Tag: Marathi Cinema

  • ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾಷಾ ವಿವಾದದ ಕಿಡಿ – ಮರಾಠಿ ಸಿನಿಮಾ ಪೋಸ್ಟರ್‌ಗಳಿಗೆ ಮಸಿ

    ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾಷಾ ವಿವಾದದ ಕಿಡಿ – ಮರಾಠಿ ಸಿನಿಮಾ ಪೋಸ್ಟರ್‌ಗಳಿಗೆ ಮಸಿ

    ಕಾರವಾರ: ಗಡಿಜಿಲ್ಲೆ ಉತ್ತರ ಕನ್ನಡಕ್ಕೂ (Uttara Kannada) ಭಾಷಾ ವಿವಾದದ (Language Controversy) ಕಿಡಿ ಹೊತ್ತಿಕೊಂಡಿದ್ದು, ಕನ್ನಡ ಸಿನಿಮಾ ಪ್ರದರ್ಶನದ ಬದಲು ಮಾರಾಠಿ ಸಿನಿಮಾ (Marathi Cinema) ಪ್ರದರ್ಶನ ಮಾಡುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಮರಾಠಿ ಪೋಸ್ಟರ್‌ಗಳಿಗೆ ಮಸಿ (Ink) ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಾರವಾರ (Karwar) ನಗರದ ಕಾಜುಬಾಗ್‌ನ ಅರ್ಜುನ ಸಿನಿಮಾ ಮಂದಿರದಲ್ಲಿ ಕನ್ನಡ ಸಿನಿಮಾ ಬದಲು ಮರಾಠಿ ಸಿನಿಮಾ ಪ್ರದರ್ಶನ ಮಾಡಲಾಗುತ್ತಿತ್ತು. ಮಾತ್ರವಲ್ಲದೇ ಕನ್ನಡ ಸಿನಿಮಾ ಪೋಸ್ಟರ್‌ಗಳನ್ನು ಕೆಳಭಾಗದಲ್ಲಿ ಹಾಕಿ, ಮೇಲ್ಭಾಗದಲ್ಲಿ ಮರಾಠಿ ಸಿನಿಮಾ ಪೋಸ್ಟರ್ ಅಳವಡಿಸಲಾಗಿತ್ತು. ಇದನ್ನೂ ಓದಿ: ಸಿದ್ದರಾಮಯ್ಯ ತಂದೆಯ ಆತ್ಮ ವಿಲವಿಲ ಅಂತ ಒದ್ದಾಡುತ್ತಿರಬಹುದು : ಸಿ.ಟಿ.ರವಿ

    ಇದರಿಂದ ಆಕ್ರೋಶಕ್ಕೊಳಗಾದ ಕನ್ನಡ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಮರಾಠಿ ಪೋಸ್ಟರ್‌ಗಳನ್ನು ತೆಗೆಸಿ ನಂತರ ಪೋಸ್ಟರ್‌ಗೆ ಮಸಿ ಬಳಿದು ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ ಕನ್ನಡ ಸಿನಿಮಾ ಪ್ರದರ್ಶನ ಮಾಡುವಂತೆ ಚಿತ್ರಮಂದಿರದ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ವಿಶ್ವನಾಥ್ ಒಬ್ಬ ಕೃತಜ್ಞತೆ ಇಲ್ಲದ ಕೃತಘ್ನ; ಮೆದುಳು, ನಾಲಿಗೆಗೆ ಕಂಟ್ರೋಲ್ ತಪ್ಪಿದೆ: ಕೆ.ಜಿ ಬೋಪಯ್ಯ

    Live Tv
    [brid partner=56869869 player=32851 video=960834 autoplay=true]

