ಅಲ್ಲಿನ ಪ್ರಾಧ್ಯಾಪಕಿ ಮತ್ತು ಸಂಬಂಧಿ ಆಗಿರುವ ಡಾ. ಉಷಾ ಚಿಲ್ಲರ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಮಾನುಷಿ ಹರ್ಯಾಣದಲ್ಲಿ ಜನಿಸುವ ವೇಳೆ ತಂದೆ ಮಿತ್ರ ಚಿಲ್ಲರ್ ಅವರು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ದಿ ಸಂಸ್ಥೆ(ಡಿಆರ್‍ಡಿಓ)ದಲ್ಲಿ ಹಿರಿಯ ವಿಜ್ಞಾನಿಯಾಗಿ ನೇಮಕಗೊಂಡಿದ್ದರು. ಮಾನುಷಿಗೆ 2 ವರ್ಷವಿದ್ದಾಗ ಆಕೆಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದರು. ಮಾನುಷಿ ಹಾಗೂ ಅವರ ಪೋಷಕರು 1999-2004 ಬೆಂಗಳೂರಿನಲ್ಲಿ ನೆಲೆಸಿದ್ದರು ಎಂದು ತಿಳಿಸಿದ್ದಾರೆ.

    ಮಾನುಷಿ ಎಲ್‍.ಕೆ.ಜಿಯಿಂದ ಮೊದಲನೇ ತರಗತಿವರೆಗೂ ಬೆಂಗಳೂರಿನಲ್ಲಿಯೇ ಓದಿದ್ದರು. ನಂತರ ಹರ್ಯಾಣದಲ್ಲಿ ಓದನ್ನು ಮುಂದುವರಿಸುತ್ತಿದ್ದಾಳೆ. ಆಕೆ ಎಲ್ಲರ ಜೊತೆ ತುಂಬ ಸಲುಗೆಯಿಂದ ಹಾಗೂ ಹತ್ತಿರವಾಗಿದ್ದರು ಹಾಗೂ ತುಂಬಾ ಚೆನ್ನಾಗಿ ಓದುತ್ತಿದ್ದಳು. ಬೆಂಗಳೂರಿನಿಂದ ಬಂದ ಮೇಲೆ ಸೆಂಟ್. ಥಾಮಸ್ಸ್ ಶಾಲೆಗೆ ಸೇರಿದ್ದ ಆಕೆ ಅಲ್ಲೂ ಕೂಡ ಟಾಪರ್ ಆಗಿದ್ದಳು ಎಂದು ಹೊಗಳಿದರು.

    ಶನಿವಾರ ವಿಶ್ವ ಸುಂದರಿ ಕಿರೀಟವನ್ನು ಪಡೆಯುತ್ತಿದ್ದಾಗ ಮಾನುಷಿ ಓದಿದ್ದ ಶಾಲೆಯಲ್ಲಿ ಶಾಲಾ ವಾಷಿಕೋತ್ಸವವನ್ನು ಆಚರಿಸುತ್ತಿದ್ದರು. ಶಾಲೆಯ ಮುಖ್ಯ ಶಿಕ್ಷಕಿಯಾದ ಅನುರಾಧ ಅಮ್ಸ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಾನುಷಿ ಮೂರನೇ ತರಗತಿಗೆ ನಮ್ಮ ಶಾಲೆ ಸೇರಿದ್ದಳು. ಆಕೆ ಶಾಲೆಯಲ್ಲಿದ್ದಾಗ ಎಲ್ಲರಿಗೂ ಹತ್ತಿರವಾಗಿದ್ದರು. ಅವರಿಗೆ ಸಾಂಸ್ಕೃತಿಕ ನೃತ್ಯಗಳಲ್ಲಿ ಸಾಕಷ್ಟು ಆಸಕ್ತಿಯಿತ್ತು. ಈ ಶಾಲೆಗೆ ಸೇರುವ ಮುಂಚೆ ಬೆಂಗಳೂರಿನಲ್ಲಿ ಸಾಂಸ್ಕೃತಿಕ ನೃತ್ಯವನ್ನು ಅಭ್ಯಾಸ ಮಾಡಿದ್ದರು ಎಂದು ಅನುರಾಧ ಅವರು ತಮ್ಮ ಸಂತೋಷವನ್ನು ವ್ಯಕ್ತ ಪಡಿಸಿದ್ದಾರೆ.

    ಚೀನಾದ ಸನ್ಯಾದಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ 108 ದೇಶಗಳ ಸುಂದರಿಯರನ್ನು ಹಿಂದಿಕ್ಕುವ ಮೂಲಕ ಮಾನುಷಿ 2017ರ ಮಿಸ್ ವಲ್ಡ್ ಆಗಿದ್ದಾರೆ. ಮಿಸ್ ಇಂಗ್ಲೆಂಡ್ ಸ್ಟೆಫನಿ ಹಿಲ್ ಮೊದಲ ರನ್ನರ್ ಅಪ್ ಆದರೆ, ಮೆಕ್ಸಿಕೋ ಸುಂದರಿ ಆಂಡ್ರೆಜಾ ಮೆಜಾ ಎರಡನೇ ರನ್ನರ್ ಅಪ್ ಸ್ಥಾನವನ್ನು ತಮ್ಮದಾಗಿಸಿಕೊಂಡರು.

    ಟಾಪ್ 5 ಸ್ಥಾನಕ್ಕೆ ತಲುಪಿದಾಗ ಪ್ರಶ್ನೋತ್ತರ ಸುತ್ತಿನಲ್ಲಿ ಮಾನುಷಿ ಅವರಿಗೆ, ಅತಿ ಹೆಚ್ಚು ಸಂಬಳ ನೀಡುವ ಯಾವ ವೃತ್ತಿಗೆ ನೀವು ಅರ್ಹರು ಮತ್ತು ಯಾಕೆ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಈ ವೇಳೆ ಸಂಬಳ ಯಾವುದೇ ವೃತ್ತಿಯ ಗೌರವವನ್ನು ನಿರ್ಧರಿಸುವುದಿಲ್ಲ. ತಾಯಿಯಾಗುವ ವೃತ್ತಿ ಮಹಿಳೆಯ ಜೀವನದಲ್ಲಿ ದೊರೆಯುವ ಅತ್ಯಂತ ಗೌರವಯುತವಾದ ಹುದ್ದೆಯಾಗಿದೆ. ಕೇವಲ ಹಣದಿಂದ ಮಾತ್ರ ಪ್ರೀತಿ ಮತ್ತು ಗೌರವ ಸಿಗುತ್ತದೆ ಎಂಬ ವಿಚಾರದಲ್ಲಿ ನನಗೆ ನಂಬಿಕೆಯಿಲ್ಲ. ನನ್ನ ತಾಯಿ ನನಗೆ ಜೀವನದ ಅತಿ ದೊಡ್ಡ ಸ್ಪೂರ್ತಿಯ ಚಿಲುಮೆಯಾಗಿದ್ದಾರೆ. ಹಾಗಾಗಿ ತಾಯಿಯಾಗುವ ವೃತ್ತಿ ಜಗತ್ತಿನಲ್ಲಿ ಅತ್ಯಂತ ಗೌರವಯುಕ್ತವಾದದ್ದು ಎಂದು ಮಾನುಷಿ ಭಾವನಾತ್ಮಕವಾಗಿ ಉತ್ತರಿಸಿದ್ದರು.

    https://www.youtube.com/watch?v=g9mR4KsHd6Q