Tag: Maratha Development Authority

  • ಮರಾಠಾ ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ ತನ್ನಿ: ಸರ್ಕಾರಕ್ಕೆ ಆಡಳಿತ ಪಕ್ಷದ ಸದಸ್ಯರಿಂದಲೇ ಆಗ್ರಹ

    ಮರಾಠಾ ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ ತನ್ನಿ: ಸರ್ಕಾರಕ್ಕೆ ಆಡಳಿತ ಪಕ್ಷದ ಸದಸ್ಯರಿಂದಲೇ ಆಗ್ರಹ

    ಬೆಳಗಾವಿ: ಮರಾಠಾ ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ ತರಬೇಕು ಎಂದು ಸರ್ಕಾರವನ್ನು ಆಡಳಿತ ಪಕ್ಷದ ಸದಸ್ಯರೇ ಆಗ್ರಹಿಸಿರುವ ಘಟನೆ ಸುವರ್ಣಸೌಧದ ವಿಧಾನಸಭೆ ಅಧಿವೇಶನದಲ್ಲಿ ನಡೆಯಿತು.

    ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ಘೋಷಣೆ ಮಾಡಲ್ಪಟ್ಟ ಮರಾಠಾ ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ ಬಂದಿಲ್ಲ ಎಂದು ಬಿಜೆಪಿ ಶಾಸಕ‌ ಬಸನಗೌಡ ಪಾಟೀಲ್ ಯತ್ನಾಳ್ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದರು. ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ತಕ್ಷಣವೇ ‌ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆಗೆ ಇದೇ ಅಧಿವೇಶನದಲ್ಲೇ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಯತ್ನಾಳ್ ಪ್ರಸ್ತಾಪಕ್ಕೆ ಸದನದಲ್ಲಿ ಹಲವು ಶಾಸಕರು ಬೆಂಬಲ ಸೂಚಿಸಿದರು‌. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಶುಭ ಸುದ್ದಿ, ಎಥೆನಾಲ್ ನೀತಿ ಜಾರಿಗೆ ನಿರ್ಣಯ: ಮುನೇನಕೊಪ್ಪ

    ಇನ್ನು ಸರ್ಕಾರದ ಉತ್ತರ ನೀಡಲು ಸಚಿವ ಅಶೋಕ್ ಹಿಂದೇಟು ಹಾಕಿದಾಗ, ಅಶೋಕ್ ನೀವು ಆ ಕಡೆ ನೋಡಬೇಡಿ, ನನ್ನ ನೋಡಿ ಉತ್ತರ ಕೊಡಿ ಎಂದು ಸ್ಪೀಕರ್‌ ಹೇಳಿದರು.

    ಬಳಿಕ ಮಾತನಾಡಿದ ಆರ್.ಅಶೋಕ್, ಮರಾಠಾ ನಿಗಮಕ್ಕೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕಕ್ಕೆ ಕ್ರಮವಹಿಸುತ್ತೇವೆ. ಈಗಾಗಲೇ ಘೋಷಿತ 50 ಕೋಟಿ ರೂ. ಜೊತೆಗೆ ಹೆಚ್ಚುವರಿ ಅನುದಾನ ಕೊಡಿಸುವ ಬಗ್ಗೆ ಕ್ರಮಕೈಗೊಂಡು ಯತ್ನಾಳ್ ಅವರನ್ನು ಸಿಎಂ ಜೊತೆ ಭೇಟಿ ಮಾಡಿಸುತ್ತೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಮುಂದಿನ ವರ್ಷ ಕೆಲ ಶಾಲೆಗಳಲ್ಲಿ NEP ಜಾರಿ: ಬಿ.ಸಿ.ನಾಗೇಶ್

  • ಜ. 9ರಂದು ರಾಜ್ಯಾದ್ಯಂತ ರೈಲು ತಡೆ: ವಾಟಾಳ್ ನಾಗರಾಜ್

    ಜ. 9ರಂದು ರಾಜ್ಯಾದ್ಯಂತ ರೈಲು ತಡೆ: ವಾಟಾಳ್ ನಾಗರಾಜ್

    – ಮರಾಠಿ ಅಭಿವೃದ್ಧಿ ನಿಗಮ ವಿರೋಧಿಸಿ ತಡೆ

    ಚಾಮರಾಜನಗರ: ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿ ಜನವರಿ 9ರಂದು ರಾಜ್ಯಾದ್ಯಂತ ರೈಲು ತಡೆ ನಡೆಸಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

    ಗಡಿ ಜಿಲ್ಲೆ ಚಾಮರಾಜನಗರದ ಡಿಸಿ ಕಚೇರಿ ಮುಂಭಾಗ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಮರಾಠ ಅಭಿವೃದ್ಧಿ ನಿಗಮ ರದ್ದಿಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ವಾಟಾಳ್ ನಾಗರಾಜ್ ಜ.9 ರಂದು ರಾಜ್ಯಾದ್ಯಂತ ರೈಲು ತಡೆ ನಡೆಸುವ ಎಚ್ಚರಿಕೆ ನೀಡಿದರು.

    ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ರೈಲು ಹಳಿಗಳ ಮೇಲೆ ಸತ್ಯಾಗ್ರಹ ಕೂರಿಸ್ತಿವಿ. ಜನಗಳ ಮೇಲೆ ರೈಲು ಬಿಡಬೇಕು ಹೊರತು, ರೈಲು ಹೋಗಲೂ ಸಾಧ್ಯವಿಲ್ಲ. ಬೀದರ್ ನಿಂದ ಚಾಮರಾಜನಗರದವರೆಗೆ, ಮಂಗಳೂರಿನಿಂದ ಕೋಲಾರದವರೆಗೆ ರೈಲು ನಿಲ್ದಾಣ ಸೇರಿದಂತೆ ಹಳಿಗಳ ಮೇಲೆ ಕುಳಿತು ಹೋರಾಟ ಮಾಡ್ತೀವಿ. ಎರಡು ಸಾವಿರ ಸಂಘಟನೆಯಿಂದ ರೈಲು ತಡೆಗೆ ಬೆಂಬಲ ಸಿಕ್ಕಿದ್ದು, ಅಂದು ಯಾರೂ ಕೂಡ ಸಾರ್ವಜನಿಕರು ರೈಲಿನಲ್ಲಿ ಪ್ರಯಾಣಿಸಬೇಡಿ. ನಿಲ್ದಾಣಕ್ಕೆ ಬರಬೇಡಿ ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದರು.

  • ಡಿ.7ರ ವಾಟಾಳ್ ಸಭೆಯಲ್ಲಿ ಮುಂದಿನ ಹೋರಾಟದ ನಿರ್ಧಾರ: ಪ್ರವೀಣ್ ಶೆಟ್ಟಿ

    ಡಿ.7ರ ವಾಟಾಳ್ ಸಭೆಯಲ್ಲಿ ಮುಂದಿನ ಹೋರಾಟದ ನಿರ್ಧಾರ: ಪ್ರವೀಣ್ ಶೆಟ್ಟಿ

    ಬೆಂಗಳೂರು: ಮರಾಠಾ ಅಭಿವೃದ್ಧಿ ಪ್ರಾಧಿಕಾರ ಹಿಂಪಡೆಯುವ ಹೋರಾಟಕ್ಕೆ ಸಂಬಂಧಪಟ್ಟಂತೆ ಸೋಮವಾರ ವಾಟಾಳ್ ನಾಗರಾಜ್ ಅವರು ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಮುಂದಿನ ಹೋರಾಟದ ಹಾದಿಯ ಬಗ್ಗೆ ಚರ್ಚಿಸಿ ನಿರ್ಧರಿಸೋದಾಗಿ ಕರವೇ ಪ್ರವೀಣ್ ಶೆಟ್ಟಿ ಬಣದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂದು ಬಂಧಿಸಿರುವ ಹೋರಾಟಗಾರರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಮರಾಠ ಅಭಿವೃದ್ಧಿ ಪ್ರಾಧಿಕಾರ ಹಿಂಪಡೆಯುವಂತೆ ಸರ್ಕಾರವನ್ನ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಇಂದು ರಾಜ್ಯ ಬಂದ್‍ಗೆ ಕರೆ ನೀಡಿದ್ದವು. ಈ ಬಂದ್‍ಗೆ ನೈತಿಕ ಬೆಂಬಲ ಘೋಷಿಸಿದ ಕರವೇ ಪ್ರವೀಣ್ ಶೆಟ್ಟಿ ಬಣ ಮೇಖ್ರಿ ಸರ್ಕಲ್‍ನಿಂದ ಪ್ರತಿಭಟನಾ ಮೆರವಣಿಗೆ ಮಾಡಿ ಮೌರ್ಯ ಸರ್ಕಲ್‍ನಲ್ಲಿ ಸಾಂಕೇತಿಕವಾಗಿ ಉಪವಾಸ ಸತ್ಯಾಗ್ರಹ ಮಾಡಿದರು.

    ಸಂಜೆ ವೇಳೆಗೆ ಸತ್ಯಾಗ್ರಹವನ್ನು ಅಂತ್ಯಗೊಳಿಸಿ ಮಾತಾನಾಡಿದ ಪ್ರವೀಣ್ ಶೆಟ್ಟಿ, ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಇಂದು ಸಾಂಕೇತಿಕವಾಗಿ ಧರಣಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿರಲಿಲ್ಲ. ಸೋಮವಾರ ಸಿಎಂಗೆ ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.

    ಕನ್ನಡ ಪರ ಸಂಘಟನೆಗಳು ಇಂದು ರಾಜ್ಯ ಬಂದ್‍ಗೆ ಕರೆ ಕೊಟ್ಟಿದ್ದರೂ ಸರ್ಕಾರದ ಬಂದ್ ಯಶಸ್ವಿಯಾಗದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಸಾಕಷ್ಟು ಯೋಜನೆಗಳನ್ನ ಹಾಕಿಕೊಂಡಿತ್ತು. ಬೆಂಗಳೂರು ನಗರ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಬಂದ್ ಆಗದಂತೆ ಕ್ರಮಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬಂದ್ ಬಿಸಿ ಯಾರಿಗೂ ಅಷ್ಟಾಗಿ ತಟ್ಟಿರಲಿಲ್ಲ.

  • ಯತ್ನಾಳ್‍ಗೆ ತಲೆ ಸರಿಯಿಲ್ಲ, ನಾವೇ ನಿಮ್ಹಾನ್ಸ್‌ಗೆ ಸೇರಿಸಿ ಚಿಕಿತ್ಸೆ ಕೊಡಿಸ್ತೇವೆ: ವಾಟಾಳ್

    ಯತ್ನಾಳ್‍ಗೆ ತಲೆ ಸರಿಯಿಲ್ಲ, ನಾವೇ ನಿಮ್ಹಾನ್ಸ್‌ಗೆ ಸೇರಿಸಿ ಚಿಕಿತ್ಸೆ ಕೊಡಿಸ್ತೇವೆ: ವಾಟಾಳ್

    ಕೊಪ್ಪಳ: ಯತ್ನಾಳ್‍ಗೆ ತಲೆ ಸರಿಯಿಲ್ಲ ನಾವೇ ನಿಮ್ಹಾನ್ಸ್‌ಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತೇವೆ ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕಿಡಿಕಾರಿದರು.

    ರೋಲ್‍ಕಾಲ್ ಕನ್ನಡಪರ ಸಂಘಟನೆಗಳ ಬಂದ್‍ಗೆ ಕಿವಿಗೊಡಬೇಕಿಲ್ಲ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್‍ಗೆ ತಲೆ ಸರಿಯಿಲ್ಲ, ನಾವೇ ನಿಮ್ಹಾನ್ಸ್‌ಗೆ  ಸೇರಿಸಿ ಚಿಕಿತ್ಸೆ ಕೊಡಿಸುತ್ತೇವೆ. ಈ ಹಿಂದೆ ಯಡಿಯೂರಪ್ಪ ಅವರನ್ನೇ ಬೈದಂತವರು, ಅವರ ತಂದೆ ತಾಯಿಗೂ ಬೈಯೋದಿಲ್ಲ ಎಂದು ಏನು ಗ್ಯಾರಂಟಿ ಎಂದು ಹರಿಹಾಯ್ದರು.

    ಕನ್ನಡ ಒಕ್ಕೂಟದ ಮುಖಂಡ ಸಾ.ರಾ.ಗೋವಿಂದ್ ಮಾತನಾಡಿ, ಮರಾಠಿ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅಲ್ಲ ಸಾವಿರ ಕೋಟಿ ರೂ. ಅನುದಾನ ನೀಡಿ. 50 ಕೋಟಿಯಲ್ಲಿ ನಿಕ್ಕರ್ ಪಂಚೆ ತೆಗೆದುಕೊಳ್ಳಕ್ಕೆ ಆಗಲ್ಲ, ನಾವು ಮರಾಠಿಗರ ಮತ್ತು ಬೇರೆ ಯಾವ ಜಾತಿ ಸಮುದಾಯದ ವಿರುದ್ಧ ಇಲ್ಲ. ಮರಾಠಿಗರ ಶಿಕ್ಷಣ, ಅಭಿವೃದ್ಧಿಗಾಗಿ ಸಾವಿರ ಕೋಟಿ ಕೊಟ್ಟು ಅವರನ್ನ ಅಭಿವೃದ್ಧಿ ಮಾಡಿ ನಮಗೆ ವಿರೋಧವಿಲ್ಲ ಆದರೆ ಮರಾಠಿ ಅಭಿವೃದ್ಧಿ ಪ್ರಾಧಿಕಾರ ಬೇಡ. ಇದರಿಂದ ನಾಳೆ ತಮಿಳು, ತೆಲುಗು, ಮಲಯಾಳಿ, ಮಾರ್ವಾಡಿಯವರು ಬಂದು ಪ್ರಾಧಿಕಾರ ಕೇಳುತ್ತಾರೆ. ಹೀಗಾಗಿ ಕೂಡಲೇ ಮರಾಠಾ ಅಭಿವೃದ್ಧಿ ಪ್ರಾಧಿಕಾರ ಕೈ ಬಿಡಬೇಕೆಂದು ಆಗ್ರಹಿಸಿದರು.

    ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದನ್ನು ಖಂಡಿಸಿ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕೊಪ್ಪಳದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಸರ್ಕಾರ ಯಾವ ಕಾರಣಕ್ಕೆ ಮರಾಠಿ ಅಭಿವೃದ್ಧಿ ಪ್ರಾಧಿಕಾರ ಮಾಡಿದೆ ತಿಳಿಯುತ್ತಿಲ್ಲ. ಕೇವಲ ಬಸವಕಲ್ಯಾಣ ಚುನಾವಣೆಗಾಗಿ ಮರಾಠರ ಮತ ಓಲೈಸಲು ಮರಾಠ ಪ್ರಾಧಿಕಾರ ಮಾಡಿ ಕನ್ನಡಿಗರನ್ನ ಕೆರಳಿಸುವಂತೆ ಮಾಡಿದ್ದಾರೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ರಚನೆ ಮಾಡಿದ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಕೈ ಬಿಡಬೇಕು ಇಲ್ಲದಿದ್ದರೆ ಬರುವ ಡಿ.5 ರಂದು ಸಂಪೂರ್ಣ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದರು.

  • ಹಲವಾರು ಸಂಘಟನೆಗಳ ಬೆಂಬಲ – ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್

    ಹಲವಾರು ಸಂಘಟನೆಗಳ ಬೆಂಬಲ – ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್

    ಬೆಂಗಳೂರು: ಇಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡುವ ವಿಚಾರವಾಗಿ ಸಭೆ ನಡೆಸಿದ್ದು, ಈ ಸಭೆಯಲ್ಲಿ ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್ ಮಾಡುವುದಾಗಿ ತಿಳಿಸಿದ್ದಾರೆ.

    ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಸರ್ಕಾರದ ತೀರ್ಮಾನಕ್ಕೆ ಕನ್ನಡಪರ ಹೋರಾಟಗಾರರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಹಿಂದೆಯೇ ಇದರ ವಿರುದ್ಧ ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡ ಪರ ಸಂಘಟನೆಗಳು ಹೇಳಿಕೊಂಡಿದ್ದವು. ಈ ವಿಚಾರವಾಗಿ ಇಂದು ಸಭೆ ನಡೆಸಿದ್ದು, ಈ ಸಭೆಯಲ್ಲಿ ಕರ್ನಾಟಕ ಬಂದ್‍ಗೆ ಬಹುತೇಕ ಸಂಘಟನೆಗಳು ಬೆಂಬಲ ನೀಡಿವೆ.

    ಇಂದು ವುಡ್‍ಲ್ಯಾಂಡ್ ಹೋಟೆಲ್‍ನಲ್ಲಿ ಸಭೆ ಸೇರಿದ್ದ ಹಲವಾರು ಸಂಘಟನೆಗಳ ಮುಖಂಡರು ಡಿಸೆಂಬರ್ 5ರಂದು ನಡೆಯುವ ಬಂದ್‍ಗೆ ಬೆಂಬಲಿಸುವುದಾಗಿ ತಿಳಿಸಿದ್ದಾರೆ. ವಿವಿಧ ಕನ್ನಡಪರ ಸಂಘಟನೆಗಳು, ಓಲಾ, ಊಬರ್ ಅಸೋಸಿಯೇಷನ್, ಆಟೋ ಅಸೋಸಿಯೇಷನ್ ಮತ್ತು ಸ್ಕೂಲ್ ವ್ಯಾನ್ ಅಸೋಸಿಯೇಷನ್ ಬಂದ್‍ಗೆ ಬೆಂಬಲ ನೀಡಿವೆ. ಜೊತೆಗೆ ಬಂದ್ ದಿನ 5 ಲಕ್ಷ ಜನರು ಬೆಂಗಳೂರಿನಲ್ಲಿ ಮೆರವಣಿಗೆ ನಡೆಸುವ ಸಿದ್ಧತೆ ಮಾಡಿಕೊಂಡಿದ್ದಾರೆ. ಬಸ್‍ಗಳನ್ನು ಓಡಾಡಲು ಬಿಡುವುದಿಲ್ಲ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

    ಇಂದು ನಡೆದ ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ಫಿಲ್ಮ್ ಚೇಂಬರ್ ನ ಮಾಜಿ ಅಧ್ಯಕ್ಷರಾದ ಸಾರಾ ಗೋವಿಂದು, ಕರವೇ ಅಧ್ಯಕ್ಷ ಶಿವರಾಮೇಗೌಡ, ಮಂಜುನಾಥ್ ದೇವ, ಗಿರೀಶ್ ಗೌಡ, ಪಾಲನೇತ್ರ, ಟಿ.ಪಿ ಪ್ರಸನ್ನಕುಮಾರ್, ಅಮ್ಮಿಚಂದ್ರು, ನಾರಾಯಣ ಸ್ವಾಮಿ, ವಾಟಾಳ್ ವೆಂಕಟೇಶ್, ನರಸಿಂಹ ಮೂರ್ತಿ, ಮುಭಾರಕ್ ಪಾಷಾ, ಸಾಧಿಕ್ ಪಾಷಾ, ಬಾಲಾಜಿ ತಿಮ್ಲಾಪುರ, ಕೊಪ್ಪಳ ವಿಜಯ್, ಸಯ್ಯದ್ ಜಿಲಾನಿ ಪಾಷಾ, ಎರ್ರಿಸ್ವಾಮಿ, ಮುನ್ನಾವರ, ಪಾರ್ಥಸಾರಥಿ, ಬಾಲಾಜಿ ಕೃಷ್ಣಮೂರ್ತಿ, ವೇಣುಗೋಪಾಲ್, ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರೆಲ್ಲರು ಭಾಗವಹಿಸಿದ್ದರು.

  • ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ – ಸಿಎಂ ಸ್ಪಷ್ಟನೆ

    ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ – ಸಿಎಂ ಸ್ಪಷ್ಟನೆ

    ಬೆಂಗಳೂರು: ರಾಜ್ಯದಲ್ಲಿ ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

    ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲು ಉದ್ದೇಶಿಸಲಾಗಿದೆ. ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ. ಮರಾಠ ಜನಾಂಗದವರು ತಲಾತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎನ್ನುವ ಆಶಯದಿಂದ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

    ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲು ಉದ್ದೇಶಿಸಲಾಗಿದೆ. ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

    ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಬಲಿಷ್ಠ ಮತ್ತು ನಿರ್ಣಾಯಕ ಸಮುದಾಯವಾಗಿರುವ ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸಲಾಗಿದೆ. ವೀರಶೈವ ಲಿಂಗಾಯತ ಸಮಾಜದ ಸಂಪುಟ ಸಚಿವರ ಒತ್ತಡಕ್ಕೆ ತಲೆ ಬಾಗಿ ಸಿಎಂ ಯಡಿಯೂರಪ್ಪ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

    ಮರಾಠ ಸಮುದಾಯದ ಪ್ರಾಧಿಕಾರಕ್ಕೆ 50 ಕೋಟಿ ಮೀಸಲು ಇರಿಸಿದ್ದ ಸರ್ಕಾರ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರಕ್ಕೆ ಯಾವುದೇ ಅನುದಾನವನ್ನು ತಕ್ಷಣಕ್ಕೆ ನಿಗದಿ ಮಾಡಿರುವುದು ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ರಾಜ್ಯ ರಾಜಕೀಯದ ಮತ್ತೊಂದು ಪ್ರಭಾವಿ ಸಮುದಾಯ ಎನಿಸಿಕೊಂಡಿರುವ ಒಕ್ಕಲಿಗ ಸಮುದಾಯದ ಮುಖಂಡರು ಕೂಡ ತಮ್ಮ ನಮ್ಮ ಜಾತಿಗೂ ಅಭಿವೃದ್ಧಿ ಪ್ರಾಧೀಕಾರ ರಚನೆ ಮಾಡಿ ಎಂದು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.

    ಒಕ್ಕಲಿಗ ಪ್ರಾಧಿಕಾರದ ಬೇಡಿಕೆಯನ್ನು ಮಂಡಿಸಿರೋದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‍ಆರ್ ವಿಶ್ವನಾಥ್. ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಮ್ಮ ತಕರಾರಿಲ್ಲ. ಆದ್ರೆ ಅದೇ ರೀತಿ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನು ರಚಿಸಲಿ ಎಂದಿದ್ದಾರೆ. ಶೀಘ್ರವೇ ಸಿಎಂ ಭೇಟಿ ಮಾಡೋದಾಗಿ ತಿಳಿಸಿದ್ದಾರೆ. ಇನ್ನು ಜೈನ ಸಮುದಾಯ ಕೂಡ ನಿಗಮ ಮಂಡಳಿ ರಚನೆಗೆ ಆಗ್ರಹಿಸಿದೆ.

  • ಮರಾಠ ಬೆನ್ನಲ್ಲೇ ಲಿಂಗಾಯತ ಪ್ರಾಧಿಕಾರದ ಕೂಗು- ಬಿಜೆಪಿಗೆ ಪ್ರತಿಯಾಗಿ ಕಾಂಗ್ರೆಸ್‍ನಿಂದ ಮೀಸಲು ದಾಳ

    ಮರಾಠ ಬೆನ್ನಲ್ಲೇ ಲಿಂಗಾಯತ ಪ್ರಾಧಿಕಾರದ ಕೂಗು- ಬಿಜೆಪಿಗೆ ಪ್ರತಿಯಾಗಿ ಕಾಂಗ್ರೆಸ್‍ನಿಂದ ಮೀಸಲು ದಾಳ

    – ಕನ್ನಡ ಸಂಘಟನೆಗಳಿಂದ ನಾಳೆ ಪ್ರತಿಭಟನೆ

    ಬೆಂಗಳೂರು: ರಾಜ್ಯದಲ್ಲೀಗ ಪ್ರಾಧಿಕಾರ ಮತ್ತು ಮೀಸಲು ಪಾಲಿಟಿಕ್ಸ್ ಜೋರಾಗ್ತಿದೆ. ಬೈ ಎಲೆಕ್ಷನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುತ್ತಲೇ, ವೀರಶೈವ ಲಿಂಗಾಯತರು ಧ್ವನಿ ಮುನ್ನಲೆಗೆ ಬಂದಿದೆ. ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡಬೇಕೆಂದು ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಸೋಮಣ್ಣ, ಬಿಸಿ ಪಾಟೀಲ್, ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರು ಅವರಿದ್ದ ನಿಯೋಗ ಮುಖ್ಯಮಂತ್ರಿಗೆ ಮನವಿ ಮಾಡಿದೆ.

    ಮರಾಠ ಅಭಿವೃದ್ಧಿ ಪ್ರಾಧಿಕಾರ ಸಮರ್ಥಿಸುತ್ತಲೇ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಕೋರಿದ್ದಾರೆ. ಜೊತೆಗೆ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಕೊಡಬೇಕೆಂದು ಮನವಿ ಮಾಡಿದ್ದಾರೆ. ಬಿಜೆಪಿಯವರ ಈ ಪ್ರಾಧಿಕಾರದ ಅಸ್ತ್ರಕ್ಕೆ ವಿಪಕ್ಷಗಳು ಮೀಸಲಾತಿ ಅಸ್ತ್ರವನ್ನು ಪ್ರಯೋಗಿಸಿವೆ.

    ಮಹಾರಾಷ್ಟ್ರದಲ್ಲಿ ಮರಾಠಿಗರಿಗೆ ಶೇಕಡಾ 16ರಷ್ಟು ಮೀಸಲಾತಿ ನೀಡಿದ ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿ ಲಿಂಗಾಯತರಿಗೆ ಶೇಕಡಾ 16ರಷ್ಟು ಮೀಸಲಾತಿ ನೀಡಬೇಕೆಂಬ ಬಸವರಾಜ್ ಹೊರಟ್ಟಿ ಕೂಗಿಗೆ ಮಾಜಿ ಮಂತ್ರಿ ಎಂಬಿ ಪಾಟೀಲ್ ಧ್ವನಿ ಗೂಡಿಸಿದ್ದಾರೆ. ಇಂದು ಸಿಎಂಗೆ ಬಹಿರಂಗ ಪತ್ರ ಬರೆದಿದ್ದಾರೆ. ಕೆಲವರ ಬೇಡಿಕೆಯಂತೆ ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ, 100-200ಕೋಟಿ ಅನುದಾನ ಒದಗಿಸಿದರೆ, ಹೆಚ್ಚಿನ ಪ್ರಯೋಜನ ಆಗಲ್ಲ. ಇದ್ರ ಬದಲು ಲಿಂಗಾಯತರಿಗೆ ಶೇಕಡಾ 16ರಷ್ಟು ಮೀಸಲಾತಿ ನೀಡ್ಬೇಕು ಅಂತಾ ಆಗ್ರಹಿಸಿದ್ದಾರೆ. ಈ ಬೆಳವಣಿಗೆಯಿಂದ ಸಿಎಂ ಯಡಿಯೂರಪ್ಪ ಇಕ್ಕಟ್ಟಿಗೆ ಸಿಲುಕಿದ್ದಾರೆ.

     ನಾರಾಯಣಗೌಡ ಎಚ್ಚರಿಕೆ: ಸಚಿವರು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ಸಿಡಿದೆದ್ದಿವೆ. ಮರಾಠ ಪ್ರಾಧಿಕಾರ ರಚನೆ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಕನ್ನಡ ರಕ್ಷಣಾ ವೇದಿಕೆ ಆಗ್ರಹಿಸಿದೆ. ಕನ್ನಡಿಗರ ಸ್ವಾಭಿಮಾನ ಕೆರಳಿಸಬೇಡಿ. ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕಾಗುತ್ತೆ ಎಂದು ಕರವೇ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

    ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮೂಲಕ ಬಿಎಸ್‍ವೈ ಸರ್ಕಾರ ತಾರತಮ್ಯ ಮಾಡುತ್ತಿದೆ. ಕನ್ನಡಿಗರ ಮೇಲೆ ಸವಾರಿ ಮಾಡಲು ಮರಾಠಿಗರಿಗೆ ರಾಜ್ಯ ಸರ್ಕಾರವೇ ಪ್ರೋತ್ಸಾಹ ಕೊಟ್ಟಂತಿದೆ ಎಂದು ಕರವೇ ಪ್ರವೀಣ್ ಶೆಟ್ಟಿ ಆಪಾದಿಸಿದ್ದಾರೆ. ಇವತ್ತು ಮರಾಠ ಸಮುದಾಯಕ್ಕೆ, ನಾಳೆ ಮಾರ್ವಾಡಿಗಳಿಗೆ, ತಮಿಳರಿಗೆ, ತೆಲುಗಿನವರಿಗೆ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ರೆ ಕನ್ನಡಿಗರ ಪರಿಸ್ಥಿತಿ ಏನು? ಕೇರಳ, ಗೋವಾದಲ್ಲಿ ಕನ್ನಡಿಗರ ಮನೆಗಳನ್ನು ನಾಶ ಮಾಡ್ತಿದ್ದಾರೆ. ಅವರಿಗೆ ಎಷ್ಟು ಹಣ ಬಿಡುಗಡೆ ಮಾಡಿದ್ರಿ ಎಂದು ಪ್ರಶ್ನಿಸಿದ್ದಾರೆ.

    ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ ಕೂಡ ಆಯೋಜಿಸಲಾಗಿದೆ. ಇನ್ನು, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಅನಿಲ್ ಬೆನಕೆ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚಾರಣೆ ಮಾಡಲಾಗಿದೆ.

    ‘ಮಹಾ’ ಮೀಸಲಿಗೆ ಸುಪ್ರೀಂ ತಡೆ: ಕರ್ನಾಟಕದಲ್ಲಿ ಲಿಂಗಾಯತರಿಗೆ ಶೇಕಡಾ 16ರಷ್ಟು ಮೀಸಲಾತಿ ನೀಡಲು ಸಾಧ್ಯನಾ ಅನ್ನೋ ಪ್ರಶ್ನೆ ಎದುರಾಗುತ್ತಿದೆ. ಕಾಂಗ್ರೆಸ್ ಮಹಾರಾಷ್ಟ್ರ ಮಾದರಿಯನ್ನು ಪ್ರಸ್ತಾಪಿಸಿದೆ. ಆದರೆ ಮಹಾರಾಷ್ಟ್ರ ಸರ್ಕಾರದ ಆದೇಶಕ್ಕೆ ಸುಪ್ರೀಂಕೋರ್ಟ್ ಎರಡು ತಿಂಗಳ ಹಿಂದೆಯೇ ರೆಡ್ ಸಿಗ್ನಲ್ ನೀಡಿದೆ.

    2018ರಲ್ಲಿ ಮಹಾರಾಷ್ಟ್ರ ಸರ್ಕಾರದಿಂದ ಮರಾಠಿಗರಿಗೆ ಮಹಾ ಮೀಸಲಾತಿ ನೀಡಿತ್ತು. ಮರಾಠಿಗರಿಗೆ ಶಿಕ್ಷಣ, ಉದ್ಯೋಗದಲ್ಲಿ ಶೇ.16ರಷ್ಟು ಮೀಸಲಾತಿ ಆದೇಶ ಮಹಾರಾಷ್ಟ್ರ ವಿಧಾನಸಭೆಯಲ್ಲಿ 2018ರ ನ.30ರಂದು ಬಿಲ್ ಪಾಸ್ ಮಾಡಲಾಗಿತ್ತು. ಆದರೆ, ಇದನ್ನು ಪ್ರಶ್ನಿಸಿ ಹಲವರು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ಶೇಕಡಾ 16ರಷ್ಟು ಮೀಸಲಾತಿ ಸರಿಯಲ್ಲ ಎಂದು 2019ರ ಜುಲೈನಲ್ಲಿ ಬಾಂಬೈ ಹೈಕೋರ್ಟ್ ತೀರ್ಪು ನೀಡಿತ್ತು.

    ಉದ್ಯೋಗದಲ್ಲಿ ಶೇ.12ರಷ್ಟು, ಶಿಕ್ಷಣದಲ್ಲಿ ಶೇ.13ರಷ್ಟು ಮೀರದಂತೆ ಮೀಸಲಾತಿಗೆ ಸೂಚನೆ ಬಾಂಬೆ ಹೈಕೋರ್ಟ್ ಸೂಚನೆ ನೀಡಿತ್ತು. ಬಾಂಬೆ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. 2020ರ ಸೆ.09ರಂದು ಬಾಂಬೆ ಹೈಕೋರ್ಟ್ ತೀರ್ಪುನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿತ್ತು. ಮರಾಠಿಗರಿಗೆ ಶೇ. 16ರಷ್ಟು ಮೀಸಲಾತಿ ಜಾರಿಗೊಳಿಸದಂತೆ ಮಹಾ ಸರ್ಕಾರಕ್ಕೆ ಸೂಚನೆ ನೀಡಿತ್ತು. ಆದ್ರೆ 2018ರಿಂದ ಮೀಸಲಾತಿ ಲಾಭ ಪಡೆದವರಿಗೆ ತೊಂದರೆ ಕೊಡದಂತೆ ಸೂಚನೆ ನೀಡಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ಅಗತ್ಯವಿರುವ ಹಿನ್ನೆಲೆಯಲ್ಲಿ ಸಾಂವಿಧಾನಿಕ ಪೀಠ ರಚನೆ ಮಾಡಲಾಗಿದೆ.

  • ಬೆಳಗಾವಿ, ಬಸವ ಕಲ್ಯಾಣ ಗೆಲ್ಲಲು ಸಿಎಂ ‘ಮರಾಠ’ ಅಸ್ತ್ರ

    ಬೆಳಗಾವಿ, ಬಸವ ಕಲ್ಯಾಣ ಗೆಲ್ಲಲು ಸಿಎಂ ‘ಮರಾಠ’ ಅಸ್ತ್ರ

    ಬೆಂಗಳೂರು: ಶಿರಾ ಉಪ ಚುನಾವಣೆಗೆ ಮುನ್ನ ಕಾಡುಗೊಲ್ಲರ ಅಭಿವೃದ್ಧಿ ನಿಗಮ ರಚಿಸಿ ಆ ಸಮುದಾಯದ ಮನಗೆದ್ದು, ಕೊನೆಗೆ ಶಿರಾ ಕ್ಷೇತ್ರದಲ್ಲಿ ಗೆಲುವು ಕೂಡ ಸಾಧಿಸಿತ್ತು ಬಿಜೆಪಿ ಸರ್ಕಾರ. ಈಗ ಅಂಥಾದ್ದೇ ಅಸ್ತ್ರವನ್ನು ಬೆಳಗಾವಿ ಮತ್ತು ಬಸವಕಲ್ಯಾಣದಲ್ಲಿ ಪ್ರಯೋಗಿಸಿದೆ.

    ಉಪ ಚುನಾವಣೆ ಘೋಷಣೆಗೂ ಮುನ್ನವೇ, ಮರಾಠ ಸಮುದಾಯ ಓಲೈಸುವ ಸಲುವಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಸಿಎಂ ಬಿಎಸ್‍ವೈ ಆದೇಶ ಹೊರಡಿಸಿದ್ದಾರೆ. ಅಲ್ಲದೇ 50 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ. ಶುಕ್ರವಾರ ಬಿಜೆಪಿಯ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ, ಬಸವಕಲ್ಯಾಣದ ಮರಾಠ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.ಬಸವಕಲ್ಯಾಣದಲ್ಲಿ ಮರಾಠ ಸಮುದಾಯದ 40 ಸಾವಿರ ಮತಗಳಿವೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲೂ ಮರಾಠ ಸಮುದಾಯದ ಮತಗಳು ನಿರ್ಣಾಯಕವಾಗಿವೆ.

    ಬಿಹಾರದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದು, ಅಧಿಕಾರ ಹಂಚಿಕೆಯಾದ ಬಳಿಕವೇ ಬಿಎಸ್‍ವೈ ಸಂಪುಟದ ಸರ್ಜರಿ ನಡೆಯೋದು ಬಹುತೇಕ ಫಿಕ್ಸ್ ಆಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಹಬ್ಬದ ನಂತ್ರ ಸಿಎಂ ಹೈಕಮಾಂಡ್ ಭೇಟಿ ಮಾಡ್ತಾರೆ ಅಂದ್ರು. ಗೃಹಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಎಲ್ಲರಿಗೂ ಸಿಹಿ ಇರಲಿದೆ. ಯಾರಿಗೂ ಕಹಿ ಇರಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

    ಸಂಪುಟದಿಂದ ನಾಲ್ವರು ಸಚಿವರನ್ನ ಕೈಬಿಡ್ತಾರೆ ಎಂಬ ಸುದ್ದಿಗೆ ಪ್ರತಿಕ್ರಿಯಿಸಿದ ಸಚಿವ ಮಾಧುಸ್ವಾಮಿ, ಈ ಬಗ್ಗೆ ಸಿಎಂ ಯಾರ ಬಳಿಯೂ ಚರ್ಚಿಸಿ¯್ಲ ಎಂದರು. ಮುನಿರತ್ನರನ್ನು ಮಂತ್ರಿ ಮಾಡೋದಾಗಿ ಸಿಎಂ ಹೇಳಿದ್ದಾರೆ. ಅದರ ಬಗ್ಗೆಯಷ್ಟೇ ನಾನು ಮಾತಾಡಬಹುದು ನೋಡಿ. ಈ ಮಧ್ಯೆ, ಹುಬ್ಬಳ್ಳಿಯಲ್ಲಿ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಷಿ, ಸಚಿವ ಶೆಟ್ಟರ್‍ರನ್ನು ನೂತನ ಶಾಸಕ ಮುನಿರತ್ನ ಭೇಟಿ ಮಾಡಿದ್ದಾರೆ.