  • ಅಕ್ಷಯ್ ಕುಮಾರ್ ನಟನೆಯ ಮರಾಠಿ ಚಿತ್ರದ ಫಸ್ಟ್ ಲುಕ್ ರಿಲೀಸ್

    ಅಕ್ಷಯ್ ಕುಮಾರ್ ನಟನೆಯ ಮರಾಠಿ ಚಿತ್ರದ ಫಸ್ಟ್ ಲುಕ್ ರಿಲೀಸ್

    ತತ ಸೋಲಿನಿಂದ ಕಂಗೆಟ್ಟಿರುವ ಬಾಲಿವುಡ್ ಖ್ಯಾತ ನಟ  ಅಕ್ಷಯ್ ಕುಮಾರ್, ಇದೀಗ ಮತ್ತೊಂದು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಅವರು ಮರಾಠಿ ಸಿನಿಮಾ ರಂಗಕ್ಕೆ ಹಾರಿದ್ದು, ಅಲ್ಲಿ ಛತ್ರಿಪತಿ ಶಿವಾಜಿ ಮಹಾರಾಜ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶಿವಾಜಿ ಮಹಾರಾಜ್ ಪಾತ್ರವನ್ನು ಅವರು ನಿರ್ವಹಿಸಲಿದ್ದು, ಇದು ಶಿವಾಜಿ ಜೀವನವನ್ನು ಆಧರಿಸಿದ ಸಿನಿಮಾವಾಗಿದೆ. ಈ ಚಿತ್ರಕ್ಕೆ ‘ವೇಡಾತ್ ಮರಾಠೆ ವೀರ್ ದೌಡಲೆ ಸಾತ್’ ಎಂದು ಹೆಸರು ಇಡಲಾಗಿದ್ದು, ಈ ಸಿನಿಮಾದ ಫಸ್ಟ್ ಲುಕ್ ನಿನ್ನೆ ಬಿಡುಗಡೆಯಾಗಿದೆ.

    ಇತ್ತೀಚೆಗಷ್ಟೇ ರಿಲೀಸ್ ಆದ, ಅಕ್ಷಯ್ ಕುಮಾರ್ ನಟನೆಯ ‘ರಾಮ್ ಸೇತು’ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ತಂದುಕೊಡಲಿಲ್ಲ. ಈ ಹಿಂದಿನ ಸಿನಿಮಾಗಳು ಕೂಡ ಬಾಕ್ಸ್ ಆಫೀಸ್ ಗೆಲ್ಲುವಲ್ಲಿ ವಿಫಲವಾದವು. ಈ ಕಾರಣದಿಂದಾಗಿಯೇ ಅವರು ಮರಾಠಿ ಸಿನಿಮಾ ರಂಗದತ್ತ ಹೊರಳಿದ್ದಾರೆ ಎಂದು ಹೇಳಲಾಗುತ್ತಿದೆ. ಮೊದಲ ಪ್ರಯತ್ನದಲ್ಲೇ ಅವರು ಮರಾಠ ಸಾಮ್ರಾಜ್ಯದ ದೊರೆ ಆಗಿದ್ದ ಛತ್ರಪತಿ ಶಿವಾಜಿ ಅವರ ಜೀವನವನ್ನು ಆಧರಿಸಿದ ಸಿನಿಮಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನುತ್ತವೆ ಮೂಲಗಳು. ಇದನ್ನೂ ಓದಿ: ಸ್ಯಾಂಡಲ್‌ವುಡ್‌ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

    ಈ ಸಿನಿಮಾವನ್ನು ಮಹೇಶ್ ಮಂಜರೇಕರ್ ನಿರ್ದೇಶನ ಮಾಡುತ್ತಿದ್ದು, ವಸೀಮ್ ಖುರೇಷಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತಿಚೆಗಷ್ಟೇ ಸಿನಿಮಾದ ಮುಹೂರ್ತ ಕೂಡ ಆಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮತ್ತೊಂದು ವಿಶೇಷ ಅಂದರೆ, ಇದೇ ಕಾರ್ಯಕ್ರಮದಲ್ಲಿ ಎಂ.ಎನ್.ಸಿ ಮುಖ್ಯಸ್ಥ ರಾಜ್ ಠಾಕ್ರೆ ಕೂಡ ಭಾಗಿಯಾಗಿ, ಏಕನಾಥ್ ಶಿಂಧೆಗೆ ಮುಖಾಮುಖಿ ಆಗಿದ್ದಾರೆ.

    ಸಿನಿಮಾ ಕುರಿತು ಮಾತನಾಡಿರುವ ಅಕ್ಷಯ್ ಕುಮಾರ್, ‘ಇಂತಹ ದೊಡ್ಡ ಪಾತ್ರ ನನಗೆ ಸಿಕ್ಕಿದ್ದು ಖುಷಿಯಾಗಿದೆ. ಇದು ನನ್ನ ಕನಸಿನ ಪಾತ್ರ ಕೂಡ ಆಗಿತ್ತು. ಇದೇ ಮೊದಲ ಬಾರಿಗೆ ನಿರ್ದೇಶಕ ಮಹೇಶ್ ಅವರ ಜೊತೆ ಕೆಲಸ ಮಾಡುತ್ತಿದ್ದೇನೆ. ತೆರೆಯ ಮೇಲೆ ನನ್ನನ್ನು ನಾನು ನೋಡಲು ಉತ್ಸುಕನಾಗಿದ್ದೇನೆ; ಎಂದು ಅವರು ಹೇಳಿದ್ದಾರೆ. ನಿರ್ದೇಶಕರು ಈ ಚಿತ್ರಕ್ಕಾಗಿ ಸತತ ಏಳು ವರ್ಷಗಳಿಂದ ಕೆಲಸ ಮಾಡುತ್ತಿದ್ದರು ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಕೊರೊನಾಗೆ ಹಿರಿಯ ನಟಿ ಆಶಾಲತಾ ನಿಧನ

    ಕೊರೊನಾಗೆ ಹಿರಿಯ ನಟಿ ಆಶಾಲತಾ ನಿಧನ

    -ಶೂಟಿಂಗ್ ವೇಳೆ ತಗುಲಿದ ಸೋಂಕು

    ಮುಂಬೈ: ಮಹಾಮಾರಿ ಕೊರೊನಾ ವೈರಸ್ ಮರಾಠಿ ಚಿತ್ರರಂಗದ, ರಂಗಭೂಮಿ ಕಲಾವಿದೆ ಆಶಾಲತಾ ವಾಬ್ಗಾಂವ್‍ಕರ್ ಅವರನ್ನು ಬಲಿ ಪಡೆದುಕೊಂಡಿದೆ. 79 ವರ್ಷದ ಆಶಾಲತಾ ಅವರಿಗೆ ಚಿತ್ರೀಕರಣದ ವೇಳೆ ಸೋಂಕು ತಗುಲಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಆಶಾಲತಾ ವಿಧಿವಶರಾಗಿದ್ದಾರೆ.

    ಗೋವಾ ಮೂಲದವರಾದ ಆಶಾಲತಾ ಅವರು ಮರಾಠಿ ಧಾರಾವಾಹಿ, ಸಿನಿಮಾಗಳಲ್ಲಿ ನಟಿಸುವ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದರು. ತಮ್ಮ ಸಹಜ ನಟನೆಯ ಮೂಲಕ ಆಶಾಲತಾ ಚಿರಪರಿಚಿತರಾಗಿದ್ದರು. ನಟಿ ರೇಣುಕಾ ಶಾಹಾನೆ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

    ಇಂದು ಅತ್ಯಂತ ದುಃಖಮಯವಾದ ದಿನ. ಕೋವಿಡ್ 19 ಸೋಂಕು ಸುಂದರ ಮತ್ತು ಸರಳ ಜೀವಿಯನ್ನ ನಮ್ಮಿಂದ ಕಸಿದುಕೊಂಡಿದೆ. ಅತ್ಯಂತ ದಯಾಳು, ಮಹಾ ನಟಿ, ಕರುಣಾಮಯಿ ಎಲ್ಲರನ್ನು ಪ್ರೀತಿಯಿಂದ ಆಶಾಲತಾ ಅಮ್ಮ ಇಂದು ನಮ್ಮೊಂದಿಗಿಲ್ಲ. ಆಶಾಲತಾ ಅಮ್ಮ ನನ್ನನ್ನು ಸದಾ ಬೇಬಿ ಎಂದು ಕರೆಯುವ ಮೂಲಕ ಆರ್ಶೀವಾದ ನೀಡುತ್ತಿದ್ದರು. ಅಮ್ಮನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸೋಣ ಎಂದು ರೇಣುಕಾ ಶಾಹಾನೆ ಬರೆದುಕೊಂಡಿದ್ದಾರೆ.

    ಗೋವಾ ಮೂಲದ ನಟಿ ಆಶಾಲತಾ ವಾಬ್ಗಾಂವ್‍ಕರ್ ನಿಧನ ರಂಗಭೂಮಿಗೆ ತುಂಬಲಾರದ ದೊಡ್ಡ ನಷ್ಟವಾಗಿದೆ. ಆಶಾಲತಾರ ನಿಧನ ಮುಂದಿನ ಪೀಳಿಗೆ ಕಲಾವಿದರಿಗೆ ಮಾದರಿಯಾಗಲಿದೆ ಎಂದು ಗೋವಾ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಸಂತಾಪ ಸೂಚಿಸಿದ್ದಾರೆ.

    ಆಶಾಲತಾ ಅವರು ಕೊಂಕಣಿ ಮತ್ತು ಮರಾಠಿ ನಾಟಕಗಳಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು. ಸುಮಾರು ನೂರಕ್ಕೂ ಹೆಚ್ಚು ಮರಾಠಿ ಸಿನಿಮಾಗಳಲ್ಲಿ ಆಶಾಲತಾ ಅವರು ನಟಿಸಿದ್ದಾರೆ. ನಿರ್ದೇಶಕ ಬಸು ಚಟರ್ಜಿ ‘ಅಪನೇ ಪ್ಯಾರ್’ ಸಿನಿಮಾ ಮೂಲಕ ಅಶಾಲತಾರನ್ನು ಬಾಲಿವುಡ್ ಗೆ ಪರಿಚಯಿಸಿದ್ದರು. ನಂತರ ಅಂಕುಶ್, ಯಾದೋಂ ಕೀ ಕಸಮ್, ನಮಕ್ ಹಲಾಲ್, ವೋ ಸಾಥ್ ದಿನ್ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.