Tag: Marshals

  • ಕಸ ಹಾಕಿದ್ದಕ್ಕೆ ದಂಡ ವಿಧಿಸಲು ಹೋದ ಮಾರ್ಷಲ್‌ಗಳ ಮೇಲೆ ರಿಕ್ಷಾ ಹತ್ತಿಸಿದ್ರು

    ಕಸ ಹಾಕಿದ್ದಕ್ಕೆ ದಂಡ ವಿಧಿಸಲು ಹೋದ ಮಾರ್ಷಲ್‌ಗಳ ಮೇಲೆ ರಿಕ್ಷಾ ಹತ್ತಿಸಿದ್ರು

    ಬೆಂಗಳೂರು: ಸಾರ್ವಜನಿಕ ಪ್ರದೇಶದಲ್ಲಿ ಕಸ ಎಸೆಯುವವರಿಗೆ ದಂಡ ವಿಧಿಸಲು ಹೋದ ಬಿಬಿಎಂಪಿ ಮಾರ್ಷಲ್ ಮೇಲೆ ಹಲ್ಲೆಯಾದ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ.

    ಆಟೋದಲ್ಲಿ ಬಂದ ನಾಲ್ವರು ರಸ್ತೆ ಬದಿ ಕಸ ಎಸೆಯುತ್ತಿದ್ದರು. ಈ ವೇಳೆ ದಂಡ ವಿಧಿಸಲು ಮುಂದಾದ ಇಬ್ಬರು ಮಾರ್ಷಲ್‍ಗಳ ಮೇಲೆ ನಾಲ್ವರು ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: 5 ಲಕ್ಷ ರೂ. ಚೆಕ್‌ನೊಂದಿಗೆ ಬಸವಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ ಸಾಯಿನಾಥ್‌


    ಆಟೋವನ್ನು ಮಾರ್ಷಲ್ ಕಾಲಿನ ಮೇಲೆ ಹತ್ತಿಸಿ ಕ್ರೌರ್ಯ ಮೆರೆದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಂಗ್ಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚಳ- ಮತ್ತೆ ಅಖಾಡಕ್ಕೆ ಇಳಿದ ಮಾರ್ಷಲ್ಸ್

    ಬೆಂಗ್ಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚಳ- ಮತ್ತೆ ಅಖಾಡಕ್ಕೆ ಇಳಿದ ಮಾರ್ಷಲ್ಸ್

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇದೀಗ ಬಿಬಿಎಂಪಿ ಮಾರ್ಷಲ್ಸ್ ಮತ್ತೆ ಅಖಾಡಕ್ಕಿಳಿದಿದ್ದಾರೆ.

    ಇಂದು ಮೈಸೂರು ರಸ್ತೆಯಲ್ಲಿ ಎತ್ತಿನ ಗಾಡಿ ಲಾಕ್ ಮಾಡಿದ್ದಾರೆ. ಎತ್ತಿನ ಗಾಡಿಯಲ್ಲಿ ಪ್ಲಾಸ್ಟಿಕ್ ಸಾಗಾಟ ಮಾಡಲಾಗುತ್ತಿತ್ತು. ಚೆಕ್ಕಿಂಗ್ ಇರಲ್ಲ ಎನ್ನುವ ಕಾರಣಕ್ಕೆ ಎತ್ತಿನ ಗಾಡಿಯಲ್ಲಿ ನಿಷೇಧಿತ ಮೂಟೆಗಟ್ಟಲೆ ಪ್ಲಾಸ್ಟಿಕ್ ಸಾಗಾಟ ಮಾಡಲಾಗ್ತಿತ್ತು. ಆದರೆ ಇದನ್ನು ಬಿಬಿಎಂಪಿ ಅಧಿಕಾರಿಗಳು ಹಿಡಿದಿದ್ದಾರೆ. ಅಲ್ಲದೆ ದಂಡ ವಿಧಿಸಿ, ಎರಡು ಮೂಟೆ ಪ್ಲ್ಯಾಸ್ಟಿಕ್ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ – ಶೀಘ್ರವೇ ಕಾಂಗ್ರೆಸ್‌ ಸೇರಲಿದ್ದಾರೆ ಮಾಜಿ ಎಂಎಲ್‌ಸಿ

    ಮಾರ್ಕೆಟ್, ಜನನಿಬಿಡ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯಕ್ಕೆ ಅನೌನ್ಸ್ ಮಾಡಲಾಗುತ್ತಿದೆ. ಎರಡು ಗಂಟೆಗೊಮ್ಮೆ ಮಾರ್ಕೆಟ್ ಸ್ಥಳದಲ್ಲಿ ಮೈಕ್‍ನಲ್ಲಿ ಅನೌನ್ಸ್ ಮಾಡಲಾಗುತ್ತಿದೆ. ಒಟ್ಟಿನಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಕೇಸ್ 500ರ ಗಡಿ ದಾಟಿದ್ದು, ಈ ಹಿನ್ನೆಲೆಯಲ್ಲಿ ಮಾರ್ಷಲ್ ಗಳ ನಡೆ ಮಾಲ್ ಗಳ ಕಡೆ ಎನ್ನುವಂತಾಗಿದೆ. ಮಾಸ್ಕ್ ಹಾಕದೇ ಮಾಲ್ ಕಡೆ ಓಡಾಡುವವರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಮಲ್ಲೇಶ್ವರಂ ಮಂತ್ರಿ ಮಾಲ್ ಮುಂದೆ ಕೊರೊನಾ ಮುನ್ನಚ್ಚರಿಕೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾರ್ಷಲ್ಸ್ ಮಾಡುತ್ತಿದ್ದಾರೆ.

  • ಸದನದಲ್ಲಿ ಗದ್ದಲವೆಬ್ಬಿಸಿದ ಶಾಸಕರನ್ನು ಹೊತ್ತು ತಂದು ಹೊರಹಾಕಿದ ಮಾರ್ಷಲ್‍ಗಳು

    ಸದನದಲ್ಲಿ ಗದ್ದಲವೆಬ್ಬಿಸಿದ ಶಾಸಕರನ್ನು ಹೊತ್ತು ತಂದು ಹೊರಹಾಕಿದ ಮಾರ್ಷಲ್‍ಗಳು

    ಪಾಟ್ನಾ: ಬಿಹಾರದ ಸದನದಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಗದ್ದಲವೆಬ್ಬಿಸಿ ಚರ್ಚೆಗೆ ಅವಕಾಶ ಮಾಡಿಕೊಡದ ಕಾರಣ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮಾಕ್ರ್ಸಿಸ್ಟ್-ಲೆನಿನಿಸ್ಟ್ (ಸಿಪಿಐ-ಎಮ್‍ಎಲ್) ಶಾಸಕರನ್ನು ಮಾರ್ಷಲ್‍ಗಳು ಹೊತ್ತು ತಂದು ಹೊರ ಹಾಕಿದ ಘಟನೆ ನಡೆಯಿತು.

    ಬಿಹಾರ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯ ಕುರಿತಾಗಿ ಚರ್ಚಿಸುವ ವೇಳೆ ಸರ್ಕಾರಕ್ಕೂ ಪ್ರತಿಪಕ್ಷದ ಶಾಸಕರಿಗೂ ಗದ್ದಲ ಏರ್ಪಟ್ಟಿದೆ. ಬಳಿಕ ಸದನದಲ್ಲಿದ್ದ ಮಾರ್ಷಲ್‍ಗಳು ಗದ್ದಲವೆಬ್ಬಿಸಿದ 8 ಶಾಸಕರನ್ನು ಹೊತ್ತು ತಂದು ಹೊರ ಹಾಕಿದ್ದಾರೆ. ಇದನ್ನೂ ಓದಿ: ಭಯೋತ್ಪಾದನೆಯಲ್ಲಿ ತೊಡಗಲು ಮುಸ್ಲಿಂ ಯುವಕರಿಗೆ ಪ್ರೇರಣೆ- 5 ವರ್ಷ ಜಾಕಿರ್‌ ನಾಯಕ್‌ ಸಂಸ್ಥೆ ಬ್ಯಾನ್‌

    ಮಾರ್ಷಲ್‍ಗಳು ಸಚಿವರನ್ನು ಕೈ ಮತ್ತು ಕಾಲುಗಳನ್ನು ಹಿಡಿದುಕೊಂಡು ಹೊತ್ತು ತಂದು ಹೊರ ಹಾಕುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಪಿಐ-ಎಮ್‍ಎಲ್ ಶಾಸಕ ಬೀರೇಂದ್ರ ಪ್ರಸಾದ್ ಗುಪ್ತಾ, ರಾಜ್ಯದಲ್ಲಿ ಮಹಿಳೆಯರಿಗೆ ಆಗುತ್ತಿರುವ ದೌರ್ಜನ್ಯ ಮತ್ತು ಅಪರಾಧ ಕೃತ್ಯಗಳ ಬಗ್ಗೆ ಮತ್ತು ದರ ಏರಿಕೆ ಕುರಿತಾಗಿ ಚರ್ಚೆ ನಡೆಸಲು ಮುಂದಾದಾಗ ಸರ್ಕಾರ ಈ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಿಲ್ಲ. ಅಲ್ಲದೆ ನಮ್ಮ ಶಾಸಕರನ್ನು  ಹೊರ ಹಾಕಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ನನ್ನ ದೇಶಕ್ಕಾಗಿ ಪ್ರಾಣವನ್ನೂ ಕೊಡಬಲ್ಲೆ: ಬಿಜೆಪಿಗೆ ಕೇಜ್ರಿವಾಲ್‌ ಟಾಂಗ್‌

     

  • ರಾಜ್ಯಸಭೆ ಮಾರ್ಷಲ್‍ಗಳ ಹೊಸ ಸಮವಸ್ತ್ರದ ಬಗ್ಗೆ ವ್ಯಾಪಕ ಟೀಕೆ: ನಿರ್ಧಾರ ಮರುಪರಿಶೀಲನೆಗೆ ಆದೇಶ

    ರಾಜ್ಯಸಭೆ ಮಾರ್ಷಲ್‍ಗಳ ಹೊಸ ಸಮವಸ್ತ್ರದ ಬಗ್ಗೆ ವ್ಯಾಪಕ ಟೀಕೆ: ನಿರ್ಧಾರ ಮರುಪರಿಶೀಲನೆಗೆ ಆದೇಶ

    ನವದೆಹಲಿ: ರಾಜ್ಯಸಭೆ ಮಾರ್ಷಲ್‍ಗಳ ಹೊಸ ಸಮವಸ್ತ್ರದ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ನಿರ್ಧಾರ ಮರುಪರಿಶೀಲನೆಗೆ ಸೂಚನೆ ರಾಜ್ಯಸಭೆ ಸಭಾಪತಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆದೇಶಿಸಿದ್ದಾರೆ.

    ರಾಜ್ಯಸಭೆಯ 250ನೇ ಐತಿಹಾಸಿಕ ಕಲಾಪ ಇಂದು ನಡೆಯಿತು. ಈ ಕಲಾಪದಲ್ಲಿ ಮಾರ್ಷಲ್‍ಗಳಿಗೆ ಸಾಂಪ್ರದಾಯಿಕ ಸಮವಸ್ತ್ರ ‘ಬಂದ್‍ಗಲಾ ಮತ್ತು ಪೇಟ’ವನ್ನು ಬದಲಿಸಿ, ಮಿಲಿಟರಿ ರೀತಿಯ ಸಮವಸ್ತ್ರ ನೀಡಲಾಗಿತ್ತು. ಈ ನಿರ್ಧಾರವು ಭಾರೀ ಟೀಕೆ ಹಾಗೂ ವಿರೋಧಕ್ಕೆ ಕಾರಣವಾಗಿದೆ.

    ಟೀಕೆ ಹಾಗೂ ವಿರೋಧದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ವಿವಿಧ ಸಲಹೆಗಳನ್ನು ಪರಿಗಣಿಸಿದ ನಂತರ ರಾಜ್ಯಸಭಾ ಸಚಿವಾಲಯ ಮಾರ್ಷಲ್‍ಗಳಿಗೆ ಹೊಸ ವಸ್ತ್ರಸಂಹಿತೆಯನ್ನು ರೂಪಿಸಿದೆ. ಆದರೆ ಕೆಲ ರಾಜಕೀಯ ಪಕ್ಷಗಳು ಹಾಗೂ ಗಣ್ಯ ವ್ಯಕ್ತಿಗಳಿಂದ ಅಭಿಪ್ರಾಯಗಳನ್ನು ಸ್ವೀಕರಿಸಿದ ನಂತರ ಈ ಬಗ್ಗೆ ಪರಿಶೀಲಿಸಲು ಸಚಿವಾಲಯದ ಕಾರ್ಯದರ್ಶಿಯವರಿಗೆ ಸೂಚಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

    ಈ ಕುರಿತು ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ವೇದ್ ಮಲಿಕ್ ಅವರು ಟ್ವೀಟ್ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ. ಸೇನಾ ಸಮವಸ್ತ್ರವನ್ನು ನಕಲು ಮಾಡುವುದು ಕಾನೂನು ಬಾಹೀರ. ಈ ಬಗ್ಗೆ ಉಪ ರಾಷ್ಟ್ರಪತಿ ಕಚೇರಿ, ರಾಜ್ಯಸಭೆ ಹಾಗೂ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗಮನ ಹಿರಿಸಿ, ಕ್ರಮಕೈಗೊಳ್ಳುತ್ತಾರೆ ಎಂದು ಭಾವಿಸಿದ್ದೇನೆ ಎಂದು ಹೇಳಿದ್ದಾರೆ. ಜೊತೆಗೆ ಟ್ವೀಟ್ ಅನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಟ್ಯಾಗ್ ಮಾಡಿದ್ದಾರೆ.

    ಮಾರ್ಷಲ್ ಹೊಸ ಸಮವಸ್ತ್ರಕ್ಕೆ ಕಾಂಗ್ರೆಸ್ ಸೇರಿದಂತೆ ವಿವಿಧ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಅಷ್ಟೇ ಅಲ್ಲದೆ ಕೇಂದ್ರ ಸಚಿವ ವಿ.ಕೆ.ಸಿಂಗ್ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ.