Tag: martyred soldiers

  • ದೇಶದ ಮೊದಲ ಕಾರ್ಗಿಲ್ ಸ್ತೂಪದ ಬಳಿ ಹುತಾತ್ಮರಿಗೆ ಗೌರವ

    ದೇಶದ ಮೊದಲ ಕಾರ್ಗಿಲ್ ಸ್ತೂಪದ ಬಳಿ ಹುತಾತ್ಮರಿಗೆ ಗೌರವ

    ಧಾರವಾಡ: ಪಾಕಿಸ್ತಾನ ವಿರುದ್ಧ ನಡೆದ ಕಾರ್ಗಿಲ್ ಯುದ್ಧದ ಗೆಲುವಿನ 20ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆ ಕಾರ್ಗಿಲ್ ಸ್ತೂಪದ ಬಳಿ ವಿಜಯೋತ್ಸವ ಕಾರ್ಯಕ್ರಮ ನಡೆಲಾಯಿತು.

    ನಗರದಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ ಕಾರ್ಗಿಲ್ ಸ್ತೂಪದ ಬಳಿ ಹುತಾತ್ಮರಿಗೆ ಗೌರವ ಸಲ್ಲಿಸುವ ಮೂಲಕ ಕಾರ್ಗಿಲ್ ವಿಜಯೋತ್ಸವ ಆರಚಣೆ ಮಾಡಲಾಯಿತು. ಇದರಲ್ಲಿ ಎನ್‍ಸಿಸಿ ಮತ್ತು ಸ್ಕೌಟ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು ಭಾಗವಹಿಸಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.

    ಉತ್ತರ ಕರ್ನಾಟಕ ಸೈನಿಕ ಕಲ್ಯಾಣ ಮಂಡಳಿಯಿಂದ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಹೈಕೋರ್ಟ್ ರಿಜಿಸ್ಟ್ರರ್ ಜನರಲ್ ವಿ ಶ್ರೀಶಾನಂದ, ಮೇಜರ್ ಸಿದ್ಧಲಿಂಗಯ್ಯ ಹಿರೇಮಠ, ಕೆವಿಜಿ ಬ್ಯಾಂಕ್ ಮುಖ್ಯಸ್ಥರು ಸೇರಿ ಹಲವರು ಭಾಗವಹಿಸಿದ್ದರು.

  • ಪುಲ್ವಾಮಾ ದಾಳಿ ಆಕ್ಸಿಡೆಂಟ್ ಅನ್ನೋದಕ್ಕೆ ನಿಮ್ಮ ಬಳಿ ದಾಖಲೆ ಇದೆಯಾ? ಹುತಾತ್ಮ ಯೋಧನ ಪತ್ನಿ

    ಪುಲ್ವಾಮಾ ದಾಳಿ ಆಕ್ಸಿಡೆಂಟ್ ಅನ್ನೋದಕ್ಕೆ ನಿಮ್ಮ ಬಳಿ ದಾಖಲೆ ಇದೆಯಾ? ಹುತಾತ್ಮ ಯೋಧನ ಪತ್ನಿ

    ಮಂಡ್ಯ: ಪುಲ್ವಾಮಾ ಪ್ರಕರಣ ಒಂದು ಆಕ್ಸಿಡೆಂಟ್ ಎಂದ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿಕೆಗೆ ಹುತಾತ್ಮ ಯೋಧ ಗುರು ಪತ್ನಿ ಕಣ್ಣೀರು ಹಾಕುತ್ತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಹುತಾತ್ಮ ಯೋಧ ಗುರು ಅವರ ಪತ್ನಿ ಕಲಾವತಿ, ಸೈನಿಕರ ಪ್ರಾಣಕ್ಕೆ ಬೆಲೆಯೇ ಇಲ್ಲವೆ? ಚಳಿ, ಮಳೆ, ಬಿಸಿಲೆನ್ನದೆ, ತಿನ್ನಲು ಊಟ ಇಲ್ಲದೆ ದೇಶ ಕಾಯುತ್ತಾರೆ. ಅಂಥವರ ಪ್ರಾಣಕ್ಕೆ ಬೆಲೆ ಕಟ್ಟಬೇಡಿ. ಯಾವ ಉದ್ದೇಶದಿಂದ ಆಕ್ಸಿಡೆಂಟ್ ಎಂಬ ಪದ ಬಳಸಿದ್ದೀರಿ ಗೊತ್ತಿಲ್ಲ. ನಿಮ್ಮ ಬಳಿ ದಾಖಲೆ ಇದ್ದರೆ ತೋರಿಸಿ. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರನ್ನು ಕಳೆದುಕೊಂಡು ಅವರ ಕುಟುಂಬಗಳು ಎಷ್ಟು ಕಷ್ಟ ಪಡುತ್ತಿದೆ ನಿಮಗೆ ಗೊತ್ತೆ? ಆಪ್ತರನ್ನು ಕಳೆದುಕೊಂಡಿದ್ದರೆ ನಿಮಗೆ ನಮ್ಮ ನೋವು ಗೊತ್ತಾಗುತ್ತಿತ್ತು. ಈ ರೀತಿ ಹೇಳಲು ನಿಮಗೆ ಹೇಗೆ ಧೈರ್ಯ ಬಂತು? ಪುಲ್ವಾಮಾ ದಾಳಿ ಒಂದು ಆಕ್ಸಿಡೆಂಟ್ ಅಂತ ಹೇಳಿ ಯೋಧರ ಸಾವಿಗೆ ಅವಮಾನ ಮಾಡಬೇಡಿ ಎಂದು ದಿಗ್ವಿಜಯ್ ಸಿಂಗ್ ಹೇಳಿಕೆಗೆ ಆಕ್ರೋಶ ಹೊರಹಾಕಿದ್ದಾರೆ.

    ನಮ್ಮ ಪರಿಸ್ಥಿತಿ ಅವರಿಗೆ ಗೊತ್ತಿಲ್ಲ. ನಿಮ್ಮ ಮನೆಯಲ್ಲಿ, ನಿಮ್ಮ ಮನೆ ಮಕ್ಕಳು ಈ ರೀತಿ ಮೃತಪಟ್ಟಿದ್ದರೆ ಏನು ಮಾಡುತ್ತಿದ್ದಿರಿ? ಕಳೆದುಕೊಂಡಿರುವ ನೋವು ನಮಗೆ ಗೊತ್ತು. ದೇಶಕ್ಕಾಗಿ ಪ್ರಾಣ ಕೊಟ್ಟಿರುವುದಕ್ಕೆ ಬೆಲೆಯೇ ಇಲ್ವಾ? ದಯವಿಟ್ಟು ಅಪಪ್ರಚಾರ ಮಾಡಬೇಡಿ. ಸತ್ಯ ತಿಳಿದು ಮಾತನಾಡಿ. ದಯಮಾಡಿ ಆಕ್ಸಿಡೆಂಟ್ ಎಂಬ ಪದ ಬಳಸಬೇಡಿ ಎಂದು ಕಣ್ಣೀರು ಹಾಕುತ್ತ ಕಲಾವತಿ ಅವರು ವಿನಂತಿ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹುತಾತ್ಮ ಯೋಧರ ಕುಟುಂಬಗಳಿಗೆ 110 ಕೋಟಿ ನೆರವು ನೀಡಲು ಮುಂದಾದ ಅಂಧ ವಿಜ್ಞಾನಿ

    ಹುತಾತ್ಮ ಯೋಧರ ಕುಟುಂಬಗಳಿಗೆ 110 ಕೋಟಿ ನೆರವು ನೀಡಲು ಮುಂದಾದ ಅಂಧ ವಿಜ್ಞಾನಿ

    ಮುಂಬೈ: ಪುಲ್ವಾಮಾ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರ ಕುಟುಂಬಕ್ಕೆ 110 ಕೋಟಿ ರೂ. ನೀಡಲು ಅಂಧ ವಿಜ್ಞಾನಿಯೊಬ್ಬರು ಮುಂದಾಗಿದ್ದಾರೆ.

    ಮೂಲತಃ ರಾಜಸ್ಥಾನದ ಕೋಟಾ ಪ್ರದೇಶದವರಾದ ಮುರ್ತಾಜಾ.ಎ.ಹಮೀದ್ ಅವರು ಸಂಶೋಧಕ ಹಾಗೂ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹುಟ್ಟಿದಾಗಿನಿಂದಲೂ ಇವರಿಗೆ ಕಣ್ಣು ಕಾಣಿಸುತ್ತಿಲ್ಲ. ಆದರೇ ಇವರು ಅಂಗವೈಫಲ್ಯವನ್ನು ಮರೆತು ಸಾಧನೆ ಮಾಡಿದ್ದಾರೆ.

    ಸದ್ಯ ಮುಂಬೈನಲ್ಲಿ ನೆಲೆಸಿರುವ ಹಮೀದ್ ಅವರು 110 ಕೋಟಿ ರೂ. ಹಣವನ್ನು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ನೆರವು ನೀಡಲು ಮುಂದಾಗಿದ್ದಾರೆ. ಈ ಬಗ್ಗೆ ವಿಜ್ಞಾನಿ ಪ್ರಧಾನಿ ಕಚೇರಿಗೆ ಇ-ಮೇಲ್ ಸಂದೇಶ ಕಳುಹಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಅವಕಾಶ ಕೇಳಿದ್ದಾರೆ.

    ಭಾನುವಾರ ಬೆಳಗ್ಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಉಪಕಾರ್ಯದರ್ಶಿ ಅಗ್ನಿ ಕುಮಾರ್ ದಾಸ್ ಅವರು ಹಮೀದ್ ಅವರಿಗೆ ಕರೆ ಮಾಡಿ ತಮ್ಮ ವಿವರವನ್ನು ಕಳುಹಿಸುವಂತೆ ತಿಳಿಸಿದ್ದಾರೆ.

    ದೇಶಕ್ಕಾಗಿ ತಮ್ಮ ಜೀವನವನ್ನೆ ಮುಡಿಪಾಗಿಡುವ ಯೋಧರ ಕುಟಂಬಗಳ ಬೆಂಬಲಕ್ಕೆ ನಿಲ್ಲಬೇಕೆಂಬ ಆಸೆ ಇದೆ. ದೇಶದ ಪ್ರತಿಯೊಬ್ಬ ಪ್ರಜೆಯೂ ಯೋಧರ ನೆರವಿಗೆ ನಿಲ್ಲಬೇಕು. ದೇಶಕ್ಕಾಗಿ ತಮ್ಮ ಕುಟುಂಬವನ್ನು ಬಿಟ್ಟು ಗಡಿಯಲ್ಲಿ ನಿಂತು ನಮ್ಮೆಲ್ಲರ ಕುಟುಂಬವನ್ನು ಯೋಧರು ಕಾಯುತ್ತಾರೆ ಎಂದು ಹಮೀದ್ ತಿಳಿಸಿದ್ದಾರೆ.

    ಹಮೀದ್ ಅವರು `ಇಂಧನ ಉರಿತ ವಿಕಿರಣ ತಂತ್ರಜ್ಞಾನ’ (Fuel Burn Radiation Technology)ವನ್ನು ಸಂಶೋಧಿಸಿದ್ದಾರೆ. ಜಿಪಿಎಸ್ ಹಾಗೂ ಕ್ಯಾಮೆರಾ ಸೌಲಭ್ಯವಿಲ್ಲದ ವಾಹನಗಳನ್ನು ಈ ತಂತ್ರಜ್ಞಾನದ ಮೂಲಕ ಪತ್ತೆ ಮಾಡಬಹುದು. ಹಮೀದ್ ಈ ತಂತ್ರಜ್ಞಾನವನ್ನು 2016ರಲ್ಲಿಯೇ ಕೇಂದ್ರ ಸರ್ಕಾರಕ್ಕೆ ಉಚಿತವಾಗಿ ನೀಡಿದ್ದರು. ಎರಡು ವರ್ಷಗಳ ಬಳಿಕ 2018ರಲ್ಲಿ ಈ ತಂತ್ರಜ್ಞಾನವನ್ನು ಬಳಸಲು ಸರ್ಕಾರ ಅನುಮೋದನೆ ನೀಡಿತ್ತು.

    ಫೆ.14ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಪಾಕ್ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಸಿಆರ್‍ಪಿಎಫ್‍ನ 40 ಯೋಧರು ಹುತಾತ್ಮರಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜಾಮೀನು ಬೇಕಾದ್ರೆ ಹುತಾತ್ಮ ಯೋಧರ ಕುಟುಂಬಕ್ಕೆ 1 ಲಕ್ಷ ನೀಡಿ: ತೆಲಂಗಾಣ ಹೈಕೋರ್ಟ್

    ಜಾಮೀನು ಬೇಕಾದ್ರೆ ಹುತಾತ್ಮ ಯೋಧರ ಕುಟುಂಬಕ್ಕೆ 1 ಲಕ್ಷ ನೀಡಿ: ತೆಲಂಗಾಣ ಹೈಕೋರ್ಟ್

    ಹೈದರಾಬಾದ್: ಜಾಮೀನು ಬೇಕಾದರೆ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ 1 ಲಕ್ಷ ರೂ. ನೆರವನ್ನು ನೀಡಿ ಎಂದು ತೆಲಂಗಾಣ ಹೈಕೋರ್ಟ್ ಆರೋಪಿಗಳಿಗೆ ಸೂಚಿಸಿದೆ.

    14 ಸಾವಿರ ಹೂಡಿಕೆದಾರರಿಗೆ ಮೋಸ ಮಾಡಿರುವ ಆರೋಪದ ಮೇಲೆ ಸನ್ ಪರಿವಾರ್ ಗ್ರೂಪ್‍ನ ಆಯೋಜಕರ ಮೇಲೆ ಪ್ರಕರಣ ದಾಖಲಾಗಿತ್ತು. ಹೂಡಿಕೆದಾರರಿಗೆ ಸುಮಾರು 150 ಕೋಟಿ ರೂ. ನಷ್ಟು ಹಣವನ್ನು ಈ ಕಂಪನಿ ವಂಚಿಸಿತ್ತು. ಆದರಿಂದ ಕಳೆದ ವರ್ಷ ಈ ಕಂಪನಿ ಮೇಲೆ ವಂಚನೆ ಕೇಸ್ ದಾಖಲಾಗಿತ್ತು. ಅಲ್ಲದೆ, ವಂಚಿಸಿದ್ದ ಆರೋಪಿಗಳನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ತನಿಖಾಧಿಕಾರಿ ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕೆಂಬ ಷರತ್ತಿನ ಮೇರೆಗೆ ಅವರಿಗೆ ಜಾಮೀನು ಮಂಜೂರು ಮಾಡಲಾಗಿತ್ತು.

    ಆರೋಪಿಗಳು ತನಿಖೆಗೆ ಸರಿಯಾಗಿ ಹಾಜರಾಗದ ಕಾರಣ ಅವರ ಜಾಮೀನು ರದ್ದುಗೊಳಿಸಲಾಗಿತ್ತು. ರದ್ದಾದ ಹಿನ್ನೆಲೆಯಲ್ಲಿ ಆರೋಪಿಗಳು ಮತ್ತೆ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು.

    ಈ ಅರ್ಜಿ ವಿಚಾರಣೆ ವೇಳೆ ನ್ಯಾ.ಬಿ. ಶಿವಶಂಕರ್ ಅವರು ಎಲ್ಲಾ ಆರೋಪಿಗಳು ತಮಗೆ ಜಾಮೀನು ಬೇಕಿದ್ದರೆ ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ 1 ಲಕ್ಷ ರೂ. ಸಹಾಯಧನ ನೀಡಿದರೆ ಮಾತ್ರ ಮಂಜೂರು ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ, ತನಿಖಾಧಿಕಾರಿಗಳು ವಿಚಾರಣೆಗೆ ಕರೆದಾಗ ಅವರಿಗೆ ಸಹಕರಿಸಬೇಕೆಂದು ಸೂಚಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv