Tag: married women

  • ಎಲ್ಲಾ ಮಹಿಳೆಯರು ಸುರಕ್ಷಿತ ವೈದ್ಯಕೀಯ ಗರ್ಭಪಾತಕ್ಕೆ ಅರ್ಹರು: ಸುಪ್ರೀಂಕೋರ್ಟ್

    ಎಲ್ಲಾ ಮಹಿಳೆಯರು ಸುರಕ್ಷಿತ ವೈದ್ಯಕೀಯ ಗರ್ಭಪಾತಕ್ಕೆ ಅರ್ಹರು: ಸುಪ್ರೀಂಕೋರ್ಟ್

    ನವದೆಹಲಿ: ದೇಶದಲ್ಲಿ ಮಹಿಳೆಯರ ಗರ್ಭಪಾತದ (Abortion) ಕುರಿತಾಗಿ ಸುಪ್ರೀಂಕೋರ್ಟ್ (Supreme Court) ಮಹತ್ವದ ತೀರ್ಪು ನೀಡಿದ್ದು, ವಿವಾಹಿತರು ಅಥವಾ ಅವಿವಾಹಿತ ಎಲ್ಲಾ ವರ್ಗದ ಮಹಿಳೆಯರೂ ಸುರಕ್ಷಿತವಾದ ಗರ್ಭಪಾತ ಮಾಡಿಸಿಕೊಳ್ಳಬಹುದು ಎಂದು ತೀರ್ಪು ನೀಡಿದೆ.

    ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಗರ್ಭದಾರಣೆ ಕುರಿತಾಗಿ ಸಲ್ಲಿಸಿದ್ದ ಅರ್ಜಿ ಒಂದರ ವಿಚಾರಣೆ ವೇಳೆ ಈ ಮಹತ್ವದ ತೀರ್ಪನ್ನು ನೀಡಿದೆ. ಮದುವೆಯಾಗದ ಮಹಿಳೆಯರು ಸುರಕ್ಷಿತ ಮತ್ತು ವೈದ್ಯಕೀಯವಾಗಿ ಸುರಕ್ಷಿತ ಗರ್ಭಪಾತ ಮಾಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಹಕ್ಕು ಹೊಂದಿದ್ದಾರೆ. ಮದುವೆ ಆದವರು, ಮತ್ತು ಆಗದವರು ಎಂಬ ಬೇಧವನ್ನು ಗರ್ಭಪಾತ ಕಾನೂನಿನಲ್ಲಿ ಮಾಡಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ. ಇದನ್ನೂ ಓದಿ: ಗರ್ಭಪಾತದ ಹಕ್ಕನ್ನು ರದ್ದುಗೊಳಿಸಿದ ಅಮೆರಿಕ – ಭುಗಿಲೆದ್ದ ಪ್ರತಿಭಟನೆ

    ಬಲವಂತದ ಗರ್ಭಧಾರಣೆಯನ್ನು ವೈವಾಹಿಕ ಅತ್ಯಾಚಾರ ಎಂದು ಪರಿಗಣಿಸಬೇಕು. ಸಂತ್ರಸ್ಥೆ ಗರ್ಭಪಾತಕ್ಕೆ ಇಚ್ಚಿಸಿದರೆ ಅದನ್ನು ವೈವಾಹಿಕ ಅತ್ಯಾಚಾರ ಎಂದು ಪರಿಗಣಿಸಿ ಅವಕಾಶ ನೀಡಬೇಕು. ಪ್ರಸ್ತುತ ದಿನಗಳಲ್ಲಿ ಮದುವೆಯ ಕಟ್ಟುಪಾಡುಗಳು ಪೂರ್ವ ನಿರ್ಧರಿತ ಎಂದು ಕಾನೂನಿನಲ್ಲಿ ಅಭಿಪ್ರಾಯ ಹೊಂದಲು ಸಾಧ್ಯವಿಲ್ಲ. ವೈಯಕ್ತಿಕ ಸ್ವಾತಂತ್ರ್ಯಕ್ಕೆ ಮನ್ನಣೆ ನೀಡಬೇಕಿದೆ. ಸಮಾಜದಲ್ಲಿ ಇಂದಿನ ನೈಜತೆಯನ್ನು ಪರಿಗಣಿಸಬೇಕು ಮತ್ತು ಹಳೆಯ ಕಟ್ಟುಪಾಡುಗಳನ್ನು ಮುಂದುವರಿಸಬಾರದು. ಸಾಮಾಜಿಕ ಬದಲಾವಣೆಗಳು ಮತ್ತು ಪರಿಸ್ಥಿತಿಗೆ ತಕ್ಕಂತೆ ಕಾನೂನಿನ ಜಾರಿ ಮತ್ತು ನಿರ್ಧಾರ ಬದಲಾಗಬೇಕು. ಕಾನೂನು ನಿಂತ ನೀರಾಗಬಾರದು ಹಾಗಾಗಿ ಸುಪ್ರೀಂಕೋರ್ಟ್ ಈ ಮಹತ್ವದ ತೀರ್ಪು ನೀಡುತ್ತಿದೆ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಇಂದು ಸ್ಯಾನಿಟರಿ ಪ್ಯಾಡ್, ನಾಳೆ ಕಾಂಡೋಮ್ ಕೇಳ್ತೀರಿ- ಮಹಿಳಾ ಐಎಎಸ್ ಅಧಿಕಾರಿ ವೀಡಿಯೋ ವೈರಲ್

    ವಿವಾಹಿತ ಮತ್ತು ಅವಿವಾಹಿತ ಮಹಿಳೆಯರು ವೈದ್ಯಕೀಯ ಗರ್ಭಪಾತ ಮತ್ತು ಮಸೂದೆ ಮತ್ತು ನಿಯಮದ ಅಡಿಯಲ್ಲಿ ಗರ್ಭಪಾತ ಮಾಡಿಸಬಹುದಾದ ಹಕ್ಕನ್ನು 24 ವಾರದವರೆಗೂ ಹೊಂದಿರುತ್ತಾರೆ ಎಂದು ಕೋರ್ಟ್ ತಿಳಿಸಿದೆ. ಇದನ್ನೂ ಓದಿ: ಪತಿಯ ಅನುಮತಿಯಿಲ್ಲದೇ ಪತ್ನಿ ಗರ್ಭಪಾತ ಮಾಡಿಸಿಕೊಳ್ಳಬಹುದು – ಕೇರಳ ಹೈಕೋರ್ಟ್

    ಅಮೆರಿಕದಲ್ಲಿ ಏನಾಗಿತ್ತು:
    ಕೆಲದಿನಗಳ ಹಿಂದೆ ಅಮೆರಿಕದ (America) ಸುಪ್ರೀಂಕೋರ್ಟ್ ಇತ್ತೀಚೆಗೆ ಗರ್ಭಪಾತಕ್ಕೆ ಸಂಬಂಧಿಸಿದಂತೆ ಮಹತ್ವದ ಆದೇಶವನ್ನು ಹೊರಡಿಸಿತ್ತು. ಗರ್ಭಪಾತದ ಸಾಂವಿಧಾನಿಕ ಹಕ್ಕನ್ನು ಅಮೆರಿಕದ ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು. ಈ ಆದೇಶದಿಂದ ಕೆಲವು ಪ್ರಮುಖ ನಗರಗಳಲ್ಲಿ ಮಹಿಳೆಯರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸುತ್ತಿದ್ದಾರೆ. ಆ ಬಳಿಕ ಗರ್ಭಪಾತದ ಬಗ್ಗೆ ಸಾಕಷ್ಟು ಚರ್ಚೆಗಳು ಆರಂಭವಾಗಿತ್ತು. ಅಮೆರಿಕದಲ್ಲಿ ಸುಪ್ರೀಂಕೋರ್ಟ್ ಗರ್ಭಪಾತಕ್ಕೆ ಕೆಲವು ಕಾನೂನು ನಿಬಂಧನೆಗಳನ್ನು ವಿಧಿಸಿದೆ. ಈ ಹಿಂದೆ ಗರ್ಭಪಾತದ ಸಂಪೂರ್ಣ ಹಕ್ಕು ಮಹಿಳೆಯರಿಗಿತ್ತು. ಆ ಬಳಿಕ ಸುಪ್ರೀಂಕೋರ್ಟ್ ಈ ಬಗ್ಗೆ ಕೆಲ ಬದಲಾವಣೆ ಮಾಡಿರುವುದರಿಂದ ಮಹಿಳೆಯರು ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • 16ರ ಬಾಲಕಿಯಿಂದ 8 ಬಾರಿ ಅಂಡಾಣು ಮಾರಾಟ – 4 ಆಸ್ಪತ್ರೆಗಳು ಶಾಶ್ವತ ಬಂದ್

    16ರ ಬಾಲಕಿಯಿಂದ 8 ಬಾರಿ ಅಂಡಾಣು ಮಾರಾಟ – 4 ಆಸ್ಪತ್ರೆಗಳು ಶಾಶ್ವತ ಬಂದ್

    ಚೆನ್ನೈ: 16 ವರ್ಷದ ಬಾಲಕಿಯಿಂದ ಅಕ್ರಮವಾಗಿ ಅಂಡಾಣು ಪಡೆದು ಮಾರಾಟ ಮಾಡಿದ ಆರೋಪದ ಮೇಲೆ ತಮಿಳುನಾಡಿನ 4 ಆಸ್ಪತ್ರೆಗಳನ್ನು ಶಾಶ್ವತವಾಗಿ ಮುಚ್ಚುವಂತೆ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ.

    ಬಾಲಕಿಯ ತಾಯಿಯು ಅಕೆಯ ಅಂಡಾಣುಗಳನ್ನು 8 ಬಾರಿ ವಿವಿಧ ಕೇಂದ್ರಗಳಿಗೆ ದಾನ ಮಾಡುವಂತೆ ಒತ್ತಾಯಿಸಿದ್ದಳು ಎಂಬುದು ಗೊತ್ತಾಗಿದೆ. ಇದನ್ನೂ ಓದಿ: ತಮಿಳುನಾಡು ಸಿಎಂಗೆ ಕೋವಿಡ್ – ಆಸ್ಪತ್ರೆಗೆ ದಾಖಲು

    21-35 ವಯೋಮಾನದ ಮಹಿಳೆಯರಿಗೆ ಒಂದು ಬಾರಿ ಮಾತ್ರವೇ ಅಂಡಾಣು ದಾನ ಮಾಡಲು ಅನುಮತಿಯಿದೆ. ಆದರೆ ಈ ಪ್ರಕರಣದಲ್ಲಿ ಬಾಲಕಿಯನ್ನು ಹಲವು ಬಾರಿ ಅಂಡಾಣು ಪಡೆಯಲು ಬಲವಂತ ಮಾಡಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಮಾ. ಸುಬ್ರಮಣಿಯನ್ ಹೇಳಿದ್ದಾರೆ.

    ಈ ಪ್ರಕರಣದಲ್ಲಿ ಅಪ್ರಾಪ್ತ ಬಾಲಕಿಯನ್ನು ವಯಸ್ಕಳೆಂದು ತೋರಿಸಲು ನಕಲಿ ಆಧಾರ್ ಕಾರ್ಡ್ ಮಾಡಿಸಲಾಗಿದ್ದು, ನಕಲಿ ಗಂಡನ ಒಪ್ಪಿಗೆಯನ್ನೂ ಪಡೆಯಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: 100ನೇ ಸ್ವಾತಂತ್ರ್ಯೋತ್ಸವದ ಹೊತ್ತಿಗೆ ಭಾರತದಲ್ಲಿ ಇಸ್ಲಾಮಿಕ್‌ ಸರ್ಕಾರ ಸ್ಥಾಪನೆ – ಪೊಲೀಸರಿಗೆ ಸಿಕ್ತು ಹೀಗೊಂದು ದಾಖಲೆ

    ಆಸ್ಪತ್ರೆಗಳು ನೆರವಿನ ಸಂತಾನೋತ್ಪತ್ತಿ ತಂತ್ರಜ್ಞಾನ ಕಾಯ್ದೆಯನ್ನು ಉಲ್ಲಂಘಿಸಿವೆ. ಅಲ್ಲದೆ, ಆಸ್ಪತ್ರೆಗಳು ಅರ್ಹ ಸಲಹೆಗಾರರನ್ನು ಹೊಂದಿಲ್ಲ, ಅಂಡಾಣು ದಾನಿ ಹುಡುಗಿಗೆ ಕಾರ್ಯವಿಧಾನದ ಸಾಧಕ-ಬಾಧಕಗಳ ಬಗ್ಗೆಯೂ ತಿಳಿಸಿಲ್ಲ ಎಂಬುದನ್ನು ವಿಚಾರಣಾ ಸಮಿತಿ ಕಂಡುಹಿಡಿದಿದೆ. ಹಾಗಾಗಿ ಆಧಾರ್ ದುರ್ಬಳಕೆ ಮತ್ತು ಪೋಕ್ಸೋ ಕಾಯ್ದೆಯಡಿಯೂ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಈ ಪ್ರಕರಣದಲ್ಲಿ ಭಾಗಿಯಾದ ಆಸ್ಪತ್ರೆಗಳಿಗೆ ವೈದ್ಯರೂ ಸೇರಿದಂತೆ 50 ಲಕ್ಷ ರೂ. ವರೆಗೆ ದಂಡ ಮತ್ತು ನೆರವಿನ ಸಂತಾನೋತ್ಪತ್ತಿ ತಂತ್ರಜ್ಞಾನ ಕಾಯ್ದೆಯಡಿ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಬಹುದು ಎಂದು ಆರೋಗ್ಯ ಸಚಿವರು ವಿವರಿಸಿದ್ದಾರೆ. ಇದನ್ನೂ ಓದಿ: ಮಾಲ್‌ನಲ್ಲಿ ನಮಾಜ್ – ಮಾಲ್ ಬಹಿಷ್ಕರಿಸುವಂತೆ ಹಿಂದೂ ಸಂಘಟನೆಗಳಿಂದ ಕರೆ

    ಆಸ್ಪತ್ರೆಯಲ್ಲಿ ದಾಖಲಾಗಿರುವ ಹಲವು ರೋಗಿಗಳ ಹಿತದೃಷ್ಟಿಯಿಂದ ಆಸ್ಪತ್ರೆ ಸ್ಥಗಿತಗೊಳಿಸಲು 2 ವಾರಗಳ ಕಾಲಾವಕಾಶ ನೀಡಲಾಗಿದೆ. ಅಲ್ಲದೆ ಆಸ್ಪತ್ರೆಗಳು ರಾಜ್ಯ ಆರೋಗ್ಯ ವಿಮಾ ಯೋಜನೆಯಡಿ ತಮ್ಮ ಎಂಪನೆಲ್‌ಮೆಂಟ್ (ಕೇಂದ್ರಸರ್ಕಾರದ ವಿಮೆ ಯೋಜನೆಗಳಿಗೆ ಆಯ್ಕೆಯಾದವರ ಪಟ್ಟಿ) ಅನ್ನು ಸಹ ಕಳೆದುಕೊಳ್ಳುತ್ತವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಅಡುಗೆ ಮಾಡುವಾಗ ಹಾವು ಕಚ್ಚಿ ಮಹಿಳೆ ಸಾವು

    ಅಡುಗೆ ಮಾಡುವಾಗ ಹಾವು ಕಚ್ಚಿ ಮಹಿಳೆ ಸಾವು

    ಶಿವಮೊಗ್ಗ: ಅಡುಗೆ ಮಾಡುವಾಗ ಹಾವು ಕಚ್ಚಿ ಗೃಹಿಣಿಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಮೇಲಿಗೆಬೆಸಿಗೆ ಗ್ರಾಮದಲ್ಲಿ ನಡೆದಿದೆ.

    ಸೌಮ್ಯ (24) ಮೃತಪಟ್ಟ ಗೃಹಿಣಿ. ಸೌಮ್ಯ ಅಡುಗೆ ಮಾಡಲು ಅಡುಗೆ ಮನೆಗೆ ತೆರಳಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ವಿಷಕಾರಿ ಹಾವು ಸೌಮ್ಯ ಕಾಲಿಗೆ ಕಚ್ಚಿದೆ. ಆದರೆ ಹಾವು ಕಚ್ಚಿರುವುದು ಸೌಮ್ಯಗೆ ತಿಳಿದಿಲ್ಲ. ಸ್ವಲ್ಪ ಸಮಯದ ಬಳಿಕ ಕಾಲಿನಲ್ಲಿ ಊತ ಕಾಣಿಸಿಕೊಂಡು ತೀವ್ರ ನೋವು ಉಂಟಾಗಿದೆ. ಹಾವು ಕಚ್ಚಿರುವ ಬಗ್ಗೆ ಅನುಮಾನಗೊಂಡ ಕುಟುಂಬಸ್ಥರು ಹೊಸನಗರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಇದನ್ನೂ ಓದಿ: ದೊಡ್ಡಪ್ಪನಿಂದ್ಲೇ ಕಂದಮ್ಮನ ಮೇಲೆ ಅತ್ಯಾಚಾರ- ತೀವ್ರ ರಕ್ತಸ್ರಾವದಿಂದ 2 ವರ್ಷದ ಬಾಲೆ ಸಾವು

    ಹೊಸನಗರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಸೌಮ್ಯ ಮೃತಪಟ್ಟಿದ್ದಾರೆ. ಸೌಮ್ಯ ನಾಲ್ಕು ವರ್ಷದ ಹಿಂದೆ ನಾಗರಾಜ್ ಎಂಬವರ ಜೊತೆ ವಿವಾಹವಾಗಿದ್ದರು. ಈ ದಂಪತಿಗೆ ಮೂರು ವರ್ಷದ ಗಂಡು ಮಗವಿತ್ತು. ಘಟನೆ ಬಗ್ಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೀಗ ಹಾಕಿದ್ದ ಮನೆಗಳಲ್ಲಿ ಕಳ್ಳತನ ಮಾಡ್ತಿದ್ದ ಒಂಟಿ ಕಳ್ಳಿ ಅರೆಸ್ಟ್

  • ವರ್ಷಕ್ಕೆ 7 ದಿನ ಪರ ಪುರುಷರ ಜೊತೆ ಮಲಗ್ತಾರೆ ವಿವಾಹಿತ ಮಹಿಳೆಯರು!

    ವರ್ಷಕ್ಕೆ 7 ದಿನ ಪರ ಪುರುಷರ ಜೊತೆ ಮಲಗ್ತಾರೆ ವಿವಾಹಿತ ಮಹಿಳೆಯರು!

    ಜಕಾರ್ತಾ: ವಿಶ್ವಾದ್ಯಂತ ಚಿತ್ರ-ವಿಚಿತ್ರ ಪದ್ಧತಿಗಳು ಜಾರಿಯಲ್ಲಿವೆ. ಕೆಲವೊಂದು ಪದ್ಧತಿಗಳ ಆಚರಣೆ ನೋಡಿದರೆ ಈ ರೀತಿಯೂ ಇರುತ್ತಾ ಎಂದು ನಿಮಗೆ ಅನಿಸದೇ ಇರಲಾರದು. ಇದೇ ರೀತಿ ಇಂಡೋನೇಷ್ಯಾದಲ್ಲಿ ವಿಚಿತ್ರ ಉತ್ಸವ ನಡೆಯುತ್ತೆ. ಇಲ್ಲಿ ವಿವಾಹಿತ ಮಹಿಳೆಯರು ಪರ ಪುರುಷರೊಟ್ಟಿಗೆ ಮಲಗುತ್ತಾರೆ.

    ಹೌದು. ಇದ್ಯಾವುದಪ್ಪ ವಿಚಿತ್ರ ಪದ್ಧತಿ ಎಂದು ಅಚ್ಚರಿಯಾಗಬಹುದು. ಆದರೆ ಇಂತಹದೊಂದು ಪದ್ಧತಿ 16 ನೇ ಶತಮಾನದಿಂದಲೂ ಇಂಡೋನೇಷ್ಯಾದ ಬಾಲಿ ದ್ವೀಪದಲ್ಲಿ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಈ ದ್ವೀಪದಲ್ಲಿ ಇರುವ ವಿವಾಹಿತ ಮಹಿಳೆಯರು ವರ್ಷದಲ್ಲಿ 7 ದಿನ ಪರಪುರುಷನ ಜೊತೆ ಲೈಂಗಿಕ ಸಂಬಂಧ ಬೆಳೆಸುತ್ತಾರೆ.

    ಬಾಲಿ ದ್ವೀಪದಲ್ಲಿ ಪ್ರತಿ ವರ್ಷ ಉತ್ಸವವೊಂದು ನಡೆಯುತ್ತದೆ. ಇದಕ್ಕೆ ಪೋನ್ ಉತ್ಸವ ಎನ್ನುತ್ತಾರೆ. ದ್ವೀಪದ ಪರ್ವತಗಳ ಮೇಲೆ ನಡೆಯುವ ಈ ಉತ್ಸವ ಹಳೆ ಸಂಪ್ರದಾವಾಗಿದ್ದರೂ ಈಗಲೂ ಇಲ್ಲಿನ ಮಹಿಳೆಯರು ಇದನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಬರುತ್ತಿದ್ದಾರೆ. ಈ ಉತ್ಸವದಲ್ಲಿ ಮದುವೆಯಾದ ಮಹಿಳೆಯರು ಅಪರಿಚಿತ ಪುರುಷನ ಜೊತೆ ಸಂಬಂಧ ಬೆಳೆಸುತ್ತಾರೆ. ಆದರೆ ಮಹಿಳೆಯರ ಗಂಡಂದಿರು ಇದಕ್ಕೆ ಅಡ್ಡಿಪಡಿಸುವುದಿಲ್ಲ.

    16ನೇ ಶತಮಾನದಿಂದಲೂ ಈ ಪದ್ಧತಿ ರೂಢಿಯಲ್ಲಿದೆ. ಮಹಿಳೆ ಹಾಗೂ ಪರಪುರುಷನ ಜೀವನ ಈ ಪದ್ಧತಿ ಅನುಸರಿಸುವುದರಿಂದ ಸುಖಕರವಾಗಿರುತ್ತದೆ. ಕುಟುಂಬದ ಸುಖ-ಸಂತೋಷಕ್ಕೆ ಇದು ಕಾರಣವಾಗುತ್ತದೆ ಎಂದು ಇಲ್ಲಿನ ಜನರು ನಂಬಿದ್ದಾರೆ.

    16ನೇ ಶತಮಾನದಲ್ಲಿ ಇಲ್ಲಿದ್ದ ರಾಜನಿಗೆ ಮಲತಾಯಿಯ ಮೇಲೆ ಪ್ರೀತಿ ಹುಟ್ಟಿತ್ತಂತೆ. ಇಬ್ಬರೂ ಲೈಂಗಿಕ ಸಂಬಂಧ ಬೆಳೆಸಿದ್ದರು. ಬಂಧದಲ್ಲಿ ತಾಯಿ-ಮಗನಾಗಿದ್ದವರು ಸಂಬಂಧ ಬೆಳೆಸಿ ಪಾಪ ಮಾಡಿದ್ದಾರೆ ಎಂದು ಇಬ್ಬರನ್ನೂ ಹತ್ಯೆ ಮಾಡಲಾಗಿತ್ತು. ಆದರೆ ಅವರಿಬ್ಬರು ಅತೃಪ್ತ ಆತ್ಮಗಳಾಗಿದ್ದಾರೆ. ಹೀಗಾಗಿ ವಿವಾಹಿತ ಮಹಿಳೆ ಪರಪುರುಷನ ಜೊತೆ ಮಲಗುವುದು ಪಾಪವಾದರೂ ಕೂಡ ಹೀಗೆ ಮಾಡುವುದರಿಂದ ರಾಜ ಹಾಗೂ ಆತನ ಮಲತಾಯಿ ಆತ್ಮಕ್ಕೆ ಶಾಂತಿ ಸಿಗುತ್ತದೆ. ಆಗ ಅವರಿಬ್ಬರು ಆಶೀರ್ವಾದ ಮಾಡುತ್ತಾರೆ. ಇದರಿಂದ ದಾಂಪತ್ಯ ಜೀವನದಲ್ಲಿ ಸುಖ-ಸಂತೋಷ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಹಿನ್ನೆಲೆಯಲ್ಲಿ ಈಗಲೂ ಮಹಿಳೆಯರು ಅಪರಿಚಿತ ಪುರುಷನ ಜೊತೆ ಸಂಬಂಧ ಬೆಳೆಸುತ್ತಾರೆ.