Tag: Marks Card

  • ಕೆಪಿಸಿಎಲ್ ನೇಮಕಾತಿ ಪರೀಕ್ಷೆ – ಅಂತಿಮ ಅಂಕಪಟ್ಟಿ ಪ್ರಕಟ

    ಕೆಪಿಸಿಎಲ್ ನೇಮಕಾತಿ ಪರೀಕ್ಷೆ – ಅಂತಿಮ ಅಂಕಪಟ್ಟಿ ಪ್ರಕಟ

    ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿನ (KPCL) 622 ಖಾಲಿ ಹುದ್ದೆಗಳನ್ನು ತುಂಬಲು ಫೆಬ್ರವರಿ 18ರಂದು ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ತನ್ನ ವೆಬ್‌ಸೈಟ್‌ನಲ್ಲಿ ಬುಧವಾರ ಪ್ರಕಟಿಸಿದೆ.

    ಆಕ್ಷೇಪಣೆಗಳ ಪರಿಶೀಲನೆ ನಂತರ, ಕಳೆದ ಬಾರಿಯಂತೆಯೇ ಈ ಬಾರಿಯೂ, ಪ್ರತಿ ತಪ್ಪು ಉತ್ತರಕ್ಕೆ 1/3ರಷ್ಟು ನಕಾರಾತ್ಮಕ ಅಂಕ ಕಡಿತಗೊಳಿಸಿ ಅಂತಿಮ ಅಂಕಪಟ್ಟಿ ಸಿದ್ದಪಡಿಸುವಂತೆ ಕೆಪಿಸಿಎಲ್ ಸಂಸ್ಥೆ ಲಿಖಿತ ರೂಪದಲ್ಲಿ ಸೂಚಿಸಿತ್ತು. ಆ ಪ್ರಕಾರವಾಗಿ, ಹುದ್ದೆವಾರು ಪರೀಕ್ಷೆ ಬರೆದ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ:  ಕೇಂದ್ರ ಸಚಿವರಾಗಿ ಮೊದಲ ಕಡತಕ್ಕೆ ಹೆಚ್‌ಡಿಕೆ ಸಹಿ!

    ಅಂತಿಮ ಅಂಕಪಟ್ಟಿಯನ್ನು ಕೆಪಿಸಿಎಲ್ ಸಂಸ್ಥೆಗೆ ಹಸ್ತಾಂತರಿಸಲಾಗುವುದು. ನಿಯಮಾನುಸಾರ ಆಯ್ಕೆ ಪಟ್ಟಿ ಪ್ರಕಟಿಸಲು ಕೆಪಿಸಿಎಲ್ ಕ್ರಮ ವಹಿಸಲಿದೆ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಪ್ರಸಿದ್ಧರು, ಸೆಲೆಬ್ರಿಟಿಗಳೆಂದು ಬಿಡುವ ಪ್ರಶ್ನೆ ಇಲ್ಲ: ದರ್ಶನ್ ಕೇಸ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ

    ಕೆಪಿಸಿಎಲ್‌ನ ಎಇ, ಜೆಇ (ವಿವಿಧ ವಿಭಾಗಗಳ), ಕೆಮಿಸ್ಟ್ ಮತ್ತು ಕೆಮಿಕಲ್ ಸೂಪರ್‌ವೈಸರ್ ಹುದ್ದೆಗಳ ನೇಮಕಾತಿಗಾಗಿ ಈ ಪರೀಕ್ಷೆ ನಡೆಸಲಾಗಿತ್ತು. ಇದನ್ನೂ ಓದಿ: ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ, ಜೈ ಶ್ರೀರಾಮ್ ಅನ್ನೋದೇ ತಪ್ಪು: ಆರ್.ಅಶೋಕ್

  • ಕಾಲೇಜು ಪ್ರಿನ್ಸಿಪಾಲ್‍ಗೇ ಬೆಂಕಿ ಇಟ್ಟ ವಿದ್ಯಾರ್ಥಿ – ಚಿಕಿತ್ಸೆ ಫಲಿಸದೇ ಸಾವು

    ಕಾಲೇಜು ಪ್ರಿನ್ಸಿಪಾಲ್‍ಗೇ ಬೆಂಕಿ ಇಟ್ಟ ವಿದ್ಯಾರ್ಥಿ – ಚಿಕಿತ್ಸೆ ಫಲಿಸದೇ ಸಾವು

    ಭೂಪಾಲ್: ತನ್ನ ಮಾಜಿ ವಿದ್ಯಾರ್ಥಿಯಿಂದ ದಾಳಿಗೊಳಗಾಗಿ ಕಳೆದ ಐದು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದ ಮಧ್ಯಪ್ರದೇಶದ ಇಂಧೋರ್‌ನ (Indore) ಖಾಸಗಿ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಡಾ.ವಿಮುಕ್ತ ಶರ್ಮಾ (54) ಮೃತ ದುದೈವಿ. ಮಾರ್ಕ್ಸ್‌ಕಾರ್ಡ್ ವಿಷಯವಾಗಿ ಗಲಾಟೆ ಮಾಡಿಕೊಂಡಿದ್ದ ಕಾಲೇಜಿನ ಹಳೇ ವಿದ್ಯಾರ್ಥಿ ಅಶುತೋಷ್ ಶ್ರೀವಾಸ್ತವ ನಂತರ ಪ್ರಾಂಶುಪಾಲರ ಮೇಲೆ ಪೆಟ್ರೋಲ್ (Petrol) ಸುರಿದು ಬೆಂಕಿ ಹಚ್ಚಿದ್ದಾನೆ. ಪ್ರಾಂಶುಪಾಲರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೇಹವು ಶೇ.80 ರಷ್ಟು ಸುಟ್ಟುಹೋಗಿದ್ದರಿಂದ ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಭಗವತ್ ಸಿಂಗ್ ವಿರ್ಡೆ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಸಾಲ ನೀಡಿದ ಚೀನಾ – ಅಮೆರಿಕ ಕಳವಳ

    ಆರೋಪಿಯನ್ನು ಬಂಧಿಸಲಾಗಿದ್ದು, ಆರೋಪಿಯ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಾಗಿತ್ತು. ಪ್ರಾಂಶುಪಾಲರ ಸಾವಿನ ನಂತರ ಕೊಲೆ ಎಂದು ಎಫ್‍ಐಆರ್‌ನಲ್ಲಿ (FIR) ಸೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

     ವಿಚಾರಣೆ ವೇಳೆ ಆರೋಪಿ, ತಾನು ಕಳೆದ ವರ್ಷ ಜುಲೈನಲ್ಲಿ ತೇರ್ಗಡೆಯಾಗಿದ್ದ ಅಂಕಪಟ್ಟಿಯನ್ನು (Marks card) ಕಾಲೇಜಿನ ಅಧಿಕಾರಿಗಳು ನೀಡುತ್ತಿರಲಿಲ್ಲ ಎಂದು ಆರೋಪಿಸಿದ್ದಾನೆ.

    ಆರೋಪಿ ನೀಡಿದ ಹೇಳಿಕೆಯನ್ನು ತಳ್ಳಿಹಾಕಿರುವ ಕಾಲೇಜು ಆಡಳಿತ ಮಂಡಳಿ, ಆತ ಕ್ರಿಮಿನಲ್ ಹಿನ್ನೆಲೆ ಉಳ್ಳವನಾಗಿದ್ದಾನೆ. ಆತನ ಮಾರ್ಕ್ಸ್‌ಕಾರ್ಡ್ ಪಡೆದುಕೊಳ್ಳುವಂತೆ ತಿಳಿಸಲಾಗಿತ್ತು. ಆದರೆ ಆತ ತೆಗೆದುಕೊಂಡು ಹೋಗಿರಲಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ಮೋದಿ ಬಂದ್ಮೇಲೆ ದೇಶ ಅಭಿವೃದ್ಧಿಯಾಗಿಲ್ಲ, ನಾವು ಹುಟ್ಟುವ ಮುಂಚೆಯೇ ಆಗಿದೆ: ಹೆಚ್‌ಡಿಕೆ

  • ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದ ದಂಪತಿ ಬಂಧನ

    ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದ ದಂಪತಿ ಬಂಧನ

    ಬೆಂಗಳೂರು: ಅಕ್ರಮವಾಗಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಮುಖೇಶ್ ಮತ್ತು ರೋಹಿ ಬಂಧಿತ ದಂಪತಿ. ಮೂಲತಃ ಪಂಜಾಬ್ ರಾಜ್ಯದವರಾದ ಆರೋಪಿಗಳು ನಗರದ ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದರು. ಆರೋಪಿಗಳು ಕಳೆದ ಮೂವತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದು, ಪೀಣ್ಯಾ ಬಳಿ ಜಗಜ್ಯೋತಿ ಎಜುಕೇಶನ್ ಇನ್ಟ್ಸಿಟ್ಯೂಟ್ ನಡೆಸುತ್ತಿದ್ದರು. ಈ ಸಂಸ್ಥೆ ಹೆಸರಲ್ಲಿ ಎಂಎ, ಎಂಬಿಎ, ಬಿಸಿಎ, ಬಿಟೆಕ್, ಬಿಬಿಎ, ಬಿಕಾಂ, ಬಿಎಸ್‍ಸಿ, ಸೇರಿ ಹಲವು ಡಿಗ್ರಿ ಮಾರ್ಕ್ಸ್ ಕಾರ್ಡ್ ನೀಡುತಿದ್ದರು. ಒಂದು ಡಿಗ್ರಿಗೆ 60 ಸಾವಿರದಿಂದ 70 ಸಾವಿರ ರೂಪಾಯಿ ವರೆಗೆ ಹಣ ಪಡೆದು ಪದವಿ ಅಂಕಪಟ್ಟಿಗಳನ್ನು ನೀಡುತ್ತಿದ್ದರು. ಇದನ್ನೂ ಓದಿ: ವಾಹನ ಗುಜುರಿ ನೀತಿ ಭಾರತದ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ: ಮೋದಿ

    ಸಿಸಿಬಿ ಪೊಲೀಸರ ದಾಳಿಯ ವೇಳೆ ಸಿ.ವಿ ರಾಮನ್ ಯುನಿವರ್ಸಿಟಿ, ರವೀಂದ್ರನಾಥ್ ಟ್ಯಾಗೋರ್ ಯುನಿವರ್ಸಿಟಿ. ಅಸೆಟ್ ಯುನಿವರ್ಸಿಟಿಗೆ ಸೇರಿದ ಮಾರ್ಕ್ಸ್ ಕಾರ್ಡ್‍ಗಳನ್ನು ನೀಡಿರುವುದು ಬೆಳಕಿಗೆ ಬಂದಿದೆ. ಆರೋಪಿಗಳು ಇಲ್ಲಿಯವರೆಗೂ 500ಕ್ಕೂ ಹೆಚ್ಚು ಫಲನುಭವಿಗಳಿಗೆ ಮಾರ್ಕ್ಸ್ ಕಾರ್ಡ್ ನೀಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸದ್ಯ ಘಟನೆ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಆರೋಪಿಗಳ ಹೆಚ್ಚಿನ ತನಿಖೆಯಿಂದ ಮತ್ತಷ್ಟು ನಕಲಿ ಅಂಕಪಟ್ಟಿ ಹಿಂದಿನ ಮುಖವಾಡ ಬಯಲಾಗುವ ಸಾದ್ಯತೆ ಇದೇ ಎನ್ನುತ್ತಿದೆ ಸಿಸಿಬಿ ಮೂಲಗಳು.

  • ಪಾಸ್ ಆಗದಿದ್ದಕ್ಕೆ 300 ವಿದ್ಯಾರ್ಥಿಗಳ ಅಂಕಪಟ್ಟಿ ಕದ್ದಿದ್ದ ಅಪೂರ್ಣ ಪದವೀಧರ

    ಪಾಸ್ ಆಗದಿದ್ದಕ್ಕೆ 300 ವಿದ್ಯಾರ್ಥಿಗಳ ಅಂಕಪಟ್ಟಿ ಕದ್ದಿದ್ದ ಅಪೂರ್ಣ ಪದವೀಧರ

    ಬೆಳಗಾವಿ : ಹಲವು ಬಾರಿ ಪರೀಕ್ಷೆ ಬರೆದರೂ ಪದವಿ ಪಾಸಾಗದೆ ಹತಾಶೆಗೊಂಡ ಯುವಕನೊಬ್ಬ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕೋಣೆಗೆ ನುಗ್ಗಿ 300 ವಿದ್ಯಾರ್ಥಿಗಳ ಅಂಕಪಟ್ಟಿ ಮತ್ತು ಸ್ಕಾನರ್ ಕದ್ದು ಪರಾರಿಯಾಗುವಾಗ ಸಿಕ್ಕಿಹಾಕೊಂಡಿರುವ ಘಟನೆ ರವಿವಾರ ರಾತ್ರಿ ನಡೆದಿದೆ.

    ಬಸಪ್ಪ ಶಿವಲಿಂಗಪ್ಪ ಹೊನವಾಡ (23) ಕಳ್ಳತನ ಆರೋಪದಡಿ ಬಂಧಿಸಿರುವ ಯುವಕ. ಈತ ಮೂಲತಃ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ತುಬಚಿ ಗ್ರಾಮದ ನಿವಾಸಿ. ಜಮಖಂಡಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಬಿ.ಕಾಂ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡಿದ್ದಾನೆ.

    ಸೆಮಿಸ್ಟರನ ಕೆಲ ವಿಷಯಗಳಲ್ಲಿ ಅನುತ್ತಿರ್ಣನಾಗಿದ್ದ. ಅದಕ್ಕಾಗಿ ಹಲವು ಬಾರಿ ಮರು ಪರೀಕ್ಷೆ ಬರೆದರೂ ಪಾಸಾಗಿಲ್ಲ. ಇದರಿಂದಾಗಿ ಮತ್ತಷ್ಟು ಕಂಗೆಟ್ಟ ಬಸಪ್ಪ ಶುಕ್ರವಾರ ರಾತ್ರಿ ಬೆಳಗಾವಿಗೆ ಬಂದು ಕಾನೂನು ಬಾಹಿರವಾಗಿ ವಿಶ್ವವಿದ್ಯಾಲಯ ವಿದ್ಯಾರ್ಥಿ ನಿಲಯದಲ್ಲಿರುವ ಅತನ ಗೆಳೆಯರ ಕೋಣೆಯಲ್ಲಿ ಆಶ್ರಯ ಪಡೆದಿದ್ದಾನೆ.

    ನಂತರ ಶನಿವಾರ ಆತನ ಗೆಳೆಯರೊಂದಿಗೆ ಸೇರಿಕೊಂಡು ರೆಜಿಸ್ಟಾರ ಆಫೀಸಗೆ ತೆರಳಿ ನಾನು ಹಲವು ಬಾರಿ ಪರೀಕ್ಷೆ ಬರೆದರೂ ನೀವು ನನ್ನನ್ನು ಪಾಸ್ ಮಾಡುತ್ತಿಲ್ಲ ಎಂದು ಮೌಲ್ಯಮಾಪನ ಕುಲಸಚಿವರೊಂದಿಗೆ ಜಗಳ ಮಾಡಿದ್ದ ಎಂದು ತಿಳಿದು ಬಂದಿದೆ. ಇದಕ್ಕೆ ಕುಲಸಚಿವರು ಮರು ಮೌಲ್ಯಮಾಪನಕ್ಕೆ ಹಾಕುವಂತೆ ಸಲಹೆ ನೀಡಿದ್ದಾರೆ. ಆದರೆ ಅಷ್ಟಕ್ಕೆ ಸುಮ್ಮನಾಗದ ಆತ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ.

    ಹೇಗಾದರೂ ಮಾಡಿ ಪದವಿ ಪಾಸಾದ ಅಂಕಪಟ್ಟಿ ಪಡೆಯಬೇಕು ಎಂಬ ಹಠದಿಂದ ರೆಜಿಸ್ಟಾರ ಕಚೇರಿಯಲ್ಲಿ ಸುತ್ತಾಡಿ ಎಲ್ಲ ಮಾಹಿತಿ ಕಲೆ ಹಾಕಿ, ರಾತ್ರಿ 1.30 ಗಂಟೆಗೆ ಶೌಚಾಲಯದ ಮುಖಾಂತರ ಕಚೇರಿ ಒಳಗಡೆ ಹೋಗಿ 3 ಗಂಟೆಗಳ ಕಾಲ ಒಳಗಡೆ ಇದ್ದು 300 ಪ್ರಮಾಣ ಪತ್ರ ಹಾಗೂ ಸ್ಕಾನರ್ ಗಳನ್ನು ತೆಗೆದುಕೊಂಡು ಪರಾರಿಯಾಗುವ ಸಮಯದಲ್ಲಿ ಅಲ್ಲಿನ ಸೆಕ್ಯುರಿಟಿ ಗಾರ್ಡ್ ಕಣ್ಣಿಗೆ ಬಿದ್ದಿದ್ದಾನೆ. ತಕ್ಷಣ ಪೋಲಿಸರಿಗೆ ಮಾಹಿತಿ ನೀಡಿದಾಗ ಪೋಲಿಸರು ಆತನನ್ನು ವಶಕ್ಕೆ ಪಡೆದಿದ್ದರು.

    ಕಳ್ಳನಿಗೆ ಆಶ್ರಯ ನೀಡಿದ ವಿದ್ಯಾರ್ಥಿ ಒಕ್ಕೂಟ ಪ್ರತಿನಿಧಿಗಳು?
    ಕಳ್ಳತನ ಆರೋಪಿ ಬಸಪ್ಪ ಶುಕ್ರವಾರ ವಿಶ್ವವಿದ್ಯಾಲಯಕ್ಕೆ ಬಂದು ಕಾನೂನು ಬಾಹಿರವಾಗಿ ವಿದ್ಯಾರ್ಥಿ ನಿಲಯದಲ್ಲಿ ಆಶ್ರಯ ಪಡೆದಿದ್ದಾದರೂ ಹೇಗೆ? ಎಂಬ ಪ್ರಶ್ನೆ ವಿಶ್ವವಿದ್ಯಾಲಯದಲ್ಲಿ ಚರ್ಚೆಗೆ ಎಡೆ ಮಾಡಿದೆ. ಯಾಕೆಂದರೆ ಆತ ಈ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ ಕೂಡಾ ಅಲ್ಲಾ. ಹಾಗಿದ್ದಲ್ಲಿ ಎರಡು ದಿನಗಳ ಕಾಲ ಆತ ಹೇಗೆ ಹಾಸ್ಟೆಲ್ ನಲ್ಲಿ ಇದ್ದು ಮಧ್ಯರಾತ್ರಿ ಕುಲಸಚಿವರ ಕಚೇರಿಗೆ ನುಗ್ಗಿರುವ ವಿಚಾರ ಹಲವು ಅನುಮಾನಗಳನ್ನು ಸೃಷ್ಟಿಸಿದೆ.

    ಒಂದು ಆತನಿಗೆ ಯಾರು ಸಹಾಯ ಮಾಡಿಲ್ಲ ಅನ್ನೋದಾದ್ರೆ ಆತ ಅಷ್ಟೊಂದು ಸರಳವಾಗಿ ರೆಜಿಸ್ಟಾರ್ ಕಚೇರಿಗೆ ನುಗ್ಗಿ ಬೀಗದ ಕೈಗಳನ್ನು ತೆಗೆದುಕೊಂಡು ಕುಲಸಚಿವರ ಕೊಠಡಿಯನ್ನು ಶೋಧಿಸಿದ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಪೋಲಿಸರು ಕಳ್ಳತನ ಸುದ್ದಿ ತಿಳಿಯುತ್ತಿದ್ದಂತೆ ಪಿಐ ಶ್ರೀಶೈಲ ಕೌಜಲಗಿ ಹಾಗೂ ಸಿಬ್ಬಂದಿ ಆರೋಪಿಯನ್ನು ಬಂಧಿಸಿ ಆತನ ಕದಿದ್ದ ಎರಡು ಸ್ಕಾನರ್, 300 ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯ ತನಿಖೆ ನಡೆಸಿ ಹಿಂಡಲಗಾ ಜೈಲಿಗೆ ಕಳಿಸಲಾಗಿದೆ.

    ಗೋಮಾಳದಂತಾದ ವಿಧ್ಯಾರ್ಥಿ ನಿಲಯ:
    ವಿಶ್ವವಿದ್ಯಾಲಯ ವಿದ್ಯಾರ್ಥಿ ನಿಲಯಕ್ಕೆ ಹಳೇ ವಿದ್ಯಾರ್ಥಿಗಳು ಅಷ್ಟೇ ಅಲ್ಲದೆ ಅವರ ಸ್ನೇಹಿತರು, ಸಂಬಂಧಿಕರು ಮತ್ತು ಜಿಲ್ಲೆಯ ಸ್ನಾತಕೋತ್ತರ ಕೇಂದ್ರಗಳ ವಿಧ್ಯಾರ್ಥಿಗಳಿಗೆ ಅಕ್ರಮವಾಗಿ ನೆಲೆಸುವ ಆಶ್ರಮವಾಗಿದೆ. ಇದಕ್ಕೆ ಪ್ರತ್ಯಕ್ಷ ಉದಾಹರಣೆ ಈಗ ನಡೆದಿರುವ ಘಟನೆ.

    ಇಂತಹ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ಆಶ್ರಯ ಪಡೆದು ಕಳ್ಳತನ ಮಾಡಿದರೂ ಹಾಸ್ಟೆಲ್ ವಾರ್ಡನ್, ಆಶ್ರಯ ನೀಡಿರುವ ವಿದ್ಯಾರ್ಥಿ ಒಕ್ಕೂಟದ ಪ್ರತಿನಿಧಿಗಳ ಮೇಲೆ ಯಾವ ಕ್ರಮ ಕೈಗೊಂಡಿಲ್ಲ. ಇದರಿಂದ ವಿಶ್ವವಿದ್ಯಾಲಯ ಆಡಳಿತ ಅವ್ಯವಸ್ಥೆ ಹಾಗೂ ಬೇಜವಾಬ್ದಾರಿ ಸ್ಪಷ್ಟವಾಗಿ ಕಾಣುತ್ತಿದೆ.

  • 10 ಸಾವಿರ ಕೊಟ್ರೆ ಕೈಗಿಡ್ತಾರೆ ನಿಮಗೆ ಬೇಕಾದ ಮಾರ್ಕ್ಸ್ ಕಾರ್ಡ್

    10 ಸಾವಿರ ಕೊಟ್ರೆ ಕೈಗಿಡ್ತಾರೆ ನಿಮಗೆ ಬೇಕಾದ ಮಾರ್ಕ್ಸ್ ಕಾರ್ಡ್

    – ಪಬ್ಲಿಕ್ ಟಿವಿ ಸ್ಟಿಂಗ್‍ನಲ್ಲಿ ಬಯಲು

    ವಿಜಯಪುರ: 5ರಿಂದ 10 ಸಾವಿರ ರೂಪಾಯಿ ಕೊಟ್ಟರೆ ನೀವು ಶಾಲೆಗೆ ಹೋಗಬೇಕಿಲ್ಲ, ಓದೋದಂತು ಬೇಕೇ ಇಲ್ಲ. ಕಾಸು ಕೊಟ್ರೆ ಬೇಕಾದ ಕ್ಲಾಸ್‍ನ ಮಾರ್ಕ್ಸ್ ಕಾರ್ಡ್ ನಿಮ್ಮ ಕೈಗಿಡುತ್ತಾರೆ. ಈ ವಿಚಾರ ಪಬ್ಲಿಕ್ ಟಿವಿ ರಹಸ್ಯ ಕಾರ್ಯಾಚರಣೆಯ ವೇಳೆ ಬಯಲಾಗಿದೆ.

    ಹೌದು. ದುಡ್ಡು ಕೊಟ್ಟರೆ ಮಲ್ಲಪ್ಪ ಎಂಬಾತ ಏನ್ ಬೇಕಾದ್ರೂ ಮಾಡಿಕೊಡುತ್ತಾನೆ. ಅದರಲ್ಲೂ ಶಾಲೆಗೆ ಹೋಗದೇ ಇದ್ದರೂ ಪರೀಕ್ಷೆ ಬರೆಯದೇ ಇದ್ದರೂ ಒಂದರಿಂದ 10ನೇ ತರಗತಿವರೆಗೆ ಪಾಸ್ ಆಗಿದ್ದೀರಿ ಅಂತ ಒಂದೇ ದಿನದಲ್ಲಿ ಮಾರ್ಕ್ಸ್ ಕಾರ್ಡ್ ಮಾಡಿಸಿಕೊಡುತ್ತಾನೆ. ಅಂದಹಾಗೆ ಈತ ಮಾಡಿ ಕೊಡುವ ಸ್ಪಾಟ್ ಮಾಕ್ರ್ಸ್ ಕಾರ್ಡಿಗೆ 5-10 ಸಾವಿರ ರೂಪಾಯಿ ಕೊಡಬೇಕು.

    ಮಲ್ಲಪ್ಪ ನಕಲಿ ಮಾರ್ಕ್ಸ್ ಕಾರ್ಡ್ ದಂಧೆಗೆ ಏಜೆಂಟ್ ಆಗಿರೋದು ಪಿ.ಕೆ ರಾಥೋಡ್ ಅನ್ನೋ ಮಹಾನುಭವನಿಂದ. ರಾಥೋಡ್ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕೂಡಗಿ ಗ್ರಾಮದ ಹೆಚ್ ಪಿ.ಎಸ್ ಶಾಲೆಯ ಮುಖ್ಯೋಪಾಧ್ಯಾಯ. ಅಲ್ಲದೆ ಮಲ್ಲಪ್ಪ ಮಾಡೋ ದಂಧೆಯಲ್ಲಿ ಶೇರ್ ತಗೊಂಡು ನಕಲಿ ಅಂಕಪಟ್ಟಿ ಮತ್ತು ಟಿಸಿ ಕೊಡೋ ಪುಣ್ಯಾತ್ಮ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಿಯನ್ನೂ ರಾಥೋಡ್ ನಕಲಿ ಮಾಡುತ್ತಾರೆ.

    ಸ್ವತಃ ಮಲ್ಲಪ್ಪ ಹೇಳುವಂತೆ ನಕಲಿ ಅಂಕಪಟ್ಟಿಗಳನ್ನ ಡಿಎಲ್, ಅಂಗನವಾಡಿ ಸಹಾಯಕಿಯರ ಕೆಲಸ ಗಿಟ್ಟಿಸಿಕೊಳ್ಳಲು ಬಳಸಿಕೊಳ್ಳುತ್ತಾರೆ. ಪಬ್ಲಿಕ್ ಟಿವಿ ಸ್ಟಿಂಗ್ ಬಳಿಕವಾದ್ರೂ ಶಿಕ್ಷಣ ಇಲಾಖೆ ಅಧಿಕಾರಿಗಳು ಮಲ್ಲಪ್ಪ ಮತ್ತು ರಾಥೋಡ್ ವಿರುದ್ಧ ಕ್ರಮಕೈಗೊಳ್ಳಬೇಕಿದೆ.

  • ನೆರೆ ಪೀಡಿತ ಜಿಲ್ಲೆಗಳಿಗೆ ಪಿಯು ಬೋರ್ಡ್ ಅಭಯ – ಅಂಕಪಟ್ಟಿ ಕಳೆದುಕೊಂಡವರಿಗೆ ಹೊಸ ಅಂಕಪಟ್ಟಿ

    ನೆರೆ ಪೀಡಿತ ಜಿಲ್ಲೆಗಳಿಗೆ ಪಿಯು ಬೋರ್ಡ್ ಅಭಯ – ಅಂಕಪಟ್ಟಿ ಕಳೆದುಕೊಂಡವರಿಗೆ ಹೊಸ ಅಂಕಪಟ್ಟಿ

    ಬೆಂಗಳೂರು: ನೆರೆಯಿಂದ ಅಂಕಪಟ್ಟಿ ಕಳೆದುಕೊಂಡಿರುವ ವಿದ್ಯಾರ್ಥಿಗಳ ನೆರವಿಗೆ ಪಿಯುಸಿ ಬೋರ್ಡ್ ಧಾವಿಸಿದೆ.

    ಅಂಕಪಟ್ಟಿ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಹೊಸದಾಗಿ ಅಂಕಪಟ್ಟಿ ನೀಡಲು ಪಿಯುಸಿ ಬೋರ್ಡ್ ನಿರ್ಧಾರ ಮಾಡಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಪಿಯುಸಿ ಬೋರ್ಡ್, ಅಂಕಪಟ್ಟಿ ಕಳೆದುಕೊಂಡಿರುವ ವಿದ್ಯಾರ್ಥಿಗಳು ಆಯಾ ಜಿಲ್ಲಾ ಉಪ ನಿರ್ದೇಶಕರ ಕಚೇರಿಗೆ ಹೋಗಿ ಹೊಸ ಅಂಕಪಟ್ಟಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಹೊಸ ಅಂಕಪಟ್ಟಿ ನೀಡಲಾಗುತ್ತೆ ಎಂದು ಬೋರ್ಡ್ ತಿಳಿಸಿದೆ.

     

    ನೆರೆ ಜಿಲ್ಲೆಗಳಲ್ಲಿ ಪ್ರಥಮ ಪಿಯುಸಿಗೆ ದಾಖಲಾತಿಯಾಗುವ ದಿನಾಂಕವನ್ನು ಆಗಸ್ಟ್ 23ವರೆಗೂ ದಿನಾಂಕ ವಿಸ್ತರಣೆ ಮಾಡಿದೆ. ಇದರ ಜೊತೆಗೆ ನೆರೆ ಜಿಲ್ಲೆಗಳ ಶೈಕ್ಷಣಿಕ-ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪಿಯುಸಿ ಬೋರ್ಡ್ ಸಮಿತಿಗಳ ನೇಮಕ ಮಾಡಿದೆ.

    ಜಿಲ್ಲೆಯ ಉಪ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮತಿ ರಚನೆ ಆಗಿದ್ದು, ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ 5 ಜನ ಪ್ರಾಂಶುಪಾಲರು ಸಮಿತಿಯ ಸದಸ್ಯರಾಗಲಿದ್ದಾರೆ. ಈ ಸಮಿತಿ ನೆರೆ ಜಿಲ್ಲೆಗಳ ಶೈಕ್ಷಣಿಕ, ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಿದೆ ಅಂತ ಪಿಯುಸಿ ಬೋರ್ಡ್ ತಿಳಿಸಿದೆ.

  • ಪಿಯು ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್!

    ಪಿಯು ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್!

    ಬೆಂಗಳೂರು: ರಾಜ್ಯದ ಎಲ್ಲಾ ಪಿಯು ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್. ಆನ್ ಲೈನ್ ನಲ್ಲಿ ಮಾರ್ಕ್ಸ್  ಕಾರ್ಡ್ ಸಿಗುವಂತೆ ಮಾಡಿದ್ದ ಪಿಯು ಮಂಡಳಿ, ಅನ್ ಸೇಫ್ ಟೆಕ್ನಾಲಜಿ ಮೊರೆ ಹೋಗಿದೆ. ಇದರಿಂದಾಗಿ ಲಕ್ಷಾಂತರ ಮಕ್ಕಳ ಭವಿಷ್ಟ ಆತಂಕಕ್ಕೆ ಸಿಲುಕಿದೆ.

    ಇತ್ತೀಚೆಗಷ್ಟೆ ರಾಜ್ಯ ಪಿಯು ಮಂಡಳಿ ವಿದ್ಯಾರ್ಥಿಗಳ ಮಾರ್ಕ್ಸ್ ಕಾರ್ಡ್ ಆನ್ ಲೈನ್ ನಲ್ಲಿ ಸಿಗುವಂತೆ ಮಾಡಿದೆ. ಡಿಜಿ ಲಾಕರ್ ಎಂಬ ನೂತನ ಟೆಕ್ನಾಲಜಿ ಬಳಸುವ ಮೂಲಕ ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದೆ. ಆದರೆ ಇಲ್ಲಿ ಯಾವ ಮಾರ್ಕ್ಸ್ ಕಾರ್ಡ್ ಕೂಡ ಸೇಫ್ ಆಗಿಲ್ಲ ಎಂಬ ಆತಂಕಕಾರಿ ಸುದ್ದಿ ಹೊರಬಿದ್ದಿದೆ.

    ಡಿಜಿ ಲಾಕರ್ ಕೇಂದ್ರೀಕೃತ ಸರ್ವರ್ ಮೂಲಕ ಕಾರ್ಯ ನಿರ್ವಹಿಸುತ್ತಿದ್ದು, ಯಾವುದೇ ಹ್ಯಾಕರ್ ಬೇಕಾದರು ಸರಳವಾಗಿ ಇದನ್ನು ಕ್ರಾಕ್ ಮಾಡಬಹುದು. ನ್ಯಾಶನಲ್ ಅಕಾಡಿಮೆಕ್ ಡೆಪಾಸಿಟರಿ (ನ್ಯಾಡ್) ಎಂಬ ಸಂಟ್ರಲೈಸಡ್ ಸರ್ವರ್ ಈ ಹಿಂದೆ ಹ್ಯಾಕ್ ಮಾಡಲಾಗಿತ್ತು. ಅದೇ ರೀತಿಯ ತಂತ್ರಜ್ಞಾನವನ್ನು ಡಿಜಿಲಾಕರ್ ಬಳಸುತ್ತಿದೆ. ಹಾಗಾಗಿ ಡಿಜಿಲಾಕರ್ ನಲ್ಲಿ ಅಂಕಪಟ್ಟಿ ಸೇವ್ ಮಾಡಿ ಆನ್ ಲೈನ್ ನಲ್ಲಿ ಲಭ್ಯವಾಗುವಂತೆ ಮಾಡುವ ಪಿಯು ಮಂಡಳಿ ವಿದ್ಯಾರ್ಥಿಗಳ ಭವಿಷ್ಯವನ್ನು ಆತಂತಕ್ಕೆ ಸಿಲುಕಿಸಿದೆ.

    ಪಿಯು ಮಂಡಳಿ ನಿರ್ದೇಶಕಿ ಸಿ.ಶಿಖಾ ಅವರು ಕಳೆದ ತಿಂಗಳಷ್ಟೆ ಈ ತಂತ್ರಜ್ಞಾನದ ಬಳಕೆಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇವರು ಆತುರದಲ್ಲಿ ನಿರ್ಣಯ ಕೈಗೊಂಡಂತಿದೆ. ಈ ರೀತಿ ಕೇಂದ್ರೀಕೃತ ಸರ್ವರ್ ಬಳಸುದರಿಂದ ದಾಖಲೆಗಳನ್ನು ತಿರುಚುವ ಸಾಧ್ಯತೆ ಇದೆ. ಜೊತೆಗೆ ತಿದ್ದುಪಡಿ ಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂದು ಐಟಿ ಪರಿಣಿತ ಮಧಸೂಧನ್ ಹೇಳಿದ್ದಾರೆ.

    ಸೆಂಟ್ರಲೈಸಡ್ ಸರ್ವರ್ ಬಳಸದೆ ಆನ್ ಲೈನ್ ನಲ್ಲಿ ಡಾಕ್ಯೂಮೆಂಟ್ ಸೇವ್ ಮಾಡುವುದಕ್ಕೆ ಬೇರ ಅವಕಾಶವಿದ್ದು, ಸದ್ಯಕ್ಕೆ ಹ್ಯಾಕರ್ ಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಮುಕ್ತಿ ಪಡೆಯಲು ಬ್ಲಾಕ್ ಚೈನ್ ಟೆಕ್ನಾಲಜಿ ಬಳಸಬೇಕಾಗುತ್ತದೆ.

    ಏನಿದು ಬ್ಲಾಕ್ ಚೈನ್ ಟೆಕ್ನಾಲಜಿ?
    ಇಲ್ಲಿ ದಾಖಲೆಗಳು ಲಿಂಕ್ ಮೂಲಕ ಸೇವ್ ಮಾಡಲಾಗುತ್ತದೆ. ಲಕ್ಷಗಟ್ಟಲೆ ಕಂಪ್ಯೂಟರ್ ಬಳಕೆದಾರರು ಈ ಡೇಟಾ ಅನ್ನು ನಿರ್ವಹಿಸುತ್ತಾರೆ. ಇಲ್ಲಿ ಯಾವುದೇ ಮಾರ್ಕ್ಸ್ ಕಾರ್ಡ್ ನ ಡೇಟಾ ಬದಲಾವಣೆ ಮಾಡಲು ಸಾಧ್ಯವಿಲ್ಲ. ಜೊತೆಗೆ ಯಾವುದೇ ಮೂರನೇ ವ್ಯಕ್ತಿ ಸರ್ವರ್ ಬಳಕೆ ಮಾಡುವುದಿಲ್ಲ. ಓಪನ್ ಸೋರ್ಸ್ ಡೇಟಾ ಮೈಂಟೈನೆನ್ಸ್ ತಂತ್ರಜ್ಞಾನದ ಮೂಲಕ ಮಾಹಿತಿಯನ್ನು ಕ್ರೋಢಿಕರಿಸಲಾಗುತ್ತದೆ.

    ಹ್ಯಾಕರ್ಸ್ ನಿಂದ ನಿಮ್ಮ ದಾಖಲೆಗಳನ್ನು ರಕ್ಷಿಸಿಕೊಳ್ಳಬೇಕಿದಾರೆ ಬ್ಲಾಕ್ ಚೈನ್ ತಂತ್ರಜ್ಞಾನದ ಬಳಸಬಹುದಾಗಿದೆ. ಇದರಲ್ಲಿ ಯಾರೂ ಕೂಡ ಹ್ಯಾಕ್ ಮಾಡಿ ದಾಖಲೆಗಳನ್ನು ತಿದ್ದುಪಡಿ ಮಾಡಲು ಸಾಧ್ಯವಿಲ್ಲ. ಅಲ್ಲದೆ ಇಲ್ಲಿ ಮಾಹಿತಿ ನಿರ್ವಹಣೆ ಮಾಡಲು ಲಕ್ಷಾಂತರ ಕಂಪ್ಯೂಟರ್ ಪರಿಣಿತರು ಕಾರ್ಯ ನಿರ್ವಹಿಸುತ್ತಾರೆ. ಯಾವುದೇ ಮೂರನೇ ವ್ಯಕ್ತಿಯ ಸರ್ವರ್ ಸೇವೆಗೆ ಇಲ್ಲಿ ಅವಕಾಶವಿರುವುದಿಲ್ಲ. ಹಾಗಾಗಿ ಇದು ಅತಿ ಸುರಕ್ಷಿತ ತಂತ್ರಜ್ಞಾನ ಎಂದು ಐಟಿ ಪರಿಣಿತ ರಜತ್ ತಿಳಿಸಿದ್ದಾರೆ.

    ಡಿಜಿಲಾಕರ್ ಹಾಗೂ ನ್ಯಾಡ್ ಬಳಸಿದ್ರೆ ಎದುರಾಗೋ ತೊಂದರೆಗಳೇನು?

    * ಇವುಗಳಲ್ಲಿ ಸೆಂಟ್ರಲೈಸ್ಡ್ ಸರ್ವರ್ ಮೂಲಕ ಎಲ್ಲಾ ಮಾಹಿತಿ ಕ್ರೋಢೀಕರಿಸಲಾಗುತ್ತದೆ.
    * ಥರ್ಡ್ ಪಾರ್ಟಿ ಸರ್ವರ್ ಬಳಕೆ ಮಾಡುವುದರಿಂದ ಬಳಕೆದಾರರಿಗೆ ಆತಂಕವಿರುತ್ತದೆ.
    * ಹ್ಯಾಕರ್ಸ್ ಸಹಾಯದಿಂದ ಸರ್ವರ್ ಹ್ಯಾಕ್ ಮಾಡಬಹುದು.
    * ಮೇಲಿನ ಸಂಸ್ಥೆಗಳಲ್ಲಿನ ಸಿಬ್ಬಂದಿಗಳ ಸಹಾಯದಿಂದ ಡೇಟಾ ಬದಲಾಯಿಸಬಹುದು.
    * ಮಾರ್ಕ್ಸ್ ಕಾರ್ಡ್ ಗಳನ್ನು ದುರುಪಯೋಗ ಪಡೆಸಿಕೊಳ್ಳಬಹುದು.

    ಪಿಯು ನಿರ್ದೇಶಕರು ಎಷ್ಟೇ ಒಳ್ಳೆಯ ಉದ್ದೇಶದಿಂದ ಡಿಜಿಲಾಕರ್ ನಂತ ಸೇವೆ ವಿದ್ಯಾರ್ಥಿಗಳಿಗೆ ನೀಡಿದರು ಹ್ಯಾಕರ್ಸ್ ಗಳ ಹಾವಳಿ ವಿದ್ಯಾರ್ಥಿಗಳನ್ನು ಕಾಡುತ್ತಿದೆ.