Tag: matchbox

  • ಮ್ಯಾಚ್‍ಬಾಕ್ಸ್ ನಲ್ಲಿ ಮಡಚಿಡುವ ಸೀರೆ ನೇಯ್ದ ನೇಕಾರ

    ಮ್ಯಾಚ್‍ಬಾಕ್ಸ್ ನಲ್ಲಿ ಮಡಚಿಡುವ ಸೀರೆ ನೇಯ್ದ ನೇಕಾರ

    ಹೈದರಾಬಾದ್: ಬೆಂಕಿ ಪೊಟ್ಟಣದಲ್ಲಿ ಮಡಚಿಡುವಂತಹ ಸೀರೆಯನ್ನು ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಕೈಮಗ್ಗ ನೇಕಾರರೊಬ್ಬರು ನೇಯ್ದಿದ್ದಾರೆ.

    ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ನಿವಾಸಿಗಳಾದ ನಲ್ಲ ವಿಜಯ್ ಅವರು ಯುವ ಕೈಮಗ್ಗ ನೇಕಾರರಾಗಿದ್ದಾರೆ. ಇವರು ಬೆಂಕಿ ಪೊಟ್ಟಣದಲ್ಲಿ ಮಡಚಿ ಇಡಬಹುದಾದ ಸೀರೆಯನ್ನು ನೇಯ್ದಿದ್ದಾರೆ. ಈ ಸೀರೆಯನ್ನು ಅವರು ತೆಲಂಗಾಣ ಸಚಿವ ಕೆಟಿ ರಾಮರಾವ್, ಸಬಿತಾ ಇಂದ್ರ ರೆಡ್ಡಿ, ವಿ ಶ್ರೀನಿವಾಸ್ ಗೌಡ್ ಮತ್ತು ಎರ್ರಾಬೆಲ್ಲಿ ದಯಾಕರ್ ರಾವ್ ಅವರ ಮುಂದೆ ಪ್ರದರ್ಶಿಸಿದ್ದಾರೆ.

    ಯುವ ನೇಕಾರ ವಿಜಯ್ ಮಾತನಾಡಿ, ಮ್ಯಾಚ್‍ಬಾಕ್ಸ್‍ನಲ್ಲಿ ಹೊಂದಿಕೊಳ್ಳುವ ಸೀರೆಯನ್ನು ಕೈಯಿಂದ ನೇಯ್ದು ತಯಾರಿಸಲಾಗಿದೆ. ಇದನ್ನು ತಯಾರಿಸಲು ಆರು ದಿನಗಳು ಬೇಕಾಗುತ್ತದೆ. ಸೀರೆಯನ್ನು ತಯಾರಿಸಲು ಯಂತ್ರವನ್ನು ಬಳಸಿದರೆ, ಕೇವಲ ಮೂರು ದಿನಗಳು ಸಾಕಾಗುತ್ತದೆ. ಕೈಯಿಂದ ನೇಯ್ದ ಸೀರೆಗೆ 12,000 ರೂ., ಯಂತ್ರ ಬಳಸಿ ತಯಾರಿಸಿದ ಸೀರೆಗೆ 8,000 ರೂ. ದರವಿದೆ ಎಂದು ತಿಳಿಸಿದರು.

    ಇತ್ತೀಚಿನ ದಿನಗಳಲ್ಲಿ ಸಿರ್ಸಿಲ್ಲಾದ ಕೈಮಗ್ಗ ಕ್ಷೇತ್ರದಲ್ಲಿ ಹಲವು ಬದಲಾವಣೆಗಳು ಆಗಿದೆ. ನೇಕಾರರು ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಉಪಕರಣವನ್ನು ಅಳವಡಿಸಿಕೊಂಡಿದ್ದಾರೆ. ಇದಕ್ಕೆ ಬೆಂಬಲ ನೀಡಿದ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಪಾದಯಾತ್ರೆಗೆ ಹೈಕೋರ್ಟ್ ಕೆಂಡಾಮಂಡಲ – ಕೈ ಮುಗಿದು ಮುಖದ ಮೇಲೆ ಕೈಯಿಟ್ಟ ಡಿಕೆಶಿ

    ವಿಜಯ್ ನೇಯ್ದ ಸೀರೆಯನ್ನು ಈ ಹಿಂದೆ 2017ರಲ್ಲಿ ವಿಶ್ವ ತೆಲುಗು ಸಮ್ಮೇಳನದಲ್ಲಿ ಪ್ರದರ್ಶಿಸಲಾಗಿತ್ತು. ಅವರು 2015ರಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹಾಗೂ ಅವರ ಪತ್ನಿ ಮಿಚೆಲ್ ಒಬಾಮಾ ಭಾರತಕ್ಕೆ ಬಂದಾಗ ಅವರಿಗೆ ಸೂಪರ್ ಫೈನ್ ರೇಷ್ಮೆಯಿಂದ ಮಾಡಿದ ಸೀರೆಯನ್ನು ಉಡುಗೊರೆಯಾಗಿ ನೀಡಿದ್ದರು. ಪ್ರತಿಭಾವಂತ ಯುವ ನೇಕಾರನ ಕಾರ್ಯವನ್ನು ಶ್ಲಾಘಿಸಿದ ಸಚಿವರು, ಬೆಂಕಿ ಪೊಟ್ಟಣಕ್ಕೆ ಹೊಂದಿಕೊಳ್ಳುವ ಸೀರೆಯ ಬಗ್ಗೆ ಕೇಳಿದ್ದೆವು. ಆದರೆ ಇದೇ ಮೊದಲ ಬಾರಿಗೆ ನೋಡುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಯೋಗಿ, ಬಿಜೆಪಿಗೆ ಬಿಗ್‌ ಶಾಕ್‌ – ಸಚಿವ ಸೇರಿ 4 ಶಾಸಕರು ರಾಜೀನಾಮೆ, ಇಂದು ಎಸ್‌ಪಿ ಸೇರ್ಪಡೆ

  • 2ರೂ. ಬೆಂಕಿ ಪೊಟ್ಟಣದಲ್ಲಿ 36 ಕಡ್ಡಿ ಬದ್ಲು 50 ಕಡ್ಡಿ

    2ರೂ. ಬೆಂಕಿ ಪೊಟ್ಟಣದಲ್ಲಿ 36 ಕಡ್ಡಿ ಬದ್ಲು 50 ಕಡ್ಡಿ

    ಚೆನ್ನೈ: 14 ವರ್ಷಗಳ ನಂತರ ಬೆಂಕಿ ಪೊಟ್ಟಣದ ಬೆಲೆ ಏರಿಕೆ ಆಗಿರುವ ಬೆನ್ನಲ್ಲೆ ಇದೀಗ ಪೊಟ್ಟಣದಲ್ಲಿ(matchbox) ಇರುವ ಕಡ್ಡಿಗಳ ಸಂಖ್ಯೆಯಲ್ಲೂ ಏರಿಕೆ ಮಾಡಲಾಗಿದೆ. ಡಿಸೆಂಬರ್ 1ರಿಂದ ಬೆಂಕಿ ಪೊಟ್ಟಣದ ಬೆಲೆ 1 ರೂಪಾಯಿನಿಂದ 2ರೂ.ಗೆ ಏರಿಕೆಯಾಗುತ್ತಿದ್ದು, ಬೆಲೆ ಹೆಚ್ಚಾದರೂ ಪೊಟ್ಟಣದಲ್ಲಿ ಬೆಂಕಿ ಕಡ್ಡಿಗಳು ಹೆಚ್ಚಿಗೆ ಸಿಗುತ್ತಿದೆ ಎಂದು ಕಂಪನಿಗಳು ಸ್ಪಷ್ಟಪಡಿಸಿವೆ.

    14 ವರ್ಷದ ನಂತರ ಬೆಲೆ ಹೆಚ್ಚಿಸುತ್ತಿದ್ದು, 2ರೂಪಾಯಿಯ ಪೊಟ್ಟಣದಲ್ಲಿ ಇನ್ಮುಂದೆ36 ಕಡ್ಡಿಗಳ ಬದಲು 50 ಕಡ್ಡಿಗಳು ಇರಲಿದೆ ಎಂದು ತಿಳಿಸಿವೆ. ಬೆಂಕಿ ಪೊಟ್ಟಣ ತಯಾರಿಕೆಗೆ ಬಳಸುವ 14 ಕಚ್ಚಾವಸ್ತುಗಳು ಬೆಲೆ ಏರಿಕೆ ಸಮೇತ ವಿವರ ನೀಡಿರುವ ಕಂನಿಗಳು ತಮ್ಮ ನಿರ್ಧಾರ ಸಮರ್ಥಿಸಿಕೊಂಡಿವೆ. ಇದನ್ನೂ ಓದಿ: ಲೆಹೆಂಗಾದಲ್ಲಿ ಡ್ರಗ್ಸ್ ಇಟ್ಟು ಸಾಗಾಟ – ಹೈದರಾಬಾದ್ ಟು ಆಸ್ಟ್ರೇಲಿಯಾಗೆ ಸಪ್ಲೈ

    ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಗಗನಕ್ಕೇರಿದ ಬೆನ್ನಲ್ಲೇ, ದಿನನಿತ್ಯ ಬಳಕೆಯ ಸಾಮಗ್ರಿಗಳ ಬೆಲೆಯಲ್ಲೂ ಹೆಚ್ಚಳವಾಗುತ್ತಲೇ ಇದೆ. ಆದರೆ ಕಳೆದ 14 ವರ್ಷಗಳಿಂದ ಬೆಂಕಿ ಪೊಟ್ಟಣದ ಬೆಲೆ ಮಾತ್ರ ಕಿಂಚಿತ್ತೂ ಏರಿಕೆಯಾಗದೆ ಸ್ಥಿರವಾಗಿತ್ತು. ಈ ಹಿಂದೆ 50 ಪೈಸೆ ಇದ್ದ ಬೆಂಕಿ ಪೊಟ್ಟಣದ ಬೆಲೆಯನ್ನು 2007ರಲ್ಲಿ ಪರಿಷ್ಕರಿಸಲಾಗಿತ್ತು. ಆಗ ಬೆಂಕಿ ಪೊಟ್ಟಣದ ಬೆಲೆಯನ್ನು 50 ಪೈಸೆಯಿಂದ 1 ರೂಪಾಯಿಗೆ ಹೆಚ್ಚಿಸಲಾಗಿತ್ತು. ಗುರುವಾರ ಶಿವಕಾಶಿಯಲ್ಲಿ ಮುಕ್ತಾಯಗೊಂಡ ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚೆಸ್ (All India Chamber Of Matches) ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಕಚ್ಚಾ ಸಾಮಗ್ರಿಗಳಲ್ಲಿ ಆಗುತ್ತಿರುವ ಬೆಲೆ ಹೆಚ್ಚಳವೇ ಈ ಬೆಲೆ ಏರಿಕೆಗೆ ಕಾರಣ ಎಂದು ಉದ್ಯಮ ಪ್ರತಿನಿಧಿಗಳು ಹೇಳಿದ್ದಾರೆ. ಇದನ್ನೂ ಓದಿ: ರಾಮನ ದ್ರೋಹಿಗಳಿಂದ ಅಂತರ ಕಾಯ್ದುಕೊಳ್ಳಿ: ಯೋಗಿ ಆದಿತ್ಯನಾಥ್

    ಬೆಲೆ ಏರಿಕೆಗೆ ಕಾರಣವೇನು?: ಬೆಂಕಿಕಡ್ಡಿಗಳನ್ನು ತಯಾರಿಸಲು 14 ಬಗೆಯ ಕಚ್ಚಾ ಸಾಮಗ್ರಿಗಳು ಬೇಕಾಗುತ್ತವೆ. ಒಂದು ಕೆಜಿ ಕೆಂಪು ರಂಜಕ ರೂ. 425 ರಿಂದ ರೂ. 810 ಕ್ಕೆ, ಮೇಣ ರೂ. 58 ರಿಂದ ರೂ. 80 ಕ್ಕೆ, ಹೊರ ಬಾಕ್ಸ್ ಬೋರ್ಡ್ ರೂ. 36 ರಿಂದ ರೂ. 55 ಕ್ಕೆ ಮತ್ತು ಒಳ ಪೆಟ್ಟಿಗೆ ಬೋರ್ಡ್ ರೂ. 32 ರಿಂದ ರೂ. 58 ಕ್ಕೆ ಏರಿಕೆಯಾಗಿದೆ. ಅಕ್ಟೋಬರ್ 10 ರಿಂದ ಪೇಪರ್, ಸ್ಪ್ಲಿಂಟ್ಸ್, ಪೊಟ್ಯಾಸಿಯಮ್ ಕ್ಲೋರೇಟ್ ಮತ್ತು ಸಲ್ಫರ್ ಬೆಲೆಯೂ ಹೆಚ್ಚಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ಉದ್ಯಮದ ಮೇಲೆ ಹೆಚ್ಚುವರಿ ಹೊರೆ ಬೀಳುತ್ತಿದೆ. ಹೀಗಾಗಿ ಬೆಂಕಿ ಪೊಟ್ಟಣ ತಯಾರಕರು ಬೆಲೆಯೇರಿಕೆಯ ನಿರ್ಧಾರವನ್ನು ಅವಿರೋಧವಾಗಿ ಕೈಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ಸದ್ಯ 600 ಬೆಂಕಿ ಪೊಟ್ಟಣಗಳ ಒಂದು ಬಂಡಲ್ 270ರಿಂದ 300 ರೂಪಾಯಿಗೆ ಮಾರಾಟವಾಗುತ್ತಿದೆ. ಅದನ್ನು 430ರಿಂದ 480 ರೂಪಾಯಿಗೆ ಏರಿಸಲು ನಿರ್ಧರಿಸಲಾಗಿದೆ.

  • 14 ವರ್ಷದ ಬಳಿಕ ಬೆಂಕಿಪೊಟ್ಟಣದ ಬೆಲೆ ಏರಿಕೆ

    14 ವರ್ಷದ ಬಳಿಕ ಬೆಂಕಿಪೊಟ್ಟಣದ ಬೆಲೆ ಏರಿಕೆ

    ಚೆನ್ನೈ: 14 ವರ್ಷಗಳ ನಂತರ ಬೆಂಕಿ ಪೊಟ್ಟಣದ (matchbox) ಬೆಲೆ ಏರಿಕೆಯಾಗಿದೆ. ಡಿಸೆಂಬರ್ 1ರಿಂದ ಬೆಂಕಿಪೊಟ್ಟಣದ ಬೆಲೆ 2 ರೂಪಾಯಿ ಆಗಲಿದೆ. ತಮಿಳುನಾಡಿನ ಶಿವಕಾಶಿಯಲ್ಲಿ ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚಸ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

    ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಗಗನಕ್ಕೇರಿದ ಬೆನ್ನಲ್ಲೇ, ದಿನನಿತ್ಯ ಬಳಕೆಯ ಸಾಮಗ್ರಿಗಳ ಬೆಲೆಯಲ್ಲೂ ಹೆಚ್ಚಳವಾಗುತ್ತಲೇ ಇದೆ. ಆದರೆ ಕಳೆದ 14 ವರ್ಷಗಳಿಂದ ಬೆಂಕಿಪೊಟ್ಟಣದ ಬೆಲೆ ಮಾತ್ರ ಕಿಂಚಿತ್ತೂ ಏರಿಕೆಯಾಗದೆ ಸ್ಥಿರವಾಗಿತ್ತು.

    ಈ ಹಿಂದೆ 50 ಪೈಸೆ ಇದ್ದ ಬೆಂಕಿ ಪೊಟ್ಟಣದ ಬೆಲೆಯನ್ನು 2007ರಲ್ಲಿ ಪರಿಷ್ಕರಿಸಲಾಗಿತ್ತು. ಆಗ ಬೆಂಕಿ ಪೊಟ್ಟಣದ ಬೆಲೆಯನ್ನು 50 ಪೈಸೆಯಿಂದ 1 ರೂಪಾಯಿಗೆ ಹೆಚ್ಚಿಸಲಾಗಿತ್ತು. ಗುರುವಾರ ಶಿವಕಾಶಿಯಲ್ಲಿ ಮುಕ್ತಾಯಗೊಂಡ ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚೆಸ್ (All India Chamber Of Matches) ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಕಚ್ಚಾ ಸಾಮಗ್ರಿಗಳಲ್ಲಿ ಆಗುತ್ತಿರುವ ಬೆಲೆ ಹೆಚ್ಚಳವೇ ಈ ಬೆಲೆ ಏರಿಕೆಗೆ ಕಾರಣ ಎಂದು ಉದ್ಯಮ ಪ್ರತಿನಿಧಿಗಳು ಹೇಳಿದ್ದಾರೆ. ಇದನ್ನೂ ಓದಿ: ರಾಮನ ದ್ರೋಹಿಗಳಿಂದ ಅಂತರ ಕಾಯ್ದುಕೊಳ್ಳಿ: ಯೋಗಿ ಆದಿತ್ಯನಾಥ್

    ಬೆಲೆ ಏರಿಕೆಗೆ ಕಾರಣವೇನು?: ಬೆಂಕಿಕಡ್ಡಿಗಳನ್ನು ತಯಾರಿಸಲು 14 ಬಗೆಯ ಕಚ್ಚಾ ಸಾಮಗ್ರಿಗಳು ಬೇಕಾಗುತ್ತವೆ. ಒಂದು ಕೆಜಿ ಕೆಂಪು ರಂಜಕ ರೂ. 425 ರಿಂದ ರೂ. 810 ಕ್ಕೆ, ಮೇಣ ರೂ. 58 ರಿಂದ ರೂ. 80 ಕ್ಕೆ, ಹೊರ ಬಾಕ್ಸ್ ಬೋರ್ಡ್ ರೂ. 36 ರಿಂದ ರೂ. 55 ಕ್ಕೆ ಮತ್ತು ಒಳ ಪೆಟ್ಟಿಗೆ ಬೋರ್ಡ್ ರೂ. 32 ರಿಂದ ರೂ. 58 ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಲೆಹೆಂಗಾದಲ್ಲಿ ಡ್ರಗ್ಸ್ ಇಟ್ಟು ಸಾಗಾಟ – ಹೈದರಾಬಾದ್ ಟು ಆಸ್ಟ್ರೇಲಿಯಾಗೆ ಸಪ್ಲೈ


    ಅಕ್ಟೋಬರ್ 10 ರಿಂದ ಪೇಪರ್, ಸ್ಪ್ಲಿಂಟ್ಸ್, ಪೊಟ್ಯಾಸಿಯಮ್ ಕ್ಲೋರೇಟ್ ಮತ್ತು ಸಲ್ಫರ್ ಬೆಲೆಯೂ ಹೆಚ್ಚಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ಉದ್ಯಮದ ಮೇಲೆ ಹೆಚ್ಚುವರಿ ಹೊರೆ ಬೀಳುತ್ತಿದೆ. ಹೀಗಾಗಿ ಬೆಂಕಿಪೊಟ್ಟಣ ತಯಾರಕರು ಬೆಲೆಯೇರಿಕೆಯ ನಿರ್ಧಾರವನ್ನು ಅವಿರೋಧವಾಗಿ ಕೈಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ಸದ್ಯ 600 ಬೆಂಕಿ ಪೊಟ್ಟಣಗಳ ಒಂದು ಬಂಡಲ್ 270ರಿಂದ 300 ರೂಪಾಯಿಗೆ ಮಾರಾಟವಾಗುತ್ತಿದೆ. ಅದನ್ನು 430ರಿಂದ 480 ರೂಪಾಯಿಗೆ ಏರಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಡಿಲೇ ಆಗಿದ್ದಕ್ಕೆ ಯಾವ ಮಾನಮರ್ಯಾದೆ ಹೋಗಲ್ಲ, ಬದನೆಕಾಯಿಯೂ ಆಗಿಲ್ಲ: ಸುದೀಪ್

  • ಬೆಂಕಿಪೊಟ್ಟಣದ ಲಾರಿಗೆ ಬೆಂಕಿ

    ಬೆಂಕಿಪೊಟ್ಟಣದ ಲಾರಿಗೆ ಬೆಂಕಿ

    ವಿಜಯಪುರ: ಆಕಸ್ಮಿಕ ಬೆಂಕಿ ತಗುಲಿ ಬೆಂಕಿ ಪೊಟ್ಟಣ ತುಂಬಿದ್ದ ಲಾರಿ ನೋಡ ನೋಡುತ್ತಿದ್ದಂತೆ ಕ್ಷಣಾರ್ಧದಲ್ಲೇ ಧಗಧಗನೆ ಹೊತ್ತಿ ಉರಿದ ಘಟನೆ ವಿಜಯಪುರದಲ್ಲಿ ನಡೆದಿದೆ.

    ತಾಲೂಕಿನ ಅರಕೇರಿ ತಾಂಡಾ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ತಮಿಳುನಾಡು ಮೂಲದ ಲಾರಿ ಇದಾಗಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಚಾಲಕ ಹಾಗೂ ಕ್ಲೀನರ್ ಲಾರಿಯಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದು, ಜೀವ ಭಯದಲ್ಲಿ ಪರಾರಿಯಾಗಿದ್ದಾರೆ. ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

    ಆಗಸದೆತ್ತರಕ್ಕೆ ಚಿಮ್ಮಿದ ಬೆಂಕಿಯ ಕೆನ್ನಾಲಿಗೆ, ಎರಡೂ ಬದಿಯ ರಸ್ತೆಗಳು ಬ್ಲಾಕ್ ಆಗಿದ್ದು, ರಸ್ತೆ ಮೇಲೆಯೇ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ವಾಹನ ಸಂಚಾರಕ್ಕೆ ಅಡೆತಡೆಯಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬರೋಬ್ಬರಿ ಅರ್ಧಗಂಟೆ ಲಾರಿ ಹೊತ್ತಿ ಉರಿದಿದೆ. ನಂತರ ಸ್ಥಳಕ್ಕೆ ವಿಜಯಪುರ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಸಿ
    ಬೆಂಕಿ ನಂದಿಸಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.