Tag: martyred

  • ಉಗ್ರರೊಂದಿಗೆ ಹೋರಾಟ-ವೀರ ಮರಣವನ್ನಪ್ಪಿದ ಬೆಳಗಾವಿ ಯೋಧ

    ಉಗ್ರರೊಂದಿಗೆ ಹೋರಾಟ-ವೀರ ಮರಣವನ್ನಪ್ಪಿದ ಬೆಳಗಾವಿ ಯೋಧ

    ಬೆಳಗಾವಿ (ಚಿಕ್ಕೋಡಿ): ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೂದಿಹಾಳ್ ಗ್ರಾಮದ ಯೋಧ ವೀರ ಮರಣವನ್ನಪ್ಪಿದ್ದಾರೆ.

    ಪ್ರಕಾಶ್ (ಭೋಜರಾಜ್) ಪುಂಡಲೀಕ ಜಾಧವ್ (28) ಹುತಾತ್ಮ ಯೋಧರಾಗಿದ್ದಾರೆ. ಯೋಧ ಭೋಜರಾಜ್ ಜಮ್ಮು ಮತ್ತು ಕಾಶ್ಮೀರದ ಕುಲಗಾಮ್ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಸೋಮವಾರ ತಡರಾತ್ರಿ ಉಗ್ರರೊಂದಿಗಿನ ನಡೆದ ಗುಂಡಿನ ಚಕಮಕಿಯಲ್ಲಿ ಹೋರಾಡಿ, ವೀರ ಸ್ವರ್ಗವನ್ನಪ್ಪಿದ್ದಾರೆ.

    ಭೋಜರಾಜ್ ಮರಾಠಾ ರೆಜಿಮೆಂಟಿನಲ್ಲಿ ಕಳೆದ 11 ವರ್ಷಗಳಿಂದ ಯೋಧರಾಗಿದ್ದರು. ಅಲ್ಲದೇ ಇವರ ತಂದೆಯೂ ಕೂಡ ನಿವೃತ್ತ ಸೈನಿಕರಾಗಿದ್ದಾರೆ. ಮೃತ ಭೋಜರಾಜ್ ಕಳೆದ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದು, ಮುದ್ದಾದ ಮೂರು ತಿಂಗಳ ಹೆಣ್ಣು ಮಗುವನ್ನು ಹೊಂದಿದ್ದಾರೆ. ಇತ್ತೀಚೆಗಷ್ಟೇ ದೀಪಾವಳಿ ಹಬ್ಬವನ್ನು ಮುಗಿಸಿ ಸೇನೆಗೆ ವಾಪಾಸ್ಸಾಗಿದ್ದರು. ಯೋಧ ಭೋಜರಾಜ್ ಹೆಂಡತಿ, ಮಗು, ತಂದೆ-ತಾಯಿ ಹಾಗೂ ಓರ್ವ ಸಹೋದರರನ್ನು ಅಗಲಿದ್ದಾರೆ.

    ಜಾಧವ್ ಸಾವಿನ ಸುದ್ದಿಯಿಂದಾಗಿ ಕುಟುಂಬಸ್ಥರು ಹಾಗೂ ಸ್ವಗ್ರಾಮದಲ್ಲಿ ನೀರವ ಮೌನ ಮಡುಗಟ್ಟಿದೆ. ಬುಧವಾರ ಮಧ್ಯಾಹ್ನ ಯೋಧ ಜಾಧವ್ ರ ಪಾರ್ಥಿವ ಶರೀರ ಬೂದಿಹಾಳ ಗ್ರಾಮಕ್ಕೆ ಬರುತ್ತದೆಂದು ತಿಳಿದು ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಕ್ಸಲ್ ದಮನಕ್ಕೆ ಬೀದರ್ ನ ಪೊಲೀಸ್ ಹುತಾತ್ಮ – ಸರ್ಕಾರ ಗೌರವದೊಂದಿಗೆ ಅಂತ್ಯಕ್ರಿಯೆ

    ನಕ್ಸಲ್ ದಮನಕ್ಕೆ ಬೀದರ್ ನ ಪೊಲೀಸ್ ಹುತಾತ್ಮ – ಸರ್ಕಾರ ಗೌರವದೊಂದಿಗೆ ಅಂತ್ಯಕ್ರಿಯೆ

    ಬೀದರ್: ನಕ್ಸಲ್ ನಿಗ್ರಹ ಪಡೆಯ ಹೆಡ್ ಕಾನ್ ಸ್ಟೇಬಲ್ ಬೀದರ್ ಮೂಲದ ಬಿ.ಸುಶೀಲ್‍ಕುಮಾರ್ ಅವರ ಸಕಲ ಸರ್ಕಾರಿ ಗೌರವದೊಂದಿಗೆ ಇಂದು ಸ್ವಗ್ರಾಮ ಮಂಗಲಪೇಟೆಯಲ್ಲಿರುವ ಮೇಥೋಡಿಯಸ್ ಚರ್ಚ್ ಬಳಿಯಲ್ಲಿ ಅಂತ್ಯಕ್ರಿಯೆ ನಡೆಯಿತು.

    ಶುಕ್ರವಾರ ತಡರಾತ್ರಿ ತೆಲಂಗಾಣ-ಛತ್ತೀಸ್‍ಗಢ ಗಡಿಯಲ್ಲಿ ನಕ್ಸಲ್ ಕಾರ್ಯಾಚರಣೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಮಾವೋ ನಕ್ಸಲ್ ದಮನದಲ್ಲಿ ಬೀದರ್‍ನ ಮೂಲದ ಪೊಲೀಸ್ ಪೇದೆ ಬಿ ಸುಶೀಲ್‍ಕುಮಾರ್ ಹುತಾತ್ಮನಾಗಿದ್ದರು. ಕಾರ್ಯಾಚರಣೆಯಲ್ಲಿ ಹುತಾತ್ಮನಾದ ಬಿ. ಸುಶೀಲ್‍ಕುಮಾರ್ ಪಾರ್ಥಿವ ಶರೀರ ವಿಶೇಷ ಆಂಬುಲೆನ್ಸ್ ಮೂಲಕ ಬೀದರ್ ನಗರದ ಗ್ರೇಸ್ ಕಾಲೋನಿಯ ನಿವಾಸಕ್ಕೆ ಬಂದು ತಲುಪಿತ್ತು.

    ಹುತಾತ್ಮನ ಪಾರ್ಥಿವ ಶರೀರ ನಿವಾಸಕ್ಕೆ ಆಗಮಿಸುತ್ತಿದಂತೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು ಇಂದು ಬೀದರ್‍ನ ಮಂಗಲಪೇಟೆಯಲ್ಲಿರುವ ಮೇಥೋಡಿಯಸ್ ಚರ್ಚ್ ಬಳಿಯಲ್ಲಿ ಅಂತ್ಯಕ್ರಿಯೆ ನಡೆದಿದೆ. ಅಂತ್ಯಕ್ರಿಯೆಗೆ ತೆಲಂಗಾಣ ಡಿಜಿಪಿ ಮಹೇಂದ್ರಕುಮಾರ್ ರೆಡ್ಡಿ ಬಂದು ಗೌರವ ಸಲ್ಲಿಸಿದ್ದಾರೆ.

    ರಾಜ್ಯ ಹಾಗೂ ತೆಲಂಗಾಣ ಪೊಲೀಸ್ ರಿಂದ ಜಂಟಿ ಸಕಲ ಸರ್ಕಾರಿ ಗೌರವದೊಂದಿದೆ ಅಂತ್ಯಕ್ರಿಯೆ ನಡೆದಿದೆ. ಸಂಬಂಧಿಕರು ಹಾಗೂ ಪೊಲೀಸ್ ಬಾಂಧವರು ಭಾಗಿಯಾಗಿದ್ದರು.

    ಬಿ.ಸುಶೀಲ್‍ಕುಮಾರ್ ತೆಲಂಗಾಣದ ಹೈದರಾವಾದ್ ನ ಗ್ರೇಹಹುಣ್ಸ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಕಾರ್ಯಾಚರಣೆಯಲ್ಲಿ 10 ಜನ ನಕ್ಸಲರನ್ನು ಹತ್ಯೆ ಮಾಡಲಾಗಿದೆ.

  • ಅರುಣಾಚಲಪ್ರದೇಶದ ತವಾಂಗ್ ನಲ್ಲಿ ಹಾವೇರಿ ಯೋಧ ಹುತಾತ್ಮ

    ಅರುಣಾಚಲಪ್ರದೇಶದ ತವಾಂಗ್ ನಲ್ಲಿ ಹಾವೇರಿ ಯೋಧ ಹುತಾತ್ಮ

    ಹಾವೇರಿ: ಕರ್ತವ್ಯ ನಿರತ ಭಾರತೀಯ ಸೇನೆ ಯೋಧರೊಬ್ಬರು ಕಾರ್ಯನಿರ್ವಹಿಸುತ್ತಿದ್ದ ವೇಳೆ ಅರುಣಾಚಲ ಪ್ರದೇಶದ ತವಾಂಗ್ ನಲ್ಲಿ ಹುತಾತ್ಮರಾಗಿದ್ದಾರೆ.

    ಮೂಲತಃ ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಮುಗಳಿ ಗ್ರಾಮದ ಚಂದ್ರಶೇಖರ ಡವಗಿ ಅವರು ಹುತಾತ್ಮರಾಗಿದ್ದಾರೆ. ಕರ್ತವ್ಯದ ವೇಳೆ ಭಂಗಾ ಎಂ.ಎಚ್ ಪ್ರದೇಶದಲ್ಲಿ ಆಮ್ಲಜನಕ ಕೊರತೆಯಿಂದ ಸಾವನಪ್ಪಿದ್ದಾರೆ ಎನ್ನಲಾಗಿದೆ. ಸುದ್ದಿ ತಿಳಿಯುತ್ತಿದಂತೆ ಗ್ರಾಮದಲ್ಲಿ ಆವರಿಸಿದ ಕಾರ್ಮೋಡ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಚಂದ್ರಶೇಖರ್ 16 ವರ್ಷದಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 2002ರಲ್ಲಿ ಮದ್ರಾಸ್ ರೆಜಿಮೆಂಟ್ ಸೆಂಟರ್ ನಲ್ಲಿ ಸೇವೆಗೆ ಸೇರಿದ್ದ ಇವರು ಜನವರಿ 29 ರಂದು ರಜೆ ಮುಗಿಸಿ ಸೇನೆಗೆ ಮರಳಿದ್ದರು.

    ಮೃತ ಚಂದ್ರಶೇಖರ್ ಅವರು ತಂದೆ, ತಾಯಿ, ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದು, ಕೆಲವೇ ತಿಂಗಳಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಪೂರ್ಣಗೊಳಿಸಿ ಊರಿಗೆ ವಾಪಸ್ಸಾಗುತ್ತಿದ್ದರು. ಯೋಧನ ಗ್ರಾಮಕ್ಕೆ ಶಿಗ್ಗಾಂವ ತಹಸೀಲ್ದಾರ ಶಿವಾನಂದ ರಾಣೆ ಭೇಟಿ ನೀಡಿದ್ದಾರೆ.

    ಇಂದು ಸಂಜೆ ವೇಳೆಗೆ ಹುತಾತ್ಮ ಯೋಧನ ಪಾರ್ಥೀವ ಶರೀರ ಸ್ವ ಗ್ರಾಮಕ್ಕೆ ಬರುವ ನಿರೀಕ್ಷೆ ಇದ್ದು, ಅಂತ್ಯ ಸಂಸ್ಕಾರಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ ಎಂ.ವಿ ಕೂಡ ಹೇಳಿಕೆ ನೀಡಿದ್ದಾರೆ.

  • ಮೋದಿ ಕ್ರಮ ಕೈಗೊಳ್ಳದಿದ್ರೆ ನಾನೇ ಸೇಡು ತೀರಿಸ್ಕೊಳ್ತೀನಿ: ಕುಪ್ವಾರದಲ್ಲಿ ಹುತಾತ್ಮ ಯೋಧನ ತಾಯಿ

    ಮೋದಿ ಕ್ರಮ ಕೈಗೊಳ್ಳದಿದ್ರೆ ನಾನೇ ಸೇಡು ತೀರಿಸ್ಕೊಳ್ತೀನಿ: ಕುಪ್ವಾರದಲ್ಲಿ ಹುತಾತ್ಮ ಯೋಧನ ತಾಯಿ

    ನವದೆಹಲಿ: ಮೋದಿ ಕ್ರಮ ಕೂಗೊಳ್ಳಲು ವಿಫಲರಾದ್ರೆ ನಾನೇ ನನ್ನ ಮಗನ ಸಾವಿಗೆ ಸೇಡು ತೀರಿಸಿಕೊಳ್ತೀನಿ ಎಂದು ಕುಪ್ವಾರದಲ್ಲಿ ಹುತಾತ್ಮರಾದ ಯೋಧರೊಬ್ಬರ ತಾಯಿ ಹೇಳಿಕೆ ನೀಡಿದ್ದಾರೆ.

    ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರು ಮತ್ತು ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕ್ಯಾಪ್ಟನ್ ಸೇರಿ ಮೂವರು ಯೋಧರು ಗುರುವಾರದಂದು ಹುತಾತ್ಮರಾಗಿದ್ದರು. ಕ್ಯಾಪ್ಟನ್ ಆಯುಷ್ ಯಾದವ್, ಜೆಸಿಒ ಭೂಪ್ ಸಿಂಗ್ ಗುಜ್ಜರ್ ದುಸ್ಸಾ ಹಾಗೂ ನಾೈಕ್ ವೆಂಕಟ್ ರಮಣ್ ಹುತಾತ್ಮರಾದ ಸೈನಿಕರು. ಇಬ್ಬರು ಉಗ್ರರನ್ನು ಸೇನಾ ಪಡೆ ಹೊಡೆದುರುಳಿಸಿತ್ತು.

    25 ವರ್ಷದ ಮಗ ಆಯುಷ್ ಯಾದವ್ ಉಗ್ರರ ದಾಳಿಗೆ ಬಲಿಯಾಗಿರೋದ್ರಿಂದ ಮನನೊಂದ ತಾಯಿ, ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮೋದಿಯನ್ನ ಒತ್ತಾಯಿಸಿದ್ದಾರೆ. ಒಂದು ವೇಳೆ ಪ್ರಧಾನಿಯವರಿಗೆ ಕ್ರಮ ಕೈಗೊಳ್ಳಲು ಸಾಧ್ಯವಾಗದಿದ್ರೆ ನಾನೇ ಮಗನ ಸಾವಿನ ಸೇಡು ತೀರಿಸುತ್ತೇನೆ ಅಂತಾ ತಿಳಿಸಿದ್ದಾರೆ.

    ಆಯುಷ್ ಯಾದವ್ ತಂದೆ ಅರುಣ್ ಕಂಟ್ ಯಾದವ್ ಕೂಡ ಉಗ್ರರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದು, ಈ ರೀತಿ ನಮ್ಮ ಮಕ್ಕಳು ಹತ್ಯೆಯಾಗೋದನ್ನ ಎಲ್ಲಿಯತನಕ ನೋಡಿಕೊಂಡಿರಲು ಸಾಧ್ಯ? ಎಂದಿದ್ದಾರೆ. ಅಲ್ಲದೆ ಮಾನವ ಹಕ್ಕುಗಳ ಹೋರಾಟಗಾರರ ಬಗ್ಗೆ ಕಿಡಿಕಾರಿದ ಅವರು, ಇಂತಹ ಘಟನೆಗಳ ಬಗ್ಗೆ ಅವರು ತುಟಿ ಬಿಚ್ಚಲ್ಲ. ಸೈನಿಕರು ಪ್ರತೀಕಾರ ತೀರಿಸಿಕೊಂಡಾಗ ಮಾನವ ಹಕ್ಕುಗಳ ಹೋರಾಟಗಾರರು ದೂರುತ್ತಾರೆ. ಆದ್ರೆ ಈ ಘಟನೆ ಅವರಿಗೇನೂ ಅಲ್ಲ. ಜೀಪ್‍ಗೆ ವ್ಯಕ್ತಿಯನ್ನು ಕಟ್ಟಿದಾಗ ಅದರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾರೆ, ತನಿಖೆಗಳು ನಡೆಯುತ್ತದೆ, ಕ್ರಮ ಕೈಗೊಳ್ತಾರೆ ಅಂತ ಅಸಮಾಧಾನ ವ್ಯಕ್ತಪಡಿಸಿದ್ರು.

    ನನ್ನ ಅಣ್ಣನ ಮಗಳು ಮತ್ತು ಆಕೆಯ ಗಂಡ ಇಬ್ಬರೂ ಮೇಜರ್‍ಗಳಾಗಿದ್ದಾರೆ. ನನ್ನ ಮಗ ಬದುಕಿದ್ದರೆ ಮುಂದೊಂದು ದಿನ ಆತನೂ ಮೇಜರ್ ಆಗ್ತಿದ್ದ ಅಂತಾ ಯಾದವ್ ಹೇಳಿದ್ರು.

    ದೇಶದಲ್ಲಿ ಯಾವ ರೀತಿಯ ವಾತಾವರಣ ಇದೆ ಅಂತ ನೀವು ನೋಡಬಹುದು. ಬಲವಾದ ನೀತಿ ಇಲ್ಲದಿದ್ರೆ ಮತ್ತು ಸೂಕ್ತ ಕ್ರಮ ಕೈಗೊಳ್ಳದಿದ್ರೆ ಇದು ಮುಂದುವರೆಯುತ್ತದೆ. ಸೈನಿಕರು ಹುತಾತ್ಮರಾಗುತ್ತಾರೆ. ಇದಕ್ಕೆ ಏನಾದ್ರೂ ಮಾಡಲೇಬೇಕು. ಬೇರೆ ಯಾರ ಮಕ್ಕಳಿಗೂ ಈ ರೀತಿ ಆಗಬಾರದು ಅಂತ ಯಾದವ್ ಮರುಗಿದ್ರು.