Tag: matha manikeshwari

  • ಮಾತಾ ಮಾಣಿಕೇಶ್ವರಿ ದರ್ಶನಕ್ಕೆ ಬಂದ ಸಾಧು ಮೇಲೆ ಕಾಲಿನಿಂದ ಒದ್ದು ಹಲ್ಲೆ

    ಮಾತಾ ಮಾಣಿಕೇಶ್ವರಿ ದರ್ಶನಕ್ಕೆ ಬಂದ ಸಾಧು ಮೇಲೆ ಕಾಲಿನಿಂದ ಒದ್ದು ಹಲ್ಲೆ

    ಕಲಬುರಗಿ: ಮಾತಾ ಮಾಣಿಕೇಶ್ವರಿ ಅಮ್ಮನವರ ದರ್ಶನಕ್ಕೆ ತೆರಳಿದ ಸಾಧುವೊಬ್ಬರ ಮೇಲೆ ಆಶ್ರಮದ ಕೆಲವರು ಹಲ್ಲೆ ನಡೆಸಿ, ಕಾಲಿನಿಂದ ಒದ್ದು ಹೊರಹಾಕಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

    ಸೇಡಂ ತಾಲೂಕಿನ ಯಾನಾಗುಂದಿ ಆಶ್ರಮದಲ್ಲಿದ್ದ ಸಾಧುವೊಬ್ಬರು ರವಿವಾರ ರಾತ್ರಿ ಅಮ್ಮನ ಮಂದಿರದಲ್ಲಿ ಧ್ಯಾನ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ. ಇದಕ್ಕೆ ಆಶ್ರಮದವರು ವಿರೋಧ ವ್ಯಕ್ತಪಡಿಸಿದ್ದು, ದೇವಾಲಯದ ಬಾಗಿಲು ತೆರೆಯಲು ಯತ್ನಿಸಿದಾಗ ಆತನನ್ನು ಅಮಾನವೀಯವಾಗಿ ಎಳೆದೊಯ್ದು ಹೊರಹಾಕಿದ್ದಾರೆ. ಅಲ್ಲದೇ ಕೆಲವರು ಕಾಲಿನಿಂದ ಒದ್ದು ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಸಾಧುವನ್ನು ಠಾಣೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಚೀನಾ ಗಡಿಯಲ್ಲಿ ಕಣ್ಗಾವಲು ಹೆಚ್ಚಿಸಿದ ಭಾರತ – ಶಕ್ತಿಶಾಲಿ ಹೆರಾನ್ ಡ್ರೋನ್ ನಿಯೋಜನೆ

    ಮಾತಾ ಮಾಣಿಕೇಶ್ವರಿ ಅಮ್ಮನವರು ಜೀವಂತವಾಗಿದ್ದಾಗಲೂ ಸಹ ಅಮ್ಮನವರ ದರ್ಶನಕ್ಕೆ ಅಲ್ಲಿನ ಟ್ರಸ್ಟ್ ನಿರ್ಬಂಧ ಹೇರಿತ್ತು. ಮಾಣಿಕೇಶ್ವರಿ ಅಮ್ಮ ಲಿಂಗೈಕ್ಯರಾದ ನಂತರವೂ ಸಹ ಅಮ್ಮನವರ ಗರ್ಭಗುಡಿ ದರ್ಶನಕ್ಕೆ ಅವಕಾಶ ಕಲ್ಪಿಸದ ಟ್ರಸ್ಟ್​ ಸದಸ್ಯರ ನಡೆಗೆ ಭಕ್ತರು, ಜನರು ರೋಸಿ ಹೋಗಿದ್ದಾರೆ. ಇದೀಗ ಹಲವು ವರ್ಷಗಳಿಂದ ಸೇವೆ ಮಾಡಿಕೊಂಡಿದ್ದ ಸಾಧುವಿನ ಮೇಲೆ ಹಲ್ಲೆ ನಡೆಸಿದ ಟ್ರಸ್ಟ್​ ಸಿಬ್ಬಂದಿ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಕ್ತರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

  • ಮಾತೆ ಮಾಣಿಕೇಶ್ವರಿ ಲಿಂಗೈಕ್ಯ- ಮಠದ ಆಸ್ತಿಯ ಮೇಲೆ ಟ್ರಸ್ಟಿ ಕಣ್ಣು?

    ಮಾತೆ ಮಾಣಿಕೇಶ್ವರಿ ಲಿಂಗೈಕ್ಯ- ಮಠದ ಆಸ್ತಿಯ ಮೇಲೆ ಟ್ರಸ್ಟಿ ಕಣ್ಣು?

    ಕಲಬುರಗಿ: ಸೇಡಂ ತಾಲೂಕಿನ ಯಾನಾಗುಂದಿಯ ಮಾತೆ ಮಾಣಿಕೇಶ್ವರಿ ಲಿಂಗೈಕರಾಗುತ್ತಿದ್ದಂತೆ ಕೋಟಿ ಕೋಟಿಯ ಆಸ್ತಿಯ ಮೇಲೆ ಹಲವರು ಕಣ್ಣು ಬಿದ್ದಿದೆ. ಹೀಗಾಗಿ ಇದೀಗ ಮಠದ ಆಡಳಿತ ಮಂಡಳಿ ಸದಸ್ಯರ ವಿರುದ್ಧ ಮಠದ ಭಕ್ತರು ಸಮರ ಸಾರಲು ಮುಂದಾಗಿದ್ದಾರೆ.

    ಅಮ್ಮನವರು ಜೀವಿತಾವಧಿಯಲ್ಲಿ ಸಾಮಾಜಿಕ ಕಾರ್ಯಕ್ಕೆ ಅಂತ “ರೂಪ ರಹಿತಾ ಅಂಹಿಸಾ ಯೋಗೇಶ್ವರ ವೀರ ಧರ್ಮಜಾ ಮಾತಾ ಮಾಣಿಕೇಶ್ವರಿ ಟ್ರಸ್ಟ್ ಯಾನಾಗುಂದಿ” ಹುಟ್ಟಿಹಾಕಿದ್ದು, ಆ ಟ್ರಸ್ಟ್ ಅಡಿ ಯಾನಾಗುಂದಿಯಲ್ಲಿ 254 ಎಕರೆ ಜಮೀನು ಸೇರಿದಂತೆ, ಕಲಬುರಗಿ, ಬೀದರ್, ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಆಂಧ್ರ-ತೆಲಂಗಾಣದಲ್ಲಿ ಕೋಟ್ಯಂತರ ರೂಪಾಯಿ ಆಸ್ತಿ ಹೊಂದಿದೆ. ಈ ಆಸ್ತಿಯ ಮೇಲೆ ಇದೀಗ ಇಲ್ಲಿನ ಆಡಳಿತ ಮಂಡಳಿ ಸದಸ್ಯರು ಕಣ್ಣಿಟ್ಟಿದ್ದಾರೆ.

    ಆಡಳಿತ ಮಂಡಳಿಯ ಕಾರ್ಯದರ್ಶಿ ಶಿವಯ್ಯ ಸ್ವಾಮಿ, ತನ್ನ ಆಧಾರ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿದ್ದು, ಮಾತೆ ಮಾಣಿಕೇಶ್ವರಿಯ ಪುತ್ರ ಅಂತ ದಾಖಲಾತಿ ಸಿದ್ಧಪಡಿಸಿದ್ದಾರೆ. ಈ ಮೂಲಕ ಮಠದ ಆಸ್ತಿ ಕಬಳಿಸಲು ಹೊಂಚು ಹಾಕಿದ್ದಾರೆ ಅಂತ ಮಾತೆ ಮಾಣಿಕೇಶ್ವರಿ ಅವರ ಪರಮ ಭಕ್ತ ಹಾಗೂ ಹಿಂದಿನಿಂದ ಆಡಳಿತ ಮಂಡಳಿ ಸದಸ್ಯರ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಶಿವಕುಮಾರ್ ಎಂಬವರು ಗಂಭೀರ ಆರೋಪ ಮಾಡಿದ್ದಾರೆ.

    ಈ ಹಿಂದೆ ಸಹ ಆಡಳಿತ ಮಂಡಳಿ ಸದಸ್ಯರು ಅಮ್ಮನವರನ್ನು ಗೃಹಬಂಧನದಲ್ಲಿಟ್ಟಿದ್ದಾರೆ ಎಂದು ಶಿವಕುಮಾರ್ ಕಲಬುರಗಿ ಹೈಕೋರ್ಟ್ ಪೀಠಕ್ಕೆ ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಟ್ರಸ್ಟ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ನಂತರ ಅಮ್ಮನವರನ್ನು ಭಕ್ತರ ದರ್ಶನಕ್ಕೆ ಟ್ರಸ್ಟ್ ಸದಸ್ಯರು ಮುಂದಾಗಿದ್ದರು. ಇದೀಗ ಮತ್ತೆ ಟ್ರಸ್ಟಿ ವಿರುದ್ಧ ಆಸ್ತಿ ಕಬಳಿಕೆಯ ಆರೋಪವನ್ನು ಕೇಳಿ ಬಂದಿರುವುದು ಅಪಾರ ಭಕ್ತರಲ್ಲಿ ಚಿಂತೆಗೀಡಾಗಿದೆ.

    ಮಠದ ಪೀಠಾಧಿಪತಿ ಮತ್ತು ಮುಂದಿನ ಆಡಳಿತ ವ್ಯವಸ್ಥೆ ಬಗ್ಗೆ ಟ್ರಸ್ಟ್ ಕಾರ್ಯದರ್ಶಿ ಶಿವಯ್ಯ ಸ್ವಾಮಿ ಅವರನ್ನು ಕೇಳಿದ್ರೆ, ಇಲ್ಲಿ ನಾವೆಲ್ಲ ಸೇವಕಾರಾಗಿ ಬಂದಿದ್ದೇವೆ. ಸದ್ಯ ಯಾರೂ ಪೀಠದಲ್ಲಿ ಮುಂದುವರಿಯಲ್ಲ. ಆದರೆ ಟ್ರಸ್ಟ್ ಅಡಿಯಲ್ಲಿಯೇ ಎಲ್ಲ ನಡೆಸುವುದಾಗಿ ಹೇಳುತ್ತಿದ್ದಾರೆ. ಇಡೀ ವಿಶ್ವಕ್ಕೆ ದೀಪ ಬೆಳೆಗಿಸಿದ ಮಾತೆ ಮಾಣಿಕೇಶ್ವರಿ ಅಮ್ಮನವರ ಮಠದಲ್ಲಿ ಇದೀಗ ಆಸ್ತಿಯ ಕಲಹ ಆರಂಭವಾಗಿದೆ. ಈ ಮೂಲಕ ಯಾನಾಗುಂದಿ ಟ್ರಸ್ಟ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಇದೀಗ ಮತ್ತೆ ದೃಢಪಟ್ಟಿದೆ.