Tag: Mate Mahadevi

  • ಬಾಗಲಕೋಟೆಗೆ ಆಗಮಿಸಿದ ಮಾತೆ ಮಹಾದೇವಿ ಲಿಂಗೈಕ್ಯ ಶರೀರ

    ಬಾಗಲಕೋಟೆಗೆ ಆಗಮಿಸಿದ ಮಾತೆ ಮಹಾದೇವಿ ಲಿಂಗೈಕ್ಯ ಶರೀರ

    ಬಾಗಲಕೋಟೆ: ಜಗತ್ತಿನ ಪ್ರಥಮ ಮಹಿಳಾ ಜಗದ್ಗುರು ಡಾ. ಮಾತೆ ಮಹಾದೇವಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಲಿಂಗಾಯತ ಧರ್ಮದ ಮತ್ತೊಂದು ಕೊಂಡಿ ಕಳಚಿದಂತಾಗಿದೆ. ರಾತ್ರಿ ವೇಳೆ ಆಗಮಿಸಿದ ಮಾತಾಜಿ ಪಾರ್ಥಿವ ಶರೀರವನ್ನು ಕೂಡಲಸಂಗಮ ಕ್ರಾಸ್ ಬಳಿ ಬರಮಾಡಿಕೊಂಡರು. ಬಸವಣ್ಣನವರ ವಚನಗಳ ಮೂಲಕ ಭಕ್ತಿಯ ಶ್ರದ್ಧಾಂಜಲಿ ಅರ್ಪಿಸಿದರು.

    ಸಂಗಮಕ್ರಾಸ್ ನಿಂದ ಬಸವಣ್ಣನ ವೃತ್ತ ಮೂಲಕ ಬಸವ ಧರ್ಮಪೀಠ ವರೆಗೆ ಮೆರವಣಿಗೆ ಮಾಡಲಾಯಿತು. ದಾರಿಯುದ್ದಕ್ಕೂ ಅಪಾರ ಭಕ್ತರು ಮಾತಾಜಿ ಲಿಂಗೈಕ್ಯ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಮೊಂಬತ್ತಿ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

    ನಂತರ ಬಸವಧರ್ಮ ಪೀಠ ವೇದಿಕೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಯಿತು. ಬಸವಧರ್ಮ ನೂತನ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಸೇರಿದಂತೆ ಅನೇಕ ಸ್ವಾಮೀಜಿಗಳು ಮಾತಾಜಿ ಶರೀರಕ್ಕೆ ಪೂಜೆ ಸಲ್ಲಿಸಿದರು.

    ರಾತ್ರಿಯಾದರೂ ಅಪಾರ ಭಕ್ತರು ತಾಯಿ ದರ್ಶನ ಪಡೆದು ಕಣ್ಣೀರಿಟ್ಟರು. ಮಾತೆ ಸತ್ಯಾದೇವಿ, ಮಹಾದೇಶ್ವರ ಸ್ವಾಮೀಜಿ, ಬಸವಜಯ ಮೃತ್ಯುಂಜಯ ಸ್ವಾಮೀಜಿ, ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮೀಜಿ ಹಾಗೂ ಸಿದ್ದರಾಮೇಶ್ವರ ಸ್ವಾಮೀಜಿ ಸೇರಿದಂತೆ ಅನೇಕ ಮಠಾಧೀಶರು, ಭಕ್ತ ಸಮೂಹ ಶೋಕ ಸಾಗರದಲ್ಲಿ ಮೊಳಗಿತ್ತು. ರಾತ್ರಿ ಇಡೀ ಶರಣರ ವಚನಗಳ ಭಜನೆ ಮಾಡಲಾಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾತೆ ಮಹಾದೇವಿ ಲಿಂಗೈಕ್ಯ – 30 ವರ್ಷದ ಹಿಂದೆಯೇ ನಿರ್ಮಾಣವಾಗಿದೆ ಕಮಲ ಆಕಾರದ ಗದ್ದುಗೆ

    ಮಾತೆ ಮಹಾದೇವಿ ಲಿಂಗೈಕ್ಯ – 30 ವರ್ಷದ ಹಿಂದೆಯೇ ನಿರ್ಮಾಣವಾಗಿದೆ ಕಮಲ ಆಕಾರದ ಗದ್ದುಗೆ

    ಬಾಗಲಕೋಟೆ: ಲಿಂಗೈಕ್ಯರಾಗಿರುವ ಮಾತೆ ಮಹಾದೇವಿ ಅವರನ್ನು ಈಗಾಗಲೇ ನಿರ್ಮಾಣವಾಗಿರುವ ಕಮಲದ ಆಕಾರದ ಗದ್ದುಗೆಯಲ್ಲಿ ಶನಿವಾರ ಸಮಾಧಿ ಮಾಡಲಾಗುತ್ತದೆ.

    ಹುನಗುಂದ ತಾಲೂಕಿನ ಕೂಡಲಸಂಗಮದ ಅನುಭವಮಂಟಪದ ಬಳಿ 30 ವರ್ಷದ ಹಿಂದೆಯೇ ಈ ಸಮಾಧಿ ನಿರ್ಮಾಣವಾಗಿದೆ. ಈ ಹಿಂದೆ ಸಮಾಧಿ ಸ್ಥಳದಲ್ಲಿ ಲಿಂಗ ಆಕಾರದೊಳಗೆ ಅಕ್ಕಮಹಾದೇವಿ ಮೂರ್ತಿಯನ್ನು ಇಡಲಾಗಿತ್ತು. ಈಗ ಅಕ್ಕಮಹಾದೇವಿ ಮೂರ್ತಿ ತೆಗೆದು ಮಾತೆ ಮಹಾದೇವಿ ಪಾರ್ಥಿವ ಶರೀರವನ್ನು ಸಮಾಧಿ ಮಾಡಲಾಗುವುದು ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ. ಇದನ್ನೂ ಓದಿ:ಲಿಂಗಾಯತ ಧರ್ಮದ ಹೋರಾಟಗಾರ್ತಿ ಮಾತೆ ಮಹಾದೇವಿ ಲಿಂಗೈಕ್ಯ

    ಕೂಡಲಸಂಗಮಕ್ಕೆ ಬಾಗಲಕೋಟೆ ಜಿಲ್ಲಾಧಿಕಾರಿ ಆರ್ ರಾಮಚಂದ್ರನ್, ಎಸ್‍ಪಿ ಸಿಬಿ ರಿಷ್ಯಂತ್ ಭೇಟಿ ನೀಡಿದ್ದು, ಸಮಾಧಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಹಾಗೆಯೇ ಅಂತಿಮ ದರ್ಶನದ ಸಮಯದಲ್ಲಿ ಬೇಕಾಗುವ ಭದ್ರತೆ ಕುರಿತು ಮಠದ ಸಿಬ್ಬಂದಿ ಜೊತೆ ಚರ್ಚೆ ನಡೆಸಿದ್ದಾರೆ.

    ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲಿಂಗಾಯತ ಧರ್ಮದ ಹೋರಾಟಗಾರ್ತಿ ಮಾತೆ ಮಹಾದೇವಿ ಲಿಂಗೈಕ್ಯ

    ಲಿಂಗಾಯತ ಧರ್ಮದ ಹೋರಾಟಗಾರ್ತಿ ಮಾತೆ ಮಹಾದೇವಿ ಲಿಂಗೈಕ್ಯ

    ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟಗಾರ್ತಿ, ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ(74) ಇಂದು ಲಿಂಗೈಕ್ಯರಾಗಿದ್ದಾರೆ.

    ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ.

    ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು ಬಳಲುತ್ತಿದ್ದರು. ಹೀಗಾಗಿ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಮಾರ್ಚ್ 10ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಮಾತೆ ಮಹಾದೇವಿ ಗುರು ಲಿಂಗಾನಂದ ಅವರಿಂದ ಪ್ರಭಾವಿತರಾಗಿ ಕಿರಿಯ ವಯಸ್ಸಿನಲ್ಲಿ ಸನ್ಯಾಸ ಸ್ವೀಕರಿಸಿದ್ದರು. ಇವರನ್ನು ಪ್ರಥಮ ಮಹಿಳಾ ಜಗದ್ಗುರು ಎಂದು ಭಕ್ತರು ಗುರುತಿಸಿದ್ದಾರೆ.

    ಮಾತೆ ಮಹಾದೇವಿ ಮಾರ್ಚ್ 13, 1946ರಂದು ಚಿತ್ರದುರ್ಗ ಜಿಲ್ಲೆಯ ಸಾಸಲಹಟ್ಟಿಯಲ್ಲಿ ಜನಿಸಿದ್ದರು. ಇವರ ಮೂಲ ಹೆಸರು ರತ್ನ ಆಗಿದ್ದು, ದೀಕ್ಷೆ ಪಡೆದ ಬಳಿಕ ಮಾತೆ ಮಹಾದೇವಿ ಎಂದು ಗುರುತಿಸಿಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾತೆ ಮಹಾದೇವಿ ಗಂಭೀರ – ಐಸಿಯುನಲ್ಲಿ ಚಿಕಿತ್ಸೆ

    ಮಾತೆ ಮಹಾದೇವಿ ಗಂಭೀರ – ಐಸಿಯುನಲ್ಲಿ ಚಿಕಿತ್ಸೆ

    ಬೆಂಗಳೂರು: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ, ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

    ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

    ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು ಬಳಲುತ್ತಿದ್ದರು. ಹೀಗಾಗಿ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಮಾರ್ಚ್ 10ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಎಂ.ಬಿ.ಪಾಟೀಲ್ ಮುಖ್ಯಮಂತ್ರಿಯಾಗಲಿ ಎಂದು ಸಂಕಲ್ಪ ಮಾಡೋಣ- ಮಾತೆ ಮಹಾದೇವಿ

    ಎಂ.ಬಿ.ಪಾಟೀಲ್ ಮುಖ್ಯಮಂತ್ರಿಯಾಗಲಿ ಎಂದು ಸಂಕಲ್ಪ ಮಾಡೋಣ- ಮಾತೆ ಮಹಾದೇವಿ

    – ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗೋದು ಒಳ್ಳೆಯದು
    – ಬಿಎಸ್‍ವೈ ತೆಗಳಿ ಮಾಜಿ ಸಿಎಂ ಹೊಗಳಿದ ಮಾತೆ ಮಹಾದೇವಿ

    ಬಾಗಲಕೋಟೆ: ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿಯಾಗಬೇಕು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕು ಎಂದು ಬಸವ ಧರ್ಮ ಪೀಠದ ಜಗದ್ಗುರು ಮಾತೆ ಮಹಾದೇವಿ ಹೇಳಿದ್ದಾರೆ.

    ಜಿಲ್ಲೆಯ ಕೂಡಲಸಂಗಮದಲ್ಲಿ ನಡೆದ ಶರಣ ಮೇಳದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಎಷ್ಟು ಕೊಂಡಾಡಿದರೂ ಸಾಲದು. ಒಂದು ವೇಳೆ ಅವರ ಸ್ಥಾನದಲ್ಲಿ ಯಾರೇ ಇದ್ದಿದ್ದರೂ ಸಮಿತಿ ರಚನೆಗೆ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸ್ಸು ಮಾಡುವ ಧೈರ್ಯ ಮಾಡುತ್ತಿರಲಿಲ್ಲ. ಸಿದ್ದರಾಮಯ್ಯರ ಕಾರ್ಯಕ್ಕೆ ಬೆಲೆ ಕಟ್ಟಲು ಆಗಲ್ಲ. ಆದರೆ ಕೆಲವರು ಸಿದ್ದರಾಮಯ್ಯ ಧರ್ಮ, ಜಾತಿ ಒಡೆಯುತ್ತಿದ್ದಾರೆ ಅಂತ ಅಪಪ್ರಚಾರ ಮಾಡಿದರು ಎಂದು ದೂರಿದರು.

    ನಿವೃತ್ತ ನ್ಯಾ. ನಾಗಮೋಹನ ದಾಸ್ ವರದಿ ನಮಗೆ ದೊಡ್ಡ ಅಸ್ತ್ರ ಇದ್ದಂತೆ. ಅದರಿಂದ ಮುಂದೆ ನಮಗೆ ಯಶಸ್ಸು ಸಿಗುತ್ತದೆ. ಆದರೆ ಪ್ರತ್ಯೇಕ ಲಿಂಗಾಯತ ಹೋರಾಟದಿಂದ ಎಂ.ಬಿ.ಪಾಟೀಲ್ ಅವರಿಗೆ ಅನ್ಯಾಯವಾಯಿತು. ಅವರ ಉತ್ತಮ ಕಾರ್ಯಗಳಿಂದ ಚುನಾವಣೆಯಲ್ಲಿ ಜಯಗಳಿಸಿದರೂ ಮಂತ್ರಿ ಸ್ಥಾನ ಬೇಗ ಸಿಗಲಿಲ್ಲ. ನಿರಂತರ ಹೋರಾಟದಿಂದ ಎಂ.ಬಿ.ಪಾಟೀಲ್ ಅವರು ಗೃಹ ಸಚಿವರಾಗಿದ್ದು ನಮಗೆ ಸಂತಸ ತಂದಿದೆ ಎಂದರು.

    ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದಲ್ಲಿ ನಾವು ಒಂದು ಹಂತದಲ್ಲಿ ಗೆದ್ದಿದ್ದೀವೆ. ಮುಂದೆ ಕಾನೂನಾತ್ಮಕ ಹೋರಾಟ ಮಾಡೋಣ. ನಮ್ಮ ಹೋರಾಟದ ರಾಜಕೀಯ ಮುಖಂಡರು ಎಂ.ಬಿ.ಪಾಟೀಲ್ ಅಂತ ನಿರ್ಣಯ ತೆಗೆದುಕೊಂಡಿದ್ದೇವೆ. ಅವರ ಮಾರ್ಗದರ್ಶನದಲ್ಲಿ ಎಲ್ಲ ಲಿಂಗಾಯತ ರಾಜಕಾರಣಿಗಳು ಮುನ್ನಡೆಯಬೇಕು. ಎಂ.ಬಿ.ಪಾಟೀಲ್ ಸಿಎಂ ಆಗಬೇಕು ಎನ್ನುವುದು ನಮ್ಮೆಲ್ಲರಿಗೂ ಕನಸು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಕೂಡಲಸಂಗಮಕ್ಕೆ ಭೇಟಿ ನೀಡಿದಾಗ ಸಿಎಂ ಆಗಬೇಕು ಅಂತ ಸಂಕಲ್ಪ ಮಾಡಿದ್ದೇವು. ಅದರಂತೆ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಈ ಬಾರಿ ಎಂ.ಬಿ.ಪಾಟೀಲ ಅವರು ಸಿಎಂ ಆಗಬೇಕು ಅಂತ ಸಂಕಲ್ಪ ಮಾಡೋಣ ಎಂದ ಅವರು, ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾಣಕ್ಕೆ ಹೋಗುವುದು ಒಳ್ಳೆಯದು ಎಂದು ಸಲಹೆ ನೀಡಿದರು.

    ಸಿದ್ದರಾಮಯ್ಯ ಅವರು ಬಸವಣ್ಣನವರ ವಚನ, ತತ್ವಗಳನ್ನು ಅಚ್ಚುಕಟ್ಟಾಗಿ ಹೇಳಿದ ವಿಡಿಯೋ ಒಂದನ್ನು ಇತ್ತೀಚಿಗೆ ಯೂಟ್ಯೂಬ್‍ನಲ್ಲಿ ನೋಡಿದ್ದೇನೆ. ಆದರೆ ಅದೇ ವೇದಿಕೆಯಲ್ಲಿದ್ದ ಬಿ.ಎಸ್.ಯಡಿಯೂರಪ್ಪ ಅವರಿಂದ ಒಂದೇ ಒಂದು ಬಾರಿಯೂ ಬಸವಣ್ಣನ ಶಬ್ದ ಬರಲಿಲ್ಲ. ಸಿದ್ದರಾಮಯ್ಯ ಅವರು ಸಾಕಷ್ಟು ವಿಷಯಗಳನ್ನು ತಿಳಿದುಕೊಂಡಿದ್ದಾರೆ. ಹೀಗಾಗಿ ಅವರು ರಾಷ್ಟ್ರ ರಾಜಕಾರಣಕ್ಕೆ ಮುಂದಾಗಬೇಕು ಎನ್ನುವುದು ನಮ್ಮ ಅಭಿಪ್ರಾಯ. ಈ ಸಂದೇಶವನ್ನು ಅವರಿಗೆ ಮುಟ್ಟಿಸುವ ಜವಾಬ್ದಾರಿ ಎಂ.ಬಿ.ಪಾಟೀಲ್‍ರಿಗೆ ಒಪ್ಪಿಸಿದ್ದೇನೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv