Tag: Marathahalli

  • ವಿದ್ಯಾರ್ಥಿನಿ ಮೇಲೆ ರೇಪ್‌,ಬ್ಲ್ಯಾಕ್‌ಮೇಲ್‌ – ಮೂಡುಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು, ಸ್ನೇಹಿತ ಅರೆಸ್ಟ್‌

    ವಿದ್ಯಾರ್ಥಿನಿ ಮೇಲೆ ರೇಪ್‌,ಬ್ಲ್ಯಾಕ್‌ಮೇಲ್‌ – ಮೂಡುಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು, ಸ್ನೇಹಿತ ಅರೆಸ್ಟ್‌

    – ಬೆಂಗಳೂರಿಗೆ ಕರೆತಂದು ಸ್ನೇಹಿತನ ಮನೆಯಲ್ಲಿ ಕೃತ್ಯ
    – ವಿಡಿಯೋ ಇದೆ ಎಂದು ಬೆದರಿಕೆ ಹಾಕಿದ್ದ ದುರುಳರು

    ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ (Rape) ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದಿರೆಯ (Moodabidri) ಪ್ರತಿಷ್ಠಿತ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತನನ್ನು ಮಾರತಹಳ್ಳಿ ಪೊಲೀಸರು (Marathahalli Police) ಬಂಧಿಸಿದ್ದಾರೆ.

    ಕಾಲೇಜಿನ ಹಳೆ ವಿದ್ಯಾರ್ಥಿನಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಳು. ದೂರಿನ ಆಧಾರದಲ್ಲಿ ಎಫ್‌ಐಆರ್‌ ದಾಖಲಿಸಿದ ಪೊಲೀಸರು ಉಪನ್ಯಾಸಕರಾದ ನರೇಂದ್ರ, ಸಂದೀಪ್ ಮತ್ತು ಸ್ನೇಹಿತ ಅನೂಪ್‌ನನ್ನು ಬಂಧಿಸಿದ್ದಾರೆ.

    ಏನಿದು ಕೇಸ್‌?
    ಮೊದಲು ವಿದ್ಯಾರ್ಥಿನಿಗೆ ನೋಟ್ಸ್ ನೀಡುವ ವಿಚಾರದಲ್ಲಿ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ಪರಿಚಯವಾಗಿದ್ದ. ಹಂತ ಹಂತವಾಗಿ ಚಾಟ್ ಮಾಡಿ ನೋಟ್ಸ್ ನೀಡುವುದಾಗಿ ಮತ್ತು ಸಹಾಯ ಮಾಡುವುದಾಗಿ ಹೇಳಿದ್ದ. ವಿದ್ಯಾರ್ಥಿನಿ ಬೆಂಗಳೂರಿಗೆ ಬಂದ ನಂತರವೂ ಸಲುಗೆ ಬೆಳೆಸಿದ್ದ. ಇದೆ ನೆಪದಲ್ಲಿ ವಿದ್ಯಾರ್ಥಿನಿಯನ್ನು ಬೆಂಗಳೂರಿನ ಮಾರತ್‌ಹಳ್ಳಿಯಲ್ಲಿರುವ ಗೆಳೆಯನ ರೂಮ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ರೇಪ್‌ ಮಾಡಿದ ಬಳಿಕ ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ. ಇದನ್ನೂ ಓದಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಟೆಕ್ಕಿ ಗಿರೀಶ್‌ ಹತ್ಯೆ ಕೇಸ್‌ ಶುಭಾಗೆ ಕ್ಷಮಾದಾನ ಅವಕಾಶ ನೀಡಿದ ಸುಪ್ರೀಂ

     

    ಸ್ನೇಹಿತ ನರೇಂದ್ರ ಈ ಕೃತ್ಯ ಎಸಗಿದ್ದ ವಿಚಾರ ತಿಳಿದು ಜೀವಶಾಸ್ತ್ರ ಉಪನ್ಯಾಸಕ ಸಂದೀಪ್‌ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ಸಂದರ್ಭದಲ್ಲಿ ಸಂದೀಪ್‌, ನರೇಂದ್ರ ಜೊತೆಗೆ ಇರುವ ಫೋಟೋ, ವಿಡಿಯೋ ತನ್ನ ಬಳಿ ಇದೆ ಎಂದು ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ.

    ಸಂದೀಪ್‌ ಕರೆದುಕೊಂಡು ಹೋಗಿ ಅನೂಪ್‌ ರೂಮಿನಲ್ಲಿ ಅತ್ಯಾಚಾರ ಎಸಗಿದ್ದ. ನಂತರ ಅನೂಪ್‌ ಆಕೆಯನ್ನು ಸಂರ್ಪಕಿಸಿ ನೀನು ನನ್ನ ರೂಮಿಗೆ ಬಂದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಷ್ಟೇ ಅಲ್ಲದೇ ನನ್ನ ರೂಮ್​​ನಲ್ಲಿ ಸಿಸಿಟಿವಿ ಇದೆ ಎಂದು ಬೆದರಿಕೆ ಹಾಕಿದ್ದ. ನಂತರ ಅನೂಪ್‌ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ.

    ಉಪನ್ಯಾಸಕ ಸ್ನೇಹಿತರ ಕಿರುಕುಳ ತಾಳಲಾರದೇ ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ ಸಮಸ್ಯೆ ಹೆಚ್ಚಾದ ಬಳಿಕ ನಡೆದ ನಡೆದ ಘಟನೆಗಳನ್ನು ಬೆಂಗಳೂರಿಗೆ ಬಂದಿದ್ದ ಪೋಷಕರ ಬಳಿ ತಿಳಿಸಿದ್ದಾಳೆ. ಪೋಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಮಹಿಳಾ ಆಯೋಗದಲ್ಲಿ ಕೌನ್ಸಿಲಿಂಗ್‌ ಮಾಡಿದ ಬಳಿಕ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

    ಮೂಡಬಿದಿರೆಯಲ್ಲಿ ಓದು ಮುಗಿಸಿದ್ದ ವಿದ್ಯಾರ್ಥಿನಿ ಈಗ ರಾಮನಗರದಲ್ಲಿ ಎಂಜಿನಿಯರಿಂಗ್‌ ಓದುತ್ತಿದ್ದಾಳೆ. ಉಪನ್ಯಾಸಕರು ಇನ್‌ಸ್ಟಾ ಮೂಲಕ ಆಕೆಯನ್ನು ಸಂಪರ್ಕಿಸಿ ಚಾಟ್‌ ಮಾಡುತ್ತಿದ್ದರು.

  • ಶೇ.99 ರಷ್ಟು ಪುರುಷರದ್ದೇ ತಪ್ಪಿರುತ್ತದೆ – ಟೆಕ್ಕಿ ಅತುಲ್ ಆತ್ಮಹತ್ಯೆ ಕುರಿತು ಕಂಗನಾ ಪ್ರತಿಕ್ರಿಯೆ

    ಶೇ.99 ರಷ್ಟು ಪುರುಷರದ್ದೇ ತಪ್ಪಿರುತ್ತದೆ – ಟೆಕ್ಕಿ ಅತುಲ್ ಆತ್ಮಹತ್ಯೆ ಕುರಿತು ಕಂಗನಾ ಪ್ರತಿಕ್ರಿಯೆ

    ನವದೆಹಲಿ: ವೈವಾಹಿಕ ಜೀವನದಲ್ಲಿ ಶೇ.99 ರಷ್ಟು ಪುರುಷರದ್ದೇ ತಪ್ಪಿರುತ್ತದೆ ಎಂದು ನಟಿ ಹಾಗೂ ಸಂಸದೆ ಕಂಗನಾ ರಣಾವತ್ (Kangana Ranaut) ಹೇಳಿಕೆ ನೀಡಿದ್ದು, ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ.

    ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತುಲ್ ಸುಭಾಷ್‌ಗೆ (Atul Subhash Suicide Case) ಆತ್ಮಹತ್ಯೆಗೂ ಮುಂಚೆ ಹರಿಬಿಟ್ಟಿರುವ ವಿಡಿಯೋ ಅವರ ಪತ್ನಿ ಯಾವ ಮಟ್ಟದಲ್ಲಿ ಕಿರುಕುಳ ನೀಡಿದ್ದರೆಂದು ತಿಳಿಯುತ್ತದೆ. ಆತನಿಂದ ಸಾಮರ್ಥ್ಯ ಮೀರಿ ಕೋಟ್ಯಂತರ ಹಣ ವದೂಲಿ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಇದನ್ನೂ ಓದಿ: ರಾಜ್ಯದ ಹವಾಮಾನ ವರದಿ 12-12-2024

    ಈ ಆತ್ಮಹತ್ಯೆಯಿಂದ ಇಡೀ ದೇಶವೇ ಆಘಾತಕ್ಕೊಳಗಾಗಿದೆ. ಅವರ ವಿಡಿಯೋ ಹೃದಯ ವಿದ್ರಾವಕವಾಗಿದೆ. ನಕಲಿ ಸ್ತ್ರೀವಾದ ಖಂಡನೀಯ. ಆ ವ್ಯಕ್ತಿ ತೀವ್ರ ಒತ್ತಡಕ್ಕೆ ಒಳಗಾಗಿದ್ದರಿಂದ ಈ ಹೆಜ್ಜೆ ಇಟ್ಟಿದ್ದಾರೆ. ಆದರೆ ಈ ಮಹಿಳೆಯ ತಪ್ಪಿನ ಉದಾಹರಣೆಯನ್ನು ಇಟ್ಟುಕೊಂಡು ದಿನವೂ ಕಿರುಕುಳಕ್ಕೊಳಗಾಗುವ ಮಹಿಳೆಯರ ಸಂಖ್ಯೆಯನ್ನು ಅಲ್ಲಗಳೆಯುವಂತಿಲ್ಲ. ವೈವಾಹಿಕ ಜೀವನದಲ್ಲಿ ಶೇ.99 ರಷ್ಟು ಪುರುಷರದ್ದೇ ತಪ್ಪಿರುತ್ತದೆ ಎಂದು ಹೇಳಿದರು.

    ಏನಿದು ಪ್ರಕರಣ?
    ಉತ್ತರ ಪ್ರದೇಶ (Uttar Pradesh) ಮೂಲದ ಅತುಲ್ ಸುಭಾಷ್ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಡಿ.9 ರಂದು ಮಂಜುನಾಥ ಲೇಔಟ್‌ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಡೆಪ್ಯೂಟಿ ಮ್ಯಾನೇಜರ್ ಆಗಿದ್ದ ಇವರು ಸುಮಾರು 40 ಪುಟಗಳ ಡೆತ್ ನೋಟ್ ಬರೆದಿದ್ದ ಇವರು, ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸಿ ತಾನು ಅನುಭವಿಸಿದ್ದ ಸಂಕಷ್ಟಗಳನ್ನು ವಿವರಿಸಿದ್ದರು.

    ಸುಭಾಷ್ ಹೇಳಿದ್ದೇನು?
    ಪತ್ನಿ ನಿಖಿತಾ ಹಾಗೂ ಆಕೆಯ ಮನೆಯವರು ಚಿತ್ರಹಿಂಸೆ ನೀಡುತ್ತಿದ್ದರು. ನಾನು ಯಾವುದೇ ತಪ್ಪು ಮಾಡದೇ ಇದ್ದರೂ ನನ್ನ ಮೇಲೆ 9 ಪ್ರಕರಣ ದಾಖಲಿಸಿದ್ದರು. ಆರು ಪ್ರಕರಣ ಕೆಳ ನ್ಯಾಯಾಲಯದಲ್ಲಿದ್ದರೆ ಮೂರು ಪ್ರಕರಣಗಳು ಹೈಕೋರ್ಟ್ನಲ್ಲಿದೆ. ನಾನು ಬೆಂಗಳೂರಿನಲ್ಲಿದ್ದರೂ 9 ಪ್ರಕರಣಗಳ ವಿಚಾರಣೆಗಾಗಿ ಪದೇ ಪದೇ ಉತ್ತರ ಪ್ರದೇಶಕ್ಕೆ ಹೋಗಬೇಕಿತ್ತು. ಪತ್ನಿ ಕುಟುಂಬದವರ ಹಣದ ಬೇಡಿಕೆಯನ್ನು ಈಡೇರಿಸಿ ನನಗೆ ಸಾಕಾಗಿ ಹೋಗಿದೆ. ನಾನು ದುಡಿದ ಹಣವನ್ನು ಶತ್ರುಗಳಿಗೆ ನೀಡುತ್ತಿದ್ದೆ. ನನ್ನ ದುಡ್ಡಿನಿಂದ ಬಲವಾಗುತ್ತಿದ್ದ ಅವರು ಮತ್ತೆ ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದರು. ಒಂದು ಬಾರಿ ಒಂದು ಪ್ರಕರಣವನ್ನು ಪತ್ನಿ ವಾಪಸ್ ಪಡೆದಿದ್ದಳು. ವಾಪಸ್ ಪಡೆದ ನಂತರ ಮತ್ತೊಂದು ಪ್ರಕರಣವನ್ನು ದಾಖಲಿಸಿದ್ದಳು.

    ಹಣ ಪಡೆಯಲೆಂದೇ ನನ್ನ ಮೇಲೆ ಸಾಲು ಸಾಲು ಪ್ರಕರಣ ದಾಖಲಾಗುತ್ತಿದ್ದರೂ ಕೋರ್ಟ್ ಪತ್ನಿಯ ಪರವಾಗಿಯೇ ಇರುವಂತೆ ವರ್ತಿಸಿತ್ತು. ಉತ್ತರ ಪ್ರದೇಶದ ಕೋರ್ಟ್ಗಿಂತಲೂ ಬೆಂಗಳೂರಿನ ಕೋರ್ಟ್ಗಳು ಹೆಚ್ಚು ನ್ಯಾಯದ ಪರವಾಗಿವೆ. ನನ್ನ ಎಲ್ಲಾ ಕೇಸ್‌ಗಳನ್ನು ಕರ್ನಾಟಕದಲ್ಲಿ ನಡೆಸಬೇಕು ಎನ್ನುವುದು ನನ್ನ ಮನವಿ. ನ್ಯಾಯ ಸಿಗಬೇಕು ಎನ್ನುವ ಕಾರಣಕ್ಕೆ ವಿಚಾರಣೆ ಮುಗಿಯುವವರೆಗೂ ಪತ್ನಿಯನ್ನು ಬೆಂಗಳೂರಿನಲ್ಲಿಯೇ ನ್ಯಾಯಾಂಗ ಬಂಧನದಲ್ಲಿ ಇಡಬೇಕು.

    ಉತ್ತರಪ್ರದೇಶದ ಜೌನ್‌ಪುರದಲ್ಲಿ ಅತುತ್ ಸುಭಾಷ್ ಪರವಾಗಿ ವಾದಿಸಿದ್ದ ವಕೀಲ ಅವಧೇಶ್ ತಿವಾರಿ ಪ್ರತಿಕ್ರಿಯಿಸಿ, ವರದಕ್ಷಿಣೆ, ಹಲ್ಲೆ ಮತ್ತು ಜೀವನಾಂಶದ ಆರೋಪಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ. ಜುಲೈ 2024 ರಲ್ಲಿ ನ್ಯಾಯಾಲಯದ ಮಗನ ಪೋಷಣೆಗಾಗಿ ಮಾಸಿಕ 40,000 ರೂ. ಪಾವತಿಸುವಂತೆ ಆದೇಶಿಸಿತ್ತು. ಆದರೆ ಪತ್ನಿ ಮಾಡಿದ ಹೆಚ್ಚುವರಿ ಬೇಡಿಕೆಗಳನ್ನು ತಿರಸ್ಕರಿಸಿತ್ತು ಎಂದು ಹೇಳಿದ್ದಾರೆ.ಇದನ್ನೂ ಓದಿ: ದಿನ ಭವಿಷ್ಯ 12-12-2024

  • ರಾಜಕಾಲುವೆಯಲ್ಲಿ ಕೊಚ್ಚಿಹೋಯ್ತು 6 ವರ್ಷದ ಕಂದಮ್ಮ

    ರಾಜಕಾಲುವೆಯಲ್ಲಿ ಕೊಚ್ಚಿಹೋಯ್ತು 6 ವರ್ಷದ ಕಂದಮ್ಮ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಭೀತಿಯ ನಡುವೆಯೂ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, 6 ವರ್ಷದ ಹೆಣ್ಣು ಮಗು ರಾಜಕಾಲುವೆಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಘಟನೆ ಬೆಳ್ಳಂದೂರಿನ ಕರಿಯಮ್ಮನಗರದಲ್ಲಿ ನಡೆದಿದೆ.

    ಕೊಚ್ಚಿಹೋದ ಮಗುವನ್ನು 6 ವರ್ಷದ ಭೂಮಿಕ ಎಂದು ಗುರುತಿಸಲಾಗಿದೆ. ಅಸ್ಸಾನಿಂದ ಕೂಲಿ ಕೆಲಸಕ್ಕೆ ಬಂದಿದ್ದ ದಂಪತಿ ಪುತ್ರಿಯಾದ ಭೂಮಿಕಾ, ಮಧ್ಯಾಹ್ನ ಸುಮಾರು 2 ಗಂಟೆಯಲ್ಲಿ ಆಟವಾಡುತ್ತಿರುವಾಗ ಮಾರತಹಳ್ಳಿಯ ರಾಜಕಾಲುವೆಗೆ ಬಿದ್ದಿದ್ದಾಳೆ. ಸ್ವಲ್ಪ ದೂರದವರೆಗೂ ತೇಲಿಹೋದ ಮಗು ಬಳಿಕ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದೆ.

    ಅಸ್ಸಾಂ ಮೂಲದಿಂದ ಬದುಕನ್ನು ಕಟ್ಟಿಕೊಳ್ಳು ಮಗುವಿನ ಜೊತೆ ಬೆಂಗಳೂರಿಗೆ ಬಂದಿದ್ದ ದಂಪತಿ, ಬಾಂಗ್ಲಾ ವಲಸಿಗರ ಕ್ಯಾಂಪ್‍ಗಳಲ್ಲಿ ವಾಸವಿದ್ದರು. ಇಬ್ಬರು ಕೊಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ಇಂದು ಆಟವಾಡುತ್ತಿದ್ದ ಮಗಳು ಭೂಮಿಕಾ ಆಯಾ ತಪ್ಪಿ ರಾಜಕಾಲುವೆಗೆ ಬಿದ್ದಿದ್ದಾಳೆ. ಪರಿಣಾಮ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಕ್ಯಾಂಪ್‍ಗಳ ಬಳಿ ರಾಜಕಾಲುವೆಗೆ ಯಾವುದೇ ತಡೆಗೋಡೆ ಇಲ್ಲದೇ ಇರುವುದು ಇದಕ್ಕೆ ಕಾರಣ ಎಂದು ಹೇಳಾಗಿದೆ.

    ಈಗಾಗಲೇ ಸ್ಥಳಕ್ಕೆ ಸರ್ಜಾಪುರ ಮತ್ತು ಮಹದೇವಪುರ ಅಗ್ನಿಶಾಮಕ ದಳದವರು ಬಂದಿದ್ದು, 25 ಜನರ ಅಗ್ನಿಶಾಮಕ ದಳ ತಂಡದವರಿಂದ ಕಾರ್ಯಾಚರಣೆ ನಡೆಯುತ್ತಿದೆ. ಬೋಟ್ ಮೂಲಕ ಮಗುವಿನ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳಕ್ಕೆ ಮಾರತಹಳ್ಳಿ ಪೊಲೀಸರು ಆಗಮಿಸಿದ್ದು, ಅಗ್ನಿಶಾಮಕ ದಳಕ್ಕೆ ಸೂಕ್ತ ನೆರವು ನೀಡುವ ಕೆಲಸ ಮಾಡುತ್ತಿದ್ದಾರೆ.

  • ಬೆಂಗ್ಳೂರಿನಲ್ಲಿ ಯುವತಿಯ ಮೇಲೆ ಗುಂಡಿನ ದಾಳಿ- ಪ್ರಿಯಕರನಿಂದಲೇ ಫೈರಿಂಗ್ ಶಂಕೆ

    ಬೆಂಗ್ಳೂರಿನಲ್ಲಿ ಯುವತಿಯ ಮೇಲೆ ಗುಂಡಿನ ದಾಳಿ- ಪ್ರಿಯಕರನಿಂದಲೇ ಫೈರಿಂಗ್ ಶಂಕೆ

    ಬೆಂಗಳೂರು: ಪಿಜಿ ಮುಂದೆ ನಿಂತಿದ್ದ ಯುವತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಆಘಾತಕಾರಿ ಘಟನೆ ನಗರದ ಮಾರತ್‍ಹಳ್ಳಿಯ ಮುನೇಕೊಳಲು ಸಮೀಪದ ಮಂಜುನಾಥ ಲೇಔಟ್‍ನಲ್ಲಿ ನಡೆದಿದೆ.

    ಶುಭಶ್ರೀ ಪ್ರಿಯದರ್ಶಿನಿ (25) ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ಯುವತಿ. ಒಡಿಶಾ ಮೂಲದ ಶುಭಶ್ರೀ ಪ್ರಿಯದರ್ಶಿನಿ ಮಂಜುನಾಥ ಲೇಔಟ್‍ನ ವಸುಂದರ ಲೇಡಿಸ್ ಪಿಜಿಯಲ್ಲಿ ವಾಸವಿದ್ದರು. ಯುವತಿಯ ಪ್ರಿಯಕರನೇ ಈ ಕೃತ್ಯ ಎಸಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

    ಶುಭಶ್ರೀ ಕಳೆದ 2 ವರ್ಷಗಳಿಂದ ನಿಮ್ಹಾನ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಎಲ್ಲಿಗೋ ಹೋಗುವುದಕ್ಕಾಗಿ ಇಂದು ಸಂಜೆ ವಸುಂದರ ಲೇಡಿಸ್ ಪಿಜಿ ಮುಂದೆ ನಿಂತಿದ್ದರು. ಈ ವೇಳೆ ಅಲ್ಲಿಗೆ ಬಂದ ಆಕೆಯ ಪ್ರಿಯಕರ ಕಂಟ್ರಿಮೇಡ್ ಪಿಸ್ತೂಲ್‍ನಿಂದ ಫೈರಿಂಗ್ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.

    ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಶುಭಶ್ರೀ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮಾರತ್‍ಹಳ್ಳಿ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶುಭಶ್ರೀ ಪ್ರಿಯಕರನೇ ಈ ಕೃತ್ಯ ಎಸಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಆರೋಪಿಗೆ ಬಲೆ ಬೀಸಿದ್ದಾರೆ.