Tag: martyr’s warriors

  • ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ- ಚೀನಾ ವಸ್ತುಗಳನ್ನ ಸುಟ್ಟ ಹಿಂದೂಪರ ಸಂಘಟನೆ

    ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ- ಚೀನಾ ವಸ್ತುಗಳನ್ನ ಸುಟ್ಟ ಹಿಂದೂಪರ ಸಂಘಟನೆ

    ಮಡಿಕೇರಿ: ಇಂಡೋ-ಚೀನಾ ಗಡಿಯಲ್ಲಿ ಹುತಾತ್ಮರಾದ ಯೋಧರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂಪರ ಸಂಘಟನೆ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

    ನಗರದ ಜನರಲ್ ತಿಮ್ಮಯ್ಯ ಸರ್ಕಲ್‍ನಲ್ಲಿ ದೇಶ ಅಭಿಮಾನಿಗಳು ಪ್ರತಿಭಟನೆ ಮಾಡಿದರು. ವಿನಃ ಕಾರಣ ಗಡಿಯಲ್ಲಿ ತಗಾದೆ ತೆಗೆದು ಭಾರತೀಯ ಯೋಧರ ಮೇಲೆ ಗುಂಡಿನ ದಾಳಿ ನಡೆಸುತ್ತಿದೆ ಎಂದು ಚೀನಾ ವಸ್ತುಗಳನ್ನು ಸುಟ್ಟು ಕುತಂತ್ರಿ ಚೀನಾ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಜನರಲ್ ತಿಮ್ಮಯ್ಯ ವೃತ್ತದಿಂದ ಯುದ್ಧ ಸ್ಮಾರಕದ ಬಳಿ ಮೆರವಣಿಗೆಯಲ್ಲಿ ಹೊರಟ ಸಂಘಟನೆಯ ಪ್ರಮುಖರು ಸ್ಮಾರಕಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು.

    ಚೀನಾ, ನೇಪಾಳ ಹಾಗೂ ಪಾಕಿಸ್ತಾನ ಮೊದಲಿನಿಂದಲೂ ಗಡಿ ವಿಚಾರಕ್ಕೆ ತಕರಾರು ತೆಗೆಯುತ್ತಿವೆ. ಪರಿಸ್ಥಿತಿಯ ಲಾಭ ಪಡೆದುಕೊಂಡು ದೇಶದ ಮೇಲೆ ಯುದ್ಧ ಸಾರಲು ಅವಣಿಸುತ್ತಿವೆ. ದೇಶದ ಭದ್ರತೆಯ ವಿಷಯಕ್ಕೆ ಬಂದಾಗ ಭಾರತೀಯರು ಸಂಘಟಿತ ಹೋರಾಟ ಮಾಡುತ್ತೇವೆ. ಭಾರತದ ಸಾರ್ವಭೌಮತೆ ಹಾಗೂ ಸೈನಿಕ ಸಾಮರ್ಥ್ಯ ಹಿಂದಿನಂತೆ ಇಲ್ಲ. 1964ರ ಭಾರತ ಬಹಳ ಬದಲಾಗಿದೆ. ದೇಶದ ಭದ್ರತೆಗೆ ಧಕ್ಕೆ ಎದುರಾದರೆ ಎಂದಿಗೂ ಸಹಿಸುವುದಿಲ್ಲ ಎಂದು ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು.

  • ಭಿಕ್ಷೆ ಬೇಡಿ ಕೂಡಿಟ್ಟಿದ್ದ 6.61 ಲಕ್ಷ ಹಣವನ್ನು ಹುತಾತ್ಮ ಯೋಧರ ಕುಟುಂಬಕ್ಕೆ ನೀಡಿದ್ರು!

    ಭಿಕ್ಷೆ ಬೇಡಿ ಕೂಡಿಟ್ಟಿದ್ದ 6.61 ಲಕ್ಷ ಹಣವನ್ನು ಹುತಾತ್ಮ ಯೋಧರ ಕುಟುಂಬಕ್ಕೆ ನೀಡಿದ್ರು!

    ಜೈಪುರ: ಉಗ್ರರ ದಾಳಿಗೆ ಹುತಾತ್ಮರಾದ ಯೋಧರ ಕುಟುಂಬದವರಿಗೆ ಸರ್ಕಾರ ಸೇರಿದಂತೆ ಅನೇಕರು ಆರ್ಥಿಕ ಸಹಾಯ ಮಾಡುತ್ತಿದ್ದಾರೆ. ಆದರೆ ರಾಜಸ್ಥಾನದ ಅಜ್ಮೇರ್‍ದಲ್ಲಿ ಬದುಕಿದ್ದಾಗ ಭಿಕ್ಷೆ ಬೇಡಿ ಸಂಪಾದನೆ ಮಾಡಿದ್ದ ಅಜ್ಜಿಯೊಬ್ಬರ ಹಣವೂ ಈಗ ಯೋಧರ ಕುಟುಂಬಕ್ಕೆ ಸಹಾಯವಾಗಿದೆ.

    ಭಿಕ್ಷುಕಿ ನಂದಿನಿ ಶರ್ಮಾ ಸಂಪಾದನೆ ಮಾಡಿದ್ದ ಹಣವನ್ನು ಈಗ ಹುತಾತ್ಮರ ಕುಟುಂಬಕ್ಕೆ ನೀಡಲಾಗಿದೆ. ನಂದಿನಿ ಶರ್ಮಾ 2018 ಆಗಸ್ಟ್ ರಲ್ಲಿ ಮೃತಪಟ್ಟಿದ್ದು, ಮೃತಪಡುವುದಕ್ಕೂ ಮೊದಲು ನನ್ನ ಬಳಿ ಇರುವ ಹಣವನ್ನು ದೇಶ ಮತ್ತು ಸಮಾಜಕ್ಕಾಗಿ ಬಳಸಬೇಕೆಂಬುದು ಹೇಳಿಕೊಂಡಿದ್ದರಂತೆ. ಹೀಗಾಗಿ ಭಿಕ್ಷೆ ಬೇಡಿ ಸಂಪಾದನೆ ಮಾಡಿದ್ದ 6.61 ಲಕ್ಷ ಹಣವನ್ನು ಪುಲ್ವಾಮಾ ದಾಳಿಯಲ್ಲಿ ವೀರಮರಣ ಹೊಂದಿದ್ದ ಕುಟುಂಬದವರಿಗೆ ನೀಡಲಾಗಿದೆ.

    ಮೃತ ನಂದಿನಿ ಶರ್ಮಾ ಅಜ್ಮೇರ್  ಬಜರಂಗಢದಲ್ಲಿರುವ ಅಂಬೆ ಮಾತೆ ದೇವಸ್ಥಾನದ ಮುಂದೆ ಭಿಕ್ಷೆ ಬೇಡುತ್ತಿದ್ದರು. ಅವರು ಪ್ರತಿದಿನ ಗಳಿಸುತ್ತಿದ್ದ ಹಣವನ್ನು ಅಂದೇ ಬ್ಯಾಂಕಿಗೆ ಹೋಗಿ ಜಮಾ ಮಾಡುತ್ತಿದ್ದರು. ಅಷ್ಟೇ ಅಲ್ಲದೇ ತಾವು ಸಂಪಾದಿಸಿ ಹಣವನ್ನು ಸುರಕ್ಷಿತವಾಗಿ ಬಳಸಬೇಕೆಂದು ಇಬ್ಬರು ಟ್ರಸ್ಟಿಗಳ ಬಳಿ ಸಹ ಕೇಳಿಕೊಂಡಿದ್ದರು. ಅಷ್ಟೇ ಅಲ್ಲದೇ ಮೃತಪಟ್ಟ ನಂತರ ಈ ಹಣ ದೇಶಕ್ಕಾಗಿ ವಿನಿಯೋಗಿಸಬೇಕು ಎಂದು ವಿಲ್ ಬರೆದಿಟ್ಟಿದ್ದರು.

    ಶರ್ಮಾ 2018 ಮೃತಪಟ್ಟಿದ್ದಾರೆ. ಆದರೆ ಟ್ರಸ್ಟಿಗಳು ಸೂಕ್ತ ಸಮಯ ಬಂದಾಗ ಹಣವನ್ನು ದಾನ ಮಾಡಲು ಕಾಯುತ್ತಿದ್ದರು. ಇತ್ತೀಚೆಗೆ ಪುಲ್ವಾಮಾ ಉಗ್ರ ದಾಳಿಯಲ್ಲಿ 44 ಯೋಧರು ಮೃತಪಟ್ಟಿದ್ದರು. ಇದೇ ಸೂಕ್ತ ಸಮಯ ಎಂದು ಟ್ರಸ್ಟಿಗಳು ನಿರ್ಧಾರ ಮಾಡಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಹುತಾತ್ಮ ಸೈನಿಕರ ಕುಟುಂಬಕ್ಕೆ ನೀಡಲಾಗುವ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ. ಟ್ರಸ್ಟ್ ಗಳಿಂದ ಹಣವನ್ನು ಪಡೆದು ಅವರಿಗೆ ರಶೀದಿ ನೀಡಲಾಗಿದೆ ಎಂದು ಅಜ್ಮೇರ್ ಜಿಲ್ಲಾಧಿಕಾರಿ ವಿಶ್ವ ಮೋಹನ್ ಶರ್ಮಾ ತಿಳಿಸಿದ್ದಾರೆ.

    ಮೃತ ಅಜ್ಜಿ ಸಂಪಾದನೆ ಮಾಡಿದ್ದ ಹಣವನ್ನು ಹುತಾತ್ಮರ ಕುಟುಂಬಕ್ಕೆ ನೀಡಲಾದ ವಿಷಯ ತಿಳಿದು ದೇವಾಲಯ ಭಕ್ತರು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಅವರಿಗೆ ಭಕ್ತರು ಯಾವಾಗಲೂ ಗೌರವ ಕೊಡುತ್ತಿದ್ದರು. ಶರ್ಮಾ ಅವರಿಗೆ ಹಣದ ಜತೆ ಊಟ, ಬಟ್ಟೆಯನ್ನು ಸಹ ದಾನ ಮಾಡುತ್ತಿದ್ದರು. ಅವರು ಪ್ರತಿದಿನ ಹಣವನ್ನು ಬ್ಯಾಂಕ್‍ನಲ್ಲಿ ಜಮೆ ಮಾಡುತ್ತಿದ್ದ ವಿಚಾರ ಬಗ್ಗೆ ನಮಗೆಲ್ಲ ತಿಳಿದಿತ್ತು ಎಂದು ದೇವಸ್ಥಾನದ ಪುರೋಹಿತರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv