Tag: mathe mahadevi

  • ಸಿದ್ದಗಂಗಾ ಮಠದಲ್ಲಿ 8 ಸಾವಿರ ಮಕ್ಕಳ ಸಾಮೂಹಿಕ ಕೇಶಮುಂಡನ ಮೂರ್ಖತನ: ಮಾತೆ ಮಹಾದೇವಿ

    ಸಿದ್ದಗಂಗಾ ಮಠದಲ್ಲಿ 8 ಸಾವಿರ ಮಕ್ಕಳ ಸಾಮೂಹಿಕ ಕೇಶಮುಂಡನ ಮೂರ್ಖತನ: ಮಾತೆ ಮಹಾದೇವಿ

    ಬಾಗಲಕೋಟೆ: ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳು ಶಿವೈಕ್ಯರಾದ ಹಿನ್ನಲೆಯಲ್ಲಿ ಮಠದ 8 ಸಾವಿರ ವಿದ್ಯಾರ್ಥಿಗಳ ಸಾಮೂಹಿಕ ಕೇಶ ಮುಂಡನ ಮಾಡುತ್ತಿರುವುದು ಮೂರ್ಖತನ ಎಂದು ಕೂಡಲಸಂಗಮದ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿದ್ದಾರೆ.

    ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಪ್ರಕಟಣೆ ಹೊರಡಿಸಿರುವ ಮಾತೆ ಮಹಾದೇವಿ ಅವರು, ಲಿಂಗಾಯತ ಧರ್ಮದ ಪ್ರಕಾರ ಯಾರಾದರೂ ಲಿಂಗೈಕ್ಯರಾದರೆ ತಲೆ ಬೊಳಿಸಿಕೊಳ್ಳುವ ಸಂಪ್ರದಾಯವಿಲ್ಲ. ಹೀಗಾಗಿ ಇಂತಹ ಮೂಢ ನಂಬಿಕೆಯನ್ನು ಸಿದ್ದಗಂಗಾ ಮಠದ ಕಿರಿಯ ಶ್ರೀಗಳು ಮಾಡಬಾರದು. ಬಸವ ತತ್ವ ಎಂದು ಹೇಳುತ್ತ ಅದಕ್ಕೆ ವಿರುದ್ಧವಾದ ಕೆಲಸ ಮಾಡುತ್ತ ಹೋದರೆ ಹಿರಿಯರಿಗೆ ಮಾಡಿದ ಅಪಚಾರವಾಗುವುದು ಎಂದು ಹೇಳಿದ್ದಾರೆ.

    ಮಹಾನ್ ಸಂತರಾದ ಸಿದ್ದಗಂಗಾ ಶ್ರೀಗಳ ಲಿಂಗೈಕ್ಯ ಸಂಸ್ಮರಣೆ ಸಮಾರಂಭದಲ್ಲಿ ಪ್ರಾರ್ಥನೆ, ಸಾಮೂಹಿಕ ಇಷ್ಟಲಿಂಗ ಪೂಜೆ, ದಾಸೋಹ ಮಾಡಿ. ಆದರೆ ಮೌಢ್ಯಾಚರಣೆ, ಮನುವಾದ ಹಾಗೂ ವೈದಿಕ ಧರ್ಮಕ್ಕೆ ಸಂಬಂಧಿಸಿದ ತಲೆ ಬೆಳಿಸಿಕೊಳ್ಳುವ ಸಂಪ್ರದಾಯ ಸರಿಯಲ್ಲ. ವಿದ್ಯಾರ್ಥಿಗಳು ಮಠದ ಕೈಯಲ್ಲಿ ಇರುತ್ತಾರೆ. ನಾವು ಹೇಳಿದ ಹಾಗೆ ಕೇಳುತ್ತಾರೆ ಅಂತ ಸಾಮೂಹಿಕ ಕೇಶ ಮುಂಡನಕ್ಕೆ ಒಪ್ಪಿಕೊಂಡಿದ್ದಾರೆ ಎನ್ನುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

    ಶಿವಕುಮಾರ ಶ್ರೀಗಳು ಅನೇಕ ವರ್ಷಗಳಿಂದ ಅನಾರೋಗ್ಯದಿಂದಾಗಿ ಹಾಸಿಗೆ ಹಿಡಿದಿದ್ದರು. ಕಿರಿಯ ಶ್ರೀಗಳು ಮಠದ ಎಲ್ಲ ಕಾರ್ಯವನ್ನು ನಡೆಸಿಕೊಂಡು ಬಂದಿದ್ದಾರೆ. ಈಗ ಆತಂಕ ಪಡುವ ಅಗತ್ಯವಿಲ್ಲ. ಮಕ್ಕಳಿಗೆ ಅನಾಥ ಭಾವ ಬೆಳೆಯಲು ಅವಕಾಶವೇ ಇಲ್ಲ. ಆದ್ದರಿಂದ ಈ ಆಚರಣೆಯನ್ನು ಸಿದ್ದಗಂಗಾ ಮಠದ ಕಿರಿಯ ಶ್ರೀಗಳು ಮಾಡಕೂಡದು. ಮೂಢನಂಬಿಕೆಯಿಂದ ಹೊರಬರಬೇಕು. ಮಠಗಳ ಮೂಲಕ ಮೌಢ್ಯತೆ ಬಿತ್ತುವುದು ಲಿಂಗಾಯತ ಧರ್ಮಕ್ಕೆ ಮಾಡುವ ಅಪಚಾರ. ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಿ, ಪ್ರೀತಿಯಿಂದ ನೋಡಿ, ದಾಸೋಹ ಮಾಡಿ ಇಂತಹ ಮೂಢಾಚರಣೆಯನ್ನು ಮಾಡಬಾರದು ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೋರಾಟ ಮಾಡೋಕೆ ಅವರು ಉಳಿಯಬೇಕಲ್ಲ: ಮಾತೆ ಮಹಾದೇವಿ ಬಗ್ಗೆ ಸಂಗನಬಸವ ಸ್ವಾಮೀಜಿ ವ್ಯಂಗ್ಯ

    ಹೋರಾಟ ಮಾಡೋಕೆ ಅವರು ಉಳಿಯಬೇಕಲ್ಲ: ಮಾತೆ ಮಹಾದೇವಿ ಬಗ್ಗೆ ಸಂಗನಬಸವ ಸ್ವಾಮೀಜಿ ವ್ಯಂಗ್ಯ

    ಬಾಗಲಕೋಟೆ: ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಮಾಡಲು ಅವರು ಉಳಿಯಬೇಕಲ್ಲ. ಇನ್ನೇನು ಕೆಲ ದಿವಸದಲ್ಲಿ ಲಿಂಗೈಕ್ಯರಾಗುತ್ತಾರೆ ಎಂದು ಮಾತೆ ಮಹಾದೇವಿ ಅವರ ಕುರಿತು ಸಂಗನಬಸವ ಸ್ವಾಮೀಜಿ ವ್ಯಂಗ್ಯವಾಡಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

    ಕೂಡಲಸಂಗಮದ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಕಳೆದ ಒಂದು ತಿಂಗಳಿಂದ ಕಿಡ್ನಿ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಅನಾರೋಗ್ಯದ ಮಧ್ಯೆಯೂ ಹುನಗುಂದ ತಾಲೂಕಿನ ಕೂಡಲಸಂಗಮದ ಶರಣಮೇಳದಲ್ಲಿ ಹಾಜರಾಗಿದ್ದರು. ಈ ವೇಳೆ ವೀರಶೈವರು ಜಾತಿ ವಿಷಬೀಜ ಬಿತ್ತುತ್ತಿದ್ದಾರೆ ನಾವಲ್ಲ. ಪಂಚಪೀಠಾಧೀಶ್ವರರು ಲಿಂಗಾಯತ ಜಂಗಮರನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಹೋರಾಟ ನಡೆಸಿದ್ದರು. ಇವರಿಗೆಲ್ಲ ನಾಚಿಕೆಯಾಗಬೇಕೆಂದು ಮಾತೆ ಮಹಾದೇವಿ ವಾಗ್ದಾಳಿ ನಡೆಸಿದ್ದರು.

    ಈ ಕುರಿತು ಬಾದಾಮಿ ತಾಲೂಕಿನ ಗುಳೇದಗುಡ್ಡ ಪಟ್ಟಣದಲ್ಲಿ ಸೋಮವಾರ ಶಿವಯೋಗಮಂದಿರ ಸಂಸ್ಥೆ ಅಧ್ಯಕ್ಷ ಸಂಗನಬಸವ ಸ್ವಾಮೀಜಿ ಮಾತೆ ಮಹಾದೇವಿ ಕುರಿತು ವ್ಯಂಗ್ಯವಾಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಜನವರಿ 13ರಂದು ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಮುಂದುವರಿಸುವುದಾಗಿ ಮಾತೆ ಮಹಾದೇವಿ ಹೇಳಿದ್ದಾರೆ. ಆದರೆ ಹೋರಾಟ ಮಾಡಲು ಅವರು ಉಳಿಯಬೇಕಲ್ಲ. ಅನಾರೊಗ್ಯದಿಂದ ಬಳಲುತ್ತಿರುವ ಮಾತೆ ಮಹಾದೇವಿ ಕೆಲ ದಿನಗಳಲ್ಲಿ ಲಿಂಗೈಕ್ಯರಾಗುತ್ತಾರೆ. ಇನ್ನು ಅವರೇನು ಹೋರಾಟ ಮಾಡ್ತಾರೆ ಅಂತ ಹೇಳಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಚಿವ ಡಿ.ಕೆ ಶಿವಕುಮಾರ್ ಗೆ ಮಾತೆ ಮಹಾದೇವಿ ತಿರುಗೇಟು

    ಸಚಿವ ಡಿ.ಕೆ ಶಿವಕುಮಾರ್ ಗೆ ಮಾತೆ ಮಹಾದೇವಿ ತಿರುಗೇಟು

    ಬಾಗಲಕೋಟೆ: ಧರ್ಮವನ್ನು ಒಡೆಯೋಕೆ ಮುಂದಾಗಿದ್ದು ತಪ್ಪು. ನಮ್ಮನ್ನು ಕ್ಷಮಿಸಿ ಬಿಡಿ ಎಂಬ ಸಚಿವರ ಹೇಳಿಕೆ ವಿಚಾರ ಸಂಬಂಧ ಡಿಕೆ ಶಿವಕುಮಾರ್ ಅವರು ಲಿಂಗಾಯತ ಸಮಾಜದವರ ಕ್ಷಮೆ ಕೇಳಬೇಕು ಅಂತ ಕೂಡಲಸಂಗಮ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಒತ್ತಾಯಿಸಿದ್ದಾರೆ.

    ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಡಿಕೆಶಿಗೆ ತಿರುಗೇಟು ನೀಡಿದ್ದಾರೆ. ಲಿಂಗಾಯತ ಧರ್ಮವನ್ನು ಒಡೆದಿದ್ದಾರೆ. ಸಮಾಜವನ್ನು ಒಡೆದಿದ್ದಾರೆ ಅನ್ನೋದು ತಪ್ಪು. 12 ನೇ ಶತಮಾನದಲ್ಲಿ ಬಸವಣ್ಣನವರು ಸಂಪ್ರದಾಯಬದ್ಧವಾದ ಕಂದಾಚಾರಗಳನ್ನು ಬಿಟ್ಟು ಅವರು ಲಿಂಗಾಯತ ಧರ್ಮವನ್ನು ಕಟ್ಟಿದ್ದಾರೆ. ಇದಕ್ಕೆ ಸಿದ್ದರಾಮಯ್ಯನವರು ಮಾನ್ಯತೆ ಕೊಟ್ಟಿದ್ದಾರೆ. ಅದಕ್ಕೆ ನಾವು ಅಭಿನಂದಿಸಬೇಕು. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಯಿತು ಎಂದು ಡಿಕೆಶಿ ಹೇಳಿದ್ದು ತಪ್ಪು, ಇದು ಶುದ್ಧ ಸುಳ್ಳು ಅಂತ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಾವು ತಪ್ಪು ಮಾಡಿದ್ದೇವೆ, ನನ್ನ ಹೇಳಿಕೆಗೆ ಈಗಲೂ ಬದ್ಧ: ಡಿಕೆ ಶಿವಕುಮಾರ್

    ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಬೇರೆ ಕಾರಣಗಳಿವೆ. ಆದರೆ ಅದಕ್ಕೆ ಲಿಂಗಾಯತ ಧರ್ಮದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಲಿಂಗಾಯತ ಧರ್ಮ ಪ್ರತ್ಯೇಕ ಮಾನ್ಯತೆ ವಿಚಾರಕ್ಕಾಗಿಯೇ ಈ ಬಾರಿ ಕಾಂಗ್ರೆಸ್‍ಗೆ ಹೆಚ್ಚು ಮತಗಳು ಬಿದ್ದಿವೆ. ಬೀದರ್‍ನಲ್ಲಿ ಐದು ಶಾಸಕರಲ್ಲಿ ನಾಲ್ವರು ಕಾಂಗ್ರೆಸ್‍ನಿಂದಲೇ ಆಯ್ಕೆಯಾಗಿದ್ದಾರೆ. ಡಿಕೆ ಶಿವಕುಮಾರ್ ಈ ಬಗ್ಗೆ ಆತ್ಮನಿರೀಕ್ಷಣೆ ಮಾಡಿಕೊಳ್ಳಬೇಕು ಅಂದ್ರು.

    ಡಿಕೆ ಶಿವಕುಮಾರ್ ಅವರು ಬಹಳ ವಿಚಿತ್ರವಾದ ಮಾತುಗಳನ್ನಾಡಿದ್ದಾರೆ. ಇದು ಸರಿಯಲ್ಲ ಖಂಡನಾರ್ಹ. ರಾಜಕೀಯ ಏಳು ಬೀಳುಗಳೇನೆ ಇರಲಿ. ಸಿದ್ದರಾಮಯ್ಯ ಮಾಡಿದ ಕಾರ್ಯ ಉತ್ತಮ ನಿರ್ಣಯವಾಗಿದೆ. ಡಿಕೆಶಿ ಅವರ ಹೇಳಿಕೆ ಬಾಲಿಷತನ. ಇದರ ಹಿಂದೆ ರಾಜಕೀಯ ಉದ್ದೇಶವಿದೆ. ಲೋಕಸಭೆ ಚುನಾವಣೆ, ಉಪಚುನಾವಣೆಯಲ್ಲಿ ಮತದಾರರ ಸೆಳೆಯುವ ಉದ್ದೇಶವಿದೆ. ಸಿದ್ದರಾಮಯ್ಯ ತಪ್ಪು ಮಾಡಿದರು ಎಂದು ಬಿಂಬಿಸುವ ಕುತಂತ್ರ ಇದರಲ್ಲಿದೆ ಅಂತ ಕಿಡಿಕಾರಿದ್ರು. ಇದನ್ನೂ ಓದಿ: ಶಿವಕುಮಾರ್ Vs ಎಂಬಿ ಪಾಟೀಲ್ – ಕಾಂಗ್ರೆಸ್‍ನಲ್ಲಿ ಮತ್ತೆ ಧರ್ಮ ಯುದ್ಧ ಶುರು

    ಸಿದ್ದರಾಮಯ್ಯ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಶಿಫಾರಸ್ಸು ಮಾಡಿದ್ದು ಐತಿಹಾಸಿಕ ನಿರ್ಣಯವಾಗಿತ್ತು. ಮೊದಲು ಸಚಿವ ಸಂಪುಟದಲ್ಲಿ ಡಿಕೆ ಶಿವಕುಮಾರ ಇದ್ದು ಇದನ್ನು ಒಪ್ಪಿಕೊಂಡಿದ್ದಾರೆ. ಆದರೆ ಈಗ ವಿಭಿನ್ನ ಹೇಳಿಕೆ ನೀಡಿದ್ದಾರೆ. ಇದಕ್ಕಾಗಿ ಡಿಕೆ ಶಿವಕುಮಾರ ಲಿಂಗಾಯತ ಸಮಾಜದ ಕ್ಷಮೆ ಕೇಳಬೇಕು ಅಂತ ಇದೇ ವೇಳೆ ಮಹಾದೇವಿ ಒತ್ತಾಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಲಿಂಗಾಯತರೆಲ್ಲ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‍ಗೆ ಮತ ಹಾಕಿ -ಮಾತೆ ಮಹಾದೇವಿ ಕರೆ

    ಲಿಂಗಾಯತರೆಲ್ಲ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‍ಗೆ ಮತ ಹಾಕಿ -ಮಾತೆ ಮಹಾದೇವಿ ಕರೆ

    ಬೆಂಗಳೂರು: ಚುನಾವಣೆ ಸನೀಹದಲ್ಲಿ ಬಸವ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಧರ್ಮ ರಾಜಕಾರಣಕ್ಕೆ ಮುನ್ನುಡಿ ಬರೆದಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಿಸಿ. ಆ ಪಕ್ಷಕ್ಕೆ ಮತ ನೀಡಿ ಎಂದು ಲಿಂಗಾಯತರಿಕೆ ಕರೆ ನೀಡಿದ್ದಾರೆ.

    ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಕ್ಷೇಪ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಜಾಗತಿಕ ಲಿಂಗಾಯತ ಮಹಾಸಭಾದ ತುರ್ತು ಸಭೆಯಲ್ಲಿ ಮಾತೆ ಮಹಾದೇವಿ ಈ ಘೋಷಣೆ ಹೊರಡಿಸಿದ್ದಾರೆ. ಸ್ವತಂತ್ರ ಧರ್ಮ ಮಾನ್ಯತೆಗೆ ಶ್ರಮಿಸೋ ಪಕ್ಷಕ್ಕೆ ಮತ. ಎಲ್ಲರು ಕಾಂಗ್ರೆಸ್ ಬೆಂಬಲಿಸಬೇಕು ಅಂತಾ ಹೇಳಿದ್ರು.

    ಅಮಿತ್ ಶಾ ರಾಜ್ಯದ ಶಿಫಾರಸ್ಸು ನಮಗೆ ತಲುಪಿಯೇ ಇಲ್ಲ ಎನ್ನುತ್ತಿದ್ದಾರೆ. ಈ ರೀತಿಯಾಗಿ ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಶಾ ವಿರುದ್ಧ ಮಾತೆ ಕಿಡಿಕಾರಿದ್ರು. ಮುಂದಿನ ಬಸವ ಜಯಂತಿಯಂದು ನಮಗೆ ಸಿಹಿ ಸುದ್ದಿ ನೀಡಬೇಕು ಅಂತಾ ಕೇಂದ್ರ ಸರ್ಕಾರಕ್ಕೆ ಡೆಡ್‍ಲೈನ್ ನೀಡಿದ್ರು. ಇದೇ ವೇಳೆ ಮಾತನಾಡಿದ ಸಾರಂಗ ಶ್ರೀಗಳು, “ಗಂಡಸು” ಅಂದ್ರ್ರೆ ಸಿದ್ದರಾಮಯ್ಯ ಅಂತಾ ಹೊಗಳಿದ್ರು. ಇನ್ನು ಶೀಘ್ರವೇ ಪ್ರಧಾನಿ ಭೇಟಿಯಾಗಲು ಲಿಂಗಾಯಿತ ಮಹಾಸಭಾ ನಿರ್ಧಾರ ಕೈಗೊಂಡಿದೆ ಅಂತಾ ಸಭೆಯಲ್ಲಿ ತಿಳಿಸಲಾಯಿತು.

  • ಮಾತೆ ಮಹಾದೇವಿಗೆ ಬುದ್ಧಿಭ್ರಮಣೆಯಾಗಿದೆ- ರಾಯಚೂರಿನಲ್ಲಿ ಸ್ವಾಮಿಜಿಗಳು ಕಿಡಿ

    ಮಾತೆ ಮಹಾದೇವಿಗೆ ಬುದ್ಧಿಭ್ರಮಣೆಯಾಗಿದೆ- ರಾಯಚೂರಿನಲ್ಲಿ ಸ್ವಾಮಿಜಿಗಳು ಕಿಡಿ

    ರಾಯಚೂರು: ಮಾತೆ ಮಹಾದೇವಿಗೆ ಬುದ್ಧಿ ಭ್ರಮಣೆಯಾಗಿದ್ದು ಹೇಳುವುದೇ ಒಂದು ಮಾಡುವುದು ಇನ್ನೊಂದು ಅಂತ ರಾಯಚೂರಿನ ವಿವಿಧ ಮಠಗಳ ಸ್ವಾಮಿಜಿಗಳು ಕಿಡಿಕಾರಿದ್ದಾರೆ.

    ರಾಯಚೂರಿನಲ್ಲಿ ಮಾತನಾಡಿದ ಕಿಲ್ಲೆ ಬೃಹನ್ ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮಿ ಈಗಾಗಲೇ ಅವರ ಪಾದಪೂಜೆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿವೆ. ಲಿಂಗಾಯತ ಧರ್ಮ ಕಟ್ಟುತ್ತೇನೆ ಅಂತ ಅಡ್ಡಪಲ್ಲಕ್ಕಿ, ಪಾದಪೂಜೆಗಳನ್ನ ವಿರೋಧಿಸುವ ಮಾತೆ ಮಹಾದೇವಿ ಸ್ವತಃ ಸಿಂಹಾಸನ ಮೇಲೆ ಕುಳಿತು ತಾವೇ ಪಾದಪೂಜೆ ಮಾಡಿಸಿಕೊಳ್ಳುತ್ತಾರೆ ಅಂತ ಹೇಳಿದ್ದಾರೆ.

    ಬಸವಣ್ಣನವರನ್ನ ಸ್ವತಃ ಕಡೆಗಣಿಸಿರುವ ಮಾತೆ ಮಹಾದೇವಿ ಕೂಡಲಸಂಗಮದಲ್ಲಿ ಲಿಂಗದೇವರು ಹಾಗೂ ತನ್ನ ಫೋಟೋದ ಕೆಳಗೆ ಬಸವಣ್ಣನ ಫೋಟೋ ಇಟ್ಟು ಅವಮಾನ ಮಾಡಿದ್ದಾರೆ ಅಂತ ಬೇಸರ ವ್ಯಕ್ತಪಡಿಸಿದರು.

    ಜಾಲಹಳ್ಳಿ ಜಯಶಾಂತಲಿಂಗ ಶಿವಾಚಾರ್ಯರು ಮಾತನಾಡಿ, ಲಿಂಗಾಯತ ಧರ್ಮದ ನಾಟಕ ಕೇವಲ ರಾಜಕೀಯ ಗಿಮಿಕ್, ಇದು ಚುನಾವಣೆವರೆಗೆ ಮಾತ್ರ ನಡೆಯುತ್ತದೆ. ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಮಾತನಾಡುವ ಸಚಿವರುಗಳೇ ಸ್ವತಃ ಲಿಂಗ ಕಟ್ಟಿಲ್ಲ. ಲಿಂಗಪೂಜೆಯನ್ನ ಮಾಡದೆ, ಲಿಂಗ ತತ್ವವೇ ಗೊತ್ತಿಲ್ಲದೆ ರಾಜಕೀಯ ಮಾಡುತ್ತಿದ್ದಾರೆ. ವೀರಶೈವ ಪುರಾತನ ತತ್ವ ಇದು ಜಾತಿ, ಧರ್ಮ ಅಲ್ಲ ಅಂತ ಹೇಳಿದ್ದಾರೆ.

  • ಸಿದ್ದಗಂಗಾ ಶ್ರೀಗಳ ಜ್ಞಾಪಕ ಶಕ್ತಿ ಕೆಲವರಿಂದ ದುರುಪಯೋಗ: ಮಾತೆ ಮಹಾದೇವಿ

    ಸಿದ್ದಗಂಗಾ ಶ್ರೀಗಳ ಜ್ಞಾಪಕ ಶಕ್ತಿ ಕೆಲವರಿಂದ ದುರುಪಯೋಗ: ಮಾತೆ ಮಹಾದೇವಿ

    ಬಾಗಲಕೋಟೆ: ಸಿದ್ದಗಂಗಾ ಶ್ರೀಗಳಿಗೆ ವಯೋಮಾನದ ದೃಷ್ಟಿಯಿಂದ ನೆನಪಿನ ಶಕ್ತಿ ಉಳಿದಿಲ್ಲ ಎಂದು ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿಕೆ ನೀಡಿದ್ದಾರೆ.

    ಸ್ವಾಮೀಜಿಗಳ ಜ್ಞಾಪಕ ಶಕ್ತಿಯನ್ನು ಕೆಲವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಸಿದ್ದಗಂಗಾ ಶ್ರೀಗಳ ಪಕ್ಕ ಇರುವ ವೀರಶೈವ ಮಹಾಸಭಾದವರು ಒತ್ತಡ ತಂದಿದ್ದಾರೆ. ಪೂಜ್ಯ ಶ್ರೀಗಳ ಸಹಿಮಾತ್ರ ಪಡೆದು ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಹಾಗೊಂದು ವೇಳೆ ಶ್ರೀಗಳೇ ಈ ರೀತಿ ಹೇಳಿಕೆ ನೀಡಿದ್ದರೆ ಅದನ್ನು ನಾವು ಒಪ್ಪುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

    ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ಕೊಡಿಸುತ್ತೇವೆ. ಹೀಗಾಗಿ ವೀರಶೈವ ಮಹಾಸಭಾದಂತೆ ನಡೆಯಿರಿ ಎಂದು ಯಡಿಯೂರಪ್ಪ ಮತ್ತು ಸೋಮಣ್ಣ ಮಠದ ಕಡೆಯವರಿಗೆ ಒತ್ತಡ ಹಾಕಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ ಎಂದು ಆರೋಪಿಸಿದರು.

    ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಅವರ ಏಳಿಗೆಯನ್ನ ಸಹಿಸದ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಲಿಂಗಾಯತ ಸ್ವತಂತ್ರ ಧರ್ಮ ವಿಚಾರವಾಗಿ ಕಲಬುರಗಿ ಹಾಗೂ ಹೈದರಾಬಾದ್ ನಲ್ಲಿಯೂ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಿದ್ದೇವೆ ಎಂದು ಮಾತೆ ಮಹಾದೇವಿ ಹೇಳಿದರು.

  • ಮಾತೆ ಮಹಾದೇವಿ ಅಲ್ಲ, ಆಕೆ ಮಾತಿನ ದೆವ್ವ: ಶಾಂತವೀರ ಸ್ವಾಮೀಜಿ

    ಮಾತೆ ಮಹಾದೇವಿ ಅಲ್ಲ, ಆಕೆ ಮಾತಿನ ದೆವ್ವ: ಶಾಂತವೀರ ಸ್ವಾಮೀಜಿ

    ಬಾಗಲಕೋಟೆ: ಗುರುದ್ರೋಹ ಕೆಲಸ ಮಾಡಿದ ಆಕೆ ಮಾತೆ ಮಹಾದೇವಿ ಅಲ್ಲ. ಅವಳೊಬ್ಬಳು ಮಾತಿನ ದೆವ್ವ ಎಂದು ಕೊಳದ ಮಠದ ಶಾಂತವೀರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ಹೇಳಿದ್ದಾರೆ.

    ಜಿಲ್ಲೆಯ ಬದಾಮಿ ತಾಲೂಕಿನ ಶಿವಯೋಗಮಂದಿರಕ್ಕೆ ಭೇಟಿ ನೀಡಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾತೆ ಮಹಾದೇವಿಗೂ ವೀರಶೈವ ಧರ್ಮಕ್ಕೂ ಯಾವುದೇ ಸಂಬಂಧವೇ ಇಲ್ಲ. ಅವರು ಗುರುದ್ರೋಹಿ, ಕೂಡಲಸಂಗಮದೇವ ಎಂಬ ಅಂಕಿತನಾಮ ತೆಗೆದುಹಾಕಿ ಲಿಂಗದೇವ ಅಂತಾ ಹೇಳುತ್ತಿದ್ದಾರೆ. ಆ ಲಿಂಗದೇವ ಯಾರು? ಅವನು ಎಲ್ಲಿದ್ದಾನೆ? ಇವಳಿಗೂ ಆ ಲಿಂಗದೇವರಿಗೂ ಏನು ಸಂಬಂಧ ಎಂದು ಏಕವಚನದಲ್ಲಿ ಮಾತೆ ಮಹಾದೇವಿ ಅವರನ್ನು ಪ್ರಶ್ನೆಮಾಡಿದ್ದಾರೆ.

    ಅಲ್ಲದೇ ಮಾತೆ ಮಹಾದೇವಿಗೂ ಲಿಂಗದೇವರ ಸಂಭಂದ ಎಂತಹದ್ದೂ ಎಂದು ಅವರೇ ಹೇಳಬೇಕು. ವೀರಶೈವ ಧರ್ಮ ಪ್ರಾಚೀನವಾದ ಧರ್ಮ, ವೀರಶೈವ ಲಿಂಗಾಯತ ನಾವೆಲ್ಲರೂ ಒಂದೇ. ಮಾತೆ ಮಹಾದೇವಿ ಹುಡುಗಾಟವನ್ನು ಬಿಟ್ಟು ನ್ಯಾಯಯುತವಾಗಿ ಬಂದ ವೀರಶೈವ ಧರ್ಮದ ಅನುಯಾಯಾಗಿ ಬಾಳಬೇಕಾದ್ದದು ಕರ್ತವ್ಯ ಎಂದು ತಿಳಿಸಿದರು.

    https://youtu.be/5xeheZN7YoQ

     

  • ಲಿಂಗಾಯತ ಕೋಟಾದಡಿ ಟಿಕೆಟ್ ತಗೆದುಕೊಳ್ಳುವಾಗ ಪ್ರತ್ಯೇಕ ಧರ್ಮ ಯಾಕಾಗಬಾರದು: ಮಾತೆ ಮಹಾದೇವಿ

    ಲಿಂಗಾಯತ ಕೋಟಾದಡಿ ಟಿಕೆಟ್ ತಗೆದುಕೊಳ್ಳುವಾಗ ಪ್ರತ್ಯೇಕ ಧರ್ಮ ಯಾಕಾಗಬಾರದು: ಮಾತೆ ಮಹಾದೇವಿ

    ಬೆಳಗಾವಿ: ಜಗವ ಬದುಕಲು ನಮ್ಮ ಆದಿ ಬಸವಾದಿ ಶರಣರು ವಚನ ಸಾಹಿತ್ಯ ನೀಡಿದರು. ಆದ್ರೆ ಜಾತಿ ವಾದಿಗಳಿಂದ ಅದಕ್ಕೆ ಆಪತ್ತು ಬಂದು ಎರಗಿತು ಎಂದು ಬಸವಧರ್ಮ ಪೀಠಾಧ್ಯಕ್ಷೆ ಡಾ. ಮಾತೆ ಮಹಾದೇವಿ ಹೇಳಿದ್ದಾರೆ.

    ಲಿಂಗಾಯತ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ವೀರಶೈವರು ನಮ್ಮ ಮೇಲೆ ದಬ್ಬಾಳಿಕೆ ಮಾಡಿ ಉಪಚಾರ ಮಾಡಿಕೊಂಡಿದ್ದಾರೆ. ನೀವು ಟಿಕೆಟ್ ಪಡೆದುಕೊಳ್ಳುವಾಗ ಲಿಂಗಾಯತ ಕೋಟಾ ಅಡಿ ಟಿಕೆಟ್ ಪಡೆದುಕೊಳ್ಳುತ್ತೀರಿ. ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡಬೇಕು. ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಒಳ್ಳೆಯ ಸ್ಥಾನದಲ್ಲಿದ್ದಾರೆ. ಅದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಹೇಳಿ ಲಿಂಗಾಯತ ಸ್ವತಂತ್ರ ಧರ್ಮ ಸ್ಥಾನಮಾನ ಕೊಡಿಸಲು ಒತ್ತಾಯ ಮಾಡಬೇಕು ಎಂದು ಅವರು ಆಗ್ರಹಿಸಿದರು.

    ಮುಂದಿನ ದಿನಗಳಲ್ಲಿ ಸರ್ಕಾರಿ ಜಾತಿ ಪ್ರಮಾಣ ಪತ್ರದಲ್ಲಿ ವೀರಶೈವ ಲಿಂಗಾಯತ ಎಂದು ನಮೂದು ಮಾಡಲಾಗುತ್ತಿದೆ. ಅದನ್ನ ತೆಗೆದು ಹಾಕಲು ಮುಂದಿನ ದಿನಗಳಲ್ಲಿ ಅದರ ವಿರುದ್ಧ ಹೋರಾಟ ಮಾಡಲಾಗುತ್ತದೆ. ಮುಂದಿನ ಲಿಂಗಾಯತ ಸಮಾವೇಶ ಸೆಪ್ಟೆಂಬರ್ 10ರಂದು ಕಲಬುರಗಿಯಲ್ಲಿ ನಡೆದರೆ, ಅಕ್ಟೋಬರ್ 22 ರಂದು ಮೈಸೂರಲ್ಲಿ ನಡೆಯಲಿದೆ ಎಂದರು.

    ಈ ವೇಳೆ ಮಾಜಿ ಸಚಿವ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಯಾವುದನ್ನು ತಲೆಕೆಡಿಸಿಕೊಳ್ಳುವುದು ಬೇಡ. ಲಿಂಗಾಯತ ಧರ್ಮ ಸ್ವತಂತ್ರವಾಗಿದೆ. ಲಿಂಗಾಯತರು ಮತ್ತು ವೀರಶೈವ ಲಿಂಗಾಯತರು ಒಂದೇ ಅಲ್ಲ. ಮಾತೆ ಮಹಾದೇವಿ ಮತ್ತು ತೋಂಟದಾರ್ಯ ಶ್ರೀಗಳು ಈ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ರಾಜ್ಯ ಸರ್ಕಾರ ಮೊದಲು ಲಿಂಗಾಯತ ಧರ್ಮ ಸ್ವತಂತ್ರವೆಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು. ಇಲ್ಲವಾದರೇ ರಾಜ್ಯ ಸರ್ಕಾರಕ್ಕೆ ಲಿಂಗಾಯತರು ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

    ನಮ್ಮ ವಿಚಾರಗಳಲ್ಲಿ ತಲೆ ತೋರಿಸುವ ಕೆಲಸ ಮಾಡದಂತೆ ಲಿಂಗಾಯತ ಧರ್ಮಕ್ಕೆ ವಿರೋಧಿಸುವವರಿಗೆ ಎಚ್ಚರಿಕೆ. ಒಡೆದಾಳುವ ನೀತಿ ಇಲ್ಲೇ ನಿಲ್ಲಬೇಕು. ಹರಿಬ್ರಹ್ಮ ಬಂದರೂ ಲಿಂಗಾಯತ ಧರ್ಮ ಸ್ವತಂತ್ರ ಎಂದು ಘೋಷಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದರು.

  • ಮೋಹನ್ ಭಾಗವತ್ ಈ ಕಾರಣಕ್ಕೆ ಲಿಂಗಾಯತ ಧರ್ಮವನ್ನು ಬೆಂಬಲಿಸಲಿ: ಡಾ. ಮಾತೆ ಮಹಾದೇವಿ

    ಮೋಹನ್ ಭಾಗವತ್ ಈ ಕಾರಣಕ್ಕೆ ಲಿಂಗಾಯತ ಧರ್ಮವನ್ನು ಬೆಂಬಲಿಸಲಿ: ಡಾ. ಮಾತೆ ಮಹಾದೇವಿ

    ಬಾಗಲಕೋಟೆ: ಲಿಂಗಾಯತ ಧರ್ಮ ಹಿಂದೂ ಸಂಸ್ಕೃತಿ ವಿರೋಧಿಯಲ್ಲ. ಅದಕ್ಕೆ ಕಳವಳ ಬೇಡ. ಇದೊಂದು ಸ್ವತಂತ್ರ ಧರ್ಮವೇ ಹೊರತು ಜಾತಿಯಲ್ಲ. ಹೀಗಾಗಿ ಮೋಹನ್ ಭಾಗವತ್ ಅವರು ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವನ್ನು ಬೆಂಬಲಿಸಲಿ ಎಂದು ಬಸವಧರ್ಮ ಪೀಠಾಧ್ಯಕ್ಷೆ ಡಾ. ಮಾತೆ ಮಹಾದೇವಿ ಹೇಳಿದ್ದಾರೆ.

    ಇಂದು ಬಾಗಲಕೋಟೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರತ್ಯೇಕ ಧರ್ಮಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರು ಈ ಹಿಂದೆ ಒಪ್ಪಿಕೊಂಡಿದ್ದರು. ಈಗ ಬಿಜೆಪಿ ಹೈಕಮಾಂಡ್ ತಾಕೀತು ಮಾಡಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದಾರೆ. ಅವರಿಗೆ ಅಧ್ಯಯನದ ಕೊರತೆ ಮತ್ತು ಆತ್ಮವಿಶ್ವಾಸದ ಕೊರತೆಯಿಂದ ಮಾತನಾಡದೇ ಇರಬಹುದು. ಹೀಗಾಗಿ ಬಿಜೆಪಿ ಆದರ್ಶತನ ಬೇರೆಯಾಗಿದ್ದರಿಂದಲೇ ಅವರು ಮಾತನಾಡುತ್ತಿಲ್ಲ ಎಂದರು.

    ಕುರುಬ ಮತ್ತು ಒಕ್ಕಲಿಗ ಪ್ರತ್ಯೇಕ ಧರ್ಮ ಬೇಡಿಕೆ ವಿಚಾರದಲ್ಲಿ ಅವರಿಗೆ ಧರ್ಮ ಸಂಸ್ಥಾಪಕರಿಲ್ಲ. ದೀಕ್ಷಾ ಸಂಸ್ಕಾರ ಇಲ್ಲ. ಹೀಗಾಗಿ ಕುರುಬ ಮತ್ತು ಒಕ್ಕಲಿಗ ಸಮುದಾಯ ಪ್ರತ್ಯೇಕ ಧರ್ಮದ ಅರ್ಹತೆ ಪಡೆಯೋದಿಲ್ಲ ಎಂದು ಹೇಳಿದರು.

    ಸಿದ್ಧಗಂಗಾ ಶ್ರೀಗಳು ಪ್ರತ್ಯೇಕ ಧರ್ಮಕ್ಕೆ ಪ್ರತಿಕ್ರಿಯೆ ನೀಡದೇ ಇರೋ ವಿಚಾರದಲ್ಲಿ ಸಿದ್ಧಗಂಗಾ ಶ್ರೀಗಳಿಗೂ ಅಧ್ಯಯನ ಕೊರತೆಯೋ ಅಥವಾ ಆತ್ಮವಿಶ್ವಾಸದ ಕೊರತೆಯೋ ಗೊತ್ತಿಲ್ಲ. ಆದರೆ ಯಾರೇ ಮನವಿ ನೀಡಿದರೂ ಸಿಎಂ ಸಿದ್ದರಾಮಯ್ಯ ಅವರು ವಿಚಾರವಾದಿಗಳು, ಬಸವಣ್ಣನ ತತ್ವದಲ್ಲಿ ನಂಬಿಕೆ ಇಟ್ಟವರು. ಹೀಗಾಗಿ ಪ್ರತ್ಯೇಕ ಧರ್ಮಕ್ಕೆ ಶಿಫಾರಸ್ಸು ಮಾಡಲಿ ಎಂದರು.

    ಆ.22ರಂದು ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಬೆಳಗಾವಿಯಲ್ಲಿ ಬೃಹತ್ ರ್ಯಾಲಿ ಮತ್ತು ಮಹಾರಾಷ್ಟ್ರದಲ್ಲೂ ರ್ಯಾಲಿ ನಡೆಸಿ ಬೆಂಗಳೂರಿನಲ್ಲಿ ಸಮಾರೋಪ ಸಮಾವೇಶವನ್ನ ಅಕ್ಟೋಬರ್ 30ರಂದು ನಡೆಸಲಾಗುವುದು ಎಂದು ಅವರು ಹೇಳಿದರು.

  • ರಂಭಾಪುರಿ ಶ್ರೀಗಳ ವಿರುದ್ಧ ಭುಗಿಲೆದ್ದ ಆಕ್ರೋಶ – ಬೆಂಗ್ಳೂರಲ್ಲಿ ರಾತ್ರೋರಾತ್ರಿ ಪ್ರತಿಭಟನೆ

    ರಂಭಾಪುರಿ ಶ್ರೀಗಳ ವಿರುದ್ಧ ಭುಗಿಲೆದ್ದ ಆಕ್ರೋಶ – ಬೆಂಗ್ಳೂರಲ್ಲಿ ರಾತ್ರೋರಾತ್ರಿ ಪ್ರತಿಭಟನೆ

    – ಇತ್ತ ರಂಭಾಪುರಿ ಶ್ರೀಗಳ ಬೆಂಬಲಿಗರಿಂದಲೂ ಹೋರಾಟ

    ಬೆಂಗಳೂರು: ಬಸವ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅನೈತಿಕತೆ ಪ್ರಶ್ನೆ ಮಾಡಿ ಅವರ ವಿರುದ್ಧ ಗಂಭೀರ ಆರೋಪ ಹೊರಿಸಿರುವ ರಂಭಾಪುರಿ ಶ್ರೀಗಳ ವಿರುದ್ಧ ಮಾತೆಯ ಭಕ್ತರು ಬೆಂಗಳೂರಿನ ಬಸವ ಮಂಟಪದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

    ಮಾತೆ ವಿರುದ್ಧ ಇಲ್ಲಸಲ್ಲದ ಆರೋಪ ಹೊರಿಸಿ ಅವರ ತೇಜೋವಧೆಗೆ ರಂಭಾಪುರಿ ಶ್ರೀಗಳು ಯತ್ನಿಸುತ್ತಿದ್ದಾರೆ ಅಂತ ಮಾತೆ ಭಕ್ತರು ಕಿಡಿಕಾರಿದ್ರು. ರಂಭಾಪುರಿ ಶ್ರೀಗಳಿಗೆ ಧಿಕ್ಕಾರ ಕೂಗಿ, ಮೊಬೈಲ್‍ನಲ್ಲಿದ್ದ ರಂಭಾಪುರಿ ಶ್ರೀಗಳ ಫೋಟೋಗೆ ಚಪ್ಪಲಿಯಿಂದ ಹೊಡೆದು, ರಸ್ತೆ ಮಧ್ಯೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ರು.

    ಅಲ್ಲದೇ ರಂಭಾಪುರಿ ಶ್ರೀಗಳು ಬಹಿರಂಗವಾಗಿ ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ರು. ಇಂದು ಬೆಳಗ್ಗೆ 10.30ಕ್ಕೆ ಮೌರ್ಯ ಸರ್ಕಲ್‍ನಲ್ಲಿ ಪ್ರತಿಭಟಿಸಲಿದ್ದಾರೆ.

    ಇತ್ತ ಮಾತೆ ಮಹಾದೇವಿ ಮತ್ತು ಬಸವ ಪೀಠದ ಸದಸ್ಯರು ರಂಭಾಪುರಿ ಶ್ರೀಗಳನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಅಂತಾ ಆರೋಪಿಸಿ ಬೆಂಗಳೂರಲ್ಲಿ ರಂಭಾಪುರಿ ಶ್ರೀಗಳ ಬೆಂಬಲಿಗರು ಪ್ರತಿಭಟಿಸಿದ್ದಾರೆ. ಬೆಂಗಳೂರಿನ ಜಗದ್ಗುರು ರೇಣುಕಾಚಾರ್ಯ ವೃತ್ತದಲ್ಲಿ ಪ್ರತಿಭಟಿಸಿ ಮಾತೆ ಮಹಾದೇವಿ ವಿರುದ್ಧ ಧಿಕ್ಕಾರ ಕೂಗಿದ್ರು.

    ಮಾತೆ ಮಹಾದೇವಿ ಹಾಗೂ ಲಿಂಗಾನಂದರ ನಡುವಿನ ಸಂಬಂಧವನ್ನು ರಂಭಾಪುರಿ ಶ್ರೀಗಳು ಅನುಮಾನದ ದೃಷ್ಟಿಯಿಂದ ನೋಡಿದ್ದಾರೆ. ಅಲ್ಲದೆ, ಈ ಸಂಬಂಧ ಪೂರಕ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

    ಮಾತೆ ಮಹಾದೇವಿ ಹಾಗೂ ಲಿಂಗಾನಂದ ನಡುವಿನ ಸಂಬಂಧ ಎಷ್ಟು ಅನೈತಿಕಯಿಂದ ಕೂಡಿದೆ ಎಂಬುದಕ್ಕೆ ಸ್ವತಃ ಲಿಂಗಾನಂದರೇ ಶಿಷ್ಯರೊಬ್ಬರಿಗೆ ಬರೆದ ರಹಸ್ಯ ಪತ್ರವನ್ನು ಅವರು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ, ಮಾತೆ ಮಹಾದೇವಿ ಚಾರಿತ್ರ್ಯಧ ಬಗ್ಗೆ ಪ್ರಸ್ತಾಪಿಸಲಾಗಿದೆ. ಪಬ್ಲಿಕ್ ಟಿವಿಗೆ ಈ ಪತ್ರಗಳು ಸಿಕ್ಕಿದ್ದು ಅವುಗಳನ್ನು ಇಲ್ಲಿ ನೀಡಲಾಗಿದೆ.